Tag: ಧ್ರುವ ನಾರಾಯಣ್

  • ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ: ಧ್ರುವ ನಾರಾಯಣ್

    ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ: ಧ್ರುವ ನಾರಾಯಣ್

    ಮೈಸೂರು: ತಾಲಿಬಾನ್ ಮತ್ತು ಆರ್‌ಎಸ್‌ಎಸ್‌ ಸಂಘಟನೆ ನಡುವೆ ಕೆಲವು ಹೋಲಿಕೆ ಇದೆ. ಹೀಗಾಗಿ ಆರ್‌ಎಸ್‌ಎಸ್‌ ಕೂಡಾ ತಾಲಿಬಾನ್ ಸಂಘಟನೆಯಂತೆ’ ಎಂದು ಚಾಮರಾಜ ನಗರ ಮಾಜಿ ಸಂಸದ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷ ಧ್ರುವ ನಾರಾಯಣ್ ಹೇಳಿಕೆ ನೀಡಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, `ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ. ಧರ್ಮ ಇಟ್ಕೊಂಡು ಆರ್‌ಎಸ್‌ಎಸ್‌, ತಾಲಿಬಾನ್ ಕೆಲಸ ಮಾಡುತ್ತಿದೆ. ನನ್ನ ವಿರುದ್ಧ ಆರ್‌ಎಸ್‌ಎಸ್‌, ಬಿಜೆಪಿಯವರು ಏನೇ ಹೋರಾಟ ಮಾಡಿದರೂ ನನ್ನ ಹೇಳಿಕೆಗೆ ನಾನು ಬದ್ಧ’ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ನಾನು ಖಾಯಂ ಮುಖ್ಯಮಂತ್ರಿ, ಯಾರು ಏನೇ ಅಂದ್ರು ನನ್ನ ಪದವಿಗೆ ಧಕ್ಕೆ ಆಗಲ್ಲ-ಮುಖ್ಯಮಂತ್ರಿ ಚಂದ್ರು

    ಬೆಂಗಳೂರು-ಮೈಸೂರು ಹೈವೆ ಶ್ರೇಯಸ್ಸು ಎಲ್ಲಾ ಜನಪ್ರತಿನಿಧಿಗಳೂ ಸೇರುತ್ತದೆ. 2013ರಲ್ಲೇ ಅದರ ಪ್ರಾಜೆಕ್ಟ್ ರೆಡಿಯಾಗಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಸಿದ್ದರಾಮಯ್ಯ ಹಾಗೂ ಮಹಾದೇವಪ್ಪ ಸೇರಿ ಆಸ್ಕರ್ ಫರ್ನಾಂಡಿಸ್ ಜೊತೆ ಪ್ರಯತ್ನ ಮಾಡಿದ್ದರು. ವಿಶ್ವನಾಥ್ ಅವರ ಜೊತೆಗೂಡಿ ನಾನೂ ಕೂಡಾ ಆ ಪ್ರಯತ್ನದಲ್ಲಿ ಇದ್ದೆ. ನಂತರ ಎನ್‍ಡಿಎ ಸರ್ಕಾರ ಬಂತು. ಪ್ರತಾಪ್ ಸಿಂಹ ಕೂಡಾ ಅದರ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ಈ ಹೈವೆಯ ಶ್ರೇಯಸ್ಸು ಎಲ್ಲಾ ಜನಪ್ರತಿನಿಧಿಗಳಿಗೂ ಸೇರುತ್ತದೆ ಎಂದರು. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ಆರ್‌ಎಸ್‌ಎಸ್‌-ತಾಲಿಬಾನ್ ಸಂಘಟನೆಯಂತೆ ಎಂದಿದ್ದ ಧ್ರುವ ನಾರಾಯಣ್ ಹೇಳಿಕೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು. ಮೈಸೂರಿನಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

  • ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಚಾಮರಾಜನಗರ: ಜಮೀರ್ ಮನೆ ಮೇಲೆ ನಡೆದಿರುವ ಇಡಿ ದಾಳಿಯನ್ನು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ದಾಳಿಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದ್ದಾರೆ.

    ಚಾಮರಾಜನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಮೀರ್ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿರೋಧ ಪಕ್ಷದ ನಾಯಕರು, ಮುಖಂಡರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಡಿ, ಐಟಿ ದಾಳಿ ಮಾಡಬೇಡಿ ಅಂತಾ ಹೇಳಲ್ಲ. ಆದರೆ ವಿರೋಧ ಪಕ್ಷದ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೀತಿದೆ. ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಟಾಲಿನ್ ಸೇರಿದಂತೆ ಹಲವು ಮುಖಂಡರ ಮೇಲೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೇಲೂ ದಾಳಿ ನಡೆದಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೇಲೂ ಕೂಡ ಇಡಿ, ಸಿಬಿಐ, ಐಟಿ ಸೇರಿದಂತೆ ದಾಳಿ ನಡೆದಿದೆ. ಆದರೆ ಬಿಜೆಪಿ ನಾಯಕರ ಮನೆ ಮೇಲೆ ಯಾವುದೇ ದಾಳಿ ನಡೆದಿಲ್ಲ. ಇದು ನೂರಕ್ಕೆ ನೂರರಷ್ಟು ಇದು ರಾಜಕೀಯ ಪ್ರೇರಿತ ದಾಳಿ. ಯತ್ನಾಳ್, ವಿಶ್ವನಾಥ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಓರಿಸಿಯಸ್ ಬ್ಯಾಂಕ್ ನಲ್ಲಿ ಹಣವಿಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದರು. ಆ ವೇಳೆ ಯಾಕೆ ಅವರ ಮೇಲೆ ಐಟಿ, ಇಡಿ ದಾಳಿ ಮಾಡಿಲ್ಲ ಅಂತಾ ಕಿಡಿಕಾರಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

  • ನಮ್ಮ ಹುಲಿ ಯಾವತ್ತು ಹುಲಿಯೇ: ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಧ್ರುವ ನಾರಾಯಣ್

    ನಮ್ಮ ಹುಲಿ ಯಾವತ್ತು ಹುಲಿಯೇ: ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಧ್ರುವ ನಾರಾಯಣ್

    ಚಾಮರಾಜನಗರ: ನಮ್ಮ ಹುಲಿ ಯಾವತ್ತು ಹುಲಿಯೇ, ಸಿದ್ದರಾಮಯ್ಯ ಎಂದಿಗೂ ಹುಲಿಯೇ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತಿರುಗೇಟು ನೀಡಿದ್ದಾರೆ.

    ಇಂದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೂ ಮೈಸೂರು ಇತಿಹಾಸದಲ್ಲಿಯೇ ಬಿಜೆಪಿಯವರು ಮೇಯರ್ ಆಗಿಲ್ಲ. ನಮ್ಮ ಹುಲಿ ಯಾವತ್ತು ಹುಲಿಯೇ. ಸಿದ್ದರಾಮಯ್ಯ ಎಂದಿಗೂ ಹುಲಿಯೇ. ಪ್ರತಾಪ್ ಸಿಂಹರವರದ್ದು ಹತಾಶೆ ಹೇಳಿಕೆ ಅಷ್ಟೇ ಎಂದು ಹೇಳಿದರು.

    ನನ್ನನ್ನು ಮೇಯರ್ ಚುನಾವಣಾ ವೀಕ್ಷಕರಾಗಿ ನೇಮಿಸಲು ಕಾರಣ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಸಿದ್ದರಾಮಯ್ಯ ಆದೇಶದಂತೆ ವೀಕ್ಷಕರಾಗಿ ಕೆಲಸ ಮಾಡಿದ್ದೇವೆ. ಘಟನಾವಳಿ ನಡೆದಿದ್ದು ಆಕಸ್ಮಿಕ. ಜೆಡಿಎಸ್ ಬೆಂಬಲಿಸಲು ಆ ಸಮಯ ಸಂದರ್ಭದಲ್ಲಿ ಕಾರ್ಪೊರೇಟರ್ ಕೈಗೊಂಡ ನಿರ್ಧಾರವಾಗಿದೆ. ಈಗಾಗಲೇ ಘಟನೆ ಕುರಿತಂತೆ ಸಿದ್ದರಾಮಯ್ಯನವರ ಜೊತೆ ಕೂಡ ನಾನು ಮಾತಾನಾಡಿದ್ದೇನೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ವರದಿ ಕೇಳಿದ್ದಾರೆ. ಸೋಮವಾರ ಮೇಯರ್ ಚುನಾವಣೆ ಘಟನಾವಳಿ ಕುರಿತು ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

    ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಒಡಕು ಮೂಡಿರುವ ವಿಚಾರವಾಗಿ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮದು ದೊಡ್ಡ ಕುಟುಂಬ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ. ಹಾಗೇನಾದರೂ ಇದ್ದಲ್ಲಿ ಇಂದು ಸಂಜೆ ಎರಡು ಬಣಗಳನ್ನು ಸೇರಿಸಿ ಒಂದು ಮಾಡುತ್ತೇವೆ ಭಿನ್ನಾಭಿಪ್ರಾಯ ಇದ್ದರೆ ಬಗ್ಗೆಹರಿಸುತ್ತೇನೆ. ಅಲ್ಲದೆ ಮೇಯರ್ ಚುನಾವಣೆ ಸಂಬಂಧ ಯಾರಿಗೂ ಕೂಡ ನೋಟಿಸ್ ಕೊಟ್ಟಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಿದ್ದು ತಪ್ಪು. ಪಕ್ಷದ ಆಂತರಿಕ ಸಮಸ್ಯೆ, ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳಬೇಕು ಎಂದರು.

    ಮೊದಲಿನಿಂದಲೂ ವಚನಭ್ರಷ್ಟತೆಗೆ ಹೆಸರಾದವರು, ಕೊಟ್ಟ ಮಾತಿಗೆ ಎಂದು ನಡೆದಿಲ್ಲ. ಪಾಲಿಕೆ ಚುನಾವಣೆ ಒಡಂಬಡಿಕೆಯಂತೆ ನಡೆದುಕೊಂಡಿಲ್ಲ. ಈ ಬಾರಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಸಿಗಬೇಕಿತ್ತು. ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡದಂತೆ ಸಿದ್ದರಾಮಯ್ಯನವರು ಎರಡು ಬಾರಿ ದೂರವಾಣಿ ಕರೆ ಮಾಡಿ ಕೂಡ ಹೇಳಿದ್ದರು. ಡಿಕೆಶಿ ಸಹ ಮೇಯರ್ ಸ್ಥಾನ ಉಳಿಸಿಕೊಳ್ಳುವಂತೆ ತಿಳಿಸಿದ್ದರು. ಹೀಗಾಗಿ ಚುನಾವಣೆ ವೇಳೆ 12 ಗಂಟೆಯವರೆಗೂ ಮಾಜಿ ಶಾಸಕ ವಾಸು, ಸೋಮಶೇಖರ್ ಹೀಗೆ ಎಲ್ಲರೂ ಒಟ್ಟಿಗೆ ಕುಳಿತಿದ್ದೇವು. ಆದರೆ ಚುನಾವಣೆ ಪ್ರಕ್ರಿಯೆಗೆ ಕಾರ್ಪೊರೇಟರ್ ಹೋದ ಬಳಿಕ ಅವರ ನಿರ್ಧಾರ ಬದಲಾಗಿದೆ. ಪಾಲಿಕೆಯಲ್ಲಿ ಏನಾಗಿದೆ ಎನ್ನುವುದರ ಬಗ್ಗೆ ಸವಿವರ ಪಡೆದು ಸೋಮವಾರ ಅಧ್ಯಕ್ಷರ ಕೈಗೆ ವರದಿ ಸಲ್ಲಿಸುತ್ತೇನೆ ಎಂದು ಹೇಳಿದರು.