Tag: ನಟನೆ

  • ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ತ್ತೀಚಿನ ದಿನಗಳಲ್ಲಿ ಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌ (Satya Prakash). ರಾಮಾ ರಾಮಾ ರೇ (Rama Rama Re) ಮತ್ತು ಒಂದಲ್ಲಾಎರಡಲ್ಲಾ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಇವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದವರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ (Director) ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ  ವರ್ಷಗಳಿಂದ ಮಾಡುತ್ತಿದ್ದಾರೆ.

    ಈಗಾಗಲೇ 35ಕ್ಕೂ ಹೆಚ್ಚಿನ ಸಿನಿಮಾಗಳನ್ನು ಸತ್ಯ ಸಿನಿ‌ ಡಿಸ್ಟ್ರಿಬ್ಯೂಟರ್ಸ್ ವತಿಯಿಂದ ವಿತರಿಸಿದ್ದಾರೆ.  ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಈ ಚಿತ್ರದಲ್ಲಿ ತಾವು ಸಹ ಒಂದ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.

    ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿ ಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿ ಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್   ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು.  ವಿಶೇಷ ಎಂದರೆ ಈ ಸಿನಿಮಾದಲ್ಲಿ ಸತ್ಯಪ್ರಕಾಶ್‌ ನಿರ್ದೇಶನ, ಮತ್ತು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜತಗೆ ನಿರ್ಮಾಣವನ್ನು ಸಹ ತಮ್ಮ ಸತ್ಯಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಮಾಡುತ್ತಿದ್ದಾರೆ.

    ಸದ್ಯಕ್ಕೆ ಸಿನಿಮಾ ಅನೌನ್ಸ್‌ಮೆಂಟ್‌ ಮಾತ್ರ ಈಗ ಮಾಡಿದ್ದು,   ಸತ್ಯಪ್ರಕಾಶ್‌ ಅವರ ಹಿಂದಿನ ಸಿನಿಮಾಗಳಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಈ ಚಿತ್ರದಲ್ಲಿಯೂ ಮುಂದುವರೆಯಲಿದೆ. ಸ್ಯಾಂಡಲ್‌ವುಡ್‌ನ ಪ್ರಮುಖ ಕಲಾವಿದರು  ಈ ಸಿನಿಮಾದ ಭಾಗವಾಗಲಿದ್ದಾರೆ. ಸದ್ಯಕ್ಕೆ ಸಿನಿಮಾಗೆ ಇನ್ನೂ ಟೈಟಲ್‌ ಇಟ್ಟಿಲ್ಲ, ಸದ್ಯದಲ್ಲೇ ಸಣ್ಣ ಟೀಸರ್‌ ಮೂಲಕ ಟೈಟಲ್‌ ಅನ್ನುಅನೌನ್ಸ್‌ ಮಾಡಲಿದ್ದಾರಂತೆ. ಇನ್ನೊಂದು ವಿಶೇಷ ಎಂದರೆ ಸತ್ಯಪ್ರಕಾಶ್‌ ಕಥೆ ಬರೆದಿರುವ ‘ಕಾಲಾ ಪತ್ಥರ್‌’ ಮತ್ತು ‘ಅನ್ಲಾಕ್‌ ರಾಘವ’ ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಒಂದು ನಿರೀಕ್ಷೆ ಇದೆ.

     

    ‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವಾಗಲಿದೆ. ’ಎನ್ನುವುದು ಸತ್ಯಪ್ರಕಾಶ್‌ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನ್ಯಾಸಿನಿಯಾಗಿದ್ದ ಮಹಾಲಕ್ಷ್ಮಿ ಮತ್ತೆ ಬಣ್ಣದ ಲೋಕಕ್ಕೆ

    ಸನ್ಯಾಸಿನಿಯಾಗಿದ್ದ ಮಹಾಲಕ್ಷ್ಮಿ ಮತ್ತೆ ಬಣ್ಣದ ಲೋಕಕ್ಕೆ

    ರಶುರಾಮ ಸೇರಿದಂತೆ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ, ಬಹುಭಾಷಾ ತಾರೆ (Actress) ಮಹಾಲಕ್ಷ್ಮಿ (Mahalakshmi) ಮತ್ತೆ ಬಣ್ಣದ ಪ್ರಪಂಚಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ದಕ್ಷಿಣದ ಅಷ್ಟೂ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ಮಹಾಲಕ್ಷ್ಮಿ 80ರ ದಶಕದಲ್ಲಿ ಬಹುಬೇಡಿಕೆಯ ನಟಿಯಾಗಿದ್ದರು. ಬೇಡಿಕೆಯಲ್ಲಿರುವಾಗಲೇ ಚಿತ್ರೋದ್ಯಮದಿಂದ ದೂರ ಸರಿದರು.

    ಚಿತ್ರೋದ್ಯಮದಿಂದ ದೂರವಾದ ನಂತರ ಮಹಾಲಕ್ಷ್ಮಿ ಏನು ಮಾಡುತ್ತಿದ್ದರು ಎಂದು ಗೊತ್ತಾಗಿದ್ದೆ ಹಲವು ವರ್ಷಗಳ ನಂತರ. ಅವರು ಸನ್ಯಾಸಿಯಾದರು ಎಂದು ಹೇಳಲಾಗುತ್ತಿತ್ತು. ಅದಕ್ಕೆ ಸಾಕ್ಷಿಯಾಗಿ ಹಲವು ಫೋಟೋಗಳು ಕೂಡ ಹರಿದಾಡಿದವು. ಆನಂತರ ಅದು ಸುಳ್ಳು ಎಂದು ಬಿಂಬಿಸುವ ಪ್ರಯತ್ನ ಕೂಡ ನಡೆಯಿತು. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್

    ಇದೀಗ ಮತ್ತೆ ಮಹಾಲಕ್ಷ್ಮಿ ಸುದ್ದಿಗೆ ಸಿಕ್ಕಿದ್ದಾರೆ. ಅವರು ಮತ್ತೆ ಬಣ್ಣದ ಪ್ರಪಂಚಕ್ಕೆ ಕಾಲಿಡುತ್ತಿದ್ದಾರೆ ಎನ್ನುವುದು ಸದ್ಯದ ವರ್ತಮಾನ. ಕನ್ನಡದ ಮನರಂಜನಾ ವಾಹಿನಿಯೊಂದು ಅವರನ್ನು ಸಂಪರ್ಕ ಮಾಡಿದ್ದು, ಧಾರಾವಾಹಿಯೊಂದರ (Serial) ಪ್ರಮುಖ ಪಾತ್ರ ಮಾಡಲು ಕೇಳಿದೆಯಂತೆ. ಅದಕ್ಕೆ ಮಹಾಲಕ್ಷ್ಮಿ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಮಹಾಲಕ್ಷ್ಮಿ ಈ ಹಿಂದೆ ಬಣ್ಣದ ಪ್ರಪಂಚಕ್ಕೆ ಎರಡನೇ ಬಾರಿ ಕಾಲಿಟ್ಟಾಗಲೂ ಕನ್ನಡ ಚಿತ್ರೋದ್ಯಮವನ್ನೆ ಆರಿಸಿಕೊಂಡಿದ್ದಾರೆ. ಇದೀಗ ಮತ್ತೆ ಕನ್ನಡ ಕಿರುತೆರೆಯ ಮೂಲಕ ನಟನೆಯತ್ತ (Acting) ಮುಖ ಮಾಡುತ್ತಿದ್ದಾರೆ. ಅವರು ನಟಿಸಲಿರುವ ಧಾರಾವಾಹಿ ಯಾವುದು? ಯಾವ ಚಾನೆಲ್ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟನೆಯಿಂದ ದೂರ ಉಳಿಯಲಿದ್ದಾರಂತೆ ಬಾಲಿವುಡ್ ನಟ ಆಮೀರ್ ಖಾನ್

    ನಟನೆಯಿಂದ ದೂರ ಉಳಿಯಲಿದ್ದಾರಂತೆ ಬಾಲಿವುಡ್ ನಟ ಆಮೀರ್ ಖಾನ್

    ಲಾಲ್ ಸಿಂಗ್ ಚಡ್ಡಾ ಸಿನಿಮಾದ ಸೋಲು ಆಮೀರ್ ಖಾನ್ ಅವರನ್ನು ಭಾರೀ ನಿದ್ದೆಗೆಡಿಸಿದೆಯಂತೆ. ಈ ಸಿನಿಮಾದ ಬಗ್ಗೆ ಅವರಿಗೆ ಅಪಾರ ನಂಬಿಕೆಯಿತ್ತು. ಈ ಸಿನಿಮಾ ಅದ್ಭುತ ಯಶಸ್ಸು ಗಳಿಸುತ್ತದೆ ಎಂದೇ ನಂಬಲಾಗಿತ್ತು. ಬಾಕ್ಸ್ ಆಫೀಸು ತುಂಬುವುದರ ಜೊತೆಗೆ ವಿಮರ್ಶಕರು ಕೂಡ ಮೆಚ್ಚಿ ಮಾತನಾಡುತ್ತಾರೆ ಎಂದು ಆಮೀರ್ ಬಲವಾಗಿ ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಯಿತು. ಅಂದುಕೊಂಡಷ್ಟು ಸಿನಿಮಾ ಗೆಲ್ಲಲಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಕಮಾಯಿ ಮಾಡಲಿಲ್ಲ. ಹಾಗಾಗಿ ಆಮೀರ್ ಅವರಿಗೆ ಹಿನ್ನೆಡೆ ಆಯಿತು.

    ಸಿನಿಮಾ ರಿಲೀಸ್ ಗೂ ಮುನ್ನ ಟ್ರೇಲರ್ ಭಾರೀ ಸದ್ದು ಮಾಡಿತ್ತು. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಹಾಗಾಗಿಯೇ ಈ ಸಿನಿಮಾದ ಬಗ್ಗೆ ಸಿನಿ ಪಂಡಿತರು ಕೂಡ ತಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕಿದ್ದರು. ದಾಖಲೆಯ ರೀತಿಯಲ್ಲಿ ಈ ಸಿನಿಮಾ ಹಣ ಮಾಡುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಬಾಯ್ಕಾಟ್ ಈ ಸಿನಿಮಾವನ್ನು ಮಕಾಡೆ ಮಲಗಿಸಿತು. ಜನರನ್ನು ಥಿಯೇಟರ್ ಗೆ ಕರೆದುಕೊಂಡು ಬರುವಲ್ಲಿ ತೊಂದರೆ ಮಾಡಿತು. ಇದನ್ನೂ ಓದಿ: ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಲಾಲ್ ಸಿಂಗ್ ಚಡ್ಡಾ ಸೋಲು, ಆಮೀರ್ ಅವರಿಗೆ ನೋವು ತಂದಿದೆ. ಇಂಥದ್ದೊಂದು ಸಿನಿಮಾ ಮಾಡಿದಾಗ ಜನ ಸ್ವೀಕರಿಸಲಿಲ್ಲ ಎಂದು ತಮ್ಮನ್ನು ತಾವೇ ಪ್ರಶ್ನಿಸಿಕೊಂಡಿದ್ದಾಗಿದೆ. ಈ ಎಲ್ಲ ಕಾರಣದಿಂದಾಗಿ ಆಮೀರ್ ಖಾನ್ ಸ್ವಲ್ಪ ದಿನ ಸಿನಿಮಾ ರಂಗದಿಂದಲೇ ದೂರ ಉಳಿಯುವಂತಹ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಟನೆಯಿಂದಲೇ ದೂರ ಸರಿಯುವುದಾಗಿ ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರಂತೆ. ಈ ನಿರ್ಧಾರ ಆಮೀರ್ ಅಭಿಮಾನಿಗಳಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು  – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

    ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

    – ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ
    – ಬಣ್ಣ ಹಾಕದೇ, ಗ್ಲಿಸರಿನ್ ಇಲ್ಲದೇ ನಟನೆ ಡಿಕೆಶಿಗೆ ಒಲಿದು ಬಂದಿದೆ

    ಚಿಕ್ಕಮಗಳೂರು: ಡಿಕೆಶಿ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಕಾಂಗ್ರೆಸ್ (Congress) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಸಿ.ಟಿ.ರವಿ (CT Ravi) ವ್ಯಂಗ್ಯವಾಡಿದ್ದಾರೆ.

    ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೆಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗುವುದಕ್ಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗುವುದಕ್ಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನಾನು ಕೃಷಿಕ ಎಂದಿದ್ದ ಡಿಕೆಶಿಗೆ ಶಾಕ್‌ ನೀಡಲು ಸಿಬಿಐ ತಯಾರಿ

    ಕಾಂತಾರ (Kantara) ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ (Rishab Shetty) ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ದರೂ ಡಿಕೆಶಿ ಪಾಲಿಗೆ. ಈ ರೀತಿಯ ಕಾಮೆಂಟ್‍ಗಳನ್ನು ನಾನು ನೋಡಿದ್ದೇನೆ. ಲೇಟಾಗಿದೆ, ಆದರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡುವುದು ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್

    ಭಾರತವನ್ನು ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್, ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನು ಮತಾಂಧರ ಕೈಗೆ ಕೊಟ್ಟು ಬಂದರು. ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೇ ಸಾಯಬೇಕಾಯಿತು. ಇಂತಹ ವಿಭಜಿತ ಭಾರತವನ್ನು ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ. ಅದಕ್ಕೆ ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದ್ಯಾ? ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಪಶ್ಚಾತ್ತಾಪ ಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ? ಈ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ. ಪ್ರಿಯಾಂಕ ವಾದ್ರಾ ಅವರೇ ನೇತೃತ್ವ ವಹಿಸಿದ್ದರು. 387 ಸ್ಥಾನದಲ್ಲಿ ಠೇವಣಿ ಹೋಯಿತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದ ಬಾಲುಗೆ ಪ್ರಶಸ್ತಿ ಸಿಕ್ಕಿತ್ತು

    ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದ ಬಾಲುಗೆ ಪ್ರಶಸ್ತಿ ಸಿಕ್ಕಿತ್ತು

    ಬೆಂಗಳೂರು: ಗಾಯಕರಾಗಿ ಬಿಡುವಿಲ್ಲದ ದಿನಗಳಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೆಲಸ ಮಾಡುತ್ತಿದ್ದರು.

    ಹೌದು ಕೇವಲ ಗಾಯಕರಾಗಿ ಮಾತ್ರವಲ್ಲ ಡಬ್ಬಿಂಗ್ ಆರ್ಟಿಸ್ಟ್ ಆಗಿ, ಕಲಾವಿದರಾಗಿ ಸಹ ಎಸ್‍ಪಿಬಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕೆ.ಬಾಲಂಚಂದರ್ ನಿರ್ದೇಶನದ ಮನ್ಮಥಲೀಲ ಸಿನಿಮಾದಲ್ಲಿ ಕಮಲ್ ಹಾಸನ್ ಗಂಟಲು ಕೈಕೊಟ್ಟ ಹಿನ್ನೆಲೆಯಲ್ಲಿ ಎಸ್‍ಪಿಬಿ ಡಬ್ಬಿಂಗ್ ಆರ್ಟಿಸ್ಟ್ ಆಗಬೇಕಾಯ್ತು. ಮುಂದೆ ರಜಿನಿಕಾಂತ್, ವಿಷ್ಣುವರ್ಧನ್, ಸಲ್ಮಾನ್ ಖಾನ್, ಕೆ.ಭಾಗ್ಯರಾಜ್, ಅನಿಲ್ ಕಪೂರ್, ಗಿರೀಶ್ ಕಾರ್ನಾಡ್, ಜೆಮಿನಿ ಗಣೇಶನ್, ಅರ್ಜುನ್ ಸರ್ಜಾ, ರಘುವರನ್, ಸುಮನ್ ಸೇರಿ ಹಲವರಿಗೆ ಧ್ವನಿ ಆಗಿದ್ದರು.

    ದಶಾವತಾರಂ ಸಿನಿಮಾದಲ್ಲಿ ಕಮಲ್ ಹಾಸನ್ ಅವರ ಏಳು ಪಾತ್ರಗಳಿಗೆ ಎಸ್‍ಪಿಬಿ ಡಬ್ಬಿಂಗ್ ಹೇಳಿದ್ದು ವಿಶೇಷ. ಅನ್ನಮಯ್ಯ ಸಿನಿಮಾದಲ್ಲಿ ಸುಮನ್‍ಗೆ ಡಬ್ಬಿಂಗ್ ಹೇಳಿದ್ದ ಬಾಲುಗೆ ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಎಂದು ನಂದಿ ಅವಾರ್ಡ್ ನೀಡಲಾಗಿತ್ತು. ಗಾಂಧಿ ಸಿನಿಮಾದಲ್ಲಿ ಲೀಡ್ ರೋಲ್‍ನಲ್ಲಿ ನಟಿಸಿದ್ದ ಕಿಂಗ್ ಬೆನ್‍ಸ್ಲೇಗೂ ಎಸ್‍ಪಿಬಿ ಡಬ್ಬಿಂಗ್ ಹೇಳಿದ್ದರು. ಈ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಿದ್ದರು.

    ಎಸ್‍ಪಿಬಿಯೊಳಗಿನ ನಟ
    ತೆರೆ ಹಿಂದೆ ಗಾಯಕನಾಗಿ, ಡಬ್ಬಿಂಗ್ ಆರ್ಟಿಸ್ಟ್ ಆಗಿ ಕೋಟಿ ಕೋಟಿ ಅಭಿಮಾನಿಗಳನ್ನು ರಂಜಿಸಿದ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಟನಾಗಿ ಸಹ ಹಲವು ಭಾಷೆಗಳ ಸಿನಿಮಾಗಳಲ್ಲಿ ಕಾಣಿಸಿಕೊಂಡು ಮಿಂಚಿದ್ದರು. ಕನ್ನಡದಲ್ಲಿ ಬಾಳೊಂದು ಚದುರಂಗ, ತಿರುಗುಬಾಣ, ಸಂದರ್ಭ, ಹುಲಿಯಾ, ಮುದ್ದಿನ ಮಾವ, ನಾನು ನನ್ನ ಹೆಂಡ್ತಿ, ಮಾಂಗಲ್ಯಂ ತಂತುನಾನೇನಾ, ಹೆತ್ತರೆ ಹೆಣ್ಣನ್ನೇ ಹೇರಬೇಕು, ಮಹಾ ಎಡಬಿಡಂಗಿ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ತೆಲುಗಿನಲ್ಲಿ ಮಿಥುನಂ, ಪವಿತ್ರಬಂಧಂ ಸೇರಿ ನೂರಾರು ಸಿನಿಮಾಮಗಳಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಎಸ್‍ಪಿಬಿ ಬಣ್ಣ ಹಚ್ಚಿದ್ದು ತೆಲುಗಿನ ದೇವದಾಸು ಸಿನಿಮಾಗೆ.

  • ಕೆಜಿಎಫ್-2ಗೆ ಮತ್ತೋರ್ವ ದಕ್ಷಿಣ ಭಾರತದ ಹಿರಿಯ ನಟಿ ಎಂಟ್ರಿ

    ಕೆಜಿಎಫ್-2ಗೆ ಮತ್ತೋರ್ವ ದಕ್ಷಿಣ ಭಾರತದ ಹಿರಿಯ ನಟಿ ಎಂಟ್ರಿ

    ಬೆಂಗಳೂರು: ಭಾರತ ಚಿತ್ರದಲ್ಲೇ ಟ್ರೆಂಡ್ ಹುಟ್ಟು ಹಾಕಿರುವ ಕೆಜಿಎಫ್-2 ಚಿತ್ರಕ್ಕೆ ಮತ್ತೋರ್ವ ದಕ್ಷಿಣ ಭಾರತದ ಹಿರಿಯ ನಟಿ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

    ಕೆಜಿಎಫ್-2 ಚಿತ್ರ ತನ್ನ ತಾರಾಗಣದ ಮೂಲಕ ಸಖತ್ ಸದ್ದು ಮಾಡುತ್ತಿರುವ ಚಿತ್ರ. ಇಡೀ ಭಾರತ ಚಿತ್ರರಸಿಕರೇ ರಾಕಿಭಾಯ್ ಬರುವಿಕೆಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಕೊನೆಯ ಹಂತಕ್ಕೆ ಬಂದಿದೆ. ಈ ವೇಳೆ ದಕ್ಷಿಣ ಭಾರತದ ಹಿರಿಯ ನಟಿ ಈಶ್ವರಿ ರಾವ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

    ಹೌದು ದಕ್ಷಿಣ ಭಾರತದಲ್ಲಿ ತೆಲುಗು, ತಮಿಳು, ಮಾಲಿಯಾಳಂ ಸೇರಿದಂತೆ ಕನ್ನಡದಲ್ಲೂ ನಟನೇ ಮಾಡಿರುವ ಈಶ್ವರಿ ರಾವ್, ಕೆಜಿಎಫ್-2 ಚಿತ್ರದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಿರುವು ಕೊಡುವ ಒಂದು ಪಾತ್ರದಲ್ಲಿ ಈಶ್ವರಿಯವರು ನಟಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ವಿಚಾರ ಈಶ್ವರಿಯವರು ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

    ದಕ್ಷಿಣ ಭಾರತದಲ್ಲೇ ಖ್ಯಾತ ನಟಿಯಾಗಿರುವ ಈಶ್ವರಿ ರಾವ್, ಪಂಚಭಾಷಾ ತಾರೆ ಕೆಲ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. 90ರ ದಶಕದಲ್ಲಿ ರಜನಿಕಾಂತ್, ಕಮಲ್ ಹಾಸನ್ ನಂತಹ ನಟರ ಜೊತೆ ನಟಿಸಿ ಸೈ ಎನಿಸಿಕೊಂಡ ಒಳ್ಳೆಯ ನಟಿ. ಜೊತೆಗೆ ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅವರ ‘ಕಾಲ’ ಸಿನಿಮಾದಲ್ಲೂ ಈಶ್ವರಿಯವರು ನಟಿಸಿದ್ದಾರೆ. ಜೊತೆಗೆ 1995ರಲ್ಲಿ ಎಸ್ ನಾರಾಯಣ್ ನಿರ್ದೇಶನ ‘ಮೇಘ ಮಾಲೆ’ ಎಂಬ ಕನ್ನಡ ಸಿನಿಮಾದಲ್ಲೂ ಈಶ್ವರಿಯವರು ಅಭಿನಯಿಸಿದ್ದಾರೆ.

    ಈಗಾಗಲೇ ಕೆಜಿಎಫ್-2 ಚಿತ್ರತಂಡದಲ್ಲಿ ಪ್ರತಿಭಾನ್ವಿತ ನಟ-ನಟಿಯರ ದಂಡೇ ಇದೆ. ಭಾರತ ಚಿತ್ರರಂಗದಲ್ಲೇ ಮೇರು ನಟ-ನಟಿಯರಾಗಿ ಗುರುತಿಸಿಕೊಂಡವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಂತಯೇ ಚಿತ್ರದಲ್ಲಿ ಬರುವ ಅಧಿರಾನ ಪಾತ್ರದಲ್ಲಿ ಬಾಲಿವುಡ್‍ನ ಸಂಜಯ್ ದತ್, ಪ್ರಧಾನಿ ರಮೀಕಾ ಸೇನ್ ಪಾತ್ರದಲ್ಲಿ ಹಿರಿಯ ನಟಿ ರವೀನಾ ಟಂಡನ್, ರಾಕಿಂಗ್ ಸ್ಟಾರ್ ಯಶ್, ಕನ್ನಡದ ಹಿರಿಯ ನಟ ಅನಂತ್ ನಾಗ್ ಮತ್ತು ಅಚ್ಯುತ್ ರಾವ್ ಸೇರಿದಂತೆ ಹಲವು ಮಂದಿ ನಟನೆ ಮಾಡಿದ್ದಾರೆ.

    ಈಗಾಗಲೇ ಚಿತ್ರತಂಡ ಅಕ್ಟೋಬರ್ 23ಕ್ಕೆ ಸಿನಿಮಾವನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದೆ. ಅದರಂತೆ ಶೂಟಿಂಗ್ ಕೂಡ ಅಂತ್ಯಕ್ಕೆ ಬಂದಿದೆ. ಕೊರೊನಾ ಲಾಕ್‍ಡೌನ್ ನಿಂದ ಮುಂದಕ್ಕೆ ಹೋಗಿದ್ದ ಶೂಟಿಂಗ್ ಕೆಲಸ ಮತ್ತೆ ಆರಂಭವೂ ಆಗಿದೆ. ಈಗಾಗಲೇ ಚಿತ್ರದ ಪೋಸ್ಟರ್ ಗಳು ಸಖತ್ ಸದ್ದು ಮಾಡಿದೆ. ಯಶ್ ಅಭಿಮಾನಿಗಳು ಟ್ರೈಲರ್ ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರದ ರಿಲೀಸ್ ವೇಳೆಗೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

  • ಪತ್ನಿ ಜೊತೆ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಸಿಕ್ಸರ್ ಕಿಂಗ್ ಯುವಿ

    ಪತ್ನಿ ಜೊತೆ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಸಿಕ್ಸರ್ ಕಿಂಗ್ ಯುವಿ

    ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು, ಪತ್ನಿ ಹಜೇಲ್ ಕೀಜ್ ಜೊತೆ ವೆಬ್ ಸೀರಿಸ್‍ನಲ್ಲಿ ನಟನೇ ಮಾಡುವ ಮೂಲಕ ಕ್ರಿಕೆಟ್ ಬಳಿಕ ಸಿನಿಮಾರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧವಾಗಿದ್ದಾರೆ.

    ಹೌದು ಕ್ರಿಕೆಟ್ ಆಟಕ್ಕೆ ಯುವಿ ವಿದಾಯ ಹೇಳಿದ ಮೇಲೆ ಅವರು ಮತ್ತೇನು ಮಾಡುತ್ತಾರೆ ಎಂಬ ಪ್ರಶ್ನೆ ಮೂಡಿತ್ತು. ವಿದಾಯದ ನಂತರ ಯುವರಾಜ್ ಸಿಂಗ್ ಅವರು ಕೆಲ ವಿದೇಶಿ ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ಪತ್ನಿ ಜೊತೆ ವೆಬ್ ಸೀರಿಸ್ ನಲ್ಲಿ ನಟಿಸುವ ಮೂಲಕ ತನ್ನ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

    ಇಷ್ಟು ದಿನ ಕ್ರಿಕೆಟ್‍ನಲ್ಲಿ ತನ್ನ ಆಲ್‍ರೌಂಡರ್ ಆಟದ ಮೂಲಕ ಕ್ರೀಡಾಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತಿದ್ದ ಈ ಎಡಗೈ ದಾಂಡಿಗ, ಈಗ ಅಸ್ಸಾಂನ ಡ್ರೀಮ್ ಹೌಸ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವ ವೆಬ್ ಸರಣಿಯಲ್ಲಿ ಅಭಿನಿಯಿಸುತ್ತಿದ್ದಾರೆ. ಈ ವೆಬ್ ಸರಣಿಯಲ್ಲಿ ಅವರ ಪತ್ನಿ ಹಜೇಲ್ ಕೀಜ್ ಮತ್ತು ಸಹೋದರ ಜೋರಾವರ್ ಸಿಂಗ್ ಅವರು ಕೂಡ ಅಭಿನಯಿಸಲಿದ್ದಾರೆ.

    ಈ ವೆಬ್ ಸರಣಿಯ ಇನ್ನೊಂದು ವಿಶೇಷವೆಂದರೆ ಇದರಲ್ಲಿ ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟೂ ದಿನ ಬ್ಯಾಟ್ ಹಿಡಿದು ಘರ್ಜಿಸಿದ್ದ ಯುವಿ ಈಗ ಬಣ್ಣ ಹಚ್ಚಿ ಮೋಡಿ ಮಾಡಲು ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಆದರೆ ಯುವಿ ಈ ವೆಬ್ ಸರಣಿಯಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ.

    ಇತ್ತೀಚೆಗೆ ಭಾರತದ ಕ್ರಿಕೆಟ್ ತಂಡದ ಆಟಗಾರರು ಹೆಚ್ಚು ಚಿತ್ರರಂಗದ ಕಡೆ ಮುಖ ಮಾಡಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಭಾರತದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಅವರು ತಮಿಳಿನಲ್ಲಿ ಫ್ರೆಂಡ್ ಶಿಪ್ ಎಂಬ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದರು. ಇದಾದ ನಂತರ ಮಾಜಿ ವೇಗಿ ಇರ್ಫಾನ್ ಪಠಾಣ್ ಕೂಡ ಮೊದಲ ಬಾರಿಗೆ ಇದೇ ವರ್ಷ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಪಠಾಣ್ ಅವರು ವಿಕ್ರಮ್ ನಟನೆಯ ವಿಕ್ರಮ್ 58 ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ಸ್ವತಃ ಸಿನಿಮಾದ ನಿರ್ದೇಶಕ ಅಜಯ್ ಜ್ಞಾನಮುತ್ತು ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದರು.

    ಭಾರತ ತಂಡದ ಪರ 17 ವರ್ಷ ಅಮೋಘವಾಗಿ ಆಟವಾಡಿದ್ದ ಯುವರಾಜ್ ಸಿಂಗ್, ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದರು. 2011 ರ ವಿಶ್ವಕಪ್‍ನಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಯುವಿ, ಇಂಡಿಯಾಗೆ ಕಪ್ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯಾವುದೇ ವಿದಾಯ ಪಂದ್ಯಗಳನ್ನು ಆಡದೇ ನಿವೃತ್ತಿ ಘೋಷಿಸಿದ್ದು, ಅವರ ಅಭಿಮಾನಿಗಳಿಗೆ ಬೇಸರ ತರಿಸಿತ್ತು.

  • ಇನ್ನೊಬ್ಬರ ಮುಖದಲ್ಲಿ ನಗು ತರಿಸಲು ನನಗೆ ಇಷ್ಟ: ಸನ್ನಿ ಲಿಯೋನ್

    ಇನ್ನೊಬ್ಬರ ಮುಖದಲ್ಲಿ ನಗು ತರಿಸಲು ನನಗೆ ಇಷ್ಟ: ಸನ್ನಿ ಲಿಯೋನ್

    ಮುಂಬೈ: ಇನ್ನೊಬ್ಬರ ಮುಖದಲ್ಲಿ ನಗು ತರಿಸಲು ನನಗೆ ಇಷ್ಟವಾಗುತ್ತದೆ ಎಂದು ಬಾಲಿವುಡ್‍ನ ಮಾದಕ ನಟಿ ಸನ್ನಿ ಲಿಯೋನ್ ಹೇಳಿದ್ದಾರೆ.

    ಸಿನಿಮಾ ಮತ್ತು ರಿಯಾಲಿಟಿ ಶೋಗಳ ಜೊತೆಗೆ ವೆಬ್ ಸೀರಿಸ್‍ನಲ್ಲೂ ನಟಿಸುತ್ತಿರುವ ಸನ್ನಿ, ಆನ್‍ಲೈನ್ ಚಾನೆಲ್‍ವೊಂದರಲ್ಲಿ ಪ್ರಸಾರವಾಗುವ ವೈಬ್ ಸೀರಿಸ್‍ನಲ್ಲಿ ನಟಿಸಲು ಸಿದ್ಧವಾಗಿದ್ದಾರೆ. ಇದು ಕಾಮಿಡಿ ವೆಬ್ ಸೀರಿಸ್ ಆಗಿದ್ದು, ನನಗೆ ಕಾಮಿಡಿ ಚಿತ್ರಗಳಲ್ಲಿ ನಟಿಸಲು ತುಂಬಾ ಇಷ್ಟ. ಇನ್ನೊಬ್ಬರ ಮುಖದಲ್ಲಿ ನಗು ತರಿಸುವ ಕೆಲಸ ನನಗೆ ಬಹಳ ಸಂತೋಷ ಕೊಡುತ್ತದೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಸನ್ನಿ ಲಿಯೋನ್, ಈಗ ಸದ್ಯಕ್ಕೆ ವೆಬ್ ಸೀರಿಸ್ ಬಗ್ಗೆ ಹಚ್ಚಿನ ಮಾಹಿತಿ ನೀಡಲು ಆಗುವುದಿಲ್ಲ. ಆದರೆ ಈ ವೆಬ್ ಸೀರಿಸ್‍ಗಾಗಿ ನಾನು ಕಾತುರದಿಂದ ಕಾಯುತ್ತಿದ್ದೇನೆ. ಇದರಲ್ಲಿ ಕಾಮಿಡಿ ಜಾನರ್ ನಲ್ಲಿ ನಟಿಸಲು ಬಹಳ ಸಂತೋಷವಾಗುತ್ತಿದೆ. ಇನ್ನೊಬ್ಬರ ಮುಖದಲ್ಲಿ ನಗು ತರಿಸುವ ಕೆಲಸ ನನಗೆ ಇಷ್ಟ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ತಾವೇ ನಿರ್ಮಾಪಕರಾಗಿ ಸಿನಿಮಾಗಳನ್ನು ನಿರ್ಮಾಣ ಮಾಡಲು ತಯಾರಿ ನಡೆಸುತ್ತಿರುವ ಸನ್ನಿ, ಈ ಹಿಂದೆ ಕೆಲ ವೆಬ್ ಸೀರಿಸ್‍ನಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ತನ್ನದೇ ಬಯೋಗ್ರಫಿಯಾದ ಕರೆನ್ಜಿತ್ ಕೌರ್ ಮತ್ತು ರಾಗಿಣಿ ಎಂಎಂಎಸ್ ರಿಟನ್ರ್ಸ್-2 ಎಂಬ ವೆಬ್ ಸೀರಿಸ್‍ನಲ್ಲಿ ನಟಿಸಿದ್ದರು. ಇದರ ಜೊತೆಗೆ ಇತ್ತೀಚೆಗೆ ಬಿಡುಗಡೆಯಾದ ವಾಟ್ ದಿ ಲವ್ ವಿತ್ ಕರಣ್ ಜೋಹರ್ ಎಂಬ ವೆಬ್ ಸರಣಿಯಲ್ಲಿ ಅಭಿನಯಿಸಿದ್ದರು.

    ಈ ಮೂರು ವೆಬ್ ಸರಣಿಗಳ ನಂತರ ಈಗ ಕಾಮಿಡಿ ಜಾನರ್ ನಲ್ಲಿ ಬರುತ್ತಿರುವ ವೆಬ್ ಸೀರಿಸ್ ಮಾಡಲು ಸನ್ನಿ ಓಕೆ ಎಂದಿದ್ದಾರೆ. ಈ ಮೂಲಕ ಇಷ್ಟು ದಿನ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ಈ ಹಾಟ್ ಬ್ಯೂಟಿ, ಈಗ ಪ್ರೇಕ್ಷಕರನ್ನು ನಗೆ ಎಂಬ ದೋಣಿಯಲ್ಲಿ ತೇಲಿಸಲು ಸಿದ್ಧವಾಗಿದ್ದಾರೆ. ಆದರೆ ಈ ವೆಬ್ ಸೀರಿಸ್ ಯಾವಾಗ ಬಿಡುಗಡೆಯಾಗುತ್ತದೆ. ಉಳಿದ ಕಲಾವಿದರ ವಿವರ ತಿಳಿಯಬೇಕಿದೆ.

    ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸನ್ನಿ, ತನ್ನ ಅವಳಿ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಿ ಅದನ್ನು ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಜೊತಗೆ ಇಬ್ಬರು ಮಕ್ಕಳಿಗೂ ಎರಡನೇ ವರ್ಷದ ಹುಟ್ಟು ಹಬ್ಬದ ಶುಭಾಶಯಗಳು. ನನ್ನ ಜೀವನದ ಪ್ರತಿಯೊಂದು ದಿನವನ್ನು ಸಂತೋಷವನ್ನಾಗಿ ಮಾಡಿದ್ದೀರಿ. ಪ್ರತಿ ಬಾರಿ ನೀವು ನಕ್ಕು ಕುಣಿದಾಡಿದಾಗ, ಡ್ಯಾನ್ಸ್, ಹಾಡು, ನನ್ನನ್ನು ಅಮ್ಮಾ ಎಂದು ಕರೆದಾಗ ಹೃದಯ ಕರಗಿದಂತ ಅನುಭವವಾಗುತ್ತದೆ. ನನ್ನ ಮಕ್ಕಳ ಮೇಲೆ ದೇವರ ಆಶೀರ್ವಾದ ಇರಲಿ ಎಂದು ಸದಾ ಪ್ರಾರ್ಥಿಸುತ್ತೇನೆ ಎಂದು ಸನ್ನಿ ಲಿಯೋನ್ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು.

    https://www.instagram.com/p/B8bvjAFB5Mo/

  • ಆ್ಯಕ್ಟಿಂಗ್ & ಸೆಕ್ಸ್, ಬ್ರೆಡ್-ಬಟರ್ ಇದ್ದಂತೆ: ಕಾರ್ತಿಕ್ ಆರ್ಯನ್

    ಆ್ಯಕ್ಟಿಂಗ್ & ಸೆಕ್ಸ್, ಬ್ರೆಡ್-ಬಟರ್ ಇದ್ದಂತೆ: ಕಾರ್ತಿಕ್ ಆರ್ಯನ್

    ಮುಂಬೈ: ಆ್ಯಕ್ಟಿಂಗ್ & ಸೆಕ್ಸ್, ಬ್ರೆಡ್ ಆ್ಯಂಡ್ ಬಟರ್ ಇದ್ದಂತೆ ಎಂದು ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಸಂದರ್ಶನದಲ್ಲಿ ಹೇಳಿದ್ದಾರೆ.

    ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಾರ್ತಿಕ್ ಆರ್ಯನ್, ನನ್ನ ಖಾಸಗಿ ಜೀವನವನ್ನು ಹಂಚಿಕೊಳ್ಳಲು ಇಷ್ಟಪಡಲ್ಲ. ಹಾಗೆಯೇ ಮರೆಮಾಚುವ ಪ್ರಯತ್ನವನ್ನು ಮಾಡಲ್ಲ. ಕೆಲವು ದಿನಗಳ ಹಿಂದೆ ಯಾರ ಜೊತೆಗೂ ಊಟಕ್ಕೆ ಹೋಗುತ್ತಿಲ್ಲ. ಡಿನ್ನರ್ ಹೋದರೆ ಅದು ಮತ್ತಷ್ಟು ಊಹಾಪೋಹ ಸುದ್ದಿಗಳಿಗೆ ಕಾರಣ ಆಗುತ್ತೆ ಎಂದು ಹೇಳಿದರು.

    ನಟನೆ ಮತ್ತು ಸೆಕ್ಸ್ ಬಗ್ಗೆ ಮಾತನಾಡುತ್ತಾ ಎರಡೂ ಬ್ರೆಡ್ ಆ್ಯಂಡ್ ಬಟರ್ (ಬ್ರೆಡ್ ಮತ್ತು ಬೆಣ್ಣೆ) ಇದ್ದಂತೆ. ಎರಡೂ ಜೀವನದಲ್ಲಿ ಅವಶ್ಯಕವಾಗಿವೆ. ಪ್ರೀತಿ ಎಂಬುವುದು ಎರಡೂ ಕೈಗಳು ಅಂದ್ರೆ ಜೀವಗಳನ್ನು ಜೋಡಿಸುವ ಸೇತುವೆ ಎಂಬುವುದು ನನ್ನ ನಂಬಿಕೆ ಎಂದಿದ್ದಾರೆ.

    ಇದೇ ಸಂದರ್ಶನದಲ್ಲಿ ‘ಪತಿ ಪತ್ನಿ ಔರ್ ವೋ’ ಸಿನಿಮಾದ ನಟಿಯರಾದ ಅನನ್ಯ ಪಾಂಡೆ ಮತ್ತು ಭೂಮಿ ಪೆಡ್ನೆಕರ್ ಸಹ ಭಾಗಿಯಾಗಿದ್ದರು. ಇಬ್ಬರು ಸಹ ಸಿನಿಮಾ ಮತ್ತು ಖಾಸಗಿ ಬದುಕಿನ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು.

    ಮಾಜಿ ಗೆಳೆಯನನ್ನು ಹೊರತುಪಡಿಸಿ ಬೇರೆ ಯಾರು ನನಗೆ ಫ್ರೆಂಡ್ ಗಳಿಲ್ಲ. ಆತನಿಂದ ಕೆಲವು ಪ್ರಶ್ನೆಗಳಿಗೆ ಉತ್ತರ ಬೇಕಿದೆ. ಅವನು ನನ್ನನ್ನು ಬ್ಲಾಕ್ ಮಾಡಿದ್ದು, ಪ್ರಶ್ನೆಗಳಿಗೆ ಉತ್ತರಗಳಿಗಾಗಿ ಕಾಯುತ್ತಿದ್ದೇನೆ ಎಂದು ಅನನ್ಯ ತಮ್ಮ ಬ್ರೇಕಪ್ ಬಗ್ಗೆ ಹೇಳಿಕೊಂಡಿದ್ದಾರೆ.

    ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಜೊತೆ ಕಾರ್ತಿಕ್ ಆರ್ಯನ್ ಹೆಸರು ಕೇಳಿ ಬಂದಿತ್ತು. ಶೂಟಿಂಗ್ ಸಮಯದ ಜೊತೆಗೆ ಖಾಸಗಿಯಾಗಿ ಇಬ್ಬರು ಹೆಚ್ಚು ಕಾಣಿಸಿಕೊಳ್ಳತೊಡಗಿದ್ದರು. ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ ಎಂಬ ಸುದ್ದಿಗಳೆಲ್ಲಾ ಬಾಲಿವುಡ್ ಅಂಗಳದಲ್ಲಿ ಹರಿದಾಡಿದ್ದವು. ಇತ್ತೀಚೆಗೆ ಕಾರ್ತಿಕ್ ಆರ್ಯನ್ ಸ್ಪಷ್ಟನೆ ನೀಡಿ ಗಾಸಿಪ್ ಗಳಿಗೆ ತೆರೆ ಎಳೆದಿದ್ದರು.

  • ಶಂಕರ್ ನಾಗ್‍ರಂತೆ ಆ್ಯಕ್ಟಿಂಗ್ ಮಾಡಿ ಪೊಲೀಸ್ ಸಿಬ್ಬಂದಿಯಿಂದ ಯುವಕರಿಗೆ ಪ್ರಶಂಸೆ

    ಶಂಕರ್ ನಾಗ್‍ರಂತೆ ಆ್ಯಕ್ಟಿಂಗ್ ಮಾಡಿ ಪೊಲೀಸ್ ಸಿಬ್ಬಂದಿಯಿಂದ ಯುವಕರಿಗೆ ಪ್ರಶಂಸೆ

    ದಾವಣಗೆರೆ: ನಟ ಶಂಕರ್ ನಾಗ್ ರೀತಿ ನಟಿಸಿ ದಾವಣಗೆರೆ ಪೊಲೀಸ್ ಸಿಬ್ಬಂದಿ ಯುವಕರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ದಾವಣಗೆರೆಯ ವಿದ್ಯಾನಗರದ ರಾಘವೇಂದ್ರ, ರಾಜೇಶ್ ಹಾಗೂ ಪರಶುರಾಮ್ ಎಂಬವರಿಗೆ ಬ್ಯಾಗೊಂದು ಸಿಕ್ಕಿದೆ. ಯುವಕರು ಆ ಬ್ಯಾಗ್ ತೆರೆದು ನೋಡದೆ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು. ಹಾಗಾಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಕುಮಾರ್ ನಾಯ್ಕ್ ಮೂರು ಜನ ಯುವಕರಿಗೆ ವಿಭಿನ್ನ ರೀತಿಯಲ್ಲಿ ಪ್ರಶಂಸಿದ್ದಾರೆ.

    ಆಂಧ್ರ ಪ್ರದೇಶದ ಅನಂತಪುರಂನ ಶ್ರೀನಾಥ್, ಅಂಜನಾ ದಂಪತಿ ಆಟೋದಲ್ಲಿ ಬರುವಾಗ ತಮ್ಮ ಬ್ಯಾಗನ್ನು ಕಳೆದುಕೊಂಡಿದ್ದಾರೆ. ಬ್ಯಾಗಿನಲ್ಲಿ 1,30,000 ಮೌಲ್ಯದ 30 ಗ್ರಾಂ ಬಂಗಾರದ ಸರ ಹಾಗೂ 2,000 ನಗದು ಇತ್ತು. ಬಳಿಕ ದಂಪತಿ ಬ್ಯಾಗ್ ಕಳೆದಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಯುವಕರು ಪೊಲೀಸರಿಗೆ ಬ್ಯಾಗ್ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದನ್ನು ಕಂಡ ದಂಪತಿ ಭಾವುಕರಾದರು. ಅಲ್ಲದೆ ಯುವಕರ ಕಾರ್ಯಕ್ಕೆ ವಿದ್ಯಾನಗರ ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸದ್ಯ ಹೆಡ್ ಕಾನ್ಸ್ ಸ್ಟೇಬಲ್ ಕುಮಾರ್ ನಾಯ್ಕ್ ನಟನೆಗೆ ಅಲ್ಲಿದ್ದ ಜನರು ಫುಲ್ ಫಿದಾ ಆಗಿದ್ದಾರೆ.