Tag: ನವರಸ ನಾಯಕ

  • ಒಂದೇ ವೇದಿಕೆಯಲ್ಲಿ ನವರಸ ನಾಯಕ ಹಾಗೂ ವಿದೇಶಿ ಕನ್ನಡಿಗರು: ಗ್ರ್ಯಾಂಡ್ ಸಕ್ಸಸ್ ಕಂಡ ವರ್ಚ್ಯುಯಲ್ ಕಾರ್ಯಕ್ರಮ..!!

    ಒಂದೇ ವೇದಿಕೆಯಲ್ಲಿ ನವರಸ ನಾಯಕ ಹಾಗೂ ವಿದೇಶಿ ಕನ್ನಡಿಗರು: ಗ್ರ್ಯಾಂಡ್ ಸಕ್ಸಸ್ ಕಂಡ ವರ್ಚ್ಯುಯಲ್ ಕಾರ್ಯಕ್ರಮ..!!

    ವರಸ ನಾಯಕ ಜಗ್ಗೇಶ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ‘ತೋತಾಪುರಿ’ ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಮಾಹಿತಿ ಸಿಕ್ಕಾಗಿದೆ, ಸಾಕಷ್ಟು ಕ್ರೇಜ್ ಕೂಡ ಸೃಷ್ಟಿಯಾಗಿದೆ. ಅದರ ಜೊತೆಗೆ ಬಾಗ್ಲು ತೆಗಿ ಮೇರಿ ಜಾನ್ ಸೂಪರ್ ಡೂಪರ್ ಹಿಟ್ ಆಗಿದೆ. ಈ ಖುಷಿಯನ್ನು ಸೆಲೆಬ್ರೇಟ್ ಮಾಡಲು ಅನಿವಾಸಿ ಕನ್ನಡಿಗರು ನವರಸ ನಾಯಕನ ಜೊತೆ ಒಟ್ಟಾಗಿದ್ದು ಈಗ ನಯಾ ಸಮಾಚಾರ. ಎಸ್, ವಿದೇಶದಲ್ಲಿರುವ ಕನ್ನಡಿಗರು, ಜಗ್ಗೇಶ್ ಅಭಿಮಾನಿಗಳು ಇಂದು ಗ್ರ್ಯಾಂಡ್ ವರ್ಚ್ಯುಯಲ್ ಕಾಮಿಡಿ ಕಾರ್ಯಕ್ರಮ ಹಮ್ಮಿಕೊಂಡು ನವರಸ ನಾಯಕ ಜಗ್ಗೇಶ್ ಜೊತೆ ಮಾತುಕತೆ ನಡೆಸಿದ್ದಾರೆ.

    ‘ಗ್ರ್ಯಾಂಡ್ ವರ್ಚ್ಯುಯಲ್ ಕಾಮಿಡಿ’ ಹೆಸರಿಗೆ ತಕ್ಕಂತೆ ಸಖತ್ ಅದ್ಧೂರಿಯಾಗಿ ನೆರವೇರಿದ್ದು, ಬೃಹತ್ ಸೆಟ್ ನಲ್ಲಿ ಅರಳಿದ ಎಲ್ ಇ ಡಿ ಪರದೆ ಮೇಲೆ ಒಂದು ಕಡೆ ನವರಸ ನಾಯಕ ಜಗ್ಗೇಶ್ ತಮ್ಮ ಸಿನಿ ಜರ್ನಿಯ ಅದ್ಭುತ ಘಟನೆಗಳನ್ನು ಅಭಿಮಾನಿಗಳ ಮುಂದೆ ತೆರೆದಿಡಲು ಸಜ್ಜಾಗಿದ್ರೆ, ಇತ್ತ ವಿವಿಧ ದೇಶಗಳ ಕನ್ನಡ ಮನಸ್ಸುಗಳು ಖ್ಯಾತ ನಟನ ಸಿನಿ ಜರ್ನಿಯ ಬಗ್ಗೆ ತಿಳಿದುಕೊಳ್ಳಲು ಕಾತರರಾಗಿದ್ರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ವರ್ಚ್ಯುಯಲ್ ಕಾರ್ಯಕ್ರಮದಲ್ಲಿ ಜಗ್ಗೇಶ್ ತೋತಾಪುರಿ ಸಿನಿಮಾ, ತಮ್ಮ ಫ್ಯಾಮಿಲಿ, ಕನ್ನಡ ಭಾಷೆ, ಹೋರಾಟ, ಡಾ.ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟ, ಪುನೀತ್ ರಾಜ್ ಕುಮಾರ್ ಜೊತೆ ಸಾಗಿದ ದಿನಗಳನ್ನು ಮೆಲುಕು ಹಾಕಿದರು.

