Tag: ಧ್ರುವನಾರಾಯಣ

  • ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಮೈಸೂರು: ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ (R Dhruvanarayana) ಅವರ ಪತ್ನಿ ವೀಣಾ (Veena) ಶುಕ್ರವಾರ ನಿಧನರಾಗಿದ್ದಾರೆ.

    ಕ್ಯಾನ್ಸರ್ (Cancer) ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

    ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು. ಇದನ್ನೂ ಓದಿ: ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!

  • ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ

    ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ

    ಹಾಸನ: ಜಿಲ್ಲಾ ಕಾಂಗ್ರೆಸ್‌ನಲ್ಲಿ (Congress) ಬಣ ರಾಜಕೀಯ ಹಾಗೂ ಭಿನ್ನಮತ ಮುಂದುವರಿದಿದೆ. ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಆರ್.ಧ್ರುವನಾರಾಯಣ್ (R Dhruvanarayana) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಮ್ಮ ಸಿಟ್ಟು ಹೊರ ಹಾಕಿದರು.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಆರಂಭ ಆಗುತ್ತಿದ್ದಂತೆಯೇ ಮಾತನಾಡಿದ ಹಲವು ಮುಖಂಡರು, ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಅಸಮಾಧಾನ ಹೊರಹಾಕಿದರು. ಜಿಲ್ಲಾ ನಾಯಕರು ಹಾಗೂ ಮುಖಂಡರ ಅಭಿಪ್ರಾಯ ಪಡೆಯದೆ ಇ.ಹೆಚ್.ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ನಾಯಕರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ (Siddaramaiah) ಅವರನ್ನು ಬಿಜೆಪಿಯವರು (BJP) ಸಿದ್ರಾಮುಲ್ಲಾಖಾನ್ ಅಂತಾರೆ. ಅಂತಹ ಬಿಜೆಪಿಯಲ್ಲಿದ್ದವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದೀರಿ, ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು ಎಂದು ಕೆಂಡಾಮಂಡಲರಾದರು.

    ಇಪ್ಪತ್ತೈದು ವರ್ಷದಲ್ಲಿ ಉತ್ತಮ ಅಧ್ಯಕ್ಷರನ್ನು ನೇಮಕ ಮಾಡಲು ಆಗಿಲ್ಲ. ನಾಚಿಕೆ ಆಗಬೇಕು ನಿಮಗೆ, ನಿಮ್ಮ ಹತ್ರ ಹಣವಿರಬಹುದು, ನಾವಿಲ್ಲದಿದ್ದರೆ ನೀವು ಏನೂ ಮಾಡಲು ಆಗಲ್ಲ ಎಂದು ಬಹಿರಂಗ ಸಭೆಯಲ್ಲಿ ಸಿಟ್ಟಾದರು. ರಾಜ್ಯ ನಾಯಕರು ಪಕ್ಷದ ಹಿತದೃಷ್ಟಿ ಹಾಗೂ ಸಂಘಟನೆ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿರುತ್ತಾರೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಇದಾದ ಬಳಿಕವೂ ಇದೇ ವಿಷಯವಾಗಿ ಅಸಮಾಧಾನ, ಗದ್ದಲ, ಗೊಂದಲ ಮುಂದುವರಿಯಿತು. ಒಬ್ಬರ ಪರ ಇನ್ನೊಬ್ಬರು ಮಾತನಾಡಿದ್ದರಿಂದ ಸಭೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಮುಖಂಡರು ಮತ್ತು ಕಾರ್ಯಕರ್ತರ ನಡುವಿನ ವಾಗ್ವಾದ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ಕಾರ್ಯಕರ್ತರ ಗದ್ದಲ ನಿಯಂತ್ರಿಸಲಾಗದೆ ರಾಜ್ಯ ನಾಯಕರು ಮೂಕ ಪ್ರೇಕ್ಷಕರಾದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗಿದೆ ಎಂದು ಧ್ರುವನಾರಾಯಣ್ ಸಮ್ಮುಖದಲ್ಲೇ ಕೈಪಡೆ ಕಿತ್ತಾಡಿಕೊಂಡರು. ಇದನ್ನೂ ಓದಿ: ಅಫ್ತಾಬ್‌ನನ್ನು ಗಲ್ಲಿಗೇರಿಸಿ, ಪೋಷಕರಿಗೂ ಕಠಿಣ ಶಿಕ್ಷೆ ನೀಡಿ: ಶ್ರದ್ಧಾ ತಂದೆ ಆಕ್ರೋಶ

    ಈ ನಡುವೆ ಬೇಲೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಾಜಿಸಚಿವ ಬಿ.ಶಿವರಾಂ ಪರವಾಗಿ ಮಾತನಾಡಲು ಮುಂದಾದವರ ವಿರುದ್ಧ ಅನೇಕರು ಕಿಡಿಕಾರಿದರು. ಶಿವರಾಂ ಪರವಾಗಿ ಮಾತನಾಡುತ್ತಿದ್ದವರ ಮೇಲೆ ಕೆಲವರು ಮುಗಿ ಬಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ವಾಗ್ವಾದ ನಡೆಸುತ್ತಿದ್ದವರನ್ನು ಸಭೆಯಿಂದ ಹೊರಕಳಿಸಿ ಉಳಿದ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು. ಆದರೂ ಸುಮ್ಮನಾಗದ ಕೆಲವರು, ಕಾಂಗ್ರೆಸ್ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದರು. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು, ಆಗಲೇ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದೀವಿ ಅನ್ಕೊಂಡಿದ್ದೀರಾ, ಇದೇ ರೀತಿ ಆದರೆ ಎಲ್ಲೂ ಗೆಲ್ಲಲು ಆಗಲ್ಲ ಎಂದು ಗುಡುಗಿದರು. ಇದನ್ನೂ ಓದಿ: ರಾಜ್ಯದ ಹಿತಕ್ಕಾಗಿ ಪ್ರಣಾಳಿಕೆ ಸಂಬಂಧ ವಿಶ್ವನಾಥ್ ಜೊತೆ ಚರ್ಚೆ ಮಾಡಿದ್ದೇನೆ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ವಿಸ್ತೃತ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರಾಗಿ ಡಿ.ಕೆ ಶಿವಕುಮಾರ್ ಇದ್ದರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕೆಪಿಸಿಸಿ ಕಾರ್ಯದರ್ಶಿ ಧ್ರುವನಾರಾಯಣ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಸ್ತೃತ ಯೋಜನಾ ವರದಿ ಸಲ್ಲಿಸಿ ಒಂದೂವರೆ ವರ್ಷ ಕಳೆದಿದೆ. ಆದರೂ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇವೆ. ಇದು ರಾಜಕೀಯಕ್ಕೋಸ್ಕರ ಅಥವಾ ಜನರ ಮತ ಸೆಳೆಯಲು ಮಾಡುತ್ತಿಲ್ಲ. ಈ ವಿಚಾರವನ್ನು ಕುಮಾರಸ್ವಾಮಿ ಅರಿತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಕಳೆದ ಒಂದೂವರೆ ವರ್ಷದಿಂದ ಈ ಯೋಜನೆಯ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಯೋಜನೆ ಜಾರಿಗೊಳಿಸುವಂತೆ ಒಂದು ರಾಜಕೀಯ ಪಕ್ಷವಾಗಿ ಒತ್ತಾಯಿಸುವುದು ತಪ್ಪೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಹಿಂದೂಗಳಿಗೆ ಹಿಂದೂಗಳಾಗಿ ಹುಟ್ಟಿದ್ದೇ ತಪ್ಪು ಅನ್ನಿಸಬಾರದು: ಸಿ.ಟಿ.ರವಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ವಿಚಾರವಾಗಿ ಮಾತನಾಡಿದ ಅವರು, ಸಹಜವಾಗಿ ಆಡಳಿತ ಪಕ್ಷ ಹೆಚ್ಚಿನ ಸ್ಥಾನ ಗಳಿಸುತ್ತದೆ. ಆದರೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಜನರ ಕಷ್ಟ ಕೇಳಲಿಲ್ಲ. ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಲು ವಿಫಲವಾಗಿದೆ. ಅಷ್ಟೇ ಅಲ್ಲದೆ ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

    ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಪ್ರಾರಂಭವಾಗಿದೆ. ಈ ಫಲಿತಾಂಶ ಮುಂಬರುವ ಜಿಪಂ, ತಾಪಂ, ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಜನಪರ ಆಡಳಿತ ನೀಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಪ್ರತಿಕ್ರಿಯಿಸಿದರು.

  • ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್

    ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್

    ಮಂಡ್ಯ: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ನಮ್ಮ ಪಕ್ಷದಿಂದ ಎಲ್ಲಾ ಸಮುದಾಯವರಿಗೆ ಟಿಕೆಟ್ ನೀಡುವ ಮೂಲಕ ಅದು ಸಾಭಿತಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೇಳಿದಂತೆ ನಡೆದುಕೊಳ್ಳುತ್ತ ಬಂದಿದೆಯೇ ಎಂದು ಮಾಜಿ ಸಂಸದ ಧ್ರುವನಾರಾಯಣ್ ಅವರು ಕೇಳಿದರು.

    ಶುಕ್ರವಾರ ಕೃಷ್ಣರಾಜನಗರದ ಶ್ರೀಮತಿ ಜಯಮ್ಮ ಶಿವಲಿಂಗಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ ಟೀಕೆಟ್ ನೀಡುತ್ತಾ ಬೆಳೆಸುತ್ತಾ ಬಂದಿದೆ. ಆದರೆ ಬಿಜೆಪಿ ಅವರು ಹೇಳಿದಂತೆ ನಡೆದುಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ದಿನೇಶ್ ಅವರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರು ಪಾದರಸದಂತೆ ಕೆಲಸ ಮಾಡುವುದನ್ನು ಕಂಡು ಹಲವಾರು ಸಚಿವರು ವಿಶೇಷ ಕರ್ತವ್ಯಾಧಿಕಾರಿಯಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಇಂತಹ ವ್ಯಕ್ತಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.

    ಮಂಡ್ಯದ ಸ್ವಾಭಿಮಾನ ಉಳಿಸಿದ್ದಾರೆಯೇ?: ಜೆಡಿಎಸ್ ನಿಂದ ಗೆದ್ದು ಹೋದವರು ವಿಧಾನ ಪರಿಷತ್ತಿನಲ್ಲಿ ಇಲ್ಲಿನ ಸಮಸ್ಯೆಗಳನ್ನು ಎತ್ತಿ ಹಿಡಿದಿದ್ದಾರೆಯೇ. ಕೇವಲ ಅಧಿಕಾರಕ್ಕಾಗಿ ಬಂದು ಇಲ್ಲಿ ಇಂದು ಮತ ಕೇಳುತ್ತಿದ್ದಾರೆ. ಅವರು ಮಂಡ್ಯದ ಸ್ವಾಭಿಮಾನದ ಜೊತೆಗೆ ಇಲ್ಲಿನ ಜನರ ಸ್ವಾಭಿಮಾನವನ್ನು ಕುಂಠಿತಗೊಳಿಸಿದ್ದಾರೆ ಎಂದು ನರೇಂದ್ರ ಸ್ವಾಮಿ ಕೇಳಿದರು.

    ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇಲ್ಲಿಗೆ ಕೊಟ್ಟಿರುವ ಆಶ್ವಾಸನೆಗಳು, ಅಭಿವೃದ್ಧಿಗಳು ಈಡೇರಿದೆಯೇ ಎಂದು ಆತ್ಮವಲೋಕನ ಮಾಡಿಕೊಳ್ಳಬೇಕು. 15ನೇ ಹಣಕಾಸು ಯೋಜನೆ ಹಣವನ್ನು ಜಲಜೀವನ್ ಮೀಷನ್ ಗೆ ನೀಡಿದ್ದಾರೆ. ಇದರಿಂದ ಯಾರಿಗಾದರೂ ಅನುಕೂಲವಾಗಿದೆಯೇ ಎಂದು ಪ್ರಶ್ನಿಸಿದರು. ಹಾಲಿಗೆ ನೀರು ಬೇರೆಸಿ ಅಕ್ರಮವಾಗಿ ಹಣ ಲೂಟಿ ಮಾಡುತ್ತಿದ್ದವರು ತನಿಖೆಗೆ ಒಪ್ಪಿಕೊಳ್ಳಲಿ. ಇಂದು ರೈತರು ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಬೇಕು. ರೈತರಿಗೆ ಮೋಸ ಮಾಡುವ ಜನರನ್ನು ಮತ್ತೆ ಅಧಿಕಾರಕ್ಕೆ ತರಬೇಕೆ ಎಂದರು.

    ಸುಳ್ಳು ಭರವಸೆಗಳ ನಾಯಕರು: ಈ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಹಲವಾರು ಆಸೆ ಆಮಿಷಗಳನ್ನು ಜನರಿಗೆ ತೋರಿಸಿ ಅಧಿಕಾರಕ್ಕೆ ಬಂದರು. 40% ಕಮಿಷನ್ ಅನ್ನು ಬಿಜೆಪಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಅವರಿಗೆ ಮಾನ ಮರ್ಯಾದೆ ಇದೆಯಾ ಎಂದು ಕೆ.ಬಿ.ಚಂದ್ರಶೇಖರ್ ಹೇಳಿದರು.

    ಜೆಡಿಎಸ್ ಇರೊದು ಅಲ್ಲೊಂದು ಇಲ್ಲೊಂದು. ಕಳೆದ ಬಾರಿ ವಿಧಾನ ಸಭೆಯಲ್ಲಿ ನಿಂತಾಗ ಕುಮಾರಸ್ವಾಮಿ ಅವರು ವಯಸ್ಸಾದವರಿಗೆ 6000 ರೂ ಕೊಡುತ್ತೇನೆ, ಸಾಲ ಮನ್ನಾ ಮಾಡುತ್ತೇನೆ ಎಂದವರು ಮಾಡಿದ್ದಾರೆಯೇ. ಅಧಿಕಾರಕ್ಕೆ ಬರಲು ಕೇವಲ ಇಂತಹ ಟೊಳ್ಳು ಭರವಸೆಗಳನ್ನು ಕೊಡುತ್ತಾರೆ ಎಂದರು.

    ಮತ ಕೇಳುವ ಯಾವ ನೈತಿಕತೆಯೂ ಇಲ್ಲ: ಜೆಡಿಎಸ್ ನಿಂದ ಗೆದ್ದು ಇದೀಗ ಮತ ಕೇಳಲು ಬಂದಿರುವ ಅಪ್ಪಾಜಿ ಗೌಡ ಅವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ.ಅವರು ಯಾವುದಾದರೂ ಅಭಿವೃದ್ಧಿ ಕೆಲಸವನ್ನು ಜಿಲ್ಲೆಯಲ್ಲಿ ಮಾಡಿದ್ದಾರೆಯೇ ಎಂದು ಸಿ.ಡಿ.ಗಂಗಾಧರ್ ಪ್ರಶ್ನಿಸಿದರು. ಇದನ್ನೂ ಓದಿ: ಕಮಿಷನ್ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ: ಹೆಚ್.ಡಿ.ರೇವಣ್ಣ ಒತ್ತಾಯ

    ಜೆಡಿಎಸ್ ನಿಂದ ಅಂದು ಗೆದ್ದು ಹೋದವರು ಮತ್ತೆ ಆರು ವರ್ಷ ನಂತರ ಬಂದಿದ್ದಾರೆ. ಇವರು ಜಿಲ್ಲೆಯಲ್ಲಿ ಯಾವುದಾದರೂ ಅಭಿವೃದ್ಧಿ ಕಾರ್ಯ ಮಾಡಿದ್ದಾರೆಯೇ ಎಂದು ಅವರಿಗೆ ಇಂದು ಕೇಳಬೇಕಾಗಿದೆ. ಹೀಗಾಗಿ ಮತ್ತೆ ಇಂತವರು ಮತ್ತೆ ಮತ ಕೇಳಲು ಬಂದಿದ್ದಾರೆ. ಇಂತಹವರನ್ನು ನಾವು ಮತ್ತೆ ಗೆಲ್ಲಿಸಬೇಕೆ ಎಂದರು.

