Tag: ನಂದಮೂರಿ ಬಾಲಕೃಷ್ಣ

  • ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ

    ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ

    ‘ಗಾಡ್ ಆಫ್ ಮಾಸ್’ ನಂದಮೂರಿ ಬಾಲಕೃಷ್ಣ (Nandamuri Balakrishna) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲಯ್ಯ ಜನ್ಮದಿನಕ್ಕೆ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಅಖಂಡ-2’ (Akhanda-2) ಟೀಸರ್ ಬಿಡುಗಡೆ ಮಾಡಲಾಗಿದೆ. ನಂದಿ ಮುಖ ಇರುವ ತ್ರಿಶೂಲ ಹಿಡಿದು ಮಾಸ್ ಅವತಾರದಲ್ಲಿ ಬಾಲಯ್ಯ ಎಂಟ್ರಿ ಕೊಟ್ಟಿದ್ದಾರೆ.

    ಹಿಮದಿಂದ ಆವೃತವಾದ ಕೈಲಾಸಂ, ಭರ್ಜರಿ ಆಕ್ಷನ್ಸ್, ಎಸ್ ಥಮನ್ ಮ್ಯೂಸಿಕ್ ‘ಅಖಂಡ-2’ ಟೀಸರ್‌ನ ಹೈಲೆಟ್ಸ್ ಆಗಿದೆ. ಸಾಧು ಗೆಟಪ್‌ನಲ್ಲಿ ಎಂಟ್ರಿ ಕೊಡುವ ಬಾಲಯ್ಯ ದುಷ್ಟರನ್ನು ಸಂಹಾರ ಮಾಡುವ ರೀತಿಯೂ ಅಭಿಮಾನಿಗಳಿಗೆ ಸಖತ್ ಕಿಕ್ ನೀಡುತ್ತದೆ. ಇದನ್ನೂ ಓದಿ:

    ಬಾಲಕೃಷ್ಣ ನಟನೆಯ `ಅಖಂಡ’ ಸಿನಿಮಾ 2021ರಲ್ಲಿ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ಬಾಲಯ್ಯ (Balayya) ಅಘೋರಿಯ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅದೇ ಸಿನಿಮಾದ ಎರಡನೇ ಭಾಗವೇ ‘ಅಖಂಡ-2′ ಆಗಿದೆ. `ಅಖಂಡ’ ಸಿನಿಮಾ ನಿರ್ದೇಶನ ಮಾಡಿದ್ದ ಬೊಯಪಾಟಿ ಶ್ರೀನು ಅವರೇ `ಅಖಂಡ-2′ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. `ಅಖಂಡ-2′ ಸಿನಿಮಾದಲ್ಲಿಯೂ ಬಾಲಕೃಷ್ಣ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:

    ಬೊಯಪಾಟಿ ಶ್ರೀನು ಹಾಗೂ ಬಾಲಕೃಷ್ಣ ಕಾಂಬಿನೇಷನ್‌ನ ನಾಲ್ಕನೇ ಸಿನಿಮಾ ಇದಾಗಿದೆ. ಈ ಹಿಂದೆ ಬಂದಿದ್ದ ಸಿಂಹ, ಲೆಜೆಂಡ್ ಹಾಗೂ 2021ರಲ್ಲಿ ಬಿಡುಗಡೆ ಆಗಿದ್ದ ಅಖಂಡ ಸಿನಿಮಾಗಳು ಭಾರಿ ಯಶಸ್ಸುಗಳಿಸಿವೆ. ಇದೀಗ `ಅಖಂಡ-2’ರ ನಿರ್ದೇಶನದಲ್ಲಿ ಬೊಯಪಾಟಿ ತೊಡಗಿದ್ದಾರೆ. ಪ್ರತಿಷ್ಠಿತ 14 ರೀಲ್ಸ್ ಪ್ಲಸ್ ಬ್ಯಾನರ್ ಅಡಿಯಲ್ಲಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತ ನಿರ್ಮಿಸಿರುವ ಈ ಚಿತ್ರವನ್ನು ಎಂ ತೇಜಸ್ವಿನಿ ನಂದಮೂರಿ ಪ್ರಸ್ತುತಪಡಿಸಿದ್ದಾರೆ.

    ಅಖಂಡ-2 ಸಿನಿಮಾದ ಚಿತ್ರೀಕರಣ ಸದ್ಯ ಜಾರ್ಜಿಯಾದ ಗ್ರ‍್ಯಾಂಡ್ ಲೊಕೇಲ್ಸ್‌ನಲ್ಲಿ ನಡೆಯುತ್ತಿದೆ. ದಸರಾ ವಿಶೇಷ ದಿನವಾದ ಸೆ. 25ರಂದು ಚಿತ್ರ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗಲಿದೆ. ಬಾಲಯ್ಯಗೆ ಜೋಡಿಯಾಗಿ ಸಂಯುಕ್ತಾ ನಟಿಸುತ್ತಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ಇದನ್ನೂ ಓದಿ:

    ಹೈಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಅಖಂಡ-2 ಸಿನಿಮಾಗೆ ಎಸ್ ಥಮನ್ ಸಂಗೀತ ನಿರ್ದೇಶನ, ಸಿ ರಾಮಪ್ರಸಾದ್, ಸಂತೋಷ್ ಡಿ ಡೆಟಕೆ ಛಾಯಾಗ್ರಹಣ, ಎ.ಎಸ್ ಪ್ರಕಾಶ್ ಕಲಾ ನಿರ್ದೇಶನ, ತಮ್ಮಿರಾಜು ಸಂಕಲನ, ರಾಮ್-ಲಕ್ಷ್ಮಣ್‌ ಫೈಟ್ ಚಿತ್ರಕ್ಕಿರಲಿದೆ.

  • ಬಾಲಯ್ಯಗೆ ‘ಅಖಂಡ’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್

    ಬಾಲಯ್ಯಗೆ ‘ಅಖಂಡ’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್

    ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. 2021ರಲ್ಲಿ ‘ಅಖಂಡ’ ಸಿನಿಮಾ ಸಕ್ಸಸ್ ಕೊಟ್ಟ ನಿರ್ದೇಶಕನ ಜೊತೆ ಬಾಲಯ್ಯ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

     

    ಜೂನ್‌ 10ರಂದು ಬೋಯಪತಿ ಶ್ರೀನು (Boyapati Srinu) ಮತ್ತು ಬಾಲಯ್ಯ ಕಾಂಬಿನೇಷನ್‌ನಲ್ಲಿ ಸಿನಿಮಾ ಮಾಡುವ ಬಗ್ಗೆ ಚಿತ್ರತಂಡ ತಿಳಿಸಿದೆ. ಮತ್ತೆ ಆ್ಯಕ್ಷನ್ ಸಿನಿಮಾ ತೋರಿಸೋಕೆ ರೆಡಿಯಾಗಿದ್ದಾರೆ. ಸದ್ಯದಲ್ಲೇ ಶೂಟಿಂಗ್‌ ಕೂಡ ಶುರುವಾಗಲಿದೆ. ಇದನ್ನೂ ಓದಿ:ಉಮಾಪತಿ ಜೊತೆ ಐಶ್ವರ್ಯಾ ಸರ್ಜಾ ಅದ್ಧೂರಿ ಮದುವೆ

    ಇನ್ನೂ 2021ರಲ್ಲಿ ಬಾಲಯ್ಯ ನಟಿಸಿದ ‘ಅಖಂಡ’ ಸಿನಿಮಾಗೆ ಬೋಯಪತಿ ಶ್ರೀನು ನಿರ್ದೇಶನ ಮಾಡಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಇದೇ ಟೀಮ್ ಮತ್ತೆ ಜೊತೆಯಾಗಿ ಕೆಲಸ ಮಾಡಲು ಮಂದಾಗಿರೋದಕ್ಕೆ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ಅಂದಹಾಗೆ, ಇದೊಂದೇ ಸಿನಿಮಾ ಅಲ್ಲ ಹಲವು ಸಿನಿಮಾಗಳನ್ನು ಬಾಲಯ್ಯ ಒಪ್ಪಿಕೊಂಡಿದ್ದಾರೆ. ರಾಜಕೀಯದ ಜೊತೆ ನಟನೆಯಲ್ಲೂ ಅವರು ಬ್ಯುಸಿಯಾಗಿದ್ದಾರೆ. ನಟನ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ಬಾಲಯ್ಯ ಪುತ್ರ ಸದ್ಯಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಡಲ್ಲ- ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ

    ಬಾಲಯ್ಯ ಪುತ್ರ ಸದ್ಯಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಡಲ್ಲ- ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ

    ತೆಲುಗಿನ ಸೂಪರ್ ಸ್ಟಾರ್ ಬಾಲಯ್ಯ(Balayya) ಪುತ್ರ (Son) ಅದ್ಯಾವಾಗ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಕಾಯುತ್ತಿದ್ದ ಫ್ಯಾನ್ಸ್‌ಗೆ ಸೆಲೆಬ್ರಿಟಿ ಜ್ಯೋತಿಷಿ ಈಗ ಶಾಕಿಂಗ್ ಸುದ್ದಿಯೊಂದನ್ನ ಬಿಚ್ಚಿಟ್ಟಿದ್ದಾರೆ. ಬಾಲಯ್ಯ ಪುತ್ರ ಈಗಲೇ ಚಿತ್ರರಂಗಕ್ಕೆ ಎಂಟ್ರಿ ಕೊಡಲ್ಲ ಅಂತಾ ಭವಿಷ್ಯ ನುಡಿದಿದ್ದಾರೆ. ಜ್ಯೋತಿಷಿ ವೇಣು ಸ್ವಾಮಿ (Venu Swamy) ಮಾತು ಕೇಳಿ ಫ್ಯಾನ್ಸ್ ಬೇಸರಗೊಂಡಿದ್ದಾರೆ. ಇದನ್ನೂ ಓದಿ:ಸ್ಪಂದನಾ ನಿಧನ : ವಿಜಯ ರಾಘವೇಂದ್ರ ನಟನೆ ‘ಕದ್ದಚಿತ್ರ’ ರಿಲೀಸ್ ಮುಂದಕ್ಕೆ

    ಬಾಲಯ್ಯ ಪುತ್ರ ಮೋಕ್ಷಜ್ಞ ತೇಜ ತೆಲುಗು ಇಂಡಸ್ಟ್ರಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಆದರೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ. ಸೆಲೆಬ್ರಿಟಿಗಳ ನೆಚ್ಚಿನ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ, ಬಾಲಯ್ಯ ಅಭಿಮಾನಿಗಳನ್ನು ಮತ್ತಷ್ಟು ನಿರಾಸೆಗೊಳಿಸಿದೆ. ಮೋಕ್ಷಜ್ಞ ತೇಜ (Mokshagna Tej) ಸಿನಿಮಾರಂಗಕ್ಕೆ ಎಂಟ್ರಿ ಕೊಡುವುದಕ್ಕೆ ಇನ್ನೂ ಎರಡು ಮೂರು ವರ್ಷ ಬೇಕಾಗಬಹುದು. ತೆಲುಗು ಸಿನಿಮಾಗೆ ಎಂಟ್ರಿ ಕೊಡುವುದಕ್ಕೆ ಇನ್ನೂ ಸಮಯವಿದೆ ಎಂದು ಹೇಳುವ ಮೂಲಕ ಬಾಲಯ್ಯನ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದಾರೆ.

    ‘ಅಖಂಡ’ (Akanda) ಸಿನಿಮಾ ವೇಳೆ ಬಾಲಯ್ಯರನ್ನು ವೇಣು ಸ್ವಾಮಿ ಭೇಟಿ ಮಾಡಿದ್ದರು. ಈ ವೇಳೆ ಮಗನ ಜಾತಕ ನೋಡಿದ್ದಾರೆ ಅನ್ನೋ ಸುದ್ದಿ ಓಡಾಡುತ್ತಿದೆ. ಬಾಲಯ್ಯ ಪುತ್ರನಿಗೆ ಉತ್ತಮ ಭವಿಷ್ಯವಿದೆ. ಸಿನಿಮಾರಂಗದಲ್ಲಿ ಒಳ್ಳೆಯ ಯಶಸ್ಸು ಸಿಗುತ್ತೆ. ಆದರೆ, ರಾಜಕೀಯದಲ್ಲಿ ಅಲ್ಲ ಎಂದು ವೇಣು ಗೋಪಾಲ ಸ್ವಾಮಿ ಭವಿಷ್ಯ ನುಡಿದಿದ್ದಾರೆ.

    ಸಮಂತಾ (Samantha) ವೈವಾಹಿಕ ಜೀವನ ಏರುಪೇರು ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇತ್ತೀಚಿಗೆ ಶ್ರೀಲೀಲಾ ಬಗ್ಗೆ ಮಾತನಾಡಿದ್ದರು. ಸಿನಿಮಾರಂಗದಲ್ಲಿ ಶ್ರೀಲೀಲಾ (Sreeleela) ಭವಿಷ್ಯ ಇನ್ನೂ ಕೆಲವು ವರ್ಷಗಳು ಮಾತ್ರ ಎಂದು ಮಾತನಾಡಿದ್ದರು. ಈಗ ಬಾಲಯ್ಯ ಪುತ್ರನ ಬಗ್ಗೆ ಸೆಲೆಬ್ರಿಟಿ ಜ್ಯೋತಿಷಿ ಆಡಿರುವ ಮಾತು ಫ್ಯಾನ್ಸ್‌ಗೆ ಬೇಸರ ಮೂಡಿಸಿದೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಯ್ಯ ಜೊತೆ ನಟಿಸಲಿದ್ದಾರೆ ನಟಿ ಶ್ರೀಲೀಲಾ

    ಬಾಲಯ್ಯ ಜೊತೆ ನಟಿಸಲಿದ್ದಾರೆ ನಟಿ ಶ್ರೀಲೀಲಾ

    ನ್ನಡತಿ ಶ್ರೀಲೀಲಾ (Sreeleela) ಸದ್ಯ ಟಾಲಿವುಡ್ (Tollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. `ಧಮಾಕ’ (Dhamaka) ಚಿತ್ರದ ಸೂಪರ್ ಸಕ್ಸಸ್ ನಂತರ ಬಾಲಯ್ಯ ಅವರ ಮುಂದಿನ ಚಿತ್ರದಲ್ಲಿ ನಟಿಸಲು ಭರ್ಜರಿ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ‌ʻಜೋಶ್ʼ ನಟಿ ಸ್ನೇಹಾ ಆಚಾರ್ಯ

    ಕಿಸ್, ಭರಾಟೆ, ಬೈ ಟು ಲವ್, ಕನ್ನಡದ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಶ್ರೀಲೀಲಾ ಈಗ ತೆಲುಗು ಸಿನಿಮಾ ರಂಗದಲ್ಲಿ ಬೆಳಗುತ್ತಿದ್ದಾರೆ. ರಶ್ಮಿಕಾ ಮಂದಣ್ಣಗೆ (Rashmika Mandanna) ಸೆಡ್ಡು ಹೊಡೆದು ಸಾಲು ಸಾಲು ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾಗುತ್ತಿದ್ದಾರೆ. `ಧಮಾಕ’ (Dhamaka) ಚಿತ್ರದ ಸಕ್ಸಸ್ ನಂತರ ನಟಿಯ ಕೈಯಲ್ಲಿ ಏಳು ಸಿನಿಮಾಗಳಿವೆ.

    ಬಾಲಯ್ಯ (Balayya) ನಟನೆಯ ಚಿತ್ರದಲ್ಲಿ ಶ್ರೀಲೀಲಾ (Sreeleela) ನಟಿಸುತ್ತಾರೆ ಎಂದು ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಆದರೆ ಅಧಿಕೃತ ಮಾಹಿತಿ ಹೊರ ಬಿದ್ದಿರಲ್ಲಿಲ್ಲ. ಇದೀಗ ನಟಿ ಶ್ರೀಲೀಲಾ ಪೋಸ್ಟ್ ಶೇರ್ ಮಾಡಿಕೊಳ್ಳುವ ಮೂಲಕ ನಂದಮೂರಿ ಬಾಲಯ್ಯ (Nandamuri Balayya) ಜೊತೆ ನಟಿಸುವ ಬಗ್ಗೆ ಅಧಿಕೃತ ಅಪ್‌ಡೇಟ್ ತಿಳಿಸಿದ್ದಾರೆ.

     

    View this post on Instagram

     

    A post shared by Sreeleela (@sreeleela14)

    ಚಿತ್ರದಲ್ಲಿ ಬಾಲಯ್ಯ ಅವರ ತಂಗಿ ಪಾತ್ರದಲ್ಲಿ ಶ್ರೀಲೀಲಾ ನಟಿಸಲಿದ್ದಾರೆ. ಶ್ರೀಲೀಲಾ ಪಾತ್ರಕ್ಕೂ ಪ್ರಾಮುಖ್ಯತೆಯಿದೆ. ಅನಿಲ್ ರವಿಪುಡಿ ನಿರ್ದೇಶನದ NBK 108 ಚಿತ್ರದಲ್ಲಿ ತ್ರಿಷಾ, ಕಾಜಲ್ ಅಗರ್‌ವಾಲ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

  • ಬಾಲಯ್ಯನ ಸಿನಿಮಾ ಪ್ರೀರಿಲೀಸ್ ಇವೆಂಟ್‌ಗೆ ಬ್ರೇಕ್ ಹಾಕಿದ ಸರ್ಕಾರ

    ಬಾಲಯ್ಯನ ಸಿನಿಮಾ ಪ್ರೀರಿಲೀಸ್ ಇವೆಂಟ್‌ಗೆ ಬ್ರೇಕ್ ಹಾಕಿದ ಸರ್ಕಾರ

    `ಅಖಂಡ’ (Akanda) ಸಿನಿಮಾದ ಸಕ್ಸಸ್ ನಂತರ `ವೀರ ಸಿಂಹ ರೆಡ್ಡಿ’ (Veera Simha Reddy) ಚಿತ್ರದ ಮೂಲಕ ಬಾಲಯ್ಯ ಸದ್ದು ಮಾಡ್ತಿದ್ದಾರೆ. ಈ ಸಿನಿಮಾ ರಿಲೀಸ್ ಬೆನ್ನಲ್ಲೇ ಬಾಲಯ್ಯ ಅವರಿಗೆ ಸಂಕಷ್ಟವೊಂದು ಎದುರಾಗಿದೆ. ಈ ಚಿತ್ರದ ಪ್ರೀರಿಲೀಸ್‌ ಕಾರ್ಯಕ್ರಮಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ.

    ಆಂಧ್ರ ಪ್ರದೇಶದಲ್ಲಿ ಸಿನಿಮಾ ಮತ್ತು ರಾಜಕೀಯ ಎರಡು ಒಟ್ಟಿಗೆ ಬೆರೆತು ಹೋಗಿದೆ. ಈಗ ರಾಜಕೀಯದವರು ಸಿನಿಮಾದವರ ವಿರುದ್ಧ ರಾಜಕೀಯ ಮಾಡ್ತಿದ್ದಾರೆ. ಸಿಎಂ ಜಗನ್ (Chief Minister Jagan) ಸರ್ಕಾರಕ್ಕೆ ಸಿನಿಮಾ ರಂಗದವರ ಮೇಲೆ ಅದೇನೋ ಸಿಟ್ಟಿದ್ದಂತಿದೆ. ಈ ಹಿಂದೆ ಪವನ್ ಕಲ್ಯಾಣ್ (Pawan Kalyan) ಅವರ ಸಿನಿಮಾಗಳ ವಿರುದ್ಧ ಸಮರ ನಡೆಸಿದ ಜಗನ್, ಈಗ ನಂದಮೂರಿ ಬಾಲಕೃಷ್ಣ ಚಿತ್ರದ ವಿರುದ್ಧ ತಮ್ಮ ರಾಜಕೀಯ ವರಸೆಗಳನ್ನು ಪ್ರಯೋಗಿಸುತ್ತಿದ್ದಾರೆ. ಟಿಡಿಪಿ ಪಕ್ಷದ ಶಾಸಕರೂ ಆಗಿರುವ ಬಾಲಯ್ಯ ಅವರ ಹೊಸ ಸಿನಿಮಾ ಶೀಘ್ರದಲ್ಲಿಯೇ ಬಿಡುಗಡೆ ರೆಡಿಯಾಗಿದೆ. `ಅಖಂಡ’ ಸೂಪರ್ ಸಕ್ಸಸ್ ನಂತರ ಈ ಚಿತ್ರದ ಮೇಲೆ ಭಾರಿ ನಿರೀಕ್ಷೆಯಿದೆ. ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಆಂಧ್ರದಲ್ಲಿ ಜಗನ್ ಸರ್ಕಾರ ಅನುಮತಿ ನಿರಾಕರಿಸಿದೆ.

    ನಂದಮೂರಿ ಬಾಲಕೃಷ್ಣ ನಟನೆಯ `ವೀರ ಸಿಂಹ ರೆಡ್ಡಿ’  (Veera Simha Reddy) ಸಿನಿಮಾವು ಜನವರಿ 12ರಂದು ತೆರೆಗೆ ಬರಲಿದೆ. ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅನ್ನು ಆಂಧ್ರದ ಒಂಗೋಲು ಪಟ್ಟಣದ ಎಬಿಎಂ ಗ್ರೌಂಡ್‌ನಲ್ಲಿ ಆಯೋಜಿಸಲು ಸಿನಿಮಾದ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್ (Mytri Movie Makers) ಸಿದ್ಧರಾಗಿದ್ದರು. ಕಳೆದ ಎರಡು ದಿನಗಳಿಂದ ಪ್ರೀರಿಲೀಸ್‌ಗಾಗಿ ಸಿದ್ಧತೆಯೂ ಭರದಿಂದ ಸಾಗಿತ್ತು. ಮೈದಾನವನ್ನು ಸಜ್ಜು ಮಾಡಲಾಗುತ್ತಿತ್ತು. ಭಾರಿ ಸಂಖ್ಯೆಯಲ್ಲಿ ಪಾಸುಗಳನ್ನು ಪ್ರಿಂಟ್ ಮಾಡಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಇದನ್ನೂ ಓದಿ:ರೆಸಾರ್ಟ್‌ನಲ್ಲಿ ರೂಪೇಶ್- ಸಾನ್ಯ ಸಂಬಂಧ ಸ್ಟ್ರಾಂಗ್ ಆಯ್ತು: ರಾಕೇಶ್ ಅಡಿಗ

    ಸಿನಿಮಾ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯ ಅಭಿಮಾನಿಗಳು ಜಮಾಯಿಸುವುದರಿಂದ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ ಎಂಬ ಕಾರಣ ನೀಡಿ, ಕಾರ್ಯಕ್ರಮಕ್ಕೆ ತಡೆ ನೀಡಲಾಗಿದೆ. ಇವೆಂಟ್ ಮಾಡಲು ಅಧಿಕಾರಿಗಳು ಬೇರೇ ಜಾಗವನ್ನು ಸೂಚಿಸಿದ್ದಾರೆ. ಈ ಎಲ್ಲಾ ಅಡೆತಡೆ ಮೀರಿ ಬಾಲಯ್ಯ ಸಿನಿಮಾ ಕಾರ್ಯಕ್ರಮ ನಡೆಯುತ್ತಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಾಲಿವುಡ್ ಲೆಜೆಂಡ್‌ ಬಾಲಯ್ಯ ಮುಂದೆ ಅಬ್ಬರಿಸಲಿದ್ದಾರೆ `ಕೆಜಿಎಫ್ 2′ ನಟ

    ಟಾಲಿವುಡ್ ಲೆಜೆಂಡ್‌ ಬಾಲಯ್ಯ ಮುಂದೆ ಅಬ್ಬರಿಸಲಿದ್ದಾರೆ `ಕೆಜಿಎಫ್ 2′ ನಟ

    ತೆಲುಗಿನ ಲೆಜೆಂಡರಿ ನಂದಮೂರಿ ಬಾಲಕೃಷ್ಣ(Nandamuri Balakrishna) `ಅಖಂಡ’ ಸಕ್ಸಸ್ ನಂತರ `ವೀರ ಸಿಂಹ ರೆಡ್ಡಿ'(Veera Simha Reddy) ಸಿನಿಮಾವನ್ನ ಕೈಗೆತ್ತಿಕೊಂಡಿದ್ದಾರೆ. ಬಾಲಯ್ಯ ಅವರ ಮುಂದೆ ಘರ್ಜಿಸಲು ಘಟಾನುಘಟಿಗಳನ್ನೇ ಕರೆಸಲಾಗುತ್ತಿದೆ. ದುನಿಯಾ ವಿಜಯ್ (Duniya Vijay) ಆನ್‌ಬೋರ್ಡ್ ಆಗಿರುವ ಬೆನ್ನಲ್ಲೇ ಈಗ `ಕೆಜಿಎಫ್ 2′ (Kgf 2) ನಟ ಕೂಡ ಈ ತಂಡಕ್ಕೆ ಸೇರಿಕೊಂಡಿದ್ದಾರೆ.

    `ಅಖಂಡ'(Akanda Film) ಚಿತ್ರದ ಸಕ್ಸಸ್ ನಂತರ ತಮ್ಮ 107ನೇ ಸಿನಿಮಾ `ವೀರ ಸಿಂಹ ರೆಡ್ಡಿ’ಗೆ ಬಾಲಯ್ಯ ಭರ್ಜರಿ ಕಸರತ್ತು ಮಾಡ್ತಿದ್ದಾರೆ. ಸಖತ್ತಾಗಿ ಶೂಟಿಂಗ್ ಕೂಡ ನಡೆಯುತ್ತಿದೆ. ಶ್ರುತಿ ಹಾಸನ್(Shruti Haasan) ನಾಯಕಿಯಾಗಿ ಸಾಥ್ ನೀಡುತ್ತಿದ್ದಾರೆ. ಬಾಲಯ್ಯಗೆ ಖಡಕ್ ವಿಲನ್ ಆಗಿ ಕನ್ನಡದ ಸ್ಟಾರ್ ನಟ ದುನಿಯಾ ವಿಜಯ್ ಎಂಟ್ರಿ ಕೊಟ್ಟ ಬೆನ್ನಲ್ಲೇ `ಕೆಜಿಎಫ್ 2′ ನಟ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ.

