Tag: ನವವೃಂದಾವನ

  • ಧ್ವಂಸಗೊಂಡಿದ್ದ ವೃಂದಾವನ ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ

    ಧ್ವಂಸಗೊಂಡಿದ್ದ ವೃಂದಾವನ ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ

    ಕೊಪ್ಪಳ: ಬುಧವಾರ ರಾತ್ರಿ ಕಿಡಿಗೇಡಿಗಳಿಂದ ಧ್ವಂಸಗೊಂಡಿದ್ದ ವ್ಯಾಸರಾಯರ ವೃಂದಾವನವನ್ನು ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ ಮಾಡಲಾಗಿದೆ.

    9 ಯತಿಗಳ ನವವೃಂದಾವನದಲ್ಲಿ ವ್ಯಾಸರಾಯರ ವೃಂದಾವನವನ್ನ ನಿಧಿಗಾಗಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ವೃಂದಾವನ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಚಾಲನೆ ಸಿಕ್ಕಿತ್ತು. ಶುಕ್ರವಾರ ಮುಂಜಾನೆ ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ಶ್ರೀಗಳು, ಮಧ್ವಾಚಾರ್ಯ ಮಠದ ವಿದ್ಯಾಸಾಗರ ಮಾಧವ ತೀರ್ಥರ ನೇತೃತ್ವದಲ್ಲಿ ವ್ಯಾಸರಾಜರ ವೃಂದಾವನ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಜೊತೆಗೆ ವಾಸ್ತುಶಿಲ್ಪಿ ನೀರಜ್ ಹಾಗೂ ತಮಿಳುನಾಡಿನ ರಾಘವಪ್ರಭ ಕಾರ್ಮಿಕರ ತಂಡ ವ್ಯಾಸರಾಯರ ವೃಂದಾವನ ಪುನರ್ ನಿರ್ಮಾಣ ಮಾಡಿದ್ದಾರೆ.

    ವ್ಯಾಸರಾಜರ ವೃಂದಾವನ ಪುನರ್ ನಿರ್ಮಾಣಕ್ಕೂ ಮುನ್ನ ನವವೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವೃಂದಾವನದ ಭಕ್ತರು ವಿಶೇಷ ಹೋಮ ಪೂಜೆ ಮಾಡಿ ವೃಂದಾವನ ಪುನರ್ ನಿರ್ಮಾಣ ಕಾರ್ಯದಲ್ಲಿ ಭಾಗಿಯಾದರು.

    ಸಾವಿರಾರು ಭಕ್ತರು ಬುಧವಾರದಿಂದ ವೃಂದಾವನದಲ್ಲಿ ಬೀಡು ಬಿಟ್ಟಿದ್ದು ವ್ಯಾಸರಾಯರ ವೃಂದಾವನ ನಿರ್ಮಾಣ ಮಾಡಿ ಪೂಜೆ ಮಾಡಿ ಹೋಗುತ್ತೇವೆ ಎಂದು ಶಪಥ ಮಾಡಿದ್ದರು.  ಅದರಂತೆ ಇಂದು ನಿರ್ಮಾಣ ಮಾಡಿ ಶಪಥ ಪೂರ್ಣಗೊಳಿಸಿದರು. ಪುನರ್ ನಿರ್ಮಾಣಕ್ಕೆ ಕೊಪ್ಪಳ ಜಿಲ್ಲಾಡಳಿತವೂ ಸಂಪೂರ್ಣ ಸಹಕಾರ ನೀಡಿದೆ.

    ರಾಜ್ಯಾದ್ಯಂತ ಪ್ರತಿಟನೆ: ವ್ಯಾಸರಾಯರ ವೃಂದಾವನ ಧ್ವಂಸ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿವೆ. ಬ್ರಾಹ್ಮಣ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ಕಿಡಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಕೊಪ್ಪಳ, ರಾಯಚೂರು ಸೇರಿದಂತೆ ನಾನಾ ಭಾಗದಲ್ಲಿ ಪ್ರತಿಭಟನೆ ಮಾಡಿದ ಬ್ರಾಹ್ಮಣ ಸಮುದಾಯದವರು, ಮನವಿ ಸಲ್ಲಿಸಿದ್ದಾರೆ.

    ವಿಜಯನಗರ ಸಾಮ್ರಾಜ್ಯದ ವೃಂದಾವನವನ್ನು ಹಾಳು ಮಾಡಿ ಇಡೀ ಹಿಂದೂ ಸಂಸ್ಕೃತಿಗೆ ಧಕ್ಕೆ ತಂದಿದ್ದಾರೆ ಕೂಡಲೇ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಬಂಧಿಸಬೇಕೆಂದು ಬೀದಿಗಿಳಿದು ಹೋರಾಟ ಮಾಡಿದ್ದಾರೆ.

    ವ್ಯಾಸರಾಯರ ವೃಂದಾವನ ಧ್ವಂಸ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ನಿಧಿಗಾಗಿ ವ್ಯಾಸರಾಯರ ವೃಂದಾವನ ಧ್ವಂಸ ಮಾಡಿದ್ದಾರೋ ಅಥವಾ ಬೇರೇ ಏನಾದ್ರೂ ಕಾರಣ ಇತ್ತೇ ಎನ್ನುವುದು ಪೊಲೀಸರ ತನಿಖೆಯ ನಂತರವೇ ತಿಳಿಯಲಿದೆ.

