Tag: ನಜೀರ್‌

  • ಜೈಲಲ್ಲೇ ಡ್ರೈಫ್ರೂಟ್ಸ್, ಸ್ವೀಟ್ಸ್ ಮಾರುತ್ತಿದ್ದ ಉಗ್ರ – ಬೆಚ್ಚಿ ಬೀಳಿಸುವ ಅನೇಕ ರಹಸ್ಯಗಳು ಬಯಲು!

    ಜೈಲಲ್ಲೇ ಡ್ರೈಫ್ರೂಟ್ಸ್, ಸ್ವೀಟ್ಸ್ ಮಾರುತ್ತಿದ್ದ ಉಗ್ರ – ಬೆಚ್ಚಿ ಬೀಳಿಸುವ ಅನೇಕ ರಹಸ್ಯಗಳು ಬಯಲು!

    – 45 ಸಜೀವ ಗುಂಡುಗಳು ಪತ್ತೆ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಷ್ಕರ್-ಎ-ತೊಯ್ಬಾ (LET) ಉಗ್ರ ನಸೀರ್ ಬಗ್ಗೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು ಮತ್ತಷ್ಟು ರಹಸ್ಯಗಳನ್ನ ಬಯಲಿಗೆಳೆದಿದ್ದಾರೆ.

    ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದುಕೊಂಡೇ ಉಗ್ರ ನಸೀರ್ ದಿನಕ್ಕೆ 4-5 ಸಾವಿರ ದುಡ್ಡು ಸಂಪಾದನೆ ಮಾಡುತ್ತಿದ್ದ. ಬಟ್ಟೆ, ಡ್ರೈ ಫ್ರೂಟ್ಸ್, ಸ್ವೀಟ್ಸ್ ಮಾಡುತ್ತಿದ್ದ. ಉಗ್ರರಿಗೆ ನಿಗದಿಯಾಗಿರೊ ಹೈ ಸೆಕ್ಯುರಿಟಿ ಸೆಲ್ ಬಿಟ್ಟು ಬೇರೆ ಕಡೆ ಸಹ ಓಡಾಟ ನಡೆಸುತ್ತಿದ್ದ ನಸೀರ್ ವಿಚಾರಣಾಧೀನ ಕೈದಿಗಳನ್ನ ತನ್ನ ರೂಮಿಗೆ ಹಾಕಿಸಿಕೊಂಡು ಬಿಸಿನೆಸ್ ಮಾಡ್ತಿದ್ದ. ಹೊರಗಡೆಯಿಂದ ಡ್ರೈ ಫ್ರೂಟ್ಸ್, ಬಟ್ಟೆ ತರಿಸಿಕೊಂಡು ಜೈಲಿನ ಖೈದಿಗಳಿಗೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡ್ತಿದ್ದ ಎಂಬ ಅನೇಕ ರಹಸ್ಯಗಳು ಬಯಲಾಗಿದೆ.

    45 ಸಜೀವ ಗುಂಡುಗಳು ಪತ್ತೆ: ತನಿಖೆ ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು (CCB Officers) ಶಂಕಿರಿಂದ 45 ಸಜೀವ ಗುಂಡುಗಳನ್ನ ಪತ್ತೆ ಮಾಡಿ ಸೀಜ್ ಮಾಡಿದ್ದಾರೆ. 45 ಗುಂಡುಗಳ ಪೈಕಿ 15 ಸಜೀವ ಗುಂಡುಗಳು ಪೊಲೀಸರು ಬಳಸುವ ಗುಂಡುಗಳು ಎಂದು ತಿಳಿದುಬಂದಿದೆ. .303 ಹಾಗೂ .9 ಎಂಎಂನ ಸಜೀವ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರಿಗೂ ತಲೆಬಿಸಿಯಾಗಿದೆ. ಹೌದು. ಪತ್ತೆಯಾದ ಗುಂಡುಗಳಲ್ಲಿ .303 ಹಾಗೂ .9 ಎಂಎಂ ನ ಸಜೀವ ಗುಂಡುಗಳು ಪೊಲೀಸರು ಹಾಗೂ ಮಿಲಿಟರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಬಿಎಸ್‌ಎಫ್, ಐಟಿಬಿಪಿ, ಸಿಐಎಸ್‌ಎಫ್ ನಂತಹ ಅರೆಸೇನಾ ಪಡೆಗಳು ಕೂಡ ಈ ಬುಲೆಟ್‌ಗಳನ್ನ ಬಳಕೆ ಮಾಡುತ್ತವೆ.

    ಈ ಬುಲೆಟ್‌ಗಳು ಶಂಕಿತರ ಕೈ ಸೇರಿರೋದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ಸಂಘರ್ಷದಲ್ಲಿ ಈ ಗುಂಡುಗಳು ಕಳುವಾಗಿರಬಹುದಾ? ಅಥವಾ ಎಲ್ಲಾದರೂ ಪೊಲೀಸರಿಂದ ದರೋಡೆ ಮಾಡಿರಬಹುದಾ? ಅಥವಾ ಪೊಲೀಸ್ ಇಲಾಖೆಯವರೇ ಬುಲೆಟ್‌ಗಳನ್ನ ಮಾರಾಟ ಮಾಡಿರಬಹುದಾ? ಅನ್ನೋ ಪ್ರಶ್ನೆಗಳು ಹುಟ್ಟಿಕೊಂಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಉಗ್ರರ ಬಂಧನ (Suspected Terrorist Arrest) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ವಿಚಾರಗಳು ಬಯಲಾಗುತ್ತಿದೆ. ಈ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಷ್ಕರ್-ಎ-ತೊಯ್ಬಾ (LET) ಉಗ್ರ ನಜೀರ್ ನದ್ದೇ ಹವಾ ಎನ್ನುವಂತಾಗಿದೆ.

    ಹೌದು. ಬಂಧಿತ ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯವೊಂದು ಬಹಿರಂಗವಾಗಿದೆ. ಜೈಲಲ್ಲಿದ್ದುಕೊಂಡೇ ಈತ 30ಕ್ಕೂ ಹೆಚ್ಚು ಹಿಂದೂಗಳ ಮತಾಂತರ ಮಾಡುತ್ತಿದ್ದನು. ಬಡ ಅಮಾಯಕ ಹಿಂದೂ ಹುಡುಗರನ್ನು ಈತ ಕನ್ವರ್ಟ್ ಮಾಡುತ್ತಿದ್ದ. ಮೀಸೆ ಬೋಳಿಸಿ, ಗಡ್ಡ ಬಿಟ್ಟುಕೊಂಡಿರುವ ವಿಚಾರಣಾಧೀನ ಕೈದಿಗಳು ಬಂದರೆ ಎಂಟ್ರಿ ಹಾಕಿಸಿಕೊಳ್ಳುತ್ತಿದ್ದ. ಅಲ್ಲದೆ ಉಗ್ರರಿಗೆ ನಿಗದಿಯಾಗಿರೋ ಹೈಸೆಕ್ಯುರಿಟಿ ಸೆಲ್‍ನಲ್ಲೇ ಇರಿಸಿಕೊಳ್ಳುತ್ತಿದ್ದ. ಇದಕ್ಕಾಗಿ 70,000 ದವರೆಗೆ ನಜೀರ್ (Nazeer) ಹಣ ಚಾರ್ಜ್ ಮಾಡುತ್ತಿದ್ದ. ಆದರೆ ಜೈಲು ಸಿಬ್ಬಂದಿ ಮಾತ್ರ ನಜೀರ್ ನ ದುಷ್ಕೃತ್ಯವನ್ನು ಕಂಡೂ ಕಾಣದಂತಿದ್ದರು ಎಂಬ ಸಂಗತಿಯೊಂದು ವಿಚಾರಣೆ ವೇಳೆ ಹೊರಬಿದ್ದಿರುವ ಮಾಹಿತಿ ಲಭ್ಯವಾಗಿದೆ.

    ಸಜೀವ ಗುಂಡುಗಳು ಪತ್ತೆ: ಎ5 ಆರೋಪಿಯ ಮನೆಯಲ್ಲಿ ಹ್ಯಾಂಡ್ ಗ್ರೇನೆಡ್ ಪತ್ತೆಯಾಗಿದೆ. ತಬ್ರೇಜ್ ಮನೆಯಲ್ಲಿ 4 ಜೀವಂತ ಗ್ರೇನೆಡ್ ಪತ್ತೆಯಾಗಿದೆ. ಅಲ್ಲದೇ ಮಿಲಿಟರಿ ಪೊಲೀಸವರು ಬಳಸುವ 45 ಸಜೀವ ಗುಂಡುಗಳನ್ನ ಸಿಸಿಬಿ ಪೊಲೀಸರು (CCB Police) ಪತ್ತೆ ಮಾಡಿದ್ದಾರೆ. 303 ಹಾಗೂ 9ಎಂಎಂನ ಸಜೀವ ಗುಂಡುಗಳು ಪತ್ತೆಯಾಗಿದ್ದು, ಸದ್ಯ ಪೊಲೀಸರಿಗೆ ಲೈವ್ ಬುಲೆಟ್‍ಗಳು ಶಂಕಿತ ಉಗ್ರರ ಕೈಸೇರಿದ್ದು ಹೇಗೆ ಎಂಬ ಹೊಸ ತಲೆನೋವು ಶುರುವಾದಂತಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    9ಎಂಎಂನ ಸಜೀವ ಗುಂಡುಗಳು ಪೊಲೀಸರಿಗೆ ಮಾತ್ರ ಸೀಮಿತವಾಗಿವೆ. ಇವುಗಳನ್ನು ಬಿಎಸ್‍ಎಫ್, ಐಟಿಬಿಪಿ ಅರೆಸೇನಾ ಪಡೆಗಳು ಮಾತ್ರ ಬಳಸುತ್ತಾರೆ. ಹೀಗಾಗಿ ಬುಲೆಟ್‍ಗಳು ಶಂಕಿತರ ಕೈ ಸೇರಿದ ಬಗ್ಗೆ ಅನುಮಾನ ಹೆಚ್ಚಾಗಿದೆ. ಮಾವೋವಾದಿಗಳು- ಪೊಲೀಸ್ ಸಂಘರ್ಷದಲ್ಲಿ ಕಳುವಾಗಿದ್ದಾ ಎಂಬ ಪ್ರಶ್ನೆ ಎದಿದ್ದು, ಈ ಎಲ್ಲಾ ಮೂಲಗಳಿಂದಲೂ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್ ನಜೀರ್ (Abdul Nazeer) ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ (Governor) ರಾಷ್ಟ್ರಪತಿ ನೇಮಿಸಿದ್ದಾರೆ.

    ಇವರು ಮೂಲತಃ ಮೂಡಬಿದ್ರೆಯ ಬೆಳುವಾಯಿ ಕಾನ ನಿವಾಸಿ. ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

    ನಜೀರ್‌ ಅವರು ಕರ್ನಾಟಕ ಹೈಕೋರ್ಟ್‌ನಿಂದ 2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ನಂತರ 2023ರ ಜನವರಿ 4ರಲ್ಲಿ ನಿವೃತ್ತರಾದರು.

    ನಜೀರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಕೆ.ಎಸ್‌.ಪುಟ್ಟಸ್ವಾಮಿ ಪ್ರಕರಣ, ತ್ರಿವಳಿ ತಲಾಖ್‌, ಅಯೋಧ್ಯ-ಬಾಬ್ರಿ ಮಸೀದಿ ವಿವಾದ ಮೊದಲಾದ ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡಿದವರ ಸಾಲಿನಲ್ಲಿ ಇದ್ದರು. ಇದನ್ನೂ ಓದಿ: ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡುವ ಸರ್ವಾನುಮತದ ತೀರ್ಪು ನೀಡಿದ ಪೀಠದಲ್ಲಿ ನಜೀರ್‌ ಅವರು ಸಹ ಇದ್ದರು. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಂತಾ ಶ್ರದ್ಧೆ, ಭಕ್ತಿಯಿಂದ ಗೌರವಿಸುತ್ತೇವೆ: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k