Tag: ನಕಲಿ ಚಿನ್ನ

  • ನಕಲಿ ಚಿನ್ನ ಮಾರಿ 12 ಲಕ್ಷ ಹಣ ದೋಚಿದ್ದ ಆರೋಪಿ ಅಂದರ್

    ನಕಲಿ ಚಿನ್ನ ಮಾರಿ 12 ಲಕ್ಷ ಹಣ ದೋಚಿದ್ದ ಆರೋಪಿ ಅಂದರ್

    ಹಾಸನ: ನಕಲಿ ಚಿನ್ನ ಮಾರಾಟ ಮಾಡಿ 12 ಲಕ್ಷ ಹಣ ದೋಚಿದ್ದ ಆರೋಪಿಯನ್ನು ಹಾಸನ ಜಿಲ್ಲೆ ಹಳೇಬೀಡು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹತ್ತಾರು ಎಕರೆ, ಮಾವಿನ ತೋಪು, ನಿರ್ಜನ ಪ್ರದೇಶ – ನೂರಾರು ಜನ… ಕೋಟಿ ಕೋಟಿ ವ್ಯವಹಾರ!

    ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬೇದರ್ ಲಾಲ್ ಬಂಧಿತ ಆರೋಪಿ. ಉಳಿದ ಆರೋಪಿಗಳಾದ ಅರ್ಜುನ್, ಕೀರ್ತಿ, ಶಿವಕುಮಾರ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    hassana thief

    ಜಮೀನಿನಲ್ಲಿ ಕೆಲಸ ಮಾಡುವ ವೇಳೆ ತಮಗೆ ಚಿನ್ನದ ನಿಧಿ ಸಿಕ್ಕಿದೆ. ಇದನ್ನು ಮಾರಾಟ ಮಾಡಿದರೆ ನಿಮಗೂ ಹಣ ಕೊಡುತ್ತೇವೆ ಎಂದು ಹಗರೆ ಗ್ರಾಮದ ಜಯಣ್ಣರಿಗೆ ಖದೀಮರು ದುಂಬಾಲು ಬಿದ್ದಿದ್ದರು. ಲಾಭದ ಆಸೆಗೆ ಮಾರು ಹೋಗಿದ್ದ ಜಯಣ್ಣ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ದೇವರಡ್ಡಿ ಗ್ರಾಮದ ಸೋಮಶೇಖರ್ ರೆಡ್ಡಿ ಜೊತೆ 12 ಲಕ್ಷಕ್ಕೆ ಮಾತುಕಥೆ ಮುಗಿಸಿದ್ದರು. ಇದನ್ನೂ ಓದಿ:ಪಬ್ಲಿಕ್ ಟಿವಿ ಇಂಪಾಕ್ಟ್ – ರಸ್ತೆ ಗುಂಡಿಗಳನ್ನು ಮುಚ್ಚಲು ಟಾಸ್ಕ್ ಪೋರ್ಸ್ ರಚಿಸಿದ ಬಿಬಿಎಂಪಿ

    hassana thief

    ಚಿನ್ನ ಪರಿಕ್ಷಿಸಲು ಜಯಣ್ಣನಿಗೆ ಎರಡು ಅಸಲಿ ಚಿನ್ನದ ಗುಂಡುಗಳನ್ನು ಸಹ ಖದೀಮರ ಗ್ಯಾಂಗ್ ನೀಡಿತ್ತು. ಕೂಡಲೇ ಉಳಿದ ಚಿನ್ನ ಪಡೆಯಲು 12 ಲಕ್ಷ ಹಣ ತೆಗೆದುಕೊಂಡು ಆರೋಪಿಗಳು ಹೇಳಿದ ಸ್ಥಳಕ್ಕೆ ಜಯಣ್ಣ ಬಂದಿದ್ದಾರೆ. ಈ ವೇಳೆ ಖದೀಮರು ನಕಲಿ ಚಿನ್ನದ ಗಂಟು ನೀಡಿದ್ದಾರೆ. ಅನುಮಾನಗೊಂಡು ಗಂಟನ್ನು ಬಿಚ್ಚಿ ನೋಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ 12 ಲಕ್ಷ ಹಣ ಕಿತ್ತುಕೊಂಡು ಖದೀಮರ ಗ್ಯಾಂಗ್ ಪರಾರಿಯಾಗಿತ್ತು. ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಹಳೇಬೀಡು ಸಿಪಿಐ ಶ್ರೀಕಾಂತ್ ಹಾಗೂ ಪಿಎಸ್ ಗಿರಿಧರ್ ನೇತೃತ್ವದಲ್ಲಿ ತಂಡ ಇದೀಗ ಓರ್ವ ಆರೋಪಿ, ಹಣ ಮತ್ತು ನಕಲಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

  • ಚಿನ್ನದ ನಾಣ್ಯ ನೀಡೋದಾಗಿ ಹೇಳಿ 1.30ಲಕ್ಷ ರೂ. ಕಿತ್ಕೊಂಡ್ರು

    ಚಿನ್ನದ ನಾಣ್ಯ ನೀಡೋದಾಗಿ ಹೇಳಿ 1.30ಲಕ್ಷ ರೂ. ಕಿತ್ಕೊಂಡ್ರು

    – ಶಿವಮೊಗ್ಗದಲ್ಲಿ ಇಬ್ಬರ ಬಂಧನ

    ಶಿವಮೊಗ್ಗ: ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ನಕಲಿ ನಾಣ್ಯಗಳನ್ನು ನೀಡಿದ ಆರೋಪದ ಮೇಲೆ ಸಾಗರ ಗ್ರಾಮಾಂತರ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ಹೊಸದುರ್ಗದ ಸತೀಶ್(28), ಕಡೂರಿನ ಮಂಜು (25) ಬಂಧಿತ ಆರೋಪಿಗಳು. ನಿತ್ಯಾನಂದ ಎಂಬವರಿಗೆ ಬಂಗಾರದ ನಾಣ್ಯ ನೀಡುವುದಾಗಿ ಹೇಳಿ 1 ಲಕ್ಷದ 30 ಸಾವಿರ ರೂ.ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

    ಇಂದು ಬೆಳಗ್ಗೆ ತ್ಯಾಗರ್ತಿ ಕ್ರಾಸ್ ಬಳಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 1 ಲಕ್ಷ ನಗದು, ಟಾಟಾ ಏಸ್ ವಾಹನ ಹಾಗೂ ನಕಲಿ ಬಂಗಾರವನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಮಾರಲು ಬಂದಿದ್ದು ಉದ್ದಿನ ಬೇಳೆ-ನಕಲಿ ಚಿನ್ನ ನೀಡಿ 91 ಸಾವಿರದೊಂದಿಗೆ ದಂಪತಿ ಎಸ್ಕೇಪ್

    ಮಾರಲು ಬಂದಿದ್ದು ಉದ್ದಿನ ಬೇಳೆ-ನಕಲಿ ಚಿನ್ನ ನೀಡಿ 91 ಸಾವಿರದೊಂದಿಗೆ ದಂಪತಿ ಎಸ್ಕೇಪ್

    ಗದಗ: ಉದ್ದಿನ ಬೇಳೆ ಮಾರಾಟ ನೆಪದಲ್ಲಿ ನಕಲಿ ಚಿನ್ನ ನೀಡಿ ಹಣ ಎಗರಿಸಿ, ಕಿಲಾಡಿ ದಂಪತಿ ಎಸ್ಕೆಪ್ ಆಗಿರುವ ಘಟನೆ ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ ನಡೆದಿದೆ.

    ಉದ್ದಿನ ಬೇಳೆ ಮಾರಾಟ ಮಾಡಲು ಬಂದಿದ್ದ ಚಾಲಾಕಿ ದಂಪತಿ ಹಿರೇಹಂದಿಗೋಳ ಗ್ರಾಮದ ನಿವಾಸಿ ಈರಮ್ಮ ಅವರಿಗೆ ಅಸಲಿ ಚಿನ್ನ ಎಂದು ನಂಬಿಸಿ ನಕಲಿ ನೀಡಿ ಮೋಸ ಮಾಡಿದ್ದಾರೆ. ದಂಪತಿಯ ಬಣ್ಣದ ಮಾತಿಗೆ ಮರುಳಾಗಿ ನಕಲಿ ಚಿನ್ನಕ್ಕೆ ಬರೋಬ್ಬರಿ 91 ಸಾವಿರ ಹಣ ಕೊಟ್ಟು ಮಹಿಳೆ ಮೋಸ ಹೋಗಿ ಕಣ್ಣೀರಿಡುತ್ತಿದ್ದಾರೆ.

    ಜಮೀನು ಲಾವಣಿ ಮಾಡಲು ಬ್ಯಾಂಕ್‍ನಿಂದ ಮಹಿಳೆ ಹಣ ತಂದಿದ್ದರು. ಇದೇ ವೇಳೆ ಗ್ರಾಮಕ್ಕೆ ಉದ್ದಿನ ಬೇಳೆ ಮಾರುವ ನೆಪದಲ್ಲಿ ಬಂದಿದ್ದ ದಂಪತಿ ಮಹಿಳೆ ಮನೆಗೂ ಮಾರಾಟಕ್ಕೆ ತೆರಳಿದ್ದರು. ಆಗ ಮಕ್ಕಳಿಗೆ ಕಿಡ್ನಿ ಸಮಸ್ಯೆ ಇದೆ. ಕಡಿಮೆ ಹಣದಲ್ಲಿ ಹತ್ತು ತೊಲೆ (100 ಗ್ರಾಂ) ಚಿನ್ನ ನೀಡುವುದಾಗಿ ಮಹಿಳೆಗೆ ಆಸೆ ತೋರಿಸಿದ್ದಾರೆ. ದಂಪತಿಯನ್ನ ನಂಬಿ ಮಹಿಳೆ ಬ್ಯಾಂಕ್‍ನಿಂದ ತಂದಿದ್ದ ಹಣ ನೀಡಿ ಚಿನ್ನ ಖರೀದಿಸಿದ್ದಾರೆ.

    ಚಿನ್ನವನ್ನು ಪರೀಕ್ಷಿಸಿ ನೋಡಿದಾಗ ನಕಲಿ ಎಂದು ತಿಳಿದು ಮಹಿಳೆ ಹಾಗೂ ಆಕೆಯ ಕುಟುಂಬಕ್ಕೆ ಶಾಕ್ ಆಗಿದೆ. ಕಡಿಮೆ ಹಣದಲ್ಲಿ ಚಿನ್ನ ಸಿಗುತ್ತಿದೆ ಎಂದು ಆಸೆಗೆ ಬಿದ್ದು ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಕಂಗಾಲಾಗಿದ್ದಾರೆ.

    ಸದ್ಯ ಈ ಸಂಬಂಧ ಮಹಿಳೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಖರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.