Tag: ನಟಿ ವಿಜಯಲಕ್ಷ್ಮಿ

  • ನಾನು ಕರ್ನಾಟಕ ಬಿಟ್ಟು ಹೋಗಲ್ಲ,ಯಾರ ಕಣ್ಣಿಗೂ ಕಾಣಿಸಲ್ಲ: ವಿಜಯಲಕ್ಷ್ಮಿ

    ನಾನು ಕರ್ನಾಟಕ ಬಿಟ್ಟು ಹೋಗಲ್ಲ,ಯಾರ ಕಣ್ಣಿಗೂ ಕಾಣಿಸಲ್ಲ: ವಿಜಯಲಕ್ಷ್ಮಿ

    ಬೆಂಗಳೂರು: ಕೃತಜ್ಞತೆ ಇಲ್ಲದವಳ ರೀತಿಯಲ್ಲಿ ನನ್ನನ್ನು ಬಿಂಬಿಸುತ್ತಿದ್ದಾರೆ. ಯೋಗೇಶ್ ಖಾತೆಯಲ್ಲಿನ ಹಣ ನನ್ನ ಕೈಸೇರಿಲ್ಲ ಎಂದು ನಟಿ ವಿಜಯಲಕ್ಷ್ಮಿ ಕಣ್ಣೀರು ಹಾಕುತ್ತಾ ವೀಡಿಯೋವನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

    ಜನರ ಎದುರಿನಲ್ಲಿ ನನ್ನನ್ನು ಕೆಟ್ಟವಳಂತೆ ಬಿಂಬಿಸುವ ಸಂಚು ನಡೆದಿದೆ. ಮೊನ್ನೆ ವಾಣಿಜ್ಯ ಮಂಡಳಿಗೆ ನನ್ನನ್ನು ಕರೆದಿದ್ದು. ಯೋಗೇಶ್ ಅಕೌಂಟ್‍ನಲ್ಲಿ ಇರುವ ಹಣವನ್ನು ಕೊಡುತ್ತೇವೆ ಅಂತ ಹೇಳಿದ್ದರು. ಇವತ್ತಿನವರೆಗೂ ನನಗೆ ಆ ಹಣ ಸಿಕ್ಕಿಲ್ಲ. ನಿನ್ನೆ ಯಾರೋ ಲಯನ್ ಜಯರಾಜ್ ಎಂಬುವವರು ವೀಡಿಯೋದಲ್ಲಿ ನನಗೆ ಬೈಯ್ಯುತ್ತಿದ್ದರು. ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡುತ್ತಿದ್ದಾರೆ ಎಂದು ತಮಗಾಗಿರುವ ನೋವನ್ನು ಹೇಳಿಕೊಂಡಿದ್ದಾರೆ.ಇದನ್ನೂ ಓದಿ:  ಮತ್ತೆ ಹಳೆಯ ವಿಜಯಲಕ್ಷ್ಮಿಯಾಗಿ ತೆರೆ ಮೇಲೆ ಬರ್ತೇನೆ: ನಾಗಮಂಡಲ ನಟಿ

