Tag: ನಟ ರಜಿನಿಕಾಂತ್

  • ಪ್ರೀತಿಯ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ರು ನಟಿ ರಜಿನಿ: ಮದುವೆ ಯಾವಾಗ ಅಂತಿದ್ದಾರೆ ಫ್ಯಾನ್ಸ್‌

    ಪ್ರೀತಿಯ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ರು ನಟಿ ರಜಿನಿ: ಮದುವೆ ಯಾವಾಗ ಅಂತಿದ್ದಾರೆ ಫ್ಯಾನ್ಸ್‌

    ಕಿರುತೆರೆಯ ಸೂಪರ್ ಹಿಟ್ ಸೀರಿಯಲ್ `ಅಮೃತವರ್ಷಿಣಿ’ (Amruthavarshini) ಮೂಲಕ ಕರ್ನಾಟಕ ಜನತೆಯ ಮನಗೆದ್ದ ಚಲುವೆ ನಟಿ ರಜಿನಿ (Actress Rajini) ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪ್ರೀತಿಯ ಹುಡುಗನ ಬಗ್ಗೆ ನಟಿ ಮಾತನಾಡಿದ್ದಾರೆ.

    ಕೆಲ ವರ್ಷಗಳ `ಅಮೃತವರ್ಷಿಣಿ’ ಎಂಬ ಸೀರಿಯಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಧಾರಾವಾಹಿಯಲ್ಲಿ ರಜಿನಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಸಿನಿಮಾಗಳ ಜೊತೆ ʻಸೂಪರ್ ಕ್ವೀನ್ಸ್ʼಎಂಬ ರಿಯಾಲಿಟಿ ಶೋನಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಸಂಕ್ರಾಂತಿ ಹಬ್ಬದ ಶುಭ ವೇಳೆಯಲ್ಲಿ ರಜಿನಿ ತಮ್ಮ ಫ್ಯಾನ್ಸ್ ಸಿಹಿಸುದ್ದಿ ಕೊಟ್ಟಿದ್ದಾರೆ.

     

    View this post on Instagram

     

    A post shared by Rajini (@rajiniiofficial)

    `ಸೂಪರ್ ಕ್ವೀನ್ಸ್’ ಶೋನಲ್ಲಿ ತಮ್ಮ ಬದುಕಿನ ಕೆಲ ವಿಚಾರಗಳನ್ನ ನಟಿ ಹಂಚಿಕೊಂಡಿದ್ದಾರೆ. ಹಾಗೆಯೇ ಈಗ ತಮ್ಮ ಹುಡುಗನ ಬಗ್ಗೆ ನಟಿ ಹಿಂಟ್ ಕೊಟ್ಟಿದ್ದಾರೆ. ʻಹಿಟ್ಲರ್ ಕಲ್ಯಾಣʼ ಧಾರಾವಾಹಿಯಲ್ಲಿ ಅಂತರ ಎಂಬ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ಇದರಲ್ಲಿ ತಮ್ಮ ಪತ್ನಿ ಅಂತರಳನ್ನ ಎಜೆ ಪ್ರೀತಿಸುವ ರೀತಿಯನ್ನ ತೋರಿಸಲಾಗಿದೆ. ಇದನ್ನೂ ಓದಿ: ಸಾನ್ಯ ಜೊತೆ ರೂಪೇಶ್ ಶೆಟ್ಟಿ ಮೀಟಿಂಗ್:‌ ಮದುವೆ ಬಗ್ಗೆ ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

    ಹಾಗಾಗಿ ಶೋನಲ್ಲಿ `ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅಂತಾರಳನ್ನು ಎಜೆ ಪ್ರೀತಿಸುವ ರೀತಿ ನಿಮ್ಮನ್ನು ಪ್ರೀತಿಸುವ ವ್ಯಕ್ತಿ ಇದ್ದಾರಾ ಎಂದು ರಜಿನಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿರುವ ನಟಿ ಹೌದು ಎಂದು ಹೇಳಿದ್ದಾರೆ. ಆದರೆ, ಯಾರವರು, ಮದುವೆ ಯಾವಾಗ ಎಂಬ ಯಾವ ವಿಚಾರವನ್ನು ಹೇಳಿಲ್ಲ. ಒಟ್ನಲ್ಲಿ ರಜಿನಿ ಅವರು ತಮ್ಮ ಪ್ರೀತಿಯ ಗುಟ್ಟನ್ನು ರಟ್ಟು ಮಾಡಿದ್ದಾರೆ. ಈ ವಿಚಾರ ತಿಳಿದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಜಿನಿ ಸಿನಿಮಾ ವಿರುದ್ಧ ವಾಟಾಳ್ ಪ್ರತಿಭಟನೆ – ಅಂಬಿ ಇಲ್ಲದ ಹೊತ್ತಲ್ಲೇ ತಲೈವಾಗೆ ಸಂಕಷ್ಟನಾ?

