Tag: ನಯನಾ

  • ಹೆಣ್ಣು ಮಗುವಿನ ತಾಯಿಯಾದ ‘ಕಾಮಿಡಿ ಕಿಲಾಡಿ’ ನಯನಾ

    ಹೆಣ್ಣು ಮಗುವಿನ ತಾಯಿಯಾದ ‘ಕಾಮಿಡಿ ಕಿಲಾಡಿ’ ನಯನಾ

    ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿಯ ನಟಿ ನಯನಾ (Nayana) ಹೆಣ್ಣು ಮಗುವಿಗೆ (Baby girl) ಜನ್ಮ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನದಂದು ಮಗುವನ್ನು ಮನೆಗೆ ಬರಮಾಡಿಕೊಂಡಿದ್ದಾರೆ. ಪತಿ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ನಯನಾ, ಮಗುವಿಗೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.

    ತೆರೆ ಮೇಲೆ ನಮ್ಮ ಮುಂದೆ ಪಾತ್ರಗಳಾಗಿ ಕಾಣುವ ನಮ್ಮನ್ನು ನಗಿಸುವ ನಮಗೆ ಮನರಂಜನೆ ನೀಡುವ ನಮ್ಮನ್ನು ಸಂತೋಷ ಪಡಿಸುವ ಕಲಾವಿದರು ಅದೆಷ್ಟೋ ಜನರು ತಮ್ಮ ಜೀವನದಲ್ಲಿ ಸಂತೋಷವನ್ನೇ ಕಂಡಿರೋದಿಲ್ಲ. ಅದರಲ್ಲೂ ಕಲಾವಿದನಾಗಿ ಸಿನಿಮಾಗಳಲ್ಲಿಯೋ ಅಥವಾ ಕಿರುತೆರೆಯಲ್ಲಿಯೋ ಒಂದು ಹಂತಕ್ಕೆ ಬಂದು ನಿಲ್ಲೋವಾಗ ನಿಜಕ್ಕೂ ಅದೆಷ್ಟೋ ಜನ ಅರ್ಧ ಪಯಣದಲ್ಲಿಯೇ ತಮ್ಮ ಜರ್ನಿಯನ್ನು ಮುಗಿಸಿ ಹೋಗಿಬಿಟ್ಟಿರುತ್ತಾರೆ. ಇನ್ನೂ ಕೆಲವರು ಎಲ್ಲಾ ಅಡೆತಡೆಗಳನ್ನು ದಾಟಿ ಯಶಸ್ಸನ್ನು ಕಾಣುತ್ತಾರೆ. ಆ ಸಾಲಿಗೆ ನಟಿ ನಯನಾ ಸೇರುತ್ತಾರೆ.

    ಹುಬ್ಬಳ್ಳಿಯ (Hubli) ಸಾಮಾನ್ಯ ಹುಡುಗಿ ನಯನಾ ಅವರು ಯಾವುದೇ ಬ್ಯಾಕ್‌ಗ್ರೌಂಡ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋ ಎಂಟ್ರಿ ಕೊಟ್ಟು ತಾವು ಎಂತಹ ಪ್ರತಿಭಾನ್ವಿತ ಕಲಾವಿದೆ ಎಂದು ತೋರಿಸಿಕೊಟ್ಟರು. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ರಂಜಿಸಿದ್ರು. ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ತಾನು ಸೈ ಅನ್ನೋದನ್ನ ಪ್ರೂವ್ ಮಾಡಿದ್ರು.

     

    ಕಳೆದ ಮೂರು ವರ್ಷಗಳ ಹಿಂದೆ ಶರತ್ (Sharath) ಎಂಬುವವರ ಜೊತೆ ನಯನಾ ಸರಳವಾಗಿ ಮದುವೆಯಾದರು. ಈಗ ಮೊದಲ ಮಗುವಿನ ಬರಮಾಡಿಕೊಂಡಿದ್ದಾರೆ. ಮನೆಗೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ. ಈ ಹಿಂದೆ ಸಿಹಿ ಕಹಿ ಚಂದ್ರು ಅವರ ನಿರೂಪಣೆಯ ‘ಬೊಂಬಾಟ್ ಭೋಜನ’ ಕಾರ್ಯಕ್ರಮಕ್ಕೆ ನಟಿ ಎಂಟ್ರಿ ಕೊಟ್ಟಿದ್ದರು. ತಾಯಿಯಾಗುತ್ತಿರುವ ಸಂತಸವನ್ನು ಹಂಚಿಕೊಂಡಿದ್ದರು. ಅಭಿಮಾನಿಗಳು ನಟಿಯಗೆ ಶುಭಹಾರೈಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಕಾಮಿಡಿ ಕಿಲಾಡಿ’ ನಯನಾ

    ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಕಾಮಿಡಿ ಕಿಲಾಡಿ’ ನಯನಾ

    ಕಿರುತೆರೆಯ ‘ಕಾಮಿಡಿ ಕಿಲಾಡಿಗಳು’ (Comedy Khiladigalu) ಖ್ಯಾತಿಯ ನಯನಾ (Nayana) ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ (Pregnant) ನಟಿ ನಯನಾ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯ ನಟಿಯ ಬೇಬಿ ಬಂಪ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ತೆರೆ ಮೇಲೆ ನಮ್ಮ ಮುಂದೆ ಪಾತ್ರಗಳಾಗಿ ಕಾಣುವ ನಮ್ಮನ್ನು ನಗಿಸುವ ನಮಗೆ ಮನರಂಜನೆ ನೀಡುವ ನಮ್ಮನ್ನು ಸಂತೋಷ ಪಡಿಸುವ ಕಲಾವಿದರು ಅದೆಷ್ಟೋ ಜನರು ತಮ್ಮ ಜೀವನದಲ್ಲಿ ಸಂತೋಷವನ್ನೇ ಕಂಡಿರೋದಿಲ್ಲ. ಅದರಲ್ಲೂ ಕಲಾವಿದನಾಗಿ ಸಿನಿಮಾಗಳಲ್ಲಿಯೋ ಅಥವಾ ಕಿರುತೆರೆಯಲ್ಲಿಯೋ ಒಂದು ಹಂತಕ್ಕೆ ಬಂದು ನಿಲ್ಲೋವಾಗ ನಿಜಕ್ಕೂ ಅದೆಷ್ಟೋ ಜನ ಅರ್ಧ ಪಯಣದಲ್ಲಿಯೇ ತಮ್ಮ ಜರ್ನಿಯನ್ನು ಮುಗಿಸಿ ಹೋಗಿಬಿಟ್ಟಿರುತ್ತಾರೆ. ಇನ್ನೂ ಕೆಲವರು ಎಲ್ಲಾ ಅಡೆತಡೆಗಳನ್ನು ದಾಟಿ ಯಶಸ್ಸನ್ನು ಕಾಣುತ್ತಾರೆ. ನಟಿ ನಯನಾ ಸೇರುತ್ತಾರೆ. ಇದನ್ನೂ ಓದಿ:ಮೊಟ್ಟೆ ಪೋಸ್‌ನಲ್ಲಿ ಕಿಕ್ ಕೊಟ್ಟ ನಟ ಧನುಷ್- ‘D50‌’ ಚಿತ್ರದ ಫಸ್ಟ್‌ ಲುಕ್‌ ಔಟ್

    ಹುಬ್ಬಳ್ಳಿಯ (Hubli) ಸಾಮಾನ್ಯ ಹುಡುಗಿ ನಯನಾ ಅವರು ಯಾವುದೇ ಬ್ಯಾಕ್‌ಗ್ರೌಂಡ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋ ಎಂಟ್ರಿ ಕೊಟ್ಟು ತಾವು ಎಂತಹ ಪ್ರತಿಭಾನ್ವಿತ ಕಲಾವಿದೆ ಎಂದು ತೋರಿಸಿಕೊಟ್ಟರು. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ರಂಜಿಸಿದ್ರು. ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ತಾನು ಸೈ ಅನ್ನೋದನ್ನ ಪ್ರೂವ್ ಮಾಡಿದ್ರು.

    ಕಳೆದ ಮೂರು ವರ್ಷಗಳ ಹಿಂದೆ ಶರತ್ (Sharath) ಎಂಬುವವರ ಜೊತೆ ನಯನಾ ಸರಳವಾಗಿ ಮದುವೆಯಾದರು. ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮನೆಗೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ. ಈ ಬಗ್ಗೆ ಖಾಸಗಿ ವಾಹಿನಿಯಲ್ಲಿ ರಿವೀಲ್ ಆಗಿದೆ. ಸಿಹಿ ಕಹಿ ಚಂದ್ರು ಅವರ ನಿರೂಪಣೆಯ ‘ಬೊಂಬಾಟ್ ಭೋಜನ’ ಕಾರ್ಯಕ್ರಮಕ್ಕೆ ನಟಿ ಎಂಟ್ರಿ ಕೊಟ್ಟಿದ್ದಾರೆ. ತಾಯಿಯಾಗುತ್ತಿರುವ ಸಂತಸವನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಟಿಯಗೆ ಶುಭಹಾರೈಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ತಮಗೆ ಜೀವ ಬೆದರಿಕೆ ಹಾಗೂ ನಿಂದನೆ ಮಾಡಿದ್ದಾರೆ ಎಂದು ನಟಿ ಸೋಮಶೇಖರ್ ನಿನ್ನೆಯಷ್ಟೇ ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಯನಾ, ಪ್ರಚಾರಕ್ಕಾಗಿ ಸೋಮಶೇಖರ್ ಹೀಗೆಲ್ಲ ಮಾಡುತ್ತಿದ್ದಾನೆ. ಅಥವಾ ಅವನ ಹಿಂದೆ ಯಾರೂ ನಿಂತು ಈ ರೀತಿ ಮಾಡಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ನಟಿ ನಯನಾ ತಮ್ಮದೇ ತಂಡದ ಸದಸ್ಯನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾದ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಯನಾ ಆಡಿದ ಮಾತುಗಳಿಂದ ನೊಂದುಕೊಂಡಿರುವ ನಟ ಸೋಮಶೇಖರ್, ಬೆಂಗಳೂರಿನ ಆರ್.ಆರ್ ನಗರದ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸೋಮಶೇಖರ್ ಅವರೇ ನೀಡಿರುವ ಆಡಿಯೋದಲ್ಲಿ ನಯನಾ ಆಡಬಾರದ ಪದಗಳನ್ನು ಆಡಿದ್ದಾರೆ. ಆ ಆಡಿಯೋ ವಾಟ್ಸಪ್ ಅಮೂಲಕ ಸಾಕಷ್ಟು ಜನರಿಗೆ ಹಂಚಿಕೆಯಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ. ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿಗೆ IFFI ವ್ಯಕ್ತಿತ್ವ ಪ್ರಶಸ್ತಿ ಗೌರವ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ನ್ನಡದ ಜನಪ್ರಿಯ ಶೋ ಕಾಮಿಡಿ ಕಿಲಾಡಿಗಳ (Comedy Khiladigalu) ಮೂಲಕ ಫೇಮಸ್ ಆಗಿರುವ ಹಾಗೂ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ಹಾಸ್ಯ ಪಾತ್ರ ಮಾಡಿರುವ ನಯನಾ ವಿರುದ್ಧ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಸ್ಯ ಕಲಾವಿದೆ ನಯನಾ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಸೋಮಶೇಖರ್ ಎನ್ನುವವರು ದೂರು ನೀಡಿದ್ದಾರೆ.

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಮಿಡಿ ಜೋಡಿಯ ನಗುವಿನ ಗಮ್ಮತ್ತು.. ಇದು ಧಮಾಕ ಟ್ರೇಲರ್ ಕರಾಮತ್ತು..

    ಕಾಮಿಡಿ ಜೋಡಿಯ ನಗುವಿನ ಗಮ್ಮತ್ತು.. ಇದು ಧಮಾಕ ಟ್ರೇಲರ್ ಕರಾಮತ್ತು..

    ಒಂದಷ್ಟು ಸಿನಿಮಾಗಳು ಆರಂಭದಿಂದಲೇ ಪ್ರೇಕ್ಷಕರನ್ನು ನಾನಾ ಬಗೆಯಲ್ಲಿ ಆವರಿಸಿಕೊಳ್ಳುತ್ತವೆ. ಕಂಟೆಂಟು, ಕ್ವಾಲಿಟಿ ಅಥವಾ ತಾರಾಬಳಗದಿಂದ ಚಿತ್ರ ಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸುತ್ತವೆ. ಈಗ ಕಂಟೆಂಟ್ ಜೊತೆಗೆ ತಾರಾಬಳಗದ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿರುವುದು ಧಮಾಕ ಸಿನಿಮಾ. ಮನರಂಜನೆ ಜೊತೆಗೆ ಮನರಂಜನೆ ಉಣಬಡಿಸುವ ಇಬ್ಬರು ಅದ್ಭುತ ಕಲಾವಿದರ ಸಮಾಗಮದ ಧಮಾಕ ಟ್ರೇಲರ್ ಬಿಡುಗಡೆಯಾಗಿದೆ. ಭರಪೂರ ಮನರಂಜನೆ ಹೊತ್ತು ಬಂದಿರುವ ಟ್ರೇಲರ್, ನೋಡುಗರಿಗೆ ನಗುವಿನ ಟಾನಿಕ್ ನೀಡುತ್ತಿದೆ.

    ಖ್ಯಾತ ಹಾಸ್ಯನಟ ಚಿಕ್ಕಣ್ಣನ ಹಿನ್ನೆಲೆ ಧ್ವನಿಯಿಂದ ಶುರುವಾಗುವ ಟ್ರೇಲರ್ ಆರಂಭದಿಂದ ಕೊನೆವರೆಗೂ ಪ್ರೇಕ್ಷಕರನ್ನು ನಗುವಿನ ಅಲೆಯಲ್ಲಿ ತೇಲಿಸುತ್ತದೆ. ಶಿವರಾಜ್ ಕೆ.ಆರ್. ಪೇಟೆ ಎಂದಿನಂತೆ ತಮ್ಮ ಅಮೋಘ ಅಭಿನಯದ ಮೂಲಕ ಪ್ರೇಕ್ಷಕರ ಮೊಗದಲ್ಲಿ ನಗುಮೂಡಿಸ್ತಾರೆ. ಇವರಿಗೆ ಜೋಡಿಯಾಗಿ ನಯನಾ ನಟಿಸಿದ್ದಾರೆ. ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಪ್ರಕಾಶ್ ತುಮಿನಾಡು, ಮಹಾಂತೇಶ್ ಹಿರೇಮಠ, ಅರುಣಾ ಬಾಲರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಕಾಮಿಡಿ ಜೊತೆಗೆ ಒಂದು ಗಟ್ಟಿ ಸಂದೇಶವಿರುವ ಧಮಾಕ ಚಿತ್ರಕ್ಕೆ ಲಕ್ಷ್ಮೀ ರಮೇಶ್ ನಿರ್ದೇಶನವಿದೆ. ಇದು ಇವರ ಚೊಚ್ಚಲ ಸಿನಿಮಾವಾಗಿದ್ದು, ಮೊದಲ ಹೆಜ್ಜೆಯಲ್ಲಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುವ ಉತ್ಸಾಹದಲ್ಲಿದ್ದಾರೆ.  ಇದನ್ನೂ ಓದಿ: Breaking: ಎರಡನೇ ವಾರ ಬಿಗ್ ಬಾಸ್ ಮನೆಯಿಂದ ಸ್ಫೂರ್ತಿ ಗೌಡ ಎಲಿಮಿನೇಟ್

    ನಗೆಯ ಕಚಗುಳಿ ಇಡುವ ಧಮಾಕ ಸಿನಿಮಾವನ್ನು ಎಸ್‍ಆರ್ ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ನಡಿ ಸುನೀಲ್, ಎಸ್. ರಾಜ್ ಮತ್ತು ಅನ್ನಪೂರ್ಣ ಪಾಟೀಲ ನಿರ್ಮಾಣ ಮಾಡಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ, ಹಾಲೇಶ್.ಎಸ್ ಛಾಯಾಗ್ರಹಣ, ರಘು ಆರ್.ಜೆ. ನೃತ್ಯ ನಿರ್ದೇಶನ, ವಿನಯ್ ಕೂರ್ಗ್ ಸಂಕಲನ ಸಿನಿಮಾಕ್ಕಿದೆ. ಟೀಸರ್, ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಧಮಾಕ ಬಳಗ ಈಗ ಟ್ರೇಲರ್ ಮೂಲಕ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ನಗುವಿನ ಅಲೆಯಲ್ಲಿ ನಿಮ್ಮನ್ನು ಮಿಂದೇಳುವಂತೆ ಮಾಡಲು ಶೀಘ್ರದಲ್ಲೇ ಚಿತ್ರತಂಡ ಬಿಡುಗಡೆ ದಿನಾಂಕ ಅನೌನ್ಸ್ ಮಾಡಲಿದೆ. ಇದನ್ನೂ ಓದಿ: ‘ಬಿಗ್ ಬಾಸ್’ ಕಿಚ್ಚನ ಪಂಚಾಯಿತಿಯಲ್ಲಿ ಸಾನ್ಯಾ-ರೂಪೇಶ್ ಮಿಡ್ ನೈಟ್ ವಿಚಾರ ಬಿಸಿ ಬಿಸಿ ಚರ್ಚೆ

    Live Tv
    [brid partner=56869869 player=32851 video=960834 autoplay=true]

  • ಫ್ಯಾಮಿಲಿ ಕುಳಿತು ಎಂಜಾಯ್ ಮಾಡುಬಹುದಾದ ಚಿತ್ರ ಶಿವಾರ್ಜುನ

    ಫ್ಯಾಮಿಲಿ ಕುಳಿತು ಎಂಜಾಯ್ ಮಾಡುಬಹುದಾದ ಚಿತ್ರ ಶಿವಾರ್ಜುನ

    ಚಿರು ಸರ್ಜಾ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಶಿವಾರ್ಜುನ ಇಂದು ತೆರೆಗಪ್ಪಳಿಸಿದೆ. ಕೊರೊನಾ ಭೀತಿಯ ನಡುವೆಯೂ ಚಿತ್ರಕ್ಕೆ ದೊಡ್ಡ ಮಟ್ಟದ ಓಪನಿಂಗ್ ಸಿಕ್ಕಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಸಿನಿ ಪ್ರಿಯರನ್ನು ರಂಜಿಸುತ್ತಿರುವ ಯುವ ಸಾಮ್ರಾಟ್ ಚಿರು ಸರ್ಜಾ ಓನ್ಸ್ ಅಗೈನ್ ಶಿವಾರ್ಜುನ ಚಿತ್ರದ ಮೂಲಕ ಅಬ್ಬರಿಸಿದ್ದಾರೆ.

    ಮಾಸ್ ಹಾಗೂ ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಕಂಟೆಟ್‍ಗೆ ಪ್ರೇಕ್ಷಕ ಪ್ರಭು ಫಿದಾ ಆಗಿದ್ದಾನೆ. ನಾಯಕ ಶಿವು ಆಯುರ್ವೇಧಿಕ್ ಡಾಕ್ಟರ್ ಸಾಧು ಕೋಕಿಲ ಬಳಿ ಕೆಲಸಕ್ಕೆ ಸೇರಿ ಕೊಳ್ಳುತ್ತಾನೆ. ಆದ್ರೆ ಈ ಶಿವ ಯಾರು, ಈತನ ಹಿನ್ನೆಲೆ ಏನು ಅನ್ನೋದನ್ನ ನಿರ್ದೇಶಕರು ಪ್ರೇಕ್ಷಕರಿಗೆ ಕ್ಲೂ ಕೊಡದೆ ಮೊದಲಾರ್ಧ ಕ್ಯೂರಿಯಾಸಿಟಿ ಮೂಡಿಸುತ್ತಾರೆ. ಅಸಲಿ ಕಥೆ ಸೆಕೆಡ್ ಹಾಫ್ ನಲ್ಲಿದ್ದು, ಶಿವ ಯಾರು, ಆತ ತನ್ನ ಶತ್ರುಗಳನ್ನು ಹೇಗೆ ಬಗ್ಗು ಬಡಿಯುತ್ತಾನೆ ಅನ್ನೋದನ್ನ ಮಾಸ್ ಆಗಿ ಚಿತ್ರಿಸಿದ್ದಾರೆ ನಿರ್ದೇಶಕರು.

    ಎರಡು ಊರುಗಳ ನಡುವೆ ನಡೆಯುವ ಕಥೆಯೇ ಶಿವಾರ್ಜುನ. ರಾಮದುರ್ಗ ಹಾಗೂ ರಾಯದುರ್ಗ ಎರಡು ಊರುಗಳ ನಡುವೆ ಇಡೀ ಚಿತ್ರ ನಡೆಯುತ್ತೆ. ಪ್ರತಿ ವರ್ಷ ಈ ಎರಡು ಊರುಗಳ ನಡುವೆ ಸ್ಪರ್ಧೆ ನಡೆಯುತ್ತಿರುತ್ತೆ. ಸಡನ್ ಆಗಿ ಒಂದು ವರ್ಷ ಈ ಸ್ಪರ್ಧೆ ನಿಂತು ಹೋಗುತ್ತೆ. ಎರಡು ಊರುಗಳ ನಡುವೆ ಕಾದಾಟ ಶುರುವಾಗುತ್ತೆ. ಇದಕ್ಕೆ ಕಾರಣ ಏನು ಈ ಸ್ಪರ್ಧೆಗೂ, ಕಾದಾಟಕ್ಕೂ ನಾಯಕ ಶಿವುಗೂ ಏನು ಕಾರಣ, ಸಂಬಂಧ ಏನು ಅನ್ನೋದನ್ನು ನೀವು ಸಿನಿಮಾ ನೋಡಿಯೇ ತಿಳಿದುಕೊಳ್ಳಬೇಕು. ಚಿರು ಸರ್ಜಾ ಈ ಹಿಂದಿನ ಸಿನಿಮಾಗಳಿಗೆ ಹೋಲಿಕೆ ಮಾಡಿದ್ರೆ ಹೆಚ್ಚು ಇಷ್ಟವಾಗುತ್ತಾರೆ. ಡಾನ್ಸ್ ಹಾಗೂ ಫೈಟಿಂಗ್ ನಲ್ಲಿ ತೆರೆ ಮೇಲೆ ಚಿರು ನೋಡೋಕೆ ಸಖತ್ ಥ್ರಿಲ್ ನೀಡ್ತಾರೆ.

    ಪಾಪ್ ಕಾರ್ನ್ ಮಂಕಿ ಟೈಗರ್, ಲವ್ ಮೊಕ್ಟೈಲ್ ಚಿತ್ರದ ಮೂಲಕ ಸ್ಯಾಂಡಲ್‍ವುಡ್ ನಲ್ಲಿ ಗಮನ ಸೆಳೆದಿರುವ ಅಮೃತ ಐಯ್ಯಂಗಾರ್ ಈ ಚಿತ್ರದ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗುತ್ತಾರೆ ಜೊತೆಗೆ ಭರವಸೆಯ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ತಾರಾ, ಕಿಶೋರ್ ಅಭಿನಯದ ಬಗ್ಗೆ ಮಾತನಾಡುವ ಹಾಗಿಲ್ಲ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ನಟಿ ತಾರಾ ಪುತ್ರ ಶ್ರೀಕೃಷ್ಣ ಬಾಲನಟನಾಗಿ ಪಾದಾರ್ಪಣೆ ಮಾಡಿದ್ದು, ಚಿತ್ರದಲ್ಲಿ ಶ್ರೀಕೃಷ್ಣನ ಮುದ್ದಾದ ನಟನೆ ನೋಡಲು ಖುಷಿಯಾಗುತ್ತೆ.

    ಸೂರಗ್ ಕೋಕಿಲ ಮ್ಯೂಸಿಕ್ ಚಿತ್ರದ ಸಂದರ್ಭ, ಸನ್ನೀವೇಶಕ್ಕೆ ತಕ್ಕ ಹಾಗೆ ಮೂಡಿಬಂದಿದ್ದು ಸ್ಯಾಂಡಲ್‍ವುಡ್‍ಗೆ ಮತ್ತೊಬ್ಬ ಭರವಸೆಯ ಯುವ ಸಂಗೀತ ನಿರ್ದೇಶಕ ಸಿಕ್ಕಿದ್ರು ಅಂದ್ರೆ ತಪ್ಪಾಗೊಲ್ಲ. ಸಾಹಸ ದೃಶ್ಯಗಳು ಮಾಸ್ ಪ್ರಿಯರ ಮನ ಸೆಳೆಯುತ್ತೆ. ರೆಗ್ಯೂಲರ್ ಸಿನಿಮಾ ಕಥೆಯೇ ಚಿತ್ರದಲ್ಲಿದ್ರು ಕೂಡ ನಿರ್ದೇಶಕರು ನೀಡಿರುವ ಹೊಸ ಸ್ಪರ್ಶ ನೋಡುಗರಿಗೆ ಇಷ್ಟವಾಗುತ್ತೆ. ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಚಿತ್ರದಲ್ಲಿರೋದ್ರಿಂದ ಇಡೀ ಫ್ಯಾಮಿಲಿ ಕುಳಿತು ಎಂಜಾಯ್ ಮಾಡಬಹುದು.

    ಚಿತ್ರ: ಶಿವಾರ್ಜುನ
    ನಿರ್ದೇಶನ: ಶಿವ ತೇಜಸ್
    ನಿರ್ಮಾಪಕ: ಶಿವಾರ್ಜುನ್
    ಸಂಗೀತ ನಿರ್ದೇಶನ: ಸುರಾಗ್ ಕೋಕಿಲ
    ಛಾಯಾಗ್ರಹಣ: ವೇಣು
    ತಾರಾಬಳಗ: ಚಿರಂಜೀವಿ ಸರ್ಜಾ, ಅಮೃತ ಐಯ್ಯಂಗರ್, ರವಿಕಿಶನ್, ಸಾಧಕೋಕಿಲ, ತಾರಾ, ಕಿಶೋರ್.

    ರೇಟಿಂಗ್: 3.5/5

  • ‘ಶಿವಾರ್ಜುನ’ನಾಗಿ ನಾಳೆ ಅಬ್ಬರಿಸಲಿದ್ದಾರೆ ಚಿರಂಜೀವಿ ಸರ್ಜಾ!

    ‘ಶಿವಾರ್ಜುನ’ನಾಗಿ ನಾಳೆ ಅಬ್ಬರಿಸಲಿದ್ದಾರೆ ಚಿರಂಜೀವಿ ಸರ್ಜಾ!

    ‘ಸಿಂಗ’ ಮತ್ತು ‘ಖಾಕಿ’ಯಲ್ಲಿ ಅಬ್ಬರಿಸಿದ್ದ ಚಿರು ಇದೀಗ ‘ಶಿವಾರ್ಜುನ’ನಾಗಿ ಎಲ್ಲರನ್ನು ರಂಜಿಸಲು ಬರುತ್ತಿದ್ದಾರೆ. ನಾಳೆ ಅಂದರೆ ಮಾರ್ಚ್ 12ರಂದು ಎಲ್ಲಾ ಚಿತ್ರಮಂದಿರಗಳಲ್ಲೂ ‘ಶಿವಾರ್ಜುನ’ ಲಗ್ಗೆ ಇಡುತ್ತಿದ್ದಾನೆ.

    ಸಿನಿಮಾ ಈಗಾಗಲೇ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿರುವುದು ಎಲ್ಲರಿಗೂ ಗೊತ್ತೆ ಇದೆ. ಟೈಟಲ್ ನಿಂದ ಹಿಡಿದು, ಹೊಸಬರ ಎಂಟ್ರಿವರೆಗೆ ವಿಶೇಷವಾಗಿದೆ. ಸಿನಿಮಾದಲ್ಲಿ ಶಿವ-ಅರ್ಜುನನಿಗೆ ಸಂಬಂಧಿಸಿದಂತ ಎರಡು ಕ್ಯಾರೆಕ್ಟರ್ ಇದೆ. ಹೀಗಾಗಿ ಆ ಎರಡು ಕ್ಯಾರೆಕ್ಟರ್ ಗೆ ಮ್ಯಾಚ್ ಆಗುವಂತ ಟೈಟಲ್ ಹುಡುಕುವಾಗ ಚಿತ್ರತಂಡಕ್ಕೆ ಹೊಳೆದಿದ್ದು ಇದೆ ‘ಶಿವಾರ್ಜುನ’ ಹೆಸರು. ಕಾಕತಾಳೀಯವೆಂಬಂತೆ ಈ ಸಿನಿಮಾದ ನಿರ್ಮಾಪಕರ ಹೆಸರು ಕೂಡ ಶಿವಾರ್ಜುನ ಆಗಿದೆ. ಜೊತೆಗೆ ಈ ಚಿತ್ರ ನಿರ್ದೇಶಕರ ಹೆಸರು ಕೂಡ ಶಿವತೇಜಸ್. ಹೀಗಾಗಿ ಕಥೆಗೆ ಟೈಟಲ್ ಅದ್ಭುತವಾಗಿ ಮ್ಯಾಚ್ ಆಗುತ್ತಿದ್ದರಿಂದ ‘ಶಿವಾರ್ಜುನ’ನನ್ನೇ ಫೈನಲ್ ಮಾಡಿದ್ದಾರೆ ಅಂತಾರೆ ನಿರ್ದೇಶಕರು.

    ಇದೊಂದು ಕಮರ್ಷಿಯಲ್ ಎಂಟರ್ ಟೈನ್ಮೆಂಟ್ ಸಿನಿಮಾ. ಜನ ಸಿನಿಮಾಗೆ ಹೋಗೋದೆ ಮನರಂಜನೆಗಾಗಿ. ಆ ಎರಡು ಗಂಟೆಗಳ ಮನರಂಜನೆಯನ್ನ ‘ಶಿವಾರ್ಜುನ’ ಪಕ್ಕ ನೀಡಲಿದ್ದಾನೆ. ಕಾಮಿಡಿ, ಫ್ಯಾಮಿಲಿ, ಎಮೋಷನ್ ಹೀಗೆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿ ಅಡಕವಾಗಿದೆ. ಕಿಶೋರ್, ಸಾಧುಕೋಕಿಲಾ, ನಯನಾ, ಕುರಿ ಪ್ರತಾಪ್ ಸೇರಿದಂತೆ ಕಾಮಿಡಿ ಬಳಗವೇ ಸಿನಿಮಾದಲ್ಲಿರುವುದರಿಂದ ಮನರಂಜನೆ ಸಿಗುವುದರಲ್ಲಿ ಅನುಮಾನವೇ ಇಲ್ಲ.

    ಇನ್ನು ಸಿನಿಮಾ ಇಷ್ಟು ಅದ್ಭುತವಾಗಿ ಮೂಡಿ ಬರಲು ಕಾರಣ ನಿರ್ಮಾಪಕ ಸಹಕಾರ ಅಂತಾರೆ ನಿರ್ದೇಶಕ ಶಿವತೇಜಸ್. ಸಿನಿಮಾಗೆ ಏನೆಲ್ಲಾ ಬೇಕು, ಕ್ಯಾರೆಕ್ಟರ್ ಗಳು, ಜಾಗ ಎಲ್ಲವನ್ನು ಕೇಳಿದ್ದಂತೆ ಒದಗಿಸಿಕೊಟ್ಟಿದ್ದಾರೆ. ಯಾವುದಕ್ಕೂ ಕಾಂಪ್ರೊಮೈಸ್ ಆಗುವ ಸಂಭವವೇ ಬಂದಿಲ್ಲ. ಒಬ್ಬ ಡೈರೆಕ್ಟರ್ ಏನ್ ನಿರೀಕ್ಷೆ ಮಾಡ್ತಾನೋ ಎಲ್ಲವನ್ನು ಒದಗಿಸಿದ್ದಾರೆ ಎಂಬ ಖುಷಿಯ ಮಾತುಗಳನ್ನಾಡಿದ್ದಾರೆ.

    ಶಿವ ತೇಜಸ್ ಕಥೆ – ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘ಶಿವಾರ್ಜುನ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿದ್ದಾರೆ. ಅಮೃತಾ ಅಯ್ಯಂಗಾರ್ ಮತ್ತು ಅಕ್ಷತಾ ನಾಯಕಿಯರಾಗಿ ಅಭಿನಯಿಸಿದ್ದಾರೆ. ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕವಿರಾಜ್, ಯೋಗರಾಜ್ ಭಟ್ ಮತ್ತು ವಿ ನಾಗೇಂದ್ರ ಪ್ರಸಾದರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡುಗಳಿಗೆ ಸುರಾಗ್, ಸಾಧು ಕೋಕಿಲಾ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ ಮತ್ತು ಕೆ.ಎಂ ಪ್ರಕಾಶ್ ಸಂಕಲನವಿದೆ. ನಾಳೆ ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರಲಿದೆ. ಇಡೀ ಫ್ಯಾಮಿಲಿ ಸಮೇತ ಕುಳಿತು ನೋಡುವಂತ ಕಂಟೆಂಟ್ ಸಿನಿಮಾದಲ್ಲಿದ್ದು, ವಾರಾಂತ್ಯಕ್ಕೆ ಒಂದೊಳ್ಳೆ ಸಿನಿಮಾ ನೋಡಿದ ಭಾವ ಮೂಡುವುದರಲ್ಲಿ ಸಂಶಯವಿಲ್ಲ.

  • ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ನಯನಾ

    ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ನಯನಾ

    ಬೆಂಗಳೂರು: ಕಿರುತೆರೆ ನಟಿ ಕೆ.ಎಂ.ನಯನಾ ಅವರು ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಈ ಬಗ್ಗೆ ನಯನಾ ಅವರ ಪತಿ ವೆಂಕಟೇಶ್ ಪ್ರಸಾದ್ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ವೆಂಕಟೇಶ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ, “ನಮ್ಮ ಮನೆಗೆ ಪುಟಾಣಿ ಅತಿಥಿ ಆಗಮಿಸಿದ್ದಾನೆ. ನಯನಾಗೆ ನಾರ್ಮಲ್ ಡೆಲಿವರಿಯಾಗಿದ್ದು, ಅಮ್ಮ ಹಾಗೂ ಮಗು ಇಬ್ಬರು ಕ್ಷೇಮವಾಗಿದ್ದಾರೆ. ವೈದ್ಯರ ಸಲಹೆ ಹಿನ್ನೆಲೆಯಲ್ಲಿ ನಯನಾ ಅವರು ಮೊಬೈಲ್ ಬಳಸುತ್ತಿಲ್ಲ. ಸದ್ಯದಲ್ಲೇ ಅವರು ಹಿಂತಿರುಗಲಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    A post shared by Nayana Km (@nayana_k.m) on

    ಕಳೆದ ತಿಂಗಳು ಅಂದರೆ ಅಗಸ್ಟ್ ನಲ್ಲಿ ನಯನಾ ಅವರು ಸಿಂಪಲ್ ಆಗಿ ಸೀಮಂತ ಮಾಡಿಕೊಂಡಿದ್ದರು. ಸೀಮಂತ ಕಾರ್ಯಕ್ರಮದಲ್ಲಿ ನಯನಾ ಗುಲಾಬಿ ಬಣ್ಣದ ಸೀರೆ ಧರಿಸಿ ಸಖತ್ ಮಿಂಚಿದ್ದರು. ನಯನಾಗಾಗಿ ಅನೇಕ ಸಿಹಿ ತಿಂಡಿಗಳನ್ನು ಮಾಡಿದ್ದು, ಸಾಂಪ್ರದಾಯಕವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಿದ್ದರು. ಸೀಮಂತ ಕಾರ್ಯಕ್ರಮ ಮುಗಿದ ಬಳಿ ಪತಿ, ಸಂಬಂಧಿಕರ ಜೊತೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

    ನಯನಾ ಅವರು ಸ್ನಾತಕೋತ್ತರ ಪದವಿ ಪಡೆದಿದ್ದು, ಆ ಬಳಿಕ 2 ವರ್ಷ ಉಪನ್ಯಾಸಕಿಯಾಗಿ ಕೆಲಸ ಮಾಡಿದ್ದರು. `ಚಿಕ್ಕಮ್ಮ’ ಧಾರವಾಯಿ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದ್ದ ನಯನಾ ಅವರು, ಇದುವರೆಗೂ `ಮನೆದೇವ್ರು’, `ಗಾಳಿಪಟ’, `ಪುಟ್ಟಗೌರಿ ಮದುವೆ’ ಸೇರಿದಂತೆ ಧಾರಾವಾಯಿ ಹಾಗೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಬಳಿಕ ವೃತ್ತಿ ಜೀವನಕ್ಕೆ ಬ್ರೇಕ್ ಹೇಳಿದ್ದರು. `ಸತ್ಯಂ ಶಿವಂ ಸುಂದರಂ’ ಧಾರಾವಾಯಿಯಲ್ಲಿ ತಾಪ್ಸಿ ಪಾತ್ರದ ಮೂಲಕ ಮನೆಮಾತಾಗಿದ್ದರು.

  • ಏಳು ಬಣ್ಣಗಳಲ್ಲಿ ಪ್ರೀತಿಯ ಹಾಡು ‘ಮಳೆಬಿಲ್ಲು’

    ಏಳು ಬಣ್ಣಗಳಲ್ಲಿ ಪ್ರೀತಿಯ ಹಾಡು ‘ಮಳೆಬಿಲ್ಲು’

    ಬೆಂಗಳೂರು: ಏಳು ಬಣ್ಣಗಳ ಸಮಾಗಮವೇ ಮಳೆಬಿಲ್ಲು. ಈ ಮಳೆಬಿಲ್ಲನ್ನು ಮನುಷ್ಯನ ಜೀವನದ ಕಲರ್‍ಫುಲ್ ಲೈಫ್‍ಗೆ ಹೋಲಿಸಿ ನಾಗರಾಜ್ ಹಿರಿಯೂರು ಚಲನಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಮಳೆಬಿಲ್ಲು ಎಂಬ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶರತ್ ನಾಯಕ, ಸಂಜನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಗಣೇಶ್ ನಾರಾಯಣ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕರ ಸಹೋದರ ನಿಂಗಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ.

    ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಹಾಗೂ ಫಿಲಂ ಛೇಂಬರ್ ಅಧ್ಯಕ್ಷ ಎಸ್.ಎ. ಚಿನ್ನೇಗೌಡ್ರು, ಭಾಮಾ ಹರೀಶ್ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

    ನಿರ್ಮಾಪಕ ನಿಂಗಪ್ಪ ಮಾತನಾಡುತ್ತಾ, ನಿರ್ದೇಶಕ ನಾಗರಾಜ್ ನನ್ನ ಸಹೋದರ. ಚಿಕ್ಕವನಿದ್ದಾಗಿನಿಂದಲೇ ಸಿನಿಮಾ ಬಗ್ಗೆ ತುಂಬಾ ಆಸಕ್ತಿಯಿತ್ತು. ಕಳೆದ ವರ್ಷ ಒಂದು ಕಿರು ಚಿತ್ರ ನಿರ್ಮಿಸಿದ್ದರು. ಈ ಚಿತ್ರವನ್ನು ಕಳೆದ ಜನವರಿಯಲ್ಲಿ ಆರಂಭಿಸಿದೆವು. ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು ಸೆನ್ಸಾರ್ ಹಂತದಲ್ಲಿದೆ. ಜುಲೈನಲ್ಲಿ ರಿಲೀಸ್ ಮಾಡುವ ಯೋಜನೆ ಇದೆ ಎಂದು ಹೇಳಿಕೊಂಡರು.

    ನಾಯಕ ಶರತ್ ಮಾತನಾಡಿ, ಹಿಂದೆ ಕ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೆ. ಹೈಸ್ಕೂಲ್ ಹುಡುಗ ಹಾಗೂ ಕಾಲೇಜ್ ವಿದ್ಯಾರ್ಥಿಯಾಗಿ ಎರಡು ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ನಾಯಕಿ ನಯನ ಮಾತನಾಡಿ, ಇದು 3ನೇ ಚಿತ್ರ ಈಗಿನ ಯೂಥ್‍ಗೆ ಇಷ್ಟವಾಗುವ ಕಥೆ, ಲವ್ ಸ್ಟೋರಿ ಜೊತೆಗೆ ಒಂದು ಟ್ವಿಸ್ಟ್ ಈ ಚಿತ್ರದಲ್ಲಿದೆ. ಅದು ಈ ಚಿತ್ರಕ್ಕೆ ಹೊಸ ರೂಪ ನೀಡುತ್ತದೆ ಎಂದು ಹೇಳಿದರು. ಮತ್ತೊಬ್ಬ ನಾಯಕಿ ಸಂಜನಾ ಮಾತನಾಡಿ, 2010-11ರ ಸಮಯದಲ್ಲಿ ನಡೆದ ಯುವ ಪ್ರೇಮ ಕಥೆಯಿದು. ಭಾರ್ಗವಿ ಎಂಬ ಬೋಲ್ಡ್ ಹುಡುಗಿಯ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು.

    ನಿರ್ದೇಶಕ ನಾಗರಾಜ್ ಮಾತನಾಡಿ ನನ್ನ ಚಿತ್ರದಲ್ಲಿ ಕಥೆಯೇ ಹೀರೋ. ನಾನು ರವಿಚಂದ್ರನ್ ಅವರ ಅಭಿಮಾನಿ. ಗೂಗಲ್‍ನಲ್ಲೇ ನಿರ್ದೇಶನ ಹೇಗೆ ಮಾಡೋದೆಂದು ಕಲಿತೆ. ಹುಡುಗರ ಜೀವನ ಬಿಳಿ ಹಾಳೆ ಇದ್ದ ಹಾಗೆ. ಅವರ ಲೈಫ್‍ನಲ್ಲಿ ಹುಡುಗಿಯೊಬ್ಬಳು ಬಂದಾಗ ಅವರ ಜೀವನದಲ್ಲಿ ಮಳೆ ಬಂದ ಹಾಗೆ ಆ ಮಳೆಬಿಲ್ಲು ಯಾರು ಅಂತ ಚಿತ್ರದಲ್ಲಿ ಹೇಳಿದ್ದೇವೆ ಅಂತ ಹೇಳಿದರು.

    ಸಂಗೀತ ನಿರ್ದೇಶಕ ಗಣೇಶ್ ನಾರಾಯಣ್ ಮಾತನಾಡಿ ಇದೊಂದು ಮ್ಯೂಸಿಕಲ್ ಲವ್ ಸ್ಟೋರಿ. ಈ ಚಿತ್ರದಲ್ಲಿ ಹಾಡುಗಳನ್ನು ಬರೆದ ನಂತರ ಟ್ಯೂನ್ ಮಾಡಿಕೊಂಡು 10 ಹಾಡುಗಳು ಈ ಚಿತ್ರದಲ್ಲಿದ್ದು, ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿ ಬಂದಿವೆ ಎಂದು ಹೇಳಿದರು.

    ಫಿಲಂ ಛೇಂಬರ್ ಅಧ್ಯಕ್ಷ ಚಿನ್ನೇಗೌಡ್ರು ಮಾತನಾಡಿ ಚಿತ್ರರಂಗವನ್ನು ಒಂದು ಕುಟುಂಬ ಎನ್ನುತ್ತೇವೆ. ಇಲ್ಲಿ ಕುಟುಂಬವೇ ಸೇರಿ ಒಂದು ಚಿತ್ರ ಮಾಡಿದ್ದಾರೆ. ಹೋಂವರ್ಕ್ ಮಾಡಿಕೊಳ್ಳದೆ ಚಿತ್ರರಂಗಕ್ಕೆ ಬರಬೇಡಿ ಎಂದು ಹೊಸದಾಗಿ ಬರುತ್ತಿರುವವರಿಗೆ ಕಿವಿ ಮಾತು ಹೇಳಿದರು.