Tag: ನಟ ಅರ್ಜುನ್ ಸರ್ಜಾ

  • 6 ಮಂದಿ ಮೇಲೆ ನಿಂತಿದೆ ನಟ ಅರ್ಜುನ್ ಹಣೆಬರಹ!

    6 ಮಂದಿ ಮೇಲೆ ನಿಂತಿದೆ ನಟ ಅರ್ಜುನ್ ಹಣೆಬರಹ!

    ಬೆಂಗಳೂರು: ವಿಸ್ಮಯ ಚಿತ್ರದ ಶೂಟಿಂಗ್ ಸೆಟ್‍ನಲ್ಲಿದ್ದ 5 ಮಂದಿ ಮತ್ತು ಶೃತಿ ಹರಿಹರನ್ ಗೆಳತಿ ನೀಡುವ ಹೇಳಿಕೆಯ ಮೇಲೆ ನಟ ಅರ್ಜುನ್ ಸರ್ಜಾ ಭವಿಷ್ಯ ನಿಂತಿದೆ.

    ಹೌದು. ಶೃತಿ ಹರಿಹರನ್ ಅರ್ಜುನ್ ಸರ್ಜಾ ಮೇಲಿನ ಲೈಂಗಿಕ ಕಿರುಕುಳ ಆರೋಪಗಳಿಗೆ 6 ಮಂದಿಯನ್ನು ಸಾಕ್ಷಿಯನ್ನಾಗಿ ಮಾಡಿದ್ದಾರೆ. ಆ ಸಾಕ್ಷಿ ಬೇರೆ ಯಾರೂ ಅಲ್ಲ, ವಿಸ್ಮಯ ಸಿನಿಮಾದ ನಿರ್ದೇಶಕ ಅರುಣ್ ವೈದ್ಯನಾಥನ್, ಸಹಾಯಕ ನಿರ್ದೇಶಕ ಭರತ್ ನೀಲಕಂಠ, ಮೋನಿಕಾ, ಶೃತಿ ಹರಿಹರನ್ ಸಿಬ್ಬಂದಿ ಬೋರೇಗೌಡ ಮತ್ತು ಕಿರಣ್ ಹಾಗೂ ಗೆಳತಿ ಯಶಸ್ವಿನಿ.

    ವಿಸ್ಮಯ ಸಿನಿಮಾದಲ್ಲಿ ಏನಾಯಿತು?:
    ಬೆಂಗಳೂರಿನ ಹೆಬ್ಬಾಳದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬೆಳಗ್ಗೆ 7.30ರಿಂದ ಸಂಜೆ 6 ಗಂಟೆವರೆಗೆ ವಿಸ್ಮಯ ಶೂಟಿಂಗ್ ಸೆಟ್ ಹಾಕಲಾಗಿತ್ತು. ಈ ವೇಳೆ ಅರ್ಜುನ್ ಸರ್ಜಾ ವರ್ತನೆಯಿಂದ ನನಗೆ ಶಾಕ್ ಆಗಿತ್ತು. ಸ್ಕ್ರಿಪ್ಟ್ ಪ್ರಕಾರ ಸಣ್ಣದೊಂದು ಡೈಲಾಗ್‍ಗೆ ನನ್ನನ್ನು ಅರ್ಜುನ್ ಸರ್ಜಾ ಅಪ್ಪಿಕೊಳ್ಳಬೇಕಿತ್ತು. ಆದರೆ ಸೀನ್ ಬಳಿಕ ರಿಹರ್ಸಲ್ ಮಾಡುವಂತೆ ನಿರ್ದೇಶಕ ಅರುಣ್ ವೈದ್ಯನಾಥನ್ ತಿಳಿಸಿದ್ದರು. ಆ ರಿಹರ್ಸಲ್ ವೇಳೆ ಕಾಮದಾಹ ಏರಿ ಅರ್ಜುನ್ ಸರ್ಜಾ ವರ್ತಿಸಲು ಶುರು ಮಾಡಿದ್ದರು. ನನ್ನ ಪೃಷ್ಠ ಕೈ ಹಾಕಿ, ನಿಧಾನವಾಗಿ ಬ್ರಾ ಬಳಿಗೆ ಕೈ ತಂದಿದ್ದರು. ಅಷ್ಟಕ್ಕೆ ಸುಮ್ಮನಾಗದ ಅವರು ಕೆಳಭಾಗದಲ್ಲಿ ನನ್ನನ್ನು ಸವರಿದರು, ಬಳಿಕ ನನ್ನ ತೊಡೆವರೆಗೂ ಕೈ ತಂದರು. ಆ ಕ್ಷಣ ನಾನು ಅನುಭವಿಸಿದ ನೋವು ಅಷ್ಟಿಷ್ಟಲ್ಲ ಎಂದು ಶೃತಿ ಹರಿಹರನ್ ಹೇಳಿಕೊಂಡಿದ್ದಾರೆ. ಇದನ್ನು ಓದಿ: ಚೇತನ್ ವಿರುದ್ಧ ಐಶ್ವರ್ಯ ಸರ್ಜಾ ಮೀಟೂ ಬಾಂಬ್ – ಆಡಿಯೋ ಕೇಳಿ

    ಆ ಶಾಕ್‍ನಿಂದ ಸುಧಾರಿಸಿಕೊಳ್ಳುವುದಕ್ಕೂ ಮೊದಲೇ ನನ್ನನ್ನ ಮತ್ತೆ ಬರಸೆಳೆದು ಅರ್ಜುನ್ ಅಪ್ಪಿದರು. ನನ್ನ ಹಿಂಭಾಗವನ್ನು ಗಟ್ಟಿಯಾಗಿ ಹಿಡಿದುಕೊಂಡು ಡೈರೆಕ್ಟರ್ ಕಡೆಗೆ ತಿರುಗಿ ಮಾತಾಡಿದ ಅರ್ಜುನ್ ಸರ್ಜಾ, “ಈ ರೀತಿ ಸೀನ್ ಇಂಪ್ರೂ ಮಾಡಬಹುದಲ್ಲಾ” ಅಂತ ಡೈಲಾಗ್ ಹೊಡೆದರು. ಇದರಿಂದ ಕಸಿವಿಸಿಗೊಂಡ ನಾನು ತಕ್ಷಣವೇ ಡೈರೆಕ್ಟರ್‍ಗೆ ಹೇಳಿದೆ, “ಈ ರೀತಿಯಾದರೆ ನಾನು ಅಭಿನಯ ಮಾಡುವುದಕ್ಕೆ ಆಗಲ್ಲ” ಅಂತಾ ಹೇಳಿ ಅಲ್ಲಿಂದ ಕಾರವಾನ್(ಶೂಟಿಂಗ್ ಸಮಯದಲ್ಲಿ ಡ್ರೆಸ್/ ಮೇಕಪ್ ಮಾಡಲು ಇರುವ ವಾಹನ) ಬಳಿ ಹೋದೆ. ಅಲ್ಲಿ ಅರ್ಜುನ್ ಸರ್ಜಾರ ಕಿರುಕುಳ ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟೆ. ಆಗ ನನ್ನ ಸಿಬ್ಬಂದಿ ಬೋರೇಗೌಡ ಮತ್ತು ಕಿರಣ್ ಸಮಾಧಾನ ಮಾಡಿದರು.

    ಇತ್ತ ನಟ ಅರ್ಜುನ್ ಸರ್ಜಾ ನನ್ನ ಮಾನಭಂಗ ಮಾಡಲೇಬೇಕು ಅಂತ ಫಿಕ್ಸ್ ಆಗಿದ್ದರು. ಒಂದು ಸೀನ್‍ನಲ್ಲಿ ಅರ್ಜುನ್ ಸರ್ಜಾ- ನಾನು ಬೆಡ್‍ನಲ್ಲಿ ಒಟ್ಟಿಗೆ ಮಲಗಬೇಕಿತ್ತು. ಇದನ್ನೇ ಲಾಭ ಮಾಡಿಕೊಂಡ ಅರ್ಜುನ್ ನನ್ನ ಹಿಡಿದು ಎಳೆದು ಬಲವಂತವಾಗಿ ಅಪ್ಪಿಕೊಂಡರು. ಆದರೆ ನಾನು ಅವರನ್ನು ತಳ್ಳಿದೆ. ಸೀನ್ ಮುಗಿದ ತಕ್ಷಣ ಸೆಟ್‍ನಿಂದ ಹೊರಬಂದೆ. ಪದೇ ಪದೇ ಅರ್ಜುನ್ ಸರ್ಜಾ ಅವರಿಂದ ಆಗುತ್ತಿದ್ದ ಮಾನಭಂಗ ಯತ್ನದಿಂದ ನನಗೆ ಶಾಕ್ ಆಗಿತ್ತು. ಇದೆಲ್ಲವನ್ನು ಸಹಾಯಕ ನಿರ್ದೇಶಕ ಭರತ್ ನೀಲಕಂಠ ಮತ್ತು ಮೋನಿಕಾ ಬಳಿಕ ಹೇಳಿ ಕಣ್ಣೀರಿಟ್ಟಿದ್ದೆ. ಹೀಗಾಗಿ ರಿಹರ್ಸಲ್ ಬೇಡ, ಓನ್ಲಿ ಟೇಕ್ ಎನ್ನುವ ನಿರ್ಧಾರವಾಯಿತು. ಇದನ್ನು ಓದಿ: ನಟಿ ಶೃತಿಗೆ ಅರ್ಜುನ್ ಮಗಳು ಐಶ್ವರ್ಯಾ ಸರ್ಜಾ ಸವಾಲ್!

    ಅಷ್ಟಕ್ಕೆ ಸುಮ್ಮನಾಗದ ಅರ್ಜುನ್ ಸರ್ಜಾ ದೇವನಹಳ್ಳಿ ಸಿಗ್ನಲ್‍ನಲ್ಲಿ ನನ್ನ ಕಾರು ಬಳಿ ತಮ್ಮ ಕಾರ್ ನಿಲ್ಲಿಸಿ, ಗ್ಲಾಸ್ ಇಳಿಸಿ, ಇವತ್ತು ನನ್ನ ರೂಂನಲ್ಲಿ ಯಾರೂ ಇಲ್ಲ. ರೆಸಾರ್ಟ್‍ಗೆ ಬಾ. ನಾವಿಬ್ಬರೂ ಖುಷಿಪಡೋಣ. ನಾನು ಪದೇ ಪದೇ ಕೇಳುತ್ತಿದ್ದರೂ ನೀನು ಆಗಲ್ಲ ಅಂತ ಹೇಳುತ್ತಿರುವೆ ಎಂದು ಸೆಕ್ಸಿ ಡೈಲಾಗ್ ಅನ್ನು ಹೊಡೆದಿದ್ದರು. ದೇವನಹಳ್ಳಿ ಸಿಗ್ನಲ್‍ನಲ್ಲಿ ಆ ಘಟನೆ ನಡೆದಾಗ ನನ್ನ ಕಾರಲ್ಲಿ ಜೊತೆಗೆ ಬೋರೇಗೌಡ, ಕಿರಣ್ ಇದ್ದರು.

    `ವಿಸ್ಮಯ’ ಶೂಟಿಂಗ್ ದಿನಗಳಲ್ಲಿ ನನಗಾದ ನೋವಿನ ಬಗ್ಗೆ ಗೆಳತಿ ಯಶಸ್ವಿನಿ ಜೊತೆಗೆ ಹೇಳಿಕೊಂಡಿದ್ದೆ. ಅರ್ಜುನ್ ಸರ್ಜಾರಂತಹ ವ್ಯಕ್ತಿ ಜೊತೆಗೆ ಕೆಲಸ ಮಾಡುವುದಕ್ಕೆ ಆಗಲ್ಲ ಎಂದಿದ್ದೆ. ರಿಹರ್ಸಲ್ ಹೆಸರಲ್ಲಿ ನನ್ನ ಮಾನಭಂಗಕ್ಕೆ ಯತ್ನಿಸಿದ್ದರಿಂದ ನನಗೆ ಶಾಕ್ ಆಗಿತ್ತು. ಆದರೆ ಅರ್ಜುನ್ ಸರ್ಜಾ ದೊಡ್ಡ ನಟ, ಇಡೀ ಸಿನಿಮಾ ಇಂಡಸ್ಟ್ರಿಯವರು ಅವರೊಂದಿಗಿದ್ದಾರೆ. ನೀನು ದೂರು ಕೊಟ್ಟರೂ ಏನೂ ಆಗಲ್ಲ ಅಂತಾ ಗೆಳತಿ ಯಶಸ್ವಿನಿ ತಿಳಿಸಿದ್ದಳು ಎಂದು ಶೃತಿ ಹರಿಹರನ್ ಹೇಳಿದ್ದಾರೆ. ಇದನ್ನು ಓದಿ: ಶೃತಿ ಹರಿಹರನ್ ಮದ್ವೆ ರಹಸ್ಯ ಬಯಲು – ದೂರಿನಲ್ಲಿ ಮದುವೆ ಬಗ್ಗೆ ಉಲ್ಲೇಖ ಮಾಡಿದ ರಾಟೆ ಹುಡುಗಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/BDCc_WfjHeI

  • ಚೇತನ್ ವಿರುದ್ಧ ಐಶ್ವರ್ಯ ಸರ್ಜಾ ಮೀಟೂ ಬಾಂಬ್ – ಆಡಿಯೋ ಕೇಳಿ

    ಚೇತನ್ ವಿರುದ್ಧ ಐಶ್ವರ್ಯ ಸರ್ಜಾ ಮೀಟೂ ಬಾಂಬ್ – ಆಡಿಯೋ ಕೇಳಿ

    ಬೆಂಗಳೂರು: ನಟ ಚೇತನ್ ಅವರಿಗೆ ಲೈಂಗಿಕ ಕಿರುಕುಳ ಎಂದರೆ ಏನು ಗೊತ್ತಾ? ಊಟಕ್ಕೆ ಕರೆದದ್ದು ಲೈಂಗಿಕ ಕಿರುಕುಳ ಎಂದಾದರೆ ನಟ ಚೇತನ್ ನನ್ನನ್ನೂ ಕೂಡ ಊಟಕ್ಕೆ ಕರೆದಿದ್ದಾರೆ ಎಂದು ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಸರ್ಜಾ ಗಂಭೀರ ಆರೋಪ ಮಾಡಿದ್ದಾರೆ.

    ಶೃತಿ ಅವರ ದೂರಿನ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಐಶ್ವರ್ಯ ಅವರು, ಮೀಟೂ ಆರೋಪಕ್ಕೂ ಒಂದು ತಿಂಗಳ ಮುಂಚೆ ಆಷ್ಟೇ ನಟಿ ಶೃತಿ ನಮ್ಮ ತಂದೆ ಅವರನ್ನು ಟ್ವಿಟ್ಟರ್ ನಲ್ಲಿ ಅನ್‍ಫಾಲೋ ಮಾಡಿದ್ದರೆ. ಸಿನಿಮಾ ವೇಳೆ ಲೈಂಗಿಕ ಕಿರುಕುಳ ನೀಡಿದ್ದರೆ ಇಷ್ಟು ದಿನ ಆಕೆ ಅವರು ಸುಮ್ಮನಿದ್ದರು ಎಂದು ಉತ್ತರಿಸಬೇಕಿದೆ ಪ್ರಶ್ನೆ ಮಾಡಿದರು. ಇದೇ ವೇಳೆ ನಟ ಚೇತನ್ ವಿರುದ್ಧವೂ ಆರೋಪ ಮಾಡಿದ ಅವರು ನಟ ಚೇತನ್ ಅವರಿಗೆ ಲೈಂಗಿಕ ಕಿರುಕುಳ ಎಂದರೇ ಏನು ಎಂದು ಗೊತ್ತಾ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಶೃತಿ ಹರಿಹರನ್ ಮದ್ವೆ ರಹಸ್ಯ ಬಯಲು – ದೂರಿನಲ್ಲಿ ಮದುವೆ ಬಗ್ಗೆ ಉಲ್ಲೇಖ ಮಾಡಿದ ರಾಟೆ ಹುಡುಗಿ

    ಒಂದೊಮ್ಮೆ ಸಹ ನಟಿಯನ್ನು ಊಟಕ್ಕೆ ಕರೆಯುವುದು ಲೈಂಗಿಕ ಕಿರುಕುಳ ಎಂದಾದರೆ ನಟ ಚೇತನ್ ಕೂಡ ನನ್ನನ್ನು ಊಟಕ್ಕೆ ಕರೆದಿದ್ದಾರೆ. ಅಲ್ಲದೇ ಪ್ರೇಮ ಬರಹ ಸಿನಿಮಾ ವೇಳೆ ನಟ ಚೇತನ್ ರೊಂದಿಗೆ ಫೋಟೋ ಶೂಟ್, ವರ್ಕ್ ಶಾಪ್ ಮಾಡಲಾಗಿತ್ತು. ಈ ವೇಳೆ ಚೇತನ್ ನನ್ನ ಬೆನ್ನು ಮುಟ್ಟಿದ್ದರು, ಅಲ್ಲದೇ ಊಟಕ್ಕೂ ಕರೆದಿದ್ದರು. ಇದನ್ನು ಲೈಂಗಿಕ ಶೋಷಣೆ ಎಂದು ಕರೆಯಬಹುದುಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಅವರ ಪ್ರಕಾರ ಇದು ಲೈಂಗಿಕ ಶೋಷಣೆ ಆದ್ರೆ ಇದು ಕೂಡ ಕಿರುಕುಳ ಅಗುತ್ತದೆ ಅಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಟಿ ಶೃತಿಗೆ ಅರ್ಜುನ್ ಮಗಳು ಐಶ್ವರ್ಯಾ ಸರ್ಜಾ ಸವಾಲ್!

    ನಟಿ ಶೃತಿ ಹರಿಹರನ್ ಅವರು ಈ ಹಿಂದೆ ತನ್ನ ಮೇಲೆ ಕಾಸ್ಟಿಂಗ್ ಕೌಚ್ ನಡೆದಿತ್ತು ಎಂದು ಹೇಳಿದ್ದರು. ಆದರೆ ಅಂದು ಯಾವುದೇ ನಟರ ಹೆಸರು ಬಹಿರಂಗ ಪಡಿಸಿರಲಿಲ್ಲ. ಈಗ ನಮ್ಮ ತಂದೆಯ ಹೆಸರನ್ನು ಬಳಕೆ ಮಾಡಿಕೊಳ್ಳಲು ಇಂತಹ ಆರೋಪ ಮಾಡಿದ್ದಾರೆ ಎಂದು ಐಶ್ವರ್ಯ ಸರ್ಜಾ ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=p-XbtCRr48o

  • ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    – ಬೇಳೆ ಬೇಯಿಸಿಕೊಳ್ಳಲು ಮುಂದಾದ ಮೂರನೇ ವ್ಯಕ್ತಿ
    – ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಕರೆ ಮಾಡಿ ಬೇಡಿಕೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಚರ್ಚೆಗೆ ಕಾರವಾಗಿದ್ದ ಶೃತಿ ಹರಿಹರನ್ ಮೀಟೂ ಆರೋಪ ಹೊಸ ತಿರುವುದು ಪಡೆದುಕೊಂಡಿದೆ. ಸಂಧಾನ ನೆಪದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ 1.5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.

    ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೆ, ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದಾನೆ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

    ಏನಿದು ಪ್ರಕರಣ?:
    ಮ್ಯಾಗಜಿನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಹೇಳಿಕೊಂಡಿದ್ದರು. ಕಳೆದ ವರ್ಷ `ವಿಸ್ಮಯ’ ಚಿತ್ರದಲ್ಲಿ ನಾನು ಅರ್ಜುನ್ ಸರ್ಜಾ ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ “ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?” ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ “ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ” ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು. ಇದನ್ನು ಓದಿ: ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ನಟಿ ಶೃತಿ ಹರಿಹರನ್ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಂಡಲ್‍ವುಡ್ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇತ್ತ ನಟ ಚೇತನ್ ಶೃತಿ ಹರಿಹರನ್ ಬೆಂಬಲಕ್ಕೆ ನಿಂತು ಕನ್ನಡ ಚಿತ್ರರಂಗದ ವಾಣಿಜ್ಯ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಷ್ಟೇ ಅಲ್ಲದೆ ಚೇತನ್ ವಿರುದ್ಧ ಧ್ರುವಾ ಸರ್ಜಾ ಕೂಡ ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.

    ಹೌದು. ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಈ ಆರೋಪ ಎಸಗಿದ್ದಾರೆ. ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿದ್ದಾರೆ. ಇದನ್ನೂ ದಿನ:  50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ರು- ಸ್ಯಾಂಡಲ್‍ವುಡ್ ನಿರ್ದೇಶಕನ ವಿರುದ್ಧ ಸಂಜನಾ #Metoo ಆರೋಪ

    ಆರೋಪವೇನು?:
    ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಘಟನೆಯ ಮೆಲುಕು ಹಾಕಿದ್ರು. ಇದನ್ನೂ ದಿನ:   #MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡ!

    ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ರು. ಇದನ್ನೂ ದಿನ: #MeToo ಅಭಿಯಾನವನ್ನ ಕೆಲವರು ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ: ನಟಿ ರಾಗಿಣಿ

    ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು. ಇದನ್ನೂ ದಿನ:  #MeToo ಅಭಿಯಾನ – ರವಿಚಂದ್ರನ್ ಬಗ್ಗೆ ಸತ್ಯ ಬಿಚ್ಚಿಟ್ಟ ಖುಷ್ಬೂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv