Tag: ನದಿ

  • ಬರದ ವಿರುದ್ಧವೇ ತೊಡೆ ತಟ್ಟಿದ ಗ್ರಾಮಸ್ಥರು

    ಬರದ ವಿರುದ್ಧವೇ ತೊಡೆ ತಟ್ಟಿದ ಗ್ರಾಮಸ್ಥರು

    – ಜನಪ್ರತಿನಿಧಿ, ಅಧಿಕಾರಿಗಳೇ ನಾಚುವಂತೆ ಮಾಡಿದ್ದಾರೆ ಗ್ರಾಮಸ್ಥರು

    ಚಿಕ್ಕಮಗಳೂರು: ಪ್ರಕೃತಿಯ ವೈಚಿತ್ರ್ಯಕ್ಕೆ ಕಾಫಿನಾಡು ಹತ್ತಾರು ವರ್ಷಗಳಿಂದ ಕೊರಗುತ್ತಿದೆ. ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಮೂರು ಹವಾಮಾನವನ್ನ ಹೊಂದಿರುವ ಕಾಫಿನಾಡಿನ ಕಡೂರು ಶಾಶ್ಚತ ಬರಗಾಲಕ್ಕೆ ತುತ್ತಾದ ತಾಲೂಕು. ಇಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಹಾಹಾಕಾರ. ಆದರೆ ಕಡೂರಿನ ಪಿಳ್ಳೇನಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಶಾಪವಾಗಿದ್ದ ಬರಗಾಲವನ್ನ ತಾವೇ ಮೆಟ್ಟಿ ನಿಂತು, ಗ್ರಾಮವನ್ನ ಹಸಿರಾಗಿಸಿಕೊಂಡಿದ್ದಾರೆ.

    ಪಿಳ್ಳೇನಹಳ್ಳಿಯಿಂದ 6 ಕಿ.ಮೀ. ದೂರದಲ್ಲಿರೋ ವೇದಾವತಿ ನದಿಯಿಂದ ತಮ್ಮ ಗ್ರಾಮಕ್ಕೆ ನೀರು ತಂದುಕೊಂಡಿದ್ದಾರೆ. ಊರಿನ ಜನರೇ ಚಂದಾ ಎತ್ತಿ ಒಂದು ಲಕ್ಷಕ್ಕೂ ಅಧಿಕ ಹಣವನ್ನ ಸಂಗ್ರಹಿಸಿಕೊಂಡು ಪೈಪ್ ಹಾಗೂ ಮೋಟರ್‍ಗಳನ್ನ ತಾವೇ ತಂದು ಶ್ರಮದಾನದ ಮೂಲಕ ಆರು ಕಿ.ಮೀ. ಪೈಪ್ ಹಾಕಿಕೊಂಡು ನೀರು ತಂದಿದ್ದಾರೆ. ಹಳ್ಳಿಗರ ಭಗೀರಥ ಪ್ರಯತ್ನದಿಂದ ಇಂದು ಗ್ರಾಮದಲ್ಲಿನ ಕೆರೆಗಳು ತುಂಬಿದ್ದು ಜನ-ಜಾನುವಾರುಗಳಿಗೆ ಕುಡಿಯೋಕೆ ನೀರು ಸಿಗುವಂತಾಗಿದೆ.

    ವೇದಾವತಿ ನದಿ ಕೂಡ 12 ವರ್ಷಗಳಿಂದ ಬತ್ತಿದ್ದು, ಈ ವರ್ಷ ಮೈದುಂಬಿ ಹರಿಯುತ್ತಿದೆ. ರಾಜಕಾರಣಿಗಳು, ಅಧಿಕಾರಿಗಳಿಗೆ ಮನವಿ ಮಾಡಿ ಸುಸ್ತಾಗಿದ್ದ ಹಳ್ಳಿಗರು, ತಮ್ಮ ದಾಹವನ್ನ ತಾವೇ ನೀಗಿಸಿಕೊಳ್ಳೋಕೆ ಮುಂದಾಗಿ ಸೈ ಎನ್ನಿಸಿಕೊಂಡಿದ್ದಾರೆ. ಗ್ರಾಮಸ್ಥರೇ ಮುಂದೆ ನಿಂತು ಕೃತಕ ನಾಲೆ ನಿರ್ಮಿಸಿಕೊಂಡು 6 ಕಿ.ಮೀ. ದೂರದಿಂದ ತಮ್ಮ ಊರಿಗೆ ನೀರು ತಂದುಕೊಂಡಿದ್ದಾರೆ. ಅಲ್ಲಿಂದ 15 ಹೆಚ್.ಪಿ. ಸಾಮರ್ಥ್ಯದ ಎರಡು ಮೋಟರ್ ಗಳನ್ನ ಬಳಸಿಕೊಂಡು ಗ್ರಾಮಕ್ಕೆ ನೀರು ಹಾಯಿಸಿಕೊಂಡಿದ್ದಾರೆ.

    ಗ್ರಾಮಸ್ಥರು ಹಾಗೂ ಗ್ರಾಮದ ಯುವಕರ ಕೆಲಸಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಹಕರಿಸಿದರೆ ಗ್ರಾಮಕ್ಕೆ ಶಾಶ್ವತ ನೀರಿನ ಮೂಲ ಸಿಗುವುದರಲ್ಲಿ ಅನುಮಾನವಿಲ್ಲ. ಶಾಸಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಲಹೆ ನೀಡುವುದರ ಜೊತೆ ಈ ಯೋಜನೆಯನ್ನ ಶಾಶ್ವತ ಯೋಜನೆಯನ್ನಾಗಿಸಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಗ್ರಾಮದ ಜನರ ಕೆಲಸ ರಾಜ್ಯಕ್ಕೆ ಮಾದರಿಯಾಗುವಂತದ್ದು. ಶಾಶ್ಚತ ನೀರಾವರಿ ಯೋಜನೆಗೆ ಹತ್ತಾರು ವರ್ಷ ಸಮಯ ಕೇಳುವ ಅಧಿಕಾರಿಗಳು ಹಾಗೂ ರೈತರ ಉದ್ಧಾರವೇ ನಮ್ಮ ಗುರಿ ಅಂತಾ ಮಾರುದ್ಧ ಭಾಷಣ ಬಿಗಿಯೋ ರಾಜಕಾರಣಿಗಳಿಗೂ ಈ ಗ್ರಾಮದ ಜನ ಮಾದರಿಯಾಗಿದ್ದಾರೆ. ರೈತರೇ ಮಾಡಿಕೊಂಡಿರೋ ಈ ಯೋಜನೆಗೂ ಸರ್ಕಾರ ಕಲ್ಲು ಹಾಕದೆ, ಅಭಿವೃದ್ಧಿಪಡಿಸೋ ನಿಟ್ಟಿನಲ್ಲಿ ಯೋಚಿಸಲಿ ಅನ್ನೋದು ಬಯಲುಸೀಮೆಯ ಜನರ ಆಶಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರ ಸಾವು

    ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರ ಸಾವು

    ಕಾರವಾರ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿ ನಡೆದಿದೆ.

    ಪರಮೇಶ್ವರ ಲಕ್ಷ್ಮಣ ಅಂಬಿಗ (42) ಹಾಗೂ ಗಣಪತಿ ತಿಮ್ಮ ಅಂಬಿಗ (25) ಮೃತ ದುರ್ದೈವಿಗಳು. ಇಬ್ಬರೂ ಮೀನುಗಾರರ ಗುರುವಾರ ಇಡಗುಂಜಿ ಸಮೀಪದ ಶರಾವತಿ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆದರೆ ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು.

    ಇಂದು ಮುಂಜಾನೆ ಪೊಲೀಸರು ನದಿಯಲ್ಲಿ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೀನು ಹಿಡಿಯಲು ಹೋಗಿ ನೀರು ಪಾಲಾದ್ರು!

    ಮೀನು ಹಿಡಿಯಲು ಹೋಗಿ ನೀರು ಪಾಲಾದ್ರು!

    ಬಾಗಲಕೋಟೆ: ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಯಡಳ್ಳಿ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.

    ಪರಶುರಾಮ(27), ಕೈಲಾಸ್ ವಾಗ್ಮೋರೆ(30) ಮತ್ತು ರಾಮಕೃಷ್ಣ(42) ಮೃತ ದುರ್ದೈವಿಗಳು. ಮೂವರು ಮಹಾರಾಷ್ಟ್ರ ಮೂಲದವರಾಗಿದ್ದು, ಕಬ್ಬು ಕಡಿಯುವ ಕಾರ್ಮಿಕರೆಂದು ತಿಳಿದು ಬಂದಿದೆ. ಈ ಮೂವರು ಶನಿವಾರ ಸಂಜೆ ವೇಳೆ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಆದರೆ ಮೀನು ಹಿಡಿಯಲು ಹೋಗಿ ಈಜು ಬಾರದೆ ಮೂವರು ನೀರು ಪಾಲಾಗಿ ಮೃತಪಟ್ಟಿದ್ದಾರೆ.

    ಈ ಬಗ್ಗೆ ಸ್ಥಳದಲ್ಲಿದ್ದವರು ಮುಧೋಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೂವರ ಮೃತದೇಹಕ್ಕಾಗಿ ಹುಡುಕಾಟ ನಡೆಸಿ ಕೊನೆಗೆ ಶವಗಳನ್ನು ಹೊರತೆಗೆದಿದ್ದಾರೆ.

    ಸದ್ಯಕ್ಕೆ ಮುಧೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರೀ ಅನಾಹುತದಿಂದ ಬದುಕುಳಿದ ಐದು ವಿದ್ಯಾರ್ಥಿಗಳು!

    ಭಾರೀ ಅನಾಹುತದಿಂದ ಬದುಕುಳಿದ ಐದು ವಿದ್ಯಾರ್ಥಿಗಳು!

    ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ, ವಿದ್ಯಾರ್ಥಿಗಳಲ್ಲಿ ಐವರು ನೀರಿನ ಪ್ರವಾಹಕ್ಕೆ ಸಿಲುಕಿ, ಬದುಕುಳಿದ ಘಟನೆ ಮಂಗಳೂರು ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ.

    ವಾಲ್ಮೀಕಿ ಜಯಂತಿ ನಿಮಿತ್ತ ಇಂದು ಶಾಲಾಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿತ್ತು. ಹೀಗಾಗಿ ನಾವೂರ ಗ್ರಾಮ ಸಮೀಪದ ಲಕ್ಷ್ಮಿ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ಹರಿಯುವ ನೇತ್ರಾವತಿ ನದಿಗೆ 11 ಜನರ ವಿದ್ಯಾರ್ಥಿಗಳ ತಂಡ ಈಜಾಡಲು ತೆರಳಿತ್ತು. ಈ ವೇಳೆ ಶಂಭೂರು ಎಎಂಆರ್ ಡ್ಯಾಂನಿಂದ ಏಕಾಏಕಿ ನೀರನ್ನು ಹೊರಬಿಡಲಾಗಿತ್ತು. ನೀರಿನ ರಭಸವನ್ನು ಗಮನಿಸಿದ 6 ಮಂದಿ ವಿದ್ಯಾರ್ಥಿಗಳು ಈಜಿ ದಡ ಸೇರಿದ್ದಾರೆ.

    ಉಳಿದ ಐವರು ವಿದ್ಯಾರ್ಥಿಗಳಿಗೆ ಈಜಲು ಸಾಧ್ಯವಾಗದೇ ನದಿಯ ಇನ್ನೊಂದು ಬದಿಯ ದೊಡ್ಡ ಬಂಡೆಯ ಮೇಲೆ ಹತ್ತಿದ್ದಾರೆ. ಮಕ್ಕಳು ಅಲ್ಲಿಂದ ಪಾರಾಗಲು ಪರದಾಡುವಂತಾಗಿತ್ತು. ನದಿಯ ದಂಡೆ ಸೇರಿದ್ದ 6 ವಿದ್ಯಾರ್ಥಿಗಳು ಬೊಬ್ಬೆ ಹಾಗೂ ಕಿರುಚಾಟ ಕೇಳಿಸಿಕೊಂಡ, ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ನಿರತರಾದರು. ಹಗ್ಗ ಕೊಟ್ಟು ಒಬ್ಬೊಬ್ಬರನ್ನೇ ರಕ್ಷಿಸಿದ್ದಾರೆ.

    ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿ, ವಿದ್ಯಾರ್ಥಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡು, ನಿಮಗೆ ನದಿಯ ಆಳ ಗೊತ್ತಿಲ್ಲದಿದ್ದರೆ ಸ್ಥಳೀಯರನ್ನು ಕೇಳಬೇಕಿತ್ತು. ಯಾರೇ ಪ್ರಾಣ ಹೋಗಿದ್ದರೂ ನಷ್ಟ ಅಲ್ಲವೇ. ಡ್ಯಾಂ ಹತ್ತಿರವೇ ಇದೆ. ನಿಮಗೆ ಈಜಾಡುವ ಉದ್ದೇಶವಿದ್ದರೆ ಮಾಹಿತಿ ಪಡೆಯಬೇಕಿತ್ತು. ಒಂದು ವೇಳೆ ಸ್ಥಳೀಯರು ಬಾರದಿದ್ದರೇ ಐವರ ಜೀವವೇ ಹೋಗುತ್ತಿತ್ತು ಎಂದು ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಲೆಗೆ ಬಿತ್ತು ಅಪರೂಪದ 33 ಕಿಲೋ ತೂಕದ ಮೀನು

    ಬಲೆಗೆ ಬಿತ್ತು ಅಪರೂಪದ 33 ಕಿಲೋ ತೂಕದ ಮೀನು

    ಬೆಳಗಾವಿ: 33 ಕಿಲೋ ತೂಕದ ಅಪರೂಪದ ಖಟಲಾ ಪ್ರಭೇದ ಮೀನು ಘಟಪ್ರಭಾ ನದಿಯ ಹಿಡಕಲ್ ಜಲಾಶಯದಲ್ಲಿ ಮೀನುಗಾರನ ಬಲೆಗೆ ಬಿದ್ದಿದೆ.

    ಘಟಪ್ರಭಾ ನದಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಮೀನು ಸಿಕ್ಕಿದ್ದು ವಿಶೇಷವಾಗಿದೆ. ಹುಕ್ಕೇರಿ ಪಟ್ಟಣದ ಶಿವು ಭೋವಿ ಮೀನಿಗಾಗಿ ನದಿಗೆ ಬಲೆ ಹಾಕಿದ್ದರು. ಈ ಬಲೆಯಲ್ಲಿ ಕೇವಲ ಒಂದರಿಂದ ಎರಡು ಕಿಲೋ ತೂಕದ ಮೀನು ಮಾತ್ರ ಸಿಗುತ್ತಿತ್ತು. ಆದರೆ  ಅಪರೂಪವಾಗಿ ಈ ಸಾಮಾನ್ಯ ಬಲೆಯಲ್ಲಿ ಖಟಲಾ ಪ್ರಭೇದದ ಮೀನು ಸಿಕ್ಕಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಮೀನುಗಾರ, ನಾನು ಪ್ರತಿದಿನ ಮೀನಿಗಾಗಿ ಬಲೆ ಬೀಸುತ್ತಿದ್ದೆ. ದಿನ ಸಣ್ಣ ಪುಟ್ಟ ಮೀನುಗಳನ್ನು ಹಿಡಿದು ಮಾರಾಟ ಮಾಡುತ್ತಿದ್ದೆ. ಆದರೆ ನನ್ನ ಜೀವನದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದ ಮೀನು ಸಿಕ್ಕಿರುವುದು ಇದೇ ಮೊದಲ ಬಾರಿ ಎಂದು ಮೀನುಗಾರ ಶಿವು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿಕ್ಕೋಡಿ ಭಾಗದಲ್ಲಿ ಒಂದೇ ದಿನ ಮೀನು 9 ಸಾವಿರ ರೂ. ಗಳಿಗೆ ಮಾರಾಟವಾಗುವದರ ಮೂಲಕ ದಾಖಲೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆಯಲ್ಲಿ ಕೂಡಿ ಹಾಕಿ ಸತತ 28 ದಿನ ಗ್ಯಾಂಗ್‍ರೇಪ್ ಮಾಡಿ ನದಿಗೆ ಎಸೆದ್ರು

    ಮನೆಯಲ್ಲಿ ಕೂಡಿ ಹಾಕಿ ಸತತ 28 ದಿನ ಗ್ಯಾಂಗ್‍ರೇಪ್ ಮಾಡಿ ನದಿಗೆ ಎಸೆದ್ರು

    ಭುವನೇಶ್ವರ: ಹುಡುಗಿಯೊಬ್ಬಳನ್ನು ಕಿಡ್ನಾಪ್ ಮಾಡಿ ಮನೆಯಲ್ಲಿ ಕೂಡಿ ಹಾಕಿ 28 ದಿನಗಳ ಸತತವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಸಂತ್ರಸ್ತೆಯನ್ನು ನದಿಗೆ ಎಸೆದಿರುವ ಘಟನೆ ಒಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.

    ಭಾನುವಾರ ಆರೋಪಿಗಳು ಸಂತ್ರಸ್ತೆಯನ್ನು ಖರಾಸ್ರೋಟಾ ನದಿಗೆ ಬಿಸಾಕಿದ್ದಾರೆ. ಬಳಿಕ ಸಂತ್ರಸ್ತೆ ಹೇಗೋ ಕಷ್ಟಪಟ್ಟು ಈಜಿಕೊಂಡು ಜಿಲ್ಲೆಯ ಕೌಖಿಯಾ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ರೌಟ್ಪುರ್ ಗ್ರಾಮದ ತೀರಕ್ಕೆ ಬಂದಿದ್ದಾಳೆ. ಬಳಿಕ ನಡೆದ ಘಟನೆಯ ಬಗ್ಗೆ ಅಲ್ಲಿನ ಗ್ರಾಮಸ್ಥರಿಗೆ ತಿಳಿಸಿದ್ದಾಳೆ.

    ಆಗಸ್ಟ್ 20ರಂದು ಮಧುಬಾನ್ ಬಜಾರ್ ಗೆ ಹೋಗುತ್ತಿದ್ದಾಗ ಅಪರಿಚಿತ ಯುವಕರ ಗುಂಪೊಂದು ಬಂದು ನನ್ನನ್ನು ಅಪಹರಿಸಿತ್ತು. ಬಳಿಕ ನಿರ್ಜನ ಪ್ರದೇಶದಲ್ಲಿದ್ದ ಒಂದು ಮನೆಯಲ್ಲಿ ಕೂಕಿ ಹಾಕಿದ್ದು, ಅಂದಿನಿಂದಲೂ ಭಾನುವಾರದ ವರೆಗೂ ಅಂದರೆ ಸತತ 28 ದಿನಗಳ ಕಾಲ ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಗ್ರಾಮಸ್ಥರ ಬಳಿ ಹೇಳಿಕೊಂಡಿದ್ದಾಳೆ.

    ಭಾನುವಾರ ರಾತ್ರಿ ಆರೋಪಿಗಳು ಸಂತ್ರಸ್ತೆಯನ್ನು ಕೊಲೆ ಮಾಡುವ ಉದ್ದೇಶದಿಂದ ಖರಾಸ್ರೋಟಾ ನದಿಗೆ ಎಸೆದಿದ್ದಾರೆ. ಆದರೆ ಸಂತ್ರಸ್ತೆ ಬದುಕುಳಿದಿದ್ದು, ಈಜಿಕೊಂಡು ದಡ ಸೇರಿದ್ದಾಳೆ. ನಂತರ ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಂತ್ರಸ್ತೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

    ಆಗಸ್ಟ್ 20 ರಂದು ನಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸಂತ್ರಸ್ತೆಯ ಪೋಷಕರು ದೂರು ದಾಖಲಿಸಿದ್ದರು. ನಾವು ಅನೇಕ ದಿನಗಳಿಂದ ಹುಡುಕಾಟ ನಡೆಸುತ್ತಿದ್ದೆವು. ಈಗ ಸಂತ್ರಸ್ತೆ ಪತ್ತೆಯಾಗಿದ್ದಾಳೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಂಬಿ ಹರಿಯುತ್ತಿರುವ ಘಟಪ್ರಭೆ- ನೂರಾರು ಎಕರೆ ಬೆಳೆ ಜಲಾವೃತ

    ತುಂಬಿ ಹರಿಯುತ್ತಿರುವ ಘಟಪ್ರಭೆ- ನೂರಾರು ಎಕರೆ ಬೆಳೆ ಜಲಾವೃತ

    ಬಾಗಲಕೋಟೆ: ಘಟಪ್ರಭಾ ನದಿ ನೀರಿನ ಹರಿವು ಹೆಚ್ಚಾದ ಪರಿಣಾಮ ಜಿಲ್ಲೆಯ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ನೂರಾರು ಎಕರೆ ಬೆಳೆ ಸಂಪೂರ್ಣ ಜಲಾವೃತವಾಗಿದೆ.

    ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ, ಘಟಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಮುಧೋಳ ತಾಲೂಕಿನ ಮಿರ್ಜಿ ಗ್ರಾಮಕ್ಕೆ ಸೇರುವ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದ್ದು, ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ.

    ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಈರುಳ್ಳಿ ಹಾಗೂ ಗೋವಿನಜೋಳ ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಹಾಳಾಗಿವೆ. ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿಯು ಜಿಲ್ಲೆಯ ಹಲವು ಭಾಗಗಳಲ್ಲಿ ಅಪಾರ ಪ್ರಮಾಣದ ನಷ್ಟವನ್ನು ಉಂಟುಮಾಡುತ್ತಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ರೈತರು ಬೆಳೆದ ಬೆಳೆಗಳು ಕಣ್ಣಮುಂದೆಯೇ ಹಾಳಾಗಿರುವುದನ್ನು ಕಂಡು ಅಸಾಹಯಕ ಸ್ಥಿತಿಯಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿರಣ್ಯಕೇಶಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ – ಹುಡುಕಾಟದಲ್ಲಿ ಪೊಲೀಸರು

    ಹಿರಣ್ಯಕೇಶಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ – ಹುಡುಕಾಟದಲ್ಲಿ ಪೊಲೀಸರು

    ಚಿಕ್ಕೋಡಿ: ತುಂಬಿ ಹರಿಯುತ್ತಿರುವ ಹಿರಣ್ಯಕೇಶಿ ನದಿಯಲ್ಲಿ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು, ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

    ಸಂಕೇಶ್ವರ ಪಟ್ಟಣ ನಿವಾಸಿ ಅಸ್ಲಮ ಜಮಾದಾರ(34) ನದಿ ಪಾಲಾಗಿರುವ ವ್ಯಕ್ತಿ. ಜಮಾದಾರ ಅವರು ಉಕ್ಕಿ ಹರಿಯುತ್ತಿರುವ ಹಿರಣ್ಯಕಾಶಿ ನದಿಯ ಬಳಿ ಬೈಕ್ ಮೇಲೆ ದಂಡೆಗೆ ಹೋದಾಗ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದಾರೆ.

    ಈ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಜಮಾದಾರ ಅವರಿಗೆ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಹಿರಣ್ಯಕೇಶಿ ನದಿ ತುಂಬಿ ಹರಿಯುತ್ತಿದೆ. ಆದ್ದರಿಂದ ಜಮಾದಾರ ಕೊಚ್ಚಿ ಹೋಗಿದ್ದರಿಂದ ಬದುಕುಳಿದಿರುವುದು ಕಷ್ಟ ಎಂದು ಪೊಲೀಸರು ಶಂಕಿಸಿದ್ದಾರೆ.

    ಈ ಘಟನೆ ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾವೇರಿ ನದಿ ಪಾತ್ರದಲ್ಲಿ ಭರ್ಜರಿ ಮಳೆ- ದೇವಾಲಯ, ಜಮೀನು ಜಲಾವೃತ

    ಕಾವೇರಿ ನದಿ ಪಾತ್ರದಲ್ಲಿ ಭರ್ಜರಿ ಮಳೆ- ದೇವಾಲಯ, ಜಮೀನು ಜಲಾವೃತ

    ಮಂಡ್ಯ: ಕಾವೇರಿ ನದಿಪಾತ್ರದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಕೆಆರ್‍ಎಸ್ ಅಣೆಕಟ್ಟೆಗೆ ನಿರಂತರವಾಗಿ ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಕೆಆರ್‍ಎಸ್ ಅಣೆಕಟ್ಟಯಿಂದ ಅನಿವಾರ್ಯವಾಗಿ 1 ಲಕ್ಷದ 30 ಸಾವಿರ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕಾವೇರಿ ನದಿಪಾತ್ರದ ದೇವಾಲಯ, ಜಮೀನು ಜಲಾವೃತ್ತವಾಗಿ ಪ್ರವಾಹದ ಭೀತಿ ಎದುರಾಗಿದೆ. ನದಿ ಪಾತ್ರದ ಗ್ರಾಮಗಳ ಜನ ಎಂದು ಏನಾಗುವುದೋ ಎಂದು ಆತಂಕದಲ್ಲೇ ದಿನದೂಡುತ್ತಿದ್ದಾರೆ.

    ಕಾವೇರಿ ನದಿ ಪಾತ್ರದಲ್ಲಿ ಭರ್ಜರಿಯಾಗಿ ಮಳೆಯಾಗುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಅಣೆಕಟ್ಟೆಗೆ ನಿರಂತರವಾಗಿ ಲಕ್ಷ ಕ್ಯೂಸೆಕ್‍ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಅನಿವಾರ್ಯವಾಗಿ ಅಣೆಕಟ್ಟೆಯಿಂದ 1 ಲಕ್ಷದ 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ. ನದಿ ಪಾತ್ರದಲ್ಲಿರುವ ಜಮೀನು, ದೇವಸ್ಥಾನ ಜಲಾವೃತ್ತವಾಗಿದೆ. ರಂಗನತಿಟ್ಟು ಪಕ್ಷಿಧಾಮ ಜಲಾವೃತ್ತವಾಗಿ ಪಕ್ಷಿ ಸಂಕುಲಕ್ಕೆ ಆತಂಕ ಎದುರಾಗಿದೆ.

    ಇನ್ನು ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಸ್ಪರ್ಶಿಸಿ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದ್ದು, ಸೇತುವೆ ಮುಳುಗುವ ಭೀತಿಯಲ್ಲಿದೆ. ಇದರಿಂದ ಸೇತುವೆಯ ಎರಡೂ ಬದಿ ತಡೆಗೋಡೆ ಕಟ್ಟಿ ಸಂಪೂರ್ಣ ಪ್ರವೇಶ ನಿರ್ಬಂಧಿಸಲಾಗಿದೆ. ಪಶ್ಚಿಮ ವಾಹಿನಿ ಬಳಿ ಶ್ರೀರಾಮ, ಶ್ರೀಕೃಷ್ಣ ದೇವಾಲಯ ಸೇರಿದಂತೆ ಹಲವು ದೇವಾಲಯಗಳು ಜಲಾವೃತವಾಗಿದೆ. ನಿಮಿಷಾಂಭ ದೇವಾಲಯದ ಮೆಟ್ಟಿಲವರೆಗೂ ಕಾವೇರಿ ನದಿ ಹರಿಯುತ್ತಿದೆ. ಭಕ್ತರು ನದಿಗಿಳಿಯದಂತೆ ಬ್ಯಾರಿಕೇಡ್ ಹಾಕಿ ಪೊಲೀಸ್ ಕಾವಲು ಹಾಕಲಾಗಿದೆ.

    ನದಿ ಪಾತ್ರದ ಜಮೀನಿಗೆ ನೀರು ನುಗ್ಗಿದೆ. ನದಿ ಪಾತ್ರದ ಗ್ರಾಮಗಳು ಮುಳುಗಡೆ ಭೀತಿಯಲ್ಲಿವೆ. ಕಾವೇರಿ ನದಿಯ ದಂಡೆಯಲ್ಲಿ ಬರುವ ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಎಡಮುರಿ, ಬಲಮುರಿ, ರಂಗನತಿಟ್ಟು, ಮುತ್ತತ್ತಿ ಸೇರಿದಂತೆ ಹಲವೆಡೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಕೆಆರ್‍ಎಸ್ ಅಣೆಕಟ್ಟೆ ತುಂಬದೆ ಸತತ ಬರಗಾಲದಿಂದ ಕಂಗೆಟ್ಟ ಮಂಡ್ಯ ಜನ ಇದೀಗ ಕಾವೇರಿ ನದಿ ಹರಿಯುತ್ತಿರುವ ರಭಸ ನೋಡಿ ಆತಂಕಕ್ಕೆ ಒಳಗಾಗಿದ್ದಾರೆ.

    ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದೆ. ಸ್ವತಃ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಕಾವೇರಿ ನದಿ ಪಾತ್ರದ ಸ್ಥಳಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಅಧಿಕಾರಿಗಳ ಜೊತೆ ನಿರಂತರವಾಗಿ ಸಭೆ ನಡೆಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

    ಒಟ್ಟಾರೆ ಮಳೆ ಹೀಗೆ ಮುಂದುವರಿದರೆ ರಂಗನತಿಟ್ಟು ಪಕ್ಷಿಧಾಮ, ಐತಿಹಾಸಿಕ ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಾಲಯ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗೋದರಲ್ಲಿ ಅನುಮಾನವಿಲ್ಲ. ಆದರಿಂದ ಮಳೆರಾಯ ತನ್ನ ರೌದ್ರ ರೂಪ ತ್ಯಜಿಸಿ ಶಾಂತನಾಗಿ ಜೀವ ಜಗತ್ತನ್ನು ಉಳಿಸಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರವಾಹದಿಂದಾಗಿ 2 ದಿನ ಶೃಂಗೇರಿ ಶೌಚಾಲಯದಲ್ಲಿದ್ದ ವ್ಯಕ್ತಿಯ ರಕ್ಷಣೆ

    ಪ್ರವಾಹದಿಂದಾಗಿ 2 ದಿನ ಶೃಂಗೇರಿ ಶೌಚಾಲಯದಲ್ಲಿದ್ದ ವ್ಯಕ್ತಿಯ ರಕ್ಷಣೆ

    ಚಿಕ್ಕಮಗಳೂರು: ಶೃಂಗೇರಿಯಲ್ಲಿ ತುಂಗಾ ನದಿಯ ಪ್ರವಾಹಕ್ಕೆ ಸಿಲುಕಿ 2 ದಿನ ಶೌಚಾಲಯದಲ್ಲೇ ಪ್ರಾಣ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ರಕ್ಷಣಾತಂಡ ಯಶಸ್ವಿಯಾಗಿದೆ.

    ವಿನೋದ್ ಮಂಡ್ಲೆ ರಕ್ಷಣೆಯಾದ ವ್ಯಕ್ತಿ. ವಿನೋದ್ ಮೂಲತಃ ಬಿಹಾರ್ ಮೂಲದವರಾಗಿದ್ದು, ಶೃಂಗೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ  ಬುಧವಾರ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ತುಂಗಾನದಿಯ ಪ್ರವಾಹದಲ್ಲಿ ಸಿಕ್ಕಿಕೊಂಡ ವಿನೋದ್ ಜೀವ ಉಳಿಸಿಕೊಳ್ಳಲು ಗಾಂಧಿ ಮೈದಾನದಲ್ಲಿರುವ ಶೌಚಾಲಯದಲ್ಲೇ ಆಶ್ರಯ ಪಡೆದುಕೊಂಡಿದ್ದಾರೆ.

    ಪ್ರವಾಹದ ಪ್ರಮಾಣ ಕಡಿಮೆಯಾಗದೇ ಕಳೆದ ಎರಡೂ ದಿನಗಳಿಂದಲೂ ಶೌಚಾಲಯದಲ್ಲೇ ಸಿಲುಕಿಕೊಂಡಿದ್ದರು. ಶೌಚಾಲಯದಲ್ಲಿ ವ್ಯಕ್ತಿ ಸಿಲುಕಿಕೊಂಡಿರುವ ವಿಷಯ ತಿಳಿದ ಎ.ಎನ್.ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ವಿನೋದ್ ನನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv