Tag: ನದಿ

  • ಡಂಗುರ ಸಾರಿ ನದಿ ಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ

    ಡಂಗುರ ಸಾರಿ ನದಿ ಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ

    ಹಾವೇರಿ: ಮಳೆ ಹೆಚ್ಚಾಗಿರುವ ಕಾರಣದಿಂದಾಗಿ ನದಿ ಪಾತ್ರದ ಗ್ರಾಮಗಳ ಜನರಿಗೆ ಡಂಗುರ ಸಾರುವ ಮೂಲಕವಾಗಿ ಎಚ್ಚರಿಕೆಯನ್ನು ನೀಡಲಾಗಿದೆ.

    ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿರೋ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಡಂಗುರ ಸಾರಲಾಗಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ರಟ್ಟಿಹಳ್ಳಿ ತಾಲೂಕು ಆಡಳಿತ ಸೂಚನೆ ನೀಡಿದೆ. ಇದನ್ನೂ ಓದಿ:  ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರ ಹುಚ್ಚಾಟ

    ಕುಮುದ್ವತಿ ನದಿಗೆ ಭರಪೂರ ನೀರು ಬರುತ್ತಿದೆ. ನದಿಗೆ ನೀರು ಬರುತ್ತಿರೋದರಿಂದ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿ ಹತ್ತಿರ ಹೋಗಬೇಡಿ ಎಂದು ರಟ್ಟೀಹಳ್ಳಿ ತಾಲೂಕು ಆಡಳಿತದಿಂದ ವಿವಿಧ ಗ್ರಾಮಗಳಲ್ಲಿ ಡಂಗುರ ಸಾರಿಸಿ, ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಅಬ್ಬರ ಎಲ್ಲಡೆ ಹೆಚ್ಚಾಗಿದೆ. ಜನರು ಆದಷ್ಟು ಮುನ್ನೆಚ್ಚರಿಕೆಯಿಂದ ಇರಬೇಕಾಗಿದೆ.

  • ನಿರಂತರ ಮಳೆಗೆ ವರದಾ ನದಿಯ ಬ್ಯಾರೇಜ್ ಬಂದ್

    ನಿರಂತರ ಮಳೆಗೆ ವರದಾ ನದಿಯ ಬ್ಯಾರೇಜ್ ಬಂದ್

    ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮೋಡಕವಿದ ವಾತಾವರಣದೊಂದಿಗೆ ಮಳೆ ಬೀಳುತ್ತಿದೆ.

    ಹಾವೇರಿ ನಗರ ಸೇರಿದಂತೆ ಜಿಲ್ಲೆಯ 8 ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆಗಾಗ ಬೀಳುತ್ತಿರೋ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬಳಿ ಇರೋ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿನ ಸಂಪರ್ಕ ಕಡಿತಗೊಂಡಿದೆ.

    ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿತಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಕಳಸೂರು ಗ್ರಾಮದಿಂದ ದೇವಗಿರಿ, ಗಣಜೂರು, ಹಾವೇರಿ ಮತ್ತು ಕೋಳೂರಿಗೆ ಗ್ರಾಮಕ್ಕೆ ಓಡಾಡುತ್ತಿದ್ದ ಜನರಿಗೆ ಸಂಪರ್ಕ ಕಡಿತಗೊಂಡಿದೆ.

    ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದ ದುರ್ಗಾದೇವಿ ಕೆರೆಗೂ ಭರಪೂರ ನೀರು ಬಂದಿದೆ.

  • ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರ ಹುಚ್ಚಾಟ

    ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರ ಹುಚ್ಚಾಟ

    ಚಿಕ್ಕೋಡಿ(ಬೆಳಗಾವಿ): ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಚಿಕ್ಕೋಡಿಯಲ್ಲಿ ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರು ತಮ್ಮ ಹುಚ್ಚಾಟ ಮೆರೆದಿದ್ದಾರೆ.

    ರಾಷ್ಟ್ರಿಯ ಹೆದ್ದಾರಿ 4ರ ಮೇಲೆ ವೇದಗಂಗಾ ನದಿ ಉಕ್ಕಿ ಹರಿಯುತ್ತಿದೆ. ನಿಪ್ಪಾಣಿಯ ಯಮಗರ್ಣಿ ಬಳಿ ಉಕ್ಕಿ ಹರಿಯುತ್ತಿರುವ ವೇದಗಂಗಾ ನದಿ ಪ್ರವಾಹದಲ್ಲಿ ಸಿಲುಕಿರುವ ಓಮ್ನಿ ವಾಹನ ತರಲು ಹೋಗಿ ಯುವಕರು ಹುಚ್ಚಾಟ ತೋರಿದ್ದಾರೆ.

    ಲಾರಿ ಮೂಲಕ ಹಗ್ಗ ಬಳಸಿ ಪ್ರಾಣದ ಹಂಗು ತೊರದು ಯುವಕರು ನದಿಗೆ ಇಳಿದಿದ್ದಾರೆ. ಮೊದಲು ಯುವಕರಿಗೆ ನದಿಗೆ ಇಳಿಯಲು ಪೊಲೀಸರು ಅವಕಾಶ ಮಾಡಿ ಕೊಟ್ಟಿದ್ದಾರೆ. ಬಳಿಕ ಮಾಧ್ಯಮಗಳ ಕ್ಯಾಮೆರಾ ನೋಡಿ ಯುವಕರನ್ನ ಹೊರ ಕರೆದಿದ್ದಾರೆ.

    ಉಕ್ಕಿ ಹರಿಯುವ ನೀರಿನಲ್ಲಿ ಓಮ್ನಿ ವಾಹನದವರೆಗೂ ಹೋಗಿ ಪೊಲೀಸರ ನಿರಾಕರಣೆಯ ಕಾರಣ ಬರಿಗೈಯಲ್ಲಿ ಯುವಕರು ವಾಪಸ್ ಬಂದಿದ್ದಾರೆ. ಇದನ್ನೂ ಓದಿ: ದಿವ್ಯಾ ಸುರೇಶ್‍ಗೆ ಗೊಂದಲ – ಕಾರಣವೇನು?

  • ಮಹಾರಾಷ್ಟ್ರ, ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ – 8 ಸೇತುವೆಗಳು ಜಲಾವೃತ

    ಮಹಾರಾಷ್ಟ್ರ, ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ – 8 ಸೇತುವೆಗಳು ಜಲಾವೃತ

    ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದೆ.

    ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ ಎಂಟು ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜತ್ರಾಟ-ಭೀವಶಿ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ನಾಗನೂರು-ಗೋಟೂರ, ಹುನ್ನರಗಿ-ಮಮದಾಪೂರ, ಭೋಜವಾಡಿ-ಕುನ್ನೂರ, ಮಲಿಕವಾಡ-ದತ್ತವಾಡ ಸೇತುವೆಗಳು ಮುಳುಗಡೆಯಾಗಿವೆ. 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು, ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರ ಮಾಡುತ್ತಿದ್ದಾರೆ.

    ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಕೊಯ್ನಾ- 347ಮಿಮೀ ನವಜಾ- 427ಮಿಮೀ ರಾಧಾನಗರಿ 194ಮಿಮೀ ಹಾಗೂ ಮಹಾಬಳೇಶ್ವರದಲ್ಲಿ 424ಮಿಮೀ ಗಳಷ್ಟು ಮಳೆ ಪ್ರಮಾಣ ದಾಖಲಾಗಿದೆ. ಚಿಕ್ಕೋಡಿ ಭಾಗದ ವಿವಿಧೆಡೆ ಸರಾಸರಿ 50 ಮಿಲೀ ಮೀಟರ್ ಗಳಷ್ಟು ಮಳೆಯಾಗಿದೆ.

    ಕೃಷ್ಣಾ ನದಿಗೆ 78 ಸಾವಿರ ಕ್ಯೂಸೆಕ್ ಗೂ ಹೆಚ್ಚು ಪ್ರಮಾಣದ ಒಳ ಹರಿವು ಇದ್ದು, ಹಿಪ್ಪರಗಿ ಬ್ಯಾರೇಜ್‍ನಿಂದ 74,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನದಿ ತೀರದಲ್ಲಿ ಬೆಳಗಾವಿ ಜಿಲ್ಲಾಡಳಿತ ಪ್ರವಾಹ ಭೀತಿಯಿಂದ ಹೈ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ:ಜಿಟಿ ಜಿಟಿ ಮಳೆ – ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರದಾಟ

  • ಸನ್ನತ್ತಿ ಬ್ಯಾರೇಜ್ ನಿಂದ ಭೀಮಾನದಿಗೆ 15 ಸಾವಿರ ಕ್ಯೂಸೆಕ್ ನೀರು

    ಸನ್ನತ್ತಿ ಬ್ಯಾರೇಜ್ ನಿಂದ ಭೀಮಾನದಿಗೆ 15 ಸಾವಿರ ಕ್ಯೂಸೆಕ್ ನೀರು

    – ಉಕ್ಕಿ ಹರಿಯುತ್ತಿರುವ ಭೀಮಾ, ಕಂಗಳೇಶ್ವರ ದೇವಸ್ಥಾನ ಜಲಾವೃತ

    ಯಾದಗಿರಿ: ಮಹಾರಾಷ್ಟ್ರದ ಮಹಾಮಳೆಗೆ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ಭೀಮಾ ನದಿಗೆ ಸಹ ಹೆಚ್ಚಿನ ನೀರು ಹರಿದು ಬರುತ್ತಿದೆ.

    ಸನ್ನತ್ತಿ ಬ್ಯಾರೇಜ್ ನಿಂದ ಭೀಮಾ ನದಿಗೆ 15 ಸಾವಿರ ಕ್ಯೂಸೆಕ್ ನೀರು ಹರಿ ಬಿಡಲಾಗಿದ್ದು, ಜಿಲ್ಲೆಯ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಯಾದಗಿರಿ ನಗರದ ಹೊರ ಭಾಗದ ಭೀಮಾ ನದಿಯು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

    ನದಿ ಪಾತ್ರದಲ್ಲಿರುವ ವಿರಾಂಜನೇಯ ಹಾಗೂ ಕಂಗಳೇಶ್ವರ ದೇಗುಲಗಳು ಜಲಾವೃತಗೊಂಡಿವೆ. ಪ್ರವಾಹವನ್ನು ಲೆಕ್ಕಿಸದೆ ಜನರು ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎಂದು ನದಿ ಬಳಿ ತೆರಳುತ್ತಿದ್ದಾರೆ.

  • ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚ್ಚರ್ ನಲ್ಲಿ ಹೊತ್ತೊಯ್ದರು

    ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚ್ಚರ್ ನಲ್ಲಿ ಹೊತ್ತೊಯ್ದರು

    -ಸಚಿವ ಅಂಗಾರ ಕ್ಷೇತ್ರದ ದುರವಸ್ಥೆ

    ಮಂಗಳೂರು: ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕ್ಷೇತ್ರದಲ್ಲಿ ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚರ್ ನಲ್ಲಿ ಎತ್ತಿಕೊಂಡು ಹೋದ ಘಟನೆ ಇಂದು ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನ ಮರಸಂಕ ಎಂಬಲ್ಲಿನ ನಿವಾಸಿ ದೇವಕಿಯವರು ಮನೆಯಲ್ಲಿ ಕಾಲು ಜಾರಿ ಬಿದ್ದು, ಕಾಲು ಮುರಿತಕ್ಕೊಳಗಾಗಿದ್ದರು. ಆದರೆ ಚಿಕಿತ್ಸೆಗಾಗಿ ನಗರಕ್ಕೆ ಹೋಗಬೇಕಾದರೆ ಮರಸಂಕದಲ್ಲಿರುವ ಕಿರುನದಿಯನ್ನು ದಾಟಿ ಹೋಗಬೇಕು. ಈ ನದಿಗೆ ಸೇತುವೆಯೇ ಇಲ್ಲ. ಆದ್ದರಿಂದ ತುಂಬಿ ಹರಿಯುವ ಹೊಳೆಯನ್ನೇ ದಾಟಿ ಹೋಗಬೇಕು. ಹೀಗಾಗಿ ತುಂಬಿ ಹರಿಯುವ ಹೊಳೆಯಲ್ಲಿ ದೇವಕಿಯವರನ್ನು ಸ್ಥಳೀಯರು ಸ್ಟ್ರೆಚರ್ ನಲ್ಲಿ ಹೊತ್ತುಕೊಂಡು ಹೋದರು. ಬಳಿಕ ಹೊಳೆ ದಾಟಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಇದು ಅಂಗಾರ ಅವರ ಕ್ಷೇತ್ರದ ದುರವಸ್ಥೆಯಾಗಿದೆ.  ಇದನ್ನೂ ಓದಿ: ಅಂಗಾರ ವಿರುದ್ಧ ಭೋಜೇಗೌಡ ಕಿಡಿ – ಡಿಸಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ

    ಜಾಲ್ಸೂರಿನ ಮರಸಂಕದಲ್ಲಿ 9 ಮನೆಗಳಿದ್ದು ಸುಮಾರು 50 ಜನ ವಾಸಿಸುತ್ತಿದ್ದಾರೆ. ಸುಮಾರು ಅರ್ಧ ಕಿಲೋಮೀಟರ್ ಹೊಳೆ ದಾಟಿ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ಇಲ್ಲಿದೆ. ಪಯಸ್ವಿನಿ ನದಿಗೆ ಸೇರುವ ಈ ಹೊಳೆಯಲ್ಲಿ ಬಾರಿ ಮಳೆ ಬರುತ್ತಿರುವಾಗ ನೀರು ಅಪಾಯದ ಮಟ್ಟ ತಲುಪುತ್ತದೆ. ಕಳೆದ ವರ್ಷ ಗರ್ಭಿಣಿಯನ್ನು ಹೊತ್ತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಈ ಊರಿನ ಜನ 15 ವರ್ಷದಿಂದ ಸೇತುವೆಗಾಗಿ ಮನವಿ ಮಾಡಿದ್ರೂ ಇಂದಿಗೂ ಸೇತುವೆ ಕನಸಿನ ಭರವಸೆ ಹಾಗೇ ಉಳಿದಿದೆ.

  • ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ – ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

    ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ – ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

    – ಮಡಿಕೇರಿ ಆಕಾಶವಾಣಿ ಬಳಿ ಮತ್ತೆ ಗುಡ್ಡ ಕುಸಿತ

    ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ.

    ಕತ್ತಲೆಯಲ್ಲಿ ಕೊಡಗು:
    ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಆರು ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ ದೇವಸ್ತೂರು, ಹೆಬ್ಬೆಟಗೇರಿಯಲ್ಲಿ ದೇವಸ್ತೂರು ಹೊಳೆ ಭೋರ್ಗರೆದು ಹರಿಯುತ್ತಿದೆ. ದೇವಸ್ತೂರು ಕೆಳಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ದೇವಸ್ತೂರು, ಬಾಣೆಗದ್ದೆ ಮತ್ತು ಹೆಬ್ಬೆಟಗೇರಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಇನ್ನು ತೀವ್ರ ಮಳೆಗೆ ಕೊಡಗು ಜಿಲ್ಲೆಗೆ ವಿದ್ಯುತ್ ಪೂರೈಸುವ ಲೈನ್ ಮೇಲೆ ಕುಶಾಲನಗರ ಸಮೀಪ ಭಾರೀ ಘಾತ್ರದ ಮರಬಿದ್ದ ಪರಿಣಾಮ ವಿದ್ಯುತ್ ಕಡಿತವಾಗಿದೆ. ಇದರಿಂದಾಗಿ ಕೊಡಗು ಜಿಲ್ಲೆ ಬಹುತೇಕ ಕತ್ತಲೆಯಲ್ಲಿ ಮುಳುಗಿದೆ.

    ಮಳೆ ಜೊತೆಗೆ ಭಾರೀ ಗಾಳಿ ಬೀಸುತ್ತಿದ್ದು, ನೂರಾರು ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮವಾಗಿ ಗ್ರಾಮೀಣ ಕೊಡಗು ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಭಾಗಮಂಡದಲ್ಲಿ ಕಳೆದ 24 ಗಂಟೆಯಲ್ಲಿ 103 ಮಿಲಿ ಮೀಟರ್ ಗೂ ಅಧಿಕ ಮಳೆ ಸುರಿದಿದೆ. ಇದು ಕಾವೇರಿ ನದಿ ಪಾತ್ರದ ಹತ್ತಾರು ಗ್ರಾಮಗಳ ಸಾವಿರಾರು ಕುಟುಂಬಗಳನ್ನು ಆತಂಕಕ್ಕೆ ದೂಡಿದೆ. ಒಟ್ಟಿನಲ್ಲಿ ಎರಡು ದಿನದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದ್ದು, ಇನ್ನೂ ಎರಡು ದಿನ ಭಾರೀ ಮಳೆ ಸುರಿಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಆಕಾಶವಾಣಿ ಬಳಿ ಮತ್ತೆ ಗುಡ್ಡ ಕುಸಿತ:
    ಮಡಿಕೇರಿ ನಗರದ ಆಕಾಶವಾಣಿ ಕೇಂದ್ರದ ಬಳಿಯು ಭೂಕುಸಿತ ಕುಸಿತ ಉಂಟಾಗಿದೆ. ಮಡಿಕೇರಿಯ ಆಕಾಶವಾಣಿ ಟವರ್ ಗೆ ಕಂಟಕ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಟವರ್ ನಿಂದ ಕೇವಲ ಐದು ಅಡಿ ದೂರದಲ್ಲಿ ಭೂಕುಸಿತ ಅಗಿದೆ. ಕಳೆದ ಬಾರಿ ಕುಸಿದಿದ್ದ ಜಾಗದ ಪಕ್ಕದಲ್ಲೇ ಮತ್ತೆ ಭೂ ಕುಸಿತವಾಗಿದೆ. ಮಳೆ ಇದೇ ರೀತಿಯಲ್ಲಿ ಮುಂದುವರಿದಲ್ಲಿ ಆಕಾಶವಾಣಿ ಟವರ್ ಬೀಳುವ ಸಾಧ್ಯತೆ ಹೆಚ್ಚಾಗಿದು. ಆಕಾಶವಾಣಿ ಸಿಬ್ಬಂದಿಗಳಿಗೆ ಅತಂಕ ಮನೆ ಮಾಡಿದೆ.

    2018 ರಲ್ಲೂ ಆಕಾಶವಾಣಿ ಟವರ್ ಬಳಿಯೇ ಗುಡ್ಡ ಕುಸಿದಿತ್ತು. ಬಳಿಕ 2020 ರಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಮಾಡುವ ಸಂದರ್ಭದಲ್ಲಿಯೂ ಗುಡ್ಡ ಕುಸಿದಿತ್ತು. ಕಾರ್ಮಿಕರು ಪ್ರಾಣಾಪಾಯದಿಂದ ಪಾರಗಿದ್ರು. ಇದೀಗ ತಡೆಗೋಡೆ ನಿರ್ಮಾಣ ಮಾಡಿದ ಪಕ್ಕದಲ್ಲೇ ಮತ್ತೆ ಭೂ ಕುಸಿತವಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಹಾಗೂ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಅಡ್ಡಲಾಗಿ ಮಡಿಕೇರಿ ಪೊಲೀಸರು ಬ್ಯಾರೀಕೇಟ್ ಗಳನ್ನು ಅಳವಡಿಸಿ ಸಾರ್ವಜನಿಕರು ಯಾರು ಹೋಗದಂತೆ ಸೂಚನೆ ನೀಡಿದ್ದಾರೆ.

    ನದಿ ತೀರದ ನಿವಾಸಿಗಳಲ್ಲಿ ಆತಂಕ
    ಮದೆನಾಡು, ಜೋಪುಪಾಲ, ಕೊಯನಾಡು ಮತ್ತು ಸಂಪಾಜೆ ಸುತ್ತಮುತ್ತ ಗ್ರಾಮಗಳಲ್ಲಿ ಮಳೆಯೊಂದಿಗೆ ಭಾರೀ ಗಾಳಿ ಬೀಸುತ್ತಿದೆ. ಪಯಸ್ವಿನಿ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದಿಂದ ಕೊಯನಾಡು ಗ್ರಾಮದ ಸುತ್ತಮುತ್ತಲ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಮಣ್ಣಿನ ರಾಶಿ ಮತ್ತು ಮರಗಳು ಕೊಚ್ಚಿಕೊಂಡು ಬರುತ್ತಿದ್ದು, ಇತ್ತೀಚೆಗೆ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುಕಟ್ಟೆಯಿಂದ ಪ್ರವಾಹದ ಮಾರ್ಗ ಬದಲಾಗಿ ಅಪಾಯ ಸಂಭವಿಸಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ

    ಕ್ಷಣ ಕ್ಷಣಕ್ಕೂ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. 2018 ರಲ್ಲಿ ಇದೇ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಸಾವು, ನೋವಿನ ಬಗ್ಗೆ ಇಲ್ಲಿಯವರು ನೆನಪಿಸಿಕೊಳ್ಳುತ್ತಿದ್ದಾರೆ. ಇನ್ನೂ ವಿರಾಜಪೇಟೆ ತಾಲೂಕಿನ ಕರಡಿಗೋಡು ಗುಹ್ಯ ಕಕ್ಕಟ್ ಕಾಡು ಪ್ರದೇಶದಲ್ಲಿಯೂ ಕಾವೇರಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು.ಇಲ್ಲಿನ ನಿವಾಸಿಗಳಿಗೆ ಮತ್ತೆ ಪ್ರವಾಹದ ಅತಂಕ ಎದುರಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

  • ಕೊಡಗಿನಲ್ಲಿ ಗಾಳಿ ಸಹಿತ ಮಳೆ ಅರ್ಭಟ – ಉಕ್ಕಿ ಹರಿಯುತ್ತಿರುವ ನದಿಗಳು

    ಕೊಡಗಿನಲ್ಲಿ ಗಾಳಿ ಸಹಿತ ಮಳೆ ಅರ್ಭಟ – ಉಕ್ಕಿ ಹರಿಯುತ್ತಿರುವ ನದಿಗಳು

    ಮಡಿಕೇರಿ: ಕಳೆದ ರಾತ್ರಿಯಿಂದ ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲೂಕಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ಮುಂದುವರೆದಿದೆ.

    ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿರಂತರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ವ್ಯಾಪ್ತಿಯಲ್ಲೂ ಮಳೆ ಸುರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಕೃಷಿಕ ವರ್ಗ ಹರ್ಷಗೊಂಡಿದೆ. ಜಿಲ್ಲೆಯ ಬೆಟ್ಟಗುಡ್ಡ ಹಾಗೂ ನದಿ ತೀರದ ನಿವಾಸಿಗಳು ಮಳೆ ಹೆಚ್ಚಾಗುವ ಆತಂಕದಲ್ಲಿದ್ದಾರೆ.

    ಮಡಿಕೇರಿ ನಗರದಲ್ಲಿ ಬೆಳ್ಳಗ್ಗೆಯಿಂದಲೂ, ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜೊತೆಗೆ, ಚಳಿಯ ವಾತಾವರಣವಿದೆ. ಈ ವಾತಾವರಣದಲ್ಲಿ ಕಾಲ ಕಾಳೆಯಲು ರಾಜ್ಯ ಮತ್ತು ಹೊರ ರಾಜ್ಯದಿಂದ ಪ್ರವಾಸಿಗರ ಆಗಮನವಾಗುತ್ತಿದ್ದು, ಮಳೆಯಿಂದ ಪ್ರವಾಸಿತಾಣಗಳು ಕೂಡ ಹಸಿರಿನಿಂದ ಆಕರ್ಷಣೆ ಪಡೆದುಕೊಂಡಿದೆ. ಜಲಪಾತಗಳು ತುಂಬಿ ಕರೆಯುತ್ತಿವೆ. ಹರಿಯುತ್ತಿದ್ದು, ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಇದನ್ನೂ ಓದಿ: ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ

  • ಕೋಟಿ ಖರ್ಚು ಮಾಡಿದರೂ ಪಾತಿ ದೋಣಿಯೇ ಗ್ರಾಮಕ್ಕೆ ಸಂಚಾರ ಸಾಧನ

    ಕೋಟಿ ಖರ್ಚು ಮಾಡಿದರೂ ಪಾತಿ ದೋಣಿಯೇ ಗ್ರಾಮಕ್ಕೆ ಸಂಚಾರ ಸಾಧನ

    – ಸೇತುವೆ ದಾಟಲು ಏಣಿ ನಿರ್ಮಿಸಿಕೊಂಡ ಗ್ರಾಮಸ್ಥರು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೊಗರಿಬೈಲದಲ್ಲಿ ಅಘನಾಶಿನಿ ನದಿ ಸೇತುವೆಯ ಎರಡೂ ಬದಿ ಸಂಪರ್ಕಕ್ಕೆ ಸ್ಥಳೀಯರೇ ಅಡಿಕೆ ಮರ, ಕಟ್ಟಿಗೆ ಕಂಬ ಬಳಸಿ, ಶ್ರಮದಾನದ ಮೂಲಕ ಏಣಿ ನಿರ್ಮಿಸಿಕೊಂಡಿದ್ದಾರೆ. ಈ ಮೂಲಕ ಸೇತುವೆ ಮೇಲೆ ಓಡಾಡಲು ಅನುಕೂಲ ಕಲ್ಪಿಸಿಕೊಂಡಿದ್ದಾರೆ.

    ಬೊಗರಿಬೈಲ, ಉಪ್ಪಿನಪಟ್ಟಣ ಧಕ್ಕೆ ನಡುವೆ ಸುಮಾರು 17 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಆದರೆ ಎರಡೂ ಬದಿಗೆ ರಸ್ತೆ ಸಂಪರ್ಕಿಸುವ ಕೆಲಸ ಮಾತ್ರ ಮೂರು ವರ್ಷಗಳಿದಿಂದ ಬಾಕಿ ಉಳಿದಿದೆ.

    ಸಿದ್ದಾಪುರ, ಹೊನ್ನಾವರ ಸಂಪರ್ಕ ರಸ್ತೆ
    ಬ್ರಿಟಿಷರ ಕಾಲದಲ್ಲಿ ಎತ್ತಿನಗಾಡಿ ಓಡಾಡಿದ ಹೊನ್ನಾವರದ ಕತಗಾಲ ರಸ್ತೆಯನ್ನು ಈ ಸೇತುವೆ ಸಂಪರ್ಕಿಸುತ್ತದೆ. ಎರಡೂ ಕಡೆ ಮೂರು ಗ್ರಾಮ ಪಂಚಾಯಿತಿಗಳ ಹತ್ತಾರು ಊರುಗಳ ಸಂಪರ್ಕಕ್ಕೆ ಅತೀ ಸಮೀಪದ ಮಾರ್ಗ ಇದಾಗಿದೆ.

    ಈ ಊರಿನ ರಸ್ತೆಯು ಸಿದ್ದಾಪುರ, ಹೊನ್ನಾವರ ತಾಲೂಕನ್ನು ಸಂಪರ್ಕಿಸುತ್ತದೆ. ವಾಹನ ಸವಾರರಿಗೆ ಇಂಧನ ಉಳಿಸುವ ಈ ರಸ್ತೆ ಎರಡು ತಾಲೂಕನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲಿ ಸೇತುವೆ ನಿರ್ಮಾಣಕ್ಕೂ ಮೊದಲು ನದಿಯ ಎರಡೂ ಕಡೆ ಜನರ ಓಡಾಟಕ್ಕೆ ಪಾತಿ ದೋಣಿಗಳ ಬಳಕೆ ಇತ್ತು. ಬೇರೆ ಊರಿನ ಜನ ಇಲ್ಲಿ ದೋಣಿ ಬಳಸುತ್ತಿದ್ದರು. ಎರಡು ವರ್ಷಗಳಿಂದ ದೋಣಿ ಹಾಳಾಗಿದೆ. ಹಾಳಾದ ದೋಣಿಯಲ್ಲಿ ಮಳೆಗಾಲದ ಪ್ರವಾಹದಲ್ಲಿ ನದಿ ದಾಟುವುದು ಅಪಾಯಕಾರಿ.

    ಕುಮಟಾ ಶಾಸಕ ದಿನಕರ್ ಶಟ್ಟಿ ಸೇರಿದಂತೆ ಜಿಲ್ಲಾಧಿಕಾರಿಗಳಿಗೂ ಇಲ್ಲಿನ ಸಮಸ್ಯೆ ಕುರಿತು ಮನವಿ ಸಹ ನೀಡಲಾಗಿದೆ. ಆದರೆ ಮೂರು ವರ್ಷಗಳು ಗತಿಸಿದರೂ ಊರಿಗೆ ಸೇತುವೆ ಸಂಪರ್ಕ ಕನಸಾಗಿ ಉಳಿದಿದೆ. ಹೀಗಾಗಿ ಗ್ರಾಮಸ್ಥರು ಸೇರಿ ಇದೀಗ ಎರಡು ದಿನ ಶ್ರಮದಾನ ಮಾಡುವ ಮೂಲಕ ಸೇತುವೆಗೆ ಏಣಿ ರೂಪದಲ್ಲಿ ಸಂಪರ್ಕ ಕಲ್ಪಿಸಿದ್ದಾರೆ.

    ಸದ್ಯ ಮಳೆಗಾಲ ಪ್ರಾರಂಭವಾದ್ದರಿಂದ ಈ ಭಾಗದಲ್ಲಿ ಓಡಾಡುವುದು ಸ್ಥಳೀಯ ಜನರಿಗೆ ಕಷ್ಟಸಾಧ್ಯವಾಗಿದೆ. ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ವಾದರೂ ಇಲ್ಲಿನ ಜನರ ದಿನನಿತ್ಯದ ಗೋಳು ಮಾತ್ರ ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷದಿಂದ ಬದಲಾಗಿಲ್ಲ.

  • ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್

    ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಜುಲೈ 11 ರಿಂದ 13ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಜಲಪ್ರಳಯದಿಂದ ಬೆಚ್ಚಿರುವ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈಗಾಗಲೇ ಅಪಾಯದ ಸ್ಥಳದಲ್ಲಿರುವ ಜನರು, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುತ್ತಿರುವ ಜನರು ನದಿ ಅಂಚಿನಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆದೇಶಿಸಿದ್ದಾರೆ.

    ಜಿಲ್ಲೆಯಲ್ಲಿ ಅನಾಹುತ ಸಂಭವಿಸಿದಂತೆ ಎಚ್ಚರವಹಿಸಲು ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‍ಡಿಆರ್‍ಎಫ್) ತಂಡವನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಸುರಿಯುತ್ತಿರುವ ಮಳೆಯಿಂದ ಕಾವೇರಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಾರಂಗಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ ಜನರು ಮತ್ತೆ ಆತಂಕದಲ್ಲಿ ಜೀವನ ಕಳೆಯುತ್ತಿದ್ದಾರೆ. ಇದನ್ನೂ ಓದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್-ಹವಾಮಾನ ಎಚ್ಚರಿಕೆ