Tag: ನಟಸಾರ್ವಭೌಮ

  • ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸಿದ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರವನ್ನು ವೀಕ್ಷಿಸಲು ವಿದ್ಯಾರ್ಥಿನಿಯೊಬ್ಬಳು ರಜೆ ಕೋರಿ ಪತ್ರ ಬರೆದಿರುವ ಫೋಟೋ ವೈರಲ್ ಆಗಿದೆ.

    ಮೈಸೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ನಿಸರ್ಗ ಸಿನಿಮಾ ವೀಕ್ಷಿಸಲು ರಜೆ ನೀಡುವುದಾಗಿ ಪತ್ರ ಬರೆದಿದ್ದಾರೆ. ಈ ಪತ್ರದ ಫೋಟೋವನ್ನು ಚಿತ್ರದ ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿ ಅದಕ್ಕೆ, “ಸಾಮಾಜಿಕ ಜಾಲತಾಣದಲ್ಲಿ ನೋಡಿದೆ. ನನಗೆ ನಗು ತಡೆಯಲು ಆಗುತ್ತಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?
    ನಟಸಾರ್ವಭೌಮ ಚಿತ್ರ ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರ ಕುಟುಂಬದ ಎಲ್ಲ ಸದಸ್ಯರು ಹಾಗೂ ಎಲ್ಲ ವಯಸ್ಸಿನವರು ನೋಡುವಂತಹ ಒಳ್ಳೆಯ ಚಿತ್ರವಾಗಿದ್ದು ಹಾಗೂ ಚಿತ್ರದ ನಾಯಕನಟ ನಮ್ಮ ರಾಜ್‍ಕುಮಾರ್ ಅವರ ಹೆಮ್ಮೆಯ ತೃತೀಯ ಸುಪುತ್ರನಾದ ಪುನೀತ್ ರಾಜ್‍ಕುಮಾರ್ ಅವರಾಗಿದ್ದು, ಹಾಗೂ ಹೀಗಿನ ಮಕ್ಕಳ ಅಚ್ಚುಮೆಚ್ಚಿನ ನಟರಾಗಿದ್ದಾರೆ. ಹಾಗಾಗಿ ನಾನು ನಟಸಾರ್ವಭೌಮ ಚಿತ್ರವನ್ನು ನೋಡಲು ಫೆ.8ರಂದು ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಿರುವುದರಿಂದ ನಾನು ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನೀವು ರಜೆ ನೀಡಬೇಕೆಂದು ತಮ್ಮಲ್ಲಿ ಸವಿನಯ ಪ್ರಾರ್ಥನೆ ಎಂದು ಬರೆದಿದ್ದಾರೆ.

    ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ.ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ‘ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುನೀತ್ ಅಭಿನಯದ ನಟಸಾರ್ವಭೌಮ ಟ್ರೇಲರ್ ಸಖತ್ ಹಿಟ್

    ಪುನೀತ್ ಅಭಿನಯದ ನಟಸಾರ್ವಭೌಮ ಟ್ರೇಲರ್ ಸಖತ್ ಹಿಟ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ನಟಸಾರ್ವಭೌಮ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಖತ್ ಹಿಟ್ ಆಗಿದೆ.

    ಟ್ರೇಲರ್ ಬಿಡುಗಡೆಯಾದ ಕೇವಲ 15 ನಿಮಿಷದಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಕಂಡಿತ್ತು. ಅಲ್ಲದೇ ಟ್ರೆಂಡಿಂಗ್ ನಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. 2 ಗಂಟೆಗಳಲ್ಲಿ ಟ್ರೇಲರ್ ಬರೋಬ್ಬರಿ ನಾಲ್ಕೂವರೆ ಲಕ್ಷಗಳಿಗಿಂತ ಹೆಚ್ಚು ವ್ಯೂ ಕಂಡಿದ್ದು, ಟ್ರೇಲರ್ ಸ್ಯಾಂಡಲ್ ವುಡ್‍ನಲ್ಲಿ ಹೊಸ ದಾಖಲೆ ಬರೆಯುವ ವಿಶ್ವಾಸ ಮೂಡಿಸಿದೆ. ಸದ್ಯ 9 ಗಂಟೆಯಲ್ಲಿ 9.07 ಲಕ್ಷ ವ್ಯೂ ಕಂಡಿದೆ.

    ಟ್ರೇಲರ್ ನೋಡಿದ ಹಲವು ಮಂದಿ ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಿನ್ನೆಲೆ ಸಂಗೀತ ಹಾಗೂ ಪುನೀತ್ ಲುಕ್ ಸಖತ್ ಭಿನ್ನವಾಗಿ ಕಂಡಿದೆ. ಟ್ರೇಲರ್ ಆರಂಭದಲ್ಲೇ ಚಿತ್ರ ಹಾರರ್ ಥ್ರಿಲ್ಲರ್ ಎನ್ನುವುದನ್ನು ಖಚಿತ ಪಡಿಸುತ್ತದೆ. ಅಲ್ಲದೇ ಪುನೀತ್ ಆಕ್ಷನ್ ದೃಶ್ಯ, ಡಾನ್ಸ್ ನೋಡುಗರಿಗೆ ಕಿಕ್ ಕೊಡುತ್ತದೆ. ಉಳಿದಂತೆ ಚಿತ್ರದ ತಾರಾಗಣ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

    ಇದೇ ಮೊದಲ ಬಾರಿಗೆ ಪುನೀತ್ ರಾಜ್‍ಕುಮಾರ್ ಅವರು ಹಾರರ್ ಹಿನ್ನೆಲೆಯ ಚಿತ್ರಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಅಭಿಮಾನಿಗಳು ಶುಭಕೋರಿದ್ದಾರೆ. ಅಲ್ಲದೇ ಕನ್ನಡ ಸಿನಿಮಾದ ಟ್ರೇಲರ್ ಟ್ರೆಂಡಿಂಗ್‍ನಲ್ಲಿರುವುದಕ್ಕೆ ಮತ್ತಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪವನ್ ಒಡೆಯರ್ ಸಿನಿಮಾ ನಿರ್ದೇಶಿಸಿದ್ದು ರಾಕ್‍ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಪವನ್ ಒಡೆಯರ್, ಪುನೀತ್ ಜೋಡಿ ಎಂದ ಕೂಡಲೇ ಸಾಕಷ್ಟು ನಿರೀಕ್ಷೆಗಳಿದ್ದು, ನಟಸಾರ್ವಭೌಮ ಟೈಟಲ್ ಘೋಷಣೆ ಆಗುತ್ತಿದಂತೆ ಅಭಿಮಾನಿಗಳು ಕಾತುರಾಗಿದ್ದರು. ಕುಟುಂಬದ ಎಲ್ಲಾ ಸದಸ್ಯರು ಕುಳಿತು ನೋಡವಂತಹ ಸಿನಿಮಾ ಎಂದು ಈಗಾಗಲೇ ಚಿತ್ರತಂಡ ಭರವಸೆ ನೀಡಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ.

    ಕೆಲ ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ಟ್ರೇಲರ್ ಮೂಲಕ ಅಭಿಮನಿಗಳಿಗೆ ಮತ್ತೊಂದು ಉಡುಗೊರೆ ನೀಡಿದೆ. ಪವನ್ ಅವರ 4ನೇ ಸಿನಿಮಾ ಇದಾಗಿದ್ದು, ರಣವಿಕ್ರಮ ಸಿನಿಮಾ ಬಳಿಕ ಈ ಜೋಡಿ ಮತ್ತೆ ಒಂದಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ಪುನೀತ್ ಜೊತೆ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ.ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದು, ಫೆಬ್ರವರಿ 9 ರಂದು ಚಿತ್ರ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

    ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

    ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

    ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಹಳ ದಿನಗಳಿಂದ ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಈಗ ಫೆಬ್ರವರಿ 7ರಂದು ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಯರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಅಲ್ಲದೇ ಮಂತ್ರಾಲಯದಲ್ಲಿನ ರಾಜ್‍ಕುಮಾರ್ ಭವನದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಈಗ ಸಾರ್ವಜನಿಕರ ಉಪಯೋಗಕ್ಕೆ ಬರುತ್ತದೆ” ಎಂದು ಹೇಳಿದ್ದಾರೆ.

    ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರಿಗೆ ಐಟಿ ದಾಳಿ ಬಗ್ಗೆ ಪ್ರಶ್ನಿಸಿದ್ದಾಗ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಳಿಕ ಫೆಬ್ರವರಿ 8, 9 ಹಾಗೂ 10ರಂದು ನಡೆಯುವ ಸುಜಯೀಂದ್ರ ತೀರ್ಥರ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಾಮಿಗಳು ಆಹ್ವಾನ ನೀಡಿದ್ದಾರೆ ಎಂದು ಪುನೀತ್ ಹೇಳಿದ್ದಾರೆ. ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ನೋಡಲು ಬಂದ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಇದರಿಂದಾಗಿ ಅಲ್ಲಿ ಕೆಲ ಹೊತ್ತು ನೂಕು ನುಗ್ಗಲು ಉಂಟಾಯಿತು.

    ನಟಸಾರ್ವಭೌಮ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಡಿಂಪಲ್ ಬೆಡಗಿ ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟಿಸಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.

    https://www.youtube.com/watch?v=qZ-3tkezU3c&feature=youtu.be

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಬ್ಬಳ್ಳಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ್ರು ನಟ ಯಶ್

    ಹುಬ್ಬಳ್ಳಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ್ರು ನಟ ಯಶ್

    ಬೆಂಗಳೂರು: ನಟಸಾರ್ವಭೌಮ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದ ಕಾರಣ ನಟ ಯಶ್ ಹುಬ್ಬಳ್ಳಿ ಅಭಿಮಾನಿಗಳ ಬಳಿ ಕ್ಷಮೆ ಕೋರಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿರುವ ಯಶ್, ಅನಿವಾರ್ಯ ಕಾರಣಗಳಿಂದ ಇಂದು ವಿಮಾನ ಕೈತಪ್ಪಿದ್ದು, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

    ನನ್ನ ಮೇಲೆ ಅಪಾರ ಪ್ರೀತಿಯನ್ನು ಹೊಂದಿರುವ ಹುಬ್ಬಳ್ಳಿ ಭಾಗದ ಅಭಿಮಾನಿಗಳ ಕ್ಷಮೆ ಕೋರುತ್ತೇನೆ. ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ರವರು, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕರಾದ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಅಪ್ಪು ರವರ ಮೇಲಿನ ನಿಮ್ಮ ಪ್ರೀತಿ ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಲಿ ಎಂದು ಹಾರೈಸಿದ್ದಾರೆ.

    ಗಂಡು ಮೆಟ್ಟಿದ ನಾಡು ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯ ನೆಹರೂ ಕ್ರೀಡಾಂಗಣದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದೆ. ಕ್ರೀಡಾಂಗಣದಲ್ಲಿ ತುಂಬಿ ತುಳುಕಿರುವ ಜನ ಸಾಗರದ ನಡುವೆ ಪುನೀತ್ ರಾಜಕುಮಾರ್, ನಟಿ ರಜಿತಾ ರಾಮ್, ಚಿತ್ರದ ಮತ್ತೊಬ್ಬ ನಾಯಕಿ ಅನುಪಮಾ ಪರಮೇಶ್ವರ ಸೇರಿದಂತೆ ಖ್ಯಾತ ಗಾಯಕ ವಿಜಯ ಪ್ರಕಾಶ್, ಜಯಂತಿ ಕಾಯ್ಕಿಣಿ, ಯೋಗರಾಜ್ ಭಟ್, ಸಾಧು ಕೋಕಿಲಾ, ರವಿಶಂಕರ್, ಕಾಮಿಡಿ ನಟ ಚಿಕ್ಕಣ್ಣ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಯಿಂದ ಹೊರ ಹೋಗ್ತಿದ್ದಂತೆ ಪುನೀತ್‍ರಿಂದ ಎಫ್‍ಬಿ ಲೈವ್

    ಮನೆಯಿಂದ ಹೊರ ಹೋಗ್ತಿದ್ದಂತೆ ಪುನೀತ್‍ರಿಂದ ಎಫ್‍ಬಿ ಲೈವ್

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರು ಐಟಿ ದಾಳಿ ಮುಗಿದ ತಕ್ಷಣ ಮನೆಯಿಂದ ಹೊರ ಬಂದು ಅಭಿಮಾನಿಗಳನ್ನು ಮಾತನಾಡಿಸಿ ಹುಬ್ಬಳ್ಳಿಗೆ ತೆರಳಿದ್ದಾರೆ. ಈ ವೇಳೆ ಕಾರಿನಲ್ಲಿಯೇ ಫೇಸ್‍ಬುಕ್ ಲೈವ್ ಮಾಡಿ ಮಾತನಾಡಿದ್ದಾರೆ.

    ನಟ ಪುನೀತ್ ಮನೆಯಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಕೆಲವು ಕ್ಷಣ ಮಾತನಾಡಿದ್ದು, ಐಟಿ ಅಧಿಕಾರಿಗಳು ಬಂದು ಅವರ ಕೆಲಸ ಏನು ಅದನ್ನು ಮಾಡಿದ್ದಾರೆ. ಅವರಿಗೆ ನಾವು ಸಹಕರಿಸಿದ್ದೇವೆ. ಐಟಿ ಅಧಿಕಾರಿಗಳು ತುಂಬಾ ಪ್ರೊಫೆಶನಲ್ ಆಗಿ ಕೆಲಸ ಮಾಡಿದ್ದಾರೆ. ಏನು ತೊಂದರೆ ಆಗಿಲ್ಲ ಎಂದು ಕಾರು ಹತ್ತಿ ಹೊರಟ್ಟಿದ್ದಾರೆ.

    ಕಾರ ಹತ್ತಿದ ತಕ್ಷಣ ಪುನೀತ್ ಫೇಸ್‍ಬುಕ್‍ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ಇಂದು ಸಂಜೆ ನಮ್ಮ ಸಿನಿಮಾ ‘ನಟಸಾರ್ವಭೌಮ’ ಆಡಿಯೋ ರಿಲೀಸ್ ಹುಬ್ಬಳ್ಳಿಯಲ್ಲಿ ಆಗುತ್ತಿದೆ. ಆದ್ದರಿಂದ ನಾವೆಲ್ಲ ಬರುತ್ತಿದ್ದೇವೆ. ನಿಮ್ಮನ್ನು ಅಲ್ಲಿಯೇ ಭೇಟಿ ಮಾಡುತ್ತೇವೆ. ಎಲ್ಲರೂ ಬನ್ನಿ ಕಾರ್ಯಕ್ರಮವನ್ನು ಎಂಜಾಯ್ ಮಾಡಿ” ಎಂದು ಹೇಳಿದ್ದಾರೆ.

    ಇಂದು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಸಂಜೆ ಸುಮಾರು 5 ಗಂಟೆಗೆ ಪುನೀತ್ ಅಭಿನಯದ `ನಟಸಾರ್ವಭೌಮ’ ಸಿನಿಮಾದ ಧ್ವನಿಸುರುಳಿ ಬಿಡುಗಡೆಯಾಗುತ್ತಿದೆ. ಪುನೀತ್ ಮನೆಯ ಐಟಿ ದಾಳಿ ಶುಕ್ರವಾರ ರಾತ್ರಿ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮಕ್ಕೆ ಹೋಗಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಪುನೀತ್ ಹುಬ್ಬಳ್ಳಿಗೆ ಹೊರಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

    ತೆರಿಗೆ ಇಲಾಖೆಗೆ ನಾವು ನಾಗರಿಕರಾಗಿ ಸಹಕಾರ ನೀಡಿದ್ದೇವೆ – ಪುನೀತ್ ಮೊದಲ ಪ್ರತಿಕ್ರಿಯೆ

    – 1984ರಲ್ಲಿಯೇ ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು
    – ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇವೆ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಮನೆಯಲ್ಲಿ ಐಟಿ ರೇಡ್ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯವಾಗಿದ್ದು, ಈ ಬಗ್ಗೆ ಮೊದಲ ಬಾರಿಗೆ ನಟ ಪುನೀತ್ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತೆರಿಗೆ ಇಲಾಖೆ ಅವರು ಬಂದು ನಮ್ಮ ಮನೆಯನ್ನು ರೇಡ್ ಮಾಡಿದ್ದಾರೆ. ನಾವು ನಾಗರಿಕರಾಗಿ ಅವರಿಗೆ ಸಹಕರಿಸಬೇಕು. ಈಗ ರೇಡ್ ಮುಗಿದಿದ್ದು, ಅದರ ಪ್ರಕ್ರಿಯೆ ಇನ್ನೂ ಒಂದು ಗಂಟೆ ನಡೆಯುತ್ತದೆ. ನಾವು ಅವರಿಗೆ ಏನು ತೊಂದರೆ ಕೊಟ್ಟಿಲ್ಲ. ಅದೇ ರೀತಿ ಅವರು ಕೂಡ ನಮಗೆ ಯಾವುದೇ ರೀತಿಯ ತೊಂದರೆ ಮಾಡಿಲ್ಲ. ತೆರಿಗೆ ಇಲಾಖೆಗೆ ನಾಗರಿಕರಾಗಿ ಸಹಕರಿಸಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಂತಿಮ ಹಂತಕ್ಕೆ ತಲುಪಿದ ಪುನೀತ್, ಶಿವಣ್ಣ ಮನೆ ರೇಡ್

    ಯಾರೇ ಆಗಲಿ ಅವರ ಅಕೌಂಟ್ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದರೆ ತೆರಿಗೆ ಇಲಾಖೆ ಅವರು ರೇಡ್ ಮಾಡುತ್ತಾರೆ. ಅವರಿಗೆ ಬಂದಿದ್ದ ಮಾಹಿತಿ ಮೇರೆಗೆ ನಮ್ಮ ಮನೆಯ ಮೇಲೆ ರೇಡ್ ಮಾಡಿದ್ದಾರೆ. ಅವರು ಕೇಳಿದ ಎಲ್ಲ ಪ್ರಶ್ನೆಗಳಿಗೂ ನಾವು ಸಂಪೂರ್ಣವಾಗಿ ಉತ್ತರ ಕೊಟ್ಟಿದ್ದೇವೆ. ನಮ್ಮ ಮನೆಯ ಮೇಲೆ 1984ರಲ್ಲಿ ಚೆನ್ನೈ, ಬೆಂಗಳೂರು ಮತ್ತು ನಮ್ಮ ಫಾರ್ಮ್ ಹೌಸ್ ನಲ್ಲಿ ನಡೆದಿತ್ತು. ಅದೇ ರೀತಿ ಈಗಲೂ ಮಾಡಿದ್ದಾರೆ ಅಷ್ಟೇ ಎಂದು ಪುನೀತ್ ಐಟಿ ದಾಳಿಯ ಬಗ್ಗೆ ಹೇಳಿದ್ದಾರೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಬಳಿ ಕಾಲಾವಕಾಶ ಕೇಳಿದ ಪುನೀತ್

    ಇಂದು ಹುಬ್ಬಳ್ಳಿಯಲ್ಲಿ ಪುನೀತ್ ಅಭಿನಯದ ‘ನಟಸಾರ್ವಭೌಮ’ ಸಿನಿಮಾದ ಧ್ವನಿಸುರುಳಿ ಬಿಡುಗಡೆಯಾಗುತ್ತಿದೆ. ಪುನೀತ್ ಮನೆಯ ಐಟಿ ದಾಳಿ ಶುಕ್ರವಾರ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮಕ್ಕೆ ಹೋಗಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಸಂಜೆ ಸುಮಾರು 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

    ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್ ಮತ್ತು ಪವನ್ ವಡೆಯರ್ ಅವರ ಸಾಹಿತ್ಯದಲ್ಲಿ ಹಾಡುಗಳು ಮೂಡಿಬಂದಿವೆ. ಹೀಗಾಗಿ ಧ್ವನಿ ಸುರುಳಿ ಬಿಡುಗಡೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇನ್ನು ಕಾರ್ಯವನ್ನು ಕಣ್ತುಂಬಿಕೊಳ್ಳಲು ಇಡೀ ಹುಬ್ಬಳ್ಳಿಯ ಜನತೆ ಕಾದು ಕುಳಿತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

    ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

    ಹುಬ್ಬಳ್ಳಿ: ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ನಿವಾಸದ ಮೇಲೆ ಐಟಿ ದಾಳಿಯಾದ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಮುಂದೂಡಿಕೆ ಆಗಲಿದೆ ಎನ್ನುವ ಗಾಳಿ ಸುದ್ದಿಗೆ ನಿರ್ದೇಶಕ ಪವನ್ ಒಡೆಯರ್ ಬ್ರೇಕ್ ಹಾಕಿದ್ದಾರೆ.

    ಪವನ್ ಒಡೆಯರ್ ಅವರು ಫೇಸ್‍ಬುಕ್ ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ನಾಳೆ ‘ನಟಸಾರ್ವಭೌಮ’ ಸಿನಿಮಾದ ಆಡಿಯೋ ರಿಲೀಸ್ ಆಗುತ್ತಾ ಎಂಬ ಎಲ್ಲರಿಗೂ ಗೊಂದಲ ಇದೆ. ಶನಿವಾರ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನಟಸಾರ್ವಭೌಮ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಿಮ್ಮೆಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

    ಎಲ್ಲ ಕನ್ನಡಿಗರ ಆಶೀರ್ವಾದ ನಮ್ಮ ಸಿನಿಮಾದ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮದ ಮೇಲೆ ಇರಲಿ. ನಿಮ್ಮ ನೆಚ್ಚಿನ ಸ್ಟಾರ್ ಗಳ ಡ್ಯಾನ್ಸ್ ನಾಳೆ ಇರುತ್ತದೆ. ಆದ್ದರಿಂದ ಯಾರಿಗೂ ಯಾವುದೇ ಗೊಂದಲ ಬೇಡ. ಈ ಮೂಲಕ ನಾನು ನಾಳೆ ಎಲ್ಲ ಕನ್ನಡಾಭಿಮಾನಿಗಳು ನೆಹರೂ ಕ್ರಿಡಾಂಗಣಕ್ಕೆ ಬನ್ನಿ ಅಂತ ಹೇಳಲು ಇಷ್ಟಪಡುತ್ತೇನೆ ಎಂದು ಕಾರ್ಯಕ್ರಮ ನಡೆಯುವ ಬಗ್ಗೆ ಪವನ್ ಒಡೆಯರ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಬಿಡುಗಡೆಯ ಕಾರ್ಯಕ್ರಮ ನಡೆಯಲಿದೆ. ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್, ಮತ್ತು ಪವನ್ ವಡೆಯರ್ ಅವರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡುಗಳು ಹೇಗಿರಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.


    ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು. ಪುನೀತ್ ಜೊತೆ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದು, ಫೆಬ್ರವರಿ 9 ರಂದು ಚಿತ್ರ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಜಿಎಫ್ ದೊಡ್ಡ ಕಾಣಿಕೆ ಎಂದ್ರು ಪುನೀತ್- ನಟಸಾರ್ವಭೌಮ ಚಿಂದಿ ಅಂದ ಯಶ್

    ಕೆಜಿಎಫ್ ದೊಡ್ಡ ಕಾಣಿಕೆ ಎಂದ್ರು ಪುನೀತ್- ನಟಸಾರ್ವಭೌಮ ಚಿಂದಿ ಅಂದ ಯಶ್

    ಬೆಂಗಳೂರು: ವಿಶ್ವಾದ್ಯಂತ ತೆರೆಕಂಡು ಸಾಕಷ್ಟು ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ದೊಡ್ಡ ಕಾಣಿಕೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಈ ವೇಳೆ ಯಶ್ ನಟಸಾರ್ವಭೌಮ ಚಿತ್ರ ಚಿಂದಿ ಎಂದು ಪ್ರತಿಕ್ರಿಯಿಸಿದ್ದಾರೆ.

    “ಕನ್ನಡ ಚಿತ್ರರಂಗಕ್ಕೆ ಕೆಜಿಎಫ್ ಮೂಲಕ ದೊಡ್ಡ ಕಾಣಿಕೆಯನ್ನು ಕೊಟ್ಟ ಹೊಂಬಾಳೆ ಫಿಲ್ಮ್ ಹಾಗೂ ಕೆಜಿಎಫ್ ತಂಡಕ್ಕೆ ನನ್ನ ಶುಭಾಶಯಗಳು. ಯಶ್, ಪ್ರಶಾಂತ್ ನೀಲ್ ನಿಮಗೆ ಶುಭಾಶಯಗಳು ಹಾಗೂ ಕನ್ನಡ ಚಿತ್ರರಂಗದ ಸಾಮಥ್ರ್ಯ ಮತ್ತು ಅದರ ವ್ಯಾಪ್ತಿಯನ್ನು ತೋರಿಸಿದ ವಿಜಯ್ ಸರ್ ನಿಮ್ಮ ಮೇಲೆ ನನಗೆ ಹೆಮ್ಮೆಯಿದೆ” ಎಂದು ಪುನೀತ್ ರಾಜ್‍ಕುಮಾರ್ ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ.

    ಈ ಟ್ವೀಟ್‍ಗೆ ಯಶ್ ಪ್ರತಿಕ್ರಿಯಿಸಿ, “ಧನ್ಯವಾದಗಳು ಸರ್. ಈ ಮಾತುಗಳು ನನಗೆ ತುಂಬಾ ಮುಖ್ಯವಾಗುತ್ತದೆ. ನಿಮ್ಮ ನಟಸಾರ್ವಭೌಮ ಚಿತ್ರದ ಟೀಸರ್ ನೋಡಿದೆ. ಚಿಂದಿ ಉಡಾಯಿಸುವ ಆಗಿದೆ. ಈ ಚಿತ್ರಕ್ಕಾಗಿ ನಾನು ಕಾಯುತ್ತಿದ್ದೇನೆ” ಎಂದು ಯಶ್ ರೀ-ಟ್ವೀಟ್ ಮಾಡಿ ಧನ್ಯವಾದ ಹೇಳಿದ್ದಾರೆ.

    ಕೆಜಿಎಫ್ ಸಿನಿಮಾ ಬಿಡುಗಡೆ ದಿನ ಪುನೀತ್ ರಾಜ್‍ಕುಮಾರ್ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಲೈವ್ ವಿಡಿಯೋ ಮಾಡಿ “ಕೆಜಿಎಫ್ ಚಿತ್ರತಂಡಕ್ಕೆ ಶುಭಾಶಯ. ಅಲ್ಲದೇ ನನ್ನ ಗೆಳೆಯ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ವಿಜಯ್ ಸರ್ ಗೂ ಶುಭಾಶಯ ಕೆಜಿಎಫ್ ಗೆ ಒಳ್ಳೆದಾಗಲಿ” ಎಂದು ಚಿತ್ರಕ್ಕೆ ಶುಭಹಾರೈಸಿದ್ದರು.

    ಕೆಜಿಎಫ್ ಸಿನಿಮಾ ಒಟ್ಟು 5 ಭಾಷೆಯಲ್ಲಿ ಶುಕ್ರವಾರ ಬರೋಬ್ಬರಿ 2000ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ ಸುಮಾರು 30 ಕೋಟಿ ಹಣವನ್ನು ಬಾಕ್ಸ್ ಆಫೀಸ್‍ನಲ್ಲಿ ತುಂಬಿಸಿಕೊಂಡಿದ್ದು, ಕೇವಲ ಮೂರು ದಿನದಲ್ಲಿ 60 ಕೋಟಿ ಗೂ ಹೆಚ್ಚು ಕಲೆಕ್ಷನ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೋಲ್ಕತ್ತಾದಲ್ಲಿ ನಟಸಾರ್ವಭೌಮ!

    ಕೋಲ್ಕತ್ತಾದಲ್ಲಿ ನಟಸಾರ್ವಭೌಮ!

    ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪುನೀತ್ ರಾಜ್ ಕುಮಾರ್ ಕೂಡಾ ಬಿಡುವಿರದಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ನಟಸಾರ್ವಭೌಮ ಚಿತ್ರ ತಂಡ ಕೋಲ್ಕತ್ತಾದಲ್ಲಿ ಬೀಡು ಬಿಟ್ಟಿದೆ.

    ನಿರ್ದೇಶಕ ಪವನ್ ಒಡೆಯರ್ ಕೋಲ್ಕತ್ತಾದಲ್ಲಿ ಬಿಗಿಯಾದ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಮತ್ತು ನಾಯಕಿ ಅನುಪಮಾ ಪರಮೇಶ್ವರನ್ ಕಾಂಬಿನೇಷನ್ನಿನ ಚಿತ್ರೀಕರಣವೂ ಯಶಸ್ವಿಯಾಗಿಯೇ ನಡೆಯುತ್ತಿದೆ. ಚಿತ್ರೀಕರಣದ ನಡುವೆ ಸಿಕ್ಕ ಸ್ವಲ್ಪ ಕಾಲಾವಕಾಶದಲ್ಲಿಯೇ ಅನುಪಮಾ ಪವರ್ ಸ್ಟಾರ್ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಸಂಭ್ರಮಿಸಿದ್ದಾರೆ.

    ಅನುಪಮಾ ದಕ್ಷಿಣ ಭಾರತೀಯ ಚಿತ್ರ ರಂಗದಲ್ಲಿ ಪ್ರಸಿದ್ಧಿ ಪಡೆದಿರುವ ನಟಿ. ನಟಸಾರ್ವಭೌಮ ಚಿತ್ರದ ಮೂಲಕ ಅವರು ಮೊದಲ ಸಲ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಅವಾರ್ಡ್ ಪ್ರೋಗ್ರಾಮ್ ಒಂದರಲ್ಲಿ ಪುನೀರ್ ರಾಜ್ ಕುಮಾರ್ ಅವರನ್ನು ನೋಡಿದ್ದ ಅನುಪಮಾ ಅವರೊಂದಿಗೆ ನಟಿಸಬೇಕು ಅಂದುಕೊಂಡಿದ್ದರಂತೆ. ಇದೀಗ ಅನುಪಮಾ ಪವರ್ ಸ್ಟಾರ್ ಜೊತೆಗೇ ನಟಿಸೋ ಅವಕಾಶ ಕೂಡಿ ಬಂದಿರೋ ಸಂತಸದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನಟಸಾರ್ವಭೌಮ ಚಿತ್ರತಂಡವನ್ನು ವಿಶೇಷವಾಗಿ ಗೌರವಿಸಿದ ಪವರ್ ಸ್ಟಾರ್!

    ನಟಸಾರ್ವಭೌಮ ಚಿತ್ರತಂಡವನ್ನು ವಿಶೇಷವಾಗಿ ಗೌರವಿಸಿದ ಪವರ್ ಸ್ಟಾರ್!

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಾವು ನಟಿಸುತ್ತಿರುವ ‘ನಟಸಾರ್ವಭೌಮ’ ಚಿತ್ರತಂಡವನ್ನು ತಮ್ಮ ಮನೆಗೆ ಕರೆಸಿ ವಿಶೇಷವಾಗಿ ಗೌರವಿಸಿದ್ದಾರೆ. ಪುನೀತ್ ತನ್ನ ಪತ್ನಿ ಜೊತೆ ಸೇರಿ ಚಿತ್ರತಂಡಕ್ಕೆ ವಿಶೇಷ ಔತಣ ನೀಡಿದ್ದಾರೆ.

    ಗುರುವಾರ ಚಿತ್ರದ ನಿರ್ದೇಶಕರ ತಂಡ ಪುನೀತ್ ಅವರ ಮನೆಗೆ ವಿಶೇಷ ಔತಣಕ್ಕೆಂದು ಹೋಗಿದ್ದರು. ನಿರ್ದೇಶಕರಾದ ಪವನ್ ಒಡೆಯರ್, ಕುಮಾರ್ ಹಾಗೂ ಹಾಸ್ಯ ನಟ ಚಿಕ್ಕಣ್ಣ ಅವರು ಒಟ್ಟಿಗೆ ಊಟ ಮಾಡಿದ್ದಾರೆ.

    ಪುನೀತ್ ರಾಜ್‍ಕುಮಾರ್ ಅವರ ಮನೆಯಲ್ಲಿ ಊಟ ಮಾಡಿ ಬಳಿಕ ಚಿತ್ರತಂಡದ ಸದಸ್ಯರು ಒಂದು ಫೋಟೋವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಆ ಫೋಟೋವನ್ನು ನಿರ್ದೇಶಕ ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅದಕ್ಕೆ,”ಇಂದು ನಾನು ಪುನೀತ್ ಸರ್ ಮನೆಯಲ್ಲಿ ಊಟ ಮಾಡಿದೆ. ಅಶ್ವಿನಿ ಮೆಡಮ್ ಸಾಂಬರ್, ಪೂರಿ ಡೆಸರ್ಟ್ಸ್ ಹಾಗೂ ಅದ್ಭುತ ಊಟಕ್ಕೆ ಧನ್ಯವಾದಗಳು. ಇಡೀ ನಿರ್ದೇಶಕರ ತಂಡ ಊಟವನ್ನು ಆನಂದಿಸಿದೆ” ಎಂದು ಬರೆದು ಪವನ್ ಒಡೆಯರ್ ಪೋಸ್ಟ್ ಮಾಡಿದ್ದಾರೆ.

    ಸದ್ಯ ಪುನೀತ್ ರಾಜ್‍ಕುಮಾರ್ ನಟಸಾರ್ವಭೌಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ ‘ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.