    ರಜಿನಿ ಸಿನಿಮಾ ವಿರುದ್ಧ ವಾಟಾಳ್ ಪ್ರತಿಭಟನೆ – ಅಂಬಿ ಇಲ್ಲದ ಹೊತ್ತಲ್ಲೇ ತಲೈವಾಗೆ ಸಂಕಷ್ಟನಾ?

    ಬೆಂಗಳೂರು: ತಲೈವಾ ರಜನಿಕಾಂತ್ ಅಭಿನಯದ 2.0 ಸಿನಿಮಾವನ್ನು ಬೆಂಗಳೂರಲ್ಲಿ ಬಿಡುಗಡೆ ಮಾಡಿದಕ್ಕೆ ಕನ್ನಡಪರ ಹೋರಾಟ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.

    ರಜನಿ ಸಿನಿಮಾ ವಿರುದ್ಧ ಊವರ್ಶಿ ಥಿಯೇಟರ್ ಮುಂಭಾಗ ಪ್ರತಿಭಟಿಸಿ ವಾಟಾಳ್ ನಾಗರಾಜ್, ಕನ್ನಡ ಚಿತ್ರಗಳು ಬಿಟ್ಟು ಪರಭಾಷಾ ಚಿತ್ರಗಳ ಪ್ರದರ್ಶನ ಬೇಡ. ನವೆಂಬರ್ ತಿಂಗಳಲ್ಲಿ ಬೇರೆ ಭಾಷೆ ಸಿನಿಮಾಗಳು ರಿಲೀಸ್ ಆಗಬಾರದು. ಇದರಿಂದ ಕನ್ನಡ ಸಿನಿಮಾಗಳಿಗೆ ತೊಂದರೆ ಆಗುತ್ತದೆ. ಇದರ ವಿರುದ್ಧ ಡಿಸೆಂಬರ್ 1 ರಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುತ್ತೇವೆ ಎಂದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ವಶಕ್ಕೆ ಪಡೆದರು.

    ಪ್ರತಿಭಟನೆ ಹಿನ್ನೆಲೆಯಲ್ಲಿ ಊರ್ವಶಿ ಚಿತ್ರ ಮಂದಿರ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ವಹಿಸಲಾಗಿತ್ತು. ಅಲ್ಲದೇ ಚಿತ್ರ ಮಂದಿರ ಮುಂದೆ ಯಾವುದೇ ಕಟೌಟ್ ಮತ್ತು ಬ್ಯಾನರ್ಸ್ ಹಾಕದೆ ಎಚ್ಚರ ವಹಿಸಲಾಗಿತ್ತು. ಚಿತ್ರ ಮಂದಿರ ಬಳಿಕ ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜನೆ ಮಾಡಿ 60ಕ್ಕೂ ಹೆಚ್ಚು ಪೊಲೀಸರ ರಕ್ಷಣೆ ನೀಡಿದ್ದರು.

    ರೋಬೋ ಚಿತ್ರದ ಮುಂದುವರಿದ ಭಾಗವಾದ 2.0 ಎಸ್. ಶಂಕರ್ ನಿರ್ದೇಶನದ ಬಹುನಿರೀಕ್ಷಿತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಬಿಡುಗಡೆ ಆಗಿದೆ. ಸಿನಿಮಾದ ಟೀಸರ್, ಫಸ್ಟ್ ಲುಕ್ ಮತ್ತು ಮೇಕಿಂಗ್ ವಿಡಿಯೋಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2.0 ಸಿನಿಮಾದಲ್ಲಿ ರಜನಿಕಾಂತ್, ಅಕ್ಷಯ್ ಕುಮಾರ್ ಮತ್ತು ಆ್ಯಮಿ ಜಾಕ್ಸನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಎಸ್.ಶಂಕರ್ ಆ್ಯಕ್ಷನ್ ಕಟ್ ಹೇಳಿದ್ದು, ಎ.ಆರ್.ರೆಹಮಾನ್ ಸಂಗೀತದಲ್ಲಿ ಹಾಡುಗಳು ಮೂಡಿ ಬಂದಿವೆ. 2010ರಲ್ಲಿ ರೋಬೋ ಸಿನಿಮಾ ತೆರೆ ಕಂಡಿತ್ತು. ರಜನಿ ಮತ್ತು ಐಶ್ವರ್ಯ ರೈ ನಟಿಸಿದ್ದ ಸಿನಿಮಾ ಕೋಟಿ ಕೋಟಿ ಹಣವನ್ನು ಗಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv