Tag: ನವಿಲು

  • ತುಮಕೂರಲ್ಲಿ 19 ನವಿಲುಗಳ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

    ತುಮಕೂರಲ್ಲಿ 19 ನವಿಲುಗಳ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

    – 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚನೆ

    ಬೆಂಗಳೂರು: ತುಮಕೂರು (Tumakuru) ಜಿಲ್ಲೆ ಮಧುಗಿರಿ (Madhugiri) ತಾಲೂಕು ಮಿಡಿಗೇಶಿಯ (Midigeshi) ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre), ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

    ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು. ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

    ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: 1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

    ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

  • ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

    ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ.

    ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

    ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಾಳಿ ಮಾಡಿದ ನವಿಲಿನ ವಿರುದ್ಧ ಮಹಿಳೆ ದೂರು!

    ದಾಳಿ ಮಾಡಿದ ನವಿಲಿನ ವಿರುದ್ಧ ಮಹಿಳೆ ದೂರು!

    ರಾಮನಗರ: ಜಿಲ್ಲೆಯಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ನಿತ್ಯ ಒಂದಲ್ಲ ಒಂದು ಕಡೆ ಆನೆ, ಚಿರತೆ ,ಕರಡಿ ದಾಳಿ ಮಾಡುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ಈ ನಡುವೆ ರಾಷ್ಟ್ರೀಯ ಪಕ್ಷಿಯಾಗಿರುವ ನವಿಲು (Peacock attack on Woman) ಮಹಿಳೆ ಮೇಲೆ ದಾಳಿ ಮಾಡಿದೆ.

    ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಈಗ ನವಿಲಿನ ಕಾಟ ಶುರುವಾಗಿದೆ. ಕಳೆದ ಒಂದುವಾರದಿಂದ ಗ್ರಾಮದ ಸುತ್ತಮುತ್ತ ನವಿಲುಗಳ ಕಾಟ ಜಾಸ್ತಿಯಾಗಿದೆ. ಗ್ರಾಮದ ಲಿಂಗಮ್ಮ ಎಂಬವರ ಮೇಲೆ ನವಿಲು ದಾಳಿ ಮಾಡಿ ಗಾಯಗೊಳಿಸಿದೆ.

    ಮನೆ ಹಿಂಭಾಗದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ನವಿಲು, ಲಿಂಗಮ್ಮನ ಎಡಭಾಗ ಕಣ್ಣಿನ ಮೇಲ್ಭಾಗಕ್ಕೆ ಗಾಯವಾಗಿದೆ. ನವಿಲುಗಳು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿ ಗಾಯಗೊಳಿಸ್ತಿವೆ.

    ಈ ಸಂಬಂಧ ಅರಣ್ಯ ಇಲಾಖೆಗೆ ನವಿಲು ದಾಳಿ ವಿರುದ್ಧ ದೂರು ನೀಡಲಾಗಿದೆ. ಇದನ್ನೂ ಓದಿ: ಅಕ್ರಮ ಸಂಬಂಧ ಇಟ್ಟುಕೊಂಡು ಚಿತ್ರಹಿಂಸೆ ಕೊಟ್ಟ: ಪವಿತ್ರಾ ಬರೆದ ಡೆತ್‍ನೋಟ್‍ನಲ್ಲೇನಿದೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರಿನ ಜನರಿಗೆ ನವಿಲು ಯಾವುದು? ಕೆಂಭೂತ ಯಾವುದು ಎಂಬುದು ಗೊತ್ತಿದೆ: ಮಹದೇವಪ್ಪ

    ಮೈಸೂರಿನ ಜನರಿಗೆ ನವಿಲು ಯಾವುದು? ಕೆಂಭೂತ ಯಾವುದು ಎಂಬುದು ಗೊತ್ತಿದೆ: ಮಹದೇವಪ್ಪ

    ಮೈಸೂರು: ಮೈಸೂರು-ಬೆಂಗಳೂರು ದಶಪಥ ರಸ್ತೆ ಯೋಜನೆ ಶುರು ಮಾಡಿದ್ದು ಯಾರು ಅಂತಾ ಜನರಿಗೆ ಗೊತ್ತಿದೆ. ನಾನೇ ಮಾಡಿದ್ದು ನಾನೇ ಮಾಡಿದ್ದು ಎಂದು ನಾನು ಎಂದು ಹೇಳುವುದಿಲ್ಲ. ಮೈಸೂರಿನ ಜನರಿಗೆ ನವಿಲು ಯಾವುದು ಕೆಂಭೂತ ಯಾವುದು ಎಂದು ಗೊತ್ತಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಹದೇವಪ್ಪ, ಮೈಸೂರು-ಬೆಂಗಳೂರು ದಶಪಥ ರಸ್ತೆ ಯೋಜನೆ ಶುರು ಮಾಡಿದ್ದು ಯಾರು ಅಂತಾ ಜನರಿಗೆ ಗೊತ್ತಿದೆ. ನಾನೇ ಮಾಡಿದ್ದು ನಾನೇ ಮಾಡಿದ್ದು ಎಂದು ನಾನು ಯಾವತ್ತು ಹೇಳುವುದಿಲ್ಲ. ಈ ರಸ್ತೆ ವಿಚಾರದಲ್ಲೇ ಯಡಿಯೂರಪ್ಪ ಅವರು ನನಗೆ ಹುಬ್ಬಳ್ಳಿಯಲ್ಲಿ ಸನ್ಮಾನ ಮಾಡಿದ್ದಾರೆ. ಇದಕ್ಕಿಂತಾ ಸಾಕ್ಷಿ ಇನ್ನು ಏನು ಬೇಕು ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡಿ: ಪ್ರತಾಪ್ ಸಿಂಹ

    ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಹೆಸರು ಬದಲಾವಣೆಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿರುವ ಬಗ್ಗೆ ಮಾತನಾಡಿ, ಅವರು ಸದ್ಯ ಭಾರತದ ಹೆಸರು ಬದಲಾಯಿಸಲು ಮುಂದಾಗುತ್ತಿಲ್ಲವಲ್ಲ ಅಷ್ಟೇ ಸಾಕು. ಹೆಸರುಗಳ ಬದಲಾವಣೆ ಅವರ ಮನಃಸ್ಥಿತಿ ತೋರಿಸುತ್ತದೆ. ಹೆಸರು ಬದಲಾವಣೆಗೆ ತೋರಿಸಿರುವ ಆಸಕ್ತಿಯನ್ನು ರಾಷ್ಟ್ರೀಯ ಉದ್ಯಾನವನದ ಸಂರಕ್ಷಣೆಗೆ, ಅಲ್ಲಿನ ಪ್ರಾಣಿಗಳ ಸಂರಕ್ಷಣೆಗೆ ವಹಿಸಬೇಕೆಂದು ಮಹದೇವಪ್ಪ ಟಾಂಗ್ ನೀಡಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

  • ನವಿಲು ಡಿಕ್ಕಿ – ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

    ನವಿಲು ಡಿಕ್ಕಿ – ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

    ಉಡುಪಿ: ನವಿಲು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳದಲ್ಲಿ ನಡೆದಿದೆ.

    ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬೆಳಪು ಗ್ರಾಮದ ಅಬ್ದುಲ್ಲಾ ಮೃತ ಯುವಕ. ಕಾಪು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದ್ವಿಚಕ್ರ ವಾಹನ ಸವಾರ ಅಬ್ದುಲ್ಲಾ (24) ಬೆಳಕು ಗ್ರಾಮದಿಂದ ಪಡುಬಿದ್ರೆಯ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭ ಹೆದ್ದಾರಿಯ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ನವಿಲೊಂದು ಹಾರಿ ದಾಟಲು ಪ್ರಯತ್ನಿಸಿದೆ. ಈ ಸಂದರ್ಭದಲ್ಲಿ ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿದ್ದ ಅಬ್ದುಲ್ಲಾ ತಲೆಗೆ ಬಡಿದಿದೆ.

    ದ್ವಿಚಕ್ರವಾಹನ ಕಂಟ್ರೋಲ್ ತಪ್ಪಿ ಡಿವೈಡರ್ ಮೇಲೆ ಬಡಿದಿದೆ. ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಾಹನದ ರಭಸಕ್ಕೆ ನವಿಲು ಕೂಡ ಸಾವಿಗೀಡಾಗಿದೆ. ಪಡುಬಿದ್ರೆ ಸರ್ಕಾರಿ ಆಸ್ಪತ್ರೆಯಲ್ಲಿ ಅಬ್ದುಲ್ಲಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾಪು ತಾಲೂಕಿನಲ್ಲಿ ನವಿಲುಗಳ ಹಾವಳಿ ವಿಪರೀತವಾಗಿದೆ. ಗದ್ದೆಗಳಿಗೆ ನವಿಲುಗಳು ಬಂದು ಎಲ್ಲ ಬೆಳೆಗಳನ್ನು ಹಾಳು ಮಾಡುತ್ತಿದೆ. ರಸ್ತೆಗಳಲ್ಲೂ ನವಿಲಿನ ಸಂಚಾರ ಹೆಚ್ಚಾಗಿದೆ. ರಾಷ್ಟ್ರಪ್ರಾಣಿ ನವಿಲುಗಳ ಹಾವಳಿಯನ್ನು ತಪ್ಪಿಸಲು ಅರಣ್ಯ ಇಲಾಖೆ ಸರಕಾರ ಏನಾದರೂ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಜಹೀರ್ ಬೆಳಪು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ – ವಾಹನ ಸಮೇತ ಓರ್ವನ ಬಂಧನ

  • ಗರಿ ಬಿಚ್ಚಿ ಪ್ರಧಾನಿ ಮೋದಿ ಜೊತೆ ಹೆಜ್ಜೆ ಹಾಕಿದ ನವಿಲು

    ಗರಿ ಬಿಚ್ಚಿ ಪ್ರಧಾನಿ ಮೋದಿ ಜೊತೆ ಹೆಜ್ಜೆ ಹಾಕಿದ ನವಿಲು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಾಣಿ, ಪಕ್ಷಿಗಳ ಮೇಲೆ ಬಹಳ ಪ್ರೀತಿ. ಈ ಕಾರಣಕ್ಕೆ ತಮ್ಮ ನಿವಾಸದಲ್ಲಿ ನವಿಲುಗಳನ್ನು ಸಾಕಿದ್ದು, ವಿಡಿಯೋ ರಿಲೀಸ್‌ ಮಾಡಿದ್ದಾರೆ.

    ದೆಹಲಿಯ ಲೋಕಕಲ್ಯಾಣ್‌ ಮಾರ್ಗದಲ್ಲಿರುವ ನಿವಾಸದಲ್ಲಿರುವ ಜಾಗವನ್ನು ಗ್ರಾಮೀಣ ಭಾಗದಲ್ಲಿರುವಂತೆ ಬದಲಾವಣೆ ಮಾಡಿದ್ದಾರೆ. ಹೀಗಾಗಿ ಈ ಜಾಗದಲ್ಲಿ ಹಲವು ಪಕ್ಷಿಗಳು ಗೂಡುಗಳನ್ನು ಕಟ್ಟಿಕೊಂಡಿವೆ.

    ವಿಡಿಯೋದಲ್ಲಿ ಪ್ರಧಾನಿ ಮೋದಿಯವರು ತಮ್ಮ ನಿವಾಸದ ಹೊರಗಡೆ ಮತ್ತು ಒಳಗಡೆ ನವಿಲುಗಳಿಗೆ ಆಹಾರ ಹಾಕುತ್ತಿರುವ ದೃಶ್ಯವಿದೆ. ಅಷ್ಟೇ ಅಲ್ಲದೇ ಮೋದಿ ಬೆಳಗ್ಗೆ ವಾಕಿಂಗ್‌ ಮಾಡುವ ವೇಳೆ ನವಿಲು ಗರಿ ಬಿಚ್ಚಿ ಹೆಜ್ಜೆ ಹಾಕುವುದನ್ನು ನೋಡಬಹುದು.

    ಪ್ರತಿ ದಿನ ವಾಕಿಂಗ್‌ ಮಾಡುವ ಸಂದರ್ಭದಲ್ಲಿ ಪ್ರಧಾನಿ ಜೊತೆ ನವಿಲುಗಳು ಸಹ ಹೆಜ್ಜೆ ಹಾಕುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ವಿಡಿಯೋದಲ್ಲಿ ಪ್ರಧಾನಿ ಓದುತ್ತಿದ್ದಾಗ ನವಿಲು ಆಹಾರವನ್ನು ತಿನ್ನುತ್ತಿರುವ ಫೋಟೋ ಸಹ ಇದೆ.

    1 ನಿಮಿಷ 47 ಸಕೆಂಡಿನ ವಿಡಿಯೋವನ್ನು ಫೇಸ್‍ಬುಕ್‍, ಯೂ ಟ್ಯೂಬ್‍, ಟ್ವಿಟ್ಟರ್ ನಲ್ಲಿ ಅಪ್ಲೋಡ್‍ ಮಾಡಿದ್ದಾರೆ. ಫೇಸ್‍ಬುಕ್‍ನಲ್ಲಿ ಅಪ್ಲೋಡ್‍ ಆದ ಒಂದು ಗಂಟೆಯ ಒಳಗಡೆ ವಿಡಿಯೋ 10 ಲಕ್ಷ ವ್ಯೂ ಕಂಡಿದೆ.

    ಕಳೆದ ವರ್ಷ ಡಿಸ್ಕವರಿ ವಾಹಿನಿಯ ಮ್ಯಾನ್‌ ವರ್ಸಸ್‌ ವೈಲ್ಡ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದರು. ಬಿಯರ್‌ ಗ್ರಿಲ್ಸ್‌ ನಡೆಸಿಕೊಟ್ಟಿದ್ದ ಈ ಕಾರ್ಯಕ್ರಮ ಆಗಸ್ಟ್‌ 12 ರಂದು ರಾತ್ರಿ 9 ಗಂಟೆ ಪ್ರಸಾರಗೊಂಡಿತ್ತು.

     

    https://www.facebook.com/narendramodi/videos/338632440836002/

     

  • ಪ್ರಾಣದ ಹಂಗು ತೊರೆದು ನೀರಿನಲ್ಲಿ ತೇಲುತ್ತಿದ್ದ ನವಿಲಿನ ರಕ್ಷಣೆ

    ಪ್ರಾಣದ ಹಂಗು ತೊರೆದು ನೀರಿನಲ್ಲಿ ತೇಲುತ್ತಿದ್ದ ನವಿಲಿನ ರಕ್ಷಣೆ

    ಬಾಗಲಕೋಟೆ: ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜನರಿಗಷ್ಟೇ ಅಲ್ಲ, ಜಲಚರಗಳಿಗೂ ಆತಂಕ ಮೂಡಿಸಿದೆ. ಮಲಪ್ರಭಾ ನದಿಯಲ್ಲಿ ತೇಲುತ್ತಾ ಹೋಗುತ್ತಿದ್ದ ನವಿಲನ್ನು ರಕ್ಷಣೆ ಮಾಡಲಾಗಿದೆ.

    ಮಲಪ್ರಭೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಅಂತರ್ ಜಿಲ್ಲಾ ಸೇತುವೆ ಬಳಿ ಭಾರೀ ರಭಸದಿಂದ ನೀರು ಹರಿಯುತ್ತಿದೆ. ಈ ಪ್ರವಾಹ ಭೀತಿ ರಾಷ್ಟ್ರಪಕ್ಷಿಗೂ ತಟ್ಟಿದೆ. ಮಲಪ್ರಭಾ ನದಿಯ ನಡುಗಡ್ಡೆಯಲ್ಲಿ ಸಿಲುಕಿ ನವಿಲೊಂದು ನರಳಾಡುತ್ತಿತ್ತು.

    ಹಾರಲು ಸುತ್ತಲೂ ಯಾವುದೇ ಸ್ಥಳವಿಲ್ಲದೆ, ಮುಳ್ಳಿನ ಕಂಟಿಯಲ್ಲೇ ಸುಮಾರು ಹೊತ್ತು ಕುಳಿತಿತ್ತು. ನಂತರ ಹಾರಲು ಹೋಗಿ ಮಲಪ್ರಭಾ ನದಿಯಲ್ಲಿ ತೇಲುತ್ತಾ ಸಾವು ಬದುಕಿನ ಮಧ್ಯೆ ನವಿಲು ಹೋರಾಟ ನಡೆಸುತ್ತಿತ್ತು. ನವಿಲಿನ ಪರಿಸ್ಥಿತಿ ಕಂಡು ಸ್ಥಳದಲ್ಲಿದ್ದ ಇಬ್ಬರು ಚೊಳಚಗುಡ್ಡ ಸೇತುವೆ ಬಳಿ ಪ್ರಾಣದ ಹಂಗು ತೊರೆದು ರಾಷ್ಟ್ರ ಪಕ್ಷಿ ನವಿಲನ್ನು ರಕ್ಷಣೆ ಮಾಡಿದ್ದಾರೆ.

  • ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್

    ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್

    ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ.

    ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ. ವಿಠ್ಠಲ್ ರಾಷ್ಟ್ರಪಕ್ಷಿಯಾದ ನವಿಲು ಹಾಗೂ ಕಾಡು ಮೊಲವನ್ನು ಬೇಟೆಯಾಡುತ್ತಿದ್ದ. ಅಷ್ಟೇ ಅಲ್ಲದೆ ಅದನ್ನು ಹಿಡಿದು ವಿಡಿಯೋ ಮಾಡಿ ಟಿಕ್ ಟಾಕ್‍ನಲ್ಲಿ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಹುನಗುಂದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ನೇತೃತ್ವದಲ್ಲಿ ಆರೋಪಿ ವಿಠ್ಠಲ್‍ಗೆ ಬಲೆ ಬೀಸಿ ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿ ಆರೋಪಿಯನ್ನ ಬಂಧಿಸಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ರಕ್ಷಣೆಗಾಗಿ ಕಾಡಿಂದ ನಾಡಿಗೆ ಬಂದ ನವಿಲಿಗೆ ಗ್ರಾಮಸ್ಥರ ನೆರವು

    ರಕ್ಷಣೆಗಾಗಿ ಕಾಡಿಂದ ನಾಡಿಗೆ ಬಂದ ನವಿಲಿಗೆ ಗ್ರಾಮಸ್ಥರ ನೆರವು

    ಬೀದರ್: ಕಾಲಿಗೆ ಪೆಟ್ಟಾಗಿದ್ದ ನವಿಲೊಂದು ರಕ್ಷಣೆಗಾಗಿ ಕಾಡಿನಿಂಡ ನಾಡಿಗೆ ಬಂದು ಆಂಜಿನೇಯನ ದೇವಸ್ಥಾನದ ಬಳಿ ಆಶ್ರಯ ಪಡೆದಿದ್ದ ನವಿಲಿಗೆ ಗ್ರಾಮಸ್ಥರು ನೆರವಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮಂಗಲಿಗಿ ಗ್ರಾಮದಲ್ಲಿ ನಡೆದಿದೆ.

    ಕಾಲಿಗೆ ಪೆಟ್ಟಾಗಿದ್ದು ದಿಕ್ಕು ದೋಚದೇ ನವಿಲೊಂದು ಪರದಾಡುತ್ತಿತ್ತು, ಬಳಿಕ ಕಾಡಿನಿಂದ ಹೊರಬಂದು ಮಂಗಲಿಗಿ ಗ್ರಾಮದ ಆಂಜನೇಯನ ದೇವಸ್ಥಾನದ ಬಳಿ ಆಶ್ರಯ ಪಡೆದಿತ್ತು. ಆದರೆ ಕಾಲಿಗಾದ ಪೆಟ್ಟಿನಿಂದ ನವಿಲು ಒದ್ದಾಡುತ್ತಿತ್ತು. ಈ ವೇಳೆ ನವಿಲಿನ ಕಾಲಿಗೆ ಪೆಟ್ಟಾಗಿದ್ದನ್ನ ಗಮನಿಸಿದ ಗ್ರಾಮಸ್ಥರು ಅದಕ್ಕೆ ಚಿಕಿತ್ಸೆ ಕೊಡಿಸಿ, ಆರೈಕೆ ಮಾಡಿದ್ದಾರೆ.

    ಸದ್ಯ ಗ್ರಾಮಸ್ಥರ ನೆರವಿನಿಂದ ನವಿಲು ಕೊಂಚ ಚೇತರಿಸಿಕೊಂಡಿದ್ದು, ಈಗಲೂ ದೇವಸ್ಥಾನದ ಬಳಿಯೇ ತಂಗಿದೆ. ಈಗಿನ ಕಾಲದಲ್ಲಿ ಒಬ್ಬರಿಗೆ ಒಬ್ಬರು ಕಷ್ಟಕಾಲದಲ್ಲಿ ಸಹಾಯ ಮಾಡದ ಜನೆ ಮಧ್ಯೆ ಮಂಗಲಿಗಿ ಗ್ರಾಮಸ್ಥರು ಒಂದು ಪಕ್ಷಿಗೆ ನೆರವಾಗಿ ಮಾನವೀಯತೆ ಮೆರೆದಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

  • ನವಿಲುಗಳನ್ನು ಬೇಟೆಯಾಡಿದ್ದ ವ್ಯಕ್ತಿಯನ್ನ ಕೊಂದ ಗ್ರಾಮಸ್ಥರು

    ನವಿಲುಗಳನ್ನು ಬೇಟೆಯಾಡಿದ್ದ ವ್ಯಕ್ತಿಯನ್ನ ಕೊಂದ ಗ್ರಾಮಸ್ಥರು

    ಭೋಪಾಲ್: ನವಿಲುಗಳನ್ನು ಬೇಟೆಯಾಡಿದ್ದ ವ್ಯಕ್ತಿಯೊಬ್ಬನನ್ನು ಹಿಗ್ಗಾಮುಗ್ಗಾ ಥಳಿಸಿ ಗ್ರಾಮಸ್ಥರು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ.

    ಹರಿಲಾಲ್ ಬಂಚದ ಕೊಲೆಯಾದ ವ್ಯಕ್ತಿ. ನೀಮುಚ್ ಜಿಲ್ಲೆಯ ಲಸದಿಯಾ ಅತ್ರಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದ್ದು, ಆರಂಭದಲ್ಲಿ ನವಿಲುಗಳನ್ನು ಬೇಟಿಯಾಡಿದ್ದ ಮೂವರು ಪ್ರಕರಣದ ದಾರಿಯನ್ನು ತಪ್ಪಿಸಿದ್ದರು. ಹೀಗಾಗಿ ತಡವಾಗಿ ಸತ್ಯ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?:
    ಕುಕೇಶ್ವರ್ ಪ್ರದೇಶದಲ್ಲಿ ಹರಿಲಾಲ್ ಸೇರಿದಂತೆ ಒಟ್ಟು ನಾಲ್ವರು ನವಿಲು ಬೇಟಿಯಾಡಲು ಹೋಗಿದ್ದರು. ಬೇಟೆಯಾಡಿ ರಾತ್ರಿ 9 ಗಂಟೆ ಸುಮಾರು ನವಿಲುಗಳನ್ನು ಹಿಡಿದುಕೊಂಡು ಲಸದಿಯಾ ಅತ್ರಿ ಗ್ರಾಮದ ಬಳಿ ಬರುತ್ತಿದ್ದರು. ಗ್ರಾಮದ ಕೆಲವರು ಆರೋಪಿಗಳ ಕೈಯಲ್ಲಿ ನವಿಲುಗಳನ್ನು ನೋಡಿ ಹಿಡಿಯಲು ಮುಂದಾಗಿದ್ದರು. ತಕ್ಷಣವೇ ಎಚ್ಚೆತ್ತುಕೊಂಡು ಓಡಲು ಆರಂಭಿಸಿದ್ದ ಆರೋಪಿಗಳ ಪೈಕಿ ಹರಿಲಾಲ್ ಸಿಕ್ಕಿಬಿದ್ದಿದ್ದ. ಗ್ರಾಮಸ್ಥರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು.

    ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಹರಿಲಾಲ್‍ನನ್ನು ನೋಡಿ ವ್ಯಕ್ತಿಯೊಬ್ಬ ಪೊಲೀಸ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರಿಲಾಲ್ ಮೃತಪಟ್ಟಿದ್ದಾನೆ.

    ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಆರಂಭಿಸಿದ್ದರು. ಮೇಕೆ ಕಳ್ಳತನ ಮಾಡಲು ಹೋಗಿದ್ದ ಹರಿಲಾಲ್‍ನನ್ನು ಗ್ರಾಮಸ್ಥರು ಹೊಡೆದು ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಯತ್ನಿಸಿದ್ದರು. ಗ್ರಾಮಸ್ಥರನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂದಿದೆ.

    ಭಾರತದ ರಾಷ್ಟ್ರೀಯ ಪಕ್ಷಿ ನವಿಯನ್ನು ಬೇಟೆಯಾಡುವುದು ಹಾಗೂ ಕೊಲ್ಲುವುದು ನಿಷೇಧಿಸಲಾಗಿದೆ. 1972ರ ಭಾರತೀಯ ಅರಣ್ಯ ಕಾಯ್ದೆಯ ಪ್ರಕಾರ, ನವಿಲು ಬೇಟಿಯಾಡುವ ಹಾಗೂ ಕೊಲ್ಲುವ ಆರೋಪಿಗಳಿಗೆ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಹೀಗಾಗಿ ನವಿಲು ಬೇಟಿಯಾಡಿದ ಮೂವರು ಆರೋಪಿಗಳ ವಿರುದ್ಧ ಹಾಗೂ ಹರಿಲಾಲ್‍ನನ್ನು ಕೊಲೆ ಮಾಡಿದ 10 ಜನರನ್ನು ಪೊಲೀಸರು ಬಂಧಿಸಿದ್ದು, ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.