Tag: ನರ್ಸಿಂಗ್ ಕಾಲೇಜ್

  • ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ತಿರುವನಂತಪುರಂ: ಕೇರಳದ ಕೊಟ್ಟಾಯಂ (Kottayam) ನರ್ಸಿಂಗ್‌ ಕಾಲೇಜಿನಲ್ಲಿ ಭಯಾನಕ ರ‍್ಯಾಗಿಂಗ್ (Ragging) ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಬಂಧಿಸಿದ ಬೆನ್ನಲ್ಲೇ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ಹೊರಬಿದ್ದಿದೆ.

    ಐವರು ಹಿರಿಯ ವಿದ್ಯಾರ್ಥಿಗಳು ತಮ್ಮ ಮೂವರು ಜೂನಿಯರ್‌ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಚಿತ್ರಹಿಂಸೆ ನೀಡಿದ್ದಾರೆ? ಅನ್ನೋದನ್ನ ಈ ವೀಡಿಯೋ ಬಹಿರಂಗಪಡಿಸಿದೆ. ಕಿರಿಯ ವಿದ್ಯಾರ್ಥಿಯನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ಮಾಡೋದಕ್ಕೂ ಮುನ್ನವೇ ಇನ್ನೂ ಬೇರೆ ರೀತಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಾಲ್ಕು ಗಿನ್ನಿಸ್ ದಾಖಲೆಗೆ ತಯಾರಿ

    ಹೌದು. ಮೊದಲು ಮೂವರು ಕಿರಿಯರಲ್ಲಿ ಓರ್ವನನ್ನ ಹಾಸಿಗೆ ಮೇಲೆ ಮಲಗಿಸಿದ್ದಾರೆ. ಕೈಕಾಲುಗಳನ್ನ ಹಾಸಿಗೆ ತುದಿಗೆ ಕಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಆತನ ತೊಡೆಯ ಭಾಗಕ್ಕೆ ಕಂಪಾಸ್‌ನಿಂದ ಚುಚ್ಚಿದ್ದಾನೆ. ಸಂತ್ರಸ್ತ ವಿದ್ಯಾರ್ಥಿ (Medical Student) ಚೀರಾಡಿದರೂ ಬಿಡದೇ ಅತನ ಮೈಮೇಲೆ ಬಿಳಿ ಲೋಷನ್‌ ಸುರಿದಿದ್ದಾರೆ. ಬಳಿಕ ಮರ್ಮಾಂಗಕ್ಕೆ ಡಂಬಲ್ಸ್‌ಗಳನ್ನ ನೇತುಹಾಕಿ, ಎದೆಯ ಭಾಗಕ್ಕೆ ಬಟ್ಟೆ ಕ್ಲಿಪ್‌ಗಳನ್ನ ಕಚ್ಚಿಸಿದ್ದಾರೆ. ಬಳಿಕ ಕ್ಲಿಪ್‌ ಹಿಡಿದು ಎಳೆದಾಡಿದ್ದಾರೆ. ವಿದ್ಯಾರ್ಥಿ ಕೂಗಿಕೊಂಡರೂ ಬಿಡದೇ ಆತನನ್ನ ಟಾರ್ಚರ್‌ ಮಾಡಿ, ಕೇಕೆ ಹಾಕಿದ್ದಾರೆ.  ಇದನ್ನೂ ಓದಿ: ಫೆ.15ರಂದು ಅಶ್ವಿನಿ ವೈಷ್ಣವ್ ರಾಜ್ಯ ಭೇಟಿ – ಕೇಂದ್ರ ಬಜೆಟ್ ಕುರಿತು ಸಂವಾದ

    ಈ ಸಂಬಂಧ ಅದೇ ಕಾಲೇಜಿನ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿದ ಪೊಲೀಸರು ಹಿರಿಯ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ರಾಹುಲ್ ರಾಜ್ (22), ಜೀವಾ (18), ರಿಜಿಲ್ ಜಿತ್ (20) ಮತ್ತು ವಿವೇಕ್ (21)ರನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ.

    ಈ ನಡುವೆ ಮದ್ಯ ಖರೀದಿಸಲು ಕಿರಿಯ ವಿದ್ಯಾರ್ಥಿಗಳಿಂದ ಹಣ ಕೇಳಿದ್ದಾರೆ, ಅವರು ನಿರಾಕರಿಸಿದ್ದಕ್ಕಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ಮತ್ತೊಬ್ಬ ವಿದ್ಯಾರ್ಥಿ ತನ್ನ ತಂದೆಯೊಂದಿಗೆ ಹೇಳಿಕೊಂಡ ನಂತರ ವಿಷಯ ಗೊತ್ತಾಗಿದೆ. ಬಳಿಕ ದೂರು ದಾಖಲಿಸಲು ಮಗನಿಗೆ ಪ್ರೋತ್ಸಾಹ ನೀಡಿದ್ದಾರೆ. ಇದನ್ನೂ ಓದಿ: ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

  • ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಂಡು ಕೇಳರಿಯದಂತಹ ಭಯಾನಕ ರ‍್ಯಾಗಿಂಗ್ (Ragging) ನಡೆದಿದೆ.

    ಇಲ್ಲಿನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ (Government Nursing College) ವ್ಯಾಸಂಗ ಮಾಡುತ್ತಿದ್ದ ಮೂವರು ಕಿರಿಯ ವಿದ್ಯಾರ್ಥಿಗಳನ್ನು ಮೂರನೇ ವರ್ಷದ ಸೀನಿಯರ್‌ ವಿದ್ಯಾರ್ಥಿಗಳು ಬೆತ್ತಲೆ ಮಾಡಿ, ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ನೀಡಿದ್ದಾರೆ.

    ಕಂಪಾಸ್‌ನಿಂದ ಇರಿದು ಕ್ರೂರವಾಗಿ ಥಳಿಸಿ ಬಾಯಿಗೆ ಲೋಷನ್ ತುಂಬಿ ಅಮಾನುಷವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಉಚಿತ ಯೋಜನೆಗಳಿಂದ ಜನ ಕಷ್ಟಪಟ್ಟು ಕೆಲಸ ಮಾಡ್ತಿಲ್ಲ – ಸುಪ್ರೀಂ ಅಸಮಾಧಾನ

    ನವೆಂಬರ್‌ನಿಂದ ನಿರಂತರವಾಗಿ ನಮ್ಮ ಮೇಲೆ ರ‍್ಯಾಗಿಂಗ್ ನಡೆಯುತ್ತಿದೆ. ಮದ್ಯಪಾನಕ್ಕಾಗಿ ಹಣ ಕಸಿಯುತ್ತಿದ್ದರು. ಹಣ ನೀಡದ್ದಕ್ಕೆ ಹೊಡೆಯಲು ಆರಂಭಿಸಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ರ‍್ಯಾಗಿಂಗ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪೊಲೀಸರು ಆರೋಪಿ ವಿದ್ಯಾರ್ಥಿಗಳಾದ ಸ್ಯಾಮುಯೆಲ್ ಜಾನ್ಸನ್, ಎನ್ ಎಸ್ ಜೀವಾ, ಕೆಪಿ ರಾಹುಲ್ ರಾಜ್, ರಿಜಿಲ್ ಜಿತ್, ವಿವೇಕ್‌ನನ್ನು ಬಂಧಿಸಿದ್ದಾರೆ.

     

  • ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

    ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ – ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಸೋಂಕು

    – ನರ್ಸಿಂಗ್ ಕಾಲೇಜ್, ಆಸ್ಪತ್ರೆ ಸೀಲ್ ಡೌನ್

    ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ತಿಂಗಳಿನಿಂದ ಕೊರೊನಾ ಸೋಂಕು ಮಂದಗತಿಯಲ್ಲಿತ್ತು. ಆದರೆ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಉಂಟಾಗಿದೆ. ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ.

    ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸೀಟ್ ಗಳನ್ನು ಗೆಲ್ಲುವುದಿಲ್ಲ: ಗುಲಾಮ್ ನಬಿ ಆಜಾದ್

    ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಹೀಗೆ ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.

    ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ಇರುವುದು ದೃಢಪಟ್ಟಿತ್ತು. ನಂತರ ಎಚ್ಚೆತ್ತ ಜಿಲ್ಲಾಡಳಿತ ನರ್ಸಿಂಗ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದಾಗ ಬರೋಬ್ಬರಿ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

    ಯಾವಾಗ ನಂಜಪ್ಪ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಯಿತೋ, ಮುಂಜಾಗ್ರತಾ ಕ್ರಮವಾಗಿ ನರ್ಸಿಂಗ್ ಕಾಲೇಜು ಹಾಗೂ ಕಾಲೇಜು ಆವರಣದಲ್ಲೇ ಇರುವ ನಂಜಪ್ಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ 700ಕ್ಕೂ ಅಧಿಕ ಸಿಬ್ಬಂದಿಗೆ ಕೋವಿಡ್ ರ್ಯಾಂಡಮ್ ಟೆಸ್ಟ್ ಮಾಡಿದೆ. ಇದನ್ನೂ ಓದಿ: ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ಈಗಾಗಲೇ 300ಕ್ಕೂ ಅಧಿಕ ಜನರಿಗೆ ನೆಗೆಟಿವ್ ವರದಿ ಬಂದಿದ್ದು, ಉಳಿದವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ನರ್ಸಿಂಗ್ ವಿದ್ಯಾರ್ಥಿಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಆಸ್ಪತ್ರೆಯ ಓಪಿಡಿ ಸಂಪೂರ್ಣವಾಗಿ ಬಂದ್ ಆಗಿದೆ. ಜೊತೆಗೆ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಬಂಧಿಕರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.

    ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಆದರೆ ಶಿವಮೊಗ್ಗದ ನರ್ಸಿಂಗ್ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸಿದ್ದರಾ, ಇಲ್ಲವೇ ಎಂಬುದು ಇದುವರೆಗೂ ನಿಗೂಢವಾಗಿದೆ. ಈ ವಿದ್ಯಾರ್ಥಿಗಳಿಂದ ಇನ್ನೆಷ್ಟು ಜನರಿಗೆ ಕೋವಿಡ್ ಸೋಂಕು ಹರಡಿದೆಯೋ ಎಂಬುದು ಮಲೆನಾಡಿಗರ ಆತಂಕಕ್ಕೆ ಕಾರಣವಾಗಿದೆ.

  • ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ- ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಪಾಸಿಟಿವ್

    ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ- ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಪಾಸಿಟಿವ್

    – ಶಾಲೆ, ವಿದ್ಯಾಗಮ ಆರಂಭಕ್ಕೆ ತಜ್ಞರ ಹಿಂದೇಟು
    – ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಬೆಂಗಳೂರು: ಬೆಂಗಳೂರಿಗೆ ಮತ್ತೆ ಕೊರೊನಾ ಬಾಂಬ್ ಆತಂಕ ಎದುರಾಗಿದ್ದು, ಮಂಜು ಶ್ರೀ ನರ್ಸಿಂಗ್ ಕಾಲೇಜಿನಲ್ಲಿ 40 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಆರೋಗ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಅಲ್ಲದೆ ಶಾಲೆ ಆರಂಭಕ್ಕೆ ಸಹ ತಜ್ಞರು ಹಿಂದೇಟು ಹಾಕಿದ್ದಾರೆ.

    ಬೆಂಗಳೂರಿಗೆ ಕೇರಳ ಶಾಕ್ ಎದುರಾಗಿದ್ದು, ಈಗಾಗಲೇ ಮಂಜುಶ್ರೀ ನರ್ಸಿಂಗ್ ಕಾಲೇಜ್ ನ ಕೇರಳ ವಿದ್ಯಾರ್ಥಿಗಳಲ್ಲಿ 40 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರ ಸಂಪರ್ಕಿತರು ಒಟ್ಟು 200 ಜನರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೇರಳ ಕೊರೊನಾ ಶಾಕ್ ನಿಂದಾಗಿ ಬಿಬಿಎಂಪಿ ಹೊಸ ರೂಲ್ಸ್ ಮಾಡಿದೆ. ಕೇರಳದ ಭರ್ಜರಿ ಶಾಕ್ ಗೆ ಬಿಬಿಎಂಪಿ ಥಂಡಾ ಹೊಡೆದಿದ್ದು, ಈಗ ಕೇರಳ ಗಡಿ ಬಂದ್ ಮಾಡಲು ಸಾಧ್ಯವಿಲ್ಲದ ಕಾರಣ ಟಫ್ ರೂಲ್ಸ್ ಜಾರಿ ಮಾಡಿದೆ.

    ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕಂಪನಿಗಳ ಸಿಬ್ಬಂದಿ ಯಾರೇ ಬಂದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಗೊಳಿಸಿದೆ. ರಾಜ್ಯಕ್ಕೆ ಪ್ರವೇಶ ಪಡೆಯುವ 72 ಗಂಟೆಯ ಮೊದಲು ಕೊರೊನಾ ಟೆಸ್ಟ್ ಮಾಡಿಸಿರುವ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದೆ.

    ಎರಡನೇ ಅಲೆಯ ಆತಂಕ
    ಈಗಾಗಲೇ ಬೆಂಗಳೂರಿನ ಅಪಾರ್ಟ್‍ಮೆಂಟ್ ನಲ್ಲಿ ಪಾರ್ಟಿ ಮಾಡಿದ 28 ಜನರಿಗೆ ಹೈ ಸ್ಪೀಡ್ ನಲ್ಲಿ ಕೊರೋನಾ ಹಬ್ಬಿದೆ. ಹೀಗಾಗಿ ಈ ಕ್ಲಸ್ಟರ್ ಆತಂಕ ಮೂಡಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಗುಪ್ತಗಾಮಿನಿ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಕೊರೊನಾ ಆತಂಕದ ಹಿನ್ನೆಲೆ 1-5ನೇ ತರಗತಿ ಆರಂಭ ಹಾಗೂ ವಿದ್ಯಾಗಮ ಆರಂಭಕ್ಕೂ ತಜ್ಞ ರಿಂದ ಬೇಡ ಎನ್ನುವ ಉತ್ತರ ಬಂದಿದೆ.

    ಶಾಲೆ ಆರಂಭಕ್ಕೆ ಹಿಂದೇಟು
    ಕೇರಳ ಸೋಂಕಿತರಿಂದ ತಜ್ಞರ ತಂಡ ಬೆಚ್ಚಿ ಬಿದ್ದಿದ್ದು, ಕೇರಳದಿಂದ ಬಂದವರಲ್ಲೇ ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಶಾಲೆಗಳ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿಲ್ಲ. 6, 7ನೇ ತರಗತಿ ಪ್ರಾರಂಭಕ್ಕೆ ತಜ್ಞರ ತಂಡ ಒಪ್ಪಿಗೆ ಸೂಚಿಸಿಲ್ಲ. ಬೆಂಗಳೂರು ಮತ್ತು ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಕೇವಲ 8ನೇ ತರಗತಿ ಆರಂಭಕ್ಕೆ ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ.

    ವಿದ್ಯಾಗಮ ಸಹ ಬಂದ್
    ಕೊರೊನಾ ಆತಂಕದ ಹಿನ್ನೆಲೆ ವಿದ್ಯಾಗಮಕ್ಕೂ ತಜ್ಞರ ತಂಡ ರೆಡ್ ಸಿಗ್ನಲ್ ನೀಡಿದೆ. ಶಿಕ್ಷಣ ಇಲಾಖೆ 1-5ನೇ ತರಗತಿ ವಿದ್ಯಾಗಮ ಪ್ರಾರಂಭಕ್ಕೆ ಸಿದ್ಧವಾಗಿತ್ತು. ಕೇರಳದಿಂದ ಬಂದವರಲ್ಲಿ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಇದೀಗ ವಿದ್ಯಾಗಮಕ್ಕೂ ಬ್ರೇಕ್ ಹಾಕಲಾಗಿದೆ. ಫೆಬ್ರವರಿ 24 ಅಥವಾ 25 ರಂದು ಮತ್ತೆ ಸಭೆ ಸೇರಿ ವಿದ್ಯಾಗಮ ಪ್ರಾರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.