Tag: ನಟ

  • ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

    ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

    ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

    https://www.instagram.com/p/BpH55YWjMcE/

    ದೇಹದಲ್ಲಿ ಸಮಸ್ಯೆಗಳಾದ್ರೆ ವ್ಯತಾಸ ಕಂಡು ಬಂದ್ರೆ ಡಾಕ್ಟರ್ ಸಂಪರ್ಕಿಸಿ. ನಿರ್ಲಕ್ಷ್ಯ ಮಾಡಿದರೆ ಸೂಕ್ತ ಬೆಲೆ ತೆರಬೇಕಾಗುತ್ತೆ. ನಿರ್ಲಕ್ಷ್ಯ ಮಾಡಿ ನಾನು ಈಗ ಪಾಠ ಕಲಿತಿದ್ದೇನೆ ಅಂತ ಕಾಲಿನ ಚಿತ್ರ ಹಾಕಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಆಸ್ಟಿಯೋಕ್ಲ್ಯಾಟೋಮಾ ಎಂಬುದು ಒಂದು ಅಪರೂಪದ ಕಾಯಿಲೆಯಾಗಿದ್ದು, ಇದೀಗ ಮಾಜಿ ಸಂಸದೆ ಈ ರೋಗಕ್ಕೆ ತುತ್ತಾಗಿದ್ದಾರೆ. ಈ ಕಾಯಿಲೆ 10 ಲಕ್ಷ ಮಂದಿಯಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.

    ದಿವ್ಯ ಸ್ಪಂದನ ಎಂಬ ಹುಡುಗಿ ಸ್ಯಾಂಡಲ್‍ವುಡ್‍ನಲ್ಲಿ ರಮ್ಯಾ ಆಗಿ ಬೆಳೆಯುವಲ್ಲಿ ಅಂಬಿ ಆಶೀರ್ವಾದವಿತ್ತು. ಅಲ್ಲದೇ ನಟಿಯಾಗಿದ್ದ ರಮ್ಯಾ ಮಂಡ್ಯದಲ್ಲಿ ಗೆದ್ದು ಸಂಸದೆಯಾಗಿದ್ದರು. ಆದರೆ ಅಂಬರೀಶ್ ನಿಧನಕ್ಕೆ ಕೇವಲ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ಅಂಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಮ್ಯಾಗೆ ಛೀಮಾರಿ ಹಾಕಿದ್ದರು. ಅಲ್ಲದೇ ಮಂಡ್ಯದ ಜನತೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಅಮರ್‍ನಾಥ್, ಜಲೀಲ, ಕನ್ವರ್ ಲಾಲ್, ರೆಬೆಲ್ ಸ್ಟಾರ್, ಕಲಿಯುಗ ಕರ್ಣ, ಮಂಡ್ಯದ ಗಂಡು… ಹೀಗೆ ನಾನಾ ಹೆಸರುಗಳಿಂದ ಜನಮಾನಸದಲ್ಲಿ ಅಚ್ಚೊತ್ತಿ ಅಂಬರೀಶ್ ಅಮರರಾಗಿದ್ದಾರೆ. ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನಡೆಯಿತು. ರಾತ್ರಿ 10 ಗಂಟೆ ಕಳೆದರೂ ಅಂಬಿ ಅಭಿಮಾನಿಗಳು ಸ್ಟುಡಿಯೋಗೆ ಭೇಟಿ ನೀಡುತ್ತಿದ್ದರು. ಕೊನೆಗೆ ಪೊಲೀಸರು ಬ್ಯಾರಿಕೇಡ್‍ಗಳನ್ನು ತೆರೆದು ಅವಕಾಶ ಮಾಡಿಕೊಟ್ಟರು.

    https://www.youtube.com/watch?v=vpV25SEDROE

    https://www.youtube.com/watch?v=ei5fso60PsU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಅಂತಿಮ ಯಾತ್ರೆ ಯಾವ ಮಾರ್ಗದಲ್ಲಿ ಸಾಗುತ್ತೆ – ಕಂಪ್ಲೀಟ್ ಡಿಟೈಲ್ಸ್

    ಅಂಬಿ ಅಂತಿಮ ಯಾತ್ರೆ ಯಾವ ಮಾರ್ಗದಲ್ಲಿ ಸಾಗುತ್ತೆ – ಕಂಪ್ಲೀಟ್ ಡಿಟೈಲ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ಯಾತ್ರೆಗೆ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ ಬೆಳಗ್ಗೆ ಮಂಡ್ಯ ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಆಗಮಿಸುವ ಪಾರ್ಥೀವ ಶರೀರದ ಮೆರವಣಿಗೆ ಕಂಠೀರವ ಕ್ರೀಡಾಂಗಣದಿಂದ ಆರಂಭವಾಗಲಿದೆ.

    ಮಂಡ್ಯದಲ್ಲಿ ನಾಳೆ ಬೆಳಗ್ಗೆ 9 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಕಂಠೀರವ ಕ್ರೀಡಾಂಗಣಕ್ಕೆ ಕರೆತಂದು ಮೆರವಣಿಗೆ ಆರಂಭಿಸಲಾಗುತ್ತದೆ. ಕ್ರೀಡಾಂಗಣದಿಂದ ಆರಂಭವಾಗುವ ಅಂತಿಮ ಯಾತ್ರೆಯನ್ನು ಮೊದಲು ರಾಜಭವನ, ಕಸ್ತೂರ್ ಬಾ ರಸ್ತೆ ಮೂಲಕ ಕರೆತರಲು ಯೋಜನೆ ರೂಪಸಿಲಾಗಿತ್ತು. ಆದರೆ ಟ್ರಾಫಿಕ್ ಜಾಮ್ ಹಾಗೂ ಗಣ್ಯ ವ್ಯಜ್ತಿಗಳ ಸಂಚಾರ ಪ್ರಯುಕ್ತ ಈ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

    ಔಟರ್ ರಿಂಗ್ ರಸ್ತೆಯ ಸುಮನಹಳ್ಳಿ ಜಂಕ್ಷನ್ ನಿಂದ ಗೊರಗುರಂಟೆಪಾಳ್ಯ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಸುಮನಹಳ್ಳಿಯಿಂದ ಮಾಗಡಿ ರಸ್ತೆ, ಕಾಮಾಕ್ಷಿ ಪಾಳ್ಯ, ಕಾರ್ಡ್ ರಸ್ತೆ ಮೂಲಕ ಸಂಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಗೊರಗುಂಟೆಪಾಳ್ಯದಿಂದ ಎಂಇಎ ಜಂಕ್ಷನ್, ಆರ್‍ಎಂಸಿ ಯಾರ್ಡ್ ನಿಂದ ಸೋಪ್ ಫ್ಯಾಕ್ಟರಿ ಮೂಲಕ ಸುಮನಹಳ್ಳಿಗೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಬಿಎಎಲ್ ರಸ್ತೆ, ಗಂಗಮ್ಮ ಸರ್ಕಲ್ ನಿಂದ ತುಮಕೂರು ರಸ್ತೆಗೆ ಹೋಗಲು ಅವಕಾಶ ನೀಡಲಾಗಿದೆ. ನಾಳೆ ಸಂಚಾರಕ್ಕೆ ಅನಾನನುಕೂಲವಾಗದಂತೆ ಟ್ರಾಫಿಕ್ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

    ಕಂಠೀರವ ಕ್ರೀಡಾಂಗಣದಿಂದ ಹೊರಡುವ ಮೆರವಣಿಗೆ ಕೆಜಿ ರೋಡ್ ಮೂಲಕ ಸಾಗಿ ಹಡ್ಸನ್ ಸರ್ಕಲ್, ಹಲಸೂರು ಗೇಟ್ ಪಿಎಸ್, ಪೊಲೀಸ್ ಕಾರ್ನರ್, ಮೈಸೂರ್ ಬ್ಯಾಂಕ್ ಸರ್ಕಲ್ ಮಾರ್ಗವಾಗಿ ಪ್ಯಾಲೇಸ್ ರೋಡ್ ಮೂಲಕ ಸಾಗಲಿದೆ.

    ಬಳಿಕ ಸಿಐಡಿ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಹೈಗ್ರೌಂಡ್ಸ್ ಪಿಎಸ್, ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಬಾಷಂ ಸರ್ಕಲ್, ಸ್ಯಾಂಕಿ ರೋಡ್, ಸರ್ಕಲ್ ಮಾರಮ್ಮ ಸರ್ಕಲ್, ಬಿಎಚ್‍ಇಐ ಮೂಲಕ ಯಶವಂತಪುರ ಫ್ಲೈಓವರ್ ಮೇಲೇರಿ ಮೆಟ್ರೋ ಬಳಿ ರೈಟ್ ಟರ್ನ್ ಪಡೆದು ಯಶವಂತಪುರ ಆರ್‍ಎಂಸಿ ಯಾರ್ಡ್ ಪಿಎಸ್ ಮಾರ್ಗವಾಗಿ ಗೊರುಗುಂಟೆಪಾಳ್ಯ ಸಿಗ್ನಲ್ ಬಳಿ ಎಡ ತಿರುವು ಪಡೆದು ಸಿಎಂಟಿಐ ಮಾರ್ಗ ಮೂಲಕ ಕಂಠೀರವ ಸ್ಟುಡಿಯೋ ತಲುಪಲಿದೆ.

    ನಾಳೆ ಬೆಳಗ್ಗೆ ಸುಮಾರು 10.30ರ ವೇಳೆಗೆ ಆರಂಭವಾಗುವ ಮೆರವಣಿಗೆಯಿಂದ ಸಂಚಾರದಲ್ಲಿ ಭಾರೀ ವ್ಯತ್ಯಯ ಆಗುವ ಲಕ್ಷಣಗಳು ಇದ್ದು, ಏರ್ ಪೋರ್ಟ್ ರಸ್ತೆ, ತುಮಕೂರು ರಸ್ತೆ, ಮೈಸೂರು ರಸ್ತೆ ಮಾರ್ಗದಲ್ಲಿ ಸಂಚಾರ ದಟ್ಟನೆ ಉಂಟಾಗುವ ಸಾಧ್ಯತೆ ಇದೆ. ಇದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸೋದು ಸೂಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿಯನ್ನು ಮದ್ವೆಗೆ ಒಪ್ಪಿಸಿದ್ದು ಹೇಗೆ? ಡಿಕೆ ಶಿವಕುಮಾರ್ ನೆನಪು ಮೆಲುಕು

    ಅಂಬಿಯನ್ನು ಮದ್ವೆಗೆ ಒಪ್ಪಿಸಿದ್ದು ಹೇಗೆ? ಡಿಕೆ ಶಿವಕುಮಾರ್ ನೆನಪು ಮೆಲುಕು

    ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ನಟ, ಮಾಜಿ ಸಚಿವ ಅಂಬರೀಶ್ ಅವರ ಅಂತಿಮ ದರ್ಶನ ಪಡೆದ ಸಚಿವ ಡಿ.ಕೆ.ಶಿವಕುಮಾರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಅಂಬರೀಶ್ ಅವರನ್ನು ಮದುವೆ ಹೇಗೆ ಒಪ್ಪಿಸಲಾಯ್ತು ಎಂಬ ಘಟನೆಯನ್ನು ಮಾಧ್ಯಮಗಳ ಜೊತೆ ಹಂಚಿಕೊಂಡರು.

    ಒಂದು ಸಾರಿ ಎಲ್ಲರು ಮಂಗಳೂರಿಗೆ ಹೋಗುತ್ತಿದ್ದರು. ದಿ.ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ನನ್ನನ್ನು ಕರೆದಿದ್ದರು. ನಾನು ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವನಾಗಿದ್ದರಿಂದ ಏನೋ ಒಂದು ಕಾರಣ ಹೇಳಿ ಹೋಗಿದ್ದೆ. ಅಂದು ಸಾಯಂಕಾಲ ನಾನು, ಶ್ರೀಕಂಠಯ್ಯನವರು, ಅಂಬರೀಶ್, ಅಪ್ಪಾಜಿ ನಾಯಕ್, ಶ್ರೀಪತಿರಾಯರು ಸೇರಿದಂತೆ ನಾಲ್ಕೈದು ಜನ ಮಾತನಾಡುತ್ತಾ ಕುಳಿತೆವು.

    ಅಂದು ಮದುವೆ ಆಗ್ತೀನಿ ಅಂತಾ ಹೇಳುತ್ತಾ ಅಂಬರೀಶ್ ದಿನಗಳನ್ನು ಮುಂದೂಡುತ್ತಿದ್ದರು. ಹೀಗಾಗಿ ಶ್ರೀಕಂಠಯ್ಯನವರು ಆ ವೇಳೆ ಅಂಬರೀಶ್ ಮದುವೆ ವಿಚಾರ ಪ್ರಸ್ತಾಪ ಮಾಡಿದರು. ಅಂಬರೀಶ್ ನಿನಗೆ 39 ವಯಸ್ಸು ಆಯ್ತು. ಯಾವಾಗ ಮದುವೆ ಆಗ್ತೀಯಾ ಹೇಳು ನೀನು ಎಂದು ಎತ್ತರದ ಧ್ವನಿಯಲ್ಲಿ ಕೇಳಿದರು. ಯಾಕೆ ಆ ಹುಡುಗಿಯನ್ನ (ಸುಮಲತಾ) ಕಾಡಸ್ತೀಯಾ? ಆದಷ್ಟು ಬೇಗ ಮದ್ವೆ ಆಗು ಎಂದು ಗದರಿದರು. ಇದನ್ನು ಓದಿ: ಅಂಬಿ ಬರೆದ ಮೊದಲ ಪ್ರೇಮ ಪತ್ರದಲ್ಲಿ ಏನಿತ್ತು?

    ನಿನ್ನ ಮದುವೆ ವಿಚಾರ ಮಾತಾಡೋದಕ್ಕೆ ಎಲ್ಲರನ್ನು ಕರೆಸಿದ್ದೇನೆ. ಇವತ್ತು ಎರಡರಲ್ಲಿ ಒಂದು ತೀರ್ಮಾನ ಆಗಬೇಕು ಎಂದು ಶ್ರೀಕಂಠಯ್ಯನವರು ಹೇಳಿದರು. ಚುಂಚನಗಿರಿ ಸ್ವಾಮಿಗಳು ಕೂಡ ಹೇಳಿದ್ದಾರೆ. ಅದ್ದರಿಂದಲೇ ನಾವೆಲ್ಲಾ ಇಲ್ಲಿ ಸೇರಿದ್ದೇವೆ ಎಂದು ಒತ್ತಾಯ ಮಾಡಿದರು. ಶ್ರೀಕಂಠಯ್ಯ ಅವರ ಮಾತಿಗೆ ಒಪ್ಪಿಗೆ ಸೂಚಿಸಿದ ಅಂಬಿ ಒಂದು ವಾರದಲ್ಲಿ ಅಂತಿಮ ತೀರ್ಮಾನ ತಿಳಿಸುವುದಾಗಿ ಹೇಳಿದರು.  ಇದನ್ನು ಓದಿ: ಪತ್ನಿಗೆ ಕಂಡೀಷನ್ ಹಾಕ್ತೀರಾ ಪ್ರಶ್ನೆಗೆ ಅಂಬಿಯ ಪ್ರತಿಕ್ರಿಯೆ ಹೀಗಿತ್ತು 

    ಅಂದು ನನಗೆ ಅಂಬರೀಶ್ ಅವರ ಬಳಿ ಜೋರು ಮಾಡಿ ಮಾತನಾಡುವ ಶಕ್ತಿ ಇರಲಿಲ್ಲ. ಆದರೆ ಶ್ರೀ ಕಂಠಯ್ಯನವರು ದೊಡ್ಡ ಜಗಳವನ್ನೆ ಮಾಡಿದ್ದರು. ಆಗ ಆಯ್ತು ಬಿಡಿ ಅಣಯ್ಯ ಎಂದು ಅಂಬಿ ಹೇಳಿದ್ದರು. ಆ ಬಳಿಕವೇ ಅವರಿಬ್ಬರ ಪ್ರೇಮದ ಬೆಸುಗೆಗೆ ಇಡೀ ಸಮಾಜ ಬೆಂಬಲಕ್ಕೆ ನಿಂತಿದ್ದನ್ನು ಕಂಡ ಅಂಬಿ ಮದುವೆಗೆ ಅಂತಿಮವಾಗಿ ಒಪ್ಪಿಗೆ ನೀಡಿದರು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪವನ್ ಕಲ್ಯಾಣ್ ಬಣ್ಣದ ಲೋಕಕ್ಕೆ ವಿದಾಯ

    ಪವನ್ ಕಲ್ಯಾಣ್ ಬಣ್ಣದ ಲೋಕಕ್ಕೆ ವಿದಾಯ

    ಹೈದರಾಬಾದ್: ತೆಲುಗಿನ ಪ್ರಖ್ಯಾತ ನಟ ಪವನ್ ಕಲ್ಯಾಣ್ ಅವರು ತಮ್ಮ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದಾರೆ.

    ಪವನ್ ಕಲ್ಯಾಣ್ ಅವರು ಮುಂದಿನ ಚಿತ್ರದ ಬಗ್ಗೆ ಸಾಕಷ್ಟು ಗಾಸಿಪ್ ಗಳು ಹರಿದಾಡಿದ್ದು, ಇದೀಗ ಮುಂದಿನ ಚಿತ್ರಕ್ಕೆ ಸಹಿ ಮಾಡಿಲ್ಲ ಅಂತ ಹೇಳುವ ಮೂಲಕ ಊಹಾಪೋಹಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್ ನಲ್ಲಿ ಒಂದು ಪತ್ರವನ್ನು ಪೋಸ್ಟ್ ಮಾಡಿರುವ ನಟ, ನಾನು ಒಂದು ಚಿತ್ರಕ್ಕೆ ಸಹಿ ಮಾಡಿರುವುದಾಗಿ ಸುದ್ದಿ ಹರಿದಾಡುತ್ತಿದೆ. ಆದ್ರೆ ಇದು ಶುದ್ಧ ಸುಳ್ಳಾಗಿದೆ. ನನಗೆ ಸಿನಿಮಾದಲ್ಲಿ ನಟಿಸಲು ಸಮಯವಿಲ್ಲ. ಹೀಗಾಗಿ ನಾನು ಯಾವುದೇ ಚಿತ್ರದಲ್ಲಿ ನಟನೆ ಮಾಡುವುದಿಲ್ಲ. ಬದಲಾಗಿ ನನ್ನನ್ನು ನಾನು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ. ನನ್ನ ಉಳಿದ ಜೀವನ ಜನರ ಸೇವೆಗೆ ಮುಡಿಪು ಎಂದು ಗಬ್ಬರ್ ಸಿಂಗ್ ಪವನ್ ಕಲ್ಯಾಣ್ ಹೇಳಿದ್ದಾರೆ.

    ಖುಷಿ, ಅತ್ತಾರಿಂಟಿಕಿ ದಾರೇದಿ, ಗಬ್ಬರ್ ಸಿಂಗ್ ಸಿನಿಮಾಗಳ ಮೂಲಕ ಮನೆ ಮಾತಾಗಿದ್ದ ನಟ, 2014ರಿಂದ ಜನಸೇನಾ ಪಕ್ಷದ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಿಶ್ಚಿತಾರ್ಥ ಮಾಡಿಕೊಂಡ ಸಿಸಿಎಲ್ ಸ್ಟಾರ್ ಆಟಗಾರ ರಾಜೀವ್

    ನಿಶ್ಚಿತಾರ್ಥ ಮಾಡಿಕೊಂಡ ಸಿಸಿಎಲ್ ಸ್ಟಾರ್ ಆಟಗಾರ ರಾಜೀವ್

    ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಪರವಾಗಿ ಆಡುತ್ತಿದ್ದ ಆಟಗಾರ, ಸ್ಯಾಂಡಲ್‍ವುಡ್ ಕಲಾವಿದ ರಾಜೀವ್ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಬೆಂಗಳೂರು ಮೂಲದ ರೇಷ್ಮಾ ಅವರ ಜೊತೆ ರಾಜೀವ್ ನಿಶ್ಚಿತಾರ್ಥ ನೆರವೇರಿದೆ. ರಾಜೀವ್ ಹಾಗೂ ರೇಷ್ಮಾ ಅವರ ನಿಶ್ಚಿತಾರ್ಥಕ್ಕೆ ಸ್ಯಾಂಡಲ್‍ವುಡ್ ತಾರೆಯರು ಶುಭಾಶಯ ಕೋರಿದ್ದಾರೆ. ರಾಜೀವ್ ಸ್ಯಾಂಡಲ್‍ವುಡ್‍ಗಿಂತ ಸಿಸಿಎಲ್ ಟೂರ್ನಿಯಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದಾರೆ.

    ರಾಜೀವ್ ಮದುವೆಯಾಗುತ್ತಿರುವ ರೇಷ್ಮಾ ಅವರು ಬೆಂಗಳೂರು ಮೂಲದವರಾಗಿದ್ದು, ದಯಾನಂದ ಸಾಗರ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ್ದಾರೆ ಎನ್ನಲಾಗಿದೆ. ರಾಜೀವ್ ಹಾಗೂ ರೇಷ್ಮಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ನಗರದ ಪೈವಿಸ್ತಾ ಕನ್ವಂಷನ್ ಹಾಲ್‍ನಲ್ಲಿ ನಡೆದಿದೆ.

    ಕಿಚ್ಚ ಸುದೀಪ್ ನೇತೃತ್ವದ ತಂಡದಲ್ಲಿ ರಾಜೀವ್ ಕ್ರಿಕೆಟ್ ಆಟವಾಡುತ್ತಿದ್ದಾರೆ. ಸುದೀಪ್ ತಮ್ಮ ಗೆಳೆಯ ಕೂಡ ರಾಜೀವ್ ಅವರ ವೃತ್ತಿ ಜೀವನದಲ್ಲಿ ಹಾಗೂ ಚಿತ್ರಗಳಿಗೆ ಬೆಂಬಲ ನೀಡುತ್ತಾರೆ. ಸದ್ಯ ರಾಜೀವ್ ನಿಶ್ಚಿತಾರ್ಥಕ್ಕೆ ಸುದೀಪ್ ಅವರ ಪತ್ನಿ ಪ್ರಿಯಾ ಅವರು ಹೋಗಿ ನವಜೋಡಿಗೆ ಶುಭಾಶಯ ತಿಳಿಸಿದ್ದಾರೆ.

    ಸುದೀಪ್ ಹೈದರಾಬಾದ್‍ನಲ್ಲಿ ‘ಪೈಲ್ವಾನ್’ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ಕಾರಣ ಅವರು ರಾಜೀವ್ ನಿಶ್ಚಿತಾರ್ಥಕ್ಕೆ ಆಗಮಿಸಲು ಸಾಧ್ಯವಾಗಿರಲಿಲ್ಲ. ಆದರೆ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ರಾಜೀವ್ ಹಾಗೂ ರೇಷ್ಮಾ ಅವರ ಫೋಟೋವನ್ನು ಹಾಕಿ ಶುಭಾಶಯ ತಿಳಿಸಿದ್ದಾರೆ.

    ರಾಜೀವ್ ಅವರ ನಿಶ್ಚಿತಾರ್ಥದಲ್ಲಿ ಅವರ ಆಪ್ತ ಸ್ನೇಹಿತ, ನಟ ಪ್ರದೀಪ್ ಆಗಮಿಸಿದ್ದರು. ರಾಜೀವ್ ಹಾಗೂ ಪ್ರದೀಪ್ ಒಂದೇ ತಂಡದಲ್ಲಿ ಆಟವಾಡಿದ್ದಾರೆ. ಸದ್ಯ ಪ್ರದೀಪ್ ಅವರು ಕೂಡ ರಾಜೀವ್ ನಿಶ್ಚಿತಾರ್ಥದಲ್ಲಿ ಭಾಗವಹಿಸಿ ಗೆಳೆಯನಿಗೆ ಶುಭ ಕೋರಿದ್ದಾರೆ. ಅಲ್ಲದೇ ಕಿರುತೆರೆ ಖ್ಯಾತ ನಟ, ಬಿಗ್ ಬಾಸ್ ಸ್ಪರ್ಧಿ ಜಗನ್ ಅವರು ರಾಜೀವ್ ಅವರ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದಾರೆ.

    ರಾಜೀವ್ ಸ್ಯಾಂಡಲ್‍ವುಡ್‍ನಲ್ಲಿ ಪೋಷಕ ನಟನಾಗಿ ಮಿಂಚಿದ್ದಾರೆ. ‘ಉಸಿರೇ ಉಸಿರೇ’ ಚಿತ್ರದಲ್ಲಿ ನಾಯಕನಾಗಿ ನಟಿಸಿ, ‘ಜಿಂದಗಿ’, ಆರ್‍ಎಕ್ಸ್ ಸೂರಿ’, ‘ಅಮವಾಸ್ಯೆ’, ‘ಬೆಂಗಳೂರು 560023’, ಚಿತ್ರದಲ್ಲಿ ನಟಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪ್ರೆಸೆಂಟ್ಸ್ ಪ್ರೊಡಕ್ಷನ್ ನಂ.1- ಅಪ್ಪನಾಗುವ ಸಂಭ್ರಮದಲ್ಲಿ ರಿಷಬ್ ಶೆಟ್ಟಿ

    ಪ್ರೆಸೆಂಟ್ಸ್ ಪ್ರೊಡಕ್ಷನ್ ನಂ.1- ಅಪ್ಪನಾಗುವ ಸಂಭ್ರಮದಲ್ಲಿ ರಿಷಬ್ ಶೆಟ್ಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಾವು ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಡದಿಯೊಂದಿಗಿರುವ ಫೋಟೋ ಪೋಸ್ಟ್ ಮಾಡಿರುವ ರಿಷಬ್, `ಪ್ರಗತಿ ರಿಷಬ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಪ್ರೆಸೆಂಟ್ಸ್ ಪ್ರೊಡಕ್ಷನ್ ನಂ. 1′ ಎಂದು ಬರೆದುಕೊಂಡಿದ್ದಾರೆ.

    `ಸರ್ಕಾರಿ ಹಿ. ಪ್ರಾ. ಶಾಲೆ ಕಾಸರಗೋಡು’ ಸಿನಿಮಾ ಮೂಲಕ ಜಾದೂ ಮಾಡಿದ್ದ ರಿಷಬ್, ಮಕ್ಕಳ ಮೂಲಕ ಕನ್ನಡ ಪ್ರೀತಿಯನ್ನು ಮೆರೆದಿದ್ದರು. ಕರ್ನಾಟಕದ ಎಲ್ಲ ಭಾಗಗಳ ಜನರೂ ಈ ಚಿತ್ರವನ್ನು ಪ್ರೀತಿಯಿಂದ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ಕಿರಿಕ್ ಪಾರ್ಟಿ ಯಶಸ್ವಿನ ಬಳಿಕ ಮತ್ತೊಂದು ಗೆಲುವು ಪಡೆದಿದ್ದರು.

    ಅಂದ ಹಾಗೇ 2017 ಫೆಬ್ರವರಿಯಲ್ಲಿ ರಿಷಬ್ ಶೆಟ್ಟಿ ಪಗ್ರತಿ ಅವರ ವಿವಾಹ ನಡೆದಿತ್ತು. ಮದುವೆಯ ಬಳಿಕ ತಮ್ಮ ಪ್ರೇಮ್ ಕಹಾನಿಯ ಗಟ್ಟು ಬಿಚ್ಚಿಟ್ಟಿದ್ದ ರಿಷಬ್, ಅಂದು ಕೈ ಕುಲುಕಿ ಹೋದವಳನ್ನೇ ಕೈ ಹಿಡಿಯೋ ಭಾಗ್ಯ ನನ್ನದಾಯ್ತು ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಟ ವಿನೋದ್ ರಾಜ್ ಬಳಿಯಿಂದ ಕಳವುಗೈದ ಖದೀಮ ಅರೆಸ್ಟ್

    ನಟ ವಿನೋದ್ ರಾಜ್ ಬಳಿಯಿಂದ ಕಳವುಗೈದ ಖದೀಮ ಅರೆಸ್ಟ್

    ಬೆಂಗಳೂರು: ನಗರದ ಹೊರವಲಯದ ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖತರ್ನಾಕ್ ಓಜಿಕುಪ್ಪಂ ಗ್ಯಾಂಗ್‍ನ ಓರ್ವ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.

    ಕಳೆದ ತಿಂಗಳು ಅಭಿಮಾನಿ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್‍ರನ್ನು ಕಾರಿನಲ್ಲಿ ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿ ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ.

    ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ರಾಯಲ್ ಜೀವನ ಮಾಡುತ್ತಿದ್ದ. ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು ಬ್ರ್ಯಾಂಡೆಂಡ್ ಬರೋಬ್ಬರಿ 5 ರಿಂದ 8 ಸಾವಿರ ಬೆಲೆ ಬಾಳುವಂತದ್ದಾಗಿದೆ. ಶೂಗಳು, ಗಾಗಲ್ಸ್ ಹಾಕಿಕೊಂಡು ಹೀರೋ ರೇಂಜೆ ಗೆ ಬಿಲ್ಡಪ್ ಕೊಟ್ಟು ಐಶಾರಾಮಿ ಜೀವನ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಸದ್ಯಕ್ಕೆ ಓಜಿಕುಪ್ಪಂ ಗ್ಯಾಂಗ್‍ನ ಓರ್ವ ಅಂದರ್ ಆಗಿದ್ದು, ಮತ್ತಷ್ಟು ಖದೀಮರಿಗೆ ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದ ತಂಡ ಬಲೆ ಬೀಸಿದೆ. ಆರೋಪಿ ಬಂಧನದಿಂದ ನಟ ವಿನೋದ್ ರಾಜ್ ಸಂತಸ ವ್ಯಕ್ತಪಡಿಸಿದ್ದು, ಮುಂದೆ ಈ ಖದೀಮರ ಗ್ಯಾಂಗ್ ಯಾರಿಗೂ ದ್ರೋಹ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಹಣ ರಿಕವರಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯಜಮಾನ ಚಿತ್ರದ ನಂತ್ರ ಕನ್ನಡದ ಖ್ಯಾತ ನಟನ ಜೊತೆ ರಶ್ಮಿಕಾ ರೊಮ್ಯಾನ್ಸ್

    ಯಜಮಾನ ಚಿತ್ರದ ನಂತ್ರ ಕನ್ನಡದ ಖ್ಯಾತ ನಟನ ಜೊತೆ ರಶ್ಮಿಕಾ ರೊಮ್ಯಾನ್ಸ್

    ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ‘ಯಜಮಾನ’ ಚಿತ್ರದ ನಂತರ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಜೊತೆ ಕನ್ನಡ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

    ಇತ್ತೀಚೆಗೆ ರಶ್ಮಿಕಾ ಮಂದಣ್ಣ ಜಯನಗರದ ಮಾಲ್ ಉದ್ಘಾಟನೆಗೆ ಬಂದಿದ್ದರು. ಈ ವೇಳೆ ಮಾಧ್ಯಮದವರು ನಿಮ್ಮ ಮುಂದಿನ ಕನ್ನಡ ಸಿನಿಮಾ ಯಾವುದು ಎಂದು ಪ್ರಶ್ನಿಸಿದ್ದರು. ಆಗ ರಶ್ಮಿಕಾ ಒಂದು ಸೂಪರ್ ಸಿನಿಮಾ ಬರುತ್ತಿದೆ. ಅದನ್ನ ನಾನು ಹೇಳಲ್ಲ. ಪ್ರೊಡಕ್ಷನ್ ಹೌಸ್‍ನವರೇ ಹೇಳಲಿ ಎಂದು ಉತ್ತರಿಸಿದ್ದರು.

    ಸದ್ಯ ರಶ್ಮಿಕಾ ಅವರ ಮುಂದಿನ ಕನ್ನಡ ಚಿತ್ರ ಯಾವುದೆಂದು ಬಹಿರಂಗವಾಗಿದೆ. ರಶ್ಮಿಕಾ ನಟ ಧ್ರುವ ಸರ್ಜಾ ಅವರ ಬಹುನಿರೀಕ್ಷಿತ ‘ಪೊಗರು’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಈ ವಿಷಯದ ಬಗ್ಗೆ ಚಿತ್ರತಂಡ ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

    ಈ ಚಿತ್ರವನ್ನು ನಂದಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ರಶ್ಮಿಕಾ ಹೇಳಿದ್ದ ಸೂಪರ್ ಚಿತ್ರ ಇದೆನಾ ಅಥವಾ ಬೇರೆ ಚಿತ್ರದ ಬಗ್ಗೆ ಮಾತನಾಡಿದ್ದಾರಾ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಈ ಚಿತ್ರದ ಕತೆಯನ್ನು ಧ್ರುವ ಸರ್ಜಾ ಅವರ ಮಾವ ಅರ್ಜುನ್ ಸರ್ಜಾ ಬರೆದಿದ್ದಾರೆ. ಈವರೆಗೂ ಚಿತ್ರದ ನಾಯಕಿ ಯಾರು ಎನ್ನುವುದನ್ನು ನಿರ್ಧರಿಸಿರಲಿಲ್ಲ. ಸದ್ಯ ಈಗ ರಶ್ಮಿಕಾ ಚಿತ್ರದ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

    ಸದ್ಯ ಪೊಗರು ಚಿತ್ರದ ಮೊದಲ ಶೂಟ್ ಮುಗಿದಿದೆ. ಈ ಚಿತ್ರದಲ್ಲಿ ಧ್ರುವ ಶಾಲೆ ಹುಡುಗನ ಲುಕ್‍ನಲ್ಲಿ ಶೂಟಿಂಗ್ ಮಾಡಿ ಮುಗಿಸಿದ್ದಾರೆ. ನವೆಂಬರ್ 20ರಂದು ಎರಡನೇ ಶೆಡ್ಯೂಲ್ ಆರಂಭವಾಗಲಿದೆ. ಎರಡನೇ ಶೆಡ್ಯೂಲ್‍ನಲ್ಲಿ ರಶ್ಮಿಕಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುರುಪ್ರಸಾದ್ ವಿರುದ್ಧ ಸಿಡಿದು ಸಂಗೀತಾ ಪರ ಡಾಲಿ ಧನಂಜಯ್ ಬ್ಯಾಟಿಂಗ್

    ಗುರುಪ್ರಸಾದ್ ವಿರುದ್ಧ ಸಿಡಿದು ಸಂಗೀತಾ ಪರ ಡಾಲಿ ಧನಂಜಯ್ ಬ್ಯಾಟಿಂಗ್

    ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ವಿರುದ್ಧ ನಟ ಧನಂಜಯ್ ಮತ್ತೆ ಸಿಡಿದಿದ್ದು, 2ನೇ ಸಲ ಚಿತ್ರದ ನಟಿ ಸಂಗೀತಾ ಭಟ್ ಪರ ಬ್ಯಾಟ್ ಬೀಸಿದ್ದಾರೆ.

    ನಟಿ ಸಂಗೀತಾ ಭಟ್ ವಿರುದ್ಧ ಹೇಳಿಕೆ ನೀಡಿದ್ದ ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಗುರುಪ್ರಸಾದ್‍ರ ಎಲ್ಲಾ ಹೇಳಿಕೆಗಳನ್ನು ನಾನು ವಿರೋಧಿಸುತ್ತೇನೆ. ಇವರ ಹೇಳಿಕೆಯಿಂದಾಗಿ ಸಂಗೀತಾ ಭಟ್ ಸೇರಿದಂತೆ ಎರಡನೇ ಸಲ ಚಿತ್ರದಲ್ಲಿ ಕೆಲಸಮಾಡಿದ್ದ ಎಲ್ಲರೂ ತೊಂದರೆ ಅನುಭವಿಸುವಂತಾಗಿದೆ ಎಂದರು.

    ನಾನು ಅವರ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ. ಆದರೂ ಸಹ 2ನೇ ಸಲ ಚಿತ್ರದಲ್ಲಿ ನಟಿಸಿದ್ದರಿಂದ ಈ ಬಗ್ಗೆ ಮಾತನಾಡಲು ಬಯಸುತ್ತೇನೆ. ಸಿನಿಮಾ ತಂಡದಲ್ಲಿ ಗುರುಪ್ರಸಾದ್ ಹೊರತು ಪಡಿಸಿ ಯಾರೂ ಸಹ ಸಣ್ಣ ತಪ್ಪು ಮಾಡಿಲ್ಲ. ಅಲ್ಲದೇ ನಿರ್ಧಿಷ್ಟ ವಿಷಯಕ್ಕೆ ನಿರ್ಮಾಪಕ ಯೋಗೇಶ್ ಗುರುಪ್ರಸಾದ್‍ಗೆ ಬೈದಿದ್ದರು ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ವಿರುದ್ಧ ಸಿಡಿದ ಸಂಗೀತಾ ಭಟ್ ಪತಿ

    ನಿಮಗೆ ನೈತಿಕತೆ ಇದ್ದಿದ್ದರೆ, ನೀವು ಈ ರೀತಿ ಮಾತನಾಡುತ್ತಿರಲಿಲ್ಲ. ಮನುಷ್ಯನಿಗೆ ಅಷ್ಟು ಸೇಡು ಇರಬಾರದು, ನೀವು ನಿಮ್ಮ ಸುತ್ತಮುತ್ತಲಿನ ನಾಲ್ಕು ಜನರನ್ನು ತುಳಿಯಲು ಯತ್ನಿಸುತ್ತಿದ್ದೀರಿ. ಆದರೆ ನಿಮ್ಮನ್ನು ಸಹ ತುಳಿಯುವವರೂ ಇರುತ್ತಾರೆ. ಇವಾಗಲಾದರೂ ನಾಲ್ಕು ಜನ ನಿಮ್ಮ ಪರವಾಗಿ ಮಾತನಾಡುವವರನ್ನು ಉಳಿಸಿಕೊಳ್ಳಿ. ಈ ರೀತಿಯ ವರ್ತನೆಯನ್ನು ಬಿಟ್ಟು ನೆಮ್ಮದಿಯಾಗಿ ಉಸಿರಾಡುವುದನ್ನು ಕಲಿತುಕೊಳ್ಳಲಿ ಎಂದು ಧನಂಜಯ್ ಕಿಡಿಕಾರಿದರು. ಇದನ್ನೂ ಓದಿ: ಸ್ವಂತ ಮಗಳನ್ನೇ ಗುರು ಮಧ್ಯರಾತ್ರಿ ಮನೆಯಿಂದ ಹೊರ ಹಾಕಿದ್ರು- ಮಾಜಿ ಪತ್ನಿ ಆರತಿ

    ಒಂದು ವರ್ಷದ ಹಿಂದೆ ಎರಡನೇ ಸಲ ಸಿನಿಮಾದ ವಿಚಾರಕ್ಕೆ ನನ್ನ ವಿರುದ್ಧ ಲೈವ್ ನಲ್ಲಿ ಹರಿಹಾಯ್ದಿದ್ದರು. ನನ್ನನ್ನು ಐರನ್ ಲೆಗ್, ಗೊಡ್ಡಹಸು ಎಂದು ನೇರವಾಗಿ ಆರೋಪಿಸುವ ಮೂಲಕ ಕೆಟ್ಟದಾಗಿ ಮಾತನಾಡಿದ್ದರು. ಅದು ಸಹ ಕಿರುಕುಳವಲ್ಲವೇ, ನಾನು ಸಹ ಅವರಿಂದ ಕಿರುಕುಳಕ್ಕೆ ಒಳಗಾಗಿದ್ದೇನೆ. ಎಲ್ಲರೂ ಅವರನ್ನು ಟಿವಿ ಪರದೆಯ ಮೇಲೆ ನೋಡಿರುತ್ತಾರೆ. ಆದರೆ ಅವರನ್ನು ನಾವು ತುಂಬಾ ಹತ್ತಿರದಿಂದ ನೋಡಿದ್ದೇವೆ. ಅವರು ಆಡುವ ಮಾತನ್ನು ಕೇಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಗುರುಪ್ರಸಾದ್-ಧನಂಜಯ್ ನಡುವಿನ ಗುದ್ದಾಟಕ್ಕೆ ಇದೇ ಕಾರಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • #MeToo ಅನ್ನೋದು ದೊಡ್ಡ ರೋಗ-ಶೃತಿ ಹರಿಹರನ್ ವಿರುದ್ಧ ಹಿರಿಯ ನಟ ರಾಜೇಶ್ ಕಿಡಿ

    #MeToo ಅನ್ನೋದು ದೊಡ್ಡ ರೋಗ-ಶೃತಿ ಹರಿಹರನ್ ವಿರುದ್ಧ ಹಿರಿಯ ನಟ ರಾಜೇಶ್ ಕಿಡಿ

    ಬೆಂಗಳೂರು: ದೇಶಾದ್ಯಂತ #MeToo ಗಾಳಿ ಹವಾ ಎದ್ದಿದ್ದು, ಇದೀಗ ಸ್ಯಾಂಡಲ್ ವುಡ್ ನಲ್ಲಿಯೂ #MeToo ಆರೋಪಗಳು ಒಂದೊಂದಾಗಿಯೇ ಹೊರಬರುತ್ತಿದೆ. ಸಂಜನಾ ಗಲ್ರಾಣಿಯ ಬೆನ್ನಲ್ಲೇ ನಟಿ ಶೃತಿ ಹರಿಹರನ್ ಅವರು ಇಂದು ನಟ ಅರ್ಜುನ್ ಸರ್ಜಾ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಹಿರಿಯ ನಟ ಹಾಗೂ ಅರ್ಜುನ್ ಸರ್ಜಾ ಅವರ ಮಾವ ರಾಜೇಶ್ ಅವರು ಶೃತಿ ಹರಿಹರನ್ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಜೇಶ್, ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನಗೆ ತಿಳಿದಿರುವಂತೆ ಅರ್ಜುನ್ ಅವರನ್ನು ಸುಮಾರು ವರ್ಷಗಳಿಂದ ನೋಡುತ್ತಿದ್ದೇನೆ. ಸೌಂದರ್ಯ ಹಾಗೂ ಇನ್ನಿತರ ಕಲಾವಿದರ ಜೊತೆ ಅಭಿನಯಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಇಂದಿನ ಅಲ್ಲ ಹಳೆಯ ಕನ್ನಡ ಹಿರೋಯಿನ್ ಗಳ ಜೊತೆ ಅರ್ಜುನ್ ನಟನೆ ಮಾಡಿದ್ದಾರೆ. ಆದ್ರೆ ಅವರ ವಿರುದ್ಧ ಒಂದೂ ದೂರು ಇಲ್ಲ. ಇದೊಂದು ರೋಗ ಶುರುವಾಗಿದೆ. 8-10 ವರ್ಷದ ಹಿಂದಿನದ್ದನ್ನು ತೆಗೆದು ರಗಳೆ ಮಾಡುವುದು ಸರಿಯೇ? ಈ ಮೂಲಕ ಸಿನಿಮಾ ರಂಗಕ್ಕೆ ಕೆಟ್ಟ ಹೆಸರು. ಸಿನಿಮಾ ಹೀರೋಗಳು ಕೆಟ್ಟವರು ಅಂತ ಆಪಾದನೆ ಮಾಡುವುದು ಯಾವ ನ್ಯಾಯ ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು #MeToo- ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ

    ಅರ್ಜುನ್ ಅಂತ ಹುಡುಗ ಅಲ್ಲ. ಒಳ್ಳೆಯ ಹುಡುಗ. ಸಂಭಾವಿತ ವ್ಯಕ್ತಿ ನಮ್ಮ ಅರ್ಜುನ್. ಇನ್ನೊಬ್ಬರ ಬಗ್ಗೆ ಕೆಣಕೋದಾಗಲಿ, ಆಪಾದನೆ ಮಾಡೋದಾಗಲಿ ಅಥವಾ ಕಾಮುಕ ದೃಷ್ಟಿಯಿಂದ ನೋಡೋದಾಗಲಿ ಸರಿಯಲ್ಲ ಅಂತ ಶೃತಿ ವಿರುದ್ಧ ರಾಜೇಶ್ ಕೆಂಡಾಮಂಡಲರಾಗಿದ್ದಾರೆ.

    ನಿನ್ನೆ-ಮೊನ್ನೆ ಬಂದ ನಟಿಯರು. ಇವರಿಗೆಲ್ಲ ಸರಿಯಾಗಿ ಕನ್ನಡ ಮಾತಾಡೋಕೆ ಬರಲ್ಲ. ಇವರೆಲ್ಲ ಅರ್ಜುನ್ ಮೇಲೆ ಏನು ಆಪಾದನೆ ಮಾಡೋದು. ಇವಳ ಮೇಲೆ ಕೇಸ್ ಹಾಕಿ ಮಾನನಷ್ಟ ಮೊಕದ್ದಮೆ ಹೂಡಲು ಬಾಕಿಯಿದೆ ಅಂತ ಹೇಳಿದ್ರು.

    8-10 ವರ್ಷದ ಹಿಂದಿನ ಕೇಸನ್ನು ಮೆಲುಕು ಹಾಕುವ ಇವರು ಆ ಸಂದರ್ಭಗಳಲ್ಲಿ ಯಾಕೆ ಹೇಳಿಲ್ಲ ಅಂತ ಕಿಡಿಕಾರಿದ್ರು. ಇದನ್ನೂ ಓದಿ: #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Pvb9crCfEe4