    ಜೆಡಿಎಸ್ ಜಿಲ್ಲೆಯಲ್ಲಿ ಯಾವುದಾದರೂ ಒಂದು ಸಭೆಯನ್ನು ಮಾಡಿಲ್ಲ. ಹೀಗಾಗಿ ನಮ್ಮ ಅಭ್ಯರ್ಥಿ ದಿನೇಶ್ ಗೂಳಿಗೌಡ ಅವರ ಗೆಲುವು ಇಂದು ನಮಗೆ ಅನಿವಾರ್ಯವಾಗಿದೆ. ಅವರನ್ನು ಗೆಲ್ಲಿಸಲು ನಾವು ಒಗ್ಗಟ್ಟಿನಿಂದ ಮುಂದೆ ಸಾಗಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ಶಾಸಕ ಪ್ರಕಾಶ್ ಅವರು ಮಾತನಾಡಿ, ಮುಂದೆ ಬರಲಿರುವ ಚುನಾವಣೆಗೆ ನಮಗೆ ಹಾಗೂ ನಮ್ಮ ಪಕ್ಷಕ್ಕೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಯಾದ ದಿನೇಶ್ ಗೂಳಿಗೌಡ ಅವರನ್ನು ಗೆಲ್ಲಿಸುವ ಮೂಲಕ ನಾವು ಸಕ್ರಿಯರಾಗಿರುವುದನ್ನು ತೋರಿಸಬೇಕು ಎಂದು ಹೇಳಿದರು.

    ದಿನೇಶ್ ಗೂಳಿಗೌಡ ಅವರನ್ನು ಗೆಲ್ಲಿಸಲು ಮತದಾರರ ಮನವೋಲಿಸಬೇಕು. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಓಡಾಡಬೇಕು. ನಿಮ್ಮ ವ್ಯಾಪ್ತಿಯಲ್ಲಿರುವ ಮತದಾರರ ಮನವೋಲಿಸಲು ಶ್ರಮಿಸಿ. ನಿಮಗೆ ನಾವೂ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಾಗಿದ್ದೇವೆ ಎಂದರು. ಇದನ್ನೂ ಓದಿ: ಸರ್ಕಾರದ ಕಮಿಷನ್ ಶೇ. 10 ಇದ್ದದ್ದು ಈಗ 30 ಪರ್ಸೆಂಟ್‌ಗೆ ಏರಿದೆ: ಗುತ್ತಿಗೆದಾರ ಕೆಂಪಣ್ಣ ಆರೋಪ

    24*7 ಸೇವೆಗೆ ಸಿದ್ಧ: ಪಕ್ಕದ ಮಾರಸಿಂಗನಹಳ್ಳಿಯವನಾದ ನಾನು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹಂತದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ರೈತ ಕುಟುಂಬದಿಂದ ಬಂದ ನನಗೆ ಇಲ್ಲಿನ ರೈತರ ಹಾಗೂ ಗ್ರಾಮದ ಸಮಸ್ಯೆಗಳ ಬಗ್ಗೆ ಅರಿವಿದೆ ಹೀಗಾಗಿ ನಾನು ನಿಮ್ಮ ಸೇವೆಗೆ ದಿನದ 24ಗಂಟೆಯೂ (24*7) ಸದಾ ಸಿದ್ದನಾಗಿರುತ್ತೇನೆ ಎಂದು ದಿನೇಶ್ ಗೂಳಿಗೌಡ ಹೇಳಿದರು.

    ನಾನು ಗೆದ್ದ ನಂತರ ನಿಮ್ಮ ಗ್ರಾಮಗಳಲ್ಲೆ ಬಂದು ವಾಸ್ತವ್ಯ ಹೂಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವೆ. ನಿಮ್ಮ ಕಷ್ಟಗಳನ್ನು ಹಾಗೂ ಗ್ರಾಮದ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹರಿಸುವ ಕಾರ್ಯ ಮಾಡುವ ಮುಖಾಂತರ ಕೊಂಡಿಯಾಗಿ ಸೇವೆ ನೀಡುವೆ ಎಂದರು.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಅಭ್ಯರ್ಥಿ ದಿನೇಶ್ ಗೂಳಿಗೌಡ, ಮುಖಂಡರಾದ ಸುರೇಶ್, ದೇವರಾಜ, ಅಂಜನಾ ಶ್ರೀಕಾಂತ್, ರಮೇಶ್, ಕೃಷ್ಣ, ಪ್ರಸನ್ನ, ವಿಜಯ್ ಕುಮಾರ್, ಮಂಜ, ಸುದರ್ಶನ್, ಗೌರಿಶಂಕರ್ ಸೇರಿದಂತೆ ಇತರರು ಹಾಜರಿದ್ದರು.

  • ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ರಾಯಚೂರು: ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹೇಳಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಧ್ರುವನಾರಾಯಣ, ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೊದಲಿನಿಂದಲೂ ಇಂತಹ ಹೇಳಿಕೆ ನೀಡುವಲ್ಲಿ ಈಶ್ವರಪ್ಪ ನಿಸ್ಸೀಮರು. ನಾಲಿಗೆಗೆ ಎಲುಬಿಲ್ಲ, ಈಶ್ವರಪ್ಪಗೆ ಮೆದುಳು ಸಹ ಇದೆಯೋ, ಇಲ್ಲವೋ ಗೊತ್ತಿಲ್ಲಾ. ಮಾನಸಿಕ ಸ್ಥಿಮಿತತೆಯನ್ನು ಈಶ್ವರಪ್ಪ ಕಳೆದುಕೊಂಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದೆಯಾದರೂ ಬಿಡಬೇಕು ಎಂದಿದ್ದಾರೆ.

    ಇತ್ತೀಚೆಗೆ ತಲೆಗಳನ್ನು ತೆಗೆಯುವ ಬಗ್ಗೆ ಮಾತನಾಡಿದ್ದರು. ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ್ವೇಷ ದಳ್ಳೂರಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಪದೇ ಪದೇ ನೀಡುವುದರಿಂದ ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಮುಖ್ಯಮಂತ್ರಿಗಳು ಇವರನ್ನು ಕೂಡಲೇ ಸಂಪುಟದಿಂದ ಉಚ್ಛಾಟಿಸಬೇಕು ಎಂದು ಧ್ರುವನಾರಾಯಣ ಹೇಳಿದ್ದಾರೆ.   ಇದನ್ನೂ ಓದಿ:ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ಚಾಮರಾಜನಗರ ಅಖಾಡದ ವಿಶೇಷತೆ ಏನು?

    ಚಾಮರಾಜನಗರ ಅಖಾಡದ ವಿಶೇಷತೆ ಏನು?

    – ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ ಪ್ಲಸ್, ಮೈನಸ್ ಏನು?

    ಚಾಮರಾಜನಗರ: ಗುರು-ಶಿಷ್ಯರ ಯುದ್ಧ ನೆಲ ಚಾಮರಾಜನಗರ. ಗುರು ಅಲ್ಲ ಎಂದು ಧ್ರುವನಾರಾಯಣ್ ಅಖಾಡಕ್ಕೆ ಇಳಿದಿದ್ದಾರೆ. ಆದ್ರೆ ಶ್ರೀನಿವಾಸ್ ಪ್ರಸಾದ್ ಹಳೆಯ ರಾಜಕೀಯ ನೆಲ. 5 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವುದು ಈ ಕ್ಷೇತ್ರದ ವಿಶೇಷ.

    ಕಾಂಗ್ರೆಸ್ ನ ಆರ್.ಧ್ರುವನಾರಾಯಣ್ ಅವರು 2004ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ಒಂದು ಮತದ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಅಂದು ಸೋತಿದ್ದ ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ 2009 ಹಾಗು 2014ರ ಲೋಕಸಭಾ ಚುನಾವಣೆಗಳಲ್ಲೂ ಪರಸ್ಪರ ಎದುರಾಳಿಗಳಾಗಿದ್ರು. ಧ್ರುವನಾರಾಯಣ್ ಗೆಲುವು ಸಾಧಿಸಿದ್ರು. ಆದ್ರೆ ಅದೇ ಎ.ಆರ್.ಕೃಷ್ಣಮೂರ್ತಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.

    ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 16,67,044 ಮತದಾರರಿದ್ದಾರೆ. ಇದರಲ್ಲಿ 8,34,392 ಮಂದಿ ಪುರುಷರಿದ್ದು, 8,32,541 ಮಹಿಳಾ ಮತದಾರರಿದ್ದಾರೆ.

    ಜಾತಿವಾರು ಪ್ರಾಬಲ್ಯ:
    ಜಾತಿವಾರು ಪ್ರಾಬಲ್ಯ ನೋಡೋದಾದ್ರೆ ಸುಮಾರು 4 ಲಕ್ಷದಷ್ಟು ಎಸ್ ಸಿ ಸಮುದಾಯದವರು ಈ ಕ್ಷೇತ್ರದಲ್ಲಿದ್ದಾರೆ. 3.75 ಲಕ್ಷ ಮಂದಿ ಲಿಂಗಾಯಿತರು, 2 ಲಕ್ಷದಷ್ಟು ಎಸ್‍ಟಿ, 1.50 ಲಕ್ಷ ಮಂದಿ ಉಪ್ಪಾರ, 1.25 ಲಕ್ಷ ಒಕ್ಕಲಿಗ, 90 ಸಾವಿರ ಕುರುಬರು, 70 ಸಾವಿರ ಮುಸ್ಲಿಮರು ಹಾಗೂ ಇತರೆ ಸಮುದಾಯದವರು ಸುಮಾರು 2.5 ಲಕ್ಷ ಮಂದಿ ಮತದಾರರು ಇದ್ದಾರೆ.

    2014ರ ಫಲಿತಾಂಶ:
    2014ರ ಚುನಾವಣೆಯಲ್ಲಿ 11,33,029 (72.83%) ಒಟ್ಟು ಮತಗಳು ಚಲಾವಣೆಯಾಗಿವೆ. ಇದರಲ್ಲಿ ಕಾಂಗ್ರೆಸ್‍ನ ಆರ್.ಧ್ರುವನಾರಾಯಣ್ 5,67,782(50.10%) ರಷ್ಟು ಮತಗಳು ಬಿದ್ದರೆ, ಬಿಜೆಪಿಯ ಎ.ಆರ್.ಕೃಷ್ಣಮೂರ್ತಿಯವರಿಗೆ 4,26,600 (37.64%) ರಷ್ಟು ಮತಗಳು ಬಿದ್ದಿತ್ತು. ಹಾಗೂ ಜೆಡಿಎಸ್ ನ ಎಂ.ಶಿವಣ್ಣ ಅವರಿಗೆ 58,760 (05.18%) ಮತಗಳು ಬಿದ್ದಿತ್ತು. ಒಟ್ಟಿನಲ್ಲಿ 2014 ರ ಚುನಾವಣೆಯಲ್ಲಿ ಧ್ರುವನಾರಾಯಣ್ ಅವರು 1,41,182 (12.30%) ಅಂತರದಲ್ಲಿ ಜಯದ ಮಾಲೆ ತಮ್ಮದಾಗಿಸಿಕೊಂಡಿದ್ದರು.

    ಲೋಕಸಭಾ ಕ್ಷೇತ್ರ ವ್ಯಾಪ್ತಿ:
    8 ವಿಧಾನಸಭಾ ಕ್ಷೇತ್ರಗಳಲ್ಲಿ 4 ಕಾಂಗ್ರೆಸ್, 2 ಬಿಜೆಪಿ, 1 ಜೆಡಿಎಸ್, 1 ಬಿಎಸ್‍ಪಿ ಶಾಸಕರನ್ನು ಹೊಂದಿದ್ದು, ಚಾಮರಾಜನಗರ – ಪುಟ್ಟರಂಗಶೆಟ್ಟಿ(ಕಾಂಗ್ರೆಸ್), ಹೆಚ್.ಡಿ.ಕೋಟೆ – ಅನಿಲ್ ಚಿಕ್ಕಮಾದು(ಕಾಂಗ್ರೆಸ್), ವರುಣಾ-ಡಾ.ಯತೀಂದ್ರ(ಕಾಂಗ್ರೆಸ್), ಹನೂರು – ನರೇಂದ್ರ(ಕಾಂಗ್ರೆಸ್), ಗುಂಡ್ಲುಪೇಟೆ – ನಿರಂಜನ್ (ಬಿಜೆಪಿ), ನಂಜನಗೂಡು – ಹರ್ಷವರ್ಧನ್(ಬಿಜೆಪಿ), ಟಿ. ನರಸೀಪುರ – ಅಶ್ವಿನ್ ಕುಮಾರ್(ಜೆಡಿಎಸ್), ಕೊಳ್ಳೇಗಾಲ- ಎನ್.ಮಹೇಶ್ (ಬಿಎಸ್‍ಪಿ).

    ಪ್ರಮುಖ ಅಭ್ಯರ್ಥಿಗಳು:
    ಧ್ರುವನಾರಾಯಣ- ಕಾಂಗ್ರೆಸ್
    ಶ್ರೀನಿವಾಸಪ್ರಸಾದ್- ಬಿಜೆಪಿ

    > ಧ್ರುವನಾರಾಯಣ
    ಪ್ಲಸ್ ಪಾಯಿಂಟ್:
    ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ತಂದಿರೋದು ಹಾಗೂ 4 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರ ಬಲ ಇರುವುದರಿಂದ ಈ ಬಾರಿ ಧ್ರುವನಾರಾಯಣ ಗೆಲುವಿನ ಪತಾಕೆ ಹಾರಿಸುವ ಸಾಧ್ಯಗಳಿವೆ. ಅಲ್ಲದೆ 5 ವರ್ಷದಲ್ಲಿ ಕ್ಷೇತ್ರದ ಜತೆ ನಿರಂತರ ಸಂಪರ್ಕ ಸಾಧಿಸಿರೋದು ಕೂಡ ಇವರಿಗೆ ಪ್ಲಸ್ ಆಗೋ ಸಾಧ್ಯತೆ ಹೆಚ್ಚಿದೆ. ಇಷ್ಟು ಮಾತ್ರವಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿನ ಮೇಲೆ ಅಹಿಂದ ವೋಟು ಬೀಳುವ ಸಾದ್ಯತೆಗಳು ಕೂಡ ದಟ್ಟವಾಗಿದೆ.

    ಮೈನಸ್ ಪಾಯಿಂಟ್:
    ಕ್ಷೇತ್ರದ ಕೆಲವು ಕಡೆ ಆಡಳಿತ ವಿರೋಧಿ ಅಲೆ ಇರುವುದು. ಸ್ಥಳೀಯ ಮಟ್ಟದಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲ ಫೈಟ್ ಇರುವುದು ಹಾಗೂ ಕೊಳ್ಳೇಗಾಲದಲ್ಲಿ ಬಿಎಸ್‍ಪಿ ಹೆಚ್ಚು ಪ್ರಬಲ ಆಗಿರೋದರಿಂದ ಧ್ರುವನಾರಾಯಣ ಅವರಿಗೆ ಕೆಲವೊಂದು ಅಹಿಂದ ಮತ ಸಿಗದೇ ಇರಬಹುದಾದ ಸಾಧ್ಯಗಳು ಕೂಡ ಇವೆ.

    > ಶ್ರೀನಿವಾಸ್ ಪ್ರಸಾದ್
    ಪ್ಲಸ್ ಪಾಯಿಂಟ್:
    ಕ್ಷೇತ್ರದ ಬಗ್ಗೆ ಇಂಚಿಂಚೂ ಸೋಲು-ಗೆಲುವಿನ ಜಾಡು ಗೊತ್ತಿರುವುದು. ಪ್ರಧಾನಿ ನರೇಂದ್ರ ಮೋದಿ ಅಲೆ ಈ ಕ್ಷೇತ್ರದಲ್ಲೂ ವ್ಯಾಪಿಸಿರೋದು. ಹಾಗೂ ಈ ಬಾರಿ ಹಲವು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಲ ಹೆಚ್ಚಿಸಿಕೊಂಡಿರೋದು ಶ್ರೀನಿವಾಸ್ ಪ್ರಸಾದ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ಲಸ್ ಆಗುವ ಸಾಧ್ಯತೆಗಳಿವೆ.

    ಮೈನಸ್ ಪಾಯಿಂಟ್:
    ವಯಸ್ಸಿನ ಕಾರಣದಿಂದಾಗಿ ಹೆಚ್ಚು ಕಡೆ ಪ್ರಚಾರ ಸಾಧ್ಯವಾಗದಿರೋದು. ಕಡೇ ಕ್ಷಣದಲ್ಲಿ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದು ಮತ್ತು ಮೈತ್ರಿ ಪಕ್ಷಗಳ ಶಾಸಕರ ಬಲ ಹೆಚ್ಚಾಗಿರೋದು ಮೈನಸ್ ಅಂಶಗಳಾಗಿದೆ.