Tag: ನಟಿ ಅಮೂಲ್ಯ

  • ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    ನಟಿ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.27ಕ್ಕೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ ಅಮೂಲ್ಯ ಅವರ ಸಹೋದರ, ನಿರ್ದೇಶಕ ದೀಪಕ್ “ಸಹೋದರಿ ಅವಳಿ ಮಕ್ಕಳ ತಾಯಿಯಾಗಿದ್ದರು. ಮನೆಗೆ ಮಕ್ಕಳು ಬಂದಿದ್ದು ಖುಷಿ ತಂದಿದೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ” ಎಂದು ಖುಷಿ ಹಂಚಿಕೊಂಡರು.

     

     

    View this post on Instagram

     

    A post shared by Jagdish R Chandra (@jagdishrchandra)

    ಕೆಲ ತಿಂಗಳಿಂದ ಅಮೂಲ್ಯ ತಾಯಿಯಾದ ಸುದ್ದಿಯೇ ಹೆಚ್ಚು ಸದ್ದು ಮಾಡಿತ್ತು. ಸೀಮಂತ, ಬೇಬಿ ಬಂಪ್ಸ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

  • ಮತಗಟ್ಟೆಯಲ್ಲಿ ಕೋವಿಡ್ ಕುರಿತು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ: ನಟಿ ಅಮೂಲ್ಯ

    ಮತಗಟ್ಟೆಯಲ್ಲಿ ಕೋವಿಡ್ ಕುರಿತು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ: ನಟಿ ಅಮೂಲ್ಯ

    ಬೆಂಗಳೂರು: ಆರ್.ಆರ್ ನಗರ ಮತ್ತು ಶಿರಾ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಮತದಾನಕ್ಕೆ ಜನರು ಉತ್ಸುಕತೆಯಿಂದ ಭಾಗಿಯಾಗಿದ್ದಾರೆ. ನಟಿ ಅಮೂಲ್ಯ ಅವರು ಕುಟುಂಬದೊಂದಿಗೆ ಆಗಮಿಸಿ ಆರ್.ಆರ್ ನಗರದ ಬೂತ್ ನಂಬರ್ 369ರ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

    ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಅಮೂಲ್ಯ ಅವರು, ಕೊರೊನಾ ಕಾರಣದಿಂದ ಮತದಾನ ಕಷ್ಟ ಎಂದುಕೊಂಡಿದ್ದೇವು. ಆದರೆ ಕೆಲವರು ವೀಲ್ ಚೇರ್ ನಲ್ಲೂ ಬಂದ್ ಮತದಾನ ಮಾಡುತ್ತಿದ್ದಾರೆ. ಎಲ್ಲರೂ ಒಂದಲ್ಲಾ ಒಂದು ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ. ಪ್ರತಿಯೊಂದು ಬೂತ್‍ನಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಯುವ ಜನತೆ ಸೇರಿದಂತೆ ಎಲ್ಲರೂ ದಯವಿಟ್ಟು ಬಂದು ಮತದಾನ ಮಾಡಿ ಎಂದು ಮನವಿ ಮಾಡಿದರು.

    ಕೊರೊನಾ ಸೋಂಕಿನ ಸಂಕಷ್ಟದ ನಡುವೆಯೇ ಮತದಾನಕ್ಕೆ ಬರುವವರಿಗೆ ಹೆಚ್ಚಿನ ಸೌಲಭ್ಯಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ. ಒಂದೊಮ್ಮೆ ಮತದಾನಕ್ಕೆ ಬರುವವರಿಗೆ ಟೆಂಪರೇಚರ್ ಹೆಚ್ಚಾಗಿದ್ದಾರೆ ಅವರಿಗೆ ಸಂಜೆ 5 ಗಂಟೆಯ ಬಳಿಕ ಅವಕಾಶ ನೀಡಲಾಗುತ್ತಿದೆ. ಕೊರೊನಾ ಸೋಂಕಿತರಿಗೂ ಕೂಡ ಸಂಜೆ 5 ಗಂಟೆ ಬಳಿಕ ಪಿಪಿಇ ಕಿಟ್ ಧರಿಸಿ ಮತದಾನ ಮಾಡಲು ಅವಕಾಶ ನೀಡಲಾಗಿದೆ.

    ಮತದಾನ ಕೇಂದ್ರದ ಬಳಿ ನೂಕುನುಗ್ಗಲಿಗೆ ಅವಕಾಶ ನೀಡದಂತೆ ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಮಾರ್ಕ್ ಮಾಡಲಾಗಿದೆ. ಹೆಚ್ಚು ಜನರು ಆಗಮಿಸಿದರಿಗೆ ಟೋಕನ್ ವ್ಯವಸ್ಥೆ ಜಾರಿ ಮಾಡಲು ಆಯೋಗ ಸಿದ್ಧವಾಗಿದೆ. ಮತಗಟ್ಟೆಯನ್ನು ಸೋಂಕು ನಿವಾರಕ ದ್ರಾವಣ ಹಾಕಿ ಸ್ವಚ್ಛಗೊಳಿಸಿ ಬಳಿಕ ಮತದಾನಕ್ಕೆ ಅವಕಾಶ ನೀಡಲಾಗಿದೆ.

  • ಅಮೂಲ್ಯ-ಜಗದೀಶ್, ಹೆಚ್‍ಡಿಕೆ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಪೂಜೆ

    ಅಮೂಲ್ಯ-ಜಗದೀಶ್, ಹೆಚ್‍ಡಿಕೆ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಪೂಜೆ

    ಮಂಡ್ಯ: ಚಿತ್ರ ನಟಿ ಅಮೂಲ್ಯ ತಮ್ಮ ಭಾವಿ ಪತಿಯೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು.

    ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿರುವ ಅಮೂಲ್ಯ ಮತ್ತು ಜಗದೀಶ್ ದೇವರ ಸನ್ನಿಧಿಯಲ್ಲಿ ಕುಳಿತು ಕಾಲಭೈರವ ಕ್ಷೇತ್ರಾದಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಮೂಲ್ಯ ತಮ್ಮ ಭಾವಿ ಪತಿಯೊಂದಿಗೆ ಪೂಜೆ ಸಲ್ಲಿಸುತ್ತಿದ್ದು, ಕ್ಷೇತ್ರಕ್ಕೆ ಪೂಜೆಗೆ ಬಂದ ಭಕ್ತರು ಯುವ ಜೋಡಿಯನ್ನು ಕುತೂಹಲದಿಂದ ನೋಡುತ್ತಿದ್ರು.

    ಹೆಚ್‍ಡಿಕೆ ದಂಪತಿಯಿಂದ್ಲೂ ವಿಶೇಷ ಪೂಜೆ: ಇಂದು ಅಮಾವಾಸ್ಯೆ ಪೂಜೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿಯವರು ಕೂಡ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸ್ವತಃ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರು ಅಮವಾಸ್ಯೆ ಪೂಜೆ ನೆರವೇರಿಸಿಕೊಟ್ರು. ರಾತ್ರಿಯೇ ಬಂದು ಶ್ರೀ ಮಠದಲ್ಲಿ ವಾಸ್ತವ್ಯವಿದ್ದ ದಂಪತಿ ಮುಂಜಾನೆಯಿಂದಲೇ ಹೋಮ, ಹವನಾದಿಯೊಂದಿಗೆ ಕಾಲಭೈರವೇಶ್ವರಸ್ವಾಮಿಯ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡ್ರು. ಭಕ್ತಿ ಭಾವದಿಂದ ಕಾಲ ಭೈರವನಿಗೆ ವಿಶೇಷ ಪೂಜೆ ಸಲ್ಲಿಸಿದ್ರು.

    ಕಳೆದ ಕೆಲ ಅಮವಾಸ್ಯೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಕಾಲಭೈರವೇಶ್ವರಸ್ವಾಮಿ ಸನ್ನಿಧಿಗೆ ಬಂದು ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು. ಮಳೆ ಬೆಳೆ ಸೇರಿದಂತೆ, ರಾಜಕೀಯ ಯಶಸ್ಸಿಗೂ ದೇವೇಗೌಡ ದಂಪತಿ ಕಾಲಭೈರವ ಕ್ಷೇತ್ರಾದಿ ದೇವತೆಗಳಿಗೆ ಪೂಜೆ ಸಲ್ಲಿಸಿದ್ರು. ಈ ಹಿನ್ನೆಲೆಯಲ್ಲಿ ಇಂದು ಕುಮಾರಸ್ವಾಮಿ ತಮ್ಮ ಪತ್ನಿಯೊಂದಿಗೆ ಕಾಲಭೈರವೇಶ್ವರ ಕ್ಷೇತ್ರಾದಿ ದೇವತೆಗಳಿಗೆ ಪೂಜೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಎಲ್ಲರೂ ಒಟ್ಟಿಗೆ ಕಾಲಭೈರವೇಶ್ವರನ ಎದುರು ಕುಳಿತು ಪೂಜೆ ಸಲ್ಲಿಸುತ್ತಿದ್ದು ಭಕ್ತಾದಿಗಳು ಮತ್ತು ಅಭಿಮಾನಿಗಳ ಗಮನ ಸೆಳೆಯಿತು.