Tag: ಧಾರ್ಮಿಕ ಆಚರಣೆ

  • ಲುಲು ಮಾಲ್ ವಿವಾದ – ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟುನ ಕ್ರಮ: ಆದಿತ್ಯನಾಥ್

    ಲುಲು ಮಾಲ್ ವಿವಾದ – ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟುನ ಕ್ರಮ: ಆದಿತ್ಯನಾಥ್

    ಲಕ್ನೋ: ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಉದ್ಘಾಟನೆಗೊಂಡಿದ್ದ ಲುಲು ಮಾಲ್‌ನಲ್ಲಿ ಕೆಲವರು ನಮಾಜ್ ಮಾಡಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಅಲ್ಲಿನ ವಾತಾವರಣ ಬಿಗಡಾಯಿಸಿದ್ದು, ಹಲವು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

    ಇದೀಗ ಲುಲು ಮಾಲ್ ವಿಚಾರವಾಗಿ ಶಾತಿಯನ್ನು ಕದಡಲು ಪ್ರಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಲಕ್ನೋ ಆಡಳಿತ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

    ಅಬುಧಾಬಿ ಮೂಲದ ಲುಲು ಗ್ರೂಪ್ ನಡೆಸುತ್ತಿರುವ ಉತ್ತರ ಪ್ರದೇಶದ ಲುಲು ಮಾಲ್ ಅನ್ನು ಜುಲೈ 10 ರಂದು ಯೋಗಿ ಆದಿತ್ಯನಾಥ್ ಅವರು ಉದ್ಘಾಟಿಸಿದ್ದರು. ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಮಾಲ್ ಒಳಗಡೆ ಕೆಲವರು ನೆಲದಲ್ಲಿ ಕುಳಿತುಕೊಂಡು ನಮಾಜ್ ಮಾಡಿದ ವೀಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!

    ಮಾಲ್‌ನಲ್ಲಿ ನಮಾಜ್ ಮಾಡಿದ 8 ಮುಸ್ಲಿಂ ವ್ಯಕ್ತಿಗಳ ಪೈಕಿ ನಾಲ್ವರನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ನಮಾಜ್ ಮಾಡುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಕೆಲವು ಹಿಂದೂ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಕೋಮು ಸೌಹಾರ್ದದ ಉಲ್ಲಂಘನೆ ಎಂದು ಆರೋಪಿಸಿವೆ. ಇದರ ಬೆನ್ನಲ್ಲೇ ಬಲಪಂಥೀಯ ಸಂಘಟನೆಗಳು ಮಾಲ್‌ನಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲು ಮುಂದಾಗಿದ್ದವು. ಆದರೆ ಅದನ್ನು ತಡೆಯಲಾಗಿತ್ತು.

    ಮಾಲ್ ಮಾಲೀಕರು ಧಾರ್ಮಿಕವಾಗಿ ಪಕ್ಷಪಾತ ಮಾಡುತ್ತಿವೆ ಎಂದು ಕೆಲವು ಸಂಘಟನೆಗಳು ಹೇಳಿದ್ದು, ಬಳಿಕ ಆಡಳಿತ ಮಂಡಳಿ ಧಾರ್ಮಿಕ ಆಚರಣೆಗೆ ಇಲ್ಲಿ ಅನುಮತಿಯಿಲ್ಲ ಎಂದು ಬೋರ್ಡ್ ಅನ್ನು ಅಳವಡಿಸಿದೆ. ಲುಲು ಮಾಲ್ ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ. ಆದರೆ ಇಲ್ಲಿ ಯಾವುದೇ ಪೂಜೆಗೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ನಾವು ನಮ್ಮ ಸಿಬ್ಬಂದಿಗೆ ಇಂತಹ ಘಟನೆಗಳ ಮೇಲೆ ನಿಗಾ ಇಡಲು ಕಟ್ಟುನಿಟ್ಟಿನ ಕ್ರಮ ವಹಿಸಿದ್ದೇವೆ ಎಂದು ಜನರಲ್ ಮ್ಯಾನೇಜರ್ ಸಮೀರ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗುವುದು ಸಂಪ್ರದಾಯ: ಡಿ.ಕೆ ಶಿವಕುಮಾರ್

    Live Tv
    [brid partner=56869869 player=32851 video=960834 autoplay=true]

  • ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

    ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

    ಚೆನ್ನೈ: ಮಾಟಕ್ಕೆ ಒಳಗಾಗಿದ್ದಾಳೆ ಎಂದು ಶಂಕಿಸಲಾದ ಮಹಿಳೆಯರಿಗೆ ಪೂಜಾರಿಯೊಬ್ಬರು ಚಾಟಿಯಿಂದ ಹೊಡೆಯುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಜಿಲ್ಲೆಯ ರಾಸಿಪುರಂ ಬಳಿಯ ನರೈಕಿನಾರ್ ಗ್ರಾಮದಲ್ಲಿ ನಡೆಸಲಾದ ಈ ಧಾರ್ಮಿಕ ಆಚರಣೆಯಲ್ಲಿ, ಪೂಜಾರಿ ಕಾಟೇರಿ (ಕೆಟ್ಟದ್ದನ್ನು ದೂರವಿಡಲು ಗ್ರಾಮಸ್ಥರು ಪ್ರಾರ್ಥಿಸುವ ದೇವತೆಯ ರೂಪ) ವೇಷಭೂಷಣವನ್ನು ಧರಿಸಿ ಹಲವಾರು ಮಹಿಳೆಯರಿಗೆ ಚಾಟಿಯಿಂದ ಹೊಡೆಯುತ್ತಾರೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿನ ಡಿಸ್ಪ್ಲೆ ಹ್ಯಾಕ್- ಅಶ್ಲೀಲ ವೀಡಿಯೋ ಪ್ರಸಾರ

    ಈ ಆಚರಣೆಯು 20 ವರ್ಷಗಳ ನಂತರ ನಡೆಯುತ್ತಿದ್ದು, ಮಾಟ ಮಂತ್ರಕ್ಕೆ ಒಳಗಾದ ಮಹಿಳೆಯರನ್ನು ಪೂಜಾರಿ ಹೊಡೆದರೆ ಅವರು ಶಾಪ ಮುಕ್ತರಾಗುತ್ತಾರೆ ಎಂಬ ನಂಬಿಕೆಯಿದೆ. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜಿ

    ವೀಡಿಯೋದಲ್ಲಿ, ಕಪ್ಪು ವಸ್ತ್ರವನ್ನು ಧರಿಸಿರುವ ಪೂಜಾರಿ ಚಾಟಿಯನ್ನು ಹಿಡಿದು ಮಾಟ ಮಂತ್ರಕ್ಕೆ ಒಳಗಾಗಿರುವ ಮಹಿಳೆಯರಿಗೆ ಹೊಡೆಯುವುದನ್ನು ಕಾಣಬಹುದು. ಪೂಜಾರಿ ಮಹಿಳೆಯರಿಗೆ ಹೊಡೆಯಲು ಹೊರಟಾಗ ಅದನ್ನು ನೋಡುತ್ತಿರುವ ಸ್ಥಳೀಯ ಜನರು ಉತ್ಸಾಹದಿಂದ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ.

    ಈ ಕಾರ್ಯಕ್ರಮವನ್ನು ಕುತೂಹಲದಿಂದ ನೋಡುತ್ತಿದ್ದ ಜನಸಮೂಹವು ತಮಿಳು ಭಾಷೆಯಲ್ಲಿ ಪೋಡು.. ಪೋಡು.. (ಥಳಿಸು.. ಥಳಿಸು..) ಎಂದು ಕೂಗುತ್ತಿರುತ್ತಾರೆ. ನಂತರ ಪೂಜಾರಿ ತನ್ನ ಚಾಟಿ ಎತ್ತಲು ಪ್ರಾರಂಭಿಸುತ್ತಾರೆ. ಈ ವೇಳೆ ಮಹಿಳೆ ಗೌರವದಿಂದ ತನ್ನ ಎರಡು ಕೈಗಳನ್ನು ಮಡಚಿ ನಮಸ್ಕರಿಸುತ್ತಾರೆ. ಮಡಚಿದ ಕೈಗಳನ್ನು ಮೇಲಕ್ಕೆತ್ತಿದ ನಂತರ ಪೂಜಾರಿ ಅವರನ್ನು ಚಾಟಿಯಿಂದ ಹೊಡೆಯಲು ಮುಂದಾಗುತ್ತಾರೆ.

    ಈ ಒಂದು ವಿಚಿತ್ರ ಆಚರಣೆಯನ್ನು ನೋಡಲು ಅಕ್ಕಪಕ್ಕದ 18 ಗ್ರಾಮಗಳ ಜನರು ಪಾಲ್ಗೊಂಡಿದ್ದರು. 20 ವರ್ಷಗಳ ನಂತರ ನಡೆದ ಕಾರಣ ಈ ಆಚರಣೆಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು. ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಈ ಆಚರಣೆ ನಡೆದಿರಲಿಲ್ಲ.

    ನಾಮಕ್ಕಲ್ ಜಿಲ್ಲೆಯ ವರದರಾಜಪೆರುಮಾಳ್ ಚೆಲ್ಲಿಯಮ್ಮನ್ ಮಾರಿಯಮ್ಮನ್ ದೇವಸ್ಥಾನದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೇವಸ್ಥಾನದ ಉತ್ಸವಗಳು ಒಂದು ತಿಂಗಳ ಕಾಲ ನಡೆಯುತ್ತವೆ. ಇದು ಏಪ್ರಿಲ್ 29 ರಂದು ಪ್ರಾರಂಭವಾಗಿದ್ದು, ಮೇ 30 ರಂದು ಕೊನೆಗೊಳ್ಳಲಿದೆ.

  • ನೋವಿನಲ್ಲೇ ಸಾಂಪ್ರದಾಯಿಕ ಮಡಿಕೇರಿ ದಸರಾ ಆಚರಣೆಗೆ ಚಾಲನೆ

    ನೋವಿನಲ್ಲೇ ಸಾಂಪ್ರದಾಯಿಕ ಮಡಿಕೇರಿ ದಸರಾ ಆಚರಣೆಗೆ ಚಾಲನೆ

    ಮಡಿಕೇರಿ: ದಕ್ಷಿಣದ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಇದೀಗ ಅಕ್ಷರಶಃ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದೆ. ಹಿಂದೆಂದೂ ಕಾಣದ ಜಲಪ್ರಳಯಕ್ಕೆ ಕೊಡಗು ತತ್ತರಿಸಿದೆ. ಆನೇಕರು ಮನೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಆದೇ ರೀತಿ ಆನೇಕ ವರ್ಷಗಳಿಂದ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದ ಮಡಿಕೇರಿ ದಸರಾ ಕೂಡ ಈ ಬಾರೀ ತನ್ನ ಅಂದ ಕಳೆದುಕೊಂಡು ನೋವಿನ ನಡುವೆ ನಾಡಹಬ್ಬ ಆಚರಿಸುವ ಪರಿಸ್ಥಿತಿಗೆ ತಲುಪಿದೆ.

    ಮಡಿಕೇರಿಯ ದಸರಾ ರಾಜ್ಯದ ಗಮನ ಸೆಳೆದಿತ್ತು. ಅದೆಷ್ಟೋ ವರ್ಷದಿಂದ ದಸರಾ ತನ್ನ ವೈಶಿಷ್ಟ್ಯತೆಯನ್ನು ಉಳಿಸಿಕೊಂಡಿತ್ತು. ಮಡಿಕೇರಿಯ 10 ಶಕ್ತಿ ದೇವಾಲಯ ಸಮಿತಿಗಳ ದಶಮಂಟಪಗಳು ರಾಜಬೀದಿಯಲ್ಲಿ ಸಾಗಿ ಅಕರ್ಷಿಸುತ್ತಿತ್ತು. ಐತಿಹಾಸಿಕ ಪುರಾಣ ಕಥೆಗಳನ್ನು ಸಾರುವ ಮಂಟಪಗಳು ಎಲ್ಲರ ಗಮನ ಸೆಳೆಯುತ್ತಿತ್ತು. ದಶಮಂಟಪಗಳನ್ನು ನೋಡಲೆಂದೇ ದೂರದೂರಿನಿಂದ ಜನರು ಬರುತ್ತಿದ್ದರು. ಆದರೆ ಈ ಬಾರಿ ದಸರಾ ಹೇಗೆ ನಡೆಸುವುದು ಎಂಬ ಥಳಮಳ ಇದೀಗ ಸಮಿತಿಗಳಲ್ಲಿ ಪ್ರಾರಂಭಗೊಂಡಿದೆ.

    ಇಂದಿನವರೆಗೂ ಜನರ ದೇಣಿಗೆಯ ಮೂಲಕವೇ ದಸರಾ ನಡೆಯುತ್ತಿತ್ತು. ಇದರ ಜೊತೆಗೆ ಸರ್ಕಾರ ನೀಡುವ ಹಣವನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಈ ಬಾರಿ ಜಲಪ್ರಳಯದಲ್ಲಿ ನೊಂದಿರುವ ಜನರ ಬಳಿ ಹೇಗೆ ಹಣ ಕೇಳುವುದು ಎಂಬ ನೋವು ಕೂಡ ಸಮಿತಿ ಮುಂದಿದೆ. ಆದರೆ ನೋವಿನ ನಡುವೆಯೇ ದಸರಾ ಆಚರಣೆಗೆ ಚಾಲನೆ ನೀಡಲಾಗಿದೆ.

    ಮಡಿಕೇರಿಯ ಶ್ರೀರಾಮ ಮಂದಿರದಲ್ಲಿ ಸಕಲ ಪೂಜಾ ವಿಧಿವಿಧಾನದ ಮೂಲಕ ಇಂದು ದಶಮಂಟಪಗಳ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. 10 ಮಂಟಪಗಳ ಸಮಿತಿ ಅಧ್ಯಕ್ಷರು ದೇವರಿಗೆ ಪೂಜೆ ಸಲ್ಲಿಸಿದರು. ಇನ್ನೂ ನೋವಿನ ನಡುವೆ ನಡೆಯುತ್ತಿರುವ ದಸರೆಗೆ ಸರ್ಕಾರ ಅನುದಾನ ನೀಡಬೇಕು. ಜನರ ಬಳಿ ದೇಣಿಗೆ ಸಂಗ್ರಹ ಮಾಡಲು ಸಾಧ್ಯವಿಲ್ಲ. ಅದರಿಂದ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಶಾಸಕರು ಸರ್ಕಾರದೊಂದಿಗೆ ಚರ್ಚಿಸಿ ಸಮಿತಿಯ ಜತೆಗೆ ಕೈಜೋಡಿಸಬೇಕು. ದಸರಾ ಆಚರಣೆಯ ವೇಳೆ ವಿಜೃಂಭಣೆಗೆ ಬ್ರೇಕ್ ಹಾಕಿ ಕೇವಲ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ದಶಮಂಟಪ ಸಮಿತಿ ಅಧ್ಯಕ್ಷ ರವಿ ತಿಳಿಸಿದ್ದಾರೆ.

    ಇದೇ ವೇಳೆ ಯಾವುದೇ ಕಾರಣಕ್ಕೂ ಆಚರಣೆ ಕೈಬಿಡಲು ಸಾಧ್ಯವಾಗುವುದಿಲ್ಲ 4 ಶಕ್ತಿ ದೇವತೆಗಳಾದ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಕಂಚಿ ಕಾಮಾಕ್ಷಿ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ದೇವಾಲಯಗಳ ಕರಗ ಹೊರುವ ಮೂಲಕ ಆಚರಣೆಗೆ ಚಾಲನೆ ನೀಡಲಾಗಿದ್ದು, ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಧಾರ್ಮಿಕ ಆಚರಣೆಗಳನ್ನು ಮಾತ್ರ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

    ಸೂರ್ಯಗ್ರಹಣದ ದಿನದಂದೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನಕ್ಕೆ ಗ್ರಹಣ!

    ತಿರುಪತಿ/ಹೈದರಾಬಾದ್: ತಿಮ್ಮಪ್ಪನ ಸನ್ನಿಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣ ಇಂದಿನಿಂದ ಆರಂಭಗೊಳ್ಳಲಿದೆ.

    ಪೂಜೆಯ ಭಾಗವಾಗಿ ಇಂದು ರಾತ್ರಿ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ತಿಮ್ಮಪ್ಪನ ವಿಗ್ರಹದ ಭವ್ಯ ಮೆರವಣಿಗೆ ನಡೆಯಲಿದ್ದು, ಭಾನುವಾರ ಬೆಳಗ್ಗೆ 6 ಗಂಟೆಯಿಂದ ಆಗಮಶಾಸ್ತ್ರದ ಪ್ರಕಾರ ಧಾರ್ಮಿಕ ವಿಧಿವಿಧಾನ ಆರಂಭವಾಗಲಿದೆ. ವಿಶೇಷ ಮಹಾಸಂಪ್ರೋಕ್ಷಣೆ ಕಾರ್ಯವನ್ನು ಆಂಧ್ರ, ಕರ್ನಾಟಕ, ತೆಲಂಗಾಣದ 45 ಆಗಮ ಪಂಡಿತರು ನಡೆಸಲಿದ್ದಾರೆ. ಬಳಿಕ ಗುರುವಾರದವರೆಗೂ ತಿಮ್ಮಪ್ಪನ ಪದತಳದಲ್ಲಿ ಅಷ್ಟಬಂಧನ ಬಾಲಾಲಯ ಮಹಾ ಸಂಪ್ರೋಕ್ಷಣೆ ಮಾಡಲಾಗುತ್ತದೆ.

    ಮಹಾ ಯಾಗಕ್ಕಾಗಿ ತಿರುಮಲದ ಯೋಗಶಾಲೆಯಲ್ಲಿ 28 ಹೋಮ ಗುಂಡಿ ನಿರ್ಮಾಣ ಮಾಡಲಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ ತುಪ್ಪದ ದೀಪದ ಬೆಳಕಿನಲ್ಲೇ ಹೋಮ ಹವನ ನಡೆಸಲು ತೀರ್ಮಾನ ಮಾಡಲಾಗಿದೆ. ಈ ವೇಳೆ ಭಕ್ತರ ದರ್ಶನಕ್ಕೆ ದೇವಾಲಯದ ಟಿಟಿಡಿ ಸಮಿತಿ ನಿರ್ಬಂಧ ಹೇರಿದೆ. ಟಿಟಿಡಿ ಗುರುವಾರದಿಂದಲೇ ತಿಮ್ಮಪ್ಪನ ದಿವ್ಯ ದರ್ಶನ, ಸರ್ವದರ್ಶನ ಟೋಕನ್ ನೀಡುವುದನ್ನು ರದ್ದು ಮಾಡಿದ್ದು, ಸರತಿ ಸಾಲಿನಲ್ಲಿ ಬರುವ ಭಕ್ತರಿಗೂ ಮಿತಿ ಹೇರಿದೆ.

    ಏನಿದು ಬಾಲಾಲಯ ಮಹಾಸಂಪ್ರೋಕ್ಷಣೆ?: ತಿಮ್ಮಪ್ಪನ ಮೂಲವಿರಾಟ್ ಮತ್ತು ಇತರೆ ದೇವರ ವಿಗ್ರಹಗಳ ಶಕ್ತಿಯನ್ನು ಬಿಂಬದಿಂದ ಕುಂಭದೊಳಕ್ಕೆ ಆವಾಹನೆ ಮಾಡುವ ಪ್ರಕ್ರಿಯೆಯಾಗಿದೆ. ಧಾರ್ಮಿಕ ಆಚಾರಣೆಯನ್ನು 12 ವರ್ಷಗಳಿಗೆ ಒಮ್ಮೆ ಮಾತ್ರ ಮಾಡಲಾಗುತ್ತದೆ.

    ಅಷ್ಟಬಂಧನ: 8 ರೀತಿಯ ವಸ್ತುಗಳಿಂದ ತಯಾರು ಮಾಡಿದ ಚೂರ್ಣ. ಈ ಚೂರ್ಣದ ಆಯಸ್ಸು 12 ವರ್ಷಗಳ ಕಾಲ ಇರುತ್ತದೆ. ಈ ಅಷ್ಟ ಬಂಧನವನ್ನು ತಿಮ್ಮಪ್ಪನ ಪಾದದಲ್ಲಿ ಇರಿಸುತ್ತಾರೆ. ವಿಶೇಷವಾಗಿ ಮಹಾಸಂಪ್ರೋಕ್ಷಣೆ ವೇಳೆ ದೇಗುಲದ ಸಿಬ್ಬಂದಿಗೂ ರಾಮುಲವಾರಿ ಮೇಡ ದಾಟಲು ಅವಕಾಶ ಇರಲ್ಲ.

    30 ಸಾವಿರ ಭಕ್ತಿಗೆ ಮಾತ್ರ ಅವಕಾಶ: ದೇವರಿಗೆ ನಡೆಯುವ ಪ್ರಕ್ರಿಯೆ ಬಾಲಾಲಯ ಮಹಾಸಂಪ್ರೋಕ್ಷಣೆ ವಿಶೇಷ ಪೂಜಾ ಕಾರ್ಯದ ದಿನಗಳಲ್ಲಿ ಟಿಟಿಡಿ ಸಮಿತಿ 30 ಸಾವಿರ ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಿದೆ. ಆಗಸ್ಟ್ 16 ರ ವರೆಗೂ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಟಿಟಿಡಿ ಸಮಿತಿ ತಿಳಿಸಿದೆ. ಈ ಹಿಂದಿನ ವರ್ಷಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ ಪ್ರತಿನಿತ್ಯ ಸುಮಾರು 1 ಲಕ್ಷ ಮಂದಿ ದೇವರ ದರ್ಶನ ಪಡೆಯುತ್ತಿದ್ದರು.

    ಈ ಹಿಂದೆ ಬಾಲಾಲಯ ಮಹಾಸಂಪ್ರೋಕ್ಷಣೆ ನಡೆಯುವ 6 ದಿನಗಳ ಅವಧಿಯಲ್ಲಿ ಭಕ್ತರಿಗೆ ದೇವರ ದರ್ಶನ ಕಾರ್ಯ ನೀಡದಿರಲು ಟಿಟಿಡಿ ನಿರ್ಧರಿಸಿತ್ತು. ಆದರೆ ಈ ಬಳಿಕ ನಡೆದ ಚರ್ಚೆಗಳಲ್ಲಿ ಭಕ್ತರಿಂದ ಒತ್ತಡ ಹೆಚ್ಚಾಗಿದ್ದರಿಂದ ಸದ್ಯ 30 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿರುಪತಿ: ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಹೊಂದಿರುವ ತಿರುಪತಿ ತಿರುಮಲ ದೇವಾಲಯ ಅಷ್ಟಬಂಧನ ಧಾರ್ಮಿಕ ಕಾರ್ಯಕ್ರಮದಿಂದ 7 ದಿನಗಳ ಕಾಲ ಭಕ್ತರಿಗೆ ದರ್ಶನ ಲಭ್ಯವಿಲ್ಲ ಎಂದು ಟಿಟಿಡಿ ಸಮಿತಿ ತಿಳಿಸಿದೆ.

    ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಸಮಿತಿಯ ಮುಖ್ಯಸ್ಥ ಪುಟ್ಟ ಸುಧಾಕರ್ ಯಾದವ್, ಆಗಸ್ಟ್ 9 ರಿಂದ 17 ರವೆಗೂ ಅಷ್ಟ ಬಂಧನ ಬಾಲಾಲಯ ಮಹಾಸಂಪ್ರೋಕ್ಷಣೆ ನಡೆಯುವುದರಿಂದ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಟಿಟಿಡಿ ಸಮಿತಿ ಶನಿವಾರ ನಡೆಸಿದ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಆಗಸ್ಟ್ 11 ರ ಮುಂಜಾನೆ 6 ರಿಂದ ದೇವರ ದರ್ಶನ ಕಾರ್ಯ ಸ್ಥಗಿತಗೊಳ್ಳಲಿದೆ. ಆದರೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.

    ಆಗಸ್ಟ್ 11 ರಂದು ದೇವರಿಗೆ ವಿಶೇಷ ಪೂಜೆ ಆರಂಭ ಮಾಡಲಾಗುತ್ತದೆ. ಈ ಪ್ರಕ್ರಿಯೇ 9 ತಿಂಗಳು ಕಾಲ ಮುಂದುವರೆಯಲಿದ್ದು, ಈ ಅವಧಿಯಲ್ಲಿ ದೇವರ ದರ್ಶನ ಭಾಗ್ಯ ಲಭ್ಯವಾಗುವುದಿಲ್ಲ. ಸದ್ಯ ಟಿಟಿಡಿ ಸಮಿತಿ ನಿರ್ಧಾರಕ್ಕೆ ಭಕ್ತ ಸಮೂಹದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಏನಿದು ಬಾಲಾಲಯ ಮಹಾಸಂಪ್ರೋಕ್ಷಣೆ? ತಿಮ್ಮಪ್ಪನ ಮೂಲವಿರಾಟ್ ಮತ್ತು ಇತರೆ ದೇವರ ವಿಗ್ರಹಗಳ ಶಕ್ತಿಯನ್ನು ಬಿಂಬದಿಂದ ಕುಂಭದೊಳಕ್ಕೆ ಆವಾಹನೆ ಮಾಡುವ ಪ್ರಕ್ರಿಯೆಯಾಗಿದೆ. ಧಾರ್ಮಿಕ ಆಚಾರಣೆಯನ್ನು 12 ವರ್ಷಗಳಿಗೆ ಒಮ್ಮೆ ಮಾತ್ರ ಮಾಡಲಾಗುತ್ತದೆ.

    ಅಷ್ಟಬಂಧನ: 8 ರೀತಿಯ ವಸ್ತುಗಳಿಂದ ತಯಾರು ಮಾಡಿದ ಚೂರ್ಣ. ಈ ಚೂರ್ಣದ ಆಯಸ್ಸು 12 ವರ್ಷಗಳ ಕಾಲ ಇರುತ್ತದೆ. ಈ ಅಷ್ಟ ಬಂಧನವನ್ನು ತಿಮ್ಮಪ್ಪನ ಪಾದದಲ್ಲಿ ಇರಿಸುತ್ತಾರೆ. ವಿಶೇಷವಾಗಿ ಮಹಾಸಂಪ್ರೋಕ್ಷಣೆ ವೇಳೆ ದೇಗುಲದ ಸಿಬ್ಬಂದಿಗೂ ರಾಮುಲವಾರಿ ಮೇಡ ದಾಟಲು ಅವಕಾಶ ಇರಲ್ಲ.