Tag: ನರೇಗಾ ಯೋಜನೆ

  • ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

    ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿ ಮಾಡಲು ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

    ಜಿಲ್ಲೆಯ ಹೊಳಲೂರಿನ ಅಂಬೇಡ್ಕರ್ ಭವನದಲ್ಲಿ, ಕರ್ನಾಟಕ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ, ನರೇಗಾ ದಿನಾಚರಣೆ ಕಾರ್ಯಕ್ರಮವನ್ನು ಈಶ್ವರಪ್ಪ ಅವರು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಗಳವಿರಬಹುದು : ಸತೀಶ್ ಜಾರಕಿಹೊಳಿ

    ಈ ವೇಳೆ ಅವರು, ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವ ಯೋಜನೆ ಅಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ, ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಯೋಜನೆ ಇದಾಗಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, 600ಕ್ಕೂ ಹೆಚ್ಚು ಹಳೆ ಕಲ್ಯಾಣಿಗಳಿಗೆ ಪುನರ್ಜನ್ಮ ನೀಡಲು ಸಾಧ್ಯವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಕನಿಷ್ಟ ಒಂದು ಕೆರೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿರುವುದನ್ನು ಕಂಡುಕೊಳ್ಳಲಾಗಿದೆ. ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.

    ನರೇಗಾ ಯೋಜನೆಯಡಿ ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮಥ್ರ್ಯವನ್ನು ಹೆಚ್ಚಿಸಿ, ಹೆಚ್ಚಿನ ಆದಾಯ ಗಳಿಸಲು ಸಾಧ್ಯವಾಗಿದೆ. ಕೆರೆ, ಇಂಗುಗುಂಡಿಗಳ ನಿರ್ಮಾಣ, ತಡೆಗೋಡೆ ನಿರ್ಮಾಣ, ಹೊಲಕ್ಕೆ ಹೋಗಲು ಸಣ್ಣ ರಸ್ತೆಗಳ ನಿರ್ಮಾಣ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಸಿಗಳನ್ನು ನೆಡುವ ಯೋಜನೆ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ದನದ ಕೊಟ್ಟಿಗೆ, ಕುರಿ ಶೆಡ್ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದರು.

    ನರೇಗಾ ಯೋಜನೆಯಡಿ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಕೆರೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಸರ್ಕಾರದಿಂದ ಅನುಮತಿಯನ್ನು ಪಡೆದು ಈ ಕಾಮಗಾರಿಗಳ ಅನುಷ್ಠಾನ ಕಾರ್ಯವನ್ನು ಆದಷ್ಟು ಬೇಗನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಯಾವುದೇ ಕಾರ್ಯಕ್ರಮ ಆಗುತ್ತಿಲ್ಲ: ಸಂತೋಷ್ ಲಾಡ್

    ನರೇಗಾ ಯೋಜನೆಯಡಿ ಪ್ರಸ್ತುತ ವರ್ಷ ಕೇಂದ್ರ ಸರ್ಕಾರ ನೀಡಿದ್ದ 13 ಕೋಟಿ ಮಾನವ ದಿನಗಳ ಗುರಿ, ನವೆಂಬರ್ ತಿಂಗಳಲ್ಲಿ ಪೂರ್ಣಗೊಂಡ ಕಾರಣ ಹೆಚ್ಚುವರಿಯಾಗಿ 1.40ಕೋಟಿ ಮಾನವ ದಿನ ರಾಜ್ಯಕ್ಕೆ ನೀಡಿತ್ತು. ಅದನ್ನು ಸಹ ಪೂರ್ಣಗೊಳಿಸಿ, ಹೆಚ್ಚುವರಿ ದಿನಕ್ಕೆ ಅವಕಾಶ ನೀಡಲು ಕೇಂದ್ರಕ್ಕೆ ಕೋರಲಾಗಿದೆ ಎಂದರು.

  • ಪಾನಮತ್ತ ವ್ಯಕ್ತಿಯ ಕಿತಾಪತಿ – ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

    ಪಾನಮತ್ತ ವ್ಯಕ್ತಿಯ ಕಿತಾಪತಿ – ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

    ಚಾಮರಾಜನಗರ: ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತನೆ ಮಾಡಿ, ಬೆತ್ತಲೆಯಾಗಿ ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ ಮಾಡಿದ ಘಟನೆ ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದಲ್ಲಿ ವರದಿಯಾಗಿದೆ.

    ಅಶ್ಲೀಲವಾಗಿ ವರ್ತನೆ ಮಾಡಿದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತಾಂಡವಮೂರ್ತಿ ಜಗಳವಾಡಿ ಬಳಿಕ ಬೆತ್ತಲೆಯಾಗಿ ಮಹಿಳೆಯರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾನೆ. ಇದನ್ನೂ ಓದಿ: ದಯಾಮರಣ ಕೋರಿ ಧರಣಿ ಕುಳಿತ ರೈತ ಕುಟುಂಬ

    ತಾಂಡವಮೂರ್ತಿ ಬೆತ್ತಲೆಯಾಗಿ ಓಡಾಡುತ್ತಿದ್ದನ್ನು ನೋಡಿದ ಸ್ಥಳೀಯರು ವೀಡಿಯೋ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಕುಪಿತಗೊಂಡ ತಾಂಡವಮೂರ್ತಿಯ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಪೊಲೀಸರಿಗೆ ಒಪ್ಪಿಸಿದ ಗ್ರಾಮದ ಮೂವರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಬಳಿಕ ಗ್ರಾಮಸ್ಥರು ಹಲ್ಲೆಗೊಳದ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಶ್ಲೀಲವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಆತನ ಮಕ್ಕಳಾದ ಮಹೇಂದ್ರ, ಸಂತೋಷ್‍ನ್ನು ಪೊಲೀಸರು ಬಂಧಿಸಿದ್ದು, ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನರೇಗಾ ಯೋಜನೆಯಡಿ ಪ್ರತಿದಿನ 250 ಜನರಿಗೆ ಕೆಲಸ- ಕಾಮಗಾರಿ ಪರಿಶೀಲಿಸಿದ ಖಂಡ್ರೆ

    ನರೇಗಾ ಯೋಜನೆಯಡಿ ಪ್ರತಿದಿನ 250 ಜನರಿಗೆ ಕೆಲಸ- ಕಾಮಗಾರಿ ಪರಿಶೀಲಿಸಿದ ಖಂಡ್ರೆ

    ಬೀದರ್: ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಚೆಕ್ ಡ್ಯಾಮ್ ಹಾಗೂ ಮೊರಂಬಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಸಮೀಪ ಗಿಡ ನೆಡಲು ಗುಣಿ ತೊಡುತ್ತಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಈಶ್ವರ್ ಖಂಡ್ರೆ ಅವರು ಕಾಮಗಾರಿಯನ್ನು ಪರಿಶೀಲಿಸಿದರು.

    ಶನಿವಾರ ಅಧಿಕಾರಿಗಳ ತಂಡದೊಂದಿಗೆ ಉಚ್ಛಾ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಲಾಕ್‍ಡೌನ್ ಮಾಡಿರುವುದರಿಂದ ಬಡ ಜನರು, ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಷೇತ್ರದ ಬಡಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ಆಹಾರದ ಪೊಟ್ಟಣ, ತರಕಾರಿ ಕಿಟ್ ನೀಡುವ ಮೂಲಕ ನೆರವು ನೀಡಲಾಗಿದೆ ಎಂದರು.

    ಬಡವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿರುವ ಸಮಯದಲ್ಲಿ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವುದನ್ನು ಮನಗಂಡು ಎಲ್ಲ 40 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನರೇಗಾದಡಿ ಪ್ರತಿ ಗ್ರಾಮ ಪಂಚಾಯಿತಿಯಿಂದ ಪ್ರತಿದಿನ ಕನಿಷ್ಟ 250 ಜನರಿಗೆ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಯಾರೂ ಆತಂಕ ಪಡಬೇಕಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿದಿನ ಒಬ್ಬರಿಗೆ 275 ರೂ. ಯಂತೆ ಕನಿಷ್ಟ 25 ದಿನ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು. ಈ ವೇಳೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್ ಇದ್ದರು.

  • ಯುಪಿಎ ಆರಂಭಿಸಿದ ನರೇಗಾ ಯೋಜನೆಗೆ 48 ಸಾವಿರ ಕೋಟಿ ರೂ.

    ನವದೆಹಲಿ: ಯುಪಿಎ ಅವಧಿಯಲ್ಲಿ ಆರಂಭಿಸಲಾದ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನಗೆ 48 ಸಾವಿರ ಕೋಟಿ ರೂ. ಹಣವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್‍ನಲ್ಲಿ ಮೀಸಲಿಟಿದ್ದಾರೆ,

    ಇದು ಇದೂವರೆಗಿನ ಬಜೆಟ್‍ಗಳಲ್ಲಿ ಈ ಬಾರಿಗೆ ನರೇಗಾ ಯೋಜನೆಗೆ ಅತಿ ಹೆಚ್ಚು ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.

    2016-17ನೇ ಸಾಲಿನ ಬಜೆಟ್‍ನಲ್ಲಿ ನರೇಗಾ ಯೋಜನೆಗೆ 38,500 ಕೋಟಿ ರೂ. ಹಣವನ್ನು ಮೀಸಲಿಡಲಾಗಿತ್ತು. ಕಳೆದ ವರ್ಷ 3,800 ಕೋಟಿ ರೂ. ಹೆಚ್ಚಿನ ಅನುದಾನ ಪ್ರಕಟಿಸಿದ್ದರೆ ಈ ಬಾರಿ 9,500 ಕೋಟಿ ರೂ. ಹೆಚ್ಚಿನ ಅನುದಾನವನ್ನು ಪ್ರಕಟಿಸಿದ್ದಾರೆ.

    ಅರುವತ್ತು ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡಲಾಗದ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಸ್ಮಾರಕ ಎಂದು ನರೇಗಾ ಯೋಜನೆಯನ್ನು ಮೋದಿ ಲೇವಡಿ ಮಾಡಿದ್ದರು. ಆದರೆ ಕಳೆದ ಬಜೆಟ್ ಮತ್ತು ಈ ಬಜೆಟ್‍ನಲ್ಲಿ ಅರುಣ್ ಜೇಟ್ಲಿ ಅತಿ ಹೆಚ್ಚು ಹಣವನ್ನು ಈ ಯೋಜನೆಗೆ ಮೀಸಲಿಟಿದ್ದಾರೆ.