Tag: ನಟ

  • ಫೇಸ್‍ಬುಕ್ ಲೈವ್ ವೇಳೆ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಕಿರುತೆರೆ ನಟ

    ಫೇಸ್‍ಬುಕ್ ಲೈವ್ ವೇಳೆ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಕಿರುತೆರೆ ನಟ

    ಚೆನ್ನೈ: ಮಹಾಮಾರಿ ಕೊರೊನಾ ದೇಶವನ್ನು ವಕ್ಕರಿಸಿದ ಬಳಿಕ ಅನೇಕರು ಕೋವಿಡ್ ಗೆ ಬಲಿಯಾದ್ರೆ ಇನ್ನೂ ಕೆಲವರು ಬದುಕುವ ದಾರಿ ಕಾಣದೆ ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ಅಂತೆಯೇ ಇದೀಗ ಬೆಂಗಾಲಿ ಕಿರುತೆರೆ ನಟರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದ ನಟನನ್ನು ಸುವೋ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಇವರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ಗೆ ಬಂದು ತಮ್ಮ ಅಭಿಮಾನಿಗಳ ಜೊತೆ ಮಾತನಾಡುತ್ತಲೇ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಟಯರ್ ಸ್ಫೋಟಗೊಂಡು ಅಂಬುಲೆನ್ಸ್ ಮರಕ್ಕೆ ಡಿಕ್ಕಿ – ತುಂಬು ಗರ್ಭಿಣಿ ಸಹಿತ ಮೂವರ ದುರ್ಮರಣ

    ಜೀವನದಲ್ಲಿ ಜಿಗುಪ್ಸೆಗೊಂಡು ನಟ ಫೇಸ್ ಬುಕ್ ಲೈವ್ ನಲ್ಲಿದ್ದಾಗಲೇ ನಿದ್ದೆ ಮಾತ್ರೆ ತೆಗೆದುಕೊಂಡು ಸಾವಿನ ದಾರಿ ಹಿಡಿಯಲು ಮುಂದಾಗಿದ್ದಾರೆ. ಲೈವ್ ನಲ್ಲಿ ನಟ, ಯಾಕೋ ಗೊತ್ತಿಲ್ಲ ನನಗೆ ಕಟ್ಟಡದಿಂದ ಹಾರಿ, ಕೈ ಕಟ್ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಯಲು ಮನಸ್ಸಿಲ್ಲ. ಇದು ನನಗೆ ಇಷ್ಟನೂ ಇಲ್ಲ. ನನಗೆ ಕೊನೆಯ ಆಯ್ಕೆ ಸಿಕ್ಕಿದ್ದು ನಿದ್ದೆ ಮಾತ್ರೆ. ಹೀಗಾಗಿ ನಿದ್ದೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಯಾರಿಗೆ ಅತೀ ಹೆಚ್ಚು ಬಿಪಿ ಇದೆಯೋ ಅವರು ಹೃದಯಾಘಾತವಾಗಿ ಸಾಯುತ್ತಾರೆ ಎಂದೆಲ್ಲ ಹೇಳಿದ್ದಾರೆ.

    ನಟನ ಮಾತುಗಳನ್ನು ಕೇಳಿದ ಅಭಿಮಾನಿಗಳು ಒಂದು ಕ್ಷಣ ಗಾಬರಿಗೊಂಡಿದ್ದಾರೆ. ಅಲ್ಲದೆ ಅನುಮಾನಗೊಂಡು ಕೂಡಲೇ ಸ್ಥಳೀಯ ಪೊಲಿಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಇತ್ತ ನಟನ ಆತ್ಮಹತ್ಯೆಯ ಯತ್ನದ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಜೀವ ಕಾಪಾಡಿದ್ದಾರೆ. ಸದ್ಯ ನಟನ ಆರೋಗ್ಯ ಸ್ಥಿತಿ ಸುಧಾರಿಸಿದೆ.

    ತನಿಖೆಯ ವೇಳೆ ಕಳೆದ ಆಗಸ್ಟ್ ತಿಂಗಳಿನಿಂದ ಯಾವುದೇ ಅವಕಾಶಗಳು ಸಿಗದೆ ನೊಂದಿರುವುದಾಗಿ ಪೊಲೀಸರ ಮುಂದೆ ನಟ ತಿಳಿಸಿದ್ದಾರೆ. ಮಂಗಳ್ ಚಂಡಿ, ಮಾನಸ ಹೀಗೆ ಹಲವಾರು ಸಿರಿಯಲ್ ಗಳಲ್ಲಿ ಸುವೋ ನಟಿಸಿ ಮನೆ ಮಾತಾಗಿದ್ದಾರೆ.

  • ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್

    ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತವಾಗಿ ಸೆಲೆಬ್ರೆಟಿಗಳು ಗಿಡನೆಟ್ಟು ಪರಿಚರ Pಕುರಿತಾಗಿ ಕೆಲವು ಸಾಲುಗಳನ್ನು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ. ಮನುಷ್ಯದ ಜೀವನದಲ್ಲಿ ಪ್ರಕೃತಿ ಬಹಳ ಮುಖ್ಯ, ಪರಿಸರ ಆರೋಗ್ಯವಾಗಿದ್ದರೆ ಮಾನವರ ಮುಂದಿನ ಪೀಳಿಗೆ ಆರೋಗ್ಯವಾಗಿರಲು ಸಾಧ್ಯ ಎಂಬ ಸಂದೇಶ ಸಾರಿದ್ದಾರೆ.

    ನಮ್ಮ ಜೀವನ ಪರಿಸರ ಇರುವವರೆಗೆ ಮಾತ್ರ ಎಂಬುದನ್ನು ಮರೆಯದಿರಿ, ನಮಗೆ ಬೇಕಾದಂತೆ ಪರಿಸರ ಬದಲಾಯಿಸುವ ಬದಲು, ಪರಿಸರಕ್ಕೆ ತಕ್ಕಂತೆ ನಾವು ಬದಲಾಗೋಣ ಎಂಬ ಸಂದೇಶವನ್ನು ಬರೆದುಕೊಂಡು ಪರಿಸರ ದಿನಾಚರಣೆಯ ಶುಭಾಶಯೊಂದಿಗೆ ಸಂದೇಶವನ್ನು ಕಿಚ್ಚ ಸುದೀಪ್ ನೀಡಿದ್ದಾರೆ. ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ: ಸಿಎಂ

     

    View this post on Instagram

     

    A post shared by Ragini dwivedi (@rraginidwivedi)

    ನಟ ಶರಣ್ ಸಹ ಟ್ವಿಟ್ಟರ್‌ನಲ್ಲಿ ಪರಿಸರ ದಿನಕ್ಕೆ ಶುಭಕೋರಿದರು. ಗುರುಶಿಷ್ಯರು ಚಿತ್ರದ ಸೆಟ್‍ನಲ್ಲಿ ಗಿಡ ನೆಡಲಾಗಿತ್ತು. ಆ ಫೋಟೋ ಶೇರ್ ಮಾಡಿ ಮನೆಗೊಂದು ಮರ, ಮನಸ್ಸಿಗೊಂದು ನೆಮ್ಮದಿ. ಗುರುಶಿಷ್ಯರು ಚಿತ್ರದ ಶೂಟಿಂಗ್ ದಿನಗಳಲ್ಲಿ ಒಂದು ಪುಟ್ಟ ತೆಂಗಿನ ಸಸಿ ನೆಟ್ಟಿದ್ದ ನೆನಪುಗಳು ಎಂದು ಮೆಲುಕು ಹಾಕಿದ್ದಾರೆ.

     

    View this post on Instagram

     

    A post shared by Allu Arjun (@alluarjunonline)

    ಹೆಚ್ಚಿನ ಮರಗಳನ್ನು ನೆಡೋಣ, ಪರಿಸರ ಸ್ನೇಹಿ ಕೆಲಸಗಳಿಗೆ ಹೊಂದಿಕೊಳ್ಳೋಣ ಎಂದು ತೆಲುಗು ನಟ ಅಲ್ಲು ಅರ್ಜುನ್ ಗಿಡವೊಂದನ್ನು ನೆಡುವ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಮೂಲಕ ಪರಿಸರ ದಿನಕ್ಕೆ ಶುಭಕೋರಿದರು. ಸ್ಯಾಂಡಲ್‍ವುಡ್ ನಟ ಸತೀಶ್ ನಿನಾಸಂ ಹಚ್ಚ ಹಸಿರಿನ ವಾತಾವರಣದಲ್ಲಿ ಕುಳಿತು ಕ್ಲೀಕ್ಕಿಸಿಕೊಂಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಸೇರ್ ಮಾಡಿಕೊಂಡು ಪರಿಸರ ದಿನಾಚರಣೆ ಶುಭಕೋರಿದ್ದಾರೆ.

    ಪರಿಸರ ದಿನಾಚರಣೆಯ ಅಂಗವಾಗಿ ಸುಮಾರು 150 ಗಿಡಗಳನ್ನು ನೆಟ್ಟಿದ್ದೇವೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಡೋಣ ಎಂದು ಬರೆದುಕೊಂಡು ಕೆಲವು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಳ್ಳುವ ಮೂಲಕ ಸ್ಯಾಂಡಲ್‍ವುಡ್ ನಟಿ ರಾಗಿಣಿ ಪರಿಸರ ದಿನವನ್ನು ಆಚರಿಸಿದ್ದಾರೆ.

    ಬಾಲಿವುಡ್‍ನಲ್ಲಿ ಕರೀನಾ ಕಪೂರ್, ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್, ಸೋನಾಲಿ ಬೇಂದ್ರೆ, ಶಿಲ್ಪಾ ಶೆಟ್ಟಿ ಸೇರಿದಂತೆ ಹಲವರು ಪರಿಸರ ದಿನಕ್ಕೆ ವಿಶ್ ಮಾಡಿದ್ದಾರೆ.

  • ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ಸೋನು ಸೂದ್

    ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ಸೋನು ಸೂದ್

    ಮುಂಬೈ: ಕೊರೊನಾ ಸಂಕಷ್ಟದಲ್ಲಿ ನಟ ಸೋನು ಸೂದ್ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಆಸ್ಪತ್ರೆಯ ಬೆಡ್ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್ ಸಿಲಿಂಡರ್ ಕೊರತೆ ಅನುಭವಿಸುತ್ತಿರುವ ಸೋಂಕಿತರಿಗಾಗಿ ಸೋನು ಸೂದ್ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಈಗ ಅವರು ಆಕ್ಸಿಜನ್ ಕೊಡಿಸುವ ಸಲುವಾಗಿ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾರೆ.

    ದೆಹಲಿ, ಮಹಾರಾಷ್ಟ್ರ ಸೇರಿದಂತೆ ದೇಶದಲ್ಲಿ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದಾರೆ. ಅದಕ್ಕಾಗಿ ಅವರು ಆಕ್ಸಿಜನ್ ಪ್ಲಾಂಟ್‍ಗಳನ್ನು ಫ್ರಾನ್ಸ್‍ನಿಂದ ಆಮದು ಮಾಡಿಕೊಳ್ಳುತ್ತಿದ್ದಾರೆ. ಮೊದಲ ಆಕ್ಸಿಜನ್ ಪ್ಲಾಂಟ್ ಅನ್ನು ಫ್ರಾನ್ಸ್ ನಿಂದ ಆರ್ಡರ್ ಮಾಡಲಾಗಿದ್ದು, 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದು ಸೋನು ಸೂದ್ ಪಣತೊಟ್ಟು ಸಹಾಯ ಮಾಡಲು ಮುಂದಾಗಿದ್ದಾರೆ.

    ದೇಶದಲ್ಲಿ ಸಾಕಷ್ಟು ಜನರು ಆಕ್ಸಿಜನ್ ಕೊರೆತೆ ಅನುಭವಿಸುತ್ತಿರುವುದು ಗೊತ್ತಾಗಿದೆ. ಈಗ ನಾವು ಆಕ್ಸಿಜನ್ ಪ್ಲಾಂಟ್ ಪಡೆಯಲಿದ್ದೇವೆ. ಅದರಿಂದ ಸಿಲಿಂಡರ್‍ಗಳನ್ನು ಸದಾ ಕಾಲ ತುಂಬಿಸಿ ಇಡಲು ಸಹಕಾರಿ ಆಗುತ್ತದೆ. ಕೊವಿಡ್‍ನಿಂದ ಬಳಲುತ್ತಿರುವವರಿಗೆ ಇದರಿಂದ ಹೆಚ್ಚು ಅನುಕೂಲ ಆಗಲಿದೆ ಎಂದು ಸೋನು ಸೂದ್ ಹೇಳಿದ್ದಾರೆ. ಮೊದಲ ಆಕ್ಸಿಜನ್ ಪ್ಲಾಂಟ್ ಅನ್ನು ಫ್ರಾನ್ಸ್ ನಿಂದ ಆರ್ಡರ್ ಮಾಡಲಾಗಿದ್ದು, 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ. ಸಮಯ ಎಂಬುದೇ ಈಗ ನಮಗೆ ದೊಡ್ಡ ಸವಾಲಾಗಿದೆ. ಆದಷ್ಟು ಬೇಗ ಆಕ್ಸಿಜನ್ ಪ್ಲಾಂಟ್ ಬರಬೇಕು. ಅದರಿಂದ ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದಿದ್ದಾರೆ ಸೋನು ಸೂದ್.

    ಸೋನು ಸೂದ್ ಮಾತ್ರವಲ್ಲದೆ, ಬಾಲಿವುಡ್‍ನ ಅನೇಕ ಸೆಲೆಬ್ರಿಟಿಗಳು ಜನರ ಸಹಾಯಕ್ಕೆ ನಿಂತಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಸ್ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ-ವಿರಾಟ್ ಕೊಯ್ಲಿ ಕೂಡ 2 ಕೋಟಿ ರೂ. ದೇಣಿಗೆ ನೀಡಿದ್ದೂ ಅಲ್ಲದೇ ಕೈಲಾದಷ್ಟು ಸಹಾಯ ಮಾಡುವಂತೆ ಜನರಿಗೆ ಕರೆ ನೀಡಿದ್ದಾರೆ. ಅರ್ಜುನ್ ಗೌಡ, ಹರ್ಷಿಕಾ ಪೂಣಚ್ಚ, ಭುವನ್ ಗೌಡ, ಜಗ್ಗೇಶ್, ಉಪೇಂದ್ರ, ಶ್ರೀಮುರಳಿ ಸೇರಿದಂತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ.

  • ರಂಗಭೂಮಿ ಕಲಾವಿದ ರಾಜಾರಾಂ ನಿಧನ

    ರಂಗಭೂಮಿ ಕಲಾವಿದ ರಾಜಾರಾಂ ನಿಧನ

    ಬೆಂಗಳೂರು: ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ ಅವರು ಕೊರೊನಾಗೆ ಬಲಿಯಾಗಿದ್ದಾರೆ.

    ರಾಜಾರಾಂ (84) ಅವರು ಸಿನಿಮಾ, ಧಾರಾವಾಹಿ ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಸಿನಿಮಾಗಿಂತ ಹೆಚ್ಚಾಗಿ ರಾಜಾರಾಂ ಅವರು ರಂಗಭೂಮಿಯಲ್ಲೇ ಸಕ್ರಿಯವಾಗಿದ್ದರು. ರಾಜಾರಾಂ ಅವರಿಗೆ ಕೊರೊನಾ ಸೋಂಕು ಧೃಡವಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಟ ಇಂದು ಕೊನೆಯುಸಿರೆಳೆದಿದ್ದಾರೆ.

    1971ರಿಂದ ಇಲ್ಲಿಯವರೆಗೆ 62 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸಿನಿರಂಗದಲ್ಲಿ ರಾಜ್‍ಕುಮಾರ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ತೆರೆ ಹಂಚಿಕೊಂಡಿದ್ದಾರೆ ರಾಜಾರಾಂ. ಶಾಲಾ ದಿನಗಳಿಂದಲೇ ರಂಗಭೂಮಿಯಲ್ಲಿ ಆಸಕ್ತಿ ತೋರಿದ ರಾಜಾರಾಂ ನಂತರದಲ್ಲಿ ಸಿನಿಮಾಗಳಿಗೆ ಬಂದು ಹೆಸರು ಸಹ ಮಾಡಿದರು. ನೂರಾರು ನಾಟಕಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದ ಹಿರಿಯ ಕಲಾವಿದರಾಗಿದ್ದ ಇವರ ಅಗಲಿಕೆಯ ಬಗ್ಗೆ ನಟ ಸೃಜನ್ ಲೋಕೇಶ್ ಸೇರಿದಂತೆ ಅನೇಕ ಸ್ಯಾಂಡಲ್‍ವುಡ್ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮೀಡಿದಿದ್ದಾರೆ.

     

    View this post on Instagram

     

    A post shared by Srujan Lokesh (@srujanlokesh)

    1971ರಲ್ಲಿ ಕೃಷ್ಣಸ್ವಾಮಿ ನಿರ್ದೇಶಕ ಪಾಪಪುಣ್ಯ ಸಿನಿಮಾ ರಾಜಾರಾಂ ಅವರ ಅಭಿನಯದ ಮೊದಲ ಸಿನಿಮಾ. ಸರೋಜಾ ದೇವಿ, ಕಲ್ಯಾಣ್ ಕುಮಾರ್ ಅಶ್ವತ್ಥ್ ಪ್ರಮುಖ ಪಾತ್ರದಲ್ಲಿದ್ದರು. ವಿಧಾನಸೌಧದಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿಕೊಂಡೇ ಸಿನಿಮಾ ಹಾಗೂ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು ರಾಜಾರಾಂ. ನಟ ಲೋಕೇಶ್ ಅವರೊಂದಿಗೆ ಬಹಳ ಹಳೆಯ ಗೆಳೆತನವಿತ್ತು. ರಂಗಭೂಮಿಯಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದರು.

    ಕೊರೊನಾ ಮಹಾಮಾರಿಗೆ ಕಲಾ ಸೇವೆ ಮಾಡುತ್ತಿರುವ ಹಲವಾರು ಮಂದಿ ಕಲಾವಿದರು ಕೊರೊನಾಗೆ ಬಲಿಯಾಗಿದ್ದಾರೆ. ಶಂಖನಾದ ಅರವಿಂದ್, ರೇಣುಕಾ ಶರ್ಮಾ, ರಾಮು ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

  • 150 ರೂ. ಖರ್ಚಿನಲ್ಲಿ ಮದುವೆಯಾದ ಕಿರುತೆರೆ ನಟ

    150 ರೂ. ಖರ್ಚಿನಲ್ಲಿ ಮದುವೆಯಾದ ಕಿರುತೆರೆ ನಟ

    ಇಲ್ಲೊಂದು ಜೋಡಿ 150 ರೂಪಾಯಿ ಖರ್ಚಿನಲ್ಲಿ ಮದುವೆ ಆಗಿ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ. ಹೀಗೆ ಸಿಂಪಲ್ ಆಗಿ ಬಾಳ ಬಂಧನಕ್ಕೆ ಒಳಗಾಗಿರುವುದು ಕಿರುತರೆ ಖ್ಯಾತಿಯ ನಟ ವಿರಾಫ್ ಪಟೇಲ್ ಮತ್ತು ನಟಿ ಸಲೋನಿ ಖನ್ನಾ ಆಗಿದ್ದಾರೆ.

     

    View this post on Instagram

     

    A post shared by Viraf Patell (@virafpp)

    ಕಿರುತೆರೆಯಲ್ಲಿ ಹೆಚ್ಚು ಫೇಮಸ್ ಆಗಿರುವ ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಪರಸ್ಪರ ಪ್ರೀತಿಸುತ್ತಿದ್ದರು. ಫೆಬ್ರವರಿಯಲ್ಲಿ ಈ ಜೋಡಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಕ್ಕಿಂತಲೂ ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಅವರ ಆಸೆ ಆಗಿತ್ತು. ಆದರೆ ಅದಕ್ಕೆ ಕೊರೊನಾ ಅವಕಾಶ ನೀಡಿಲ್ಲ. ಅದರ ಬದಲು ಸದ್ಯದ ಪರಿಸ್ಥಿತಿಗೆ ತಕ್ಕಂತೆ ಸಿಂಪಲ್ ಮದುವೆಯನ್ನೇ ಈ ಸೆಲೆಬ್ರಿಟಿಗಳು ಆಯ್ಕೆ ಮಾಡಿಕೊಂಡಿದ್ದಾರೆ.

     

    View this post on Instagram

     

    A post shared by Saloni Khanna Patel (@salk.04)

    ಮೇ 6ರಂದು ದಿಢೀರ್ ಎಂದು ವಿರಾಫ್ ಪಟೇಲ್ ಮತ್ತು ಸಲೋನಿ ಖನ್ನಾ ಬಾಳ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಚ್ಚರಿ ಎಂದರೆ ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್ ಬ್ಯಾಂಡ್ ನೀಡಿದ್ದಾರಂತೆ. ವಿರಾಫ್ ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ವಧುವಿನ ಸೀರೆಯನ್ನು ಬಾಡಿಗೆಗೆ ತರಲಾಗಿದೆ. ಸ್ನೇಹಿತರೇ ಸೇರಿಕೊಂಡು ಮೇಕಪ್ ಮತ್ತು ಕೇಶ ವಿನ್ಯಾಸ ಮಾಡಿದ್ದಾರೆ. ಒಟ್ಟು ಈ ಮದುವೆಗೆ ಅತಿಥಿಗಳಾಗಿದ್ದವರು ಮೂರು ಜನರ ಮಾತ್ರ. ಇನ್ನುಳಿದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ್ರ ಈ ಮದುವೆಯನ್ನು ನೋಡುವ ಅವಕಾಶ ಕಲ್ಪಿಸಲಾಯಿತು. ಒಂದು ಗಂಟೆಯಲ್ಲಿ ಮದುವೆ ಮುಗಿಯಿತು.

     

    View this post on Instagram

     

    A post shared by Saloni Khanna Patel (@salk.04)

    ಈ ಸಿಂಪಲ್ ವಿವಾವಹಕ್ಕೆ ಆದ ಖರ್ಚು ಕೇವಲ 150 ರೂಪಾಯಿ ಎಂದು ಸಲೋನಿ ಖನ್ನಾ ತಿಳಿಸಿದ್ದಾರೆ. ಇದು ಪರ್ಫೆಕ್ಟ್ ಮ್ಯಾರೇಜ್. ಪೈಸಾ ವಸೂಲ್ ಆಯ್ತು, ಮದುವೆ ಒಪ್ಪಿಗೆ ಆಯ್ತು ಎಂಬ ಕ್ಯಾಪ್ಷನ್‍ನೊಂದಿಗೆ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

  • ಜಾಮೀನು ಬೆನ್ನಲ್ಲೇ ನಟ ದೀಪ್ ಸಿಧು ಮತ್ತೆ ಅರೆಸ್ಟ್

    ಜಾಮೀನು ಬೆನ್ನಲ್ಲೇ ನಟ ದೀಪ್ ಸಿಧು ಮತ್ತೆ ಅರೆಸ್ಟ್

    ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ಇಂದು ಬೆಳಗ್ಗೆ ದೆಹಲಿ ಕೋರ್ಟ್ ಜಾಮೀನು ನೀಡಿತ್ತು. ಆದರೆ ಈ ಬೆನ್ನಲ್ಲೇ ನಟ ಸಂಜೆ ಮತ್ತೆ ಅರೆಸ್ಟ್ ಆಗಿದ್ದಾರೆ.

    ಜನವರಿ 26ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಶನಿವಾರ ಜಾಮೀನು ನೀಡಿತ್ತು. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ಸಿಧು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ರೈತ ಮುಖಂಡರು ಪ್ರತಿಭಟನೆಗಾಗಿ ಕರೆ ನೀಡಿದ್ದು, ದೀಪು ಸಿಧು ರೈತ ಸಂಘದ ಸದಸ್ಯ ಅಲ್ಲ. ಸಿಧು ಜನಸಮೂಹವನ್ನು ಸಜ್ಜುಗೊಳಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ. ಹಿಂಸಾಚಾರದಲ್ಲಿ ಪಾಲ್ಗೊಂಡಿಲ್ಲ ಎಂದು ದೀಪ್ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಹಾಗಾಗಿ ದೀಪ್ ಸಿಧು ಅವರಿಗೆ ಇಂದು ಬೆಳಗ್ಗೆ ಜಾಮೀನು ಸಿಕ್ಕಿತ್ತು. ಆದರೆ ಸಂಜೆ ಮತ್ತೆ ದೆಹಲಿ ಪೊಲೀಸ್ ಅಪರಾಧ ದಳ ದೀಪ್ ಸಿಧುವನ್ನು ಬಂಧಿಸಿದೆ. ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್‍ಐಆರ್ ಗೆ ಸಂಬಂಧಿಸಿದಂತೆ ದೀಪ್ ಸಿಧು ಬಂಧನವಾಗಿದೆ.

    ಪ್ರಕರಣ ಹಿನ್ನೆಲೆ:
    ಕೃಷಿಕಾನೂನು ಮತ್ತು ಎಪಿಎಂಸಿ ಕಾನೂನು ವಿರೋಧಿಸಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಲು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್‍ಬುಕ್ ಲೈವ್ ಮಾಡಿದ್ದನು. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿತ್ತು. ಈ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿತ್ತು. ನಂತರ ಶನಿವಾರ ಬೆಳಗ್ಗೆ ಜಾಮೀನು ಸಿಕ್ಕಿತ್ತು. ಇಂದು ಸಂಜೆ ಮತ್ತೆ ನಟ ಅರೆಸ್ಟ್ ಆಗಿದ್ದಾರೆ.

  • ನಟ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

    ನಟ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ನಿಖಿಲ್, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ.

    ನಿನ್ನೆಯಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅಲ್ಲದೆ ಯಡಿಯೂರಪ್ಪನವರ ಮೊಮ್ಮಗಳು ಸೌಂದರ್ಯ ಮತ್ತು ಪತಿ ಡಾ.ನಿರಂಜನ್ ಅವರಿಗೂ ಸೋಂಕು ತಗುಲಿದೆ. ಎಲ್ಲರೂ ಯಡಿಯೂರಪ್ಪನವರು ದಾಖಲಾದ ಖಾಸಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  • ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

    ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

    ಬೆಂಗಳೂರು: ತಮ್ಮನ್ನು ಬೆಂಬಲಿಸುವಂತೆ ಸಾರಿಗೆ ನೌಕರರು ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬರೆದ ಪತ್ರಕ್ಕೆ ಇದೀಗ ನಟ ಉತ್ತರ ನೀಡಿದ್ದಾರೆ.

    ಈ ಸಂಬಂಧ ಪತ್ರ ಬರೆದಿರುವ ಯಶ್, ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು ಎಂದು ಹೇಳಿದ್ದಾರೆ.

    ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು, ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿದ್ದೇನೆ. ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.

    ಸಮಾಧಾನದ ವಿಷಯ ಅಂದ್ರೆ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಅರಿವು ಮತ್ತು ಕಳಕಳಿ ಇದೆ. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದಾರೆ. ಇದು ನನಗೆ ಮತ್ತಷ್ಟು ಖುಷಿ ಕೊಟ್ಟಿದೆ ಎಂದು ಭರವಸೆ ನೀಡಿದರು.

    ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ ಎಂದು ಯಶ್ ಅವರು ಸಾರಿಗೆ ನೌಕರರಿಗೆ ಪರಿಸ್ಥಿತಿ ಮನವರಿಕೆ ಮಾಡಿದರು.

    ಪತ್ರ:

    ರವರಿಗೆ,
    ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಪ್ರೀತಿಯ ಸಾರಿಗೆ ಸಂಸ್ಥೆ ನೌಕರರ ಕುಟುಂಬಕ್ಕೆ ನಿಮ್ಮ ಯಶ್ ಮಾಡುವ ನಮಸ್ಕಾರಗಳು. ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ.

    ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ.. ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ. ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ…ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ..

    ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ… ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು.. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು.. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು. ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ.

    ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡು…

    ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ.

    ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ.

    ವಂದನೆಗಳೊಂದಿಗೆ
    ನಿಮ್ಮ ಪ್ರೀತಿಯ
    ಯಶ್

  • ಸೈಕಲ್‍ನಲ್ಲಿ ತೆರಳಿ ವೋಟ್ ಹಾಕಿದ್ದಕ್ಕೆ ವಿಜಯ್ ಸ್ಪಷ್ಟನೆ

    ಸೈಕಲ್‍ನಲ್ಲಿ ತೆರಳಿ ವೋಟ್ ಹಾಕಿದ್ದಕ್ಕೆ ವಿಜಯ್ ಸ್ಪಷ್ಟನೆ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ನಟ ವಿಜಯ್ ಸೈಕಲ್ ನಲ್ಲಿ ತೆರಳಿ ವೋಟ್ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಸ್ವತಃ ನಟನೆ ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ವೋಟ್ ಮಾಡಿ ಮನೆಗೆ ತೆರಳುವಾಗಲೂ ನಟನಿಗೆ ಅಭಿಮಾನಿಗಳಿಂದ ಕಿರಿಕಿರಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳಿಗೆ ಕೂಡ ಹೇಳಿಕೆ ನೀಡದೆ ಸ್ನೇಹಿತರ ಬೈಕಿನಲ್ಲಿ ಮನೆಗೆ ವಾಪಸ್ಸಾಗಿದ್ದರು. ನಂತರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ನಟ, ನನ್ನ ಮತಗಟ್ಟೆ ತುಂಬಾ ಇಕ್ಕಟ್ಟಾದ ಸ್ಥಳದಲ್ಲಿದೆ. ಹೀಗಾಗಿ ಅಲ್ಲಿಗೆ ಕಾರಿನಲ್ಲಿ ತೆರಳಲು ಸಾಧ್ಯವಿಲ್ಲವಾಯಿತು. ಅಲ್ಲದೆ ಪಾರ್ಕಿಂಗ್ ಸಮಸ್ಯೆ ಕೂಡ ಉಂಟಾಗಬಹುದು ಎಂದು ಸೈಕಲ್ ನಲ್ಲಿ ತೆರಳಿ ವೋಟ್ ಹಾಕಿ ಬಂದೆ. ಆದರೆ ಇದರ ಹಿಂದೆ ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ನಟ ವಿಜಯ್ ಅವರು ನಿನ್ನೆ ಸೈಕಲ್‍ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದಿದ್ದರು. ಈ ವೇಳೆ ಅಭಿಮಾನಿಗಳು ವಿಜಯ್ ಅವರ ಜೊತೆಯಲ್ಲಿ ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡಿದ್ದು, ಈ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದವು.

    ಅಲ್ಲದೆ ಹಲವರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿರುವುದನ್ನು ಖಂಡಿಸಿ ವಿಜಯ್ ಸೈಕಲ್ ನಲ್ಲಿ ತೆರಳಿ ವೋಟ್ ಹಾಕಿದ್ದಾರೆ. ಈ ಮೂಲಕ ಬೆಲೆ ಏರಿಕೆಯನ್ನು ವಿಜಯ್ ಸಾಂಕೇತಿಕವಾಗಿ ಖಂಡಿಸಿದ್ದಾರೆ ಎಂದು ಭಾರೀ ಚರ್ಚೆಗೀಡಾಗಿತ್ತು.

  • ದುಬಾರಿ ಕಾರ್ ಮಾಲೀಕನಾದ ನಟ ಪ್ರಭಾಸ್

    ದುಬಾರಿ ಕಾರ್ ಮಾಲೀಕನಾದ ನಟ ಪ್ರಭಾಸ್

    ಬೆಂಗಳೂರು: ಟಾಲಿವುಡ್ ನಟ ಪ್ರಭಾಸ್ ಮನೆಗೆ ಇದೀಗ ಹೊಸ ಅತಿಥಿಯ ಆಗಮನವಾಗಿದೆ. ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರನ್ನು ಪ್ರಭಾಸ್ ಖರೀದಿ ಮಾಡಿ ಸುದ್ದಿಯಾಗಿದ್ದಾರೆ.

    ಹೌದು ಬಾಹುಬಲಿ ಖ್ಯಾತಿಯ ಪ್ರಭಾಸ್ ಕಿತ್ತಳೆ ಬಣ್ಣದ ಹೊಸ ಕಾರ್ ಖರೀದಿಸಿದ್ದಾರೆ. ಭಾರತದಲ್ಲಿ ಲ್ಯಾಂಬೋರ್ಗಿನಿ ಅವೆನ್ಟೆಡೊರ್ ರೋಡ್‍ಸ್ಟರ್ ಬೆಲೆ 5.6 ಕೋಟಿ ರೂಪಾಯಿ. ಪ್ರಭಾಸ್ ದುಬಾರಿ ಬೆಲೆಯ ಕಾರ್ ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ.

    ಪ್ರಭಾಸ್ ಬಳಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ. ಪ್ರಭಾಸ್ ಬಳಿ ಈಗಾಗಲೇ ಬಿಎಂಡಬ್ಲ್ಯೂ, ಮರ್ಸಿಡೀಸ್, ಆಡಿ ಕ್ಯೂ5 ಕಾರ್‍ಗಳಿವೆ. ಇದೀಗ ಈ ಸಾಲಿಗೆ ಲ್ಯಾಂಬೋರ್ಗಿನಿ ಕೂಡ ಸೇರಿದೆ. ಪ್ರಭಾಸ್ ಅವರ ಹೊಸ ಕಾರಿನ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

    ಬಿಲ್ಲಾ, ಡಾಲಿರ್ಂಗ್, ಮಿರ್ಚಿ, ಬಾಹುಬಲಿ, ಬಾಹುಬಲಿ 2, ಸಾಹೋ ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ಸ್ ಕೊಟ್ಟಿರುವ ನಟ ಪ್ರಭಾಸ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ಒಬ್ಬರಾಗಿದ್ದಾರೆ. ಸಿನಿಮಾಗಳ ಮೂಲಕವಾಗಿ ಸುದ್ದಿಯಾಗುತ್ತಿದ್ದ ನಟ ಇದೀಗ ಐಶಾರಾಮಿ ಕಾರ್ ಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.