Tag: ನಕ್ಸಲೈಟ್

  • ಚಿಕ್ಕಮಗಳೂರಿನಲ್ಲಿ ಶರಣಾಗುತ್ತಿರುವ 6 ನಕ್ಸಲರ ಹಿನ್ನೆಲೆ ಏನು? ಅವರ ಮೇಲೆ ಎಷ್ಟು ಕೇಸ್‌ಗಳಿವೆ?

    ಚಿಕ್ಕಮಗಳೂರಿನಲ್ಲಿ ಶರಣಾಗುತ್ತಿರುವ 6 ನಕ್ಸಲರ ಹಿನ್ನೆಲೆ ಏನು? ಅವರ ಮೇಲೆ ಎಷ್ಟು ಕೇಸ್‌ಗಳಿವೆ?

    ಚಿಕ್ಕಮಗಳೂರು: ಕರ್ನಾಟಕದಲ್ಲಿ ಆರು ನಕ್ಸಲರು (Six Naxals) ಮುಖ್ಯ ವಾಹಿನಿಗೆ ಬರಲು ಮುಂದಾಗಿದ್ದಾರೆ. ವಿಕ್ರಂಗೌಡ (Vikram Gowda) ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಕರ್ನಾಟಕದ (Karnataka) ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ ಮತ್ತು ಕೇರಳದ ಟಿಎನ್ ಜೀಶಾ ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಒಪ್ಪಿದ್ದಾರೆ.

    ಇಂದು ಬೆಳಗ್ಗೆ ಆರು ನಕ್ಸಲರು ಚಿಕ್ಕಮಗಳೂರು (Chikkamagaluru) ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಈಗಾಗಲೇ ನಕ್ಸಲರ ಜೊತೆ ಶರಣಾಗತಿ ಸಮಿತಿ ಮತ್ತು ಶಾಂತಿಗಾಗಿ ನಾಗರೀಕ ಸಮಿತಿ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಇದನ್ನೂ ಓದಿ: ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ


    ಯಾರ ಮೇಲೆ ಏನು ಕೇಸ್‌?
    ಮುಂಡಗಾರು ಲತಾ (Mundagaru Latha) ವಿರುದ್ಧ 59 ಪ್ರಕರಣಗಳು ದಾಖಲಾಗಿವೆ. ಸುಂದರಿ (Sundari) ವಿರುದ್ಧ ಉಡುಪಿ, ದ.ಕನ್ನಡದಲ್ಲಿ 3 ಕೇಸ್‌ಗಳು, ಜಯಣ್ಣ ಮೇಲೆ ಉಡುಪಿ, ಮಂಗಳೂರಿನಲ್ಲಿ 3 ಪ್ರಕರಣಗಳಿವೆ, ವನಜಾಕ್ಷಿ ವಿರುದ್ಧ15 ಕೇಸ್‌ ದಾಖಲಾಗಿವೆ. ಕೆ.ವಸಂತ ಮತ್ತು ಟಿ.ಎನ್. ಜೀಶಾ ವಿರುದ್ಧ ಹಲವು ಕೇಸ್‌ಗಳಿವೆ.

    ಮುಂಡಗಾರು ಲತಾ
    ಮುಂಡಗಾರು ಲತಾ ಶೃಂಗೇರಿಯ ಜೆ.ಸಿ.ಬಿ.ಎಂ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಬಳಿಕ ಪಿಯುಸಿ ವ್ಯಾಸಂಗ ಅರ್ಧಕ್ಕೆ ಮೊಟಕುಗೂಳಿಸಿದ್ದಾರೆ. ಕುದುರೆಮುಖ ವಿಮೋಚನಾ ಚಳುವಳಿ ಮುಖಾಂತರ ನಕ್ಸಲ್ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಉಳಿಸಿ ವಿರೋಧಿ ಹೋರಾಟ ಸಮಿತಿಯ ನಾಯಕಿಯಾಗಿದ್ದರು.

    ಸುಂದರಿ
    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುತ್ಲೂರಿನ ನಿವಾಸಿಯಾಗಿದ್ದ ಸುಂದರಿ ಸಹೋದರ ವಸಂತ ಅಲಿಯಾಸ್ ಆನಂದ್ ಕೂಡ ನಕ್ಸಲ್ ಆಗಿದ್ದನು. ಸಹೋದರನ ಹಿಂದೆಯೇ ಸುಂದರಿ ಕೂಡ ನಕ್ಸಲ್ ಚಟುವಟಿಕೆಗೆ ಎಂಟ್ರಿಯಾಗಿದ್ದರು. 2010ರ ಎನ್‌ಕೌಂಟರ್‌ನಲ್ಲಿ ಆನಂದ್ ಹತ್ಯೆಯಾಗಿದ್ದ. ಸದ್ಯ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಾಯಕಿ ಸುಂದರಿ ಇದ್ದಾರೆ.

    ವನಜಾಕ್ಷಿ
    ಭೂ ಮಾಲೀಕರ ವಿರುದ್ಧ ಹೋರಾಟಕ್ಕೆ ಧುಮುಕಿ ನಕ್ಸಲರ ಹಾದಿಗೆ ಎಂಟ್ರಿ. ವಿದ್ಯಾಭ್ಯಾಸಕ್ಕೂ ಕೊರತೆಯಾಗಿದ್ದ ವನಜಾಕ್ಷಿ ಉಳ್ಳವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ನಕ್ಸಲಿಸಂಗೆ ಎಂಟ್ರಿಯಾಗಿ ಅಲ್ಲಿಂದ ಹೋರಾಟದಲ್ಲಿ ನಿರಂತರವಾಗಿ ಸಾಗಿದ್ದರು.


    ಮಾರೆಪ್ಪ ಅರೋಳಿ @ ಜಯಣ್ಣ
    ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರೋಳಿ ಗ್ರಾಮದ ನಿವಾಸಿಯಾ ಮಾರೆಪ್ಪ ಬಡವರ ಮೇಲೆ ಶ್ರೀಮಂತರ ದಬ್ಬಾಳಿಕೆ ವಿರೋಧಿಸಿ ನಕ್ಸಲಿಸಂಗೆ ಎಂಟ್ರಿಯಾಗಿದ್ದರು. ಪಶ್ಚಿಮ ಘಟಗಳ ಆದಿವಾಸಿಗಳ ಹಕ್ಕುಗಳಿಗೆ ನಕ್ಸಲ್ ಚಳುವಳಿಯಲ್ಲಿ ಭಾಗಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಉಳಿಸಿ ವಿರೋಧಿ ಹೋರಾಟದಲ್ಲೂ ಸಕ್ರಿಯ

    ಕೆ.ವಸಂತ
    ಮೂಲತಃ ತಮಿಳುನಾಡಿನವರಾಗಿರುವ ಕೆ ವಸಂತ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಉಳಿಸಿ ವಿರೋಧಿ ಹೋರಾಟದಲ್ಲಿ ಸಕ್ರಿಯ.

    ಟಿ.ಎನ್. ಜೀಶಾ
    ಕೇರಳದ ಮೂಲದವರಾಗಿದ್ದು ನಕ್ಸಲ್ ಹೋರಾಟದ ಮೂಲಕ ರಾಜ್ಯಕ್ಕೆ ಎಂಟ್ರಿ. ಕರ್ನಾಟಕದ ಕರಾವಳಿ ಭಾಗದ ಹೋರಾಟದಲ್ಲೂ ಸಕ್ರಿಯ.

  • ನಕ್ಸಲೈಟನ್ನು ಬೇರು ಸಮೇತ ಕಿತ್ತುಹಾಕಬೇಕು: ಲಕ್ಷ್ಮೀ ಹೆಬ್ಬಾಳ್ಕರ್

    ನಕ್ಸಲೈಟನ್ನು ಬೇರು ಸಮೇತ ಕಿತ್ತುಹಾಕಬೇಕು: ಲಕ್ಷ್ಮೀ ಹೆಬ್ಬಾಳ್ಕರ್

    ಉಡುಪಿ: ನಕ್ಸಲೈಟನ್ನು (Naxalite) ಬೇರು ಸಮೇತ ಕಿತ್ತುಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಎನ್ ಕೌಂಟರ್ ಬಗ್ಗೆ ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ.

    ಉಡುಪಿಯಲ್ಲಿ (Udupi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಕ್ಸಲೈಟ್‌ಗಳನ್ನು ಕಟ್ಟಿ ಹಾಕಬೇಕು. ಇದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷದಿಂದ ಯತ್ನಾಳ್‌ ಉಚ್ಚಾಟಿಸಿ; ಬಿಜೆಪಿ ಕಾರ್ಯಕರ್ತರಿಂದ ಆಗ್ರಹ

    ವಿಕ್ರಂಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಪ್ರಾಣಹಾನಿ ಆಗುತ್ತಿತ್ತು. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ. ನ್ಯಾಯಾಂಗ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ. ನ್ಯಾಯಾಂಗ ತನಿಖೆಗೆ ಕೊಡುವುದು ಸರ್ಕಾರದ ತೀರ್ಮಾನ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರ ಬಳಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್‌

  • 21 ವರ್ಷಗಳಿಂದ ಭೂಗತನಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್‌ನನ್ನ ಹಿಡಿದುಕೊಟ್ಟ ಕಾಡಾನೆ!

    21 ವರ್ಷಗಳಿಂದ ಭೂಗತನಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್‌ನನ್ನ ಹಿಡಿದುಕೊಟ್ಟ ಕಾಡಾನೆ!

    ಚಿಕ್ಕಮಗಳೂರು: 21 ವರ್ಷದಿಂದ ಭೂಗತನಾಗಿ ನಕ್ಸಲ್ (Naxalite) ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್ ಕಾಡಾನೆಯಿಂದ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾನೆ.

    ಸುರೇಶ್ ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (Mudigere)  ತಾಲೂಕಿನ ಅಂಗಡಿ ಗ್ರಾಮದವನು. 2003ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಸುರೇಶ್ ಕಳೆದ 21 ವರ್ಷಗಳಿಂದ ನಾಪತ್ತೆಯಾಗಿದ್ದ. ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರು ಈ ಮೋಸ್ಟ್ ವಾಂಟೆಡ್ ನಕ್ಸಲ್‌ಗಾಗಿ ಹುಡುಕಾಡುತ್ತಿದ್ದರು. ಆದರೆ ಕಳೆದ 21 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದು, ಇದೀಗ ಕಾಡಾನೆಯಿಂದ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ:  24ರ ಯುವಕನ ಜೊತೆ 14 ವರ್ಷದ ಬಾಲಕಿ ಮದುವೆ

    ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದನು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದನು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ. ಇದನ್ನೂ ಓದಿ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ

    ಶುಕ್ರವಾರ ಸುರೇಶ್ ತನ್ನ ನಕ್ಸಲ್ ತಂಡದೊಂದಿಗೆ ಕೇರಳದ ಕಣ್ಣೂರಿನ ಕಂಚಿಕೊಲ್ಲಿ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಗಳು ನಕ್ಸಲರ ಮೇಲೆ ದಾಳಿ ಮಾಡಿವೆ. ಆನೆ ದಾಳಿಯಿಂದ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಳಿಕ ಆತನನ್ನು ಉಳಿದ ನಕ್ಸಲರು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಗೊಂಡ ಸುರೇಶ್ ನಡೆಯಲಾಗದೇ ಕಾಡಿನಲ್ಲೇ ಇದ್ದ. ಇದನ್ನೂ ಓದಿ: ಏಕಾಏಕಿ ಮಲ್ಲಿಕಾರ್ಜುನ ಖರ್ಗೆಗೆ Z+ ಸೆಕ್ಯೂರಿಟಿ

    ಆತನನ್ನು ಸ್ಥಳೀಯ ಆದಿವಾಸಿಗಳು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೇರಳ ಪೊಲೀಸರು ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಅನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ನಕ್ಸಲ್ ಸುರೇಶ್ ಕಣ್ಣೂರಿನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

  • 2 ದಶಕಗಳಿಂದ ನಾಪತ್ತೆಯಾಗಿದ್ದ ನಕ್ಸಲ್‌ ಶ್ರೀಮತಿಗೆ ನ್ಯಾಯಾಂಗ ಬಂಧನ

    2 ದಶಕಗಳಿಂದ ನಾಪತ್ತೆಯಾಗಿದ್ದ ನಕ್ಸಲ್‌ ಶ್ರೀಮತಿಗೆ ನ್ಯಾಯಾಂಗ ಬಂಧನ

    ಚಿಕ್ಕಮಗಳೂರು: ಹಲವು ವರ್ಷಗಳಿಂದ ಭೂಗತಳಾಗಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ನಕ್ಸಲ್ (Naxal) ಶ್ರೀಮತಿಗೆ (Shrimati) ಎನ್.ಆರ್.ಪುರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

    ಕಳೆದ ಎರಡು ದಶಕಗಳಿಂದ ಶ್ರೀಮತಿ 2002ರಿಂದ ನಾಪತ್ತೆಯಾಗಿದ್ದಳು. ಆಕೆ ಮೇಲೆ ಚಿಕ್ಕಮಗಳೂರು (Chikkmagaluru) ಜಿಲ್ಲೆಯೊಂದರಲ್ಲೇ 12ಕ್ಕೂ ಹೆಚ್ಚು ಪ್ರಕರಣಗಳ ದಾಖಲಾಗಿದ್ದವು.

    ಮಲೆನಾಡಲ್ಲಿ ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿಯನ್ನ ನಷ್ಟ ಮಾಡಿದ್ದು, ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಆಯುಧಗಳನ್ನ ಶೇಖರಣೆ ಮಾಡಿದ್ದು, ಟೆಂಟ್ ಹಾಕಿದ್ದು, ಗನ್ ತೋರಿಸಿ ಹೆದರಿಸಿ ಹಣ, ಆಹಾರ ಸಾಮಗ್ರಿಗಳನ್ನ ತೆಗೆದುಕೊಂಡು ಹೋಗಿದ್ದು, ಪೊಲೀಸರನ್ನು ಬೆಂಬಲಿಸದಂತೆ ಹಳ್ಳಿಗರನ್ನ ಹೆದರಿಸಿದ ಪ್ರಕರಣ ಸೇರಿ 12ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.  ಇದನ್ನೂ ಓದಿ: ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್‌ – ಸುರಂಗ, ಸ್ಕೈಡೆಕ್‌ ಯೋಜನೆಗೆ ಸಿಕ್ಕಿಲ್ಲ ಸ್ಪಷ್ಪತೆ

    ಕಳೆದ ತಿಂಗಳ ಹಿಂದೆ ಕೇರಳದಲ್ಲಿ ಕಾಡಿನಲ್ಲಿ ನಕ್ಸಲ್ ನಿಗ್ರಹ ದಳ ಹಾಗೂ ಪೊಲೀಸ ಕೂಂಬಿಂಗ್ ಮಾಡುತ್ತಿದ್ದ ವೇಳೆ ಶ್ರೀಮತಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಕೇರಳ ಪೊಲೀಸರು ತನಿಖೆ ಬಳಿಕ ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರಿಗೆ ನೀಡಿದ್ದರು.

    ವಿಚಾರಣೆ ಬಳಿಕ ಆಕೆಯನ್ನ ಶೃಂಗೇರಿ ಪೊಲೀಸರ ಸುಪರ್ದಿಗೆ ನೀಡಿದ್ದರು. ಶೃಂಗೇರಿ ಪೊಲೀಸರು ಶೃಂಗೇರಿ ನ್ಯಾಯಾಧೀಶರು ಇಲ್ಲದ ಕಾರಣ ಎನ್.ಆರ್.ಪುರ ಕೋರ್ಟಿಗೆ ಹಾಜರುಪಡಿಸಿದ್ದರು. ಇದನ್ನೂ ಓದಿ: ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ – ರಿಷಬ್ ಶೆಟ್ಟಿಗೆ ವಿಹೆಚ್‌ಪಿ, ಬಜರಂಗ ದಳ ಎಚ್ಚರಿಕೆ

    ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆಕೆಯನ್ನ ವಶಕ್ಕೆ ಪಡೆದ ಪೊಲೀಸರು ಇಂದು ಆಕೆ ಮೇಲಿರುವ ಪ್ರಕರಣಗಳ ಸಂಬಂಧ ಸ್ಥಳ ಮಹಜರ್ ಗೆ ಕರೆದೊಯ್ದಿದ್ದಾರೆ. ತನಿಖೆ ಬಳಿ ಆಕೆಯನ್ನ ಕೇರಳ ಪೊಲೀಸರಿಗೆ ಹಿಂದಿರುಗಿಸಲಿದ್ದಾರೆ.

  • ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ: ಯತ್ನಾಳ್ ಕಿಡಿ

    ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ: ಯತ್ನಾಳ್ ಕಿಡಿ

    ಚಾಮರಾಜನಗರ: ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ (Naxalite) ಆಗಬೇಕಿತ್ತು. ಕಮ್ಯೂನಿಸ್ಟ್ (Communist) ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

    ಚಾಮರಾಜನಗರ (Chamarajanagar) ಜಿಲ್ಲೆ ಬರ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಗಣಪತಿ ನಮ್ಮ ಸಂಸ್ಕೃತಿಯಲ್ಲ ಎಂಬ ಸಾಣೇಹಳ್ಳಿ ಶ್ರೀ (Sanehalli Shree) ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ಬಿಗ್ ರಿಲೀಫ್

    ರಾಜ್ಯೋತ್ಸವ ಪ್ರಶಸ್ತಿ ಸಲುವಾಗಿ ಕೆಲವು ಮಠಾಧೀಶರು ಹಿಂದೂ ವಿರೋಧಿ ಹೇಳಿಕೆ ಕೊಡುತ್ತಿದ್ದಾರೆ. ಮುಂದಿನ ಬಾರಿಯಾದರೂ ಕೊಡಲಿ ಎಂಬುದು ಅವರ ಉದ್ದೇಶವಾಗಿದೆ. ಈಗಾಗಲೇ ಒಬ್ಬ ಸ್ವಾಮೀಜಿಗೆ ಕೊಟ್ಟಿದ್ದಾರೆ. ಪ್ರಶಸ್ತಿ, ಜೀವನ ವೆಚ್ಚ ಎಲ್ಲವನ್ನೂ ಕೊಡುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೋದಿಗೆ ನಾಚಿಕೆ ಆಗಬೇಕು: ಹೆಚ್‌ಕೆ ಪಾಟೀಲ್ ಕಿಡಿ

    ಹಿಂದೂ ಧರ್ಮದ ವಿರುದ್ಧ ಮಾತನಾಡಲೂ ಪೇಯ್ಡ್ ಸಾಹಿತಿಗಳಿದ್ದರೆ, ಪೇಯ್ಡ್ ಭಗವಾಧ್ವಜ ಹಾಕಿಕೊಂಡ ಕಳ್ಳರಿದ್ದಾರೆ. ಹಿಂದೂ ವಿರೋಧಿ ಹೇಳಿಕೆ ಕೊಟ್ಟರೆ ಮಠಕ್ಕೆ ಕೋಟ್ಯಂತರ ರೂ. ಅನುದಾನ ಕೊಡುತ್ತಾರೆ ಎಂಬ ನಂಬಿಕೆ. ಹೀಗಾಗಿ ಹಿಂದೂ ಸನಾತನ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದುರಾಡಳಿತ ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಬರ ಅಧ್ಯಯನ ತಂಡದಿಂದ ಹೊರಗಿಟ್ಟಿದ್ದಾರೆ: ರೇಣುಕಾಚಾರ್ಯ ಅಸಮಾಧಾನ

  • ನಕ್ಸಲೈಟ್ ಕುರಿತಾದ ಸಿನಿಮಾ ಕೈಗೆತ್ತಿಕೊಂಡ ‘ದಿ ಕೇರಳ ಸ್ಟೋರಿ’ ಡೈರೆಕ್ಟರ್

    ನಕ್ಸಲೈಟ್ ಕುರಿತಾದ ಸಿನಿಮಾ ಕೈಗೆತ್ತಿಕೊಂಡ ‘ದಿ ಕೇರಳ ಸ್ಟೋರಿ’ ಡೈರೆಕ್ಟರ್

    ತ್ತೀಚೆಗಷ್ಟೇ ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಿರ್ದೇಶಕ ಸುದೀಪ್ತೊ ಸೇನ್ (Sudipto Sen) ಮತ್ತೊಂದು ಸಿನಿಮಾ ಘೋಷಣೆ (New Movie) ಮಾಡಿದ್ದರು. ಆ ಚಿತ್ರಕ್ಕೆ ಬಸ್ತರ್ ಎಂದೂ ಹೆಸರಿಟ್ಟಿದ್ದರು.  ಈ ಕುರಿತು ಸ್ವತಃ ನಿರ್ದೇಶಕರೇ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದರು. ಆದರೆ, ಈ ಸಿನಿಮಾ ಯಾವುದರ ಕುರಿತು ಎನ್ನುವ ಮಾಹಿತಿ ಸಿಕ್ಕಿರಲಿಲ್ಲ.

    ನಿರ್ದೇಶಕರು ಆಪ್ತರು ಹೇಳುವಂತೆ ಇದೊಂದು ನಕ್ಸಲೈಟ್ ಕುರಿತಾದ ಸಿನಿಮಾವಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಕಮ್ಯೂನಿಸ್ಟ್ ಪಾರ್ಟಿಯ ಧ್ವಜವನ್ನು ಹಾಕಲಾಗಿದೆ. ಅಲ್ಲದೇ, ನಕ್ಸಲೈಟ್ ಸಿನಿಮಾ ಎನ್ನುವ ಕುರಿತು ಹಲವು ಕುರುಹುಗಳನ್ನು ಪೋಸ್ಟರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ನಕ್ಸಲೈಟ್ ಕುರಿತಾದ ಸಿನಿಮಾ ಇದಾಗಿದೆ ಎನ್ನುವ ಮಾತು ಕೇಳಿ ಬಂದಿದೆ.

    ಈಗಾಗಲೇ ಬಸ್ತರ್ (Bastar)  ಸಿನಿಮಾದ ಕೆಲಸಗಳು ಸದ್ದಿಲ್ಲದೇ ಶುರುವಾಗಿವೆ ಎಂದು ಹೇಳಲಾಗಿದ್ದು, ಏಪ್ರಿಲ್ 5, 2024ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಿದೆ ಚಿತ್ರತಂಡ. ಇದು ಕೂಡ ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, ನಿರ್ದೇಶಕರು ಈ ಸಿನಿಮಾದಲ್ಲಿ ಯಾವ ರೀತಿಯ ಕಥೆಯನ್ನು ಹೇಳಬಹುದು ಎನ್ನುವ ಕುತೂಹಲ ಮೂಡಿದೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಕಡಿಮೆ ಬಜೆಟ್ ನಲ್ಲಿ ತಯಾರಾದ ದಿ ಕೇರಳ ಸ್ಟೋರಿ ಸಿನಿಮಾ ಕಡಿಮೆ ಅವಧಿಯಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿತು. ವಿವಾದ, ಬೈಕಾಟ್, ಬ್ಯಾನ್ ನಡುವೆಯೂ ಹಲವು ರಾಜ್ಯಗಳಲ್ಲಿ ಇದು ತುಂಬಿದ ಪ್ರದರ್ಶನ ಕಂಡಿತು. ಕೆಲ ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದರಿಂದ ಹೆಚ್ಚಿನ ಮೊತ್ತ ನಿರ್ಮಾಪಕರಿಗೆ ಹರಿದು ಬಂದಿತ್ತು.

     

    ಈಗ ಹೊಸದಾಗಿ ತಯಾರಿಸಲು ಹೊರಟಿರುವ ಬಸ್ತರ್ ಸಿನಿಮಾ ಕೂಡ ಮತ್ತೊಂದು ಕಾರಳ ಮುಖವನ್ನು ಬಿಚ್ಚಿಡಲಿದೆ ಎಂದು ಹೇಳಲಾಗುತ್ತಿದೆ. ಸುಳ್ಳಿನ ಹಿಂದಿರುವ ಸತ್ಯವನ್ನು ಈ ಸಿನಿಮಾ ಮೂಲಕ ಹೇಳುವುದಾಗಿ ಪೋಸ್ಟರ್ ನಲ್ಲಿಯೇ ಚಿತ್ರತಂಡ ತಿಳಿಸಿದೆ. ಹಾಗಾಗಿ ಯಾವ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ವಿಕ್ರಮ್ ಗೌಡ ಮುಗ್ಧ, ಗೌರಿಯನ್ನು ಕೊಲೆ ಮಾಡಲು ಸಾಧ್ಯವಿಲ್ಲ: ನೂರ್ ಶ್ರೀಧರ್

    ವಿಕ್ರಮ್ ಗೌಡ ಮುಗ್ಧ, ಗೌರಿಯನ್ನು ಕೊಲೆ ಮಾಡಲು ಸಾಧ್ಯವಿಲ್ಲ: ನೂರ್ ಶ್ರೀಧರ್

    ಬೆಂಗಳೂರು: ವಿಕ್ರಮ್ ಗೌಡ ಓರ್ವ ಆದಿವಾಸಿ ಯುವಕನಾಗಿದ್ದು ಯಾವುದೇ ಕಾರಣಕ್ಕೂ ಆತ ಗೌರಿ ಲಂಕೇಶ್ ಅವರನ್ನು ಕೊಲೆ ಮಾಡಲು ಸಾಧ್ಯವಿಲ್ಲ ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

    ಗೌರಿ ಹತ್ಯೆಯನ್ನು ನಕ್ಸಲರು ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

    ಇಂದೂ ಕೂಡ ಎಲ್ಲಾ ನಕ್ಸಲಿಯರಿಗೂ ಗೌರಿ ಮೇಲೆ ಅಭಿಮಾನವಿದೆ. ಆದರೆ ಈಗ ಸದ್ಯ ವಿಕ್ರಮ್‍ಗೌಡ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಈತ ಮುಗ್ಧನಾಗಿದ್ದು, ಯಾವುದೇ ಕಾರಣಕ್ಕೂ ಕೊಲೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಗೌರಿ ಹತ್ಯೆಯಲ್ಲಿ ಸಂಘ ಪರಿವಾರದ ಪಾತ್ರ ನೇರವಾಗಿದೆ. ಶಿವಮೊಗ್ಗದಲ್ಲಿ ನಡೆದ ಸಾಹಿತ್ಯ ಪರಿಷತ್ ನಲ್ಲಿ ಸಂಘ ಪರಿವಾರದವರು ಮಾತನಾಡಲು ಅವಕಾಶ ನೀಡಿರಲಿಲ್ಲ. ಈಗ ಕೂಡ ಗೌರಿ ಹತ್ಯೆಯನ್ನು ಸಂಭ್ರಮಿಸುತ್ತಿದ್ದಾರೆ. ಸದ್ಯ ತನಿಖೆ ಗೌರಿ ಹತ್ಯೆಯನ್ನು ಸಂಭ್ರಮಿಸುತ್ತಿರುವವರನ್ನು ತನಿಖೆ ಮಾಡಬೇಕು. ಆರ್‍ಎಸ್‍ಎಸ್ ಕಚೇರಿಯಿಂದಲೇ ತನಿಖೆ ಆರಂಭವಾಗಬೇಕು ಎಂದು ನೂರ್ ಶ್ರೀಧರ್ ಆಗ್ರಹಿಸಿದರು.

    ಭಾರೀ ಒತ್ತಡದ ನಡುವೆ ಈ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ನಮ್ಮ ಮೇಲೆ ಕೂಡ ಕೊಲೆ ಬೆದರಿಕೆ ಇದೆ. ಆದರೆ ಸತ್ಯವನ್ನು ತಿಳಿಸಲು ನಿಮ್ಮ ಮುಂದೆ ಬಂದಿದ್ದೇವೆ. ನಕ್ಸಲ್ ಕೂಟ ಮಾಫಿಯಾ ಕೂಟವಲ್ಲ. ಇದು ಕೂಡ ರಾಜಕೀಯ ಪಕ್ಷವಾಗಿದ್ದು ಆದ್ರೆ ಭೂಗತವಾಗಿ ಕೆಲಸ ಮಾಡುತ್ತದೆ. ಸದ್ಯ ದೇಶಾದ್ಯಂತ ಐವತ್ತಕ್ಕೂ ಹೆಚ್ಚು ನಕ್ಸಲ್ ಗುಂಪುಗಳಿದ್ದು ಗೌರಿ ಹತ್ಯೆಯಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.

