Tag: ನರರೋಗ

  • ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

    ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

    ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮಾತನಾಡಿದ್ದಾರೆ.

    `ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: 3ನೇ ಮಗುವಿನ ತಾಯಿಯಾದ ಖ್ಯಾತ ಸಿಂಗರ್ ರಿಹಾನಾ

    2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ ರೋಗದ ಮೊದಲ ಲಕ್ಷಣ ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ನಟ ಲಾರಾ ದತ್ತ ಅವರು ನನ್ನ ಮುಖದಿಂದ ಕೂದಲೆಳೆಯನ್ನು ಕಿತ್ತಿದ್ದಾಗ ತೀವ್ರವಾಗಿ ನೋವಾಗಿತ್ತು. ಆಗ ನಾನು ಅದನ್ನು ಹಲ್ಲಿನ ಸಮಸ್ಯೆ ಎಂದುಕೊಂಡಿದ್ದೆ. ಆದರೆ ಬಳಿಕ ಆಸ್ಪತ್ರೆಗೆ ತೆರಳಿದಾಗ ಇದು ನರಗಳಿಗೆ ಸಂಬಂಧಿಸಿದ್ದು ಎಂದು ತಿಳಿಯಿತು. ಆದರೆ ಅದರ ನೋವು ಎಷ್ಟಿರುತ್ತದೆ ಎಂದರೆ ನಿಮ್ಮ ಶತ್ರುವಿಗೂ ಹಾಗಾಗಬಾರದು ಎಂದುಕೊಳ್ಳುವಷ್ಟು ತೀವ್ರವಾಗಿ ನೋವಾಗುತ್ತದೆ. ಇಂತಹ ನೋವಿನಿಂದ ಹೆಚ್ಚು ಆತ್ಮಹತ್ಯೆಗಳು ಸಂಭವಿಸುತ್ತವೆ. ನನಗೂ ಕೂಡ ಅಂತಹ ಯೋಚನೆಗಳು ಬಂದಿದ್ದವು. ಆದರೆ ನಾನು ಈ ನೋವನ್ನು ಏಳೂವರೆ ವರ್ಷಗಳ ಕಾಲ ಅನುಭವಿಸಿದ್ದೇನೆ ಎಂದಿದ್ದಾರೆ.

    ಈ ನೋವು ನನ್ನ ದೈನಂದಿನ ಜೀವನದ ಮೇಲೆ ತೀವ್ರವಾಗಿ ಪರಿಣಾಮ ಬೀರಿತು. ಪ್ರತಿ 4-5 ನಿಮಿಷಗಳಿಗೊಮ್ಮೆ ನೋವಾಗುತ್ತಿತ್ತು. ತಿಂಡಿ ತಿನ್ನಬೇಕೆಂದರೆ ನನಗೆ ಒಂದು ಗಂಟೆಗೂ ಅಧಿಕ ಸಮಯಬೇಕಿತ್ತು. ಅಗಿಯಲು ಆಗುತ್ತಿರಲಿಲ್ಲ. ಇದೆಲ್ಲದರ ನಂತರ ನಾನು ಗಾಮಾ ನೈಫ್ ಶಸ್ತ್ರಚಿಕಿತ್ಸೆಗೆ ಒಳಗಾದೆ. ಇದು 8 ಗಂಟೆಗಳ ಕಾಲ ನಡೆದಿತ್ತು. ಅದಾದ ಬಳಿಕ ನೋವು ಕಡಿಮೆ ಆಯ್ತು ಎಂದು ಹೇಳಿಕೊಂಡಿದ್ದಾರೆ.

    ಇದೆಲ್ಲದರ ಮಧ್ಯೆಯೂ ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಲಿಲ್ಲ. ಸದ್ಯ `ಬ್ಯಾಟಲ್ ಆಫ್ ಗಾಲ್ವಾನ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.ಇದನ್ನೂ ಓದಿ: ಕ್ರೂ ಪಾರ್ಟ್-2 ನಲ್ಲಿ ಕರೀನಾ ನಟಿಸೋದು ಪಕ್ಕಾ

     

  • ಆತ್ಮಹತ್ಯೆ ಮಾಡಲೆತ್ನಿಸಿದ ಅಂಗವಿಕಲನಿಗೆ ತಂದೆ-ತಾಯಿಗಾಗಿ ಬದುಕುವಾಸೆ..!

    ಆತ್ಮಹತ್ಯೆ ಮಾಡಲೆತ್ನಿಸಿದ ಅಂಗವಿಕಲನಿಗೆ ತಂದೆ-ತಾಯಿಗಾಗಿ ಬದುಕುವಾಸೆ..!

    ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿ, ಕಿತ್ತು ತಿನ್ನುವ ಬಡತನ, ವಯಸ್ಸಾದ ತಂದೆ ತಾಯಿ. ಈ ಎಲ್ಲದರ ಮಧ್ಯೆ ನರರೋಗ ಹಾಗೂ ಸಂದು ನೋವು. ಹೌದು ನಾವು ಹೇಳಲು ಹೊರಟಿರುವುದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ವಾಸಿ 23 ವರ್ಷದ ಮೌನೇಶ್ ಎಂಬ ಅಸಹಾಯಕ ಯುವಕನ ಕಥೆ.

    ಸದಾ ಹುಮ್ಮಸ್ಸಿನಿಂದ ಕೆಲಸ ಮಾಡಿಕೊಳ್ಳುತ್ತಾ, ಹಿರಿಯರಿಗೆ ಗೌರವಿಸುತ್ತಾ, ಓದುತ್ತಾ. ತಂದೆ ತಾಯಿಯನ್ನು ಸಾಕುತ್ತಿದ್ದರು. ಇರುವ ಅಲ್ಪ ಜಮೀನಿನಲ್ಲಿ ಸಣ್ಣ ಬೆಳೆ ಬೆಳದು ಜೀವನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಆಟವಾಡುವ ವೇಳೆ ಬಿದ್ದು ತೊಡೆ ಭಾಗ ಪೆಟ್ಟಾಗಿತ್ತು. ಗಾಯಾಳುವಾಗಿದ್ದು ಮೌನೇಶ್‍ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಮೇಲೆ ನರರೋಗ, ಸಂದು ನೋವು ಸಮಸ್ಯೆ ಇದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

    ಕಿತ್ತು ತಿನ್ನುವ ಬಡತನವಿದ್ದರೂ ಸ್ವಾಭಿಮಾನದಿಂದ ಬದುಕುತ್ತಿದ್ದ ಮೌನೇಶ್‍ನ ತಂದೆ ತಾಯಿ ಮಗನಿಗಾಗಿ ಸಾಲ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಮಗನ ಚಿಕಿತ್ಸೆಗಾಗಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಎಲ್ಲ ನಗರಗಳಲ್ಲೂ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ಮಗನಲ್ಲಿ ಯಾವುದೇ ಚೇತರಿಕೆಯಾಗಿಲ್ಲ.

    ವಯಸ್ಸಾದ ತಂದೆ ತಾಯಿಗಳನ್ನು ನಾನು ನೋಡಿಕೊಳ್ಳಬೇಕಾಗಿತ್ತು. ಆದರೆ ನನ್ನನ್ನು ನೋಡಿಕೊಳ್ಳುವದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಿಟ್ಟಿದ್ದಾರೆ ಎಂದು ಮೌನೇಶ್ ಕೊರಗುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಂದ ಹೊರ ಬರಲು ಹಾಗೂ ತಂದೆ ತಾಯಿಗೆ ಹೊರೆ ಕಡಿಮೆ ಮಾಡಲು ಮೌನೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು.

    ಛಲ ಬಿಡದ ತಂದೆ ತಾಯಿ ಮಗ ಮೌನೇಶ್‍ನನ್ನು ದೊಡ್ಡ ದೊಡ್ಡ ಆಸ್ಪತ್ರೆಗೆಲ್ಲಾ ತೋರಿಸಿದ್ದಾರೆ. ನೋಡಿದ ವೈದ್ಯರಲ್ಲಿ ಕೆಲವರು ಸಾಧ್ಯವಿಲ್ಲ ಎಂದರೆ ಇನ್ನು ಕೆಲವರು ತುಂಬಾ ಹಣ ಖರ್ಚಾಗುತ್ತದೆ ಎಂದು ಹೇಳುತ್ತಾರೆ. ಇದ್ದ ಹಣವನ್ನೆಲ್ಲ ಅಲ್ಲಿ ಇಲ್ಲಿ ಅಂತ ಬರೀ ಔಷಧಿಗೆ ಖರ್ಚಾಗಿದೆ.

    ನಿತ್ಯ ಕರ್ಮಕ್ಕೂ ಇನ್ನೊಬ್ಬರನ್ನ ಆಶ್ರಯಿಸಬೇಕಾದ ಅನಿವಾರ್ಯತೆ ಮೌನೇಶನದ್ದು ಜೊತೆಗೆ ವೃದ್ಧ ತಂದೆ-ತಾಯಿ. ಬಡತನ ಈ ಕುಟುಂಬದ ಅಸಹಾಯಕತೆಯನ್ನ ಮತ್ತಷ್ಟು ಹೆಚ್ಚಿಸಿದೆ. ಇನ್ನೂ ಮೌನೇಶನ ನೋವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕುಟುಂಬ ದಿಕ್ಕು ತೋಚದಂತಾಗಿ ಕುಳಿತಿದೆ.

    https://www.youtube.com/watch?v=hsSmHabjUhE