Tag: ನಟ

  • ಐದು ವಿವಾದಿತ ಲಿಪ್‍ಲಾಕ್ ಸೀನ್- ಮಗಳನ್ನೇ ಕಿಸ್ ಮಾಡಿ ಸುದ್ದಿಯಾಗಿದ್ದ ಖ್ಯಾತ ನಿರ್ದೇಶಕ

    ಐದು ವಿವಾದಿತ ಲಿಪ್‍ಲಾಕ್ ಸೀನ್- ಮಗಳನ್ನೇ ಕಿಸ್ ಮಾಡಿ ಸುದ್ದಿಯಾಗಿದ್ದ ಖ್ಯಾತ ನಿರ್ದೇಶಕ

    ಮುಂಬೈ: ಬಾಲಿವುಡ್ ಚಿತ್ರಗಳಲ್ಲಿ ಲಿಪ್‍ಲಾಕ್ ಸೀನ್‍ನಲ್ಲಿ ಹಲವಾರು ಸೆಲೆಬ್ರಿಟಿಗಳು ವಿವಾದಕ್ಕೆ ಸಿಲುಕಿದ್ದಾರೆ. ಹಲವಾರು ಕಲಾವಿದರು ಕಿಸ್ಸಿಂಗ್ ಸೀನ್‍ನಿಂದ ಸುದ್ದಿ ಆಗಿದ್ದಲ್ಲದೇ ವಿವಾದಕ್ಕೂ ಸಿಲುಕಿದ್ದಾರೆ. ಕಿಸ್ ಮಾಡಿ ವಿವಾದಕ್ಕೆ ಸಿಲುಕಿದ ಬಾಲಿವುಡ್ ತಾರೆಯರ ಬಗ್ಗೆ ಮಾಹಿತಿ;

    1. ದೀಪಿಕಾ ಪಡುಕೋಣೆ- ಸಿದ್ಧಾರ್ಥ್ ಮಲ್ಯ:
    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ಉದ್ಯಮಿ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ 2013ರಲ್ಲಿ ಇಬ್ಬರು ಒಬ್ಬರನ್ನೊಬ್ಬರು ಕಿಸ್ ಮಾಡಿದ್ದಕ್ಕೆ ವಿವಾದಕ್ಕೆ ಸಿಲುಕಿದ್ದರು. ಆ ವೇಳೆ ಐಪಿಎಲ್ ನಡೆಯುತ್ತಿದ್ದು, ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯುತ್ತಿತ್ತು. ದೀಪಿಕಾ ಹಾಗೂ ಸಿದ್ಧಾರ್ಥ್ ಇಬ್ಬರು ಒಟ್ಟಿಗೆ ಮ್ಯಾಚ್ ವೀಕ್ಷಿಸುತ್ತಿದ್ದರು. ಆಗ ಆರ್ ಸಿಬಿ ತಂಡ ಪಂದ್ಯದಲ್ಲಿ ಗೆಲುವು ಕಂಡಿತ್ತು. ಈ ವೇಳೆ ಸಿದ್ಧಾರ್ಥ್ ದೀಪಿಕಾರನ್ನು ಹಿಡಿದು ಕಿಸ್ ಮಾಡಿದ್ದರು.

    2. ಮಹೇಶ್ ಭಟ್- ಪೂಜಾ ಭಟ್:
    ನಿರ್ದೇಶಕ ಹಾಗೂ ನಿರ್ಮಾಪಕರಾದ ಮಹೇಶ್ ಭಟ್ ತಮ್ಮ ಜೀವನದಲ್ಲಿ ಯಾವಾಗಲೂ ವಿವಾದದಲ್ಲೇ ಸಿಲುಕಿದ ವ್ಯಕ್ತಿ. ಮಹೇಶ್ ಭಟ್ ಒಮ್ಮೆ ತಮ್ಮ ಮಗಳು ಪೂಜಾ ಭಟ್ ಜೊತೆ ಲಿಪ್‍ಲಾಕ್ ಮಾಡಿ ವಿವಾದಕ್ಕೆ ಸಿಲುಕಿದ್ದರು. ಸ್ಟಾರ್ ದಷ್ಟ್ ಮ್ಯಾಗಜೀನ್‍ಗಾಗಿ ಮಹೇಶ್ ಹಾಗೂ ಪೂಜಾ ಲಿಪ್ ಲಾಕ್ ಸೀನ್ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋ ಮ್ಯಾಗಜೀನ್ ಕವರ್ ಪೇಜ್‍ನಲ್ಲಿ ಹಾಕಲಾಗಿತ್ತು. ಆಗ ಈ ಫೋಟೋ ಸಾಕಷ್ಟು ವಿವಾದ ಆಗಿತ್ತು. ಫೋಟೋ ಅಲ್ಲದೇ ಮಹೇಶ್ ಅವರ ಹೇಳಿಕೆಯೂ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಪೂಜಾ ನನ್ನ ಮಗಳು ಆಗಿಲ್ಲದಿದ್ದರೆ ನಾನು ಆಕೆಯನ್ನೇ ಮದುವೆಯಾಗುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು.

    3. ರಾಖಿ ಸಾವಂತ್- ಮೀಕಾ ಸಿಂಗ್:
    2007ರಲ್ಲಿ ರಾಖಿ ಸಾವಂತ್ ಅವರು ಮೀಕಾ ಸಿಂಗ್ ಅವರ ಬರ್ತ್ ಡೇ ಪಾರ್ಟಿಗೆ ಹೋಗಿದ್ದರು. ಈ ವೇಳೆ ಮೀಕಾ, ರಾಖಿ ಸಾವಂತ್‍ನನ್ನು ಬಲವಂತವಾಗಿ ಎಳೆದು ಕಿಸ್ ಮಾಡಿದ್ದಾರೆ. ಈ ಕಿಸ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಅಲ್ಲದೇ ರಾಖಿ ಸಾವಂತ್, ಮೀಕಾ ಅವರ ಮೇಲೆ ರೊಚ್ಚಿಗೆದಿದ್ದರು. ಸದ್ಯ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟೀಲೆರಿತ್ತು.

    4. ಬಿಪಾಶಾ ಬಸು- ಕ್ರಿಸ್ಟಿಯಾನೋ ರೋನಲ್ಡೋ:
    ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಲ್ಡೋ ಅವರು ಬಾಲಿವುಡ್ ಬೆಡಗಿ ಬಿಪಾಶಾ ಬಸುಗೆ ಸಾರ್ವಜನಿಕವಾಗಿ ಕಿಸ್ ಮಾಡಿದ್ದರು. ಭಾರತೀಯ ಮಾಧ್ಯಮಗಳಲ್ಲೂ ಈ ವಿವಾದ ಸಾಕಷ್ಟು ಸದ್ದು ಮಾಡಿತ್ತು. ಕ್ರಿಸ್ಟಿಯಾನೋ ಹಾಗೂ ಬಿಪಾಶಾ ಅವರ ಕಿಸ್ ವಿವಾದದ ಕಾರಣದಿಂದಾಗಿ ಜಾನ್ ಅಬ್ರಹಾಂ ನಟಿ ಬಿಪಾಶಾ ಜೊತೆ ಬ್ರೇಕಪ್ ಮಾಡಿಕೊಂಡಿದ್ದರು.

    5. ಲೀನಾ ಚಂದ್ರವರ್ಕರ್ – ರಾಮ್ ಜೇಟ್ಮಲಾನಿ: 2015ರಲ್ಲಿ ದೇಶದ ಖ್ಯಾತ ವಕೀಲ ರಾಮ್ ಜೇಟ್ಮಲಾನಿ ಅವರು ಒಂದು ಅವಾರ್ಡ್ ಕಾರ್ಯಕ್ರಮದಲ್ಲಿ ಎಲ್ಲರ ಸಮ್ಮುಖದಲ್ಲಿ ಖ್ಯಾತ ನಟಿ ಲೀನಾ ಅವರಿಗೆ ಸಖತ್ ಜೋಶ್‍ಯಿಂದ ಕಿಸ್ ಮಾಡಿದ್ದರು. ಈ ಕಿಸ್ ಕೂಡ ಸಾಕಷ್ಟು ವಿವಾದ ಸೃಷ್ಟಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಿಮ್ ಟ್ರೈನರ್ ಕಿಡ್ನಾಪ್, ಹಲ್ಲೆ ಕೇಸ್ – ವಿಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ

    ಜಿಮ್ ಟ್ರೈನರ್ ಕಿಡ್ನಾಪ್, ಹಲ್ಲೆ ಕೇಸ್ – ವಿಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ

    ಬೆಂಗಳೂರು: ನಟ ದುನಿಯಾ ವಿಜಿ ಮೇಲೆ ದಾಖಲಾಗಿರುವ ಹಲ್ಲೆ ಪ್ರಕರಣದ ವಿಚಾರಣೆ ಡಿಸೆಂಬರ್ 12ಕ್ಕೆ ಮುಂದೂಡಿಕೆಯಾಗಿದೆ.

    ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಇಂದು 8 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಜಿಗೆ ಷರತ್ತುಬದ್ಧ ಜಾಮೀನು ದೊರೆತಿದ್ದು, ಜಾಮೀನಿನ ನಂತರದ ಮೊದಲ ವಿಚಾರಣೆ ಇಂದು ನಡೆದಿತ್ತು. ಹೀಗಾಗಿ ವಿಜಿ ಇಂದು ನ್ಯಾ.ಮಹೇಶ್ ಬಾಬು ಮುಂದೆ ಹಾಜರಾಗಿದ್ದರು.

    ಖುದ್ದು ಹಾಜರಿಗೆ ಸೂಚನೆ ಇಲ್ಲದಿದ್ದರೂ ಕೋರ್ಟ್ ಗೆ ಹಾಜರಾಗಿದ್ದು, ವಿಜಿ ಪರ ವಕೀಲರು ಚಾರ್ಜ್ ಶೀಟ್ ಹಾಕುವವರೆಗೂ ಕೋರ್ಟ್ ಗೆ ಖುದ್ದು ಹಾಜರಾತಿಗೆ ವಿನಾಯಿತಿ ಕೇಳಿದ್ದಾರೆ. ಆದ್ರೆ ನ್ಯಾ. ಮಹೇಶ್ ಬಾಬು ಅವರು ವಕೀಲರ ಮನವಿಯನ್ನು ತಿರಸ್ಕರಿಸಿದ್ದಾರೆ. ಅಲ್ಲದೇ ಡಿಸೆಂಬರ್ 12 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ, ಮುಂದಿನ ವಿಚಾರಣೆ ವೇಳೆ ಹಾಜರಾಗಲು ಸೂಚನೆ ನೀಡಿದ್ದಾರೆ.

    ಕಾನೂನಿನ ಮೇಲೆ ತಮಗಿರುವ ಗೌರವ ವ್ಯಕ್ತಪಡಿಸಲು ವಿಜಿ ಇಂದು ಕೋರ್ಟ್ ಮುಂದೆ ಹಾಜರಾಗಿದ್ದರು. ದುನಿಯಾ ವಿಜಿ ಜೊತೆ ಇತರೆ ಮೂವರು ಆರೋಪಿಗಳು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೋರ್ಟ್ ನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿಜಿ ನಿರಾಕರಿಸಿದರು.

    ಏನಿದು ಪ್ರಕರಣ?
    ಸೆಪ್ಟೆಂಬರ್ 22ರ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದರು. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ ಆರೋಪ ಕೇಳಿ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಧರ್ಮಸ್ಥಳಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ

    ಧರ್ಮಸ್ಥಳಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ

    ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಕಮ್ಮಟದ ಸಮಾರೋಪದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾಲ್ಗೊಂಡಿದ್ದಾರೆ.

    ಏಳು ದಿನಗಳ ಕಾರ್ಯಕ್ರಮದಲ್ಲಿ 300 ಭಜನಾ ತಂಡಗಳು ಭಾಗವಹಿಸಿದ್ದವು. ಸಮಾರೋಪದ ಅಂಗವಾಗಿ ಭಜನಾ ತಂಡಗಳ 3 ಸಾವಿರಕ್ಕೂ ಹೆಚ್ಚು ಭಜನಾ ಪಟುಗಳಿಂದ ಭಜನೆಯೊಂದಿಗೆ ನಡೆದ ಶೋಭಾಯಾತ್ರೆ ಅಮೋಘವಾಗಿತ್ತು.

    ಈ ಕಾರ್ಯಕ್ರಮದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಆಕರ್ಷಣೆಯಾಗಿದ್ದರು. ಭಜನಾ ತಂಡಗಳ ಜೊತೆ ಪುನೀತ್ ರಾಜ್‍ಕುಮಾರ್, ರಾಘವೇಂದ್ರ ಸ್ವಾಮಿಗಳ ಕೀರ್ತನೆಯನ್ನು ಹಾಡಿದರು. ಅಲ್ಲದೇ ಪುನೀತ್ ತಮ್ಮ ತಂದೆ ರಾಜಕುಮಾರ್ ಜೊತೆ ಧರ್ಮಸ್ಥಳಕ್ಕೆ ಬಂದ ನೆನಪುಗಳನ್ನು ಹಂಚಿಕೊಂಡರು.

    ಧರ್ಮಸ್ಥಳದ ನನ್ನ ಹಾಗೂ ನನ್ನ ತಂದೆಯ ನಂಟು, ನೆನೆಪು ಸಾಕಷ್ಟು ಇದೆ. ಇಲ್ಲಿ ಚಿತ್ರೀಕರಣ ಮಾಡುವಾಗ ನನ್ನ ತಂದೆ ಜೊತೆ ಬಂದ ನೆನೆಪಿದೆ ಹಾಗೂ ಮಂಜುನಾಥನ ಆಶೀರ್ವಾದ ಪಡೆಯೋಕೆ ಪ್ರತಿ ಎರಡು ವರ್ಷಕ್ಕೊಮ್ಮೆ ಬರುತ್ತೇನೆ. ಆದರೆ ಸಾಂಸ್ಕೃತಿಕ, ಭಜನಾ ಕಾರ್ಯಕ್ರಮಕ್ಕೆ ಬಂದಿದ್ದು ಇದೇ ಮೊದಲ ಬಾರಿ ಬಂದಿದ್ದು ಎಂದು ಹೇಳಿದರು.

    ಅಷ್ಟೇ ಅಲ್ಲದೇ ಪುನೀತ್ ರಾಜ್‍ಕುಮಾರ್ ಧರ್ಮಸ್ಥಳ ಹಾಗೂ ಧರ್ಮಧಿಕಾರಿ ವೀರೇಂದ್ರ ಹೆಗ್ಡೆ ಬಗ್ಗೆ ಮಾತನಾಡಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಪುನೀತ್ ತಮ್ಮ ತಂದೆ ಅವರ ಚಿತ್ರದ ‘ಹಾಲಲ್ಲಾದರು ಹಾಕು ನೀರಲ್ಲಾದರೂ ಹಾಕು ರಾಘವೇಂದ್ರ..’ ಹಾಡನ್ನು ಕಾರ್ಯಕ್ರಮದಲ್ಲಿ ಹಾಡಿದರು. ಪುನೀತ್ ಹಾಡಿಗೆ ನೆರೆದಿದ್ದರವರು ಕೂಡ ದನಿಗೂಡಿಸಿರುವುದು ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ದರ್ಶನ್ ಸಿಡಿಮಿಡಿ!

    ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ದರ್ಶನ್ ಸಿಡಿಮಿಡಿ!

    ಮೈಸೂರು: ಕಾರು ಅಪಘಾತಕ್ಕೀಡಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಟ ದರ್ಶನ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೇ ದಾಸ ಮಾಧ್ಯಮಗಳ ವಿರುದ್ಧ ಗರಂ ಆದ್ರು.

    ಸುದ್ದಿಗಾರರೊಂದಿಗೆ ಮಾತನಾಡಿದ ಜಗ್ಗುದಾದಾ, ಆಸ್ಪತ್ರೆಯಲ್ಲಿ ಇದ್ದಕೊಂಡು ನಾನು ಎಲ್ಲ ನ್ಯೂಸ್ ಚಾನೆಲ್‍ಗಳನ್ನು ನೋಡಿದ್ದೇನೆ. ಊಹಾಪೋಹಗಳ ಮೇಲೆ ನೀವೇ ಎಲ್ಲವನ್ನೂ ನಿರ್ಧಾರ ಮಾಡಿಬಿಟ್ಟರೆ ಹೇಗೆ? ಕಾರಿನಲ್ಲಿ ಯುವತಿಯೊಬ್ಬರು ಇದ್ದರು ಅಂತ ವರದಿ ಮಾಡಿದ್ದೀರಿ. ಒಬ್ಬರಲ್ಲ ನಾಲ್ವರು ನನ್ನ ತೊಡೆಯ ಮೇಲೆ ಕುಳಿತಿದ್ದರು ಎಂದು ಕಿಡಿಕಾರಿದರು.

    ಒಂದು ತಿಂಗಳ ವಿಶ್ರಾಂತಿ ಬಳಿಕ ಜಿಮ್ ಮಾಡುತ್ತೇನೆ. ನಾನು ಚೇತರಿಸಿಕೊಳ್ಳಲು ಹೆಚ್ಚು ಸಮಯ ಬೇಕಾಗಿಲ್ಲ. ನೋಡಿ ಮೈಕಟ್ಟು ಹೇಗಿದೆ ಅಂತಾ ತಮ್ಮ ಬಲಗೈ ತೋಳುಗಳನ್ನು ತೋರಿಸಿದರು. ವೈದ್ಯರು ಕಾಳಜಿಯಿಂದ ನೋಡಿಕೊಂಡಿದ್ದಾರೆ. ತುರ್ತು ಚಿಕಿತ್ಸೆಯ ವ್ಯವಸ್ಥೆ ಚೆನ್ನಾಗಿದ್ದು, ವೈದ್ಯರ ಕಾಳಜಿಯಿಂದ ಬೇಗ ಗುಣಮುಖನಾದೆ ಎಂದು ತಿಳಿಸಿದರು.

    ಕಾರು ಸ್ಥಳಾಂತರ ಕುರಿತು ಪ್ರತಿಕ್ರಿಯೆ ನೀಡಿದ ದರ್ಶನ್, ಅಪಘಾತದ ಸ್ಥಳದಲ್ಲಿಯೇ ಕಾರು ಬಿಟ್ಟು ಹೋಗಿದ್ದರೆ ಸಂಚಾರಕ್ಕೆ ಅಡತಡೆ ಆಗುತ್ತಿತ್ತು. ಜೊತೆಗೆ ಅದು ಅಪರಾಧ ಕೂಡಾ. ಹೀಗಾಗಿ ಕಾರನ್ನು ಬೇರೆ ಕಡೆಗೆ ಸಾಗಿಸಲಾಯಿತು. ಇದು ತಪ್ಪಾ, ಕಾರು ಡಿಕ್ಕಿ ಹೊಡೆದಿದ್ದಕ್ಕೆ ಕಂಬ ಬಿದ್ದಿಲ್ಲ. ಅದು ಮೊದಲೇ ಬಿದ್ದಿತ್ತು ಎಂದು ಸಿಡಿಮಿಡಿಯಾದರು.

    ನನ್ನ ಗಾಡಿಯಲ್ಲಿ ಇರುವುದೇ ನಾಲ್ಕು ಸೀಟ್, ಹೀಗಾಗಿ ನಾಲ್ಕು ಜನ ಮಾತ್ರ ಇದ್ದೇವು. ಆದರೆ ಐವರು ಇದ್ದರು ಅಂತಾ ಹೇಳುವುದು ಸರಿಯಲ್ಲ ಎಂದ ಅವರು, ಎಫ್‍ಐಆರ್ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಅದನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಆಸ್ಪತ್ರೆಯಿಂದ ಕಾಲ್ಕಿತ್ತರು.

    ಇದಕ್ಕೂ ಮುನ್ನ ದಾಸನಿಗೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಯ ವೈದ್ಯರೊಬ್ಬರು ಮಾತನಾಡಿ, ಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಮೂಳೆ ಮುರಿದಿದೆ. ಕೆಲವು ದಿನಗಳು ವಿಶ್ರಾಂತಿ ಬೇಕಾಗುತ್ತದೆ. ಅವರು ನೋವನ್ನು ತಡೆದುಕೊಂಡು, ಅಭಿಮಾನಿಗಳಿಗೆ ಸ್ಪಂದಿಸಿದ್ದು ನೋಡಿ ಖುಷಿ ಆಯಿತು. ಬೇಗ ಗುಣಮುಖರಾಗುತ್ತಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

    ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲೇ ಇರಲಿದ್ದಾರೆ.

    ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 1ಕ್ಕೆ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

    ವಿಜಿ ಪರ ವಕೀಲರ ವಾದವೇನು?:
    ಐಪಿಸಿ ಸೆಕ್ಷನ್ ಕಲಂ 326 ಹೊರತುಪಡಿಸಿ ಉಳಿದ ಪ್ರಕರಣಗಳು ಜಾಮೀನಿಗೆ ಅರ್ಹವಾದದ್ದಾಗಿದೆ. ಇಲ್ಲಿ ಉದ್ದೇಶಪೂರ್ವಕವಾಗಿ ಐಪಿಸಿ ಸೆಕ್ಷನ್ 326 ಸೆಕ್ಷನ್ ಸೇರಿಸಲಾಗಿದೆ. ಆದ್ರೆ ದೂರಿನಲ್ಲಾಗಲಿ, ಎಫ್‍ಐಆರ್ ನಲ್ಲಾಗಲಿ ಮಾರಕಾಸ್ತ್ರದ ಬಗ್ಗೆ ಪ್ರಸ್ತಾಪವಿಲ್ಲ. ಕೈನಿಂದ ಹಲ್ಲೆ ಎಂದು ಮಾತ್ರ ಆರೋಪಿಸಲಾಗಿತ್ತು. ಈ ಬಗ್ಗೆ ನೀಡಿದ ಮೊದಲ ಹೇಳಿಕೆಯಲ್ಲೂ ಇದರ ಪ್ರಸ್ತಾಪವಿಲ್ಲ. ನಾಲ್ಕು ಗಂಟೆಗಳ ಅವಧಿಯಲ್ಲಿ 2 ನೇ ಹೇಳಿಕೆ ಪಡೆದು ಸೆಕ್ಷನ್ 326 ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಮಾರುತಿ ಗೌಡ ಆರೋಗ್ಯ ಸುಧಾರಿಸಿದೆ. ನಿನ್ನೆ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಇದೊಂದು ಸಾಮಾನ್ಯ ಪ್ರಕರಣವಾಗಿದೆ. ಹೀಗಾಗಿ ವಿಜಿಗೆ ಜಾಮೀನು ನೀಡಿ ಅಂತ ದುನಿಯಾ ವಿಜಿ ಪರ ವಕೀಲ ಆರ್. ಶ್ರೀನಿವಾಸ್ ವಾದ ಮಾಡಿದ್ದಾರೆ.


    ಸರ್ಕಾರಿ ವಕೀಲರ ವಾದವೇನು?:
    ದುನಿಯಾ ವಿಜಿ ಮನುಷ್ಯನೇ ಅಲ್ಲ. ಈತ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ವಿಜಿಗೆ ಜಾಮೀನು ನೀಡಬೇಡಿ ಅಂತ ಸರ್ಕಾರಿ ಪರ ವಕೀಲರು ಪ್ರತಿವಾದ ಮಾಡಿದ್ದಾರೆ.

    ಹೀಗಾಗಿ ಎರಡೂ ತಂಡಗಳ ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಅದೇಶವನ್ನು ಅಕ್ಟೋಬರ್ 1ಕ್ಕೆ ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ದುನಿಯಾ ವಿಜಿ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲಿರಲಿದ್ದಾರೆ.

    ಜಾಮೀನು ನೀಡದಂತೆ ಹೈಗ್ರೌಂಡ್ಸ್ ಪೊಲೀಸರು ಕೂಡ ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆಗಳೇನು?:
    * ಆರೋಪಿಗಳು ಗಾಂಜಾ ಸೇವಿಸಿದ್ದಾರೆ ಎಂಬ ಮಾಹಿತಿ ಇದೆ
    * ರಕ್ತ ಮಾದರಿ ಕೊಡಲಾಗ್ತಾ ಇದೆ, ಈಗಲೇ ಜಾಮೀನು ಮಂಜೂರು ಮಾಡಬೇಡಿ.
    * ಆರೋಪಿ ಪದೇ ಪದೇ ಇದೇ ರೀತಿಯ ಗಲಾಟೆ ಮಾಡ್ತಾನೆ
    * ಇದೇ ರೀತಿಯ ಗಲಾಟೆಯನ್ನು ಮಾಡಿ ಮೂರು ಬಾರಿ ಸ್ಟೇಷನ್ ಬೇಲ್ ಪಡೆದಿದ್ದಾರೆ
    * ಈ ಬಾರಿಯೂ ಜಾಮೀನು ಸಿಕ್ಕಿದ್ದರೆ ಕಾನೂನು ಮೇಲಿನ ಭಯ ಹೋಗುತ್ತೆ
    * ಪ್ರಭಾವಿ ವ್ಯಕ್ತಿ ಆಗಿರೋದ್ರಿಂದ ಸಾಕ್ಷಿ ನಾಶ ಮಾಡ್ತಾನೆ
    * ಪೊಲೀಸ್ ಠಾಣೆಯ ಮುಂದೆಯೇ ದೊಡ್ಡ ಗಲಾಟೆ ಮಾಡಿದ್ದಾನೆ.

    ಮಾರುತಿ ಗೌಡ ಡಿಸ್ಚಾರ್ಜ್:
    ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿ ಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿ ಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

    ಏನಿದು ಪ್ರಕರಣ?:
    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿ ಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=YjxBslBdbNU

  • ನಟ ದುನಿಯಾ ವಿಜಯ್ ಗೆ ಜಾಮೀನು?

    ನಟ ದುನಿಯಾ ವಿಜಯ್ ಗೆ ಜಾಮೀನು?

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಕಿಡ್ನಾಪ್, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರಿಗೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಸಿಗುವ ಸಾಧ್ಯತೆಗಳಿವೆ.

    ಪ್ರಕರಣ ಸಂಬಂಧ ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿನೋದ್‍ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿದ ಕಳ್ಳರು!

    ವಿನೋದ್‍ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿದ ಕಳ್ಳರು!

    ಬೆಂಗಳೂರು: ಸರ್ ಟೈರ್ ಪಂಚರ್ ಆಗಿದೆ ಎಂದು ಹೇಳಿ, ನಟ ವಿನೋದ್ ರಾಜ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಕಳ್ಳರು ಕಾರಿನಿಂದ 1 ಲಕ್ಷ ರೂ. ಹಣವನ್ನು ಕದ್ದು ಪರಾರಿಯಾಗಿದ್ದಾರೆ.

    ನೆಲಮಂಗಲ ಪಟ್ಟಣದ, ಇಂಡಸ್‍ಲ್ಯಾಂಡ್ ಬ್ಯಾಂಕ್ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಚಿತ್ರೋದ್ಯಮದಿಂದ ದೂರ ಉಳಿದಿರುವ ನಟ ವಿನೋದ್‍ರಾಜ್ ಕೃಷಿ ಚಟುವಟಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ ತೋಟದ ಕೂಲಿಯಾಳುಗಳಿಗೆ ಸಂಬಳ ನೀಡಲು ಬ್ಯಾಂಕ್‍ನಿಂದ ಹಣವನ್ನು ಡ್ರಾ ಮಾಡಿದ್ದರು.

    ನಡೆದಿದ್ದು ಏನು?
    ವಿನೋದ್‍ರಾಜ್ ಅವರು ಇಂಡಸ್‍ಲ್ಯಾಂಡ್ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು, ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಿದ್ದ ತಮ್ಮ ಕಾರಿನಲ್ಲಿ ಕುಳಿತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಒಬ್ಬ ಕಳ್ಳರು, ಸರ್ ನಿಮ್ಮ ಕಾರಿನ ಟೈರ್ ಪಂಚರ್ ಆಗಿದೆ ಅಂತ ಹೇಳಿದ್ದಾರೆ. ಅವರ ಮಾತು ಕೇಳಿ ವಿನೋದ್‍ರಾಜ್ ಕಾರಿನಿಂದ ನೋಡುತ್ತಿದ್ದಂತೆ ಕಳ್ಳರು ತಮ್ಮ ಕೈಚಳಕ ತೋರಿಸಿ, ಕಾರಿನಲ್ಲಿದ್ದ ಒಂದು ಲಕ್ಷ ರೂ. ಇದ್ದ ಹಣದ ಬ್ಯಾಗ್ ಎಗರಿಸಿದ್ದಾರೆ. ಈ ಕುರಿತು ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಲಪಾಡ್ ಉಳಿದುಕೊಂಡಿದ್ದ ಜೈಲಾಸ್ಪತ್ರೆ ವಾರ್ಡ್ ನಲ್ಲೇ ಕರಿಚಿರತೆ ಆ್ಯಂಡ್ ಟೀಂ

    ನಲಪಾಡ್ ಉಳಿದುಕೊಂಡಿದ್ದ ಜೈಲಾಸ್ಪತ್ರೆ ವಾರ್ಡ್ ನಲ್ಲೇ ಕರಿಚಿರತೆ ಆ್ಯಂಡ್ ಟೀಂ

    ಬೆಂಗಳೂರು: ಹಲ್ಲೆ ನಡೆಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್‍ಗೆ ಜೈಲು ಆಸ್ಪತ್ರೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

    ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಉಳಿದುಕೊಂಡಿದ್ದ ಆಸ್ಪತ್ರೆ ವಾರ್ಡ್‍ನಲ್ಲೇ ದುನಿಯಾ ವಿಜಯ್ ಮತ್ತು ಪಟಾಲಂ ತಂಗಿದೆ. ಖಾಲಿ ಇದ್ದ ಈ ವಾರ್ಡ್ ಗೆ ಭಾನುವಾರ ರಾತ್ರಿ ಸುಣ್ಣ-ಬಣ್ಣ ಬಳಿಯಲಾಗಿದೆ. ಅಲ್ಲದೆ ಹೊರಗಡೆಯಿಂದ ಯಾರಿಗೂ ಕಾಣದಂತೆ ಸ್ಕ್ರೀನ್ ಹಾಕಲಾಗಿದೆ. ಇವೆಲ್ಲವನ್ನು ಗಮನಿಸಿದ್ರೆ ಸಿನೆಮಾ ನಟ ಅನ್ನೋ ಕಾರಣಕ್ಕೆ ಇಷ್ಟೆಲ್ಲ ವ್ಯವಸ್ಥೆ ಮಾಡಲಾಗಿದ್ಯಾ ಅಥವಾ ಸೈಕಲ್ ರವಿಗೆ ಹೆದರಿ ದುನಿಯಾ ವಿಜಯ್ ಗೆ ಬೇರೆ ವ್ಯವಸ್ಥೆ ಮಾಡಲಾಗಿದ್ಯಾ ಅನ್ನೋ ಪ್ರಶ್ನೆಯೊಂದು ಎದ್ದಿದೆ.

    ಲ್ಯಾಂಡ್ ಲಿಟಿಗೇಶನ್ ವಿಚಾರವಾಗಿ ದುನಿಯಾ ವಿಜಯ್ ಮತ್ತು ಸೈಕಲ್ ರವಿ ಮಧ್ಯೆ ಭಿನ್ನಾಭಿಪ್ರಾಯವಾಗಿತ್ತು. ಇದೇ ಕಾರಣಕ್ಕೆ ಜೈಲಾಧಿಕಾರಿಗಳು ರಿಸ್ಕ್ ಬೇಡ ಅಂತ ಪ್ರತ್ಯೇಕ ಕಲ್ಪಿಸಿದ್ರಾ ಅನ್ನೋ ಮಾತುಗಳು ಕೇಳಿಬರುತ್ತಿದೆ.

    ಏನಿದು ಪ್ರಕರಣ?
    ಶನಿವಾರ ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆದಿತ್ತು. ಈ ವೇಳೆ ದುನಿಯಾ ವಿಜಯ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಫೋಸ್ ಕೊಡುತ್ತಿದ್ದರು. ಆಗ ಮಗ ಸಾಮ್ರಾಟ್ ತಂದೆಯೊಂದಿಗೆ ವೇದಿಕೆ ಹತ್ತಿದ್ದಾರೆ. ಇದನ್ನು ನೋಡಿದ ಮಾರುತಿಗೌಡ `ಏಯ್, ಚಿಲ್ಟು ಕೆಳಗೆ ಇಳಿಯೋ’ ಎಂದು ಎಚ್ಚರಿಸಿದ್ದರಂತೆ. ಮಾರುತಿಗೌಡ ಮಾತು ಕೇಳಿಸಿಕೊಂಡ ವಿಜಯ್ ಕೋಪ ನೆತ್ತಿಗೇರಿತ್ತಂತೆ. ತಕ್ಷಣವೇ `ಯಾಕಪ್ಪ ಹಾಗಂತಿಯಾ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಾರುತಿಗೌಡ, `ಮತ್ತೆ ಏನಣ್ಣ, ನೀನು ಚಿಲ್ಟು-ಪಿಲ್ಟುಗಳನ್ನೆಲ್ಲಾ ಸ್ಟೇಜ್‍ಗೆ ಹತ್ತಿಸ್ತೀಯ’ ಎಂದಿದ್ದಾರೆ. ಆತನ ಉತ್ತರದಿಂದ ಗರಂ ಆದ ವಿಜಯ್, ಸಾಮ್ರಾಟ್‍ನನ್ನು ಚಿಲ್ಟು ಅಂತ ಕರೆದಿದ್ದಕ್ಕೆ ವಾಗ್ದಾಳಿ ನಡೆಸಿದ್ದರಂತೆ. ಸ್ಪರ್ಧೆ ನಡೆಯುವ ಜಾಗದಲ್ಲಿಯೇ ಬುದ್ಧಿ ಹೇಳುವುದಕ್ಕೆ ಹೋದರೆ ಗಲಾಟೆ ಆಗುತ್ತದೆ ಅಂತ ಮಾರುತಿ ಗೌಡನನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದೇವೆ. ನಾವು ಅಪಹರಣ ಮಾಡಿಲ್ಲ ಅಂತ ವಿಚಾರಣೆ ವೇಳೆ ವಿಜಯ್ ಸ್ಪಷ್ಟನೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು.

    ಇತ್ತ ಮಾರುತಿ ಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದರು. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷರಾದರು. ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೊಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ ಎನ್ನಲಾಗಿತ್ತು. ಈ ಎಲ್ಲ ಕಾರಣಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=ALFMC4BI448

    https://www.youtube.com/watch?v=EgaCOcqC7ZU

  • ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

    ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆ ನಡೆಸಿ ದರ್ಶನ್ ಕೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ. ಅಲ್ಲದೇ ಅವರನ್ನು ಶೀಘ್ರವೇ ವಾರ್ಡ್ ಗೆ ಸ್ಥಳಾಂತರಿಸುತ್ತಿರುವುದಾಗಿ ಆಸ್ಪತ್ರೆ ತಿಳಿಸಿದೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ

    ಸೋಮವಾರ ಬೆಳಗ್ಗೆ ರಸ್ತೆ ಅಪಘಾತದಲ್ಲಿ ನಟ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಆಂಥೋನಿ ಎಂಬವರು ಗಾಯಗೊಂಡು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರಾಜ್ ಅವರಿಗೆ ಎಡ ಬೆರಳುಗಳ ಮೂಳೆ ಮುರಿದಿದ್ದು, ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದೆ. ಅಲ್ಲದೇ ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಹಾಗೂ ರಾಯ್ ಆಂಥೋನಿ ಎಂಬವರಿಗೆ ಬಲಗೈ ಮೂಳೆ ಮುರಿದಿದ್ದು, ಎಲ್ಲರಿಗೂ ಚಿಕಿತ್ಸೆ ಮುಂದುವರಿದಿದೆ. ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರು

    ಈ ಕುರಿತು ಪ್ರತಿಕ್ರಿಯಿಸಿರುವ ವೈದ್ಯ ಡಾ. ಉಪೇಂದ್ರ ಶಣೈ, ದರ್ಶನ್‍ರವರ ಬಲಗೈ ಮೂಳೆ ಮುರಿದಿದ್ದು, ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದ್ದು, ಯಾವುದೇ ಪ್ರಾಣಾಪಾಯವಿಲ್ಲ. ಶೀಘ್ರವೇ ಅವರನ್ನು ಶಸ್ತ್ರಚಿಕಿತ್ಸೆಯ ಬಳಿಕ ಐಸಿಯಗೆ ಸ್ಥಳಾಂತರಿಸಲಾಗುತ್ತದೆ. ಒಂದು ದಿನ ಆಸ್ಪತ್ರೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದು, ಆರೋಗ್ಯ ಸುಧಾರಿಸಿದ ಮೇಲೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಂಗ್ಲಿ ಮೇಲಿದೆ ಸಾಲು ಸಾಲು ಪ್ರಕರಣಗಳು!

    ಜಂಗ್ಲಿ ಮೇಲಿದೆ ಸಾಲು ಸಾಲು ಪ್ರಕರಣಗಳು!

    ಬೆಂಗಳೂರು: ನಟ ದುನಿಯಾ ವಿಜಿ ಗೂಂಡಾಗಿರಿ ಪ್ರಕರಣ ಇದೇ ಮೊದಲಲ್ಲ. ಸಿ.ಕೆ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗಿವೆ.

    ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ವಿಜಯ್ ಸಹಾಯ ಮಾಡಿದ್ದರು. ಅಲ್ಲದೇ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ನಾಪತ್ತೆ ಕೂಡ ಆಗಿದ್ದರು. ನಂತರ ವಿಜಯ್ ಗಾಗಿ ಬಲೆ ಬೀಸಿದ್ದ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

    ಬಂಧಿಸಿದ ನಂತರ ಡಿಸಿಪಿ ಶರಣಪ್ಪ ಅವರು ವಿಜಿಗೆ ವಾರ್ನಿಂಗ್ ಮಾಡಿ ಕಳುಹಿಸಿದ್ದರು. ಅದಕ್ಕೂ ಮೊದಲು ಸಿಕೆ ಅಚ್ಚುಕಟ್ಟು ಠಾಣೆಯಲ್ಲೇ ಮತ್ತೊಂದು ಕೇಸ್ ನಲ್ಲಿ ವಿಜಿ ಅರೆಸ್ಟ್ ಆಗಿದ್ದರು. ವೃದ್ಧ ವ್ಯಕ್ತಿಯೊಬ್ಬರ ಎದೆಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು. ಈ ಕುರಿತು ವೃದ್ಧ ವ್ಯಕ್ತಿ ವಿಜಿ ವಿರುದ್ಧ ದೂರು ದಾಖಲಿಸಿದ್ದರು. ಆ ಸಂದರ್ಭದಲ್ಲೂ ಕರಿಚಿರತೆ ಅರೆಸ್ಟ್ ಆಗಿದ್ದು, ತದನಂತರ ಬೇಲ್ ಪಡೆದು ಹೊರ ಬಂದಿದ್ದರು. ಇದನ್ನೂ ಓದಿ: ದುನಿಯಾ ವಿಜಿ ಹಲ್ಲೆ ಪ್ರಕರಣ: ಜಯಮ್ಮನ ಮಗನಿಗೆ ಜೈಲು..?

    ಮೇ 31 2018 ರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇರೆಗೆ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಿ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಐಪಿಸಿ ಕಲಂ 353 (ಪೊಲೀಸ್ ಆಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು), ಐಪಿಸಿ ಕಲಂ 255 (ಕರ್ತವ್ಯ ನಿರತ ಪೊಲೀಸ್ ಜೊತೆ ವಾಗ್ವಾದಕ್ಕಿಳಿದಿದ್ದು) ಸಂಬಂಧ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದನ್ನೂ ಓದಿ:  ನಿವೃತ್ತ ಯೋಧರಿಗೆ ಅವಾಜ್, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಕರಿಚಿರತೆ!


    ಜನವರಿ 18 2013 ರಂದು ಪತ್ನಿ ನಾಗರತ್ನ ಅವರಿಗೆ ಜೀವ ಬೆದರಿಕೆ ಹಾಕಿದ್ದರು. ಅಲ್ಲದೇ ವಿಜಿ ಸಂಬಂಧಿ ಶಿವಶಂಕರಗೌಡ ಎಂಬಾತನಿಗೆ ಹಲ್ಲೆಗೆ ಮುಂದಾಗಿದ್ದರು. ಈ ಎರಡೂ ಪ್ರಕರಣಗಳ ಸಂಬಂಧ ವಿಜಿ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಜನವರಿ 17 2013 ರಲ್ಲಿ ಕೌಟುಂಬಿಕ ನ್ಯಾಯಲಯದಲ್ಲಿ ವಿಚ್ಚೇದನಕ್ಕೆ ಪತ್ನಿ ಅರ್ಜಿ ಸಲ್ಲಿಸಿದ್ದರು.  ಇದನ್ನೂ ಓದಿ: ರಾತ್ರೋರಾತ್ರಿ ನಟ ದುನಿಯಾ ವಿಜಯ್ ಬಂಧನ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=9HevyLtzMc0