    ನಕ್ಸಲರು ಹತ್ಯೆ ಮಾಡಿದ್ದೆ ಆಗಿದ್ದರೆ ಅಲ್ಲಿ ಕರ ಪತ್ರ ಸಿಗುತ್ತದೆ ಅಥವಾ ಹೇಳಿಕೆ ಬಿಡುಗಡೆ ಮಾಡುತ್ತಾರೆ. ಇಲ್ಲಿ ಆ ರೀತಿಯ ಯಾವುದೇ ಸುಳಿವು ಸಿಕ್ಕಿಲ್ಲ. ನಕ್ಸಲರ ಇತಿಹಾಸದಲ್ಲಿ ಇದೂವರೆಗೆ ಯಾವುದೇ ಪತ್ರಕರ್ತರ ಮೇಲೆ ದಾಳಿ ಮಾಡಿದ ಉದಾಹರಣೆ ಇಲ್ಲ. ಗೌರಿಯನ್ನು ಕೊಲ್ಲಲು ಯಾವುದೇ ವಿವಾದವಾಗಲಿ ಅಥವ ನಕ್ಸಲರ ಜೊತೆ ಯಾವುದೇ ವೈಷಮ್ಯವಾಗಲಿ ಇರಲಿಲ್ಲ. ಬೇರೆಯವರ ತಪ್ಪನ್ನು ಮರೆಮಾಚಲು ನಕ್ಸಲರತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ನೂರ್ ಶ್ರೀಧರ್ ಆರೋಪಿಸಿದರು.

    ಗೌರಿ ಹತ್ಯೆ ಮಾಡಿದ್ದು ಸಂಘ ಪರಿವಾರದ ವ್ಯಕ್ತಿಗಳು ಎಂಬ ಬಲವಾದ ಅನುಮಾನ ನಮಗೆ ಇದೆ. ಹಾಗಾಗಿ ಪೊಲೀಸರು ತನಿಖೆಯ ಕೇಂದ್ರಬಿಂದು ವಾಗಿ ಸಂಘ ಪರಿವಾರವನ್ನು ಪರಿಗಣಿಸಬೇಕು. ತನಿಖೆ ಮುಗಿಯುವವರೆಗೂ ಗೌರಿಹತ್ಯೆಯನ್ನು ನಕ್ಸಲರು ಮಾಡಿದ್ದಾರೆ ಎನ್ನುವ ತೀರ್ಪು ನೀಡುವುದು ಬೇಡ ಎಂದು ಸಿರಿಮನೆ ನಾಗರಾಜ್ ಮತ್ತು ನೂರ್ ಶ್ರೀಧರ್ ಪೊಲೀಸರಲ್ಲಿ ಮನವಿ ಮಾಡಿದರು.

    ನಾವೆಲ್ಲರೂ ಗೌರಿ ಅವರ ಕಾರಣಕ್ಕಾಗಿ ಹೊರ ಬಂದಿಲ್ಲ. 2006 ರಲ್ಲಿ ನಕ್ಸಲಿಸಮ್ ಬಿಟ್ಟು ಹೊರ ಬಂದಿದ್ವಿ. ಆದರೆ ಭೂಗತ ರಾಗಿ ಕೆಲಸ ಮಾಡುತಿದ್ದೆವು. ಭೂಗತದಿಂದ ಹೊರ ಬರಲು ಗೌರಿಲಂಕೇಶ್, ದೊರೆಸ್ವಾಮಿ ಮತ್ತು ಎಕೆ ಸುಬ್ಬಯ್ಯ ಕಾರಣಕರ್ತರು. ನಮ್ಮ ಮೇಲೂ ಕೂಡ ತನಿಖೆ ಮಾಡಲಿ. ನಾಳೆ ಒಂದು ವೇಳೆ ನಮ್ಮ ಮೇಲೆ ದಾಳಿ ಮಾಡಿ ನಾವೇನಾದರೂ ಮೃತಪಟ್ಟರೆ ಅದಕ್ಕೆ ಕಾರಣ ಬಲಪಂಥೀಯರು ಕಾರಣರಾಗುತ್ತಾರೆಯೇ ಹೊರತು ನಕ್ಸಲರು ಕಾರಣರಾಗುವುದಿಲ್ಲ ಎಂದು ನೂರ್ ಶ್ರೀಧರ್ ಹೇಳಿದರು.

    ಇದನ್ನೂ ಓದಿ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡನಿಂದ ಗೌರಿ ಲಂಕೇಶ್ ಹತ್ಯೆ?

    ಇದನ್ನೂ ಓದಿ:ಮಾಜಿ ನಕ್ಸಲ್, ನಕ್ಸಲ್ ಪರ ವಾದಿಗಳ ಮೇಲೆ ಕಣ್ಣಿಟ್ಟ ಎಸ್‍ಐಟಿ

    https://youtu.be/qJlk323WcjE


  • ಇಂದ್ರಜಿತ್, ಗೌರಿ ಲಂಕೇಶ್ ಬಗ್ಗೆ ದೊರೆಸ್ವಾಮಿ ಹೇಳಿದ್ದು ಹೀಗೆ

    ಇಂದ್ರಜಿತ್, ಗೌರಿ ಲಂಕೇಶ್ ಬಗ್ಗೆ ದೊರೆಸ್ವಾಮಿ ಹೇಳಿದ್ದು ಹೀಗೆ

    ಬೆಂಗಳೂರು: ಇಂದ್ರಜಿತ್ ಮತ್ತು ಗೌರಿ ಲಂಕೇಶ್ ನಡುವೆ ಹೆಚ್ಚು ಆಪ್ತತೆ ಇರಲಿಲ್ಲ. ಹೀಗಾಗಿ ಆದರ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹೇಳಿದ್ದಾರೆ.

    ಇಂದ್ರಜಿತ್ ಅವರು ನಕ್ಸಲೈಟ್ ಬೆದರಿಕೆ ಇತ್ತು ಎಂದು ಹೇಳಿದ್ದಾರೆ. ಅದರ ಬಗ್ಗೆ ತನಿಖೆಯಾಗಲಿ. ಗೌರಿ ಹಾಗೂ ನನ್ನ ಮಧ್ಯೆ ಯಾವುದೇ ನಕ್ಸಲೈಟ್ ಗಳನ್ನು ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಒಳಜಗಳ ಇರಲಿಲ್ಲ ಎಂದು ಅವರು ತಿಳಿಸಿದರು.

    ನಕ್ಸಲೈಟ್ ವಿಚಾರದಲ್ಲಿ ಕೊಂಚ ತಳಮಳ ಇದ್ದಿದ್ದು ನಿಜ. ಕೆಲವರಿಗೆ ನಕ್ಸಲೈಟ್ ಮುಖ್ಯ ವಾಹಿನಿಗೆ ಬರುವುದು ಇಷ್ಟವಿರಲಿಲ್ಲ. ಯಾರು ಅಂತಾ ನಾನು ಹೆಸರು ಹೇಳಲು ಇಚ್ಚಿಸುವುದಿಲ್ಲ. ಕೆಲ ಮಾತುಗಳು ನನ್ನ ಕಿವಿಗೆ ಬಿದ್ದಿದೆ. ಹೀಗಾಗಿ ನಕ್ಸಲೈಟ್ ಆಯಾಮದಲ್ಲೂ ತನಿಖೆಯಾಗಲಿ. ಎಂದೂ ಪ್ಯಾಕೇಜ್ ವಿಚಾರದಲ್ಲಿ ಗೊಂದಲ ಇರಲಿಲ್ಲ. ಅವರ್ಯಾರು ಪ್ಯಾಕೇಜ್ ತೆಗೆದುಕೊಂಡಿರಲಿಲ್ಲ. ಆದರೆ ಚಿಕ್ಕಮಗಳೂರಿನಲ್ಲಿ ಪೊಲೀಸರು ವಿನಾಕಾರಣ ನೂರ್ ಶ್ರೀಧರ್ ಅವರಿಗೆ ಕಿರಿಕ್ ಮಾಡಿದ್ದರು. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯನವರಿಗೆ ತಿಳಿಸಿದ್ದೆ ಎಂದರು.

    ಗೌರಿ ಪ್ರಕರಣದಲ್ಲಿ ನನ್ನ ಅನುಮಾನ ಇರುವುದು ಕೋಮುವಾದಿಗಳ ಮೇಲೆಯೇ. ಮಂಗಳೂರಿನ ಹತ್ಯೆ ಮತ್ತು ಇದಕ್ಕೆ ಏನಾದರೂ ಸಂಬಂಧ ಇರಬಹುದು ಎನ್ನುವ ಅನುಮಾನ ಇದೆ ಎಂದರು.

    ವಿಶೇಷ ತನಿಖಾ ತಂಡದ ತನಿಖೆ ಮುಂದುವರೆಯಲಿ. ಸಿಬಿಐ ಪ್ರವೇಶಿಸಿದರೆ ಮೋದಿ ಕೈವಾಡ ಎಂದು ಹೇಳಲಾಗುತ್ತದೆ. ಸಿಐಡಿ ಆದರೆ ರಾಜ್ಯ ಸರ್ಕಾರದ ಕೈಗೊಂಬೆ ಎನ್ನಲಾಗುತ್ತದೆ. ಒಟ್ಟಿನಲ್ಲಿ ನಿಷ್ಠಾವಂತ ಅಧಿಕಾರಿಗಳಿಂದ ತನಿಖೆಯಾಗಲಿ. ದುಡ್ಡು ತಿನ್ನುವ ಕೇಸ್ ಮುಚ್ಚಿ ಹಾಕುವ ಅಧಿಕಾರಿಗಳಿಂದ ತನಿಖೆ ನಡೆಯೋದು ಬೇಡ ಎಂದು ಅವರು ಆಗ್ರಹಿಸಿದರು.