    ಡ್ರೀಮ್ ಮೀಡಿಯಾ ಕೆನಡ ಆಯೋಜಿಸಿದ್ದ ಈ ವರ್ಚ್ಯುಯಲ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು ಕಾರ್ಯಕ್ರಮದಲ್ಲಿ ಸಿಂಚನ ಕನ್ನಡ ಬಳಗ, ಕಸ್ತೂರಿ ಕನ್ನಡ ಅಸೋಸಿಯೇಷನ್, ಹ್ಯಾರಿಸ್ಬರ್ಗ್ ಕನ್ನಡ ಕಸ್ತೂರಿ, ಮಲ್ಲಿಗೆ ಇಂಡಿಯಾಪೊಲೀಸ್, ನವೋದಯ, ಬೃಂದಾವನ ಕನ್ನಡ ಕೂಟ-ನ್ಯೂ ಜೆರ್ಸಿ, ಧನಿ ಮೀಡಿಯಾ, ನ್ಯೂಯಾರ್ಕ್ ಕನ್ನಡ ಕೂಟ, ಅಟ್ಲಾಂಟಾದ ನೃಪತುಂಗ, ಸಾಕ್ರಮೆಂಟೋ ಕನ್ನಡ ಸಂಘ ಸೇರಿದಂತೆ ಹಲವಾರು ಕನ್ನಡಿಗರು ನವರಸ ನಾಯಕನ ಜೊತೆ ಮಾತುಕತೆ ನಡೆಸಿ ಸಂತಸಪಟ್ಟಿದ್ದಾರೆ.

    ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ತೋತಾಪುರಿ’ ಸಿನಿಮಾ ಬಿಡುಗಡೆಗೆ ಸಕಲ ತಯಾರಿಯಲ್ಲಿದ್ದು, ಈ ನಡುವೆ ಈ ಚಿತ್ರದ ಬಾಗ್ಲು ತೆಗಿ ಮೇರಿ ಜಾನ್ ಸಾಂಗ್ ಆರು ಮಿಲಿಯನ್‌ಗೂ ಅಧಿಕ ವೀಕ್ಷಣೆ ಕಂಡು ಸಖತ್ ವೈರಲ್ ಕೂಡ ಆಗಿದೆ. ಸಾಂಗ್ ಭರ್ಜರಿ ಸಕ್ಸಸ್ ಆಗಿರೋದು, ಈ ಖುಷಿಯನ್ನು ವಿದೇಶಿ ಕನ್ನಡಿಗರು ಸೆಲೆಬ್ರೇಟ್ ಮಾಡಿರೋದು ಇಡೀ ಟೀಂಗೆ ಹೊಸ ಎನರ್ಜಿ ನೀಡಿದೆ. ನಿರ್ಮಾಪಕ ಕೆ.ಎ. ಸುರೇಶ್ ಮೋನಿಫ್ಲಿಕ್ಸ್ ಸ್ಟುಡಿಯೋಸ್ ಹಾಗೂ ಸುರೇಶ್ ಆರ್ಟ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಿದ್ದು, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ಚಿತ್ರದಲ್ಲಿ ನಾಯಕ ನಟಿಯಾಗಿ ಅದಿತಿ ಪ್ರಭುದೇವ ಮಿಂಚಿದ್ದಾರೆ. ಡಾಲಿ ಧನಂಜಯ್, ಸುಮನ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಚಿತ್ರದ ತಾರಾ ಬಳಗವೇ ಇದೆ.

  • ಮರೆಯಲಾಗದಂತಹ ನೈಜ ಘಟನೆ ಹಂಚಿಕೊಂಡ ಜಗ್ಗೇಶ್

    ಮರೆಯಲಾಗದಂತಹ ನೈಜ ಘಟನೆ ಹಂಚಿಕೊಂಡ ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ ನಡುವೆ ನಡೆದ ಮರೆಯಲಾಗದ ಘಟನೆ ಎಂದು ವಿವರಿಸಿದ್ದಾರೆ.

    ಘಟನೆ ಏನು..?
    ಪರಿಮಳ 9 ಗಂಟೆಗೆ ನನ್ನ ಏಕಾಂತ ಜಾಗದಲ್ಲಿ ಊಟ ಬಡಿಸಿ ಆನ್‍ಲೈನ್ ಕೆಲಸಕ್ಕೆ ತನ್ನ ಹಾಲಿಗೆ ಹೋದಳು. ನಾನು ಊಟ ಮುಗಿಸಿ ಒಂದು ಬಾರಿ ಸ್ಮರಣೆ ಸಾಲದೆ ಹಾಡು ಕೇಳುತ್ತಾ ರಾಯರ ಚಿತ್ರಪಟ ನೋಡುತ್ತ ಮಂತ್ರಮುಗ್ಧನಾಗಿ ಧ್ಯಾನದಲ್ಲಿ ಕೂತುಬಿಟ್ಟೆ. ಆಗ ನನ್ನ ಮನಸ್ಸಿನಲ್ಲಿ ರಾಯರ ಜೊತೆ ಸಂಭಾಷಣೆ ಶುರುವಾಯಿತು.

    ರಾಯರೆ ನಾನು ಬದುಕಲ್ಲಿ ಕೇಳಿದ್ದೆಲ್ಲಾ ಕೊಟ್ಟಿದ್ದೀರಿ, ಕೊಡುತ್ತಿದ್ದೀರಿ. ನಿಮ್ಮ ಭಿಕ್ಷೆಯಿಂದ ನಾನು ಕೋಟ್ಯಂತರ ಪ್ರೀತಿಸುವ ಯೋಗ ಪಡೆದಿರುವೆ. ಆದರೆ ಪಾಪಿಯಾದ ನಾನು ನಿಮ್ಮ ಶಾಸ್ತ್ರೋಕ್ತವಾಗಿ ಭಜಿಸುವ ವಿದ್ಯೆ ಪಡೆಯಲಿಲ್ಲ. ಕಲಿಯುವ ವಯಸ್ಸಲ್ಲಿ ಅಪ್ಪ ಬಿಡಲಿಲ್ಲ. ಅಲ್ಪಸ್ವಲ್ಪ ಚಿತ್ರ ಗೀತೆ ಹಾಡುವೆ. ದಯಮಾಡಿ ನಿಮ್ಮ ಮುಂದೆ ಕೂತು ಹಾಡಲು ಆಶೀರ್ವದಿಸಿ. ಮನತುಂಬಿ ಹಾಡುವಾಸೆ ದಯಮಾಡಿ ಕರುಣಿಸಿ ಎಂದು ಪ್ರಾರ್ಥಿಸುತ್ತಿದ್ದೆ.

    ಸ್ನೇಹಿತರೆ ಮಿಂಚಿನಂತೆ ಮಂತ್ರಾಲಯ ಆತ್ಮೀಯ ಸಹೋದರ ಮಠದ ಪಿಆರ್‍ಓ ನರಸಿಂಹಾಚಾರ್ ಅವರ ಮೊಬೈಲ್ ನಿಂದ ವಾಟ್ಸಾಪ್ ವೀಡಿಯೋ ಕಾಲ್ ಬಂತು. ಕರೆ ಸ್ವೀಕರಿಸಿದಾಗ ಬೃಂದಾವನ ದರ್ಶನ ಆಯಿತು. ಅಳು ತಡೆಯಲಾಗಲಿಲ್ಲ. ಮನ ಬಿಚ್ಚಿ ರಾಯರಿಗೆ ಹೇಳಿದೆ, ನನ್ನ ಮಾತು ಬೃಂದಾವನಕ್ಕೆ ಕೇಳುವ ಸೌಭಾಗ್ಯ ನನಗೆ ನೀಡಿದ ನಿಮ್ಮ ಕರುಣೆ ಸಾಕು. ಈ ಜನ್ಮಕ್ಕೆ ಇನ್ನೆಂದಿಗೂ ನನಗೆ ಮನುಜನ್ಮ ಬೇಡ. ನಿಮ್ಮ ಪಾದದಡಿಯ ಧೂಳಾಗಿ ಜನ್ಮಕೊಡಿ ಸಾಕು ಎಂದು ಪ್ರಾರ್ಥಿಸಿದೆ. ಈ ಸರಿಹೊತ್ತಲ್ಲಿ ರಾಯರ ಬೃಂದಾವನ ದರ್ಶನ ನನಗೆ ಮಾಡಿಸಲು ಏನು ಪ್ರೇರಣೆ ಆಯಿತು ಎಂದು ನರಸಿಂಹಾಜಾರ್ ಅವರನ್ನು ಕೇಳಿದೆ. ಅದಕ್ಕೆ ಅವರು ಬೃಂದಾವನ ಅಲಂಕಾರ ತೆಗೆಯಬೇಕಾದರೆ ಅಲ್ಲೆ ನಿಂತಿದ್ದೆ. ಇದ್ದಕ್ಕಿದ್ದಂತೆ ಜಗ್ಗೇಶನಿಗೆ ಬೃಂದಾವನ ತೋರಿಸುವಂತೆ ರಾಯರ ಪ್ರೇರಣೆ ಆಯಿತು ಎಂದರು.

    ಈ ಬರವಣಿಗೆಯಲ್ಲೂ ಕಣ್ಣೀರು ನಿಂತಿಲ್ಲ. ಜನ್ಮಪಾವನ ಹಾಗೂ ರಾಯರ ಪರಿಚಯಿಸಿ ಕಣ್ಣಿಗೆ ಕಾಣದ ಊರಿಗೆ ಹೋದ ನನ್ನ ದೇವತೆ ಅಮ್ಮನಿಗೆ ಉಸಿರು ನಿಲ್ಲುವವರೆಗೆ ಧನ್ಯವಾದ. ಮಾತೃದೇವೋಭವ ಗುರುದೇವೊಭವ. ಕೋಟಿ ಬಾರಿ ಪ್ರಮಾಣಿಸಿ ಹೇಳುವೆ ರಾಯರು ತಾಯಂತೆ ಮಕ್ಕಳು ಬಯಸಿದಾಗ ಬಂದು ಬಿಡುವರು. ಈ ಸಮಯ ಬದುಕಿನ ಆನಂದಮಯ.. ಎಂದು ಜಗ್ಗೇಶ್ ನಡೆದ ಘಟನೆಯನ್ನು ವಿವರಿಸಿದ್ದಾರೆ.

  • ಮಂತ್ರಾಲಯದಲ್ಲಿ 54ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ ಜಗ್ಗೇಶ್

    ಮಂತ್ರಾಲಯದಲ್ಲಿ 54ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ ಜಗ್ಗೇಶ್

    ರಾಯಚೂರು: ನವರಸ ನಾಯಕನೆಂದೇ ಖ್ಯಾತರಾದ ನಟ ಜಗ್ಗೇಶ್ ಅವರಿಗೆ ಇಂದು 54 ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಜಗ್ಗೇಶ್ ಮಂತ್ರಾಲಯಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದರು.

    ಕಳೆದ 4 ವರ್ಷಗಳಿಂದ ಹುಟ್ಟುಹಬ್ಬದಂದು ನಟ ಜಗ್ಗೇಶ್ ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಅಂತೆಯೇ ಈ ಬಾರಿಯೂ ಹುಟ್ಟುಹಬ್ಬದಂದು ಮಂತ್ರಾಲಯಕ್ಕೆ ಭೇಟಿ ನೀಡಿದ ಅವರು ರಾಯರ ದರ್ಶನ ಪಡೆದರು. ಮಾತ್ರವಲ್ಲದೇ ಮಠದ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದ್ರು.

    ನಟ ಜಗ್ಗೇಶ್ ಅವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ 1963 ರ ಮಾರ್ಚ್ 17ರಂದು ಜನಿಸಿದ್ದಾರೆ. `ಇಬ್ಬನಿ ಕರಗಿತು’ ಇವರ ಮೊದಲನೆಯ ಚಿತ್ರ. `ಮಠ’ ನೂರನೆಯ ಚಿತ್ರವಾಗಿದ್ದು `ಮೇಕಪ್’ ಚಿತ್ರವನ್ನು ನಿರ್ಮಾಪಕರೂ ಆಗಿದ್ದಾರೆ. ತಮ್ಮ ಕೆಲವು ಚಿತ್ರಗಳಲ್ಲಿ ತಾವೇ ಹಾಡಿದ್ದಾರೆ.

    ಹಾಸ್ಯ ಪ್ರಧಾನ ಪಾತ್ರಗಳಿಗೆ ಹೆಸರಾಗಿರುವ ಜಗ್ಗೇಶ್ ಅವರು, ತಮ್ಮ ವಿಶಿಷ್ಟ ಹಾವಭಾವದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.