Tag: ನರ್ಸಿಂಗ್ ಕಾಲೇಜು

  • ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಮಂಗಳೂರು: ನರ್ಸಿಂಗ್‌ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ

    ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದಾರೆ.

    ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್‌ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

    ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇರಳದಿಂದ ಬಂದಿದ್ದ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

    ಕೇರಳದಿಂದ ಬಂದಿದ್ದ ಒಂದೇ ಕಾಲೇಜಿನ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

    – ಹಾಸನ ನರ್ಸಿಂಗ್ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು

    ಹಾಸನ: ರಾಜ್ಯಾದ್ಯಂತ ಹಲವು ತಿಂಗಳು ಬಳಿಕ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಈ ವೇಳೆ ಜಿಲ್ಲೆಗೆ ಕೇರಳದಿಂದ ಪರೀಕ್ಷೆ ಗೆ ಹಾಜರಾಗಲು ಬಂದಿದ್ದ ಒಂದೇ ಕಾಲೇಜಿನ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

    15 ದಿನದ ಹಿಂದೆ ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಖಚಿತಪಡಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಕೆಆರ್ ಪುರಂನಲ್ಲಿ ಇರುವಂತಹ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನಲ್ಲಿ ಇಡಲಾಗಿದ್ದು ಇವರನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬಂದಿದ್ದ 21 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿ ಇರುವಂತಹ ಸಿಬ್ಬಂದಿ, ವಿದ್ಯಾರ್ಥಿಗಳಿಗೂ ಕೊರೊನಾ ಪರೀಕ್ಷೆ ಮಾಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಲಾಗುತ್ತಿದೆ ಎಂದು ಸತೀಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮಕಾರಿಯಲ್ಲ-ಅಧ್ಯಯನ ವರದಿ!

    ಹಾಸನ ನಗರದಲ್ಲಿ ದಿನನಿತ್ಯ ಕೊರೊನಾ ಪಾಸಿಟಿವ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇರಳ ಮೂಲದ 21 ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಈಗಾಗಲೇ ಮೂರನೇ ಅಲೆ ಭೀತಿ ಎದುರಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹರಡುತ್ತಿರುವುದು ಹೆಚ್ಚು ಅಪಾಯಕಾರಿ ಬೆಳವಣಿಗೆಯಾಗಿದೆ.

  • ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ  ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ.

    ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್ (19)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

    ತಾಲೂಕಿನ ಟಿ.ಬೇಗೂರು ಬಳಿಯ ಅಂಬಿಕಾ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಡಿಪ್ಲೋಮಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ  ಈಕೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಭಾನುವಾರ ಫೋನ್ ಕರೆಯನ್ನು ರಿಸೀವ್ ಮಾಡದಿದ್ದಕ್ಕೆ ಮನನೊಂದು ಪ್ರಿಯತಮನ ಜೊತೆ ತಂಗಲು ಬಾಡಿಗೆ ಪಡೆದಿದ್ದ ತೋಟದ ಮನೆಯಲ್ಲಿ ರಿಜೀಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಿಯಕರ ಹಾಗೂ ಕಾಲೇಜು ಆಡಳಿತ ಮಂಡಳಿಯವರ ವಿಚಾರಣೆ ನಡೆಸುತ್ತಿದ್ದಾರೆ.