Tag: ನನ್ನಪ್ರಕಾರ

  • ನನ್ನಪ್ರಕಾರ: ಕನ್ನಡ ಚಿತ್ರದ ಕಸುವಿನ ಮುಂದೆ ಸೈಡಿಗೆ ಸರಿದ ಸಾಹೋ!

    ನನ್ನಪ್ರಕಾರ: ಕನ್ನಡ ಚಿತ್ರದ ಕಸುವಿನ ಮುಂದೆ ಸೈಡಿಗೆ ಸರಿದ ಸಾಹೋ!

    ವ್ಯಾವಹಾರಿಕವಾಗಿ ಪರಭಾಷಾ ಚಿತ್ರಗಳು ಎಂಥಾ ಸವಾಲೊಡ್ಡಿದರೂ ಕಸುವು ಹೊಂದಿರೋ ಕನ್ನಡ ಚಿತ್ರಗಳು ಅದರ ವಿರುದ್ಧ ಹೋರಾಡಿ ಗೆಲ್ಲತ್ತವೆಂಬುದಕ್ಕೆ ಒಂದಷ್ಟು ಉದಾಹರಣೆಗಳಿವೆ. ವಿನಯ್ ಬಾಲಾಜಿ ನಿರ್ದೇಶನದ ನನ್ನಪ್ರಕಾರ ಚಿತ್ರವೂ ಇದೀಗ ಆ ಸಾಲಿಗೆ ಸೇರಿಕೊಂಡಿದೆ. ಕುರುಕ್ಷೇತ್ರದಂಥಾ ಬಿಗ್ ಬಜೆಟ್ಟಿನ ಚಿತ್ರವೇ ಸಾಹೋ ಆರಂಭಿಕ ಅಬ್ಬರಕ್ಕೆ ಸಿಕ್ಕಿ ನಲುಗಿತ್ತು. ನನ್ನಪ್ರಕಾರ ಚಿತ್ರ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹೊತ್ತಿನಲ್ಲಿಯೇ ಸಾಹೋ ಬಿರುಗಾಳಿಯಂತೆ ಬಂದಪ್ಪಳಿಸಿತ್ತು. ಆದರೂ ಕೂಡ ಈ ಸಿನಿಮಾ ತನ್ನ ಕಸುವಿನಿಂದಲೇ ಅಸ್ತಿತ್ವ ಉಳಿಸಿಕೊಂಡು ಗೆದ್ದು ಬೀಗಿದೆ.

    ವಿನಯ್ ಬಾಲಾಜಿ ನಿರ್ದೇಶನದ ಈ ಚಿತ್ರ ಆರಂಭದಿಂದಲೂ ತನ್ನ ಕ್ರಿಯೇಟಿವಿಟಿ ಮತ್ತು ಹೊಸತನದ ಹೊಳಹಿನೊಂದಿಗೇ ಪ್ರೇಕ್ಷಕರನ್ನು ಸೆಳೆದುಕೊಂಡು ಬಂದಿತ್ತು. ಅದಕ್ಕೆ ತಕ್ಕುದಾದ ಕಥಾ ಹಂದರ ಹೊಂದಿದ್ದ ನನ್ನಪ್ರಕಾರವನ್ನು ಮೊದಲ ದಿನದಿಂದಲೇ ಪ್ರೆಕ್ಷಕರು ಮೆಚ್ಚಿಕೊಳ್ಳಲಾರಂಭಿಸಿದ್ದರು. ಹೀಗೆ ಭರ್ಜರಿ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾ ಪಾಲಿಗೆ ಮಹಾ ಕಂಟಕವಾಗಿ ಬಂದೊಕ್ಕರಿಸಿಕೊಂಡಿದ್ದು. ಆದರೆ ಸಾಹೋ ಅತಿ ಹೆಚ್ಚು ಚಿತ್ರಮಂದಿರಗಳನ್ನು ಆವರಿಸಿಕೊಂಡು ಪ್ರದರ್ಶನಕ್ಕೆ ತೊಂದರೆಯಾದರೂ ಕೂಡಾ ನನ್ನಪ್ರಕಾರ ಸಾವರಿಸಿಕೊಂಡು ನಿಂತಿದೆ. ಮತ್ತೆ ಈ ಚಿತ್ರಕ್ಕೆ ಹೆಚ್ಚಿನ ಥಿಯೇಟರುಗಳು ಸಿಗುತ್ತಿವೆ. ಮಲ್ಟಿಫ್ಲೆಕ್ಸ್ ಗಳಲ್ಲಿಯೂ ಇದರ ಪ್ರದರ್ಶನಕ್ಕೆ ಹೊಸ ವೇಗ ಸಿಕ್ಕಿದೆ. ಇದನ್ನು ಓದಿ: ನೋಡುಗರೆದೆಯಲ್ಲಿ ಕೌತುಕದ ಕಂದೀಲು ಹಚ್ಚುವ ನನ್ನಪ್ರಕಾರ!

    ಸಾಹೋದಂಥಾ ಭಾರೀ ಬಜೆಟ್ಟಿನ ಚಿತ್ರಗಳ ಮುಂದೆ ಹೀಗೆ ಕನ್ನಡ ಚಿತ್ರ ಕಾಲೂರಿ ನಿಂತು ಸೆಣೆಸೋದೇನು ಸಾಮಾನ್ಯ ಸಂಗತಿಯಲ್ಲ. ಅದು ಸಾಧ್ಯವಾಗೋದು ಇಡೀ ಚಿತ್ರ ಪ್ರೇಕ್ಷಕರನ್ನು ಮೋಡಿಗೀಡು ಮಾಡುವಂತೆ ಮೂಡಿ ಬಂದಿದ್ದಾಗ ಮಾತ್ರ. ನನ್ನಪ್ರಕಾರ ಚಿತ್ರವನ್ನು ನಿರ್ದೇಶಕ ವಿನಯ್ ಬಾಲಾಜಿ ಅದೇ ರೀತಿ ರೂಪಿಸಿದ್ದಾರೆ. ಕಿಶೋರ್, ಪ್ರಿಯಾಮಣಿ ಮತ್ತು ಮಯೂರಿ ಮುಖ್ಯ ಪಾತ್ರಗಳನ್ನು ನಿರ್ವಹಿಸಿರೋ ನನ್ನಪ್ರಕಾರ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಕಥಾ ಹಂದರದ ಚಿತ್ರ. ಇದನ್ನೀಗ ಕನ್ನಡಿಗರು ಪ್ರೀತಿಯಿಂದ ಗೆಲ್ಲಿಸಿದ್ದಾರೆ. ಎಲ್ಲ ಅಡೆತಡೆಗಳನ್ನು ದಾಟಿಕೊಂಡು ಗೆದ್ದ ಖುಷಿ ಚಿತ್ರತಂಡದಲ್ಲಿದೆ.

  • ನೋಡುಗರೆದೆಯಲ್ಲಿ ಕೌತುಕದ ಕಂದೀಲು ಹಚ್ಚುವ ನನ್ನಪ್ರಕಾರ!

    ನೋಡುಗರೆದೆಯಲ್ಲಿ ಕೌತುಕದ ಕಂದೀಲು ಹಚ್ಚುವ ನನ್ನಪ್ರಕಾರ!

    ಬೆಂಗಳೂರು: ಹೊಸಾ ಅಲೆಯ, ಹೊಸಾ ಪ್ರಯೋಗದ ಚಿತ್ರವಾಗಿ ಆರಂಭ ಕಾಲದಿಂದಲೂ ಪ್ರೇಕ್ಷಕರಲ್ಲಿ ನಿರೀಕ್ಷೆ ಬಿತ್ತಿದ್ದ ಚಿತ್ರ ನನ್ನಪ್ರಕಾರ. ಕಥೆಯ ಸುಳಿವು, ತಾರಾಗಣದ ಮೆರುಗು ಮತ್ತು ಪೋಸ್ಟರ್, ಟ್ರೇಲರ್ ಗಳಿಂದಲೇ ಏರಿಕೊಂಡಿದ್ದ ಕ್ಯೂರಿಯಾಸಿಟಿ… ಇಂಥಾ ಸಕಾರಾತ್ಮಕ ವಶಾತಾವರಣದಲ್ಲಿಯೇ ಈ ಸಿನಿಮಾವೀಗ ತೆರೆಗೆ ಬಂದಿದೆ. ಅಷ್ಟಕ್ಕೂ ಇಂಥಾ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಕಥೆಗಳ ಮೇಲೆ ಪ್ರೇಕ್ಷಕರಲ್ಲೊಂದು ಮೋಹ ಇದ್ದೇ ಇರುತ್ತದೆ. ಅಂಥಾದ್ದೇ ಪ್ರೀತಿಯಿಂದ ಬಂದು ನನ್ನಪ್ರಕಾರವನ್ನು ನೋಡಿದವರೆಲ್ಲ ಬೆರಗಾಗಿ ಮೆಚ್ಚಿಕೊಳ್ಳುವಂತೆ ಈ ಚಿತ್ರ ಮೂಡಿ ಬಂದಿದೆ.

    ಈ ಚಿತ್ರವನ್ನು ವಿನಯ್ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಕಿಶೋರ್ ಇಲ್ಲಿ ಅಶೋಕ್ ಎಂಬ ಖಡಕ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಈ ಚಿತ್ರ ಬಿಚ್ಚಿಕೊಳ್ಳೋದೇ ಒಂದು ಅಪಘಾತ ಮತ್ತು ಕೊಲೆಯ ಘಾಟಿನಿಂದ. ಅಪಘಾತವಾಗಿ ಹೊತ್ತಿ ಉರಿಯುತ್ತಿರೋ ಕಾರು ಮತ್ತು ಅದರ ಪಕ್ಕದಲ್ಲೊಂದು ಶವ… ಸಸ್ಪೆನ್ಸ್ ಥ್ರಿಲ್ಲ ಕಥೆಯೊಂದು ಟೇಕಾಫ್ ಆಗೋದೇ ಇಲ್ಲಿಂದ. ಆ ಜಾಗಕ್ಕೆ ಸೂಪರ್ ಕಾಪ್ ಆಗಿ ಕಿಶೋರ್ ಎಂಟ್ರಿ ಕೊಟ್ಟ ನಂತರದಲ್ಲಿ ಇದು ಚಿತ್ರವಿಚಿತ್ರವಾದ ತಿರುವುಗಳನ್ನು ಪಡೆದುಕೊಳ್ಳುತ್ತದೆ. ಈ ಮೂಲಕವೇ ನೋಡುಗರೆದೆಯಲ್ಲಿ ಕೌತುಕದ ಕಂದೀಲು ಸದಾ ಹೊತ್ತಿ ಉರಿಯುವಂತೆ ಮಾಡುತ್ತದೆ.

    ಒಂದರೆ ಕ್ಷಣವೂ ಇಲ್ಲಿ ಬೇರೆ ಆಲೋಚಿಸಲು ಪುರಸೊತ್ತೇ ಇಲ್ಲ. ಅಂಥಾ ಆವೇಗ, ಚುರುಕುತನದೊಂದಿಗೆ ಕಥೆ ಚಲಿಸುತ್ತದೆ. ಇನ್ನೇನು ಸತ್ಯ ಬಯಲಾಯ್ತೆಂಬಷ್ಟರಲ್ಲಿ ಅದು ಸುಳ್ಳಾಗಿ ಮತ್ತೊಂದು ಸತ್ಯ ಮಿಣುಕಿದಂತಾಗಿ ರೋಚಕ ಹಾದಿಯಲ್ಲಿಯೇ ಕ್ಲೈಮ್ಯಾಕ್ಸ್ ತಲುಪಿಕೊಳ್ಳುತ್ತದೆ. ಇಂಥಾ ಹತ್ತಾರು ತಿರುವಿನ ಕಥೇಯನ್ನು ಗೊಂದಲವೇ ಇಲ್ಲದಂತೆ ರೂಪಿಸಿರುವಕ್ಸ್ನಿರ್ದೇಶಕ ವಿನಯ್ ಬಾಲಾಜಿಯ ಕಸುಬುದಾರಿಕೆ ಎದ್ದು ಕಾಣಿಸುತ್ತದೆ. ಇದಕ್ಕೆ ಕಿಶೋರ್, ಪ್ರಿಯಾಮಣಿ, ಮಯೂರಿ ಸೇರಿದಂತೆ ಎಲ್ಲ ನಟನಟಿಯರೂ ಸಾಥ್ ಕೊಟ್ಟಿದ್ದಾರೆ. ಇದು ಸಸ್ಪೆನ್ಸ್ ಥ್ರಿಲ್ಲರ್ ಜಾನರಿನಲ್ಲಿಯೇ ಹೊಸತನ ಹೊಂದಿರೋ, ಹೊಸಾ ಪ್ರಯೋಗಗಳ ಚಿತ್ರವಾಗಿ ಮನಸೆಳೆಯುತ್ತದೆ.

    ರೇಟಿಂಗ್: 4/5