Tag: ನಟ ದುನಿಯಾ ವಿಜಯ್

  • ಮುಗಿಯದ ದುನಿಯಾ ರಗಳೆ – ಮಹಿಳಾ ಆಯೋಗದಿಂದ ವಿಜಿಗೆ ಬುಲಾವ್

    ಮುಗಿಯದ ದುನಿಯಾ ರಗಳೆ – ಮಹಿಳಾ ಆಯೋಗದಿಂದ ವಿಜಿಗೆ ಬುಲಾವ್

    ಬೆಂಗಳೂರು: ನಟ ದುನಿಯಾ ವಿಜಯ್ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದ ಪುತ್ರಿ ಮೋನಿಷಾರ ದೂರಿನ ಮೇರೆಗೆ ಆಯೋಗ ವಿಜಿಗೆ ನೋಟಿಸ್ ನೀಡಿದೆ.

    ಮಹಿಳಾ ಮತ್ತು ಮಕ್ಕಳ ಆಯೋಗಕ್ಕೆ ಕಳೆದ ಕೆಲ ದಿನಗಳ ಹಿಂದೆ ಮನವಿ ಸಲ್ಲಿಸಿದ್ದ ಮೋನಿಷಾರ ದೂರನ್ನು ಸ್ವೀಕರಿಸಿರುವ ಆಯೋಗ ನ. 12 ಅಥವಾ 13 ರಂದು ಆಯೋಗದ ಮುಂದೆ ಖುದ್ದು ಹಾಜರಾಗುವಂತೆ ವಿಜಯ್ ಅವರಿಗೆ ನೋಟೀಸ್ ಜಾರಿ ಮಾಡಿದೆ. ಈ ವೇಳೆ ಅಪ್ಪ ಮಕ್ಕಳ ಮಧ್ಯೆ ಸಂಧಾನ ನಡೆಸುವ ಸಾಧ್ಯತೆ ಇದ್ದು, ವಿಜಿ ಅವರಿಗೆ ಸಂಕಷ್ಟವಾಗಿಯೂ ಪರಿಣಮಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

    ಆಯೋಗದ ಮುಂದೇ ಅಪ್ಪ-ಮಗಳು ಇಬ್ಬರು ಹಾಜರಾಗಲಿದ್ದು, ಇಬ್ಬರಿಗೂ ಕೌನ್ಸಿಲಿಂಗ್ ಮಾಡುವ ಕೆಲಸ ನಡೆಯಲಿದೆ. ಒಂದೊಮ್ಮೆ ವಿಜಿ ಮನವೊಲಿಕೆ ವಿಫಲವಾದರೆ ಆಯೋಗ ವಿಜಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಇದರೆ ಜೊತೆಗೆ ವಿಜಿ ಮಕ್ಕಳ ಮುಂದಿನ ವಿದ್ಯಾಭ್ಯಾಸ ಹಾಗೂ ಮಕ್ಕಳ ಮುಂದಿನ ಭವಿಷ್ಯಕ್ಕೆ ಆರ್ಥಿಕ ಸಹಾಯ ಯಾವ ರೀತಿ ಇರಲಿದೆ ಎಂಬುವುದರ ಬಗ್ಗೆ ಆಯೋಗ ಪರಾಮರ್ಶಿಸಲಿದ್ದು, ವಿಜಿ ಕಡೆಯಿಂದ ಲಿಖಿತವಾಗಿ ಬರೆಸಿಕೊಳ್ಳುವ ಸಾಧ್ಯತೆ ಇದೆ.

    ಅ.30 ರಂದು ವಿಜಯ್ ಅವರ ಪುತ್ರಿ ಮೋನಿಷಾ ಮಹಿಳಾ ಆಯೋಗದಲ್ಲಿ ಅಪ್ಪ-ಅಮ್ಮನ ಗಲಾಟೆಯಲ್ಲಿ ನಮಗೆ ತೊಂದರೆಯಾಗುತ್ತಿದೆ. ಆರ್ಥಿಕವಾಗಿಯೂ ಅಪ್ಪನಿಂದ ಸಹಾಯ ಸಿಗುತ್ತಿಲ್ಲ. ಹೀಗಾಗಿ ಕೂಡಲೇ ಆಯೋಗ ಮಧ್ಯಪ್ರವೇಶ ಮಾಡಿ ಇದನ್ನು ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಗೆ ಪೊಲೀಸರಿಂದ ಬುದ್ಧಿ ವಾದ – ಗುರುವಾರವೂ ನಡೆಯಲಿದೆ ವಿಚಾರಣೆ

    ದುನಿಯಾ ವಿಜಿಗೆ ಪೊಲೀಸರಿಂದ ಬುದ್ಧಿ ವಾದ – ಗುರುವಾರವೂ ನಡೆಯಲಿದೆ ವಿಚಾರಣೆ

    ಬೆಂಗಳೂರು: ಪುತ್ರಿಯ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆಗೆ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ಪೊಲೀಸರು ಬುದ್ಧಿವಾದ ಹೇಳಿದ್ದು, ಪದೇ ಪದೇ ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

    ತನ್ನ ಬಟ್ಟೆ ಮತ್ತು ದಾಖಲೆಗಳನ್ನು ತರಲು ತಂದೆ ವಿಜಯ್ ಮನೆಗೆ ಭೇಟಿ ನೀಡಿದ್ದ ಪುತ್ರಿ ಮೋನಿಕಾ ಮೇಲೆ ಹಲ್ಲೆ ನಡೆಸಿದ ದೂರಿಗೆ ಸಂಬಂಧಿಸಿದಂತೆ ಇಂದು ವಿಜಯ್ ಗಿರಿನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಆಗಮಿಸಿದ್ದರು. ಸತತ ಮೂರು ಗಂಟೆಗಳ ಕಾಲ ಪೊಲೀಸರು ವಿಜಯ್ ವಿಚಾರಣೆ ನಡೆಸಿದರು. ಈ ವೇಳೆ ವಿಜಯ್ ಆಪ್ತರಾದ ಹೇಮಂತ್, ಮಹಮ್ಮದ್, ವಿನೋದ್ ಕೂಡ ಹಾಜರಿದ್ದರು.

    ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿಜಯ್, ಮಾಧ್ಯಮಗಳು ಸತ್ಯವನ್ನು ತೋರಿಸಿವೆ. ಆದ್ದರಿಂದ ನಿಮಗೆ ವಂದನೆ ತಿಳಿಸುತ್ತೇನೆ. ನಮ್ಮ ಮನೆಯಲ್ಲಿ ಇದ್ದ ಸಿಸಿಟಿವಿ ಡಿವಿಆರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪುತ್ರಿ ಮೋನಿಕಾ ಮನೆ ಒಳಗಡೆ ಬಂದಿಲ್ಲ. ಮನೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ಪೊಲೀಸರಿಗೆ ನೀಡಿರುವ ದೂರಿನ ಎಫ್‍ಐಆರ್ ನಲ್ಲಿ ತಲೆ ಜಜ್ಜಿದೆ, ಮಾರಕಾಸ್ತ್ರಗಳನ್ನ ಬಳಸಿದ್ದಾರೆ ಎಂದು ದಾಖಲಿಸಿದ್ದಾರೆ. ಈಗ ಲಭ್ಯವಾಗಿರುವ ವಿಡಿಯೋದಲ್ಲಿ ಏನೂ ಇಲ್ಲ. ಇದೆಲ್ಲಾ ಸುಳ್ಳು. ಇದರ ಹಿಂದೆ ಯಾರೋ ಇದ್ದಾರೆ ಎಂದು ನನಗೆ ಗೊತ್ತು. ನನ್ನ ಮೇಲೆ ಎಫ್.ಐ.ಆರ್ ಮೇಲೆ ಎಫ್.ಐ.ಆರ್ ದಾಖಲಿಸುತ್ತಿದ್ದಾರೆ. ಇನ್ನೂ ಮೂರು ದಿನದಲ್ಲಿ ದಾಖಲೆ ಸಮೇತ ಯಾರು ಎಂದು ಸಾಬೀತುಪಡಿಸುತ್ತೇನೆ ಎಂದು ತಿಳಿಸಿದರು.

    ಉಳಿದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದುನಿಯಾ ವಿಜಯ್ ಅವರ ಮೊದಲ ಪುತ್ರಿ ಮೋನಿಕಾ ಕೂಡ ಸಂಜೆ ಆರು ಗಂಟೆ ನಂತರ ತಾಯಿ ನಾಗರತ್ನ ಮತ್ತು ವಕೀಲೆ ಮೀರಾ ರಾಘವನ್ ಅವರೊಂದಿಗೆ ವಿಚಾರಣೆ ಹಾಜರಾಗಿದ್ದರು. ಅರ್ಧ ಗಂಟೆ ಕಾಲ ವಿಚಾರಣೆ ನಡೆಸಿದ ಪೊಲೀಸರು ಸಮಯ ಮೀರಿದ ಕಾರಣ ನಾಳೆ 11 ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ವಿಚಾರಣೆ ಬಳಿಕ ಮಾತನಾಡಿದ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಪರ ವಕೀಲೆ ಮೀರಾ ರಾಘವನ್, ಸದ್ಯ ಕತ್ತಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಹಲ್ಲೆ ಆಗಿಲ್ಲ ಎಂಬಂತೆ ಹೇಳಿಕೆ ನೀಡುತ್ತಿದ್ದಾರೆ. ಆದರೆ ಮನೆಯ ಹೊರಗಡೆ ನಡೆದ ಘಟನೆಯ ದೃಶ್ಯಗಳನ್ನು ಮಾತ್ರ ಪೊಲೀಸರಿಗೆ ಸಲ್ಲಿಸಲಾಗಿದೆ. ಮನೆಯ ಒಳಗಡೆ ಗಲಾಟೆ ನಡೆದಿದ್ದು, ಈ ದೃಶ್ಯಗಳನ್ನು ಕೊಟ್ಟಿಲ್ಲ. ಮನೆಯ ಒಳಗಡೆಯ ಸಿಸಿಟಿವಿ ದೃಶ್ಯಗಳು ನೀಡಿದರೆ ಮಾತ್ರ ಸತ್ಯ ಗೊತ್ತಾಗತ್ತೆ ಎಂದು ತಿಳಿಸಿದರು. ವಿಜಯ್ ಹಾಗೂ ಪುತ್ರಿ ಮೋನಿಕಾ ಅವರ ವಿಚಾರಣೆ ಗುರುವಾರವೂ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೇಕ್ ಕಂಪ್ಲೇಂಟ್ ಕೋಡೋಕೆ ನನಗೆ ತಲೆ ಸರಿ ಇಲ್ಲವಾ? ದುನಿಯಾ ವಿಜಿಗೆ ಪುತ್ರಿ ಮೋನಿಕಾ ತಿರುಗೇಟು

    ಫೇಕ್ ಕಂಪ್ಲೇಂಟ್ ಕೋಡೋಕೆ ನನಗೆ ತಲೆ ಸರಿ ಇಲ್ಲವಾ? ದುನಿಯಾ ವಿಜಿಗೆ ಪುತ್ರಿ ಮೋನಿಕಾ ತಿರುಗೇಟು

    ಬೆಂಗಳೂರು: ಫೇಕ್ ಕಂಪ್ಲೇಂಟ್ ಕೊಡುವುದ್ದಕ್ಕೆ ನನಗೆ ತಲೆ ಸರಿಯಿಲ್ಲವಾ? ಏನಾದರೂ ನಡೆದಿದ್ದರೆ ತಾನೇ ದೂರು ನೀಡುವುದು ಎಂದು ನಟ ದುನಿಯಾ ವಿಜಯ್ ಪುತ್ರಿ ಮೋನಿಕಾ ಪ್ರತಿಕ್ರಿಯೆ ನೀಡಿದ್ದಾರೆ.

    ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮೋನಿಕಾ ಅವರು, ಜಗಳ ಆಗಿ ನನ್ನ ಮೇಲೆ ಹಲ್ಲೆ ಆಗಿರುವುದ್ದಕ್ಕೆ ನಾನು ದೂರು ನೀಡಿದ್ದೇನೆ. ಆದರೆ ಆಸ್ಪತ್ರೆಯಲ್ಲಿದ್ದಾಗ ನನ್ನ ತಂದೆ ನನಗೆ ಕರೆ ಮಾಡಿ ಸಂಪರ್ಕ ಮಾಡಿಲ್ಲ. ನನ್ನ ವಸ್ತುಗಳನ್ನು ತೆಗೆದುಕೊಂಡು ಬರಲು ಅಪ್ಪನ ಮನೆಗೆ ತೆರಳಿದ್ದೆ. ಈ ವೇಳೆ ಮನೆಗೆ ಹೋಗುತ್ತಿದಂತೆ ಲಾಕ್ ಮಾಡಿ ಕೀರ್ತಿ ಪರ ಪೊಲೀಸರಿಗೆ ಹೇಳಿಕೆ ನೀಡುವಂತೆ ಒತ್ತಡ ಹಾಕಿದರು. ಇದಕ್ಕೆ ನಿರಾಕರಿಸಿದಕ್ಕೆ ನನ್ನ ಮೇಲೆ 4 ರಿಂದ 5 ಜನ ಸೇರಿ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.

    ಸದ್ಯ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ವಿಡಿಯೋ ಮೊಬೈಲ್‍ನಲ್ಲಿ ಸೆರೆ ಹಿಡಿದಿರುವ ದೃಶ್ಯಗಳು ಮಾತ್ರ. ಮನೆಯ ಸಿಸಿಟಿವಿ ದೃಶ್ಯಗಳಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ದಾಖಲಾಗಿದೆ. ಇದನ್ನು ಪರಿಶೀಲನೆ ನಡೆಸಬೇಕು. ಈಗಾಗಲೇ ಪೊಲೀಸರಿಗೆ ದೂರು ನೀಡಿರುವುದರಿಂದ ಮುಂದಿನ ಕ್ರಮ ಅವರೇ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ:ದುನಿಯಾ ವಿಜಿ ವಿರುದ್ಧ ಮಗಳಿಂದಲೇ ದೂರು- ಎಫ್‍ಐಆರ್ ದಾಖಲು

    ನನ್ನ ಮೇಲೆ ನಡೆಸಿದ ಬಳಿಕ ನನ್ನನ್ನು ಗೇಟ್‍ನಿಂದ ಹೊರ ಹಾಕಿದ್ದರು. ನನಗೆ ಕೋಪ ಬಂದ ಕಾರಣ ನಾನು ಮನೆ ಹೊರಭಾಗದಿಂದ ಕಲ್ಲನ್ನು ತೆಗೆದುಕೊಂಡು ಬಾಗಿಲಿಗೆ ಹೊಡೆದೆ. ಈ ವೇಳೆ ಅವರು ನನಗೆ ಏನೆಂದು ಬೈದರೋ, ನಾನು ಅದನ್ನೇ ಬೈದೆ ಅಷ್ಟೇ. ನಡೆದ ಘಟನೆ ಎಲ್ಲವೂ ಪೂರ್ವ ನಿಗದಿಯಂತೆ ಮಾಡಿದ್ದಾರೆ. ನಾನು ನನ್ನ ಬಟ್ಟೆ ಹಾಗೂ ಕಾರಿನ ದಾಖಲಾತಿ ಸೇರಿದಂತೆ ಕೆಲ ವಸ್ತುಗಳನ್ನು ತರಲು ಒಬ್ಬಳೇ ಹೋಗಿದ್ದೆ. ಒಂದೊಮ್ಮೆ ಜಗಳ ಮಾಡುವ ಉದ್ದೇಶ ಹೊಂದಿದ್ದರೆ. ನಾನು 5 ಜನರನ್ನು ಕರೆದುಕೊಂಡು ಹೋಗುತ್ತಿದೆ ವಿನಃ, ಒಬ್ಬಳೇ ಹೋಗುತ್ತಿರಲಿಲ್ಲ ಎಂದರು.

    ನಿರಂತರ ಜಗಳ:
    ಕೀರ್ತಿ ಗೌಡ ಮನೆಗೆ ಬಂದ ಬಳಿಕ ಮನೆಯಲ್ಲಿ ನಿರಂತರವಾಗಿ ಜಗಳ ನಡೆಯುತ್ತಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ನಾನು, ನನ್ನ ತಂಗಿ ಹೇಳಿಕೊಳ್ಳಲು ಸಾಧ್ಯವಾಗಿರಲಿಲ್ಲ. ಮನೆಯಲ್ಲಿ ಇದ್ದ ವೇಳೆ ನನ್ನ ತಂಗಿಯ ಮೇಲೆಯೂ ಒತ್ತಡ ಹಾಕಿ ಅಮ್ಮನ ವಿರುದ್ಧ ದೂರು ನೀಡಲು ತಿಳಿಸಿದ್ದರು. ಆದರೆ ನಾವು ಒಪ್ಪಿಗೆ ನೀಡಿರಲಿಲ್ಲ. ಅಪ್ಪ ಜೈಲಿಂದ ಬಂದ ಮೇಲೆ ಹೇಗೆ ಇದ್ದಾರೆಂಬುದು ನನಗೆ ಗೊತ್ತಿಲ್ಲ. ಏಕೆಂದರೆ ಅವರು ಬಂದ ಕೂಡಲೇ 15 ದಿನ ಪ್ರವಾಸಕ್ಕೆ ಸಿದ್ಧರಾದರು. ಈ ವೇಳೆ ನಮ್ಮನ್ನು ಮನೆಯಲ್ಲಿ ಯಾರು ನೋಡಿಕೊಳ್ಳಲು ಇಲ್ಲದ ಕಾರಣ ಅಮ್ಮನ ಮನೆಗೆ ಬಂದೆ. 15 ದಿನದ ಬಳಿಕ ನನ್ನ ವಸ್ತುಗಳನ್ನು ತರಲು ಮನೆಗೆ ತೆರಳಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಟ್ಟಿರುವ ದೂರು ಸುಳ್ಳು, ಮೂರು ದಿನದಲ್ಲಿ ಪತ್ನಿ, ಮಗಳ ಡ್ರಾಮಾ ಬಯಲು: ದುನಿಯಾ ವಿಜಿ ಸ್ಪಷ್ಟನೆ 

    ನನ್ನ ಮೇಲೆ ಹಲ್ಲೆ ನಡೆಸಿದ ವೇಳೆ ಕೈ ಗೆ ರಕ್ತ ಬರುವಂತೆ ಗಾಯವಾಗಿಲ್ಲ. ಆದರೆ ಮೂಳೆಗೆ ಗಾಯವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಮತ್ತೆ ನೋವು ಹೆಚ್ಚಾದರೆ ಬರುವಂತೆ ಸಲಹೆ ನೀಡಿದ್ದಾರೆ. ಆದ್ದರಿಂದ ನಾನು ಮನೆಗೆ ತೆರಳುತ್ತಿದ್ದೇನೆ. ರಕ್ತ ಬರುವಂತೆ ಮಾಡಿದರೆ ಮಾತ್ರ ಅದು ಹಲ್ಲೆ ಎಂದು ಕರೆಯುವುದಾದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಇಲ್ಲಿ ನಾನು ಯಾರ ಮೇಲೂ ಹೋರಾಟ ಮಾಡುತ್ತಿಲ್ಲ. ಪೊಲೀಸರೆ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರು, ನಾವು ಜೀವದ ಆಸೆ ಬಿಟ್ಟು ಬಿಟ್ಟಿದ್ದೇವೆ. ಅಪ್ಪನೇ ಈ ರೀತಿ ಮಾಡುತ್ತಾರೆ ಎಂದರೆ ಏನು ಹೇಳಲು ಸಾಧ್ಯ. ಅವರು ಸಿನಿಮಾ ಸೆಲೆಬ್ರೆಟಿ ಆಗಿರುವುದಿಂದ ಎಲ್ಲರೂ ಬೆಂಬಲ ನೀಡುತ್ತಾರೆ. ಸಾಯಿಸುವುದಾದರೆ ಸಾಯಿಸಲಿ. ಈ ಜೀವನವೇ ಸಾಕಾಗಿದೆ. ನನ್ನ ಮಕ್ಕಳು ನನಗೆ ಎಂದು ಭಾರ ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 3 ಲಕ್ಷ ರೂ. ನೀಡಿ 62 ಕೈದಿಗಳನ್ನು ಜೈಲಿಂದ ಬಿಡಿಸಿದ್ದರು ದುನಿಯಾ ವಿಜಯ್!

    3 ಲಕ್ಷ ರೂ. ನೀಡಿ 62 ಕೈದಿಗಳನ್ನು ಜೈಲಿಂದ ಬಿಡಿಸಿದ್ದರು ದುನಿಯಾ ವಿಜಯ್!

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ದುನಿಯಾ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮನಗೆದ್ದ ನಟ ದುನಿಯಾ ವಿಜಯ್ ಹೆಚ್ಚು ಸಿನಿಮಾಗಳ ಮೂಲಕವೇ ಗುರುತಿಸಿಕೊಂಡವರು, ಆದರೆ ಅವರು ತೆರೆ ಹಿಂದೆ ಮಾಡಿದ ಸಾಮಾಜಿಕ ಕಳಕಳಿಯ ಕುರಿತು ಹಾಡುಗಾರ ಮಹದೇವಸ್ವಾಮಿ ಬಿಚ್ಚಿಟ್ಟಿದ್ದಾರೆ.

    ಖಾಸಗಿ ವಾಹಿನಿವೊಂದರ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮಹದೇವಪ್ಪ, ದುನಿಯಾ ವಿಜಯ್ ಅವರು ಜೈಲಿನಿಂದ 62 ಕೈದಿಗಳನ್ನು ಬಿಡುಗಡೆ ಮಾಡಿಸಿದ್ದ ಕುರಿತು ರಿವೀಲ್ ಮಾಡಿದ್ದಾರೆ.

    2013 ರಲ್ಲಿ ದುನಿಯಾ ವಿಜಯ್ ಅಭಿನಯದ `ದೇವ್ರು’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಚಿತ್ರ ತಂಡ ಜೈಲಿಗೆ ಬಂದಿತ್ತು. ಅದನ್ನು ಗಮನಿಸದೆ ನಾನು ಅಮ್ಮನ ಕುರಿತು ಕವಿತೆ ಬರೆಯುತ್ತಿದ್ದೆ. ಬಳಿಕ ಪುಸ್ತಕ ಎತ್ತಿಟ್ಟು ಊಟ ಮಾಡಲು ತೆರಳಿದ ವೇಳೆ ಕೆಲ ಜನರು ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದರು. ಆಗ ಸ್ವತಃ ದುನಿಯಾ ವಿಜಯ್ ಅವರೇ ನನ್ನ ತಟ್ಟೆಯಿಂದ ಅನ್ನ ತೆಗೆದುಕೊಂಡು ತಿಂದರು. ಇದನ್ನು ಕಂಡು ಅಚ್ಚರಿಗೊಂಡೆ. ಬಳಿಕ ನನ್ನ ಬಳಿ ಮಾತನಾಡಿ ನಾನು ಬರೆಯುತ್ತಿದ್ದ ಪುಸ್ತಕ ತೆಗೆದುಕೊಡುವಂತೆ ಹೇಳಿದರು. ನಾನು ಬರೆದಿದ್ದ ಅಮ್ಮನ ಕುರಿತ ಕವಿತೆ ಓದಿ ಪುಸ್ತಕದಲ್ಲಿ ಸಹಿ ಮಾಡಿದರು ಅಂದ್ರು.

    ಊಟ ಬೇಡ, ದಂಡ ಕಟ್ಟಿ ಎಂದು ಮನವಿ:
    ನನ್ನ ಜೊತೆ ಮಾತನಾಡುವ ವೇಳೆ ವಿಜಯ್ ಅವರು ಊಟ ಕೊಡಿಸುವುದಾಗಿ ಹೇಳಿದರು. ಆದರೆ ಈ ವೇಳೆ ಅಲ್ಲಿನ ಕೆಲ ಹಿರಿಯರೊಂದಿಗೆ ಮಾತನಾಡಿ ಊಟ ಬೇಡ ವಿವಿಧ ಕಾರಣಗಳಿಂದ ಹಣ ಕಟ್ಟಲಾಗದೆ ಜೈಲಿನಲ್ಲೇ ಉಳಿದ ಕೆಲ ಕೈದಿಗಳ ಬಿಡುಗಡೆಗೆ ಮನವಿ ಮಾಡಿದೆವು. ಇದನ್ನು ಒಪ್ಪಿದ ದುನಿಯಾ ವಿಜಯ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ 62 ಕೈದಿಗಳ ಬಿಡುಗಡೆಗೆ 3 ಲಕ್ಷ ರೂ. ಹಣವನ್ನು ನೀಡಿದರು ಅಂತ ಮಹದೇವಪ್ಪ ಭಾವುಕರಾದರು.

    ದುನಿಯಾ ವಿಜಯ್ ಷರತ್ತು:
    ತಮ್ಮನ್ನು ಬಿಡುಗಡೆ ಮಾಡುವ ಕುರಿತು ಯಾವುದೇ ಮಾಧ್ಯಮ ಹಾಗೂ ಪತ್ರಿಕೆಗಳಿಗೆ ಹೇಳಿಕೆ ನೀಡಬಾರದು ಎಂದು ದುನಿಯಾ ವಿಜಯ್ ಅವರು ಷರತ್ತು ವಿಧಿಸಿದ್ದರು. ಆದರೆ ಇಂದು ಅನಿವಾರ್ಯವಾಗಿ ಅವರ ಕುರಿತು ಹೇಳಬೇಕೆನಿಸಿತು. ಅದ್ದರಿಂದ ಇದನ್ನು ಹೇಳಿದ್ದಾಗಿ ಮಹದೇವಪ್ಪ ತಿಳಿಸಿದರು. ಅಂದಹಾಗೇ ರಿಯಾಲಿಟಿ ಶೋ ಸ್ಪರ್ಧಿಯಾಗಿರುವ ಮಹದೇವಸ್ವಾಮಿ ಅವರು ಸಂದರ್ಭವೊಂದರಲ್ಲಿ ಮಾಡಿದ ತಪ್ಪಿನಿಂದ 11 ವರ್ಷ ಜೈಲು ಶಿಕ್ಷೆ ಆನುಭವಿಸಿದ್ದರು. ಬಳಿಕ ಸನ್ನಡತೆಯ ಆಧಾರ ಮೇಲೆ ಅವರನ್ನು ಬಿಡುಗಡೆ ಮಾಡಿಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ

    ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ

    ಬೆಂಗಳೂರು: `ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಅವರ ದುರಂತ ಸಾವಿಗೆ ಇಂದು ಒಂದು ವರ್ಷ.

    ಹೌದು. ಕಳೆದ ವರ್ಷ ಇದೇ ದಿನ ಮಧ್ಯಾಹ್ನ ನಟ ದುನಿಯಾ ವಿಜಯ್ ಅಭಿನಯದ `ಮಾಸ್ತಿಗುಡಿ’ ಸಿನಿಮಾದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಸ್ಟಂಟ್ ಮಾಡಲು ಹೋಗಿ ಉದಯ್ ಮತ್ತು ಅನಿಲ್ ಮೇಲಿನಿಂದ ತಿಪ್ಪಗೊಂಡನಹಳ್ಳಿ ಕೆರೆಯ ನೀರಿನ ಆಳಕ್ಕೆ ಬಿದ್ದು ಸಾವಿಗೀಡಾಗಿದ್ದರು. ಹೀಗಾಗಿ ಅನಿಲ್ ಮತ್ತು ಉದಯ್ ಅವರ ದುರಂತ ಸಾವಿಗೆ ಇಂದು ವರ್ಷವಾದ ಹಿನ್ನೆಲೆಯಲ್ಲಿ ಸ್ನೇಹಿತರು ಕುಟುಂಬಸ್ಥರ ಉಪಸ್ಥಿತಿಯಲ್ಲಿ ಅವರ ಮೊದಲನೇ ಪುಣ್ಯ ತಿಥಿ ಕಾರ್ಯಕ್ರಮ ಮಾಡಲಾಗುತ್ತಿದೆ.

    ಬೆಳಗ್ಗೆ ಈ ಇಬ್ಬರು ನಟರ ಕುಟುಂಬಸ್ಥರು ಬನಶಂಕರಿ ರುದ್ರಭೂಮಿಯಲ್ಲಿ ಅನಿಲ್, ಉದಯ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅನಿಲ್, ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆ, ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಲಿದೆ.

    ಇದನ್ನೂ ಓದಿ: ಮೇ.12ರಂದು ಮಾಸ್ತಿಗುಡಿ ಬಿಡುಗಡೆ

    ಇಷ್ಟು ಮಾತ್ರವಲ್ಲದೇ ಕದಿರೇನಹಳ್ಳಿ ಬ್ರಿಜ್ಡ್ ಸರ್ಕಲ್‍ನಲ್ಲಿ ಅನಿಲ್ ಉದಯ್ ಸ್ಮಾರಕ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದ್ದು ಮುಂದಿನ ವರ್ಷದಲ್ಲಿ ಉದ್ಘಾಟನೆಯಾಗಲಿದೆ. ಕದಿರೇನಹಳ್ಳಿ ಬ್ರಿಡ್ಜ್ ಮೇಲೆ ನಡೆಯುತ್ತಿರುವ ಪುಣ್ಯತಿಥಿ ಆಚರಣೆಯಲ್ಲಿ ಅನಿಲ್ ಪತ್ನಿ ರಮ್ಯಾ, ಅನಿಲ್ ತಾಯಿ ವಿಜಯಲಕ್ಷ್ಮಿ ಉದಯ್ ತಾಯಿ ಕೌಶಲ್ಯ ಭಾಗಿಯಾಗಿದ್ದಾರೆ.

    ಮಾಸ್ತಿಗುಡಿ ನಿರ್ಮಾಪಕ ಸುಂದರ್ ಪಿ ಗೌಡ ಚಾರಿಟೇಬಲ್ ಟ್ರಸ್ಟ್‍ನ ಮುಖಂಡತ್ವ ವಹಿಸಿಕೊಂಡು ಪ್ರತಿ ವರ್ಷ ದೀನ ದಲಿತರಿಗೆ ಸಹಾಯ ಮಾಡೋಕೆ ನಿರ್ಧರಿಸಿದ್ದಾರೆ. ಪುಣ್ಯತಿಥಿ ಆಣರಣೆಯ ವೇಳೆ ನಿರ್ಮಾಪಕ ಸುಂದರ್ ಪಿ ಗೌಡ, ಹಾಗೂ ನಟ ದುನಿಯಾ ವಿಜಯ್ ತಂದೆ ಉಪಸ್ಥಿತಿಯಿದ್ದು, ಶೂಟಿಂಗ್ ನಿಮಿತ್ತ ದುನಿಯಾ ವಿಜಿ ಪುಣ್ಯತಿಥಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

    ಮಾಸ್ತಿಗುಡಿ ಚಿತ್ರವನ್ನು ನಾಗಶೇಖರ್ ನಿರ್ದೇಶನ ಮಾಡಿದ್ದರು. ಚಿತ್ರದಲ್ಲಿ ಕೃತಿ ಕರಬಂಧ ಹಾಗೂ ಅಮೂಲ್ಯ ನಟಿಸಿದ್ದರು. ಈ ಚಿತ್ರ ಮೇ 12ರಂದು ಬಿಡುಗಡೆಗೊಂಡಿತ್ತು.

    https://www.youtube.com/watch?v=7sSL-_09xO0

    https://www.youtube.com/watch?v=33UF4AToAd0

    https://www.youtube.com/watch?v=8h6lS3M-Dzs

    https://www.youtube.com/watch?v=_y9vGs0nEHM