Tag: ನವ ದೆಹಲಿ

  • ಸಂಸದರಿಗೆ, ಸರಕಾರಿ ಅಧಿಕಾರಿಗಳಿಗಾಗಿ ‘ವಿಕ್ರಾಂತ್ ರೋಣ’ ಸ್ಪೆಷಲ್ ಶೋ

    ಸಂಸದರಿಗೆ, ಸರಕಾರಿ ಅಧಿಕಾರಿಗಳಿಗಾಗಿ ‘ವಿಕ್ರಾಂತ್ ರೋಣ’ ಸ್ಪೆಷಲ್ ಶೋ

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇದೇ ಶುಕ್ರವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಕೆಲವು ಕಡೆ ಸ್ಪೆಷಲ್ ಶೋ ಅನ್ನು ಆಯೋಜನೆ ಮಾಡಿದೆ ಚಿತ್ರತಂಡ. ನವ ದೆಹಲಿಯಲ್ಲಿ ಸಂಸದರಿಗೆ ಮತ್ತು ಸರಕಾರಿ ಅಧಿಕಾರಿಗಳಿಗೆ ಸ್ಪೆಷಲ್ ಶೋ ಆಯೋಜನೆ ಮಾಡಿದ್ದು, ಈ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ. ಸಿನಿಮಾ ನೋಡುವುದಕ್ಕಾಗಿ ಕುತೂಹಲದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾ ಪ್ರಪಂಚದ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನೇಪಾಳ, ಪಾಕಿಸ್ತಾನದಲ್ಲೂ ವಿಕ್ರಾಂತ್‌ ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದ್ದು, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಇದನ್ನೂ ಓದಿ:`ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್

    ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಿರ್ಮಾಪಕ ಜಾಕ್ ಮಂಜು ಹೇಳಿದ್ದು, ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • “ಸೋಂಕಿತರ ಸಂಪರ್ಕದಲ್ಲಿರುವ ಎಲ್ಲರನ್ನೂ ಪರೀಕ್ಷೆಗೊಳಪಡಿಸಬೇಕಿಲ್ಲ”

    “ಸೋಂಕಿತರ ಸಂಪರ್ಕದಲ್ಲಿರುವ ಎಲ್ಲರನ್ನೂ ಪರೀಕ್ಷೆಗೊಳಪಡಿಸಬೇಕಿಲ್ಲ”

    – ಹೊಸ ಅಧ್ಯಯನ ವರದಿಯಲ್ಲಿ ಬಹಿರಂಗ

    ನವದೆಹಲಿ: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಎಲ್ಲ ವ್ಯಕ್ತಿಗಳ ಪರೀಕ್ಷೆ ನಡೆಸುವ ಅಗತ್ಯವಿಲ್ಲ, ಸಂಪರ್ಕಿತ ವ್ಯಕ್ತಿಯಲ್ಲಿ ರೋಗದ ಲಕ್ಷಣಗಳು ಕಂಡು ಬಂದ್ದಲ್ಲಿ ಮಾತ್ರ ಮೂರು ದಿನಗಳ ಬಳಿಕ ಕೊರೊನಾ ಟೆಸ್ಟ್ ನಡೆಸಬೇಕು ಎಂದು ಹೊಸ ಅಧ್ಯಯನ ವರದಿಯೊಂದು ಹೇಳಿದೆ.

    ವಿಶ್ವಾದ್ಯಂತ ಮಹಾಮಾರಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಲೇ ಇವೆ. ಈ ಪೈಕಿ ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿವೊಂದು ಪ್ರಕಟವಾಗಿದೆ. ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್ ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿದ್ದು, RT – PCR ದತ್ತಾಂಶ ಆಧರಿಸಿ ಸಂಶೋಧನಾ ವರದಿ ಪ್ರಕಟಿಸಲಾಗಿದೆ.

    ಈ ವರದಿ ಪ್ರಕಾರ, ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ಕೂಡಲೇ ಕೊರೊನಾ ಪರೀಕ್ಷೆ ನಡೆಸಬಾರದು, ಒಂದು ವೇಳೆ ಎಲ್ಲರಿಗೂ ಪರೀಕ್ಷೆ ನಡೆಸಿದರೆ ಬಹುತೇಕ ವರದಿಗಳು ನೆಗೆಟಿವ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

    ಸೋಂಕಿತ ಸಂಪರ್ಕದಲ್ಲಿದ್ದ ವ್ಯಕ್ತಿಗೆ ರೋಗದ ಗುಣಲಕ್ಷಣಗಳು ಕಾಣಿಸಿಕೊಂಡರೆ ಮಾತ್ರ ಪರೀಕ್ಷೆ ನಡೆಸಬೇಕು ರೋಗದ ಲಕ್ಷಣಗಳು ಕಾಣಿಸಿಕೊಂಡ ಮೂರು ದಿನಗಳ ಬಳಿಕ ಕೊರೊನಾ ಟೆಸ್ಟ್ ಮಾಡುವುದು ಉತ್ತಮ ಇದರಿಂದ ನಿಖರವಾದ ರಿಸಲ್ಟ್ ಪಡೆಯಬಹುದು ಎಂದು ವರದಿಯಲ್ಲಿ ಹೇಳಿದೆ.

    ಸೋಂಕು ಹರಡುವುದನ್ನು ತಡೆಯಲು ಕೊರೊನಾ ಪೀಡಿತ ವ್ಯಕ್ತಿಯ ಸಂಪರ್ಕದಲ್ಲಿರಯವ ಎಲ್ಲರನ್ನೂ ಕೂಡಲೇ ಪರೀಕ್ಷೆಗೆ ಒಳಪಡಿಸುವುದು ಸರಿಯಾದ ಕ್ರಮ ಅಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

  • ಕೃಷಿ ತ್ಯಾಜ್ಯ ಸುಟ್ಟಿದ್ದಕ್ಕೆ ಪಂಜಾಬಿನಲ್ಲಿ 84 ರೈತರ ಬಂಧನ

    ಕೃಷಿ ತ್ಯಾಜ್ಯ ಸುಟ್ಟಿದ್ದಕ್ಕೆ ಪಂಜಾಬಿನಲ್ಲಿ 84 ರೈತರ ಬಂಧನ

    ನವದೆಹಲಿ: ಮಿತಿಮೀರಿದ ವಾಯುಮಾಲಿನ್ಯ ಸಂಬಂಧ ದೆಹಲಿ ಸಮೀಪದ ಮೂರು ರಾಜ್ಯಗಳ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ಇಂದು ಪಂಜಾಬ್‌ನಲ್ಲಿ 84 ರೈತರನ್ನು ಬಂಧಿಸಲಾಗಿದೆ.

    ಪ್ರತಿ ಚಳಿಗಾಲದಲ್ಲೂ ಕೊಯ್ಲಿನ ನಂತರ ರೈತರು ಬೆಳೆ ಸುಡುವುದರಿಂದ ವಿಷಕಾರಿ ಹೊಗೆ ದೆಹಲಿಯನ್ನು ಆವರಿಸುತ್ತದೆ. ಇದು ವಾಹನಗಳು ಹಾಗೂ ಕಾರ್ಖಾನೆಯ ಹೊಗೆಯೊಂದಿಗೆ ಸೇರಿಕೊಳ್ಳುತ್ತದೆ. ಇದೇ ದೆಹಲಿಯನ್ನು ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯನ್ನಾಗಿ ಪರಿವರ್ತನೆಗೆ ಕಾರಣವಾಗುತ್ತದೆ.

    ಬುಧವಾರ ಸುಪ್ರೀಂ ಕೋರ್ಟ್ ಈ ಕುರಿತು ಅಧಿಕಾರಿಗಳಿಗೆ ಚಾಟಿ ಬೀಸಿ ರೈತರಲ್ಲಿ ಕೃಷಿ ತ್ಯಾಜ್ಯ ಸುಡದಂತೆ ಸೂಚಿಸಿತ್ತು. ಆದರೂ ಸಹ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ರೈತರು ಕೃಷಿ ತ್ಯಾಜ್ಯವನ್ನು ಸುಡುತ್ತಿದ್ದಾರೆ.

    ಕಳೆದ ಮೂರು ದಿನಗಳಲ್ಲಿ ಪಂಜಾಬ್‌ನಲ್ಲಿ 17 ಸಾವಿರಕ್ಕೂ ಹೆಚ್ಚು ಕೃಷಿ ಜಮೀನುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಒಂದೇ ದಿನ 4,741 ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪಂಜಾಬಿನ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಕಾನೂನು ಉಲ್ಲಂಘಿಸಿದ್ದಕ್ಕಾಗಿ 84ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 174 ರೈತರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪಂಜಾಬ್ ಮತ್ತು ಹರ್ಯಾಣ ಪ್ರತಿ ವರ್ಷ ಸುಮಾರು 18 ದಶಲಕ್ಷ ಟನ್ ಅಕ್ಕಿ ಉತ್ಪಾದಿಸುವ ಪ್ರಮುಖ ರಾಜ್ಯಗಳಾಗಿದ್ದು, ಕೇವಲ ಈ ಎರಡು ರಾಜ್ಯಗಳಲ್ಲಿ 20 ದಶಲಕ್ಷ ಟನ್ ಕೃಷಿ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣವನ್ನು ಸುಡಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ ಅಂತ್ಯದ ವೇಳೆಗೆ ಎರಡೂ ರಾಜ್ಯಗಳಲ್ಲಿ 48 ಸಾವಿರಕ್ಕೂ ಹೆಚ್ಚು ಕೃಷಿ ಗದ್ದೆಗಳಿಗೆ ಬೆಂಕಿ ಹಚ್ಚಲಾಗಿದೆ. 2018ರಲ್ಲಿ 30 ಸಾವಿರ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿತ್ತು. ಈ ಬಾರಿ ಭಾರೀ ಏರಿಕೆ ಕಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸುಪ್ರೀಂ ಕೋರ್ಟ್ ನಿನ್ನೆಯಷ್ಟೇ ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ. ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಗೂಬೆ ಕೂರಿಸ್ತಿದ್ದೀರಾ? ನಿಮಗೆ ನಾಚಿಕೆ ಆಗುದಿಲ್ಲವೇ ಎಂದು ಪ್ರಶ್ನಿಸಿ ಮೂರು ರಾಜ್ಯಗಳ ಕಾರ್ಯದರ್ಶಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

    ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಈ ಸಾಧನೆಗೆ ಗರ್ವ ಪಡ್ತಿದ್ದೀರಾ? ಅಧಿಕಾರಿಗಳನ್ನು ಶಿಕ್ಷಿಸುವ ಸಮಯ ಬಂದಿದೆ ಎಂದು ಹೇಳಿ ಎಚ್ಚರಿಸಿತ್ತು. ಜೊತೆಗೆ, ಮೂರು ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡದಂತೆ ಆದೇಶಿಸಿತ್ತು.

    ಇದು ಕೋಟಿ ಜನರ ಬದುಕಿನ ಪ್ರಶ್ನೆ. ಈ ರೀತಿ ನಿರ್ಲಕ್ಷ್ಯದಿಂದಿರುವುದು ಸರಿಯೇ? ನಿಮ್ಮ ವೈಫಲ್ಯ ನಿಮಗೆ ಗೊತ್ತಾಗುತ್ತಿಲ್ಲವೇ? ನಿಮ್ಮನ್ನೂ ನಾವು ಈ ಕೂಡಲೇ ಅಮಾನತುಗೊಳಿಸಬಹುದು ಎಂದು ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಿತ್ತು.

  • ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡ್ಡ!

    ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡ್ಡ!

    ನವದೆಹಲಿ: ಸೆಕ್ಸ್ ಗೆ ನಿರಾಕರಿಸಿದ್ದ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ್ದ ಕಾಮುಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    4ನೇ ತರಗತಿಯಲ್ಲಿ ಓದುತ್ತಿದ್ದ ಆಕಾಶ್ ಕುಮಾರ್ ಜಾ ಕೊಲೆಯಾದ ವಿದ್ಯಾರ್ಥಿ. 25 ವರ್ಷದ ಅಮರನಾಥ್ ಬಂಧಿತ ಆರೋಪಿ. ಫೆಬ್ರವರಿ 28ರಂದು ಶಾಲೆಗೆ ತೆರಳಿದ್ದ ಆಕಾಶ್ ಸಂಜೆಯಿಂದ ಕಾಣೆಯಾಗಿದ್ದನು. ಫೆಬ್ರವರಿ 28ರಂದು ತಾಯಿಯೊಂದಿಗೆ ಆಕಾಶ್ ಶಾಲೆಗೆ ತೆರಳಿದ್ದು ರಸ್ತೆ ಬದಿ ಅಂಗಡಿಗಳ ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು. ಆಕಾಶ್ ನನ್ನು ಶಾಲೆಯಿಂದ ಕರೆದುಕೊಂಡು ಹೋಗಲು ತಾಯಿ ಅಂದು ತಡ ಮಾಡಿದ್ದರು. ಶಾಲೆಗೆ ಬಂದ ಮೇಲೆ ಆಕಾಶ್ ಎಲ್ಲಿಯೂ ಕಾಣುತ್ತಿರಲಿಲ್ಲ. ಆತನ ಗೆಳೆಯರು ಅಪರಿಚಿತ ವ್ಯಕ್ತಿಯೊಬ್ಬನಿಗೆ ಗುಟಕಾ ತರಲು ಹೋದನು ಅಂತಾ ಹೇಳಿದ್ದರು.

    ಅಪರಿಚಿತ ವ್ಯಕ್ತಿಯೊಂದಿಗೆ ಗುಟಕಾ ತರಲು ಮಗನನ್ನು ಪೋಷಕರು ಹುಡುಕಾಡಿದ್ದರು. ಕೊನೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮಗ ಕಾಣೆಯಾಗಿದ್ದಾನೆ ಅಂತಾ ದೂರು ಸಹ ದಾಖಲಿಸಿದ್ದರು. ಮಾರ್ಚ್ 04ರಂದು ದಕ್ಷಿಣ ದೆಹಲಿ ಜೈತಪುರ ಬಡಾವಣೆಯ ಆಗ್ರಾ ಕಾಲುವೆಯಲ್ಲಿ ಆಕಾಶ್ ಮೃತ ದೇಹ ಪತ್ತೆಯಾಗಿತ್ತು. ಹರಿತವಾದ ವಸ್ತುವಿನಿಂದ ಆಕಾಶನ ಕತ್ತು ಸೀಳಿ ಕೊಲೆ ಮಾಡಲಾಗಿತ್ತು.

    ಆರೋಪಿ ಸಿಕ್ಕಿದ್ದು ಹೇಗೆ?: ಕಾಣೆಯಾದ ದಿನದಂದು ಅಪರಿಚಿತ ವ್ಯಕ್ತಿಯೊಬ್ಬನ ಜೊತೆ ಮಾತನಾಡುತ್ತಿದ್ದ ಮತ್ತು ಅವನಿಗಾಗಿ ಗುಟಕಾ ತರಲು ಆತ ಹೋಗಿದ್ದ ಎಂಬ ವಿಷಯವನ್ನು ಆಕಾಶ್ ಸ್ನೇಹಿತ ಪೊಲೀಸರಿಗೆ ತಿಳಿಸಿದ್ದನು. ಆಕಾಶ್ ಸ್ನೇಹಿತನ ಹೇಳಿಕೆಯ ಆಧಾರದ ಮೇಲೆ ಆರೋಪಿಯ ಸ್ಕೆಚ್ ತಯಾರಿಸಲಾಗಿತ್ತು. ಸ್ಕೆಚ್ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕುಡಿದ ನಶೆಯಲ್ಲಿ ಬಾಲಕನೊಂದಿಗೆ ಸ್ನೇಹ ಬೆಳಸಿಕೊಂಡಿದ್ದೆ, ಇದೇ ವೇಳೆ ಆತನೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಸಹ ಮುಂದಾಗಿದ್ದೆ. ಆದ್ರೆ ಬಾಲಕ ವಿರೋಧ ವ್ಯಕ್ತಪಡಿಸಿ, ತನ್ನ ಪೋಷಕರಿಗೆ ವಿಷಯವನ್ನು ತಿಳಿಸುವುದಾಗಿ ಅಂತಾ ಹೇಳಿದ್ದನು. ಇದ್ರಿಂದ ಭಯಗೊಂಡು ಆತನ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಅಂತಾ ಆರೋಪಿ ಅಮರನಾಥ್ ತಪ್ಪೊಪ್ಪಿಕೊಂಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ.