Tag: ಧ್ರುವ ನಾರಾಯಣ

  • ರಾಜಕೀಯ ಭವಿಷ್ಯವೇ ಬದಲಿಸಿದ ಒಂದೇ ಒಂದು ಮತ!

    ರಾಜಕೀಯ ಭವಿಷ್ಯವೇ ಬದಲಿಸಿದ ಒಂದೇ ಒಂದು ಮತ!

    ಮೈಸೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಂದೊಂದು ಮತವೂ ಮುಖ್ಯ. ಒಂದೇ ಒಂದು ಮತ ಗೆದ್ದ ವ್ಯಕ್ತಿಯ ರಾಜಕೀಯ ದಿಕ್ಕನ್ನೇ ಬದಲಿಸಿದರೆ! ಸೋತ ವ್ಯಕ್ತಿ ಈವರೆಗೆ ರಾಜಕೀಯವಾಗಿ ಮೇಲೆಳಲು ಆಗಿಲ್ಲ ಎಂದರೆ ನಂಬುತ್ತಿರಾ? ನೀವು ನಂಬಲೇಬೇಕು. ಇಂತಹ ಪ್ರಕರಣ ಅವಿಭಜಿತ ಮೈಸೂರು ಜಿಲ್ಲೆಯ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರ (Vidhanasabha Constituency) ದಲ್ಲಿ 2004 ರಲ್ಲಿ ಜರುಗಿದೆ.

    ಸಂತೇಮರಹಳ್ಳಿ ಪ. ಜಾತಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಮೈಸೂರು ಭಾಗದ ಹಿರಿಯ ರಾಜಕಾರಣಿ ಬಿ. ರಾಚಯ್ಯ ಅವರು ಸತತವಾಗಿ ಆಯ್ಕೆಯಾಗುತ್ತಿದ್ದರು. 1989ರ ಚುನಾವಣೆಯಲ್ಲಿ ತಮ್ಮ ಮಗ ಎ.ಆರ್. ಕೃಷ್ಣಮೂರ್ತಿ (A R Krishna Murthy) ಗೆ ಜನತಾದಳ ಟಿಕೆಟ್ ಕೊಡಿಸಿದರು. ಆದರೆ ಆ ಚುನಾವಣೆಯಲ್ಲಿ ಗೆದ್ದಿದ್ದು ಮಾತ್ರ ಕಾಂಗ್ರೆಸ್‍ನ ಕೆ. ಸಿದ್ದಯ್ಯ, ನಂತರ 1994 ರಲ್ಲಿ ಜನತಾದಳ, 1999 ರಲ್ಲಿ ಜೆಡಿಯು (JDU) ಟಿಕೆಟ್ ಮೇಲೆ ಕೃಷ್ಣಮೂರ್ತಿ ಸತತ ಎರಡು ಬಾರಿ ಆ ಕ್ಷೇತ್ರದಿಂದ ಆಯ್ಕೆಯಾದರು. 1999 ರಲ್ಲಿ ಜೆಡಿಯು ಹಾಗೂ ಬಿಜೆಪಿ (BJP) ನಡುವೆ ಸ್ಥಾನ ಹೊಂದಾಣಿಕೆಯಾಗಿತ್ತು. ಆದರೂ ಈ ಕ್ಷೇತ್ರದಲ್ಲಿ ಜೆಡಿಯುನಿಂದ ಎ.ಆರ್. ಕೃಷ್ಣಮೂರ್ತಿ, ಬಿಜೆಪಿಯಿಂದ ಧ್ರುವನಾರಾಯಣ ಅಭ್ಯರ್ಥಿಗಳಾಗಿದ್ದರು. ಕೃಷ್ಣಮೂರ್ತಿ ಅವರು 33,977 ಮತಗಳನ್ನು ಪಡೆದು, 28,071 ಮತಗಳನ್ನು ಪಡೆದ ಧ್ರುವನಾರಾಯಣ ಅವರನ್ನು ಸೋಲಿಸಿದರು. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

    ಧ್ರುವನಾರಾಯಣ (DhruvaNarayan) ಮೂಲತಃ ಕಾಂಗ್ರೆಸ್ಸಿಗರು. ರಾಜ್ಯ ಹಾಗೂ ಕೇಂದ್ರದಲ್ಲಿಯ ಇತಿಹಾಸ ಸಚಿವರಾಗಿದ್ದ ದಿವಂಗತ ಎಂ. ರಾಜಶೇಖರಮೂರ್ತಿ ಅವರ ಕಟ್ಟಾ ಬೆಂಬಲಿಗರು, ಹೀಗಾಗಿ ಅವರು ಮೂರ್ತಿ ಅವರೊಂದಿಗೆ ಬಿಜೆಪಿಗೆ ಹೋಗಿದ್ದರು. 2004ರ ಚುನಾವಣೆ ವೇಳೆಗೆ ಧ್ರುವನಾರಾಯಣ ಕಾಂಗ್ರೆಸ್ಸಿಗೆ ಮರಳಿದ್ದರು. ಆ ಚುನಾವಣೆಯಲ್ಲಿ ಅವರು ಸಂತೇಮರಹಳ್ಳಿಯಿಂದ ಕಾಂಗ್ರೆಸ್ ಅಭ್ಯರ್ಥಿ. ಎ.ಆರ್. ಕೃಷ್ಣಮೂರ್ತಿ ಜೆಡಿಎಸ್ (JDS) ಅಭ್ಯರ್ಥಿ. ಮತದಾನಕ್ಕೆ ಎಲೆಕ್ಟ್ರಾನಿಕ್ ಮತಯಂತ್ರ ಬಳಕೆಯಾಗಿತ್ತು. ಮತ ಎಣಿಕೆ ನಡೆದಾಗ ಧ್ರುವನಾರಾಯಣ ಅವರಿಗೆ 19,752 ಮತ್ತು ಕೃಷ್ಣಮೂರ್ತಿ ಅವರಿಗೆ 19,751 ಮತಗಳು ಬಂದವು. ಇದನ್ನೂ ಓದಿ: ಒಂದು ಕಾಲದಲ್ಲಿ ನಿವೃತ್ತರ ಸ್ವರ್ಗ – ಈಗ ನಿವೃತ್ತರಿಗೇ ಇಲ್ಲ ಅಧಿಕಾರ!

    ಮರು ಎಣಿಕೆ ಮಾಡಿದರೂ ಅಷ್ಟೇ. ಕೇವಲ ಒಂದೇ ಒಂದು ಮತದಿಂದ ಧ್ರುವನಾರಾಯಣ ಗೆದ್ದರು. ಕೃಷ್ಣಮೂರ್ತಿ ಸೋತರು. ಒಂದೇ ಒಂದು ಮತದಿಂದ ಗೆದ್ದ ಧೃವನಾರಾಯಣ ಎರಡು ಬಾರಿ ಶಾಸಕರು ಎರಡು ಬಾರಿ ಸಂಸದರು ಆಗಿದ್ದರು. ಆದರೆ ಒಂದು ಮತದಿಂದ ಸೋತಿದ್ದ ಎ.ಆರ್. ಕೃಷ್ಣಮೂರ್ತಿ ರಾಜಕೀಯವಾಗಿ ಮೇಲೆ ಏಳುವುದಕ್ಕೆ ಆಗದಷ್ಟು ಸಾಲು ಸಾಲು ಸೋಲು ಕಂಡರು. ಇದನ್ನೂ ಓದಿ: 12 ಚುನಾವಣೆಗಳಲ್ಲಿ ಒಂದೇ ಕುಟುಂಬದವರ ಆಯ್ಕೆ – ಎನ್.ಆರ್‌. ಕ್ಷೇತ್ರದಲ್ಲಿ ಸೇಠ್ ಫ್ಯಾಮಿಲಿ ಅಧಿಪತ್ಯ!

  • ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ (Dhruva Narayan) ಅವರು ಶನಿವಾರ ಮೃತಪಟ್ಟಿದ್ದಾರೆ.

    ಧ್ರುವ ನಾರಾಯಣ್‌ (61) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ (Mysuru) ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

    1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು. ಇದನ್ನೂ ಓದಿ: ಡಿಸ್ಕೌಂಟ್ ಸಮಯ ವಿಸ್ತರಣೆಯಾದ್ರೂ, ಟ್ರಾಫಿಕ್ ಫೈನ್ ಕಟ್ಟೋಕೆ ಆಸಕ್ತಿ ತೋರದ ವಾಹನ ಸವಾರರು

    ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಆದರೆ ಸೋಲಿನ ಬಳಿಕವೂ ಪಕ್ಷದಲ್ಲಿ ಹಾಗೂ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿದ್ದರು.

    ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಪಡೆದಿದ್ದರು. ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದರು. ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಇದನ್ನೂ ಓದಿ: ವೋಟಿಗಾಗಿ ಫ್ರೀ ಸ್ಕೀಂಗಳ ಆಮಿಷ- ಉಚಿತ ಸೈಟ್ ನೀಡಲು ಮುಂದಾದ ಬಿಜೆಪಿ ಟಿಕೆಟ್ ಆಕಾಂಕ್ಷಿ

  • ಸಿದ್ದುಗೆ ಡಬಲ್ ಟೆನ್ಷನ್ – ಪರಮಾಪ್ತ ಮಹದೇವಪ್ಪಗೆ ಸಿಗುತ್ತಾ ಟಿಕೆಟ್?

    ಸಿದ್ದುಗೆ ಡಬಲ್ ಟೆನ್ಷನ್ – ಪರಮಾಪ್ತ ಮಹದೇವಪ್ಪಗೆ ಸಿಗುತ್ತಾ ಟಿಕೆಟ್?

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ಒಂದು ಕಡೆ ತಾವು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬ ಗೊಂದಲದ ಟೆನ್ಷನ್. ಮತ್ತೊಂದು ಕಡೆ ತಮ್ಮ ಪರಮಾಪ್ತನ ಕುಟುಂಬಕ್ಕೆ ಎರಡು ಟಿಕೆಟ್ ಕೊಡಿಸಲೇ ಬೇಕಾದ ಟೆನ್ಷನ್. ಈ ಎರಡು ಟೆನ್ಷನ್‌ಗಳ ನಡುವೆ ಸಿದ್ದರಾಮಯ್ಯ ಒದ್ದಾಡುತ್ತಿದ್ದಾರೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ (HC Mahadevappa) ಪರಮಾಪ್ತ ಸ್ನೇಹಿತರು. ಎರಡು ದೇಹ ಒಂದೇ ಮನಸ್ಸು ಎಂಬ ರೀತಿ ಇರುವ ಜೋಡಿ ಇದು. ಈಗ ಡಾ.ಎಚ್.ಸಿ. ಮಹಾದೇವಪ್ಪ ಮತ್ತು ಅವರ ಮಗ ಸುನೀಲ್ ಬೋಸ್ ಇಬ್ಬರು ವಿಧಾನಸಭಾ ಚುನಾವಣೆಯ (Assembly election 2022) ಅಖಾಡಕ್ಕೆ ಇಳಿಯುವ ತಯಾರಿಯಲ್ಲಿದ್ದಾರೆ. ಡಾ.ಮಹದೇವಪ್ಪ ತಾವು ಸ್ಪರ್ಧಿಸುತ್ತಿದ್ದ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮಗನನ್ನು ಕಣಕ್ಕೆ ಇಳಿಸೋದು ತಾವು ಇದೇ ಕ್ಷೇತ್ರದ ಪಕ್ಕದ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ಲಾನ್ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆಯಾ ಕ್ಷೇತ್ರಗಳಲ್ಲಿ ತಂದೆ – ಮಗ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ – ಮೂವರು ಸಾವು, ಇಬ್ಬರಿಗೆ ಗಾಯ

    ಈ ನಡುವೆ ಲೋಕಸಭಾ ಚುನಾವಣೆಯಲ್ಲಿ (MP Election) ಸೋತ ಬಳಿಕ ಕೆಪಿಸಿಸಿ (KPCC)  ಕಾರ್ಯಾಧ್ಯಕ್ಷ ಧ್ರುವ ನಾರಾಯಣ (R Dhruvanarayana) ರಾಜ್ಯ ರಾಜಕೀಯಕ್ಕೆ ಮರು ಪ್ರವೇಶಿಸಲು ನಿರ್ಧರಿಸಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಓಡಾಟ ಶುರು ಮಾಡಿಕೊಂಡಿದ್ದಾರೆ. ಧ್ರುವ ನಾರಾಯಣ ಅವರು ಓಡಾಟ ಶುರು ಮಾಡಿಕೊಂಡ ಮೇಲೆಯೇ ಸಿದ್ದರಾಮಯ್ಯಗೆ ಸ್ನೇಹಿತನ ಟಿಕೆಟ್ ವಿಚಾರದಲ್ಲಿ ಟೆನ್ಷನ್ ಹೆಚ್ಚಾಗಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವು

    ಧೃವನಾರಾಯಣ್ ಹೇಳಿ ಕೇಳಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷರೂ ಆಗಿದ್ದಾರೆ. ಕಾರಣ ಅವರನ್ನು ಟಿಕೆಟ್ ರೇಸ್‌ನಿಂದ ಹಿಂದೆ ಸರಿಸೋದು ಸುಲಭವಲ್ಲ. ನಂಜನಗೂಡು ಟಿಕೆಟ್ ವಿಚಾರದಲ್ಲಿ ಸಿದ್ದರಾಮಯ್ಯಗೆ ತಲೆ ಬೀಸಿ ಶುರು ಮಾಡಿಸಿದೆ. ಸಿದ್ದರಾಮಯ್ಯ ಅವರೇ ಇನ್ನೂ ತಾವು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯಬೇಕು ಎಂದು ನಿರ್ಧರಿಸಲಾಗದೇ ಗೊಂದಲದಲ್ಲಿ ಮುಳುಗಿರುವಾಗ ಇದರ ಜೊತೆಗೆ ಪರಮಾಪ್ತ ಸ್ನೇಹಿತನ ರಾಜಕೀಯ (Politics) ಭವಿಷ್ಯವೂ ಅವರನ್ನು ಚಿಂತೆಗೆ ಈಡು ಮಾಡಿದೆ. ಪರಮಾಪ್ತ ಸ್ನೇಹಿತನಿಗೂ ಟಿಕೆಟ್ ಕೊಡಿಸದೇ ಹೋದರೆ ಹೇಗೆ? ಎಂಬುದು ಸಿದ್ದರಾಮಯ್ಯರನ್ನ ಕಾಡುತ್ತಿರುವ ಪ್ರಶ್ನೆಯಾಗಿದೆ.

    ಮೈಸೂರು (Mysuru) ಜಿಲ್ಲೆಯ 11 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪಾಲಿಗೆ ಟಿಕೆಟ್ ಹಂಚುವ ವಿಚಾರದಲ್ಲಿ ಹೆಚ್ಚು ಒತ್ತಡ ಇರೋದು ನಂಜನಗೂಡು ಕ್ಷೇತ್ರದ್ದು ಮಾತ್ರ. ಉಳಿದ ಕ್ಷೇತ್ರಗಳ ಟಿಕೆಟ್ ಹಂಚಿಕೆ ಸಿದ್ದರಾಮಯ್ಯರಂತಹ ರಾಜಕಾರಣಿಗೆ ನೀರು ಕುಡಿದಷ್ಟೆ ಸುಲಭ. ಆದರೆ ನಂಜನಗೂಡು ಕ್ಷೇತ್ರದ ಟಿಕೆಟ್ ವಿಚಾರ ಮಾತ್ರ ಸಲೀಸಾಗಿ ಇಲ್ಲ.

    ಡಾ.ಎಚ್.ಸಿ. ಮಹದೇವಪ್ಪ ತಮಗೆ ನಂಜನಗೂಡು ಟಿಕೆಟ್ ನಿಶ್ಚಿತ ಎಂಬಂತೆ ಬಹಳ ಆತ್ಮವಿಶ್ವಾಸದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಿ ಚುನಾವಣಾ ತಯಾರಿಯಲ್ಲಿ ಮುಳುಗಿದ್ದಾರೆ. ಧೃವನಾರಾಯಣ ಕೂಡ ಪಕ್ಷದ ದೊಡ್ಡ ಜವಾಬ್ದಾರಿ ಹೊತ್ತಿರೋ ಕಾರಣ ತಮಗೇ ಟಿಕೆಟ್ ಸಿಗಬಹುದು ಎಂದು ನಂಜನಗೂಡಿನ ಸಂಘಟನೆ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಹೀಗಾಗಿ ನಂಜನಗೂಡು ಕಾಂಗ್ರೆಸ್ ಕಾರ್ಯಕರ್ತರಿಗೆ ತಾವು ಯಾರ ಬೆನ್ನಿಗೆ ನಿಲ್ಲಬೇಕು ಎಂಬ ಗೊಂದಲವೂ ಕಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದೇ ನಡೆದಿದೆ: ಧ್ರುವ ನಾರಾಯಣ

    ಸಿದ್ದರಾಮಯ್ಯ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದೇ ನಡೆದಿದೆ: ಧ್ರುವ ನಾರಾಯಣ

    – ಕಾಂಗ್ರೆಸ್‍ಗೆ ಅಭಿವೃದ್ಧಿಯೇ ಮಾನದಂಡ

    ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಒಂದು ಕಪ್ಪು ಚುಕ್ಕೆ ಕೂಡ ಇಲ್ಲದೇ ನಡೆದಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಧ್ರುವ ನಾರಾಯಣ ಹೇಳಿದರು.

    ಗೃಹಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರಿಗೆ ಅಭಿವೃದ್ಧಿಯೇ ಮಾನದಂಡ. ಸಿದ್ದರಾಮಯ್ಯ ಅವರ ಸರ್ಕಾರ ಒಂದು ಕಪ್ಪು ಚುಕ್ಕೆ ಕೂಡಾ ಇಲ್ಲದೇ ನಡೆದಿದೆ. ಬಿಜೆಪಿಗೆ ಮೊದಲ ಸಲ ಸರ್ಕಾರ ಬಂದಾಗ 3 ಸಿಎಂ ಬದಲಾವಣೆಯಾದರು. 5 ಜನ ಭ್ರಷ್ಟಾಚಾರದಲ್ಲಿ ಸಿಲುಕಿದ್ದರು. ಈಗ ಬಂದಿರುವ ಸರ್ಕಾರದಲ್ಲಿ ಅವರ ಶಾಸಕರೇ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಂತರ ನಾವು ಹೆಚ್ಚು ಗೆದ್ದಿದ್ದು. ದಳ ಹಾಗೂ ಕಾಂಗ್ರೆಸ್ ಒಂದಾದರೆ ಮಾತ್ರ ಪಾಲಿಕೆ ಚುಕ್ಕಾಣಿ ಹಿಡಿಯಬಹುದಾಗಿತ್ತು. ಜೆಡಿಎಸ್ ನಮಗೆ ಅಧಿಕಾರ ಕೂಡಬೇಕಿತ್ತು. ಆದರೆ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಜಿ.ಟಿ.ದೇವೆಗೌಡರು ಕಾಂಗ್ರೆಸ್‍ಗೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಬರುವುದು ವರಿಷ್ಟರಿಗೆ ಬಿಟ್ಟ ವಿಚಾರ. ಈಗಾಗಲೇ ಜಿ.ಟಿ.ದೇವೇಗೌಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದಾರೆ ಎಂದು ತಿಳಿಸಿದರು.