    ನಾನು ಭಿಕ್ಷುಕಿನೆ. ಪಾಪ ಆ ಹುಡುಗ ಭಿಕ್ಷುಕಿ ಎತ್ತಿದ್ದಾನೆ ನಿಮಗಾಗಿ ಎಂದಿದ್ದೀರ. ಆದರೆ ನನಗೆ ಬಂದಿರುವ ದುಡ್ಡನ್ನು ಯಾಕೆ ಇನ್ನುವರೆಗೂ ಬಂದಿಲ್ಲ. ನನ್ನ ಹುಚ್ಚಿ ಮಾಡುತ್ತಿದ್ದೀರ. ಅಭಿಮಾನಿಗಳು ನೋಡುತ್ತಿದ್ದಾರೆ. ಕೃತಜ್ಞತೆ ಇಲ್ಲದವಳ ರೀತಿಯಲ್ಲಿ ನನ್ನನ್ನು ಬಿಂಬಿಸುತ್ತಿದ್ದಾರೆ. ಈ ವೀಡಿಯೋ ಮೂಲಕ ನಾನು ಆಣೆ ಮಾಡಿ ಹೇಳುತ್ತೇನೆ. ಯೋಗೇಶ್ ಖಾತೆಯಲ್ಲಿನ ಹಣ ನನ್ನ ಕೈಸೇರಿಲ್ಲ. ಅದನ್ನು ನಾನು ತೆಗೆದುಕೊಳ್ಳುವುದೂ ಇಲ್ಲ. ನನ್ನ ಹೆಸರು ಹೇಳಿಕೊಂಡು ಜನರಿಂದ ಅವರು ಸಂಗ್ರಹಿಸಿದ ಹಣ ನನಗೆ ಬೇಕಿಲ್ಲ. ನನ್ನ ಖಾತೆಗೆ ಎಷ್ಟೋ ದುಡ್ಡು ಬಂದಿದೆ. ಅದು ಸಾಕು. ನನಗೆ ನೆಮ್ಮದಿ ಬೇಕು. ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ. ನಾನು ಕಣ್ಣಿಗೆ ಕಾಣದ ರೀತಿಯಲ್ಲಿ ಇದ್ದುಕೊಂಡು ಹೋರಾಟ ಮಾಡುತ್ತೇನೆ. ನಾನು ಕರ್ನಾಟಕ ಬಿಟ್ಟು ಹೋಗುತ್ತೇನೆ ಎಂದು ಈ ಹಿಂದಿನ ವೀಡಿಯೋದಲ್ಲಿ ಹೇಳಿದ್ದೇ. ಆದರೆ ನಾನು ಎಲ್ಲಿಗೂ ಹೋಗುವುದಿಲ್ಲ. ಯಾರ ಕಣ್ಣಿಗೂ ಕಾಣದ ಒಂದು ಜಾಗದಲ್ಲಿ ಕುಳಿತು ಹೊರಾಟ ಮಾಡುತ್ತೇನೆ. ಎಲ್ಲರೂ ನನ್ನನ್ನೂ ಟಾರ್ಚರ್ ಮಾಡುತ್ತಿದ್ದೀರ, ನನ್ನ ಮರ್ಯಾದೆಯನ್ನು ಕಳೆಯುತ್ತಿದ್ದೀರ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ನಾನು ಭಿಕ್ಷುಕಿನೇ: ನಟಿ ವಿಜಯಲಕ್ಷ್ಮಿ

    ವಾಣಿಜ್ಯ ಮಂಡಳಿ ಕಡೆಯಿಂದ ಆತನ ವಿಷಯ ಬಂದಿದ್ದು. ಶುಕ್ರವಾರ (ಸೆ.1) ನಾನು ವಾಣಿಜ್ಯ ಮಂಡಳಿಗೆ ಹೋಗಿದ್ದೆನು. ದುಡ್ಡು ಕೊಡುವುದಾದರೆ ಅಂದೇ ಕೊಡಬಹುದಿತ್ತು. ಯಾಕೆ ಇನ್ನೂ ಕೊಟ್ಟಿಲ್ಲ? ಚೆನ್ನಾಗಿ ತಿಳಿದುಕೊಳ್ಳಿ. ಆ ದುಡ್ಡಿಗೋಸ್ಕರವೇ ನನಗೆ ಟಾರ್ಚರ್ ಮಾಡುತ್ತಿದ್ದಾರೆ ಎಂದು ಈ ಹಿಂದಿನ ವೀಡಿಯೋದಲ್ಲಿ ವಿಜಯಲಕ್ಷ್ಮಿ ಹೇಳಿದ್ದರು.

    ವಿಜಯಲಕ್ಷ್ಮಿ ತಮಗೆ ಅಭಿಮಾನಿಗಳು ಹಾಕಿರುವ ಹಣ ಇನ್ನು ನನ್ನ ಕೈಗೆ ಬಂದಿ ಸೇರಿಲ್ಲ. ನನ್ನ ಕುರಿತಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಅನ್ಯಾಯವಾಗುತ್ತಿದೆ ಎಂದು ಕಣ್ಣೀರು ಹಾಕುತ್ತಾ ಸೋಶಿಯಲ್ ಮೀಡಿಯಾದಲ್ಲಿ ಹಲವು ವೀಡಿಯೋಗಳನ್ನು ಹರಿಬಿಟ್ಟಿದ್ದಾರೆ.

  • ಕರ್ನಾಟಕದವಳೆಂದು ಹಿಂಸೆ ನೀಡಿದ್ರು- ಇದೇ ಕೊನೆಯ ವಿಡಿಯೋ ಎಂದ ವಿಜಯಲಕ್ಷ್ಮಿ

    ಕರ್ನಾಟಕದವಳೆಂದು ಹಿಂಸೆ ನೀಡಿದ್ರು- ಇದೇ ಕೊನೆಯ ವಿಡಿಯೋ ಎಂದ ವಿಜಯಲಕ್ಷ್ಮಿ

    – ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನ

    ಚೆನ್ನೈ: ನಟಿ ವಿಜಯಲಕ್ಷ್ಮಿ ಆಘಾತಕಾರಿ ಪೋಸ್ಟ್ ಮಾಡಿದ್ದು, ನನ್ನ ಸಾವಿಗೆ ನಟ ರಾಜಕಾರಣಿ ನಟ, ರಾಜಕಾರಣಿ ಸೀಮನ್ ಅವರೇ ಕಾರಣ. ನಾನು ಈಗಾಗಲೇ ಬಿಪಿ ಮಾತ್ರೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಫೇಸ್ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

    ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ ಫೇಸ್ಬುಕ್ ವಿಡಿಯೋ ಅಪ್‍ಲೋಡ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾರೆ. ನನ್ನ ಸಾವಿಗೆ ನಟ, ನಿರ್ದೇಶಕ, ರಾಜಕಾರಣಿ ಸೀಮನ್ ಅವರೇ ಕಾರಣ ಎಂದು ವಿಜಯಲಕ್ಷ್ಮಿ ನೇರ ಆರೋಪ ಮಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಮಾತ್ರೆಗಳನ್ನು ನುಂಗಿರುವುದಾಗಿ ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

    ವಿಡಿಯೋದಲ್ಲಿ ಮಾತನಾಡಿರುವ ಅವರು, ಕರ್ನಾಟಕದ ನನ್ನ ಅಭಿಮಾನಿಗಳಿಗೆ ಹೇಳುವುದೇನೆಂದರೆ, ನಾನು ಬಹಳ ಕಷ್ಟಪಟ್ಟಿದ್ದೇನೆ. ತಮಿಳಿನಲ್ಲಿ ಸೀಮನ್ ಅನ್ನುವ ಓರ್ವ ನಟ ನನಗೆ ಬಹಳ ಹಿಂಸೆ ನೀಡಿದ್ದಾರೆ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಒಂದು ಕಾರಣಕ್ಕೆ ತುಂಬಾ ಕಾಟ ಕೊಟ್ಟಿದ್ದಾರೆ. ನಾನು ವೇಶ್ಯಾವೃತ್ತಿ ಮಾಡುತ್ತಿದ್ದೇನೆ ಎಂದೆಲ್ಲ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಇವರು ಬದುಕುವುದಕ್ಕೆ ಬಿಡುತ್ತಿಲ್ಲ ಎಂದು ವಿಡಿಯೋದಲ್ಲಿ ಆರೋಪ ಮಾಡಿದ್ದಾರೆ ವಿಜಯಲಕ್ಷ್ಮಿ.

    ನಾನೀಗ ಒಂದಷ್ಟು ಬಿಪಿ ಮಾತ್ರೆಗಳನ್ನು ನುಂಗಿದ್ದೇನೆ. ಇನ್ನು ಸ್ವಲ್ಪ ಹೊತ್ತಿಗೆ ನನ್ನ ಬಿಪಿ ಕಮ್ಮಿ ಆಗಲಿದೆ. ನನ್ನ ಸಾವಿಗೆ ಕಾರಣರಾದ ಈ ಸೀಮನ್ ಮತ್ತು ಹರಿ ನಾಡರ್ ಅವರನ್ನು ಯಾವುದೇ ಕಾರಣಕ್ಕೂ ಬಿಡಲೇಬೇಡಿ. ‘ನಾಮ್ ತಮಿಳರ್ ಕಚ್ಚಿ’ ಎಂಬ ಪಕ್ಷವನ್ನು ಸೀಮನ್ ಕಟ್ಟಿದ್ದಾನೆ. ಕನ್ನಡಿಗರಿಗೆ ಆತ ಬಹಳಷ್ಟು ಕಾಟ ಕೊಟ್ಟಿದ್ದಾನೆ. ನಾನು ಹುಟ್ಟಿದ್ದು ಕರ್ನಾಟಕದಲ್ಲಿ. ನನ್ನ ಮಾತೃಭಾಷೆ ತಮಿಳು ಅನ್ನೋದು ಎಲ್ಲರಿಗೂ ಗೊತ್ತಿದೆ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಕಾರಣಕ್ಕೆ ನನಗೆ ತುಂಬಾ ತೊಂದರೆ ನೀಡಿದ್ದಾನೆ’ ಎಂದಿದ್ದಾರೆ ವಿಜಯಲಕ್ಷ್ಮಿ.

    ಇದು ನನ್ನ ಕಡೆಯ ವಿಡಿಯೋ. ಸೀಮನ್ ತಪ್ಪಿಸಿಕೊಳ್ಳಲು ಯಾರೂ ಬಿಡಬೇಡಿ. ನಾನು ತುಂಬ ಸಮಯ ಬದುಕಬೇಕು ಎಂದು ಆಸೆ ಪಟ್ಟೆ, ಅದು ಸಾಧ್ಯವಾಗಲಿಲ್ಲ. ಸೀಮನ್ ಮತ್ತು ಹರಿ ನಾಡರ್ ನನಗೆ ತುಂಬಾ ತೊಂದರೆ ನೀಡಿದ್ದಾರೆ. ಅವರಿಗೆ ತಕ್ಕ ಶಿಕ್ಷೆ ಆಗಲಿ. ನಿಮ್ಮೆಲ್ಲರನ್ನು ನಾನು ಪ್ರೀತಿಸುತ್ತೇನೆ. ನಾನು ಇನ್ನೂ ನೆನಪಾಗಿ ಉಳಿಯಲಿದ್ದೇನೆ. ನಿಮಗೆ ಏನಾದರೂ ತೊಂದರೆ ನೀಡಿದ್ದರೆ ನನ್ನನ್ನು ಕ್ಷಮಿಸಿ. ನನ್ನ ಸಾವು ಎಲ್ಲರ ಕಣ್ಣು ತೆರೆಸಲಿ. ನಾನು ಯಾರಿಗೂ ಗುಲಾಮಳಾಗಿ ಇರುವುದಿಲ್ಲ ಎಂದು ಅವರು ವಿಡಿಯೋದ ಕೊನೆಯಲ್ಲಿ ಹೇಳಿದ್ದಾರೆ. ಸದ್ಯ ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    https://www.youtube.com/watch?v=vzQ4CtE6B8I

  • ನಟಿ ವಿಜಯಲಕ್ಷ್ಮಿರನ್ನ ಭೇಟಿ ಮಾಡಿ ಸಹಾಯಕ್ಕೆ ಮುಂದಾದ ಕಾರುಣ್ಯ ರಾಮ್

    ನಟಿ ವಿಜಯಲಕ್ಷ್ಮಿರನ್ನ ಭೇಟಿ ಮಾಡಿ ಸಹಾಯಕ್ಕೆ ಮುಂದಾದ ಕಾರುಣ್ಯ ರಾಮ್

    ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟಿ ವಿಜಯಲಕ್ಷ್ಮಿ ಅವರನ್ನು ಇಂದು ನಟಿ ಕಾರುಣ್ಯ ರಾಮ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರುಣ್ಯ ರಾಮ್, ವಿಜಯ ಲಕ್ಷ್ಮಿ ಅವರಿಗೆ ಧೈರ್ಯ ತುಂಬಿ ಸಹಾಯ ಮಾಡಿದ್ದಾರೆ. ಸದ್ಯ ಕಾರುಣ್ಯ ಕನ್ನಡ ಖಾಸಗಿ ವಾಹಿನಿಯಲ್ಲಿ ಮೂಡಿಬರುತ್ತಿರುವ ಡಾನ್ಸ್ ಶೋದಲ್ಲಿ ಭಾಗವಹಿಸುತ್ತಿದ್ದಾರೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಪ ಮಟ್ಟಿಗೆ ಚೇತರಿಸಿಕೊಂಡಿರುವ ವಿಜಯಲಕ್ಷ್ಮಿ ಅವರು ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ಅವರನ್ನು ನೆನೆದು ಕಾಣಿರಿಟ್ಟಿದ್ದರು. ಅವರಿಲ್ಲದೆ ನಾನು ಅನಾಥೆಯಾಗಿದ್ದು, ಇಂಡಸ್ಟ್ರಿಯಲ್ಲಿ ಸುದೀಪ್ ಸರ್ ಬಿಟ್ಟು ಬೇರೆ ಯಾರಿಗೂ ಕರುಣೆ ಬಂದಿಲ್ಲ. ನಾನು ಏನ್ ತಪ್ಪು ಮಾಡಿದ್ದೀನಿ, ಯಾಕೆ ಇಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದರು.

    ನಾನಿರುವ ಪರಿಸ್ಥಿತಿಯಲ್ಲಿ ಶೀಘ್ರವೇ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಮೊದಲಿಗೆ ನನ್ನ ಬಳಿ ಇರುವುದಕ್ಕೆ ಮನೆ ಇಲ್ಲ. ಬಾಡಿಗೆ ಮನೆಗೆ ಹೋಗಲು ಅಡ್ವಾನ್ಸ್ ಕೊಡುವುದಕ್ಕೂ ಹಣ ಇಲ್ಲ. ಮನೆ ಇಲ್ಲದ ಕಾರಣ ನಾನು ಮನೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆರೋಗ್ಯ ಹದಗೆಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟಿ ವಿಜಯಲಕ್ಷ್ಮಿ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಕಿಚ್ಚ

    ನಟಿ ವಿಜಯಲಕ್ಷ್ಮಿ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಕಿಚ್ಚ

    ಬೆಂಗಳೂರು: ನಟಿ ವಿಜಯಲಕ್ಷ್ಮಿಯವರು ಅನಾರೋಗ್ಯದ ವಿಷಯ ತಿಳಿದು ನಟ ಕಿಚ್ಚ ಸುದೀಪ್ ಅವರು 1 ಲಕ್ಷ ರೂಪಾಯಿಗಳನ್ನು ನೀಡಿ ಸಹಾಯ ಹಸ್ತ ಚಾಚಿದ್ದಾರೆ.

    ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿಗಳಾದ ಬಾ.ಮ.ಹರೀಶ್ ಅವರು ಮಾಹಿತಿ ನೀಡಿದ್ದು, ವಿಜಯ ಲಕ್ಷ್ಮಿ ಅವರಿಗೆ ಸಹಾಯ ಮಾಡಿದ ಸುದೀಪ್ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

    ವಿಜಯಲಕ್ಷ್ಮಿ ಅವರು ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯ ಖರ್ಚು ಬರಿಸುವ ಹಣವಿಲ್ಲದೆ ವಿಜಯಲಕ್ಷ್ಮಿ ಅವರ ಸಹೋದರಿ ಚಿತ್ರರಂಗದ ಸಹಾಯ ಕೋರಿದ್ದರು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯಿಂದ ವಿಜಯಲಕ್ಷ್ಮಿ ಅವರ ಸಹಾಯಕ್ಕೆ ಆಗಮಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದರು.

    ವಿಜಯಲಕ್ಷ್ಮಿಯವರ ಆರೋಗ್ಯ ಸಹಾಯವಲ್ಲದೇ ಚೇತರಿಸಿಕೊಂಡ ಬಳಿಕ ಮತ್ತೆ ಬಣ್ಣ ಹಚ್ಚಬೇಕೆಂಬ ಅವರ ಆಸೆಯನ್ನ ಈಡೇರಿಸಲು ಫಿಲ್ಮ್ ಚೇಂಬರ್ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ನೀಡಿದ್ದರು. ತಮ್ಮ ನಟನೆಯ ಮೂಲಕ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದ ವಿಜಯಲಕ್ಷ್ಮಿ ಅವರು ಸಾಹಸಸಿಂಹ ವಿಷ್ಣುವರ್ಧನ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೇರಿದಂತೆ ಅನೇಕ ನಟರಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

    ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

    ಬೆಂಗಳೂರು: ಕಳೆದ ರಾತ್ರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿಯವರ ಆರೋಗ್ಯವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ವಿಚಾರಿಸಿ ಅವರ ನೆರವಿಗೆ ಧಾವಿಸಿದ್ದಾರೆ.

    ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ನಟಿ ವಿಜಯಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಖರ್ಚು ಬರಿಸುವ ಹಣವಿಲ್ಲದೆ ಚಿತ್ರರಂಗದ ಸಹಾಯ ಕೋರಿ ವಿಜಯಲಕ್ಷ್ಮಿ ಅವರ ಸಹೋದರಿ ಉಷಾರಾಣಿ ಪಬ್ಲಿಕ್ ಟಿವಿಯಲ್ಲಿ ವಿನಂತಿ ಮಾಡಿಕೊಂಡಿದ್ದರು.

    ಉಷಾರಾಣಿಯವರ ಮನವಿಯನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಕೂಡಲೇ ಸ್ಪಂದಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಭಾ.ಮಾ ಹರೀಶ್, ನಿರ್ಮಾಪಕ ಸುನಿಲ್ ಕುಮಾರ್, ಶಿಲ್ಪಾ ಶ್ರೀನಿವಾಸ್, ಗಿರೀಶ್ ವಿಜಯಲಕ್ಷ್ಮೀಯವರನ್ನ ಬೇಟಿ ಮಾಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ಕೊಟ್ಟಿದ್ದಾರೆ.

    ವಿಜಯಲಕ್ಷ್ಮಿಯವರ ಆರೋಗ್ಯಕ್ಕೆ ಸಹಾಯವಲ್ಲದೇ ಚೇತರಿಸಿಕೊಂಡ ಬಳಿಕ ಮತ್ತೆ ಬಣ್ಣ ಹಚ್ಚ ಬೇಕೆಂಬ ಅವರ ಆಸೆಯನ್ನ ಈಡೆರಿಸಲು ಫಿಲ್ಮ್ ಚೇಂಬರ್ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ನೀಡಿದ್ದಾರೆ.

    ಸಾಹಸಸಿಂಹ ವಿಷ್ಣುವರ್ಧನ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೇರಿದಂತೆ ಅನೇಕ ಸೂಪರ್ ಸ್ಟಾರ್ ನಟರೊಂದಿಗೆ ನಾಯಕಿಯಾಗಿ ವಿಜಯಲಕ್ಷ್ಮಿ ಅವರು ನಟಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv