Tag: ನಕಲಿ ಬಾಬಾ

  • ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

    ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

    ಡೆಹ್ರಾಡೂನ್: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡ (Uttarakhand) ಸರ್ಕಾರ ʼಆಪರೇಷನ್ ಕಾಲನೇಮಿʼ (Operation Kalanemi) ಕಾರ್ಯಾಚರಣೆ ಆರಂಭಿಸಿದ್ದು, 82 ನಕಲಿ ಬಾಬಾಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಒಟ್ಟು 82 ಮಂದಿ ನಕಲಿ ಬಾಬಾಗಳನ್ನು ಬಂಧಿಸಲಾಗಿದೆ. ಭಾನುವಾರ ಬಂಧಿಸಿದ 34 ಜನರ ಪೈಕಿ 23 ಮಂದಿ ಇತರ ರಾಜ್ಯಗಳ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

    ಬಂಧಿತ ನಕಲಿ ಬಾಬಾಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಜನರ ಭಾವನೆಗಳ ಜೊತೆ ಆಟವಾಡುವ ಇಂತಹ ವಂಚಕರನ್ನು ಸೆರೆಹಿಡಿಯಲು ತಂಡವನ್ನು ರಚಿಸಲಾಗಿದ್ದು, ನಕಲಿ ಬಾಬಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ ಅಜಯ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

  • ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

    ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

    ರಾಮನಗರ: ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು. ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು.  ಇದನ್ನೂ ಓದಿ: ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

    ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ ಟ್ರಸ್ಟ್ ಹೆಸರಲ್ಲಿ ಇಲ್ಲಿಯವರೆಗೂ ಆರೋಪಿ ಸುಮಾರು 1.5 ಕೋಟಿ ರೂ. ಹಣ ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ತೋಟದ ಮನೆಯನ್ನೇ ತನ್ನ ಹೆಸರಿಗೆ ಬರೆದುಕೊಡುವಂತೆ ಸಿಂಧೂ ಅವರಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದು, ಪ್ರಕರಣ ಸಂಬಂಧ 7 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

    ಸಚಿನ್ ಅಕಾರಾಂ ಸರಗಾರ್ ಸಹಕರಿಸುತ್ತಿದ್ದ ವಿನಾಯಕ ರಾಜ್, ಸಾಯಿರಾಜ್, ಜಯಂತ್, ಯಶೋದಮ್ಮ, ಉಮಾಶಂಕರ್, ಪ್ರಶಾಂತ್ ಎನ್ನುವರರ ವಿರುದ್ಧ ಕೂಡ ದೂರು ದಾಖಲಾಗಿದೆ. ಸದ್ಯ ಹಣದ ಜೊತೆಗೆ ಎಸ್ಕೇಪ್ ಆಗಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಯುಕೆ ಹಿಂದಿಕ್ಕಿದ ಭಾರತ – ಈಗ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯ ದೇಶ

    Live Tv
    [brid partner=56869869 player=32851 video=960834 autoplay=true]

  • ಪತ್ನಿಯಿಂದ್ಲೇ ನಕಲಿ ಬಾಬಾನ ರಹಸ್ಯ ಬಯಲು – ಹಲವರ ಜೊತೆ ಅಕ್ರಮ ಸಂಬಂಧ

    ಪತ್ನಿಯಿಂದ್ಲೇ ನಕಲಿ ಬಾಬಾನ ರಹಸ್ಯ ಬಯಲು – ಹಲವರ ಜೊತೆ ಅಕ್ರಮ ಸಂಬಂಧ

    – ಹೆಂಡ್ತಿ ಬರುತ್ತಿದ್ದಂತೆ ಬುಲೆಟ್ ಬಾಬಾ ಎಸ್ಕೇಪ್

    ಯಾದಗಿರಿ: ಜಿಲ್ಲೆಯ ಗುರುಮಠಕಲ್ ಸಮೀಪದ ಕೇಶ್ವಾರ ಗ್ರಾಮದ ಹೊರವಲಯದಲ್ಲಿ ಸ್ವಯಂ ಘೋಷಿತ ಬುಲೆಟ್ ಬಾಬಾನ ಅಸಲಿ ಮುಖ ಇದೀಗ ಆತನ ಪತ್ನಿಯಿಂದಲೇ ಬಯಲಾಗಿದೆ.

    ಬುಲೆಟ್ ಬಾಬಾ ಅಲಿಯಾಸ್ ಜಾನು ರಾಜು, ಶಿವಾರೆಡ್ಡಿ ಎಂಬ ನಾನಾ ಹೆಸರಿನ ಈತ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಲೆಟ್ ಬಾಬಾ ಎಂದೇ ಪ್ರಸಿದ್ಧಿ ಪಡೆದುಕೊಂಡಿದ್ದನು. ಬಾಬಾನ ಹತ್ತಿರ ಯಾವುದೇ ಪವಾಡ ನಡೆಸುವ ಶಕ್ತಿಯಿಲ್ಲ. ಆತನೊಬ್ಬ ಮೋಸಗಾರ ಎಂದು ಆತನ ಪತ್ನಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.

    ಬುಲೆಟ್ ಬಾಬಾ ಅಲಿಯಾಸ್ ಶಿವಾರೆಡ್ಡಿ ಎಂದು ಹೆಸರು ಹೇಳಿಕೊಂಡು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದನು. ಈ ಬಾಬಾ ಮೊದಲಿಗೆ 5 ವರ್ಷಗಳ ಹಿಂದೆ ಯಾನಾಗುಂದಿಗೆ ಬಂದು ಅಲ್ಲಿಯೇ ಆಯುರ್ವೆದ ಔಷಧಿ ನೀಡುತ್ತಾ ಕೇಶ್ವಾರ ಗ್ರಾಮಸ್ಥರೊಬ್ಬರ ಮೂಲಕ ಗ್ರಾಮಕ್ಕೆ ಮಹಿಳೆಯೊಂದಿಗೆ ಬಂದು ವಾಸವಾಗಿದ್ದನು. ತದನಂತರ ಗ್ರಾಮದಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ತಾವೊಬ್ಬ ಬಾಬಾ ಆಗಿದ್ದು, ತನ್ನಲ್ಲಿ ಶಕ್ತಿ ಇದೆ ಎಂದು ನಂಬಿಸುತ್ತಿದ್ದನು. ಆತನ ಜೊತೆಗೆ ಬಂದ ಮಹಿಳೆಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡಿದ್ದನು. ಅಲ್ಲದೇ ಹಲವರಿಂದ ಹಣ ವಸೂಲಿ ಮಾಡಿಕೊಂಡಿದ್ದಾನೆ ಎಂಬ ಆರೋಪಗಳಿವೆ.

    ಅಷ್ಟೇ ಅಲ್ಲದೇ ಗ್ರಾಮದಲ್ಲಿ ಒಬ್ಬರ ಹೊಲದಲ್ಲಿ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿ ಅವರ ಹೊಲದಲ್ಲಿಯೇ ಆಶ್ರಮ ನಿರ್ಮಾಣ ಮಾಡಿದ್ದಾನೆ. ನಿತ್ಯವು ಬುಲೆಟ್ ವಾಹನದಲ್ಲಿ ದಟ್ಟನೆಯ ಕೂದಲು ಬಿಟ್ಟು ಓಡಾಡುತ್ತಿದ್ದನು. ಹೀಗಾಗಿ ಈತ ಬುಲೆಟ್ ಬಾಬಾ ಎಂದು ಪ್ರಸಿದ್ಧಿಯಾಗಿದ್ದನು. ಈತನ ಬಗ್ಗೆ ತಿಳಿದ ಪತ್ನಿ ಇಲ್ಲಿಗೆ ಬಂದು ಗ್ರಾಮಸ್ಥರಿಗೆ ಎಲ್ಲವನ್ನು ಹೇಳಿದ್ದಾರೆ. ಆದರೆ ಪತ್ನಿ ಬರುತ್ತಿದ್ದಂತೆ ನಕಲಿ ಬಾಬಾ ಪರಾರಿಯಾಗಿದ್ದಾನೆ.

    ಹಲವರ ಜೊತೆ ಅಕ್ರಮ ಸಂಬಂಧ
    ಈ ಬಾಬಾ ಮೂಲತಃ ಆಂಧ್ರ ಪ್ರದೇಶದ ವರಂಗಲ್‍ನ ಲೇಬರ್ ಕಾಲೋನಿಯ ನಿವಾಸಿ. ಈತನ ಹೆಸರು ಜನ್ನು ರಾಜು. 2003ರಲ್ಲಿ ಯುವತಿಯೊಂದಿಗೆ ಅಂತರಜಾತಿ ವಿವಾಹವಾಗಿದ್ದ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳು ಸಹ ಇದ್ದರು. ಸಂಸಾರ ಸರಿಯಾಗಿ ಸಾಗುತ್ತಿರುವಾಗಲೇ ಬೇರೆ ಹೆಣ್ಣಿನ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದನು. ಇದರಿಂದ ಇಬ್ಬರ ಮಧ್ಯೆ ಜಗಳವಾಗಿದ್ದು, ಬಳಿಕ ಅಲ್ಲಿಂದ ಪರಾರಿಯಾಗಿದ್ದನು.

    ಈ ಕುರಿತು ಮೊದಲ ಪತ್ನಿ 2015ರಲ್ಲಿಯೇ ತೆಲಂಗಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆರೋಪಿ ಬಾಬಾ ಅನೇಕ ಮಹಿಳೆಯ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ನಂತರ 2016ರಲ್ಲಿ ಮತ್ತು 2019ರಲ್ಲಿಯೂ ಇತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆಯಸ್ಸು ಹೆಚ್ಚಿಸ್ತೀನಿ ಅಂತ 2 ಬಾರಿ ಯುವತಿ ಮೇಲೆ ಅತ್ಯಾಚಾರ ಮಾಡಿದ ನಕಲಿ ಬಾಬಾ

    ಮುಂಬೈ: ಆಯಸ್ಸು ಹೆಚ್ಚುಸುವುದಾಗಿ ಹೇಳಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ನಕಲಿ ಬಾಬಾನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಧನಂಜಯ್ ಮಿಶ್ರಾ ಎಂದು ಗುರುತಿಸಲಾಗಿದೆ ಈ ಘಟನೆ ಜನವರಿ 14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮಿಶ್ರಾ ದೂರುದಾರ ಯುವತಿ ತಂದೆಯ ಸ್ನೇಹಿತರ ಮನೆಯಲ್ಲಿ ನೆಲೆಸಿದ್ದ. ಜನವರಿಯ ಎರಡನೇ ವಾರದಲ್ಲಿ ಸಂತ್ರಸ್ತೆಯ ಮನೆಗೆ ಬಂದು ಎಲ್ಲರ ಅಂಗೈಗಳನ್ನು ನೋಡಿ ಹೋಗಿದ್ದ. ನಂತರ ಅವರ ಮನೆಗೆ ಒಂದೆರಡು ಬಾರಿ ಭೇಟಿ ಮಾಡಿದ್ದಾನೆ. ಜನವರಿ 14 ರಂದು ಮತ್ತೆ ಸಂತ್ರಸ್ತೆಯ ಮನೆಗೆ ಬಂದು ಆಯಸ್ಸು ಹೆಚ್ಚಿಸಲು ಪೂಜೆಯನ್ನು ಮಾಡಬೇಕು ಎಂದು ಹೇಳಿದ್ದಾನೆ.

    ಆರೋಪಿ ಮಿಶ್ರಾ ಹೇಳಿದಂತೆ ಪೂಜೆಗೆ ಬೇಕಾದ ಎಲ್ಲಾ ಅಗತ್ಯ ಸಾಮಾಗ್ರಿಗಳನ್ನು ಒಂದು ಕೋಣೆಯಲ್ಲಿ ಸಿದ್ಧಪಡಿಸುವಂತೆ ಯುವತಿಗೆ ಹೇಳಿದ್ದಾನೆ. ಬಳಿಕ ಎಲ್ಲಾ ವಸ್ತುಗಳನ್ನು ಇಟ್ಟ ಮೇಲೆ ರೂಮಿನ ಬಾಗಿಲು ಮತ್ತು ಕಿಟಕಿ ಮುಚ್ಚಲು ಹೇಳಿದ್ದಾನೆ. ನಕಲಿ ಬಾಬಾ ಹೇಳಿದಂತೆ ಮಾಡಿ ಸಂತ್ರಸ್ತೆ ಪೂಜೆಗೆ ಕುಳಿತಿದ್ದಾರೆ.

    ಸ್ವಲ್ಪ ಸಮಯದ ನಂತರ ಅವನು ನನ್ನನ್ನು ವಶೀಕರಣ ಮಾಡಿ ತನ್ನ ಎಲ್ಲಾ ಉಡುಪುಗಳನ್ನು ತೆಗೆದುಹಾಕಿದ. ಅದೇ ರೀತಿ ನನಗೂ ಮಾಡಲು ಹೇಳಿದ. ನಂತರ ಅವನ ತೊಡೆಯ ಮೇಲೆ ಕುಳಿತು ಮಂತ್ರವನ್ನು ಓದಬೇಕೆಂದು ಹೇಳಿದ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾರೆ. ನಂತರ ಆರೋಪಿ ಮಿಶ್ರಾ ಸಂತ್ರಸ್ತೆ ಮೇಲೆ ಎರಡು ಬಾರಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ಸಹೋದರಿಯನ್ನು ರೂಮಿಗೆ ಕಳುಹಿಸುವಂತೆ ಹೇಳಿದ್ದಾನೆ. ಆಕೆಯ ಸಹೋದರಿ ರೂಮಿಗೆ ಬಂದಾಗ ನಕಲಿ ಬಾಬಾ ನಗ್ನವಾಗಿ ಕುಳಿತಿದ್ದನ್ನು ನೋಡಿದ್ದಾರೆ. ಆಕೆಗೂ ಬಟ್ಟೆ ತೆಗೆದು ಹಾಕಿ ತೊಡೆಯ ಮೇಲೆ ಕುಳಿತುಕೊಳ್ಳುವಂತೆ ಹೇಳಿದ್ದಾನೆ. ಆದರೆ ಇದಕ್ಕೆ ಸಹೋದರಿ ನಿರಾಕರಿಸಿದ್ದಾರೆ. ಆಗ ನಕಲಿ ಬಾಬಾ ಆಕೆಗೆ ಶಾಪ ಹಾಕಿ, ನಾನು ಹೇಳಿದಂತೆ ಮಾಡದಿದ್ದರೆ ಶೀಘ್ರದಲ್ಲಿಯೇ ಸಾಯುತ್ತೀಯಾ ಎಂದು ಹೇಳಿದ್ದಾನೆ.

    ಇಬ್ಬರೂ ಯುವತಿಯರು ಜನವರಿ 18 ರಂದು ಪೋಷಕರಿಗೆ ವಿಚಾರವನ್ನು ತಿಳಿಸಿದ್ದಾರೆ. ನಂತರ ಅವರು ಆಂಟೋಪ್ ಹಿಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 354, 376 ಮತ್ತು ಬ್ಲಾಕ್ ಮ್ಯಾಜಿಕ್ ಕಾಯ್ದೆಯ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಬಳಿಕ ಪೊಲೀಸರು ಈತ ಇತರ ಹುಡುಗಿಯರು ಅಥವಾ ಮಹಿಳೆಯರೊಂದಿಗೂ ಈ ರೀತಿಯ ಕೃತ್ಯ ಎಸಗಿದ್ದನೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.