Tag: ನಕುಲ್

  • ಸುಂದರ ಯುಗಳಗೀತೆಯಲ್ಲಿ ನಕುಲ್, ಮಾನ್ವಿತಾ

    ಸುಂದರ ಯುಗಳಗೀತೆಯಲ್ಲಿ ನಕುಲ್, ಮಾನ್ವಿತಾ

    ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘BAD’ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ‘ಮಾತಿಗೂ ಮಾತಿಗೂ’ ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಈಗಾಗಲೇ ಟೀಸರ್ ಹಾಗೂ ಟ್ರೈಲರ್ ಮೂಲಕ ಸದ್ದು ಮಾಡುತ್ತಿರುವ ಈ  ಚಿತ್ರ, ಹಾಡುಗಳ ಮೂಲಕವೂ ಜನಪ್ರಿಯವಾಗುತ್ತಿದೆ.

    ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ  ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ.  ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ  ಚಿತ್ರಕ್ಕೆ ಸಚಿನ್ ಜಡೇಶ್ವರ ಎಸ್ ಬಿ  ಸಂಭಾಷಣೆ ಬರೆದಿದ್ದಾರೆ.

    ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ  ನಕುಲ್ ಗೌಡ (Nakul)  ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್ (Manvita Kamat), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

  • ಲಂಚಕ್ಕೆ ಬೇಡಿಕೆ ಇಟ್ಟ ತಹಶೀಲ್ದಾರ್ ಅಮಾನತು

    ಲಂಚಕ್ಕೆ ಬೇಡಿಕೆ ಇಟ್ಟ ತಹಶೀಲ್ದಾರ್ ಅಮಾನತು

    ಬಳ್ಳಾರಿ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಹಶೀಲ್ದಾರ್ ಮೇಲೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ವಿಜಯಕುಮಾರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

    ಮರಳು ಲಾರಿಗೆ ಅನುಮತಿ ನೀಡುವ ಸಲುವಾಗಿ ತಾಲೂಕು ತಹಶೀಲ್ದಾರ್ ವಿಜಯಕುಮಾರ್ ಲಂಚ ಕೇಳಿದ್ದರು. ತಹಶೀಲ್ದಾರ್ ಲಂಚ ಕೇಳಿದ ವಿಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕಳೆದ 20 ದಿನಗಳ ಹಿಂದೆ ಹೂವಿನ ಹಡಗಲಿ ತಾಲೂಕಿನ ಉಮೇಶ್ ನಾಯಕ್ ಎಂಬವರ ಮರಳು ಲಾರಿಯನ್ನು ಸೀಜ್ ಮಾಡಲಾಗಿತ್ತು. ಮರಳು ಲಾರಿ ಬಿಡುವ ಸಲುವಾಗಿ ಉಮೇಶ್ ನಾಯಕ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಜಯಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

    ನನ್ನದು ವಾರದ ಲೆಕ್ಕ ಇಲ್ಲ, ನನ್ನ ಜೊತೆಯಲ್ಲಿ ಮಾತನಾಡಬೇಡಿ. 50-50 ಆದರೂ ಕೊಡುತ್ತೀರಾ ಎಂದು ಬೇಡಿಕೆ ಇಟ್ಟಿದ್ದರು. ತಹಶೀಲ್ದಾರ್ ವಿಜಯಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿತ್ತು. ಅಲ್ಲದೇ ಕರ್ಣಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ದೊಡ್ಡಮನಿ ಅವರು ಪತ್ರಿಕಾಗೋಷ್ಠಿ ನಡೆಸಿ ಕೂಡಲೇ ತಹಶೀಲ್ದಾರನ್ನು ಅಮಾನತು ಮಾಡುವಂತೆ ಒತ್ತಾಯ ಮಾಡಿ, ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರು ವಿಜಯಕುಮಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

  • ಮುಂಬೈ ಮೀನು ಮಾರುಕಟ್ಟೆಯಿಂದ ವಕ್ಕರಿಸಿದ ಕೊರೊನಾ – ಬಳ್ಳಾರಿಯಲ್ಲಿ 11 ಮಂದಿಗೆ ಸೋಂಕು

    ಮುಂಬೈ ಮೀನು ಮಾರುಕಟ್ಟೆಯಿಂದ ವಕ್ಕರಿಸಿದ ಕೊರೊನಾ – ಬಳ್ಳಾರಿಯಲ್ಲಿ 11 ಮಂದಿಗೆ ಸೋಂಕು

    ಬಳ್ಳಾರಿ: ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ವಾಪಸ್ಸಾಗಿ ಕ್ವಾರಂಟೈನ್‍ನಲ್ಲಿದ್ದ ಜಿಲ್ಲೆಯ 11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 30ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಓರ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬರು ಎಂಟು ತಿಂಗಳ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ. ಅವರೆಲ್ಲರನ್ನು ಬುಧವಾರ ರಾತ್ರಿಯೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಬಳ್ಳಾರಿ ನಗರದ 6, ಬಳ್ಳಾರಿ ತಾಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ 9 ತಿಂಗಳ ಹಸುಗೂಸಿನ ಜೊತೆ ಅಜ್ಜ-ಅಜ್ಜಿ ಬಳಿ ಇದ್ದರು. ಹೀಗಾಗಿ ಅವರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು. 11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ನಕುಲ್ ವಿವರಿಸಿದ್ದಾರೆ.

    ಮೇ 6 ರಂದು ಅನಂತಪುರದ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಅನ್ವಯ 65 ಜನರನ್ನು ಗುಂತಕಲ್ ರೈಲು ನಿಲ್ದಾಣದಿಂದ ನೇರವಾಗಿ ಕ್ವಾರಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲಾಗಿತ್ತು. ಹೀಗಾಗಿ ಅವರ ಊರುಗಳಲ್ಲಿ ಕಂಟೈನ್ಮೆಂಟ್ ಪ್ರದೇಶಗಳನ್ನು ಘೋಷಿಸುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

     

  • ಪ್ರೀತಿಯ ರಾಯಭಾರಿ: ಅತ್ಯಾಚಾರಿಗಳಿಗೆ ಕತ್ತರಿ!

    ಪ್ರೀತಿಯ ರಾಯಭಾರಿ: ಅತ್ಯಾಚಾರಿಗಳಿಗೆ ಕತ್ತರಿ!

    ಇಂಪಾದ ಹಾಡುಗಳಿಂದ ಗಮನಸೆಳೆದಿದ್ದ ಸಿನಿಮಾ ಪ್ರೀತಿಯ ರಾಯಭಾರಿ. ಇತ್ತೀಚೆಗೆ ಕನ್ನಡ ಸಿನಿಮಾಗಳಲ್ಲಿ ಕಥೆಯೇ ಇರೋದಿಲ್ಲ ಅಂತಾ ಕೊಂಕು ಮಾತಾಡುವವರಿಗೆ ಉತ್ತರವೆಂಬಂತೆ ಮೂಡಿ ಬಂದಿರುವ ಚಿತ್ರವಿದು.

    ಕಿತ್ತಾಟವಾಡುತ್ತಲೇ ಪ್ರೀತಿಯ ಬಲೆಯಲ್ಲಿ ಸಿಲುಕುವ ಜೋಡಿ ಅದು. ಇಂಥಾ ಪ್ರೇಮಿಗಳ ನಡುವೆ ಎಲ್ಲವೂ ಸರಿಯಿದ್ದರೂ ಸಮಾಜದ ಕ್ರೂರ ಕಣ್ಣುಗಳು ಹುಡುಗಿಯ ಮೇಲೆ ಬೀಳುತ್ತದೆ. ಮತ್ತದು ಆಕೆಯ ಬದುಕನ್ನೇ ಬಲಿ ತೆಗೆದುಕೊಳ್ಳುತ್ತದೆ.

    ಸಾಮಾನ್ಯಕ್ಕೆ ರಿವೆಂಜ್ ಕಿಲ್ಲಿಂಗ್ ಸ್ಟೋರಿಗಳು ಬೇರೆಯದ್ದೇ ರೀತಿಯಲ್ಲಿರುತ್ತವೆ. ಜನ್ಮಾಂತರದ ರಿವೆಂಜ್ ಕಿಲ್ಲಿಂಗ್ ಸ್ಟೋರಿಗಳೂ ಸಾಕಷ್ಟು ಬಂದಿವೆ. ಆದರೆ ಪ್ರೀತಿಯ ರಾಯಭಾರಿ ಸ್ವಲ್ಪ ಭಿನ್ನ. ಪ್ರೀತಿಸಿದವಳ ಜೀವ ತೆಗೆದವರ ಹುಡುಕಾಡಿ ಬಡಿತಾನೆ. ಬರೀ ಹೊಡೆದಾಟ ಮಾತ್ರವಲ್ಲ, ಕಂಡವರ ಮನೆ ಹೆಣ್ಣುಮಕ್ಕಳನ್ನು ಯಾವತ್ತೂ ಕಾಕದೃಷ್ಟಿಯಿಂದ ನೋಡಬಾರದು ಅಂಥಾ ಘೋರ ಶಿಕ್ಷೆಗೆ ಗುರಿಪಡಿಸುತ್ತಾನೆ.

    ಎಂ.ಎಂ. ಮುತ್ತು ನಿರ್ದೇಶನದ ಮೊದಲ ಚಿತ್ರ ಇದಾದರೂ ಈ ಹಿಂದೆ ಅವರು ಅನುಭವಿ ನಿರ್ದೇಶಕರೊಟ್ಟಿಗೆ ಕೆಲಸ ಮಾಡಿದ ಅನುಭವವನ್ನೆಲ್ಲಾ ಇಲ್ಲಿ ಧಾರೆಯೆರೆದಿದ್ದಾರೆ. ಹೊಸ ಹೀರೋನನ್ನು ನಟನೆಯಲ್ಲಿ ಪಳಗಿಸಿರೋದು ಮುತ್ತು ಹೆಚ್ಚುಗಾರಿಕೆ. ಇನ್ನು ನಾಯಕಿ ಅಂಜನಾ ದೇಶಪಾಂಡೆ ಪಾತ್ರ ಮತ್ತು ನಟನೆ ಎಂಥವರ ಕಣ್ಣಲ್ಲೂ ನೀರುಕ್ಕಿಸುತ್ತದೆ.

    ಒಟ್ಟಾರೆಯಾಗಿ ಇವತ್ತಿನ ಸಮಾಜಕ್ಕೆ ತಲುಪಲೇಬೇಕಿರುವ ಅಂಶಗಳನ್ನು ಮುತ್ತು ಸಮರ್ಥವಾಗಿ ತೆರೆ ಮೇಲೆ ಕಟ್ಟಿಕೊಟ್ಟಿದ್ದಾರೆ. ನಾಯಕ ನಕುಲ್ ಡ್ಯಾನ್ಸ್ ಮತ್ತು ಫೈಟ್ಸ್ ಗೆ ಎಂಥವರೂ ಫಿದಾ ಆಗೋದು ಗ್ಯಾರೆಂಟಿ.