     

    View this post on Instagram

     

    A post shared by B.s. Avinash (@avinashbs)

    `ಕೆಜಿಎಫ್ 2′ ಸಿನಿಮಾದಲ್ಲಿ ಖಳನಾಯಕ ಆಂಡ್ರೂಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅವಿನಾಶ್ ಈಗ ಬಾಲಯ್ಯ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಗಂಗಿ ರೆಡ್ಡಿ ಎಂಬ ವಿಲನ್ ಪಾತ್ರದಲ್ಲಿ ಟಾಲಿವುಡ್ ಲೆಜೆಂಡ್‌ಗೆ ಕಿಕ್ ಕೊಡಲಿದ್ದಾರೆ. ಇದೀಗ ನಿರ್ದೇಶಕ ಗೋಪಿ ಚಂದ್ ಮಲಿನೇನಿ ಜೊತೆಗಿರುವ ಅವಿನಾಶ್ ಫೋಟೋ ಕೂಡ ವೈರಲ್ ಆಗುತ್ತಿದೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

     

    View this post on Instagram

     

    A post shared by B.s. Avinash (@avinashbs)

    ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಬಾಲಯ್ಯ ಜತೆ ಶ್ರುತಿ ಹಾಸನ್, ದುನಿಯಾ ವಿಜಯ್, ವರಲಕ್ಷ್ಮಿ ಶರತ್‌ಕುಮಾರ್, ಅವಿನಾಶ್ ಸೇರಿದಂತೆ ಬಹುದೊಡ್ಡ ತಾರಾಬಳಗವೇ ಚಿತ್ರದಲ್ಲಿ ಇರಲಿದೆ.

    Live Tv
    [brid partner=56869869 player=32851 video=960834 autoplay=true]

  • ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ `ಕಿಸ್’ ಬ್ಯೂಟಿ ಶ್ರೀಲೀಲಾ

    ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ `ಕಿಸ್’ ಬ್ಯೂಟಿ ಶ್ರೀಲೀಲಾ

    ನ್ನಡದ ಬ್ಯೂಟಿ ಶ್ರೀಲೀಲಾಗೆ ಟಾಲಿವುಡ್ ಸೂಪರ್‌ಸ್ಟಾರ್ ಜೊತೆ ನಟಿಸುವ ಅದೃಷ್ಟ ಖುಲಾಯಿಸಿದೆ. ಕನ್ನಡದ ನಾಯಕಿಯಾಗಿ ಗುರುತಿಸಿಕೊಳ್ಳುತ್ತಿರುವಾಗಲೇ ಸೌತ್‌ನಿಂದ ಸಾಲು ಸಾಲು ಸಿನಿಮಾಗಳಿಗೆ ಆಫರ್‌ಗಳು ಅರಸಿ ಬರುತ್ತಿದೆ. ಸದ್ಯ ನಂದಮೂರಿ ಬಾಲಕೃಷ ಅವರ ಜೊತೆ ಕಾಣಿಸಿಕೊಳ್ಳುವ ಅವಕಾಶ ನಟಿ ಶ್ರೀಲೀಲಾ ಗಿಟ್ಟಿಸಿಕೊಂಡಿದ್ದಾರೆ.

    ಕನ್ನಡದ ಕಿಸ್, ಭರಾಟೆ, ಬೈ ಟು ಲವ್ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟಿ ಶ್ರೀಲೀಲಾ, ಅದ್ಯಾವಾಗ ತೆಲುಗಿನ ಲೆಜೆಂಡರಿ ಡೈರೆಕ್ಟರ್ ರಾಘವೇಂದ್ರ ರಾವ್ ಅವರ ಕಣ್ಣಿಗೆ ಬಿದ್ರೋ ಅಲ್ಲಿಂದ ಅದೃಷ್ಟನೇ ಚೇಂಜ್ ಆಯ್ತು. `ಪೆಳ್ಳಿ ಸಂದಡಿ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟಿಸಿದ ಮೊದಲ ಚಿತ್ರ ಅಷ್ಟೇನು ಸೌಂಡ್ ಮಾಡದೇ ಇದ್ರು, ಶ್ರೀಲೀಲಾ ನಟನೆಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ಕೊಟ್ರು. ಈಗ ನಂದಮೂರಿ ಬಾಲಕೃಷ ಅವರ ಜೊತೆ ನಟಿಸೋದಕ್ಕೆ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

    ಸೂಪರ್ ಸ್ಟಾರ್ ನಂದಮೂರಿ ಬಾಲಯ್ಯ ಅವರಿಗೆ `ಸರಿಲೇರು ನೀಕೆವ್ವರು’ ಖ್ಯಾತಿಯ ಅನಿಲ್ ರವಿಪುಡಿ ನಿರ್ದೇಶನ ಮಾಡ್ತಿದ್ದಾರೆ. ಡಿಫರೆಂಟ್ ಕಥೆಯಲ್ಲಿ ವಯೋವೃದ್ಧನ ಪಾತ್ರಕ್ಕೆ ಬಾಲಯ್ಯ ಜೀವ ತುಂಬ್ತಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯಗೆ ತಂಗಿ ರೋಲ್‌ನಲ್ಲಿ ಶ್ರೀಲೀಲಾ ಮಿಂಚಲಿದ್ದಾರೆ. ಬಾಲಯ್ಯ ಈ ಚಿತ್ರದ ಹೈಲೆಟ್ ಆಗಿದ್ದು, ಪ್ರಮುಖ ಪಾತ್ರದಲ್ಲಿ ಭರಾಟೆ ಬ್ಯೂಟಿ ಶ್ರೀಲೀಲಾ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಇನ್ನು ಶ್ರೀಲೀಲಾ ಲಿಸ್ಟ್‌ನಲ್ಲಿ, ನವೀನ್ ಪೋಲಿಶೆಟ್ಟಿ ಜತೆ `ಜಾತಿರತ್ನಾಲು’, ರವಿತೇಜಾ ಜತೆ `ಧಮಾಕ’, ವೈಷ್ಣವ್ ತೇಜ್ ಜತೆ ಹೊಸ ಪ್ರಾಜೆಕ್ಟ್, ಮತ್ತು ಮಹೇಶ್ ಬಾಬು ಚಿತ್ರದಲ್ಲೂ ಕಿಸ್ ನಟಿ ಕಾಣಿಸಿಕೊಳ್ಳಲಿದ್ದಾರೆ. ಒಟ್ನಲ್ಲಿ ಕನ್ನಡದ ನಟಿ ಪರಭಾಷಾ ಚಿತ್ರಗಳಲ್ಲೂ ಸುದ್ದಿ ಮಾಡ್ತಿರೋದು ನೋಡಿ ಫ್ಯಾನ್ಸ್ ಥ್ರಿಲ್ ಅಗಿದ್ದಾರೆ.

  • ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ :  ಯಾರದು ಪ್ರತಾಪ್ ರೆಡ್ಡಿ?

    ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?

    ಮೊನ್ನೆಯಷ್ಟೇ ದುನಿಯಾ ವಿಜಯ್ ತೆಲುಗಿನ ತಮ್ಮ ಚೊಚ್ಚಲು ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಒಂದು ವಾರ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಇನ್ನೂ ಹೆಸರಿಡದ ಆ ಸಿನಿಮಾದಲ್ಲಿನ ವಿಜಯ್ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಸಿನಿಮಾದಲ್ಲಿ ವಿಜಯ್ ಅವರ ಪಾತ್ರದ ಹೆಸರನ್ನೂ ರಿವಿಲ್ ಮಾಡಲಾಗಿದೆ. ಮುಸಳಿ ಮಡಗು ಪ್ರತಾಪ್ ರೆಡ್ಡಿ ಹೆಸರಿನ ಪಾತ್ರವನ್ನು ವಿಜಯ್ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ : ಐದು ಮಕ್ಕಳಿಗೆ ‘ಪುನೀತ್ ರಾಜಕುಮಾರ್’ ಅಂತ ನಾಮಕರಣ ಮಾಡಿದ ನಟಿ ತಾರಾ

    ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ನಟನೆಯ ಈ ಹೊಸ ಸಿನಿಮಾದಲ್ಲಿ ವಿಜಯ್ ನೆಗೆಟಿವ್ ಶೇಡ್ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶೂಟಿಂಗ್ ಗಾಗಿ ವಿಜಯ್, ಪತ್ನಿಯೊಂದಿಗೆ ಈಗಾಗಲೇ ತೆರಳಿದ್ದಾರೆ. ಇದನ್ನೂ ಓದಿ : ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ

    ವಿಲನ್ ಆಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು ದುನಿಯಾ ವಿಜಯ್, ಆನಂತರ ದುನಿಯಾ ಚಿತ್ರ ಅವರನ್ನು ಹೀರೋ ಆಗಿ ಮಾಡಿತು. ಅಲ್ಲಿಂದ ಅವರು ನಾಯಕರಾಗಿಯೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡರು. ಈಗ ಮತ್ತೆ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅದು ತೆಲುಗು ಸಿನಿಮಾದಲ್ಲಿ ಎನ್ನುವುದು ವಿಶೇಷ. ಗೋಪಿಚಂದ್ ಮಲಿನೇನೆ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಬಾಲಯ್ಯನ 107ನೇ ಸಿನಿಮಾ ಇದಾಗಿದೆ.

  • ಬಾಲಯ್ಯನ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ದುನಿಯಾ ವಿಜಯ್

    ಬಾಲಯ್ಯನ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ದುನಿಯಾ ವಿಜಯ್

    ಮೊದಲ ಬಾರಿಗೆ ದುನಿಯಾ ವಿಜಯ್ ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಓದಿದ್ದೀರಿ. ಆ ಸಿನಿಮಾದ ಮುಹೂರ್ತ ಮೊನ್ನೆಯಷ್ಟೇ ನಡೆದಿದೆ. ಅಂದು ದುನಿಯಾ ವಿಜಯ್ ಹೋಗಿರಲಿಲ್ಲ. ಹಾಗಾಗಿ ವಿಜಯ್ ಆ ಚಿತ್ರದಲ್ಲಿ ಇರುತ್ತಾರಾ ಅಥವಾ ಇಲ್ಲವಾ ಎನ್ನುವ ಅನುಮಾನ ಕೂಡ ಮೂಡಿತ್ತು. ಈ ಎಲ್ಲದಕ್ಕೂ ಇಂದು ಸ್ಪಷ್ಟ ಉತ್ತರ ಸಿಕ್ಕಿದೆ. ನೆನ್ನೆಯಷ್ಟೇ ದುನಿಯಾ ವಿಜಯ್ ತೆಲುಗು ಸಿನಿಮಾದ ಶೂಟಿಂಗ್ ಗಾಗಿ ತೆರಳಿದ್ದಾರೆ. ಇದನ್ನೂ ಓದಿ : ವಾರದೊಳಗೆ 100 ಕೋಟಿ ಕ್ಲಬ್ ಸೇರಲಿದೆ ಪುನೀತ್ ನಟನೆಯ ಜೇಮ್ಸ್: ಪಕ್ಕಾ ಲೆಕ್ಕಾಚಾರ

    ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ನಟನೆಯ ಈ ಹೊಸ ಸಿನಿಮಾದಲ್ಲಿ ವಿಜಯ್ ನೆಗೆಟಿವ್ ಶೇಡ್ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶೂಟಿಂಗ್ ಗಾಗಿ ವಿಜಯ್, ಪತ್ನಿಯೊಂದಿಗೆ ತೆರಳಿದ್ದಾರೆ. ಇದನ್ನೂ ಓದಿ : ಕಬ್ಜ ಸಿನಿಮಾದಲ್ಲಿ ಮಧುಮತಿಯಾದ ಶ್ರೀಯಾ ಶರಣ್: ಫಸ್ಟ್ ಲುಕ್ ರಿಲೀಸ್

    ವಿಲನ್ ಆಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು ದುನಿಯಾ ವಿಜಯ್, ಆನಂತರ ದುನಿಯಾ ಚಿತ್ರ ಅವರನ್ನು ಹೀರೋ ಆಗಿ ಮಾಡಿತು. ಅಲ್ಲಿಂದ ಅವರು ನಾಯಕರಾಗಿಯೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡರು. ಈಗ ಮತ್ತೆ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅದು ತೆಲುಗು ಸಿನಿಮಾದಲ್ಲಿ ಎನ್ನುವುದು ವಿಶೇಷ. ಇದನ್ನೂ ಓದಿ :  ಕೇರಳದಲ್ಲಿ ಸಿಕ್ತು ನಿರ್ದೇಶಕ ರಿಷಬ್ ಶೆಟ್ಟಿಗೆ ನ್ಯಾಯ

    ಗೋಪಿಚಂದ್ ಮಲಿನೇನೆ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಬಾಲಯ್ಯನ 107ನೇ ಸಿನಿಮಾ ಇದಾಗಿದೆ. ಎರಡು ವಾರದಿಂದ ಸಿನಿಮಾದ ಶೂಟಿಂಗ್ ನಡೆದಿದ್ದು, ಇಂದಿನಿಂದ ದುನಿಯಾ ವಿಜಯ್ ಅವರ ದೃಶ್ಯಗಳನ್ನು ಸೆರೆ ಹಿಡಿಯುತ್ತಾರಂತೆ ನಿರ್ದೇಶಕರು.

  • ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಖಂಡ ಸಿನಿಮಾದ ನಂತರ ಮತ್ತೊಂದು ಭಾರೀ ಬಜೆಟ್ ಸಿನಿಮಾದಲ್ಲಿ ನಟಿಸುತ್ತಿರುವ ನಂದಮೂರಿ ಬಾಲಕೃಷ್ಣ ಜತೆ ಹೊಸ ಸಿನಿಮಾದಲ್ಲಿ ನಟಿಸಲಾರೆ ಎಂದಿದ್ದಾರಂತೆ ಕನ್ನಡದ ಹುಡುಗಿ, ಟಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ಕೃತಿ ಶೆಟ್ಟಿ. ಇನ್ನೂ ಹದಿನೆಂಟರ ಆಸುಪಾಸಿನಲ್ಲಿರುವ ಈ ನಟಿಯು ಬಾಲಯ್ಯನವರ ವಯಸ್ಸಿನ ಕಾರಣಕ್ಕಾಗಿ ನಟಿಸಲು ನಿರಾಕರಿಸಿರುವುದು ಭಾರೀ ಸುದ್ದಿ ಮಾಡಿದೆ. ಇದನ್ನೂ ಓದಿ : ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

    “ನಂದಮೂರಿ ಅವರಿಗೆ ವಯಸ್ಸಾಗಿದೆ. ನನಗಿನ್ನೂ ಹದಿನೆಂಟರ ಹರೆಯ. ವಯಸ್ಸಿನ ಭಾರೀ ಅಂತರ ಇರುವ ನಟರ ಜತೆ ಈಗಲೇ ಕೆಲಸ ಮಾಡಿದರೆ, ನನ್ನ ಕೆರಿಯರ್  ತೊಂದರೆ ಆಗುತ್ತದೆ. ಹಾಗಾಗಿ ನಾನು ಬಾಲಯ್ಯ ಅವರ ಚಿತ್ರದಲ್ಲಿ ನಟಿಸಲಾರೆ” ಎಂದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    ಬಾಲಯ್ಯ ಅವರ ಸಿನಿಮಾದಲ್ಲಿ ನಟಿಸಲು ಕಲಾವಿದರು ತುದಿಗಾಲಲ್ಲಿ ನಿಂತಿರುತ್ತಾರೆ. ಇಂತಹ ಸಮಯದಲ್ಲಿ ಕೃತಿ ಕೈಗೊಂಡಿದ್ದಾರೆ ಎನ್ನಲಾದ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೃತಿ ಜಾಗಕ್ಕೆ ಸದ್ಯ ಶ್ರುತಿ ಹಾಸನ್ ಬಂದಿದ್ದಾರಂತೆ. ಇದನ್ನೂ ಓದಿ : ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು

    ಕನ್ನಡತಿ ಕೃತಿ ಶೆಟ್ಟಿ ಈ ಸಿನಿಮಾದಿಂದ ಹೊರ ನಡೆದಿದ್ದರೂ, ಮತ್ತೋರ್ವ ಕನ್ನಡದ ನಟ ದುನಿಯಾ ವಿಜಯ್, ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದುನಿಯಾ ವಿಜಯ್ ಗೆ ಇದು ತೆಲುಗಿನಲ್ಲಿ ಮೊದಲ ಸಿನಿಮಾ. ಮೊನ್ನೆಯಷ್ಟೇ ಚಿತ್ರಕ್ಕೆ ಮುಹೂರ್ತವಾಗಿದ್ದು, ಸದ್ಯ ಮೊದಲ ಹಂತದ ಚಿತ್ರೀಕರಣ ಶುರುವಾಗಿದೆ.