    ಯಾವಾಗ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಯಿತೋ ಎಚ್ಚೆತ್ತ ಕೊಪ್ಪಳ ಪೊಲೀಸ್ ಇಲಾಖೆ ಕಿಡಿಗೇಡಿಗಳ ಬಂಧನಕ್ಕೆ ಗಂಗಾವತಿ ಗ್ರಾಮೀಣ ಠಾಣೆಯ ಸಿಪಿಐ ಸುರೇಶ್ ತಳವಾರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದೆ.

  • ನವವೃಂದಾವನಕ್ಕೆ ಪೇಜಾವರ ಶ್ರೀ ಭೇಟಿ- ಪುನರ್ ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ

    ನವವೃಂದಾವನಕ್ಕೆ ಪೇಜಾವರ ಶ್ರೀ ಭೇಟಿ- ಪುನರ್ ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ

    ಕೊಪ್ಪಳ: ಆನೆಗೊಂದಿಯಲ್ಲಿ ವ್ಯಾಸರಾಯರ ವೃಂದಾವನ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ನವವೃಂದಾವನಕ್ಕೆ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಭೇಟಿ ನೀಡಿ, ವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಿದ್ದಾರೆ.

    ನವವೃಂದಾವನ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಗುರುವಾರ ರಾಯರು ಹಾಗೂ ಸೋಸಲೆ ವ್ಯಾಸರಾಯ ಮಠದ ಶ್ರೀಗಳು ಭೇಟಿ ನೀಡಿದ್ದರು. ಇಂದು ನವವೃಂದಾವನಕ್ಕೆ ಪೇಜಾವರ ಶ್ರೀಗಳು ಭೇಟಿ ನೀಡಿದ್ದಾರೆ. ಈ ವೇಳೆ ನವವೃಂದಾವನ ಧ್ವಂಸದ ಬಗ್ಗೆ ಬೇಸರ ವ್ಯಕ್ತಪಡಿಸಿ, ನವವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಭಕ್ತರೊಂದಿಗೆ ಶ್ರೀಗಳು ಚರ್ಚೆ ನಡೆಸಿದ್ದಾರೆ.

    ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದರು. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ನವಬೃಂದಾವನದಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ. ನವಬೃಂದಾವನ ಮಾಲೀಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿರಲಿಲ್ಲ.

  • ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ – ಸುಬುಧೇಂದ್ರ ತೀರ್ಥ ಸ್ವಾಮಿ

    ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ – ಸುಬುಧೇಂದ್ರ ತೀರ್ಥ ಸ್ವಾಮಿ

    ರಾಯಚೂರು: ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ. ರಾತ್ರೋ ರಾತ್ರಿ ವ್ಯಾಸರಾಜರ ವೃಂದಾವನವನ್ನು ಅಗೆದು ಹಾಕಿದ್ದು ಖಂಡನೀಯ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

    ಕೊಪ್ಪಳ ಜಿಲ್ಲೆಯ ಅನೆಗೊಂದಿಯಲ್ಲಿನ ವ್ಯಾಸರಾಜರ ವೃಂದಾವನವನ್ನು ಧ್ವಂಸ ಮಾಡಿದ ಹಿನ್ನೆಲೆಯಲ್ಲಿ ಇಂದು ಮಾತನಾಡಿದ ಅವರು, ತುಂಗಭದ್ರಾ ನದಿಯ ದಡದಲ್ಲಿರುವ ವಿವಾದಿತ ಪ್ರದೇಶದಲ್ಲಿರುವ ವೃಂದಾವನ ಧ್ವಂಸ ಮಾಡಿರುವುದಕ್ಕೆ ರಕ್ತ ಕುದಿಯುತ್ತಿದೆ. ಇದನ್ನು ಪ್ರತಿಯೊಬ್ಬರು ಬೇಧ ಭಾವವಿಲ್ಲದೇ ಖಂಡಿಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಮಗ್ರವಾಗಿ ಸೂಕ್ತವಾದ ತನಿಖೆ ಮಾಡಿ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಆಗ್ರಹ ಮಾಡಿದ ಸ್ವಾಮೀಜಿ, ಈ ವಿಚಾರದಲ್ಲಿ ಭೇದ ಮರೆತು ಎಲ್ಲರೂ ಒಂದಾಗುವಂತೆ ಎಲ್ಲಾ ಮಠಾಧೀಶರಲ್ಲಿ ಮನವಿ ಮಾಡಿಕೊಂಡರು.

    ವೃಂದಾವನ ಮರು ನಿರ್ಮಾಣವನ್ನು ಎಲ್ಲರೂ ಒಟ್ಟಾಗಿ ಮಾಡಲು ಸಹಕಾರ ಕೋರಿದ ಸ್ವಾಮೀಜಿ, ಮಂತ್ರಾಲಯದಲ್ಲಿ ಪೂಜೆ ಮುಗಿಸಿ ಊಟವನ್ನು ಮಾಡದೇ ಕೋಲಾರಕ್ಕೆ ಹೊರಟಿದ್ದಾರೆ. ಮಧ್ಯರಾತ್ರಿ ನವವೃಂದಾವನ ಅಗೆದು ಹಾಕಿದ್ದು, ನಿಧಿಗಾಗಿ ಅಗೆದು ಹಾಕಿರುವ ಶಂಕೆ ವ್ಯಕ್ತವಾಗಿದೆ.