Tag: ನಮನ

  • ಜೀವನ್ಮರಣದ ನಡ್ವೆ ಒದ್ದಾಡ್ತಿದ್ದ ಯುವತಿಯನ್ನ ರಕ್ಷಿಸಿದ ಬಾಲಕಿ

    ಜೀವನ್ಮರಣದ ನಡ್ವೆ ಒದ್ದಾಡ್ತಿದ್ದ ಯುವತಿಯನ್ನ ರಕ್ಷಿಸಿದ ಬಾಲಕಿ

    – ಬಾಲಕಿ ಸಮಯಪ್ರಜ್ಞೆಗೆ ಭಾರೀ ಪ್ರಶಂಸೆ
    – ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ

    ಉಡುಪಿ: ಚಲಿಸುತ್ತಿದ್ದ ಕಾರು ಕೆರೆಗೆ ಬಿದ್ದು ಚಾಲಕ ಮೃತಪಟ್ಟು ಕಾರಿನಲ್ಲಿದ್ದ ಯುವತಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರಲ್ಲಿ ಈ ಘಟನೆ ನಡೆದಿದೆ.

    ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಮೃತರಾಗಿದ್ದರು. ಕಾರಿನಲ್ಲಿ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಪವಾಡ ಸದೃಶ ರೂಪದಲ್ಲಿ ಬಚಾವಾಗಿದ್ದು, ಯುವತಿ ಶ್ವೇತಾಳನ್ನು ಬದುಕಿಸಿದ ವೀಡಿಯೋ ಸಿಕ್ಕಿದೆ.

    ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸತ್ತರೆ, ಯುವತಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಳು. ಈ ವೇಳೆ ಸ್ಥಳೀಯ ಬಾಲಕಿ ಸಮಯಪ್ರಜ್ಞೆಯಿಂದ ಶ್ವೇತಾ ಬದುಕಿ ಬಂದಿದ್ದಾಳೆ. ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಯುವತಿ ಕೊನೆಗೂ ಬಚಾವಾಗಿದ್ದಾಳೆ. ಸಮಯ ಪ್ರಜ್ಞೆ ಮೆರೆದು ಯುವತಿಗೆ ಮರುಜೀವ ಕೊಟ್ಟ ಬಾಲಕಿಯ ಹೆಸರು ನಮನ. ಶ್ವೇತಾಳನ್ನು ಮೇಲಕ್ಕೆ ಎತ್ತಿದ ತಕ್ಷಣ ಎದೆಗೆ ಒತ್ತಡ ಹಾಕಿ ಚೇತರಿಸಿಕೊಳ್ಳುವಂತೆ ಮಾಡಿದ್ದಾಳೆ. ಪ್ರಾಥಮಿಕ ಚಿಕಿತ್ಸೆ ನೀಡಿ ಉಸಿರು ಮರಳುವಂತೆ ಮಾಡಿದ ಈಕೆ ಮತ್ತು ಸ್ಥಳೀಯ ಸಾಹಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಘಟನೆ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಈ ವೀಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ. ಈಕೆ ಲಿಟಲ್‍ರಾಕ್ ಶಾಲೆಯಲ್ಲಿ 10ನೇ ತರಗತಿ ಕಲಿಯುತ್ತಿದ್ದಾಳೆ. ಪ್ರಥಮ ಚಿಕಿತ್ಸೆ ಮೂಲಕ ದೇಹದಿಂದ ನೀರು ಹೊರ ಹಾಕಿದ ಬಳಿಕವೇ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರೂ ನಮನಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ್ದಲ್ಲದಿದ್ದರೆ ಜೀವಕ್ಕೇ ಅಪಾಯ ಇತ್ತು ಎಂದು ವೈದ್ಯರು ಹೇಳಿದ್ದಾರೆ.

    ವಿದ್ಯಾರ್ಥಿನಿ ನಮನ ಮಾತನಾಡಿ, ಮನೆಯಲ್ಲಿದ್ದಾಗ ಜೋರಾಗಿ ಶಬ್ದ ಕೇಳಿತು. ಸುತ್ತಮುತ್ತ ಇದ್ದ ಎಲ್ಲರೂ ಓಡಿ ಬಂದಿದ್ದಾರೆ. ಹಗ್ಗ ಕಟ್ಟಿ ಕೆಳಗೆ ಇಳಿಯಲಾಯ್ತು. ಮಹಿಳೆಯನ್ನು ಕೆರೆಯಿಂದ ಮೇಲಕ್ಕೆತ್ತಲಾಯ್ತು. ಚಾಲಕರು ಕಾರೊಳಗೆ ಸಿಲುಕಿದ್ದರು. ಹೊಟ್ಟೆಯಿಂದ ನೀರು ತೆಗೆದು, ಎದೆ ಒತ್ತಿ ಉಸಿರು ಬರುವಂತೆ ಮಾಡಿದೆವು. ಕೆರೆಗೆ ಆವರಣ ಗೋಡೆ ನಿರ್ಮಿಸಿದರೆ ಅವಘಡ ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾಳೆ.

  • ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

    ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

    ಗಾಂಧಿನಗರ: ಗುಜರಾತಿನ ನವಜೋಡಿಯೊಂದು ತಮ್ಮ ಮದುವೆ ಮೆರವಣಿಗೆ ವೇಳೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ.

    ಮದುವೆಯಾಗಿ ಕೇವಲ ಒಂದು ಗಂಟೆ ಸಮಯವಾಗಿದೆ ಅಷ್ಟೇ, ಆದ್ರೆ ತಮ್ಮ ಮದುವೆ ಸಂಭ್ರಮವನ್ನು ಆಚರಿಸುವ ಬದಲಾಗಿ ತಮ್ಮ ಮದುವೆ ಮೆರವಣಿಗೆ ವೇಳೆ ಹುತಾತ್ಮ ಯೋಧರ ಭಾವಚಿತ್ರವನ್ನು ಹಿಡಿದು ಗೌರವ ಸಲ್ಲಿಸಿದ್ದಾರೆ. ನವಜೋಡಿಗಳ ಈ ನಿರ್ಧಾರಕ್ಕೆ ಅವರ ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಕೂಡ ಸಾಥ್ ಕೊಟ್ಟು ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪುತ್ರಿ ಮದುವೆ ಊಟ ರದ್ದು ಮಾಡಿ 11 ಲಕ್ಷ ರೂ. ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ ಉದ್ಯಮಿ

    ಮೆರವಣಿಗೆಯ ಉದ್ದಕ್ಕೂ ಯೋಧರಿಗೆ ಜೈಕಾರ ಹಾಕುತ್ತ ಉಗ್ರರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೊರಹಾಕಿದ್ದಾರೆ. ಹಾಗೆಯೇ ರಾಷ್ಟ್ರ ಧ್ವಜವನ್ನು ಹಿಡಿದು ಭಾರತದಲ್ಲಿ ಕೇವಲ 1427 ಹುಲಿಗಳಿಲ್ಲ, ಗಡಿಯಲ್ಲಿ 13 ಲಕ್ಷ ಹುಲಿಗಳು ದೇಶ ಕಾಯುತ್ತಿದ್ದಾರೆ ಎಂದು ಸಂದೇಶ ಸಾರಿದ್ದಾರೆ.

    ಕುದುರೆ ರಥದಲ್ಲಿ ನವಜೋಡಿಗಳು ಸಾಗುತ್ತಿದ್ದರೆ, ಅವರ ಮುಂದೆ ನೂರಾರು ಮಂದಿ ಭಾರತದ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲೂ ಪುಟ್ಟ ಪುಟ್ಟ ಮಕ್ಕಳು ಧ್ವಜವನ್ನು ಹಿಡಿದು ಯೋಧರಿಗೆ ಜೈಕಾರ ಹಾಕಿದರೆ ಇನ್ನು ಕೆಲವರು ಸೈನಿಕರ ವೇಷಭೂಷಣ ಧರಿಸಿ ಮೆರೆವಣಿಗೆಯಲ್ಲಿ ಸಾಗುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv