Tag: ನಗರ ಸಭೆ

  • Chitradurga| ಮಲಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು

    Chitradurga| ಮಲಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು

    – ಕಲ್ಯಾಣ ಮಂಟಪದ ಮಾಲೀಕನ ವಿರುದ್ಧ ದೂರು

    ಚಿತ್ರದುರ್ಗ: ಮಲದ ಗುಂಡಿಗಿಳಿದ (Septic Tank) ಕಾರ್ಮಿಕನೋರ್ವ (Labor) ಉಸಿರುಗಟ್ಟಿ ಸಾವನ್ನಪ್ಪಿರುವ ಅಮಾನವೀಯ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ಪಟ್ಟಣದಲ್ಲಿ ನಡೆದಿದೆ.

    ಚಳ್ಳಕೆರೆ ಪಟ್ಟಣದಲ್ಲಿ ಡಿ.18ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆಯ ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ| ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

    ಈ ಸಂಬಂಧ ಡಿ.23ರ ರಾತ್ರಿ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೀರಿನ ತೊಟ್ಟಿಯಲ್ಲಿ ಮುಳುಗಿ ಕಾರ್ಮಿಕ ಸಾವೆಂದು ತಿಳಿಸಲಾಗಿತ್ತು. ಈ ವೇಳೆ ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿಯಿಂದ ಡಿಸಿ ಕಚೇರಿಗೆ ದೂರು ಸಲ್ಲಿಸಿ, ತನಿಖೆಗೆ ಆಗ್ರಹಿಸಿದ ಪರಿಣಾಮ ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ

    ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಗೆ ನಗರಸಭೆ ಅಧಿಕಾರಿ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ಚುರುಕಾಗಿದೆ. ಇದನ್ನೂ ಓದಿ: ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

  • ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

    ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

    ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿಕೊಂಡು ನಗರಸಭೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಕಲಾವಿದನ ಫೋಟೋ ಗ್ಯಾಲರಿಯನ್ನು ಇಂದು ಬೆಳ್ಳಂಬೆಳಗ್ಗೆ ನಗರಸಭೆಯ ಅಧಿಕಾರಿಗಳು ತೆರವು ಮಾಡಿದರು.

    ಮಡಿಕೇರಿ ನಗರದ ಚೈನ್ ಗೇಟ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ ಚಿತ್ರ ಕಲಾವಿದ ಹಾಗೂ ಕುಟುಂಬ ವರ್ಗದವರು ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಹೈಡ್ರಾಮ ನಡೆಯಿತು. ಕಳೆದ ಬಾರಿಯು ತೆರವು ಕಾರ್ಯಚರಣೆ ಮಾಡಲು ಮುಂದಾಗಿರುವ ಸಂದರ್ಭದಲ್ಲಿ ಚಿತ್ರಕಲಾವಿದ ಸಂದೀಪ್ ಮತ್ತು ಕುಟುಂಬದಿಂದ ಗ್ಯಾಸ್ ಆನ್ ಮಾಡಿ ಬೆಂಕಿ ಹಚ್ಚಿಕೊಳ್ಳುತ್ತೇವೆ ಎಂದು ನಗರಸಭೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!

    ಆದರೆ ಇಂದು ಮಡಿಕೇರಿ ತಹಶೀಲ್ದಾರ್ ಮಹೇಶ್ ನಗರಸಭೆ ಆಯುಕ್ತ ರಾಮದಾಸ್ ನೇತೃತ್ವದಲ್ಲಿ ಫೋಟೋ ಗ್ಯಾಲರಿ ತೆರವು ಕಾರ್ಯಚರಣೆ ಮಾಡಲಾಯಿತು. ಬೆಳಿಗ್ಗೆ 6:30ರ ಸುಮಾರಿಗೆ ನೂರಾರು ಪೊಲೀಸರೊಂದಿಗೆ ಆಗಮಿಸಿದ ನಗರಸಭೆಯ ಅಧಿಕಾರಿಗಳು ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ಏಕಾಏಕಿ ಬಂದು ದೌರ್ಜನ್ಯ ನಡೆಸಿದ್ದಾರೆ ಎಂದು ಕಲಾವಿದನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿ ಆರೋಗ್ಯದಲ್ಲಿ ಚೇತರಿಕೆ

  • ರಾಯಚೂರು ನಗರಸಭೆಯಲ್ಲಿ ತಿಂಗಳ ಮಾಮೂಲಿ ಜಗಳ-ಅಧ್ಯಕ್ಷನ ವಿರುದ್ಧ ಜೀವಬೆದರಿಕೆ ದೂರು

    ರಾಯಚೂರು ನಗರಸಭೆಯಲ್ಲಿ ತಿಂಗಳ ಮಾಮೂಲಿ ಜಗಳ-ಅಧ್ಯಕ್ಷನ ವಿರುದ್ಧ ಜೀವಬೆದರಿಕೆ ದೂರು

    ರಾಯಚೂರು: ನಗರಸಭೆಯ ಹಿರಿಯ ಸದಸ್ಯ ತಿಂಗಳ ಮಾಮೂಲಿಗೆ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಅಂತ ರಾಯಚೂರು ನಗರಸಭೆ ಅಧ್ಯಕ್ಷ ಇ.ವಿನಯಕುಮಾರ್ ಆರೋಪಿಸಿದ್ದಾರೆ. ಆದ್ರೆ ಹಿರಿಯ ಸದಸ್ಯ ಜಿಂದಪ್ಪ ಅಧ್ಯಕ್ಷನಿಂದ ಜೀವಬೆದರಿಕೆಯಿದೆ ಅಂತ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸದಸ್ಯರ ನಡುವೆಯೆ ಜಗಳ ನಡೆದಿದ್ದು, ಕೆಲವರು ಅಧ್ಯಕ್ಷರ ಚೇಂಬರ್ ಗೆ ನುಗ್ಗಿ ದಾಂಧಲೆ ಮಾಡಿ ಬಾಗಿಲು ಮುರಿಯಲು ಯತ್ನಿಸಿದ ಘಟನೆ ನಡೆದಿದೆ.

    ರಾಯಚೂರು ನಗರಸಭೆಯಲ್ಲಿ ಅಧ್ಯಕ್ಷ ,ಹಿರಿಯ ಸದಸ್ಯನ ನಡುವೆ ಜೋರು ಜಗಳ ನಡೆದಿದ್ದು, ಸದಸ್ಯ ಜಿಂದಪ್ಪ ತಿಂಗಳು ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಹಣ ನೀಡಲು ನಿರಾಕರಿಸಿದ್ದರಿಂದ ನಿರಂತರ ಹಿಂಸೆ ನೀಡುತ್ತಿದ್ದಾರೆ. ಹಣಕ್ಕಾಗಿ ಜಿಂದಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಅಂತ ವಿನಯಕುಮಾರ್ ಆರೋಪಿಸಿದ್ದಾರೆ. ನಗರಸಭೆ ಕಚೇರಿಯಲ್ಲಿ ಈ ವಿಚಾರವಾಗಿ ಪ್ರಶ್ನಿಸಲು ತೆರಳಿದ್ದ ನಗರಸಭೆ ಉಪಾಧ್ಯಕ್ಷೆ ಪತಿ ನರಸಿಂಹ ಮಾಡಗೇರಿ ಭಾರಿ ವಾಗ್ವಾದ ನಡೆಸಿದ್ದಾರೆ. ಅಧ್ಯಕ್ಷರ ಚೇಂಬರ್‍ಗೆ ನುಗ್ಗಿ ದಾಂಧಲೆ ಮಾಡಿ ಬಾಗಿಲು ಧ್ವಂಸಕ್ಕೆ ಯತ್ನವೂ ನಡೆದಿದೆ. ಸ್ಥಳಕ್ಕೆ ಸದರ ಬಜಾರ್ ಠಾಣೆ ಪೊಲೀಸರು ಆಗಮಿಸಿ ಪರಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

    ಕಾಂಗ್ರೆಸ್ ಸದಸ್ಯರಿಂದಲೇ ನಗರಸಭೆ ಅಧ್ಯಕ್ಷ ಸ್ಥಾನ ಕಿತ್ತುಕೊಳ್ಳುವ ಯತ್ನ ನಡೆದಿದೆ. ಈ ಬಗ್ಗೆ ಪಕ್ಷದ ಹಿರಿಯರ ಗಮನಕ್ಕೆ ತರಲಾಗಿದೆ. ಚೇಂಬರ್ ಗೆ ನುಗ್ಗಿ ದಾಂಧಲೆ ಮಾಡಿದ್ದರಿಂದ ಎಸ್ಪಿಗೆ ದೂರು ನೀಡುವುದಾಗಿ ವಿನಯಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಜಗಳ ಬೀದಿಗೆ ಬಂದಿದ್ದು ನಡು ರಸ್ತೆಯಲ್ಲೂ ಜಗಳವಾಡಿದ್ದಾರೆ. ಇದನ್ನೂ ಓದಿ: ಕೊರೋನಾ 3ನೇ ಅಲೆ ಆತಂಕ- ರಾಯಚೂರಿನಾದ್ಯಂತ 7 ಮಕ್ಕಳ ಕೋವಿಡ್ ಕೇರ್‌ಸೆಂಟರ್‌ ತೆರೆಯಲು ಮುಂದಾದ ಜಿಲ್ಲಾಡಳಿತ

    ಇನ್ನೂ ಸದಸ್ಯ ಜಿಂದಪ್ಪ ನಗರಸಭೆ ಅಧ್ಯಕ್ಷ ವಿನಯಕುಮಾರ್ ಮಾನಸಿಕ ಅಸ್ವಸ್ಥನಿದ್ದಾನೆ, ನನಗೆ ಜೀವ ಬೆದರಿಕೆ ಹಾಕಿದ್ದಾನೆ. ವಿನಯಕುಮಾರ್ ನಿಂದ ರಕ್ಷಣೆ ಬೇಕು ಅಂತ ಅಧ್ಯಕ್ಷನ ವಿರುದ್ಧ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆ – ಮನೆಗಳಿಗೆ ನೀರು ನುಗ್ಗಿ ಅವಾಂತರ

  • ಒಂದೇ ದಿನ 10ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು

    ಒಂದೇ ದಿನ 10ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು

    – ನಿದ್ದೆಗೆ ಜಾರಿದ ನಗರಸಭೆ ಸಿಬ್ಬಂದಿ

    ಬೀದರ್: ಒಂದೇ ದಿನ ನಗರದ ವಿವಿಧ ಬಡಾವಣೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಜನರನ್ನು ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿರುವ ಘಟನೆ ಬೀದರ್ ನಡಲ್ಲಿ ನಡೆದಿದೆ

    ಬೀದಿನಾಯಿಗಳು ಏಕಾಏಕಿ ಎಗರಿ ಜನರನ್ನು ಕಚ್ಚಿ ಗಾಯಗೊಳಿಸುತ್ತಿವೆ. ನಗರದ ಪ್ರಮುಖ ಬಡಾವಣೆಗಳಾದ ಹಾರೂಗೆರೆ, ನೌದಗೆರಾ, ಮೈಲೂರ ರಸ್ತೆ, ಓಲ್ಡ್ ಸಿಟಿ, ನಯಾಕಮಾನ ಸೇರಿದಂತೆ ಹಲವೆಡೆ ದಾಳಿ ಮಾಡಿ ಗಂಭೀರವಾಗಿ ಗಾಯಾಳುಗಳನ್ನು ಮಾಡಿವೆ. ರಸ್ತೆಯಲ್ಲಿ ಹೋಗುತ್ತಿದ್ದ 10ಕ್ಕೂ ಹೆಚ್ಚು ಸಾರ್ವಜನಿಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ.

    ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾನಗಳ ದಾಳಿಯಿಂದಾಗಿ ನಗರದ ಜನರು ಭಯ ಭೀತರಾಗಿದ್ದು, ಬೀದಿ ನಾಯಿಗಳನ್ನು ಕಂಡರೆ ಹೆದರಿ ಓಡಾಡುವಂತಾಗಿದೆ. ಮಕ್ಕಳು ಕೂಡ ಶಾಲೆಗೆ ಹೋಗುವ ವೇಳೆ ಭಯದಿಂದ ಹೋಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಬೀದಿ ನಾಯಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಬೇಕಿರುವ ನಗರಸಭೆ ಮಾತ್ರ ನಿದ್ದೆಗೆ ಜಾರಿದೆ. ನಿರ್ಲಕ್ಷ್ಯ ಮಾಡುತ್ತಿರುವ ಜಿಲ್ಲಾಡಳಿತ ಹಾಗೂ ನಗರಸಭೆಗೆ ಗಡಿ ಜಿಲ್ಲೆಯ ಜನರು ಮಾತ್ರ ಛೀಮಾರಿ ಹಾಕುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ನಗರಸಭೆಯ ಅಧಿಕಾರಿಗಳು ಕುಂಭ ಕರ್ಣ ನಿದ್ದೆಯಿಂದ ಎದ್ದು ನಗರದ ಜನರನ್ನು ಶ್ವಾನಗಳ ದಾಳಿಯಿಂದ ಕಾಪಾಡುತ್ತಾರಾ ಎಂದು ಕಾದು ನೋಡಬೇಕಾಗಿದೆ.

  • ರಾಯಚೂರು ನಗರಸಭೆಯಿಂದಾಗದ ಕೆಲಸವನ್ನು ಮಾಡಿದ ಪೊಲೀಸರು

    ರಾಯಚೂರು ನಗರಸಭೆಯಿಂದಾಗದ ಕೆಲಸವನ್ನು ಮಾಡಿದ ಪೊಲೀಸರು

    -ವಾರಸುದಾರರಿಲ್ಲದ 34 ಜಾನುವಾರುಗಳು ಗೋಶಾಲೆಗೆ ರವಾನೆ

    ರಾಯಚೂರು: ನಗರದ ರಸ್ತೆಗಳಲ್ಲಿ ತಿರುಗಾಡುತ್ತಿದ್ದ ಬೀಡಾಡಿ ದನಗಳನ್ನ ಹಿಡಿದು ಪೊಲೀಸರು ಗೋಶಾಲೆಗೆ ಬಿಟ್ಟಿದ್ದಾರೆ. ನಗರಸಭೆ ಮಾಡಬೇಕಾದ ಕೆಲಸವನ್ನ ರಾಯಚೂರು ಪೊಲೀಸರು ಮಾಡಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುವವ ಬೈಕ್ ಜಪ್ತಿ ಮಾಡಿ ದಂಡ ಹಾಕುತ್ತಿರುವ ಪೊಲೀಸರು ಜಾನುವಾರುಗಳನ್ನ ಗೋಶಾಲೆಗೆ ತಲುಪಿಸಿದ್ದಾರೆ. ವಾರಸುದಾರರಿಲ್ಲದ ಒಟ್ಟು 34 ಜಾನುವಾರುಗಳನ್ನ ಹಿಡಿದು ಗೋಶಾಲೆಗೆ ಸಾಗಿಸಿದ್ದಾರೆ.

    ನಗರದ ಸಾರ್ವಜನಿಕರು ಸಾಕಷ್ಟು ಬಾರಿ ದೂರು ನೀಡಿದರು ನಗರಸಭೆ ತಲೆಕೆಡಿಸಿಕೊಂಡಿರಲಿಲ್ಲ. ಹೀಗಾಗಿ ಬೀಡಾಡಿ ದನಗಳು ರಸ್ತೆಯಲ್ಲೆ ಓಡಾಡುತ್ತಿದ್ದರಿಂದ ವಾಹನ ಸಂಚಾರಕ್ಕೆ ತುಂಬಾ ಅಡತಡೆಯಾಗುತ್ತಿತ್ತು. ಗೋವುಗಳ ವಾರಸುದಾರರಿಗೆ ಅನೇಕ ಬಾರಿ ಎಚ್ಚರಿಕೆ ನೀಡಿದರೂ ಮತ್ತೆ ಮತ್ತೆ ಬೀದಿಗೆ ಬಿಡುವುದರಿಂದ ತೊಂದರೆ ತಪ್ಪಿರಲಿಲ್ಲ.

    ದನಕರುಗಳನ್ನು ಬೀದಿಗೆ ಬಿಡುವುದರಿಂದ ಅಪಘಾತಗಳು, ಕಳ್ಳತನ ಪ್ರಕರಣಗಳು ಸಹ ನಡೆಯುತ್ತಿರುವುದರಿಂದ ಇದು ಪೊಲೀಸರಿಗೂ ತಲೆನೋವಾಗಿತ್ತು. ಹೀಗಾಗಿ ಪೊಲೀಸರೇ ಜಾನುವಾರುಗಳನ್ನ ಗೋಶಾಲೆಗೆ ಬಿಟ್ಟಿದ್ದಾರೆ. ಅಲ್ಲದೆ ಜಿಲ್ಲೆಯ ಸಾರ್ವಜನಿಕರು ತಮ್ಮ ತಮ್ಮ ದನಕರುಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳಿ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ಸಾರ್ವಜನಿಕರಿಗೆ ಸೂಚಿಸಿದ್ದಾರೆ.

  • ಅಧಿಕಾರಿಗಳ ನಿರ್ಲಕ್ಷ್ಯ – ತುಕ್ಕು ಹಿಡಿಯುತ್ತಿವೆ ಶವ ಸಾಗಿಸುವ ವಾಹನಗಳು

    ಅಧಿಕಾರಿಗಳ ನಿರ್ಲಕ್ಷ್ಯ – ತುಕ್ಕು ಹಿಡಿಯುತ್ತಿವೆ ಶವ ಸಾಗಿಸುವ ವಾಹನಗಳು

    ಮೈಸೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶವಸಾಗಿಸುವ ವಾಹನಗಳು ಬಡವರಿಗೆ ಉಪಯೋಗವಾಗದೆ, ನಿಂತಲ್ಲೇ ನಿಂತಿದ್ದು, ತುಕ್ಕು ಹಿಡಿದಿವೆ.

    ಜಿಲ್ಲೆಯ ನಂಜನಗೂಡು ನಗರಸಭೆ ಆವರಣದಲ್ಲಿ ಶವಸಾಗಿಸುವ ವಾಹನ ತುಕ್ಕು ಹಿಡಿಯುತ್ತಿರುವ ದೃಶ್ಯವನ್ನು ಕಾಣಬಹುದಾಗಿದೆ. ಕಳೆದ ಮೂರು ವರ್ಷಗಳಿಂದ ಈ ವಾಹನಗಳು ನಿಷ್ಕ್ರಿಯವಾಗಿವೆ. ಈ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

    ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಶಾಸಕರ ಅನುದಾನದಲ್ಲಿ ಈ ವಾಹನ ಕೊಟ್ಟಿದ್ದರು. 2 ಕೋಟಿ ರೂ. ಅನುದಾನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ವಾಹನಗಳನ್ನು ಗೋ.ಮಧುಸೂಧನ್ ನೀಡಿದ್ದರು. 2015ರಲ್ಲಿ ಕೊಟ್ಟ ವಾಹನಗಳು ಈಗ ತುಕ್ಕು ಹಿಡಿಯುತ್ತಿವೆ. ಬಡವರ್ಗದ ಜನತೆಗೆ ಅನುಕೂಲವಾಗಲೆಂದು ಈ ವಾಹನಗಳನ್ನು ನೀಡಲಾಗಿತ್ತು. ಆದರೆ ಸೂಕ್ತವಾಗಿ ಬಳಸದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗುತ್ತಿವೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸಕ್ಕರೆ ನಾಡಲ್ಲಿ ಕಲಾವಿದನ ಕುಂಚದಲ್ಲಿ ಅರಳುತ್ತಿರುವ ಸ್ವಚ್ಛತೆಯ ಅರಿವು

    ಸಕ್ಕರೆ ನಾಡಲ್ಲಿ ಕಲಾವಿದನ ಕುಂಚದಲ್ಲಿ ಅರಳುತ್ತಿರುವ ಸ್ವಚ್ಛತೆಯ ಅರಿವು

    ಮಂಡ್ಯ: ಕಸ ಮುಕ್ತ ನಗರವನ್ನಾಗಿ ಮಾಡಲು ಇದೀಗ ಕಲಾವಿದನ ಕುಂಚದ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಂಡ್ಯದಲ್ಲಿ ಮಾಡಲಾಗುತ್ತಿದೆ.

    ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಬರುವ ಗೋಡೆಗಳ ಮೇಲೆ ಸ್ವಚ್ಚತೆಯ ಕುರಿತ ಚಿತ್ರಗಳನ್ನು ಬಿಡಿಸುವ ಮೂಲಕ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲಾಗುತ್ತಿದೆ. ಹೊಸ ವರ್ಷದ ಅಂಗವಾಗಿ ಕರ್ನಾಟಕ ರಾಜ್ಯ ಕುಂಚ ಕಲಾವಿದರ ಸಂಘ ಹಾಗೂ ಮಂಡ್ಯ ನಗರ ಸಭೆಯ ವತಿಯಿಂದ ಜನರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸಲು ಈ ಹೊಸ ಉಪಾಯ ಮಾಡಲಾಗಿದೆ.

    ಪ್ಲಾಸ್ಟಿಕ್ ತ್ಯಜಿಸಿ ಪ್ರಕೃತಿಯನ್ನು ಉಳಿಸಿ, ಸ್ವಚ್ಛತೆ ಕಾಪಡಿ ಆರೋಗ್ಯಕರವಾಗಿರಿ ಎಂಬ ಘೋಷವಾಕ್ಯದ ಮೂಲಕ ಚಿತ್ರಗಳನ್ನು ಬಿಡಿಸಲಾಗಿದೆ. ಈ ಮೂಲಕ ಮಂಡ್ಯ ನಗರವನ್ನು ಸ್ವಚ್ಛ ನಗರಿಯನ್ನಾಗಿ ಮಾಡಲು ಇದೀಗ ಮಂಡ್ಯ ನಗರ ಸಭೆ ಮುಂದಾಗಿದೆ. ಈ ನಡುವೆ ಸಾರ್ವಜನಿಕರಿಗೆ ಗಿಡಗಳನ್ನು ವಿತರಣೆ ಮಾಡುವ ಮೂಲಕ ಜನರಿಗೆ ಪರಿಸರದ ಕುರಿತು ಅರಿವು ಮೂಡಿಸಲಾಯಿತು.

  • ಬೀದಿ ನಾಯಿಗಳ ದಾಳಿ, ತಪ್ಪಿಸಿಕೊಳ್ಳುಲು ಹೋಗಿ ಕೈ ಮುರಿದುಕೊಂಡ ಬಾಲಕಿಯ

    ಬೀದಿ ನಾಯಿಗಳ ದಾಳಿ, ತಪ್ಪಿಸಿಕೊಳ್ಳುಲು ಹೋಗಿ ಕೈ ಮುರಿದುಕೊಂಡ ಬಾಲಕಿಯ

    ರಾಮನಗರ: ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ವೇಳೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದು, ತಪ್ಪಿಸಿಕೊಳ್ಳಲು ಹೋಗಿ ಬಾಲಕಿ ಕೈ ಮುರಿದುಕೊಂಡಿದ್ದಾಳೆ.

    ನಗರದ 30ನೇ ವಾರ್ಡಿನ ಐಜೂರಿನ ವಾಟರ್ ಟ್ಯಾಂಕ್ ಬಳಿ ಭಾನುವಾರ ಗಿರೀಶ್ ಪುತ್ರಿ ಪ್ರೀತಿ ಆರ್.ಜಿ(11) ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಮಯದಲ್ಲಿ 10 ಕ್ಕೂ ಹೆಚ್ಚು ಬೀದಿ ನಾಯಿಗಳು ಬಾಲಕಿಯನ್ನು ಸುತ್ತುವರೆದಿವೆ. ಈ ವೇಳೆ ಗಾಬರಿಗೊಂಡ ಬಾಲಕಿ ಓಡಲು ಮುಂದಾದಾಗ ಬಿದ್ದಿದ್ದು, ಬಿದ್ದ ರಭಸಕ್ಕೆ ಕೈ ಮೂಳೆ ಮುರಿದಿದೆ.

    ಬೀದಿ ನಾಯಿಗಳ ದಾಳಿಯ ನಂತರ ಸ್ಥಳದಲ್ಲಿದ್ದ ಸಾರ್ವಜಿನಿಕರು ಬಾಲಕಿಯ ಪೋಷಕರಿಗೆ ವಿಚಾರ ತಿಳಿಸಿದ್ದು, ನಂತರ ಬಾಲಕಿಯನ್ನು ಹತ್ತಿರದ ನಾರಾಯಣ ಅಸ್ಪತ್ರೆಗೆ ಕರೆದೋಯ್ದಿದ್ದಾರೆ. ಕೈಗೆ ಹೆಚ್ಚು ಪೆಟ್ಟು ಬಿದ್ದಿದ್ದ ಕಾರಣ ಕೈ ಮೂಳೆ ಮುರಿದಿದೆ ಎಂದು ವೈದ್ಯರು ವೈದ್ಯರು ತಿಳಿಸಿದ್ದಾರೆ.

    ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ನಮಗೆ ಈ ರೀತಿ ಅನಾಹುತ ಸಂಭವಿಸಿದರೆ, ಆಸ್ಪತ್ರೆ ಖರ್ಚು ಭರಿಸುವವರ್ಯಾರು ಎಂದು ಪೋಷಕರು ಗೋಳಿಡುತ್ತಿದ್ದಾರೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪ್ಲಾಸ್ಟಿಕ್ ಬ್ಯಾಗ್ ನಿಷೇಧ ತಂತು ಮಹಿಳಾ ಸಂಘಗಳಿಗೆ ಅದೃಷ್ಟ!

    ಪ್ಲಾಸ್ಟಿಕ್ ಬ್ಯಾಗ್ ನಿಷೇಧ ತಂತು ಮಹಿಳಾ ಸಂಘಗಳಿಗೆ ಅದೃಷ್ಟ!

    – ದಿನಕ್ಕೆ 1,200 ರೂ. ದುಡಿಯುತ್ತಿದ್ದಾರೆ ಬಡ ಮಹಿಳೆಯರು

    ಕಾರವಾರ: ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತಂದಿದೆ. ಪರಿಣಾಮ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಿ ಬಟ್ಟೆ ಹಾಗೂ ಪೇಪರ್ ಬ್ಯಾಗ್‍ಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಆದರೆ ಈ ಬ್ಯಾಗುಗಳು ಅಂಗಡಿಗಳಿಂದ ಕೊಂಡುಕೊಳ್ಳುವ ಗ್ರಾಹಕರಿಗೆ ಹಾಗೂ ಅಂಗಡಿಯವರಿಗೆ ತುಟ್ಟಿಯಾಗುತಿತ್ತು. ಇದರಿಂದಾಗಿ ಕದ್ದುಮುಚ್ಚಿ ಪ್ಲಾಸ್ಟಿಕ್ ಬ್ಯಾಗ್‍ಗಳು ಬಿಕರಿಯಾಗುತಿತ್ತು. ಇದನ್ನು ಮನಗಂಡ ಕಾರವಾರ ನಗರಸಭೆ ಆಡಳಿತ ಪ್ರತಿ ದಿನ ಅಂಗಡಿಗಳಿಗೆ ದಾಳಿ ನಡೆಸಿ ಈ ವರೆಗೆ ಎರಡು ಕ್ವಿಂಟಾಲ್ ಪ್ಲಾಸ್ಟಿಕ್ ಬ್ಯಾಗ್ ವಶಪಡಿಸಿಕೊಂಡರೆ, ಉಪಯೋಗಿಸಿ ಬಿಸಾಡಿದ ಪ್ಲಾಸ್ಟಿಕ್ ಸಂಗ್ರಹಿಸಿ ಈಗಾಗಲೇ 40 ಟನ್ ಪ್ಲಾಸ್ಟಿಕ್ ಅನ್ನು ರೀ ಸೈಕ್ಲಿಂಗ್ ಮಾಡಿ ದಾಲ್ಮಿಯ ಸಿಮೆಂಟ್ ಕಾರ್ಖಾನೆಗೆ ಕಳುಹಿಸಿದೆ.

    ಪ್ರತಿ ದಿನ ಏಳು ಕ್ವಿಂಟಾಲ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಕೇವಲ ಕಾರವಾರ ನಗರದಿಂದ ಉತ್ಪತ್ತಿಯಾಗುತ್ತದೆ. ಹೀಗಾಗಿ ಕಾರವಾರ ನಗರಸಭೆ ಆಯುಕ್ತ ಯೋಗೀಶ್ವರ್ ರವರು ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೂ ಹೋಟೆಲ್, ಬೀದಿ ಬದಿಯ ಅಂಗಡಿಗಳು ಕದ್ದುಮುಚ್ಚಿ ಪ್ಲಾಸ್ಟಿಕ್ ಮಾರಾಟವನ್ನು ಮಾಡಿ ಪ್ರತಿ ಬಾರಿ ಸಿಕ್ಕಿಕೊಂಡು ದಂಡ ತೆತ್ತುತಿದ್ದುದನ್ನು ಹಾಗೂ ಅವರ ಅನಿವಾರ್ಯತೆಯನ್ನು ಮನಗಂಡು ಬಟ್ಟೆ ಬ್ಯಾಗ್‍ಗಳನ್ನು ಅವರಿಗೆ ನೀಡುವ ನಿರ್ಧಾರ ತೆಗೆದುಕೊಂಡರು. ಇದರ ಪ್ರತಿಫಲವಾಗಿ ಹಾಗೂ ಬಡ ಮಹಿಳೆಯರಿಗೆ ಸಹಾಯ ಆಗುವಂತೆ ಕಾರವಾರ ನಗರದ ಮಹಿಳಾ ಸಹಕಾರ ಸಂಘ ಸಂಸ್ಥೆಯನ್ನು ಬ್ಯಾಗ್ ತಯಾರಿಕೆಗೆ ಪ್ರೇರೇಪಿಸಿದ್ದಲ್ಲದೇ ಅವರ ಮೂಲಕ ಬಟ್ಟೆ ಬ್ಯಾಗ್ ತಯಾರಿಸಿ ನೇರವಾಗಿ ನಗರಸಭೆಯೇ ಹೋಟೆಲ್ ಗಳಿಗೆ ಸೇರಿದಂತೆ ಅಂಗಡಿ ಮುಂಗಟ್ಟುಗಳಿಗೆ ಪ್ರತಿ ಬ್ಯಾಗಿಗೆ 3 ರೂ. ನಂತೆ ಕೊಂಡುಕೊಳ್ಳುವ ವೇದಿಕೆ ಒದಗಿಸಿಕೊಟ್ಟಿತು.

    ಇದರ ಪ್ರತಿಫಲವಾಗಿ ಕಾರವಾರದ ಜೈ ಸಂತೋಷಿನಿ ಮಾತಾ ಮಹಿಳಾ ಸಹಕಾರ ಸಂಘದ ಮಹಿಳೆಯರು ಬ್ಯಾಗ್‍ಗಳನ್ನು ಹೊಲಿಯುವ ಕಾರ್ಯ ಆರಂಭಿಸಿದ್ದಾರೆ. ಒಂಬತ್ತು ಜನರಿರುವ ಈ ಚಿಕ್ಕ ಸಂಘದಲ್ಲಿ ಏಳು ಜನ ಮಹಿಳೆಯರು ಹೊಲಿಗೆ ಯಂತ್ರ ಹೊಂದಿದ್ದು ಮನೆಯಲ್ಲಿ ಬಿಡುವಿನ ಸಮಯದಲ್ಲಿ ಬಟ್ಟೆ ಚೀಲವನ್ನು ಹೋಲಿದು ಕೊಡುತ್ತಿದ್ದಾರೆ.

    ಸದ್ಯ ಹೋಟಲ್ ಹಾಗೂ ಅಂಗಡಿಗೆ ಬಟ್ಟೆ ಬ್ಯಾಗ್‍ಗಳನ್ನು ತಯಾರಿಸಿ ನೀಡುತ್ತಿದ್ದು, ಪ್ರತಿ ದಿನ ನೂರು ಬಟ್ಟೆಯ ಒಂದು ಬಂಡಲ್‍ನಂತೆ ನಾಲ್ಕು ಬಂಡಲ್ ಬಟ್ಟೆಯನ್ನು ಒಬ್ಬರು ತಯಾರಿಸಿ ದಿನಕ್ಕೆ 1,200 ರೂ.ಗಳಿಗೂ ಹೆಚ್ಚು ಹಣ ಗಳಿಸುತ್ತಿದ್ದಾರೆ. ಬ್ಯಾಗ್ ತಯಾರಿಸುತ್ತಿರುವ ಸಂಘದ ಪೂಜಾ ಸಂಜೀವ್ ಅರ್ಗೆಕರ್ ಹೇಳುವಂತೆ, ಗೃಹಿಣಿಯಾಗಿ ಮನೆಯ ಕೆಲಸ ಮುಗಿಸಿ ಸಂಜೆ ವೇಳೆ ಬಟ್ಟೆ ಚೀಲವನ್ನು ಹೊಲಿಯುತ್ತೇನೆ. ಇದರಿಂದ ನನ್ನ ಗಳಿಕೆ ಹೆಚ್ಚಾಗಿದ್ದು ಕುಟುಂಬಕ್ಕೆ ಸಹಕಾರವಾಗುತ್ತಿದೆ. ನಗರಸಭೆಯೇ ನೇರವಾಗಿ ಹೋಟಲ್ ಮತ್ತು ಅಂಗಡಿಗಳ ನಡುವೆ ನಮ್ಮ ಬಟ್ಟೆ ಬ್ಯಾಗ್ ತೆಗೆದುಕೊಳ್ಳುವಂತೆ ಒಪ್ಪಂದ ಮಾಡಿಸಿದೆ. ಇದರಿಂದಾಗಿ ನಾವು ಗ್ರಾಹಕರನ್ನು ಹುಡುಕಿ ಅಲೆಯುವುದು ತಪ್ಪಿದೆ, ಬ್ಯಾಗ್‍ಗೆ ಹೆಚ್ಚಿನ ಬೇಡಿಕೆ ಬರುತ್ತಿದೆ ಎನ್ನುತ್ತಾರೆ.

    ಎನಿಟೈಮ್ ಬ್ಯಾಗ್ ಮಿಷನ್‍ಗಳು: ಕೆಲವೇ ದಿನದಲ್ಲಿ ಈ ಮಹಿಳೆಯರು ತಯಾರಿಸಿದ ಬಟ್ಟೆ ಬ್ಯಾಗ್‍ಗಳನ್ನು ನೇರವಾಗಿ ನಗರಸಭೆ ಖರೀದಿಸಿ ಎಟಿಎಮ್ ಗಳು ಹೇಗಿವೆಯೋ ಅದೇ ಮಾದರಿಯಲ್ಲಿ ಎನಿಟೈಮ್ ಬ್ಯಾಗ್ ಮಿಷನ್‍ಗಳನ್ನು ನಗರದಲ್ಲಿ ಅಳವಡಿಸಲು ಸಿದ್ಧತೆ ನಡೆಸಿದೆ. ಈ ಮಿಷನ್‍ನಲ್ಲಿ ಐದು ರೂ. ನಾಣ್ಯ ಹಾಕಿದರೆ ಒಂದು ಬಟ್ಟೆ ಬ್ಯಾಗ್ ಬರುವಂತೆ ವ್ಯವಸ್ಥೆ ರೂಪಿಸಿದ್ದು, ಸಿದ್ಧತೆ ನಡೆದಿದೆ ಎಂದು ನಗರಸಭಾ ಆಯುಕ್ತ ಯೋಗೀಶ್ವರ್ ತಿಳಿಸಿದ್ದಾರೆ.

    ಹೀಗಾಗಿ ಈಗಾಗಲೇ ಹಲವು ಮಹಿಳೆಯರು ಬಟ್ಟೆ ಬ್ಯಾಗ್ ತಯಾರಿಸುವಲ್ಲಿ ನಿರತರಾಗಿದ್ದು, ತಮ್ಮ ಬಿಡುವಿನ ಸಮಯದಲ್ಲಿ ಬಟ್ಟೆ ಬ್ಯಾಗ್ ಹೊಲಿಯುವ ಮೂಲಕ ಕೈತುಂಬ ಹಣ ಗಳಿಸುತ್ತಿದ್ದಾರೆ. ಪ್ಲಾಸ್ಟಿಕ್ ನಿಷೇಧ ಈ ಬಡ ಮಹಿಳೆಯರ ಬಾಳಲ್ಲಿ ಬೆಳಕಾಗುತ್ತಿದೆ.

  • ಇಂದು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ- ಲೋಕಲ್ ಫೈಟಲ್ಲೂ ಮಂಡ್ಯದ್ದೇ ಕುತೂಹಲ

    ಇಂದು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ- ಲೋಕಲ್ ಫೈಟಲ್ಲೂ ಮಂಡ್ಯದ್ದೇ ಕುತೂಹಲ

    ಬೆಂಗಳೂರು: ಲೋಕಸಭೆ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.

    8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯ್ತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಹೀಗಾಗಿ ಈ ಚುನಾವಣೆಯಲ್ಲಿ ಮೋದಿ ಹವಾ ವರ್ಕೌಟ್ ಆಗುತ್ತಾ ಅಥವಾ ಕಾಂಗ್ರೆಸ್-ಜೆಡಿಎಸ್ ಮೇಲುಗೈ ಸಾಧಿಸುತ್ತಾವಾ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

    ಮತದಾನ ನಡೆದ ಸ್ಥಳೀಯ ಸಂಸ್ಥೆಗಳು:
    8 ನಗರಸಭೆ, 33 ಪುರಸಭೆ, 22 ಪಟ್ಟಣ ಪಂಚಾಯ್ತಿ ಹೀಗೆ ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

    ನಗರಸಭೆಗಳು ಯಾವುವು?
    ಚಿತ್ರದುರ್ಗ – ಹಿರಿಯೂರು
    ದಾವಣಗೆರೆ – ಹರಿಹರ
    ಚಿಕ್ಕಬಳ್ಳಾಪುರ – ಶಿಡ್ಲಘಟ್ಟ
    ಶಿವಮೊಗ್ಗ – ಸಾಗರ
    ತುಮಕೂರು – ತಿಪಟೂರು
    ಮೈಸೂರು – ನಂಜನಗೂಡು
    ಬೀದರ್ – ಬಸವಕಲ್ಯಾಣ
    ಯಾದಗಿರಿ – ಶಹಾಪುರ

    ಪುರಸಭೆಗಳು ಯಾವುವು?:
    > ಬೆಂಗಳೂರು ನಗರ (1)- ಆನೇಕಲ್
    > ಬೆಂಗಳೂರು ಗ್ರಾಮಾಂತರ (2)-ದೇವನಹಳ್ಳಿ, ನೆಲಮಂಗಲ
    > ತುಮಕೂರು – 2- ಕುಣಿಗಲ್, ಪಾವಗಡ
    > ಉತ್ತರ ಕನ್ನಡ (1)- ಭಟ್ಕಳ
    > ಮಂಡ್ಯ (3)- ಕೆಆರ್ ಪೇಟೆ, ಶ್ರೀರಂಗಪಟ್ಟಣ, ಮಳವಳ್ಳಿ
    > ವಿಜಯಪುರ (3)- ಇಂಡಿ, ತಾಳಿಕೋಟೆ, ಬಸವನಬಾಗೇವಾಡಿ
    > ಧಾರವಾಡ (1)- ನವಲಗುಂದ
    > ಹಾವೇರಿ (2)- ಬ್ಯಾಡಗಿ, ಶಿಗ್ಗಾಂವ್
    > ಬೀದರ್ (3)- ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ
    > ಶಿವಮೊಗ್ಗ (1)- ಶಿಕಾರಿಪುರ
    > ಚಿಕ್ಕಮಗಳೂರು (1)- ಕಡೂರು

    > ಕೋಲಾರ (3)- ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು
    > ಚಿಕ್ಕಬಳ್ಳಾಪುರ (1)- ಬಾಗೇಪಲ್ಲಿ
    > ಚಾಮರಾಜನಗರ (1)- ಗುಂಡ್ಲಪೇಟೆ
    > ಮೈಸೂರು (2)- ಕೆ.ಆರ್.ನಗರ, ಬನ್ನೂರು
    > ಬಳ್ಳಾರಿ (3)- ಸಂಡೂರು, ಹೂವಿನಹಡಗಲಿ, ಹರಪನಹಳ್ಳಿ
    > ಗದಗ (1)- ನರಗುಂದ, ಮುಂಡರಗಿ
    > ದಕ್ಷಿಣ ಕನ್ನಡ (1)- ಮೂಡಬಿದಿರೆ

    ಪಟ್ಟಣ ಪಂಚಾಯ್ತಿಗಳು:
    > ತುಮಕೂರು (1)- ತುರುವೇಕೆರೆ
    > ಉತ್ತರ ಕನ್ನಡ (2)- ಹೊನ್ನಾವರ, ಸಿದ್ದಾಪುರ
    > ಹಾಸನ (2)- ಅರಕಲಗೂಡು, ಆಲೂರು
    > ಧಾರವಾಡ (2)- ಅಳ್ನಾವರ, ಕಲಘಟಗಿ
    > ಚಿತ್ರದುರ್ಗ (2)- ಮೊಳಕಾಲ್ಮೂರು, ಹೊಳಲ್ಕೆರೆ
    > ಬೀದರ್ (1)- ಔರಾದ್
    > ಶಿವಮೊಗ್ಗ (3)- ಶಿರಾಳಕೊಪ್ಪ, ಸೊರಬ, ಹೊಸನಗರ
    > ಚಿಕ್ಕಮಗಳೂರು (4)- ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ
    > ಚಾಮರಾಜನಗರ (2)- ಹನೂರು, ಯಳಂದೂರು
    > ಬಳ್ಳಾರಿ (1)- ಕಮಲಾಪುರ
    > ದಕ್ಷಿಣ ಕನ್ನಡ (2)- ಮೂಲ್ಕಿ, ಸುಳ್ಯ

    ಲೋಕಸಭೆಯಂತೆ ಲೋಕಲ್ ಫೈಟ್‍ನಲ್ಲೂ ಮಂಡ್ಯ ಜಿಲ್ಲೆಯೇ ಸೆಂಟರ್ ಅಟ್ರ್ಯಾಕ್ಷನ್ ಆಗಿದೆ. ಇಲ್ಲಿನ ಶ್ರೀರಂಗಪಟ್ಟಣ, ಕೆಆರ್ ಪೇಟೆ, ಮಳವಳ್ಳಿ ಪುರಸಭೆಗಳಿಗೆ ಚುನಾವಣೆ ನಡೆದಿದೆ. ಮಳವಳ್ಳಿ ಕ್ಷೇತ್ರದ ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದ ರಮೇಶ್ ಬಾಬು, ಕೆಆರ್ ಪೇಟೆ ಕ್ಷೇತ್ರದ ಕೆಬಿ.ಚಂದ್ರಶೇಖರ್ ಲೋಕಸಭೆ ಚುನಾವಣೆಯಲ್ಲಿ ಪರೋಕ್ಷವಾಗಿ ಸುಮಲತಾಗೆ ಬೆಂಬಲ ನೀಡಿ ಗೆಲ್ಲಿಸಿದ್ರು. ಈ ಮೂಲಕ ಜೆಡಿಎಸ್ ವಿರುದ್ಧ ವಿಧಾನಸಭೆ ಚುನಾವಣೆಯ ಸೋಲಿನ ಸೇಡು ತೀರಿಸಿಕೊಂಡಿದ್ರು. ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಡಲು ಜೆಡಿಎಸ್ ನಾಯಕರು ಹಗಲಿರುಳು ಪ್ರಚಾರ ಮಾಡಿದ್ರು. ಹೀಗಾಗಿ ಈ ಮೂರು ಪುರಸಭೆಗಳಲ್ಲಿ ಯಾರು ಗೆಲ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.