Tag: ನಂದನ್ ನಿಲೇಕಣಿ

  • ಒಂದು ವರ್ಷದಲ್ಲಿ 170 ಕೋಟಿ ದಾನ ಮಾಡಿದ ಇನ್ಫೋಸಿಸ್‌ ಸಹ-ಸಂಸ್ಥಾಪಕರ ಪತ್ನಿ ರೋಹಿಣಿ ನಿಲೇಕಣಿ

    ಒಂದು ವರ್ಷದಲ್ಲಿ 170 ಕೋಟಿ ದಾನ ಮಾಡಿದ ಇನ್ಫೋಸಿಸ್‌ ಸಹ-ಸಂಸ್ಥಾಪಕರ ಪತ್ನಿ ರೋಹಿಣಿ ನಿಲೇಕಣಿ

    – ಟಾಪ್‌ 10 ದಾನಿಗಳಲ್ಲಿ ಸ್ಥಾನ ಪಡೆದ ಏಕೈಕ ಮಹಿಳೆ
    – ಪ್ರತಿ ದಿನ 46 ಲಕ್ಷ ರೂ. ದಾನ

    ನವದೆಹಲಿ: ಹುರೂನ್‌ ಇಂಡಿಯಾ (Hurun) ಸಂಸ್ಥೆಯು ದೇಶದ 119 ದಾನಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅಗ್ರ 10 ರಲ್ಲಿ ಸ್ಥಾನ ಪಡೆದ ಏಕೈಕ ಮಹಿಳೆ ಇನ್ಫೋಸಿಸ್‌ ಸಹ ಸಂಸ್ಥಾಪಕರಾದ ನಂದನ್‌ ನಿಲೇಕಣಿ (Nandan Nilekani) ಅವರ ಪತ್ನಿ ರೋಹಿಣಿ ನಿಲೇಕಣಿ (Rohini Nilekani) ಅವರಾಗಿದ್ದಾರೆ.

    ಭಾರತದ ಲೇಖಕಿ ರೋಹಿಣಿ ನಿಲೇಕಣಿ (64) ಅವರು ಒಂದು ವರ್ಷದ ಅವಧಿಯಲ್ಲಿ ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಗೆ ಬರೋಬ್ಬರಿ 170 ಕೋಟಿ ರೂ. ದಾನ ಮಾಡಿದ್ದಾರೆ. ಪ್ರತಿ ದಿನ 46 ಲಕ್ಷ ರೂ. ದಾನ ಮಾಡಿದ ಕೊಡುಗೈ ದಾನಿಯಾಗಿ ಗಮನ ಸೆಳೆದಿದ್ದಾರೆ. ಗಮನಾರ್ಹ ಅಂಶವೆಂದರೆ, ರೋಹಿಣಿ ಅವರ ಪತಿ ನಂದನ್‌ ನಿಲೇಕಣಿ ಅವರು ಅಗ್ರ 10 ಮಂದಿ ಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದ್ದಾರೆ.

    ಯಾರು ಈ ರೋಹಿಣಿ ನಿಲೇಕಣಿ?
    ದಾನಿ ರೋಹಿಣಿ ನಿಲೇಕಣಿ ಅವರು ಭಾರತೀಯ ಕಾದಂಬರಿಕಾರರಾಗಿದ್ದಾರೆ. ಅವರು ಲಾಭರಹಿತ ಶೈಕ್ಷಣಿಕ ವೇದಿಕೆ EkStep ಮತ್ತು ಮಕ್ಕಳ ಪುಸ್ತಕ ಕಂಪನಿ ಪ್ರಥಮ್ ಬುಕ್ಸ್ ಸಹ-ಸ್ಥಾಪಕಿಯೂ ಆಗಿದ್ದಾರೆ. ಶುದ್ಧ ನೀರು ಮತ್ತು ನೈರ್ಮಲ್ಯವನ್ನು ಉತ್ತೇಜಿಸುವ ರಾಷ್ಟ್ರೀಯ ಉಪಕ್ರಮಗಳಿಗೆ ಸಹಾಯ ಮಾಡಲು ಅರ್ಘ್ಯಮ್ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ.

    ರೋಹಿಣಿ ಅವರು ಬಾಂಬೆಯಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಇಂಜಿನಿಯರ್ ಆಗಿದ್ದರೆ, ತಾಯಿ ಗೃಹಿಣಿ. ಅವರು ಎಲ್ಫಿನ್‌ಸ್ಟೋನ್ ಕಾಲೇಜಿನಿಂದ ಫ್ರೆಂಚ್ ಸಾಹಿತ್ಯದಲ್ಲಿ ಪದವಿ ಪಡೆದರು. ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ 1980 ರಲ್ಲಿ ಬಾಂಬೆ ಮ್ಯಾಗಜೀನ್‌ನಲ್ಲಿ ವರದಿಗಾರರಾಗಿ ಕೆಲಸ ಮಾಡಿದರು. ನಂತರ ಬೆಂಗಳೂರಿನಲ್ಲಿ ಸಂಡೇ ಮ್ಯಾಗಜೀನ್‌ನಲ್ಲೂ ವೃತ್ತಿ ಜೀವನ ಆರಂಭಿಸಿದ್ದರು.

    ರೋಹಿಣಿ ಅವರು ಪುಸ್ತಕಗಳನ್ನು ಸಹ ಬರೆದಿದ್ದಾರೆ. ‘ಸ್ಟಿಲ್‌ಬಾರ್ನ್‌’ ಅವರು ಬರೆದ ಮೊದಲ ಪುಸ್ತಕ. ‘ಅನ್‌ಕಾಮನ್‌ ಗ್ರೌಂಡ್’‌, ‘ಹಂಗ್ರಿ ಲಿಟಲ್ ಸ್ಕೈ ಮಾನ್ಸ್ಟರ್’ ಪುಸ್ತಕಗಳನ್ನು ಬರೆದಿದ್ದಾರೆ.

    ಹುರೂನ್‌ ಇಂಡಿಯಾ ಬಿಡುಗಡೆ ಮಾಡಿದ ದಾನಿಗಳ ಪಟ್ಟಿಯಲ್ಲಿ ಹೆಚ್‌ಸಿಎಲ್‌ ಸಂಸ್ಥಾಪಕ ಶಿವ ನಡಾರ್‌ ಮೊದಲ ಸ್ಥಾನದಲ್ಲಿದ್ದಾರೆ. ಅವರು ವರ್ಷಕ್ಕೆ 2,042 ಕೋಟಿ ರೂ. ದಾನ ಮಾಡಿ ಮಹಾದಾನಿಯಾಗಿ ಹೊರಹೊಮ್ಮಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ

    ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ

    ನವದೆಹಲಿ: ಇನ್ಫೋಸಿಸ್ (Infosys) ಸಹ ಸಂಸ್ಥಾಪಕ ನಂದನ್ ನಿಲೇಕಣಿ (Nandan Nilekani) ಅವರು ತಾವು ಎಂಜಿನಿಯರಿಂಗ್ ಪದವಿ ಪಡೆದ ‘ಬಾಂಬೆ ಐಐಟಿ’ಗೆ (IIT Bombay) ಬರೋಬ್ಬರಿ 315 ಕೋಟಿ ರೂ. ದೇಣಿಗೆ ನೀಡಿದ್ದಾರೆ.

    ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಉತ್ತೇಜಿಸಲು, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಸಂಶೋಧನೆಗೆ ಸಹಾಯ ಮಾಡಲು ಹಾಗೂ ಬಾಂಬೆಯ ಐಐಟಿಯಲ್ಲಿ ಉತ್ತಮವಾದ ಟೆಕ್ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಈ ದೇಣಿಗೆಯ (Donation) ಮುಖ್ಯ ಉದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಮಾತ್ರವಲ್ಲದೇ ಇದು ಭಾರತದಲ್ಲಿ ಹಳೆ ವಿದ್ಯಾರ್ಥಿಯೊಬ್ಬರು ನೀಡಿರುವ ಅತಿ ದೊಡ್ಡ ದೇಣಿಗೆಗಳಲ್ಲಿ ಒಂದು ಎನಿಸಿಕೊಂಡಿದೆ.

    ಈ ಬಗ್ಗೆ ತಿಳಿಸಿರುವ ನಿಲೇಕಣಿ, ಬಾಂಬೆ ಐಐಟಿ ನನ್ನ ಜೀವನದ ಮೂಲಾಧಾರವಾಗಿದೆ. ನನ್ನ ಭವಿಷ್ಯವನ್ನು ಉತ್ತಮವಾಗಿ ರೂಪಿಸಿ, ಈ ಪ್ರಯಾಣಕ್ಕೆ ಅಡಿಪಾಯ ಹಾಕಿದೆ. ಈ ಗೌರವಾನ್ವಿತ ಸಂಸ್ಥೆಯೊಂದಿಗೆ ನನ್ನ 50 ವರ್ಷಗಳ ಒಡನಾಟ ಈಗ ಪೂರೈಸಿದ್ದು, ಅದಕ್ಕೆ ಭವಿಷ್ಯ ಹಾಗೂ ಕೊಡುಗೆಯನ್ನು ನೀಡಲು ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಟ್ರಕ್‌ಗಳಲ್ಲಿ ಹವಾನಿಯಂತ್ರಿತ ಡ್ರೈವರ್‌ ಕ್ಯಾಬಿನ್‌ಗಳು ಕಡ್ಡಾಯ: ನಿತಿನ್‌ ಗಡ್ಕರಿ

    ಈ ದೇಣಿಗೆ ಕೇವಲ ಹಣಕಾಸಿನ ಕೊಡುಗೆಗಿಂತಲೂ ಹೆಚ್ಚಿನದ್ದಾಗಿದೆ. ಇದು ನನಗೆ ಹೆಚ್ಚಿನದನ್ನು ನೀಡಿರುವ ಸ್ಥಳಕ್ಕೆ ಗೌರವವಾಗಿದ್ದು, ನಾಳೆ ನಮ್ಮ ಜಗತ್ತನ್ನು ರೂಪಿಸುವ ವಿದ್ಯಾರ್ಥಿಗಳಿಗೆ ಬದ್ಧತೆಯಾಗಿದೆ ಎಂದು ಅವರು ಹೇಳಿದ್ದಾರೆ.

    ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿಯಾಗಿರುವ ನಿಲೇಕಣಿ 1973ರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಂಸ್ಥೆಯೊಂದಿಗಿನ ಒಡನಾಟಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಅವರು ಈಗ 315 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಹಿಂದೆ ಅವರು 85 ಕೋಟಿ ರೂ. ದೇಣಿಗೆ ನೀಡಿದ್ದರು. ಹೀಗಾಗಿ ಅವರು ಸಂಸ್ಥೆಗೆ ಒಟ್ಟು 400 ಕೋಟಿ ರೂ. ದೇಣಿಗೆ ನೀಡಿದಂತಾಗುತ್ತದೆ. ಇದನ್ನೂ ಓದಿ: ಜಲಾಂತರ್ಗಾಮಿ ನಾಪತ್ತೆ – ಟೈಟಾನಿಕ್ ನೋಡಲು ತೆರಳಿದ್ದ ಪ್ರವಾಸಿಗರಲ್ಲಿದ್ರು ಪಾಕಿಸ್ತಾನದ ಶ್ರೀಮಂತ

  • ನಿಲೇಕಣಿ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದ ಅನಂತ್ ಕುಮಾರ್- ಕೊನೆಯ ಹೈ ವೋಲ್ಟೇಜ್ ಚುನಾವಣಾ ಕಣ ಹೀಗಿತ್ತು

    ನಿಲೇಕಣಿ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದ ಅನಂತ್ ಕುಮಾರ್- ಕೊನೆಯ ಹೈ ವೋಲ್ಟೇಜ್ ಚುನಾವಣಾ ಕಣ ಹೀಗಿತ್ತು

    ಬೆಂಗಳೂರು: 2014ರ ಚುನಾವಣೆಯಲ್ಲಿ ದೇಶದಲ್ಲೇ ಭಾರೀ ಹೈವೋಲ್ಟೇಜ್ ಕದನ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಡೆದಿತ್ತು. ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಜೊತೆ ನಡೆದ ಸ್ಪರ್ಧೆಯಲ್ಲಿ ಅಂತಿಮವಾಗಿ ಅನಂತ್ ಕುಮಾರ್ ಜಯಗಳಿಸಿದರು.

    1996ರಿಂದ 2009ರವರೆಗೆ ಸತತ 5 ಬಾರಿ ಆಯ್ಕೆಯಾಗಿದ್ದ ಅನಂತ್ ಕುಮಾರ್ ಅವರನ್ನು ಈ ಬಾರಿ ಹೇಗಾದರೂ ಮಾಡಿ ಸೋಲಿಸಲೇ ಬೇಕು ಎನ್ನುವ ಹಠಕ್ಕೆ ಕಾಂಗ್ರೆಸ್ ಬಿದ್ದಿತ್ತು. 2009ರಲ್ಲಿ ಕೃಷ್ಣ ಭೈರೇಗೌಡ 37,612 ಮತಗಳ ಅಂತರದಿಂದ ಸೋತಿದ್ದರು. 2013ರಲ್ಲಿ ಕೃಷ್ಣ ಭೈರೇಗೌಡ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಯಾಗಿದ್ದ ಹಿನ್ನೆಲೆಯಲ್ಲಿ 2014ರಲ್ಲಿ ಹೊಸ ಮುಖವನ್ನು ಪರಿಚಯ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ಆಗ ಕಾಂಗ್ರೆಸ್ ನಾಯಕರಿಗೆ ಕಂಡಿದ್ದೆ ನಂದನ್ ನಿಲೇಕಣಿ.

    ಆಧಾರ್ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನಂದನ್ ನಿಲೇಕಣಿ ಅವರನ್ನು ಕಣಕ್ಕೆ ಇಳಿಸಿದರೆ ಅನಂತ್ ಕುಮಾರ್ ಅವರಿಗೆ ಸ್ಪರ್ಧೆ ನೀಡಬಹುದು ಎನ್ನುವ ಆಲೋಚನೆಯನ್ನು ಕಾಂಗ್ರೆಸ್ ಹಾಕಿತ್ತು. ಯಾವಾಗ ನಿಲೇಕಣಿಯಿಂದ ಸಕ್ರೀಯ ರಾಜಕಾರಣಕ್ಕೆ ಬರಲು ಒಪ್ಪಿಗೆ ಸಿಕ್ಕಿತ್ತೋ ಕಾಂಗ್ರೆಸ್ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

    ಅನಂತ್ ಕುಮಾರ್ ವಿರುದ್ಧವಾಗಿ ನಿಲೇಕಣಿ ನಿಲ್ಲುತ್ತಾರೆ ಎನ್ನುವ ವಿಚಾರ ಅಧಿಕೃತವಾಗುತ್ತಿದ್ದಂತೆ ರಾಷ್ಟ್ರೀಯ ಮಾಧ್ಯಮಗಳು ಸಹ ಬೆಂಗಳೂರು ದಕ್ಷಿಣ ಕ್ಷೇತ್ರದತ್ತ ಗಮನಹರಿಸತೊಡಗಿತು. ಅನಂತ್ ಕುಮಾರ್ ರಾಜಕೀಯ ಕ್ಷೇತ್ರದ ಅನುಭವ, ಕೇಂದ್ರದ ಮಾಜಿ ಮಂತ್ರಿಯಾಗಿದ್ದರೆ ನಿಲೇಕಣಿ ಇನ್ಫೋಸಿಸ್, ಆಧಾರ್ ವಿಚಾರದಿಂದಾಗಿ ಮೊದಲೇ ಜನಪ್ರಿಯರಾಗಿದ್ದರು. ನಾಮಪತ್ರ ಸಲ್ಲಿಕೆಯ ವೇಳೆ ತನ್ನ ಬಳಿ 7,700 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಘೋಷಿಸಿಕೊಂಡಿದ್ದರಿಂದ ಸ್ಪರ್ಧೆಯ ಜೊತೆಗೆ ಇಬ್ಬರ ಸುದ್ದಿಯೂ ಹೆಚ್ಚಾಯಿತು.

    ಅನಂತ್ ಕುಮಾರ್ ಅವರನ್ನು ಈ ಬಾರಿ ಸೋಲಿಸಿ, ನಿಲೇಕಣಿ ಗೆಲ್ಲಲೇಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಸೂಚಿಸಿದ್ದರಂತೆ. ಬೆಂಗಳೂರು ದಕ್ಷಿಣ ಕ್ಷೇತ್ರ ನಗರದಲ್ಲೇ ಇರುವುದರ ಜೊತೆಗೆ ಸಾಕ್ಷರತಾ ಮತದಾರರ ಸಂಖ್ಯೆಯೂ ಹೆಚ್ಚು ಇರುವ ಕಾರಣದಿಂದಲೂ ಈ ಕ್ಷೇತ್ರದಲ್ಲಿ ಭಾರೀ ಸ್ಪರ್ಧೆ ನಡೆಯಲಿದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಅಂತಿಮವಾಗಿ ಅನಂತ್ ಕುಮಾರ್ 2.28 ಲಕ್ಷ ಮತಗಳ ಅಂತರದಿಂದ ವಿಜಯಿಯಾದರು. ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರೆ, ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನೋಟ್ ಬ್ಯಾನ್ ನಂತ್ರ ಡಿಜಿಟಲ್ ವಹಿವಾಟು ಎಷ್ಟು ಹೆಚ್ಚಾಗಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

    ನೋಟ್ ಬ್ಯಾನ್ ನಂತ್ರ ಡಿಜಿಟಲ್ ವಹಿವಾಟು ಎಷ್ಟು ಹೆಚ್ಚಾಗಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

    ನವದೆಹಲಿ: 500 ಮತ್ತು 1 ಸಾವಿರ ರೂ. ನೋಟು ಬ್ಯಾನ್ ಆದ ಬಳಿಕ ಭಾರತದಲ್ಲಿ ಡಿಜಿಟಲ್ ವಹಿವಾಟು ಎಷ್ಟಾಗಿದೆ? ಪ್ರಧಾನಿ ನರೇಂದ್ರ ಮೋದಿಯ ನೋಟ್‍ಬ್ಯಾನ್‍ಗೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನ ಕೇಳುತ್ತಿರುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ(ಎನ್‍ಪಿಸಿಐ) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ನೋಟ್ ಬ್ಯಾನ್ ಬಳಿಕ ಯುಪಿಐ ಮೂಲಕ ನಡೆಸುವ ವಹಿವಾಟು 77 ಪಟ್ಟು ಏರಿಕೆಯಾಗಿದೆ.

    ನೋಟ್ ಬ್ಯಾನ್ ಮುನ್ನ ಅಕ್ಟೋಬರ್ ಅವಧಿಯಲ್ಲಿ ಯುಪಿಐ ಮೂಲಕ 1 ಲಕ್ಷ ವಹಿವಾಟು ನಡೆದಿದ್ದರೆ ಈಗ 7.6 ಕೋಟಿ ವಹಿವಾಟು ನಡೆದಿದೆ. ಸೆಪ್ಟೆಂಬರ್ 2017ರ ಅವಧಿಯಲ್ಲಿ 3 ಕೋಟಿ ವಹಿವಾಟು ನಡೆದಿದ್ದರೆ, ಅಕ್ಟೋಬರ್ ನಲ್ಲಿ ಒಂದೇ ಬಾರಿಗೆ  7.6 ಕೋಟಿಗೆ ಜಿಗಿತ ಕಂಡಿದೆ.

    ಆಗಸ್ಟ್ ನಲ್ಲಿ ಒಟ್ಟು 65,149 ಕೋಟಿ ರೂ. ವಹಿವಾಟು ನಡೆದಿದ್ದರೆ, ಸೆಪ್ಟೆಂಬರ್ ನಲ್ಲಿ 71,759 ಕೋಟಿ ರೂ. ವಹಿವಾಟು ನಡೆದಿದೆ. ಆದರೆ ಅಕ್ಟೋಬರ್ ನಲ್ಲಿ 75,041 ಕೋಟಿ ರೂ. ವಹಿವಾಟು ನಡೆದಿದೆ ಎಂದು ಎನ್‍ಪಿಸಿಐ ಹೇಳಿದೆ.

    ಇನ್ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಟ್ವೀಟ್ ಮಾಡಿ ಯುಪಿಐ ಸಾಧನೆಯನ್ನು ಹೊಗಳಿದ್ದು, ‘ವಾಟ್ ಎ ಸ್ಟೋರಿ’ ಎಂದು ಬರೆದು ಹೊಗಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್‍ನಲ್ಲಿ ಭಾರತ್ ಇಂಟರ್‍ಫೇಸ್ ಫಾರ್ ಮನಿ(ಭೀಮ್) ಅಪ್ಲಿಕೇಶನ್ ಬಿಡುಗಡೆ ಮಾಡಿದ್ದರು. ಭಾರತ ಸರ್ಕಾರದ ನ್ಯಾಶನಲ್ ಪೇಮೆಂಟ್ಸ್ ಕಾರ್ಪೇರೇಷನ್ ‘ಯೂನಿಫೈಡ್ ಪೇಮೆಂಟ್ಸ್ ಇಂಟರ್‍ಫೇಸ್(ಯುಪಿಐ) ಎಂಬ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆಗೆ ಸುಲಭವಾಗಿ ಹಣವನ್ನು ಪಾವತಿಸಬಹುದಾಗಿದೆ. ಪೇಟಿಎಂ, ಜಿಯೋ ಮನಿ, ಪೋನ್‍ಪೇ ಇತ್ಯಾದಿ ಅಪ್‍ಗಳು ಯುಪಿಐ ಮೂಲಕವೇ ಕಾರ್ಯನಿರ್ವಹಿಸುತ್ತದೆ.