Tag: ನಟ

  • ಬಾಲಿವುಡ್ ನಟ ರಂಜನ್ ಸೆಹಗಲ್ ನಿಧನ

    ಬಾಲಿವುಡ್ ನಟ ರಂಜನ್ ಸೆಹಗಲ್ ನಿಧನ

    ಮುಂಬೈ: ಸರ್ಬಜಿತ್ ಸಿನಿಮಾ ಖ್ಯಾತಿಯ ನಟ ರಂಜನ್ ಸೆಹಗಲ್ ಇಂದು ನಿಧನರಾಗಿದ್ದಾರೆ. ಪಂಜಾಬಿ ಮತ್ತು ಹಿಂದಿ ಸಿನಿಮಾಗಳಲ್ಲಿ ರಂಜನ್ ಗುರುತಿಸಿಕೊಂಡಿದ್ದರು. ರಂಜನ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

    ರಣ್‍ದೀಪ್ ಹುಡಾ ಮತ್ತು ಐಶ್ವರ್ಯಾ ರೈ ಬಚ್ಚನ್ ನಟನೆಯ ಸರ್ಬಜಿತ್ ಚಿತ್ರದಲ್ಲಿ ರಂಜನ್ ನಟಿಸಿದ್ದರು. ಪಂಜಾಬಿಯ ಹಲವು ಚಿತ್ರಗಳಲ್ಲಿ ನಟಿಸಿದ್ದ ರಂಜನ್ ಗೆ 2017ರಲ್ಲಿ ಬಿಡುಗಡೆಯಾಗಿದ್ದ ‘ಮಾಹಿ ಎನ್‍ಆರ್‍ಐ’ ಮತ್ತು 2014ರಲ್ಲಿ ತೆರೆಕಂಡಿದ್ದ ‘ಯಾರ್ ದಾ ಕ್ಯಾಚಪ್’ ಹೆಸರು ತಂದು ಕೊಟ್ಟಿದ್ದವು.

    https://www.instagram.com/p/BWt6sJHDVGR/

    ಪಂಜಾಬ್ ಮೂಲದವರಾದ ರಂಜನ್ ಚಂಡೀಗಢನಲ್ಲಿ ವಾಸವಾಗಿದ್ದರು. ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಥಿಯಟರ್ ಸ್ಟಡಿಯಲ್ಲಿ ಮಾಸ್ಟರ್ ಡಿಗ್ರಿ ಪಡೆದುಕೊಂಡು ಮುಂಬೈಗೆ ಬಂದಿದ್ದರು. ರಿಶತೋ ಸೇ ಬಡಿ ಪ್ರಥಾ, ತುಮ್ ದೇನಾ ಸಾಥ್ ಮೇರಾ ಧಾರವಾಹಿಗಳಲ್ಲಿ ಅವಕಾಶ ಪಡೆದುಕೊಂಡಿದ್ದರು. ತದನಂತರ ಕ್ರೈಂ ಪೆಟ್ರೋಲ್ ಮತ್ತು ಸಾವಧಾನ್ ಇಂಡಿಯಾ ಸಂಚಿಕೆಗಳಲ್ಲಿ ರಂಜನ್ ನಟಿಸಿದ್ದರು.

    https://www.instagram.com/p/BSLWNlMjplm/

    2014ರಲ್ಲಿ ಕಾಸ್ಟ್ಯೂಮ್ ಡಿಸೆನರ್ ನಿವ್ಯಾ ಚಾಬ್ಡಾ ಅವರನ್ನು ಮದುವೆಯಾಗಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಂಜನ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    https://www.instagram.com/p/BB2NK6xCbzu/

  • ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಸಿನಿಮಾ ನಟ ಸೇರಿ ಐವರು ಅಂದರ್

    ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಸಿನಿಮಾ ನಟ ಸೇರಿ ಐವರು ಅಂದರ್

    – ಕಾರ್ ಕಳ್ಳತನದಿಂದಲೇ ಬ್ಯಾಂಕಾಕ್‍ನಲ್ಲಿ ಹೋಟೆಲ್ ಖರೀದಿ
    – 5 ಕೋಟಿ ಮೌಲ್ಯದ 50 ಕಾರು ವಶ
    – 500ಕ್ಕೂ ಹೆಚ್ಚು ಕಾರು ಕದ್ದಿರುವ ಶಂಕೆ

    ಲಕ್ನೋ: ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಸಿನಿಮಾ ನಟ ಸೇರಿ ಐವರನ್ನು ಉತ್ತರ ಪ್ರದೇಶದ ಲಕ್ನೋ ಪೊಲೀಸರು ಬಂಧಿಸಿದ್ದು, 5 ಕೋಟಿ ರೂ. ಮೌಲ್ಯದ 50 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಲಕ್ನೋ ಪೊಲೀಸ್ ಆಯುಕ್ತ ಸುಜಿತ್ ಪಾಂಡೆ, “ಈವರೆಗೆ 5 ಜನರನ್ನು ಮಾತ್ರ ಬಂಧಿಸಲಾಗಿದೆ. ಮುಖ್ಯ ಆರೋಪಿ ನಾಸಿರ್ ಖಾನ್ ಅಲಿಯಾಸ್ ಚೋತಿ ಅಮಿನಾಬಾದ್ ಪ್ರದೇಶದ ನಿವಾಸಿಯಾಗಿದ್ದು, ಮೂರು ಭೋಜ್‍ಪುರಿ ಚಲನಚಿತ್ರಗಳಲ್ಲಿ ನಟಿಸಿದ್ದಾನೆ. ಈ ಪೈಕಿ ಒಂದು ಸಿನಿಮಾದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ” ಎಂದು ತಿಳಿಸಿದ್ದಾರೆ.

    “ನಾಸಿರ್ ಕದ್ದ ಕಾರುಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡುತ್ತಿದ್ದ. ಮತ್ತೋರ್ವ ಆರೋಪಿ ರಿಜ್ವಾನ್ (50) ಕಾರ್ ಕಳ್ಳತನದಿಂದ ಬಂದ ಹಣದಲ್ಲಿಯೇ ಬ್ಯಾಂಕಾಕ್‍ನಲ್ಲಿ ಹೋಟೆಲ್ ಖರೀದಿಸಿದ್ದಾನೆ. ಉಳಿದಂತೆ ಲಕ್ನೋ ಮೂಲದ ಆರೋಪಿ ಮೊಯಿನುದ್ದೀನ್ ಖಾನ್ ಮತ್ತು ವಿನಯ್ ತಲ್ವಾರ್, ಕಾನ್ಪುರದ ಶ್ಯಾಮ್ ಜಿ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಈ ಎಲ್ಲ ಆರೋಪಿಗಳು ಹಳೆಯ ವಾಹನಗಳನ್ನು ಖರೀದಿಸಿ ಅದರ ಚಾಸಿಸ್ ಸಂಖ್ಯೆಯನ್ನು ಕದ್ದ ಕಾರುಗಳಿಗೆ ಬದಲಾಯಿಸುತ್ತಿದ್ದರು ಎಂದು ಸುಜಿತ್ ಪಾಂಡೆ ಹೇಳಿದ್ದಾರೆ.

    ಕಾರು ಕಳ್ಳತನದ ದಂಧೆಯಲ್ಲಿರುವ ಇತರ ಎಂಟು ಆರೋಪಿಗಳು ಪರಾರಿಯಾಗಿದ್ದಾರೆ. ಅವರು ಮೀರತ್, ಆಗ್ರಾ, ಮೊರಾದಾಬಾದ್, ದೆಹಲಿ ಮತ್ತು ಲಖಿಂಪುರ ಖೇರಿಗೆ ಸೇರಿದವರಾಗಿದ್ದಾರೆ.

    “ಗ್ಯಾಂಗ್ ಐಷಾರಾಮಿ ಕಾರುಗಳು ಸೇರಿದಂತೆ ಖಾಸಗಿ ವಿಮಾ ಕಂಪನಿಗಳಿಂದ ಸ್ಕ್ರ್ಯಾಪ್ ಮಾಡಿದ ವಾಹನಗಳನ್ನು ಖರೀದಿಯುತ್ತಿದ್ದರು. ನಂತರ ಉತ್ತರ ಪ್ರದೇಶ ಮತ್ತು ರಾಜ್ಯಗಳಲ್ಲಿ ಕಾರ್ ಕಳ್ಳರನ್ನು ಸಂಪರ್ಕಿಸುವ ಮೂಲಕ ಅದೇ ಮಾದರಿಯ ಕಾರುಗಳನ್ನು ಕದಿಯುತ್ತಿದ್ದರು. ಕಾರಿನ ಎಂಜಿನ್ ಮತ್ತು ಚಾಸಿಸ್ ಸಂಖ್ಯೆಯನ್ನು ಸ್ಕ್ರ್ಯಾಪ್ ಮಾಡಿದ ಕಾರಿಗೆ ಹಾಕುತ್ತಿದ್ದರು” ಎಂದು ಮಾಹಿತಿ ನೀಡಿದ್ದಾರೆ.

    ಆರೋಪಿಗಳು ವಿವಿಧ ರಾಜ್ಯಗಳಲ್ಲಿ ಜಾಲವನ್ನು ಹೊಂದಿದ್ದು, 500ಕ್ಕೂ ಕಾರು ಕದ್ದು ಮಾರಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಸುಜಿತ್ ಪಾಂಡೆ ತಿಳಿಸಿದ್ದಾರೆ.

  • ಇದೇ ವರ್ಷ ತೆರೆಕಂಡಿದ್ವು ಚಿರು ನಟನೆಯ ಮೂರು ಸಿನಿಮಾಗಳು

    ಇದೇ ವರ್ಷ ತೆರೆಕಂಡಿದ್ವು ಚಿರು ನಟನೆಯ ಮೂರು ಸಿನಿಮಾಗಳು

    ಬೆಂಗಳೂರು: ಪ್ರತಿಭಾವಂತ, ಸದಾ ನಗುಮುಖದ ಯುವ ನಟ ಚಿರಂಜೀವಿ ಸರ್ಜಾ ಇಂದು ನಮ್ಮನ್ನ ಅಗಲಿದ್ದಾರೆ. ಅವರ ಸಾವಿನ ಸುದ್ದಿ ಸಾಂಡಲ್‍ವುಡ್ ನಟ, ನಟಿಯರು, ಕಲಾವಿದರು, ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ.

    ಚಿರು 2009ರಲ್ಲಿ ‘ವಾಯುಪುತ್ರ’ ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಮಗನಾಗಿ ತೆರೆಹಂಚಿಕೊಂಡಿದ್ದರು. ಕನ್ನಡ ಚಿತ್ರರಂಗದ ಜೊತೆಗೆ ಉತ್ತಮ ಒಡನಾಟ ಹೊಂದಿದ್ದ ಕುಟುಂಬದಲ್ಲಿ ಬೆಳೆದ ಚಿರಂಜೀವಿ ಸರ್ಜಾ ಹಿರಿಯರಿಗೆ ಗೌರ, ಕಿರಿಯರಿಗೆ ಪ್ರೀತಿ ಕೊಟ್ಟು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

    ಚಿರಂಜೀವಿ ಸರ್ಜಾ ನಟನೆಯ ಮೂರು ಸಿನಿಮಾಗಳು ಇದೇ ವರ್ಷ ತೆರೆ ಕಂಡಿದ್ದವು. ಜನವರಿ ತಿಂಗಳಿನಲ್ಲಿ ‘ಖಾಕಿ’ ಸಿನಿಮಾ ತೆರೆಕಂಡಿತ್ತು. ನವೀನ್ ರೆಡ್ಡಿ ನಿರ್ದೇಶನದ ಈ ಸಿನಿಮಾ ಪಕ್ಕಾ ಕಮರ್ಷಿಯಲ್ ಮಾದರಿಯ ಸಿನಿಮಾವಾಗಿತ್ತು. ತರುಣ್ ಶಿವಪ್ಪ ಮತ್ತು ಮಾನಸಾ ತರುಣ್ ಜಂಟಿಯಾಗಿ ‘ಖಾಕಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದರು.

    ‘ಆ ದಿನಗಳು’ ಖ್ಯಾತಿಯ ಕೆ.ಎಂ. ಚೈತನ್ಯ ಜೊತೆಗೆ ಚಿರಂಜೀವಿ ಸರ್ಜಾ ಉತ್ತಮ ಒಡನಾಟ ಹೊಂದಿದ್ದರು. ಚೈತನ್ಯ ಅವರ ‘ಆಟಗಾರ’, ‘ಆಕೆ’, ‘ಅಮ್ಮ ಐ ಲವ್ ಯೂ’, ಹಾಗೂ ಈ ವರ್ಷ ಫೆಬ್ರವರಿಯಲ್ಲಿ ತೆರೆ ಕಂಡ ‘ಆದ್ಯಾ’ ಸಿನಿಮಾಗಳಲ್ಲಿ ಚಿರು ನಟಿಸಿದ್ದರು.

    ಮಾರ್ಚ್ 12ರಂದು ಸಿನಿಮಾ ತೆರೆ ಕಂಡಿದ್ದ ‘ಶಿವಾರ್ಜುನ’ ಸಿನಿಮಾವನ್ನು ಬಹಳ ಪ್ರೀತಿಯಿಂದ ಮಾಡಿದ್ದರು. ದುರಾದೃಷ್ಟವಶಾತ್ ಸಿನಿಮಾ ರಿಲೀಸ್ ಆದ ಎರಡೇ ದಿನಕ್ಕೆ ಕೊರೊನಾ ವೈರಸ್‍ನಿಂದಾಗಿ ಚಿತ್ರಮಂದಿರಗಳನ್ನು ಬಂದ್ ಮಾಡುವಂತೆ ಆದೇಶ ಹೊರಬಿದ್ದಿತ್ತು. ಹಾಗಾಗಿ ‘ಶಿವಾರ್ಜುನ’ ಸಿನಿಮಾ ಎರಡೇ ದಿನಕ್ಕೆ ಪ್ರದರ್ಶನವನ್ನು ನಿಲ್ಲಿಸಬೇಕಾಗ ಅನಿವಾರ್ಯತೆ ಎದುರಾಯಿಗಿತ್ತು.

    ಕೊರೊನಾ ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಉಳಿದಿದ್ದ ಚಿರು ಕುಟುಂಬದೊಂದಿಗೆ ಖುಷಿ, ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಆದರೆ ನಿನ್ನೆ ರಾತ್ರಿಯಿಂದ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ತಮ್ಮ 39ನೇ ವರ್ಷಕ್ಕೆ ಬಾರದ ಲೋಕಕ್ಕೆ ತೆರೆಳಿದ್ದಾರೆ.

  • ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

    ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

    ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

    ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಸಿದ್ದರು.

    ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರ ತಮ್ಮ ಧ್ರುವ ಸರ್ಜಾ, ಪತ್ನಿ ಮೇಘನಾ ರಾಜ್ ಹಾಗೂ ಸುಂದರರಾಜ್, ಪ್ರಮೀಳಾ ಜೋಷಾಯ್ ಇದ್ದಾರೆ. ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ.

  • ಲಾಕ್‍ಡೌನ್‍ನಿಂದ ನಟ ಆತ್ಮಹತ್ಯೆ – ಪತ್ನಿ ಊಟ ಮಾಡ್ತಿದ್ದಾಗಲೇ ನೇಣಿಗೆ ಶರಣು

    ಲಾಕ್‍ಡೌನ್‍ನಿಂದ ನಟ ಆತ್ಮಹತ್ಯೆ – ಪತ್ನಿ ಊಟ ಮಾಡ್ತಿದ್ದಾಗಲೇ ನೇಣಿಗೆ ಶರಣು

    – ಇತ್ತೀಚೆಗಷ್ಟೆ ಮದುವೆಯಾಗಿದ್ದ ನಟ

    ಮುಂಬೈ: ‘ಆದಾತ್ ಸೆ ಮಜ್ಬೂರ್’ ಶೋ ಖ್ಯಾತಿಯ ಬಾಲಿವುಡ್‍ ನಟ ಮನ್‍ಮೀತ್ ಗ್ರೆವಾಲ್ (32) ತಮ್ಮ ಖಾರ್ಗರ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನ್‍ಮೀತ್ ಲಾಕ್‍ಡೌನ್‍ನಿಂದ ಕೆಲಸವಿಲ್ಲದ ಕಾರಣ ಒತ್ತಡದಲ್ಲಿದ್ದರು ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

    ‘ಆದಾತ್ ಸೆ ಮಜ್ಬೂರ್’ ಮತ್ತು ‘ಕುಲದೀಪಕ್’ ಮುಂತಾದ ಧಾರಾವಾಹಿಗಳಲ್ಲಿ ನಟ ಮನ್‍ಮೀತ್ ಅಭಿನಯಿಸಿದ್ದರು. ಲಾಕ್‍ಡೌನ್‍ನಿಂದ ಅನೇಕ ಪ್ರಾಜೆಕ್ಟ್‌ಗಳು ಸ್ಥಗಿತಗೊಂಡಿವೆ. ಹೀಗಾಗಿ ಕೆಲಸವಿಲ್ಲದೆ ಮಾನಸಿಕವಾಗಿ ಬಳಲುತ್ತಿದ್ದರು. ಜೊತೆಗೆ ಆರ್ಥಿಕ ಸಮಸ್ಯೆ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಮೇ 15 ರಂದು ರಾತ್ರಿ ಸುಮಾರು 9.30ಕ್ಕೆ ತನ್ನ ಫ್ಲ್ಯಾಟ್‍ನಲ್ಲಿ ಮನ್‍ಮೀತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮೂಲ ಹೆಸರು ಅಮರ್‌ಜ್ಯೋತ್ ಸಿಂಗ್, ಇತ್ತೀಚೆಗೆ ರವೀಂದ್ರ ಕೌರ್ ಅವರನ್ನು ವಿವಾಹವಾಗಿದ್ದರು. ಇವರ ಕುಟುಂಬ ಪಂಜಾಬ್‍ನಲ್ಲಿ ನೆಲೆಸಿದೆ. ಪತ್ನಿ ಅಡುಗೆಮನೆಯಲ್ಲಿ ಊಟ ಮಾಡುತ್ತಿದ್ದಾಗ ಬೆಡ್‍ರೂಮಿಗೆ ಹೋಗಿ ದುಪ್ಪಟ್ಟದಿಂದ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಕುರ್ಚಿ ಬೀಳುವ ಶಬ್ದ ಕೇಳಿದಾಗ ಪತ್ನಿ ರೂಮಿಗೆ ಹೋಗಿ ನೋಡಿದಾಗ ಪತಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದನ್ನು ನೋಡಿದ್ದಾರೆ ಎಂದು ಸಬ್ ಇನ್ಸ್‌ಪೆಕ್ಟರ್ ಅಜಿತ್ ಕಾಂಬ್ಲೆ ತಿಳಿಸಿದ್ದಾರೆ.

    ಮನ್‍ಮೀತ್‍ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದಾರಿ ಮಧ್ಯೆಯೇ ನಟ ಮೃತಪಟ್ಟಿದ್ದರು. ವೆಬ್ ಸರಣಿಗಳು ಮತ್ತು ಕೆಲವು ಜಾಹೀರಾತುಗಳು ಸೇರಿದಂತೆ ಅನೇಕ ಪ್ರಾಜೆಕ್ಟ್‌ಗಳು ಸ್ಥಗಿತಗೊಂಡಿದ್ದರಿಂದ ಕಳೆದ ಕೆಲವು ದಿನಗಳಿಂದ ಪತಿ ತೀವ್ರ ಒತ್ತಡದಲ್ಲಿದ್ದರು ಎಂದು ಕೌರ್ ಪೊಲೀಸರಿಗೆ ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ ಮನ್‍ಮೀತ್ ವಿದೇಶಕ್ಕೆ ಹೋಗುವ ಬಗ್ಗೆ ಪತ್ನಿ ಜೊತೆ ಮಾತನಾಡಿದ್ದು, ಈ ಲಾಕ್‍ಡೌನ್ ಎಲ್ಲವನ್ನು ಹಾಳು ಮಾಡಿತು ಎಂದಿದ್ದರಂತೆ. ಮನ್‍ಮೀತ್ ಕೆಲವರ ಬಳಿ ಸಾಲ ಪಡೆದಿದ್ದರು. ಅದನ್ನು ಮರುಪಾವತಿಸಲಾಗುವುದಿಲ್ಲ ಎಂದು ಪತ್ನಿ ಬಳಿ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಕಣ್ಣಿಗೆ ಕಾಣುವ ದೇವರಿಗೆ ಸ್ಯಾಂಡಲ್‍ವುಡ್ ತಾರೆಯರ ಸ್ಪೆಷಲ್ ಪೋಸ್ಟ್

    ಕಣ್ಣಿಗೆ ಕಾಣುವ ದೇವರಿಗೆ ಸ್ಯಾಂಡಲ್‍ವುಡ್ ತಾರೆಯರ ಸ್ಪೆಷಲ್ ಪೋಸ್ಟ್

    ಬೆಂಗಳೂರು: ಅಮ್ಮ ಎಂದರೆ ಮಕ್ಕಳ ಪಾಲಿಗೆ ಕಣ್ಣಿಗೆ ಕಾಣುವ ದೇವರು. ಕುಟುಂಬಕ್ಕಾಗಿ ಹಗಲಿರುಳು ಶ್ರಮಿಸುವ ಜೀವ ಎಂದರೆ ಅಮ್ಮ. ಇಂದು ನಮ್ಮನ್ನು ಭೂಮಿಗೆ ತಂದ ದೇವರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದ್ದು, ಎಲ್ಲರೂ ತಮ್ಮ ತಾಯಿಯಂದಿರಿಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಈ ವಿಶೇಷ ದಿನವನ್ನು ಸ್ಯಾಂಡಲ್‍ವುಡ್ ಕಲಾವಿದರೂ ಕೂಡ ಖುಷಿಯಿಂದ ಆಚರಿಸಿದ್ದು, ತಮ್ಮ ಮುದ್ದಿನ ಅಮ್ಮಂದಿರ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಮಾಡಿ ತಾಯಿ ಪ್ರೀತಿಗೆ ಸಾಟಿಯಿಲ್ಲ ಎಂದಿದ್ದಾರೆ.

    https://www.instagram.com/p/B__lO4Op_7J/

    ಚಂದನವನದ ನಟ, ನಟಿಯರು ತಮ್ಮ ಅಮ್ಮಂದಿರ ಜೊತೆಗಿರುವ ಕ್ಯೂಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ. ಅಲ್ಲದೇ ಕೆಲವರು ಅಮ್ಮನನ್ನು ವರ್ಣಿಸಿ ಕವಿತೆ ಬರೆದು ಎಲ್ಲರ ಗಮನ ಸೆಳೆದಿದ್ದಾರೆ. ನವರಸ ನಾಯಕ ಜಗ್ಗೇಶ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಶ್ರೀಮುರುಳಿ, ರಾಘವೇಂದ್ರ ರಾಜ್‍ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ರಮೇಶ್ ಅರವಿಂದ್, ನಟಿ ರಕ್ಷಿತಾ, ಪ್ರಣಿತಾ, ಹರಿಪ್ರಿಯಾ, ರಚಿತಾ ರಾಮ್ ಹೀಗೆ ಹಲವು ಕಲಾವಿದರು ಅಮ್ಮಂದಿರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಾಯಿಯಂದಿರ ದಿನದ ಶುಭಾಷಯ ಕೋರಿದ್ದಾರೆ.

    https://www.instagram.com/p/B__mMJDphN-/

    ಪೋಸ್ಟ್ ನಲ್ಲಿ ಏನಿದೆ?
    ನವರಸ ನಾಯಕ ಜಗ್ಗೇಶ್ ಅಮ್ಮನನ್ನು ಜಗತ್ತಿಗೆ ಹೋಲಿಸಿ, ಅಮ್ಮನ ಪ್ರೀತಿಯನ್ನು ವರ್ಣಿಸಿದ್ದಾರೆ. “ಅಮ್ಮಂದಿರ ದಿನದ ಶುಭಾಶಯಗಳು. ಸನಾತನ ಧರ್ಮದಲ್ಲಿ ಅಮ್ಮನನ್ನು ಜಗತ್ತಿಗೆ ಹೋಲಿಸಲಾಗಿದೆ. ಜಗತ್ತು ಪಂಚಭೂತದಿಂದ ಸೃಷ್ಟಿಯಾಗಿದೆ. ಹಾಗೆ ತಾಯಿಯ ಒಡಲು ಪಂಚಭೂತಗಳಿಂದ ಅಂದರೆ “ಅಗ್ನಿ, ವಾಯು, ಜಲ, ಭೂಮಿ, ಆಕಾಶ” (ಅಗ್ನಿ ಅಮ್ಮನ ಬೆಚ್ಚನೆಯ ಮಡಿಲು, ವಾಯು ಅಮ್ಮನ ಉಸಿರು ದೇಣಿಗೆ, ಜಲ ಅಮ್ಮನ ಎದೆಹಾಲು, ಭೂಮಿ ಅಮ್ಮ ಜನ್ಮಕೊಟ್ಟ ಉದರ, ಆಕಾಶ ಅವಳು ಕೊಟ್ಟ ಪ್ರೀತಿಯ ಎತ್ತರ) ಇಂಥ ದೇವತೆಗೆ ನಾವೇನು ಮರಳಿಕೊಟ್ಟರು ಸಾಸಿವೆಯ ಸಹಸ್ರ ಕಣದ ಧೂಳಿಗೆ ಸಮ. ಇಂದು ಮಾತ್ರ ನೆನೆಯುವ ಬದಲು ಸಾಯುವವರೆಗೂ ಆರಾಧಿಸಿ ಅಮ್ಮನನ್ನ” ಎಂದು ಅಮ್ಮನನ್ನು, ಅಮ್ಮನ ಪ್ರೀತಿಯನ್ನು ವರ್ಣಿಸಿ, ತಮ್ಮ ಕೈಮೇಲೆ ಇರುವ ತಮ್ಮ ಅಮ್ಮನ ಟ್ಯಾಟು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    https://www.instagram.com/p/B__qwEYHWny/

    ಕಿಚ್ಚ ಸುದೀಪ್ ಅವರು ಅಮ್ಮಂದಿರ ದಿನಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. “ಜೀವ ಕೊಟ್ಟ ನನ್ನ ಹೆತ್ತ ತಾಯಿಗೆ, ಜೀವನ ಕೊಟ್ಟ ನನ್ನ ಕನ್ನಡ ತಾಯಿಗೆ, ಅನ್ನ ಕೊಟ್ಟ ಭೂತಾಯಿಗೆ, ತಮ್ಮ ಹೃದಯಗಳಲ್ಲಿ ಪ್ರೀತಿಯ ಸ್ಥಾನ ಕೊಟ್ಟು, ನನ್ನನ್ನು ಅಕ್ಕರೆಯಿಂದ ಬೆಳೆಸುತ್ತಿರುವ ಎಲ್ಲಾ ಮಾತೃಹೃದಯಿ ಸ್ವರೂಪ ಅಭಿಮಾನಿ ತಾಯಂದಿರಿಗೆ ನಾನು ಸದಾ ಋಣಿ. ವಿಶ್ವದ ಎಲ್ಲಾ ಅಮ್ಮಂದಿರಿಗೆ ಈ ಕಿಚ್ಚನ ಶುಭಾಶಯಗಳು” ಎಂದು ಬರೆದು ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B__vHRbg-yh/

    ಅಮ್ಮ ನೀನು ನಮಗಾಗಿ ಎಂದು ಪುನೀತ್ ರಾಜ್‍ಕುಮಾರ್ ಪವರ್‍ಫುಲ್ ವಿಶ್ ಜೊತೆ ಅಮ್ಮನ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇತ್ತ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಡಿನ ಸಾಲುಗಳನ್ನು ಬರೆದು ಅಮ್ಮನ ಪ್ರೀತಿ ವರ್ಣಿಸಿ ಶುಭಕೋರಿದ್ದಾರೆ. ತಾಯಿನೇ ಎಲ್ಲಾ ಬದಲಾಗೋದಿಲ್ಲ ಯುಗ ಉರುಳಿ ಕಳೆದೋದರೂ ಎಂದು ಶಿವಣ್ಣ ಅಮ್ಮನನ್ನು ನೆನೆದು ಫೋಟೋವನ್ನು ಹಂಚಿಕೊಂಡಿದ್ದಾರೆ.

    https://www.instagram.com/p/CAAKFOsAI0X/

    ಇತ್ತ ನಟಿ ರಕ್ಷಿತಾ ಪ್ರೇಮ್ ಅಮ್ಮನೊಂದಿಗೆ ಇರುವ ತಮ್ಮ ಬಾಲ್ಯದ ಫೋಟೋವನ್ನು ಹಂಚಿಕೊಂಡು ಹ್ಯಾಪಿ ಮದರ್ಸ್ ಡೇ ಎಂದು ವಿಶ್ ಮಾಡಿದ್ದಾರೆ. ನಟಿ ರಚಿತಾ ರಾಮ್ ಅವರು ಕೂಡ ಅಮ್ಮನ ಜೊತೆ ಇರುವ ಬಾಲ್ಯದ ಫೋಟೋ, ಈಗಿನ ಫೋಟೋಗಳನ್ನ ಅಪ್ಲೋಡ್ ಮಾಡಿ ಲವ್ ಯು ಅಮ್ಮ ಎಂದಿದ್ದಾರೆ.

    https://www.instagram.com/p/CAALa3agmPk/

  • ನಟ ಜೈ ಜಗದೀಶ್ ವಿರುದ್ಧ ಎಫ್‍ಐಆರ್

    ನಟ ಜೈ ಜಗದೀಶ್ ವಿರುದ್ಧ ಎಫ್‍ಐಆರ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ, ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷ ಸಾ.ರಾ.ಗೋವಿಂದು ಅವರು ನಿಂದನೆ ಆರೋಪದ ಅಡಿ ಜೈ ಜಗದೀಶ್ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಏನಿದು ಪ್ರಕರಣ?:
    ಹೆಮ್ಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಭಾರತದಲ್ಲಿ ಲಾಕ್‍ಡೌನ್‍ನಿಂದಾಗಿ ಸಿನಿಮಾ, ಕಿರುತೆರೆ ಶೂಟಿಂಗ್ ಸೇರಿದಂತೆ ಚಿತ್ರೋದ್ಯಮದ ಚಟುವಟಿಕೆಗಳು ಸ್ತಬ್ದವಾಗಿವೆ. ಹೀಗಾಗಿ ನೂರಾರು ಕಲಾವಿದರು, ತಂತ್ರಜ್ಞರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂತಹವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿತ್ತು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾತೃ ಸಂಸ್ಥೆಯಾಗಿದ್ದು ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ ಮೂರು ವಲಯಗಳು ಇದರಲ್ಲಿ ಒಗ್ಗೂಡಿವೆ. ಸಂಕಷ್ಟದಲ್ಲಿರುವ ಕಲಾವಿದರು, ತಂತ್ರಜ್ಞರಿಗೆ ಆಹಾರದ ಕಿಟ್ ವಿತರಿಸಲು ನಿರ್ಮಾಪಕ ಸಾ.ರಾ. ಗೋವಿಂದು, ವಾಣಿಜ್ಯ ಮಂಡಳಿಯ ಸದಸ್ಯ ಕೆ.ಎಂ. ವೀರೇಶ್ ನೇತೃತ್ವದಲ್ಲಿ ಸರ್ಕಾರದೊಂದಿಗೆ ಮಾತನಾಡಿ ಸಹಾಯಕ್ಕೆ ನಿಂತಿದ್ದರು.

    ಈ ವಿಚಾರವಾಗಿ ನಟ ನಿರ್ಮಾಪಕ ಜೈ ಜಗದೀಶ್ ಕೋಪಗೊಂಡಿದ್ದರು. “ನಿರ್ಮಾಪಕರು ಅನ್ನದಾತರು, ಸಾವಿರಾರು ಜನಕ್ಕೆ ಅನ್ನವನ್ನು ನೀಡಿದ್ದಾರೆ. ನಮಗೆ ಆಹಾರದ ಕಿಟ್ ನೀಡಿ ಅವಮಾನ ಮಾಡಬೇಡಿ” ಎಂದು ಹೇಳಿದ್ದರು. ಅಷ್ಟೇ ಅಲ್ಲದೆ ಸಾ.ರಾ.ಗೋವಿಂದು ಹಾಗೂ ಕೆ.ಎಂ.ವೀರೇಶ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಬೈದಿದ್ದಾರೆ. ಅವರು ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

    ಇದರಿಂದಾಗಿ ಅಸಮಾಧಾನಗೊಂಡ ಸಾ.ರಾ.ಗೋವಿಂದು ಅವರು, ಜೈ ಜಗದೀಶ್ ಅವರು ಉದ್ದೇಶ ಪೂರ್ವಕವಾಗಿ ನನ್ನ ಬಗ್ಗೆ ತಮ್ಮ ವಾಟ್ಸಪ್ ಮೂಲಕ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ತೀರಾ ಕೆಳಮಟ್ಟದಲ್ಲಿ ಬಾಯಿಗೆ ಬಂದಂತೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ನನ್ನ ವಿರುದ್ಧ, ಸ್ನೇಹಿತರ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಬಗ್ಗೆ ಆರೋಪ ಮಾಡಿರುವ ಜೈ ಜಗದೀಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಮನವಿ ಮಾಡಿಕೊಂಡಿದ್ದರು.

  • ನಟ ಇರ್ಫಾನ್ ಖಾನ್ ವಿಧಿವಶ

    ನಟ ಇರ್ಫಾನ್ ಖಾನ್ ವಿಧಿವಶ

    ಮುಂಬೈ: ತಾಯಿ ಸಾವನ್ನಪ್ಪಿದ ಕೇವಲ 5 ದಿನಗಳಲ್ಲೇ ಬಾಲಿವುಟ್ ನಟ ಇರ್ಫಾನ್ ಖಾನ್ ಕೂಡ ವಿಧಿವಶರಾಗಿದ್ದಾರೆ.

    ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇರ್ಫಾನ್ ಖಾನ್ (53) ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ಇರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು.

    ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತು ಮಾಹಿತಿ ನೀಡಿದ್ದ ವೈದ್ಯಾಧಿಕಾರಿಗಳು, ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

    ಇರ್ಫಾನ್ ಅವರಿಗೆ ನ್ಯೂರೋಎಂಡೋಕ್ರೈನ್ ಗಡ್ಡೆ ಇರುವುದು 2018ರಲ್ಲೇ ತಿಳಿದಿತ್ತು. ಇದಕ್ಕಾಗಿ ಅವರು ವಿದೇಶದಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶನಿವಾರ ಅವರ ತಾಯಿ ಸಾಯಿಬಾ ಬೇಗಂ ಅವರನ್ನು ಕಳೆದುಕೊಂಡಿದ್ದ ಅವರು ವಿಡಿಯೋ ಕಾಲ್ ಮೂಲಕ ಅವರಿಗೆ ಅಂತಿಮ ನಮನ ಸಲ್ಲಿಸಿದ್ದರು.

  • ಜನಪ್ರಿಯ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

    ಜನಪ್ರಿಯ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

    ಬೆಂಗಳೂರು: ಜನಪ್ರಿಯ ಹಾಸ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ  ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

    ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಆಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. 6 ದಿನಗಳ ಹಿಂದೆ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ವೈಫಲ್ಯದ ಜೊತೆಗೆ ಕಾಲಿಗೆ ಗ್ಯಾಂಗ್ರಿನ್ ಕೂಡ ಆಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಕಾರಣ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

    ಎರಡು ವರ್ಷಗಳ ಹಿಂದೆ ತೂಕ ಇಳಿಸಿಕೊಳ್ಳಲು ಬುಲೆಟ್ ಪ್ರಕಾಶ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಹೀಗಾಗಿ ಶಸ್ತ್ರ ಚಿಕಿತ್ಸೆಯೇ ಅವರ ಜೀವಕ್ಕೆ ಮುಳ್ಳಾಯಿತೇ ಎಂಬ ಪ್ರಶ್ನೆ ಎದ್ದಿತ್ತು. ಅಲ್ಲದೆ ಶಸ್ತ್ರ ಚಿಕಿತ್ಸೆಯ ನಂತರ ಸಿನಿಮಾಗಳಲ್ಲಿ ಅವಕಾಶ ಕಡಿಮೆಯಾಗಿತ್ತು. ಹೀಗಾಗಿ ಹಾಸ್ಯನಟ ಮಾನಸಿಕವಾಗಿ ಬಹಳ ನೊಂದಿದ್ದ ವಿಚಾರ ಆಪ್ತ ಮೂಲಗಳಿಂದ ತಿಳಿದು ಬಂದಿತ್ತು.

    ಬುಲೆಟ್ ಪ್ರಕಾಶ್ ಒಟ್ಟು 300ಕ್ಕೂ ಹೆಚ್ಚು ಚಲನ ಚಿತ್ರದಲ್ಲಿ ಅಭಿನಯಿಸಿದ್ದಾರೆ. ತಮ್ಮ ರಾಯಲ್ ಎನ್‍ಫೀಲ್ಡ್ ಬೈಕಿನಿಂದಾಗಿ ‘ಬುಲೆಟ್’ ಹೆಸರು ಬಂದಿತ್ತು. 2015ರಲ್ಲಿ ಬಿಜೆಪಿ ಪಕ್ಷವನ್ನು ಬುಲೆಟ್ ಪ್ರಕಾಶ್ ಸೇರಿದ್ದರು.

  • ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ- ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

    ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ- ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

    ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಬುಲೆಟ್ ಪ್ರಕಾಶ್ ಶನಿವಾರ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.

    ಇದುವರೆಗೆ ಮೂರು ಆಸ್ಪತ್ರೆಯನ್ನು ಬದಲಿಸಿರುವ ಬುಲೆಟ್ ಪ್ರಕಾಶ್ ಶನಿವಾರ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಇದೀಗ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಲಿವರ್ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಕಾಶ್, ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಡ್ನಿ ವೈಫಲ್ಯದ ಜೊತೆಗೆ ಕಾಲಿಗೆ ಗ್ಯಾಂಗ್ರಿನ್ ಕೂಡ ಆಗಿದೆ. ಹೀಗಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ವೆಂಟಿಲೇಟರ್‍ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

    ಕೃತಕ ಉಸಿರಾಟ ಸಾಧನದಿಂದ ಉಸಿರಾಡುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಎರಡು ವರ್ಷಗಳ ಹಿಂದೆ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಹೀಗಾಗಿ ಶಸ್ತ್ರ ಚಿಕಿತ್ಸೆಯೇ ಅವರ ಜೀವಕ್ಕೆ ಮುಳ್ಳಾಯಿತಾ ಎಂಬ ಪ್ರಶ್ನೆ ಎದ್ದಿತ್ತು. ಅಲ್ಲದೆ ಶಸ್ತ್ರ ಚಿಕಿತ್ಸೆಯ ನಂತರ ಸಿನಿಮಾಗಳಲ್ಲಿ ಅವಕಾಶ ಕಡಿಮೆಯಾಗಿತ್ತು. ಹೀಗಾಗಿ ಹಾಸ್ಯನಟ ಮಾನಸಿಕವಾಗಿ ಬಹಳ ನೊಂದಿದ್ದ ವಿಚಾರ ಆಪ್ತ ಮೂಲಗಳಿಂದ ತಿಳಿದು ಬಂದಿತ್ತು.