Tag: ನಟಿ

  • ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದ ಪೋರ್ನ್‌ಸ್ಟಾರ್‌ ಥೈನಾ ಶವವಾಗಿ ಪತ್ತೆ – ಆತ್ಮಕ್ಕೆ ಶಾಂತಿ ಕೋರುವಂತೆ ಆಪ್ತನಿಂದ ಮನವಿ

    ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದ ಪೋರ್ನ್‌ಸ್ಟಾರ್‌ ಥೈನಾ ಶವವಾಗಿ ಪತ್ತೆ – ಆತ್ಮಕ್ಕೆ ಶಾಂತಿ ಕೋರುವಂತೆ ಆಪ್ತನಿಂದ ಮನವಿ

    ಲೈಮಾ: ವಯಸ್ಕರ ಚಲನಚಿತ್ರ ಉದ್ಯಮದಲ್ಲಿ ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದ ಪೆರುವಿನ ನೀಲಿ ಚಿತ್ರತಾರೆ ಥೈನಾ ಫೀಲ್ಡ್ಸ್‌(24) (Thaina Fields) ಅದಾದ ಒಂದೇ ತಿಂಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಆಕೆಯ ಆಪ್ತ ಸ್ನೇಹಿತ ಅಲೆಜಾಂಡ್ರಾ ಸ್ವೀಟ್ (Alejandra Sweet) ಅವರು ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನನ್ನ ಸ್ನೇಹಿತೆಯ ಸಾವಿನಿಂದ ದುಃಖಿತನಾಗಿದ್ದೇನೆ, ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಆಕೆಯನ್ನು ಪ್ರೀತಿಸುವವರೆಲ್ಲರೂ ಅವಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

    ಫೀಲ್ಡ್ ನೊಂದಿಗೆ ಕೆಲಸ ಮಾಡಿದ ಉತ್ಪಾದನಾ ಕಂಪನಿಗಳಲ್ಲಿ ಒಂದಾದ ಮಿಲ್ಕಿ ಪೆರು, ಥೈನಾ ಫೀಲ್ಡ್ಸ್‌ಗೆ ಸಂತಾಪ ಸೂಚಿಸಿದೆ. ವಯಸ್ಕ ಉದ್ಯಮದಲ್ಲಿ (Film Industry) ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಥೈನಾ ಫೀಲ್ಡ್ಸ್‌ ಇತ್ತೀಚೆಗೆ ಹೇಳಿಕೊಂಡಿದ್ದಳು. ಅಡಲ್ಟ್ಸ್‌ ಕಂಟೆಂಟ್‌ನಲ್ಲಿ ನಟಿಸಲು ಪ್ರಾರಂಭಿಸಿದ ನಂತರ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೆ. ತನ್ನನ್ನು ನೇಮಿಸಿಕೊಂಡವರು ತಮಗೆ ಬೇಕಾದುದ್ದನ್ನು ಮಾಡಬೇಕು ಎಂದು ಬಯಸುತ್ತಾರೆ. ಮಹಿಳೆಯರು ವಯಸ್ಕರ ಚಿತ್ರಗಳಲ್ಲಿ ನಟಿಸುವುದು ತುಂಬಾ ಕಷ್ಟಕರವಾಗಿತ್ತು. ಈ ಆರೋಪಗಳನ್ನು ಮಾಡಿದ ಕೆಲ ತಿಂಗಳ ನಂತರ, ಥೈನಾ ಫೀಲ್ಡ್ಸ್‌ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಕಾರಣ ಇನ್ನಷ್ಟೇ ಹೊರಬರಬೇಕಿದೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯಿಂದ ಮತಾಂತರಕ್ಕೆ ಯತ್ನ ಆರೋಪ – ರೊಚ್ಚಿಗೆದ್ದ ಗ್ರಾಮಸ್ಥರು

    ಸದ್ಯ ಬೆಳಕಿಗೆ ಬಂದಿರುವ ಆಘಾತಕಾರಿ ಘಟನೆಯಲ್ಲಿ, ಪೆರುವಿಯನ್ ವಯಸ್ಕ ಚಲನಚಿತ್ರ ತಾರೆ- ಥೈನಾ ಫೀಲ್ಡ್ ಎಂಬ ಹೆಸರಿನಿಂದ ಕೆಲಸ ಮಾಡುತ್ತಿದ್ದು, ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ 24 ವರ್ಷದ ನಟಿಯ ದೇಹವು ಟ್ರುಜಿಲ್ಲೊದಲ್ಲಿನ ಅವರ ಮನೆಯಲ್ಲಿ ಪತ್ತೆಯಾಗಿದೆ. ಲೈಂಗಿಕ ಉದ್ಯಮದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿದ ಒಂದು ತಿಂಗಳ ನಂತರ ಈ ಘಟನೆ ವರದಿಯಾಗಿದೆ. ಆಕೆಯ ಉದ್ಯಮದಲ್ಲಿ ತೊಡಗಿದ್ದ ಮಿಲ್ಕಿ ಪೆರು ಕಂಪನಿಯೂ ನಟಿಯ ಸಾವಿಗೆ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಹಾವೇರಿ ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಯಾರ ರಕ್ಷಣೆಯನ್ನೂ ಸರ್ಕಾರ ಮಾಡಲ್ಲ: ಪರಮೇಶ್ವರ್ 

  • ಬಣ್ಣದ ಬದುಕಿನ ನಟಿಯ ಜೀವನ ವರ್ಣರಂಜಿತವಾಗಿರಲಿಲ್ಲ: ಶೋಭಾ ಕರಂದ್ಲಾಜೆ

    ಬಣ್ಣದ ಬದುಕಿನ ನಟಿಯ ಜೀವನ ವರ್ಣರಂಜಿತವಾಗಿರಲಿಲ್ಲ: ಶೋಭಾ ಕರಂದ್ಲಾಜೆ

    ಉಡುಪಿ: ಕನ್ನಡ ಚಿತ್ರರಂಗದ (Kannada Cinema) ಹಿರಿ ತಲೆ ಶ್ರೇಷ್ಠ ಕಲಾವಿದೆ ಲೀಲಾವತಿ (Leelavati) ಅಗಲಿದ್ದಾರೆ. ಬಣ್ಣದ ಲೋಕವೇ ಹಾಗೆ. ನಮ್ಮ ಜೀವನವೇ ಹಾಗೆ. ಲೀಲಾವತಿ ಕೊನೆಯ ದಿನದವರೆಗೂ ಕಷ್ಟದ ಜೀವನ ಸಾಗಿಸಿದರು. ದುಃಖದಲ್ಲಿ ಎಲ್ಲಾ ಅಪಮಾನಗಳನ್ನು ಸಹಿಸಿಕೊಂಡು ಜೀವಿಸಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು.

    ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿ ದುಃಖವನ್ನು ನುಂಗಿ ಬದುಕಿದ ಕಲಾವಿದೆ. ಸಮಾಜಕ್ಕೆ ಏನಾದರೂ ಮಾಡಬೇಕೆಂದು ಬೆಂಗಳೂರಿನಿಂದ ದೂರ ಹೋಗಿ ನೆಲಮಂಗಲದಲ್ಲಿ (Nelamangala) ನೆಲೆಸಿದರು. ಸಮಾಜ ಸೇವೆಯ ಮೂಲಕ ಕೊನೆಯ ದಿನಗಳನ್ನು ಖುಷಿಯಾಗಿ ಕಳೆದರು. ಬಣ್ಣದ ಬದುಕು ಕಷ್ಟ. ಲೀಲಾವತಿಯವರ ಬದುಕು ಇನ್ನೂ ಕಷ್ಟ ಎಂದರು. ಇದನ್ನೂ ಓದಿ: ರಜನಿಕಾಂತ್‌ಗೆ 10 ಎಕರೆ ಜಾಗ ತೆಗೆದುಕೊಟ್ಟಿದ್ದರು ಲೀಲಾವತಿ: ಬ್ರಹ್ಮಾಂಡ ಗುರೂಜಿ

    ಲೀಲಾವತಿ ನಮ್ಮೂರಿನವರು. ನನಗೆ ಸಿಕ್ಕಾಗೆಲ್ಲ ತುಳುವಿನಲ್ಲೇ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ (Bengaluru) ನೆಲೆಸಿ ಚಲನಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದಾರೆ. ಸಮಾಜ ಸೇವೆ, ಪ್ರಾಣಿಗಳ ಸೇವೆಯ ಮೂಲಕ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ವಿನೋದ್ ರಾಜ್, ಕುಟುಂಬ ಬಂಧು ಬಳಗಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಲೀಲಾವತಿ ಅಂತಿಮ ದರ್ಶನ ಪಡೆದ ಸ್ಯಾಂಡಲ್‌ವುಡ್‌ ನಟ, ನಟಿಯರು

  • ಲೀಲಮ್ಮನ ಫೋಟೋ ಮುಂದೆ ಕುಳಿತು ಮೂಕ ವೇದನೆ – ಕಣ್ಣೀರಿಟ್ಟ ಪ್ರೀತಿಯ ಶ್ವಾನ!

    ಲೀಲಮ್ಮನ ಫೋಟೋ ಮುಂದೆ ಕುಳಿತು ಮೂಕ ವೇದನೆ – ಕಣ್ಣೀರಿಟ್ಟ ಪ್ರೀತಿಯ ಶ್ವಾನ!

    ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ನಾಡಿನ ಗಣ್ಯಮಾನ್ಯರು ಕಂಬನಿ ಮಿಡಿದಿದ್ದಾರೆ.

    ಬೆಳಗ್ಗೆ ಸುಮಾರು 10 ಗಂಟೆಯವರೆಗೂ ಸಾರ್ವಜನಿಕರಿಗೆ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ದರ್ಶನ ಪಡೆದವರೆಲ್ಲರೂ ಲೀಲಾವತಿ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಅವರ ನೆಚ್ಚಿನ ಸೋಲದೇವನಹಳ್ಳಿ ತೋಟದ ಮನೆಯಲ್ಲೂ ನೀರವ ಮೌನ ಮಡುಗಟ್ಟಿದೆ. ಅದರಲ್ಲೂ ಲೀಲಾವತಿಯವರ ಅಚ್ಚು ಮೆಚ್ಚಿನ ಶ್ವಾನ (Dog) ಕರಿಯನ ಮುಖ ವೇದನ ಕೂಡ ಹೇಳತೀರದಾಗಿದೆ. ಇದನ್ನೂ ಓದಿ: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪಿಎಂ ಮೋದಿ ಸಂತಾಪ

    ಮನೆಯ ಒಳಭಾಗಲ್ಲಿ ಇಟ್ಟಿರುವ ಲೀಲಾವತಿಯವರ ಪೋಟೋ ಮುಂದೆ ಕುಳಿತು ನಾಯಿಯ ವೇದನೆ ಅನುಭವಿಸುತ್ತಿದೆ. ಕಳೆದ ಅನೇಕ ವರ್ಷಗಳಿಂದ ಲೀಲಾವತಿಯವರ ಅಚ್ಚುಮೆಚ್ಚಿನ ಶ್ವಾನವಾಗಿದ್ದ ಕರಿಯ, ರಾತ್ರಿಯಿಂದ ಮನೆಯಲ್ಲಿ ಲೀಲಾವತಿಯವರು ಕಾಣದ ಹಿನ್ನೆಲೆ ಪೋಟೋ ಮುಂದೆ ಕುಳಿತು ವೇದನೆ ಅನುಭವಿಸುತ್ತಿದೆ. ಇದನ್ನೂ ಓದಿ: ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅಂತಿಮ ಸಂಸ್ಕಾರ

    ಎರಡು ಕಾಲುಗಳಲ್ಲಿ ಬಹುತೇಕ ಸ್ವಾಧೀನ ಕಳೆದುಕೊಂಡಿದ್ದರೂ, ತೆವಳಿಕೊಂಡೇ ಮನೆಯ ಒಳಗೆ ಬಂದಿರುವ ಶ್ವಾನ ಲೀಲಾವತಿ ಅವರ ಫೋಟೋ ಮುಂದೆಯೇ ಕುಳಿತಿದೆ. ಕಣ್ಣಲ್ಲಿ ನೀರು ಕಚ್ಚಿಕೊಂಡಿದ್ದು, ಮೂಕ ವೇದನೆ ಅನುಭವಿಸಿದೆ. ಈ ದೃಶ್ಯ ಲೀಲಾವತಿ ಅವರ ಅಭಿಮಾನಿಗಳಿಗೂ ಕಣ್ಣೀರು ತರಿಸಿದೆ. ಇದನ್ನೂ ಓದಿ: ಸಿಎಂ, ಗಣ್ಯರ ಅಂತಿಮ ದರ್ಶನದ ಬಳಿಕ ಲೀಲಾವತಿ ಅಂತಿಮ ಸಂಸ್ಕಾರ

  • ನಟಿ ಆತ್ಮಹತ್ಯೆ: ‘ಪುಷ್ಪ’ ಸಿನಿಮಾದ ನಟನ ಬಂಧನ

    ನಟಿ ಆತ್ಮಹತ್ಯೆ: ‘ಪುಷ್ಪ’ ಸಿನಿಮಾದ ನಟನ ಬಂಧನ

    ಪುಷ್ಪ (Pushpa) ಸಿನಿಮಾದಲ್ಲಿ ನಾಯಕ ಪುಷ್ಪರಾಜನ ಸ್ನೇಹಿತನಾಗಿ ನಟಿಸಿದ್ದ ಜಗದೀಶ್ ಪ್ರತಾಪ್ ಭಂಡಾರಿಯನ್ನು (Jagadish) ಪೊಲೀಸರು ಬಂಧಿಸಿದ್ದಾರೆ. ನಟಿಯೊಬ್ಬರ ಆತ್ಮಹತ್ಯೆಯ (Suicide)  ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

    ಜ್ಯೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಜಗದೀಶ್, ಅವರೊಂದಿಗೆ ಸಲುಗೆಯಿಂದ ಇದ್ದರಂತೆ. ಇದೇ ಸಲುಗೆಯನ್ನು ಬಳಸಿಕೊಂಡು ಆಕೆಯ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ತನ್ನೊಂದಿಗೆ ಸಹಕರಿಸದೇ ಇದ್ದರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಸಿದ್ದಾರೆ.

     

    ಜಗದೀಶ್ ಬೆದರಿಕೆಗೆ ಮನನೊಂದು ನಟಿ (Actress) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರು, ಈ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ. ಜಗದೀಶ್ ಅರೆಸ್ಟ್ ಆಗುವಾಗ ಪುಷ್ಪ 2 ಸಿನಿಮಾದ ಚಿತ್ರೀಕರಣದಲ್ಲಿ ಇದ್ದರು ಎಂದು ತಿಳಿದು ಬಂದಿದೆ.

  • ವಾಸುಕಿ ವೈಭವ್ ಮದುವೆಯಾದ ಹುಡುಗಿಯೂ ನಟಿ

    ವಾಸುಕಿ ವೈಭವ್ ಮದುವೆಯಾದ ಹುಡುಗಿಯೂ ನಟಿ

    ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು.

    ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ.

    ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ (Actress) ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ  (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

    ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ತಾಜಾ ಸಮಾಚಾರ.

     

    ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ ಅವರಿಗೆ ‘ಅಯ್ಯೋ.. ಹೇಳಬೇಡಿ’ ಎಂದು ಕೇಳಿಕೊಂಡಿದ್ದರೂ, ವಿಷಯವಂತೂ ಬಹಿರಂಗವಾಗಿತ್ತು. ಆದರೆ, ಅಧಿಕೃತವಾಗಿ ಈ ವಿಷಯದ ಕುರಿತು ವಾಸುಕಿ ವೈಭವ್ ಅವರೇ ಅಧಿಕೃತವಾಗಿ ಹೇಳಬೇಕಿತ್ತು. ಇಂದು ಅವರು ಮದುವೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ನಟಿ ಅಪರ್ಣಾ ಸಾವಿನ ರಹಸ್ಯ ಬಯಲು: ಪತಿಯ ವಿರುದ್ಧ ಎಫ್.ಐ.ಆರ್

    ನಟಿ ಅಪರ್ಣಾ ಸಾವಿನ ರಹಸ್ಯ ಬಯಲು: ಪತಿಯ ವಿರುದ್ಧ ಎಫ್.ಐ.ಆರ್

    ರಡು ದಿನಗಳ ಹಿಂದೆಯಷ್ಟೇ ಮಲಯಾಳಂ (Malayalam) ಖ್ಯಾತ ನಟಿ ಅಪರ್ಣಾ ನಾಯರ್ (Aparna Nair) ನೇಣಿಗೆ ಶರಣಾಗಿದ್ದರು. ಅಸಹಜ ಸಾವು ಎಂದು ಘೋಷಿಸಿದ್ದ ಪೊಲೀಸರು ತೀವ್ರಗತಿಯಲ್ಲಿ ವಿಚಾರಣೆ ನಡೆಸಿದ್ದರು. ಇದೀಗ ಅವರ ಸಾವಿಗೆ ಕಾರಣ ಬಯಲಾಗಿದ್ದು, ಈ ವಿಷಯವನ್ನು ಅಪರ್ಣಾ ಅವರ ಸಹೋದರಿಯೇ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಅದರಂತೆ ಎಫ್.ಐ. ಆರ್ ಕೂಡ ದಾಖಲಾಗಿದೆ.

    ಅಪರ್ಣಾ ಅವರ ಪತಿಯ ಕುಡಿತವೇ ಸಾವಿಗೆ ಕಾರಣವೆಂದು ಎಫ್.ಐ.ಆರ್ ನಲ್ಲಿ ದಾಖಲಾಗಿದ್ದು, ಗಂಡನ ಕುಡಿತದ ಚಟಕ್ಕೆ ಅಪರ್ಣಾ ಬೇಸತ್ತು ಹೋಗಿದ್ದರಿಂದ, ಈ ವಿಚಾರವನ್ನು ಹಲವಾರು ಬಾರಿ ತಮ್ಮ ತಾಯಿಯ ಜೊತೆ ಹಂಚಿಕೊಂಡಿದ್ದರಂತೆ. ಸಾವಿಗೂ ಎರಡು ಗಂಟೆ ಮುಂಚೆ ತಾಯಿಗೆ ಕರೆ ಮಾಡಿ, ತನ್ನ ನೋವನ್ನು ಹೇಳಿಕೊಂಡಿದ್ದರು ಎಂದು ಅಪರ್ಣಾ ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪರ್ಣಾ ಸಹೋದರಿ ನೀಡಿದ್ದ ಹೇಳಿಕೆಯ ಆಧಾರದಲ್ಲಿ ಇದೀಗ ಎಫ್.ಐ.ಆರ್ ದಾಖಲಾಗಿದೆ. ಇದನ್ನೂ ಓದಿ:ಮತ್ತೆ ನಿರ್ದೇಶನಕ್ಕಿಳಿದ ಸುದೀಪ್- ಕಿಚ್ಚನ ಕೈಜೋಡಿಸಿದ KRG Studios

    ಆಗಸ್ಟ್ 31ರ ಸಂಜೆ 7.30ರ ಹೊತ್ತಿಗೆ ಅಪರ್ಣಾ ಅವರ ದೇಹ ನೇಣು (Suicide) ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿತ್ತು. ಅವರ ತಾಯಿ ಮತ್ತು ಸಹೋದರಿ ಕೂಡಲೇ ಅಪರ್ಣಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆ ತಲುಪುವುದರ ಹೊತ್ತಿಗೆ ಅಪರ್ಣಾ ಉಸಿರು ಚೆಲ್ಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

     

    ತಿರುವನಂತಪುರಂ ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳೊಂದಿಗೆ ಅಪರ್ಣಾ ವಾಸಿಸುತ್ತಿದ್ದರು. ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ ಈ ನಟಿ. ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅಪರ್ಣಾ ಸಾಕಷ್ಟು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟಿಯ ಅಗಲಿಕೆಗೆ ಕೇರಳ ಸಿನಿಮಾ ಮತ್ತು ಟಿವಿ ಉದ್ಯಮ ಕಂಬನಿ ಮಿಡಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿಮ್ಮಪ್ಪನಿಗೆ ಮುಡಿಕೊಟ್ಟ ಖ್ಯಾತ ನಟಿ ಗಾಯತ್ರಿ ರಘುರಾಮ್

    ತಿಮ್ಮಪ್ಪನಿಗೆ ಮುಡಿಕೊಟ್ಟ ಖ್ಯಾತ ನಟಿ ಗಾಯತ್ರಿ ರಘುರಾಮ್

    ನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್(Gayatri Raghuram) , ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ (Tirupati Timmappa)  ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 ವರ್ಷಗಳ ಪ್ರಾರ್ಥನೆ ಆಗಿತ್ತಂತೆ. ಈಗ ಅದು ಈಡೇರಿದೆ. ವಾರದ ಹಿಂದೆಯಷ್ಟೇ ಉದ್ದನೆಯ ಜಡೆಯ ಫೋಟೋ ಹಾಕಿದ್ದ ಗಾಯತ್ರಿ ಇದೀಗ ಮುಡಿಕೊಟ್ಟ ಫೋಟೋ ಶೇರ್ ಮಾಡಿದ್ದಾರೆ.

    ತಮಿಳು ಚಿತ್ರೋದ್ಯಮದಲ್ಲಿ ಸ್ಟಾರ್ ನಟಿ ಎಂದೇ ಗುರುತಿಸಿಕೊಂಡಿದ್ದ ಗಾಯತ್ರಿ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೂ ಬಣ್ಣ ಹಚ್ಚಿದ್ದಾರೆ. ಹಲವಾರು ಯಶಸ್ವಿ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಕೇವಲ ನಟಿ ಮಾತ್ರವಲ್ಲ, ನಿರ್ಮಾಪಕಿ, ಕೊರಿಗೋಗ್ರಾಫರ್, ನಿರ್ದೇಶಕಿಯಾಗಿಯೂ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

    2006ರಲ್ಲಿ ದೀಪಕ್ ಚಂದ್ರಶೇಖರ್ ಜೊತೆ ಹೊಸ ಬದುಕಿಗೆ ಕಾಲಿಟ್ಟವರು ಅಲ್ಲಿಯೂ ಹೆಚ್ಚು ದಿನ ಉಳಿಯಲಿಲ್ಲ. ಮದುವೆಯಾದ ಕೇವಲ ನಾಲ್ಕೇ ನಾಲ್ಕು ವರ್ಷಕ್ಕೆ ಅವರಿಂದ ದೂರವಾದರು. ಎರಡು ವರ್ಷಗಳ ಹಿಂದೆಯಷ್ಟೇ ಚಿತ್ರೋದ್ಯಮಕ್ಕೆ ಗುಡ್ ಬೈ ಹೇಳಿದ್ದರು. ನಂತರ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

     

    ಆನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡು, ಪಕ್ಷ ಕಟ್ಟಲು ಮುಂದಾದರು. ಪಕ್ಷದ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ನಂತರ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಲೆ ಆರೋಪ ಮಾಡಿ ರಾಜೀನಾಮೆ ಕೂಡ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನ್ಯಾಸಿನಿಯಾಗಿದ್ದ ಮಹಾಲಕ್ಷ್ಮಿ ಮತ್ತೆ ಬಣ್ಣದ ಲೋಕಕ್ಕೆ

    ಸನ್ಯಾಸಿನಿಯಾಗಿದ್ದ ಮಹಾಲಕ್ಷ್ಮಿ ಮತ್ತೆ ಬಣ್ಣದ ಲೋಕಕ್ಕೆ

    ರಶುರಾಮ ಸೇರಿದಂತೆ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ, ಬಹುಭಾಷಾ ತಾರೆ (Actress) ಮಹಾಲಕ್ಷ್ಮಿ (Mahalakshmi) ಮತ್ತೆ ಬಣ್ಣದ ಪ್ರಪಂಚಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ದಕ್ಷಿಣದ ಅಷ್ಟೂ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ಮಹಾಲಕ್ಷ್ಮಿ 80ರ ದಶಕದಲ್ಲಿ ಬಹುಬೇಡಿಕೆಯ ನಟಿಯಾಗಿದ್ದರು. ಬೇಡಿಕೆಯಲ್ಲಿರುವಾಗಲೇ ಚಿತ್ರೋದ್ಯಮದಿಂದ ದೂರ ಸರಿದರು.

    ಚಿತ್ರೋದ್ಯಮದಿಂದ ದೂರವಾದ ನಂತರ ಮಹಾಲಕ್ಷ್ಮಿ ಏನು ಮಾಡುತ್ತಿದ್ದರು ಎಂದು ಗೊತ್ತಾಗಿದ್ದೆ ಹಲವು ವರ್ಷಗಳ ನಂತರ. ಅವರು ಸನ್ಯಾಸಿಯಾದರು ಎಂದು ಹೇಳಲಾಗುತ್ತಿತ್ತು. ಅದಕ್ಕೆ ಸಾಕ್ಷಿಯಾಗಿ ಹಲವು ಫೋಟೋಗಳು ಕೂಡ ಹರಿದಾಡಿದವು. ಆನಂತರ ಅದು ಸುಳ್ಳು ಎಂದು ಬಿಂಬಿಸುವ ಪ್ರಯತ್ನ ಕೂಡ ನಡೆಯಿತು. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್

    ಇದೀಗ ಮತ್ತೆ ಮಹಾಲಕ್ಷ್ಮಿ ಸುದ್ದಿಗೆ ಸಿಕ್ಕಿದ್ದಾರೆ. ಅವರು ಮತ್ತೆ ಬಣ್ಣದ ಪ್ರಪಂಚಕ್ಕೆ ಕಾಲಿಡುತ್ತಿದ್ದಾರೆ ಎನ್ನುವುದು ಸದ್ಯದ ವರ್ತಮಾನ. ಕನ್ನಡದ ಮನರಂಜನಾ ವಾಹಿನಿಯೊಂದು ಅವರನ್ನು ಸಂಪರ್ಕ ಮಾಡಿದ್ದು, ಧಾರಾವಾಹಿಯೊಂದರ (Serial) ಪ್ರಮುಖ ಪಾತ್ರ ಮಾಡಲು ಕೇಳಿದೆಯಂತೆ. ಅದಕ್ಕೆ ಮಹಾಲಕ್ಷ್ಮಿ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಮಹಾಲಕ್ಷ್ಮಿ ಈ ಹಿಂದೆ ಬಣ್ಣದ ಪ್ರಪಂಚಕ್ಕೆ ಎರಡನೇ ಬಾರಿ ಕಾಲಿಟ್ಟಾಗಲೂ ಕನ್ನಡ ಚಿತ್ರೋದ್ಯಮವನ್ನೆ ಆರಿಸಿಕೊಂಡಿದ್ದಾರೆ. ಇದೀಗ ಮತ್ತೆ ಕನ್ನಡ ಕಿರುತೆರೆಯ ಮೂಲಕ ನಟನೆಯತ್ತ (Acting) ಮುಖ ಮಾಡುತ್ತಿದ್ದಾರೆ. ಅವರು ನಟಿಸಲಿರುವ ಧಾರಾವಾಹಿ ಯಾವುದು? ಯಾವ ಚಾನೆಲ್ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 75 ವರ್ಷದ ಮಾಜಿ ಸೈನಿಕನಿಗೆ ಹನಿಟ್ರ್ಯಾಪ್ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟ ನಟಿ

    75 ವರ್ಷದ ಮಾಜಿ ಸೈನಿಕನಿಗೆ ಹನಿಟ್ರ್ಯಾಪ್ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟ ನಟಿ

    ತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ ಮಾತ್ರವಲ್ಲ, ಸಿನಿಮಾ ರಂಗದಲ್ಲೂ ಹನಿಟ್ರ್ಯಾಪ್ (Honeytrap) ವಿಚಾರ ಭಾರೀ ಸದ್ದು ಮಾಡುತ್ತಿದ್ದೆ. 75 ವರ್ಷದ ಮಾಜಿ ಸೈನಿಕರೊಬ್ಬರಿಗೆ ಕಿರುತೆರೆಯ ನಟಿ ಹನಿಟ್ಯಾಪ್ ಮಾಡಿ ಬರೋಬ್ಬರಿ 25 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕೇರಳದ (Kerala) ಕಿರುತೆರೆ ನಟಿ ನಿತ್ಯಾ ಶಶಿ  (Nityashashi) ಅನ್ನುವವರು ನಿವೃತ್ತಿ ಸೈನಿಕನಿಗೆ ಕಾಮದಾಸೆ ತೋರಿಸಿ ಬಲೆ ಬೀಸಿದ್ದಾರೆ. ಈಕೆ ಹೆಣೆದ ಬಲೆಗೆ ನಿವೃತ್ತಿ ಸೈನಿಕ (Ex-Serviceman) ಸಿಲುಕಿಕೊಂಡು ವಿಲವಿಲ ಒದ್ದಾಡಿದ್ದಾರೆ. ಜೊತೆಗೆ 11 ಲಕ್ಷ ರೂಪಾಯಿಯನ್ನೂ ಕಳೆದುಕೊಂಡಿದ್ದಾನೆ. ಮತ್ತೆ ಹಣದ ಬೇಡಿಕೆ ಇಟ್ಟಾಗ ಅನಿವಾರ್ಯವಾಗಿ ಪೊಲೀಸರ ಸಹಾಯ ಕೇಳಿದ್ದಾನೆ. ಕೊನೆಗೂ ಪೊಲೀಸರು ನಟಿ ನಿತ್ಯಾ ಹಾಗೂ ಆಕೆಯ ಸ್ನೇಹಿತ ಬಿನು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್

    ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮನೆ ನೋಡುವ ನೆಪದಲ್ಲಿ ನಿತ್ಯಾ (Actress) ಮತ್ತು ಆತನ ಸ್ನೇಹಿತ ಇಬ್ಬರೂ ನಿವೃತ್ತ ಸೈನಿಕನ ಮನೆಗೆ ಬಂದಿದ್ದಾರೆ. ವೃದ್ಧನನ್ನು ಬೆದರಿಸಿ ಬೆತ್ತಲೇ ಮಾಡಿ ಫೋಟೋ ಮತ್ತು ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲಿಂದ ಮಾಜಿ ಸೈನಿಕನನ್ನು ಬೆದರಿಸಲು ಶುರು ಮಾಡಿದ್ದಾರಂತೆ.

     

    ಕೇರಳದ ತಿರುವನಂತಪುರದ ಪಟ್ಟಂನಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸೈನಿಕ ಕೇರಳ ವಿಶ್ವವಿದ್ಯಾಲಯದ ಮಾಜಿ ಉದ್ಯೋಗಿ ಕೂಡ ಆಗಿದ್ದಾರೆ. ನಿತ್ಯಾ ಕಿರುತೆರೆಯ ನಟಿಯಾಗಿ ಮತ್ತು ವಕೀಲೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಜಯವಾಣಿ ಬೆತ್ತಲೆ ಫೋಟೋ: ದುರುಳರ ಹೆಡೆಮುರಿ ಕಟ್ಟಲು ಸಜ್ಜು

    ನಟಿ ಜಯವಾಣಿ ಬೆತ್ತಲೆ ಫೋಟೋ: ದುರುಳರ ಹೆಡೆಮುರಿ ಕಟ್ಟಲು ಸಜ್ಜು

    ಟಿ ಜಯವಾಣಿ (Jayavani) ಅವರ ಬೆತ್ತಲೇ ಫೋಟೋಗಳು ಟ್ವಿಟರ್ ನಲ್ಲಿ ಭಾರೀ ಸದ್ದು ಮಾಡಿದ್ದವು. ಜಯವಾಣಿ ಅವರ ಹೆಸರಿನಲ್ಲೇ ಇದ್ದ ಟ್ವಿಟರ್ (Twitter) ಖಾತೆಯಿಂದ ಅವು ಹಂಚಲ್ಪಟ್ಟಿದ್ದವು. ಆ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನಟಿ ಜಯವಾಣಿ ಅವುಗಳ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಅಲ್ಲದೇ, ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

    ತೆಲುಗಿನ (Telugu) ಖ್ಯಾತ ಪೋಷಕ ನಟಿಯಾಗಿರುವ (Actress) ಜಯವಾಣಿ, ವಿಕ್ರಮಾರ್ಕುಡು ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ನಟನೆಯಿಂದ ದೂರ ಉಳಿದರೂ, ಸಿನಿಮಾ ಸಂಬಂಧಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೂವಿ ಕಲಾವಿದರ ಸಂಘದ ಕಾರ್ಯಕಾರಿಣಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಕೂಡ. ಇದನ್ನೂ ಓದಿ:‘ಭರ್ಜರಿ ಬ್ಯಾಚುಲರ್ಸ್’ ಜೊತೆ ಬರುತ್ತಿದ್ದಾರೆ ರವಿಚಂದ್ರನ್, ರಚಿತಾ‌ ರಾಮ್

    ಇಂತಹ ನಟಿಯ ಹೆಸರಿನಲ್ಲೇ ಟ್ವಿಟರ್ ಖಾತೆ ಇದೆ. ಅದು ಬ್ಲೂಟಿಕ್ ಇರುವುದರಿಂದ ಜಯವಾಣಿ ಅವರೇ ಈ ಖಾತೆಯಲ್ಲಿ ಫೋಟೋ ಹಂಚಿಕೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಆ ಖಾತೆಯಿಂದಲೇ ಅವರ ಬೆತ್ತಲೆ ಫೋಟೋಗಳು ಅಪ್ ಲೋಡ್ ಆಗಿದ್ದವು. ಸಾಕಷ್ಟು ಜನರು ಆ ಫೋಟೋಗಳ ಬಗ್ಗೆ ಮಾತಾಡೋಕೆ ಶುರು ಮಾಡಿದ್ದರು. ಇದರಿಂದಾಗಿ ನಟಿ ಸಂಕಷ್ಟಕ್ಕೆ ಸಿಲುಕಿದ್ದರು.

    ಈ ಕುರಿತು ಜಯವಾಣಿಯೇ ಸ್ಪಷ್ಟನೆ ಕೊಟ್ಟಿದ್ದಾರೆ. ‘ನಾನು ಟ್ವಿಟರ್ ಖಾತೆಯನ್ನು ಹೊಂದಿಲ್ಲ. ಯಾರೋ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಶುರು ಮಾಡಿದ್ದಾರೆ. ಜೊತೆಗೆ ಎಡಿಟ್ ಫೋಟೋಗಳನ್ನು ಅದರಲ್ಲಿ ಹಾಕಿ, ನನ್ನ ಹೆಸರಿಗೆ ಕಳಂಕ ತಂದಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವೆ’ ಎಂದು ಎಚ್ಚರಿಕೆ ಕೂಡ ಕೊಟ್ಟಿದ್ದಾರೆ.

    ಬೆತ್ತಲೆ ಫೋಟೋಗಳು (Nude Photo) ತಮ್ಮದಲ್ಲ ಎಂದು ಹೇಳಿಕೊಂಡಿರುವ ಜಯವಾಣಿ, ಕೂಡಲೇ ಅಕೌಂಡ್ ಡಿಲಿಟ್ ಮಾಡದೇ ಇದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. ಯಾರೂ ಆ ಫೋಟೋಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.