Tag: ನಾಗಠಾಣ

  • ಮನೆಯ ವಸ್ತುಗಳನ್ನು ಮಾರಿ ಕುಡಿದು ಮಜಾ ಮಾಡ್ತಿದ್ದ ಮಗನನ್ನು ಕೊಂದ ತಂದೆ!

    ಮನೆಯ ವಸ್ತುಗಳನ್ನು ಮಾರಿ ಕುಡಿದು ಮಜಾ ಮಾಡ್ತಿದ್ದ ಮಗನನ್ನು ಕೊಂದ ತಂದೆ!

    ವಿಜಯಪುರ: ಮನೆಯ ವಸ್ತುಗಳನ್ನು ಮಾರಾಟ ಮಾಡಿ ಕಡಿದು ಮಜಾ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿದ ಘಟನೆ ನಾಗಠಾಣದಲ್ಲಿ (Nagathan) ನಡೆದಿದೆ.

    ಮುತ್ತಪ್ಪ ಮಸಳಿ (38) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ತಂದೆ ಬಸಪ್ಪ ಮಸಳಿ ಮಗನನ್ನೇ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ. ಮೃತ ಯುವಕ ತೀವ್ರ ಮದ್ಯ ವ್ಯಸನಿಯಾಗಿದ್ದ. ಆತನಿಗೆ ಹಲವು ಬಾರಿ ತಂದೆ ಬಸಪ್ಪ ಕುಡಿಯುವುದನ್ನು ಬಿಡುವಂತೆ ಬುದ್ಧಿವಾದ ಹೇಳಿದ್ದ. ಆದರೆ ಆತ ಕುಡಿಯುವುದನ್ನು ಬಿಟ್ಟಿರಲಿಲ್ಲ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

    ಕುಡಿಯಲು ಹಣ ಸಿಗದಿದ್ದಾಗ ಮನೆಯಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಕುಡಿಯುತ್ತಿದ್ದ. ಅಲ್ಲದೇ ಹೊಲದಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಕುಡಿಯುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಲುವಾಗಿ ಹಲವು ಬಾರಿ ಮುತ್ತಪ್ಪನಿಗೆ ತಿಳುವಳಿಕೆ ಹೇಳಲಾಗಿತ್ತು. ಆದರೆ ಆತ ಹಳೆಯ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ಆತನ ತಂದೆ ತಲೆಗೆ ಸಲಾಕೆಯಿಂದ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಈ ಸಂಬಂಧ ವಿಜಯಪುರ (Vijayapura) ಗ್ರಾಮೀಣ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟು ವಂಚನೆ ಮಾಡ್ತಿದ್ದ ಚಾಲಾಕಿ ಕಳ್ಳಿಯರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲಸಕ್ಕೆ ಗುಡ್ ಬೈ ರಾಜಕೀಯಕ್ಕೆ ಜೈ ಎಂದ ಸರ್ಕಾರಿ ಅಧಿಕಾರಿ

    ಕೆಲಸಕ್ಕೆ ಗುಡ್ ಬೈ ರಾಜಕೀಯಕ್ಕೆ ಜೈ ಎಂದ ಸರ್ಕಾರಿ ಅಧಿಕಾರಿ

    ವಿಜಯಪುರ: ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳಿ ಜಿಲ್ಲೆಯ ಅಧಿಕಾರಿಯೊಬ್ಬರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಲೋಕಾಯುಕ್ತ (Lokayukta) ಇಲಾಖೆಯಲ್ಲಿ ಸಿಪಿಐ ಆಗಿದ್ದ ಮಾಜಿ ಅಧಿಕಾರಿ ಮಹೀಂದ್ರ ಕುಮಾರ್ ನಾಯಕ್ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ.

    ಜಿಲ್ಲೆಯ ನಾಗಠಾಣ (Nagathan) ಮೀಸಲು ಮತಕ್ಷೇತ್ರದಿಂದ ಮಹೀಂದ್ರ ಕುಮಾರ್ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಬಿಜೆಪಿ (BJP) ಪಕ್ಷದ ಆಕಾಂಕ್ಷಿಯಾಗಿರುವ ಅವರು ಟಿಕೆಟ್‍ಗಾಗಿ ಕಾದಿದ್ದಾರೆ. ಈ ಮೊದಲು ಬಾಗಲಕೋಟೆ (Bagalakote) ಜಿಲ್ಲೆಯ ಲೊಕಾಯುಕ್ತ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಮಾನಸಿಕ ಚಿಂತನೆಗೆ ಒಳಗಾಗಿ ನಿಮ್ಮ ಪ್ರಾಣ ಹೋಗಬಾರದು: ಎಚ್‌ಡಿಡಿ ಬಗ್ಗೆ ಎಚ್‌ಡಿಕೆ ಭಾವುಕ

    ತಮ್ಮ ಹುದ್ದೆಗೆ ಮಹೀಂದ್ರ ಕುಮಾರ್ ಮಾರ್ಚ್ ತಿಂಗಳಲ್ಲೇ ರಾಜೀನಾಮೆ ನೀಡಿದ್ದರು. ಆದರೆ ರಾಜೀನಾಮೆ ಅಂಗೀಕಾರವಾಗಿರಲಿಲ್ಲ. ಕಳೆದ 20 ದಿನಗಳ ಹಿಂದೆಯಷ್ಟೆ ಇವರನ್ನು ಬೆಂಗಳೂರು (Bengaluru) ಲೋಕಾಯುಕ್ತ ಡಿಜಿಪಿ ಕೇಂದ್ರ ಕಛೇರಿಗೆ ವರ್ಗಾಯಿಸಲಾಗಿತ್ತು. ಮಾ.31 ರಂದು ರಾಜೀನಾಮೆ ಅಂಗೀಕಾರವಾಗಿದೆ. ಇದೀಗ ಸಕ್ರಿಯ ರಾಜಕಾರಣಕ್ಕೆ ಮಾಜಿ ಪೊಲೀಸ್ ಅಧಿಕಾರಿ ಎಂಟ್ರಿ ಆಗಿದ್ದಾರೆ.

    ನಾಗಠಾಣ ಮತಕ್ಷೇತ್ರದಿಂದ ಮಾಜಿ ಸಚಿವ ಬಿಜೆಪಿ ಪ್ರಭಾವಿ ನಾಯಕ ಗೋವಿಂದ ಕಾರಜೋಳ ಪುತ್ರ ಗೋಪಾಲ ಕಾರಜೋಳ ಕೂಡ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಬಿಜೆಪಿ ಟಿಕೆಟ್ ಯಾರಿಗಾದರೂ ಸಿಗಲಿ, ಕೆಲಸ ಮಾಡುವುದಾಗಿ ಮಹೀಂದ್ರ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಅಳೆದುತೂಗಿ ಹೈಕಮಾಂಡ್‌ಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಶಿಫಾರಸು ಮಾಡ್ತೇವೆ: ಜೋಶಿ

  • ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಿಂದ ಅಕ್ರಮ: ಶಾಸಕ ದೇವಾನಂದ ತರಾಟೆ

    ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಿಂದ ಅಕ್ರಮ: ಶಾಸಕ ದೇವಾನಂದ ತರಾಟೆ

    ವಿಜಯಪುರ: ರೈತ ಸಂಪರ್ಕ ಕೇಂದ್ರವೊಂದಕ್ಕೆ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು ದಿಢೀರ್ ಭೇಟಿ ನೀಡಿದ್ದು, ಅಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ.

    ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಶೋಷಣೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಶಾಸಕ ದೇವಾನಂದ ಅವರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದು, ಅಕ್ರಮ ಅರಿತು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

    ಸಬ್ಸಿಡಿ ದರದಲ್ಲಿ ರೈತರಿಗೆ ವಿತರಿಸಬೇಕಾಗಿದ್ದ ಸಲಕರಣೆಗಳನ್ನು ಖಾಸಗಿ ಜಮೀನಿನಲ್ಲಿ ಇಡಲಾಗಿದೆ ಎನ್ನುವ ಮಾಹಿತಿಯನ್ನು ಶಾಸಕ ದೇವಾನಂದ ಪಡೆದುಕೊಂಡಿದ್ದರು. ಹೀಗಾಗಿ ಅಲ್ಲಿಗೇ ಭೇಟಿ ನೀಡಿ, ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಬೀಜ, ಔಷಧಿ ಮತ್ತು ಡೀಸೆಲ್ ಪಂಪ್‍ಸೆಟ್ ಎಂಜಿನ್ ಪತ್ತೆ ಹಚ್ಚಿದ್ದಾರೆ. ಅಧಿಕಾರಿಗಳು ಡೀಸೆಲ್ ಎಂಜಿನ್ ಯಾರಿಗೂ ಗೊತ್ತಾಗಬಾರದು ಎಂದು ಕಟ್ಟಿಗೆ ಬಾಕ್ಸ್‍ನಲ್ಲಿ ಇಟ್ಟಿದ್ದರು. ಕಟ್ಟಿಗೆ ಬಾಕ್ಸ್ ಒಡೆದು ಅಧಿಕಾರಿಗಳ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ವೇಳೆ ಯಾವುದೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸದೇ ಇರುವುದಕ್ಕೆ ಶಾಸಕರು ಅಸಮಾಧಾನ ಹೊರಹಾಕಿದರು.

    ಅಧಿಕಾರಿಗಳ ಅಕ್ರಮ ಸಂಗ್ರಹಣೆ ಆರೋಪದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ದೇವಾನಂದ ಚವ್ಹಾಣ ಅವರು, ಅಧಿಕಾರಿಗಳ ಅಕ್ರಮದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗುವುದು. ಅಲ್ಲದೇ, ಅಧಿಕಾರಿಗಳ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತೇನೆ ಎಂದು ಶಾಸಕರು ಹೇಳಿದರು.