Tag: ನಾಗರಹೊಳೆ

  • ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ಮೈಸೂರು: ಸಫಾರಿ ವಾಹನಗಳ‌ (Safari Vehicle) ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ (Nagarahole Forest ) ನಡೆದಿದೆ.

    ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದುಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಳೆಯಿಂದ ಭಾರತ ಮಂಟಪದಲ್ಲಿ ನಿಂತಿದ್ದ ನೀರನ್ನು ಕೂಡಲೇ ತೆರವುಗೊಳಿಸಲಾಗಿತ್ತು: PIB

    ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್‌ ಹೋಗಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ನಾಗರಹೊಳೆ ಕಾಡಲ್ಲಿ ಸಫಾರಿ: ಹುಲಿ ಸಿಗಲಿಲ್ಲ, ಬೇಜಾರಾಯ್ತು ಎಂದ ಯಶ್

    ಸಿನಿಮಾ ಕೆಲಸಗಳ ಬ್ಯುಸಿ ನಡುವೆಯೂ ರಾಕಿಂಗ್ ಸ್ಟಾರ್ ಯಶ್ (Yash) ಕಾಡಿಗೆ ನುಗ್ಗಿದ್ದಾರೆ. ಮಕ್ಕಳಿಗೆ ಲೈವ್ ಆಗಿ ಕಾಡು ಪ್ರಾಣಿಗಳನ್ನು ತೋರಿಸಲು ಕುಟುಂಬ ಸಮೇತ ನಾಗರಹೊಳೆ (Nagarhole) ಕಾಡಿಗೆ ಬಂದಿದ್ದ ಅವರು, ಸತತ ಮೂರು ದಿನಗಳ ಕಾಲ ಸಫಾರಿ (Safari) ಮಾಡಿದ್ದಾರೆ. ನಾನಾ ಪ್ರಾಣಿಗಳನ್ನು ಕಣ್ತುಂಬಿ ಕೊಂಡ ಯಶ್ ಕುಟುಂಬ, ಹುಲಿ (Tiger) ಸಿಗದೇ ಹೋದ ಕಾರಣಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಕೊರೋನಾದಿಂದಾಗಿ ಮೈಸೂರು ಕಡೆ ಪ್ರವಾಸ ಮಾಡಲು ಯಶ್ ಗೆ ಆಗಿರಲಿಲ್ಲವಂತೆ. ಹಾಗಾಗಿ ಇಬ್ಬರು ಮಕ್ಕಳು, ಪತ್ನಿ ರಾಧಿಕಾ ಪಂಡಿತ್ (Radhika Pandit) ಮತ್ತು ಅತ್ತೆ, ಮಾವನ ಜೊತೆ ಮೈಸೂರಿಗೆ ಆಗಮಿಸಿದ್ದರು. ಮೈಸೂರಿನ ಸುತ್ತ ಮುತ್ತಲಿನ ಸ್ಥಳಗಳನ್ನು ಮಕ್ಕಳಿಗೆ ತೋರಿಸಿದರು. ಅದರಲ್ಲೂ ಮಕ್ಕಳಿಗೆ ಇದು ಮೊದಲ ರಿಯಲ್ ಫಾರೆಸ್ಟ್ ಪ್ರವಾಸವಾಗಿದ್ದರಿಂದ ಆ ಸಂಭ್ರಮವನ್ನು ಹಂಚಿಕೊಂಡರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಯಶ್, ‘ನಾವು ಮತ್ತು ಮಕ್ಕಳು ಕೂಡ ಸಫಾರಿ ಎಂಜಾಯ್ ಮಾಡಿದ್ರು. ಸಫಾರಿಯಲ್ಲಿ ಜಿಂಕೆ, ಕರಡಿ, ಆನೆ ಎಲ್ಲೂ ಕಂಡವು. ಹುಲಿಯೊಂದು ಸಿಗಲಿಲ್ಲ, ಬೇಜಾರಾಯ್ತು.ಇವತ್ತೂ ಸಫಾರಿ ಮಾಡಬೇಕಿತ್ತು, ಮಳೆ ಕಾರಣಕ್ಕೆ ಹೋಗಲಿಲ್ಲ. ಮುಂದೆ ಮತ್ತೆ ಸಫಾರಿ ಮಾಡಿ ನೋಡಿದ್ರಾಯ್ತು ಅಂತ ಬಂದೆವು’ ಎಂದಿದ್ದಾರೆ. ಇದನ್ನೂ ಓದಿ:ಮಹೇಶ್ ಬಾಬು ಚಿತ್ರದಿಂದ ಪೂಜಾ ಹೆಗ್ಡೆ ಕಿಕ್ ಔಟ್- ತ್ರಿಷಾ ಇನ್?

    ಸಫಾರಿ ಮುಗಿಸಿಕೊಂಡು ಕುಟುಂಬ ಸಮೇತ ಇಂದು ಯಶ್ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.

    ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ ಯಶ್. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.

  • ಆನೆಮರಿ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳುವ ಭರವಸೆ- ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ

    ಆನೆಮರಿ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳುವ ಭರವಸೆ- ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ

    ಬೆಂಗಳೂರು: ನಾಗರಹೊಳೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮರಿಯಾನೆಗೆ (Elephant) ಸೂಕ್ತ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai)  ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಬುಧವಾರ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ನಾಗರಹೊಳೆ ಅಭಯಾರಣ್ಯಕ್ಕೆ (Nagarahole) ಭೇಟಿ ನೀಡಿದ್ದರು. ಈ ವೇಳೆ ತಾಯಿ ಆನೆಯೊಂದಿಗೆ ಮರಿಯಾನೆಯ ನರಳಾಟವನ್ನು ಕಂಡಿದ್ದಾರೆ. ಆ ಮರಿಯಾನೆಗೆ ಸೊಂಡಿಲು ಹಾಗೂ ಬಾಲದ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿಗೆ ರಾಹುಲ್‌ ಗಾಂಧಿ ಪತ್ರ ಬರೆದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಮರಿಯಾನೆಯನ್ನು ರಕ್ಷಿಸಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ, ಆತ್ಮಹತ್ಯೆ ಡಬಲ್‌ ಆಗಿದೆ – ಕಾಂಗ್ರೆಸ್‌ ವಾಗ್ದಾಳಿ

    ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಹುಲ್‌ ಗಾಂಧಿ ಅವರ ಕಾಳಜಿಯನ್ನು ಪ್ರಶಂಸಿದ್ದಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಮರಿ ಆನೆಯ ಬಗ್ಗೆ ವಿಚಾರಿಸಲಾಗಿದೆ. ಕಾಡುಪ್ರಾಣಿಯ ದಾಳಿಯಿಂದಾಗಿ ಈ ರೀತಿಯ ತೊಂದರೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಗಾಯಾಳು ಆನೆಮರಿಯ ರಕ್ಷಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸೊಂಡಿಲು ಗಾಯದಿಂದ ಬಳಲುತ್ತಿರುವ ಮರಿಯಾನೆ- ಬೊಮ್ಮಾಯಿಗೆ ರಾಹುಲ್ ಗಾಂಧಿ ಪತ್ರ

    Live Tv
    [brid partner=56869869 player=32851 video=960834 autoplay=true]

  • ಲಾಕ್‍ಡೌನ್ ವೇಳೆ ಹೇಗಿದೆ ಕಾಡು- ಡ್ರೋನ್ ವೀಡಿಯೋ

    ಲಾಕ್‍ಡೌನ್ ವೇಳೆ ಹೇಗಿದೆ ಕಾಡು- ಡ್ರೋನ್ ವೀಡಿಯೋ

    ಮೈಸೂರು: ಲಾಕ್‍ಡೌನ್ ನಿಂದಾಗಿ ಕಾಡು ನೋಡುವುದನ್ನು ಮಿಸ್ ಮಾಡಿಕೊಂಡವರಿಗೆ ಕಾಡಿನ ಇವತ್ತಿನ ಚಿತ್ರಣವನ್ನು ತೋರಿಸುವ ವಿನೂತನ ಪ್ರಯತ್ನವನ್ನು ಅರಣ್ಯ ಇಲಾಖೆ ಮಾಡಿದೆ.

    ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಯೂಟ್ಯೂಬ್ ಮೂಲಕ ಜನರಿಗೆ ಕಾಡನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ. ವೀಡಿಯೋದಲ್ಲಿ ಹಸಿರಿನಿಂದ ಕೂಡಿರುವ ನಾಗರಹೊಳೆ ಕಾಡು, ವನ್ಯಪ್ರಾಣಿಗಳ ದರ್ಶನವಾಗುತ್ತಿದೆ. ನವಿಲುಗಳ ನರ್ತನ, ಜಿಂಕೆ ಹಾರಾಟ, ಕರಡಿ, ವಿವಿಧ ಪಕ್ಷಿಗಳು, ಆನೆಗಳು ಸೇರಿದಂತೆ ವಿವಿಧ ವನ್ಯಜೀವಿಗಳನ್ನು ಸೆರೆ ಹಿಡಿಯಲಾಗಿದೆ.

    ಲಾಕ್‍ಡೌನ್ ನಲ್ಲಿ ಕಾಡು ಹೇಗಿದೆ ಎಂಬುದನ್ನು ಡ್ರೋನ್ ಮೂಲಕ ತೋರಿಸುವ ಪ್ರಯತ್ನ ಇದಾಗಿದೆ. ಸಫಾರಿ ಮಿಸ್ ಮಾಡಿಕೊಂಡವರಿಗೆ ಅದ್ಭುತವಾದ ವೀಡಿಯೋ ತಯಾರಿಸಿ ಬಿಡುಗಡೆ ಮಾಡಲಾಗಿದ್ದು, ಇಲಾಖೆಯ ಕೆಲಸಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ.

  • ಡಿ ಬಾಸ್ ಕ್ಯಾಮೆರಾ ಕಣ್ಣಲ್ಲಿ ಕರಿ ಚಿರತೆ ಸೆರೆ

    ಡಿ ಬಾಸ್ ಕ್ಯಾಮೆರಾ ಕಣ್ಣಲ್ಲಿ ಕರಿ ಚಿರತೆ ಸೆರೆ

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಗರಹೊಳೆಯಲ್ಲಿ ಮೂರು ದಿನ ಸಫಾರಿ ನಡೆಸಿದ್ದು, ವೈಲ್ಡ್ ಲೈಫ್ ಫೋಟೋಗ್ರಫಿ ನಡೆಸಿದ್ದಾರೆ. ಈ ವೇಳೆ ಕರಿ ಚಿರತೆ ಸೇರಿದಂತೆ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ್ದಾರೆ.

    ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಡಿ ಬಾಸ್ ಸಫಾರಿ ನಡೆಸಿದ್ದು, ಈ ವೇಳೆ ಕರಿ ಚಿರತೆಯನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಮೂರು ವರ್ಷಗಳಿಂದ ಕರಿ ಚಿರತೆ ದಾಸನ ಕ್ಯಾಮೆರಾ ಕಣ್ಣಿಗೆ ಬಿದ್ದಿರಲಿಲ್ಲ. ಇದೀಗ ಸೆರೆ ಹಿಡಿದಿದ್ದು, ಇದರಿಂದಾಗಿ ಡಿ ಬಾಸ್ ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಮೂರು ದಿನಗಳ ಕಾಲ ದರ್ಶನ್ ತಮ್ಮ ಸ್ನೇಹಿತರ ಜೊತೆ ನಾಗರಹೊಳೆಯಲ್ಲಿ ಭರ್ಜರಿ ಸಫಾರಿ ನಡೆಸಿದ್ದಾರೆ.

    ಸಫಾರಿ ವೇಳೆ ಮೂರು ಹುಲಿ, ಕರಿ ಚಿರತೆ, ಕಾಡು ನಾಯಿ, ಆನೆಗಳು ಕ್ಯಾಮರಾಕ್ಕೆ ಸೆರೆ ಸಿಕ್ಕಿವೆ. ಅದ್ಭುತ ಚಿತ್ರಗಳನ್ನು ತಮ್ಮ ಕ್ಯಾಮೆರಾ ಕಣ್ಣಿನಲ್ಲಿ ದರ್ಶನ್ ಸೆರೆ ಹಿಡಿದಿದ್ದಾರೆ. ಅದರಲ್ಲೂ ಕರಿ ಚಿರತೆ ಸಿಕ್ಕಿದ್ದಕ್ಕೆ ಫುಲ್ ಖುಷಿಯಾಗಿದ್ದಾರೆ. ಡಿ ಬಾಸ್ ತಮ್ಮ ಸ್ನೇಹಿತರ ಜೊತೆ ನಾಗರಹೊಳೆಯಲ್ಲಿ ಆಗಾಗ ಸಫಾರಿ ಮಾಡುತ್ತಲೇ ಇರುತ್ತಾರೆ. ಮೊನ್ನೆಯಷ್ಟೇ ಹುಲಿಯ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು.

    ಕಾಡಿನ ದಾರಿಯಲ್ಲಿ ಹುಲಿ ಭರ್ಜರಿಯಾಗಿ ಘರ್ಜಿಸುತ್ತಿದ್ದ ವೇಳೆ ದರ್ಶನ್ ಚಿತ್ರಗಳನ್ನು ಸೆರೆ ಹಿಡಿದಿದ್ದರು. ವೈನ್ಯ ಜೀವಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ದರ್ಶನ್, ತುಂಬಾ ಪ್ರೀತಿಸುತ್ತಾರೆ. ಹೀಗಾಗಿ ಆಗಾಗ ಸಫಾರಿ ಹೋಗುತ್ತಲೇ ಇರುತ್ತಾರೆ. ಅಲ್ಲದೆ ವೈಲ್ಡ್ ಲೈಫ್ ಫೋಟೋಗ್ರಫಿ ಸಹ ಅವರಿಗೆ ಎಲ್ಲಿಲ್ಲದ ಪ್ರೀತಿ ಎಂಬುದು ತಿಳಿದಿರುವ ವಿಚಾರವಾಗಿದೆ.

    ಶೂಟಿಂಗ್‍ನಿಂದ ಬಿಡುವು ಸಿಕ್ಕಾಗಲೆಲ್ಲ ದರ್ಶನ್ ಮೈಸೂರಿನ ತಮ್ಮ ಫಾರ್ಮ್ ಹೌಸ್‍ನಲ್ಲೇ ಕಾಲ ಕಳೆಯುತ್ತಾರೆ. ಸಾಕು ಪ್ರಾಣಿಗಳು ಹಾಗೂ ಹಸುಗಳ ಜೊತೆಯೇ ಇರುತ್ತಾರೆ. ಅಲ್ಲದೆ ಸಮಯ ಸಿಕ್ಕಾಗಲೆಲ್ಲ ಅರಣ್ಯಕ್ಕೆ ತೆರಳಿ ವೈಲ್ಡ್ ಲೈಫ್ ಫೋಟೋಗ್ರಫಿ ಮಾಡುತ್ತಿರುತ್ತಾರೆ. ಇತ್ತೀಚೆಗಷ್ಟೇ ತಮ್ಮ ಸ್ನೇಹಿತರ ಬಳಗದೊಂದಿಗೆ ಬೈಕ್‍ನಲ್ಲಿ ಲಾಂಗ್ ರೈಡ್ ಹೋಗಿದ್ದರು. ಇದೀಗ ನಾಗರಹೊಳೆಗೆ ತೆರಳಿದ್ದಾರೆ.

    ಕೆಲವು ದಿನಗಳ ಹಿಂದೆ ಕಿನ್ಯಾಡಿ ಕಾಡಿಗೆ ಹೋಗಿದ್ದ ದರ್ಶನ್, ಪ್ರಾಣಿ, ಪಕ್ಷಿಗಳ ಫೋಟೋವನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿದಿದ್ದರು. ಇದೀಗ ನಾಗರಹೊಳೆ ಅಭಯಾರಣ್ಯದಲ್ಲಿ ಬೀಡು ಬಿಟ್ಟು ವಿವಿಧ ರೀತಿಯ ಕಾಡು ಪ್ರಾಣಿಗಳ ಚಿತ್ರಗಳನ್ನು ಕ್ಲಿಕ್ಕಿಸಿದ್ದಾರೆ. ಕ್ಯಾಮೆರಾ ಹೆಗಲಿಗೆ ಹಾಕಿಕೊಂಡು ಫೋಟೋ ತೆಗೆಯುತ್ತಾ ಸಫಾರಿಯನ್ನು ಎಂಜಾಯ್ ಮಾಡಿದ್ದಾರೆ. ದರ್ಶನ್ ಸಧ್ಯ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ.

  • ಗಜರಾಜನ ಸದ್ದಿಗೆ ಓಟಕಿತ್ತ ಹುಲಿಗಳು

    ಗಜರಾಜನ ಸದ್ದಿಗೆ ಓಟಕಿತ್ತ ಹುಲಿಗಳು

    ಮೈಸೂರು: ಈ ವಿಡಿಯೋ ನೋಡಿದರೆ ಆನೆಗಳಿಗೆ ಹುಲಿಗಳು ಹೆದುರುತ್ತವಾ ಎಂಬ ಪ್ರಶ್ನೆ ಕಾಡದೆ ಇರದು. ಅಷ್ಟೊಂದು ರೋಮಾಂಚನಕಾರಿಯಾದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ಕಾಡಿನಲ್ಲಿ ಹುಲಿ ಹಾಗೂ ಆನೆಗಳ ನಡುವಿನ ಸಂಘರ್ಷದಿಂದಾಗಿ ಆನೆಗಳಿಗೆ ಹುಲಿಗಳು ಹೆದರುತ್ತಿವೆ ಎನ್ನಲಾಗಿದೆ. ಹುಲಿಗಳನ್ನು ಆನೆಗಳು ಹೆದರಿಸಿ ಓಡಿಸುತ್ತಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬಂಡೀಪುರ, ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದವರಿಗೆ ಈ ಅಪರೂಪದ ದೃಶ್ಯಗಳು ಸಿಗುತ್ತಿವೆ.

    ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಹುಲಿಗಳು ಆನೆಗಳನ್ನು ಬೇಟೆಯಾಡಿರುವ ಸಾಕಷ್ಟು ಪ್ರಕರಣಗಳು ನಡೆದಿವೆ. ಆದರೆ ಇದೀಗ ಆನೆಗಳೇ ರಾಜ ಗಾಂಭೀರ್ಯದಿಂದ ಹುಲಿಗಳನ್ನು ಓಡಿಸಿವೆ. ಈ ದೃಶ್ಯಗಳು ಎಂತಹವನ್ನಾದರೂ ರೋಮಾಂಚಿತವಾಗಿಸುತ್ತವೆ. ಪ್ರವಾಸಿಗರು ಈ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.

  • ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

    ಜುಲೈ 10ರಿಂದ ಮುಂದಿನ ಆದೇಶದವರೆಗೆ ಹೊರ ಜಿಲ್ಲೆ/ರಾಜ್ಯ/ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಹೆಚ್.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್, ರೆಸಾರ್ಟ್, ಲಾಡ್ಜ್, ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡಕೂಡದು. ಮುಂದಿನ ಹೊರಭಾಗದ ಪ್ರವಾಸಿಗರ ಆನ್‍ಲೈನ್ ಅಥವಾ ಆಫ್‍ಲೈನ್ ಮುಂತಾದ ರೂಪದ ಬುಕ್ಕಿಂಗ್ ಮಾಡಿಕೊಳ್ಳಬಾರದು.

    ಸದ್ಯ ವಸತಿ ಸೌಕರ್ಯ ಪಡೆದುಕೊಂಡಿರುವ ಪ್ರವಾಸಿಗರನ್ನು ಬಲವಂತವಾಗಿ ಕಳಿಸಕೂಡದು. ಅವರ ಬುಕ್ಕಿಂಗ್ ಅವಧಿ ಮುಗಿಯವರೆಗೂ ಸೇವೆ ನೀಡತಕ್ಕದ್ದು ಎಂದು ಆದೇಶಿಸಿದೆ. ಪ್ರವಾಸಿ ಉದ್ದೇಶಕ್ಕೆ ಮುಂಗಡ ಬುಕ್ಕಿಂಗ್ ಮಾಡಿ ಆಗಮಿಸಿರದಿದ್ದಲ್ಲಿ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದುಗೊಳಿಸಬೇಕು.

    ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಸಹ ಅನ್ವಯವಾಗುತ್ತದೆ. ಮುಂದಿನ ಆದೇಶದವರೆಗು ಇಡೀ ತಾಲೂಕಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

  • ಬಂಡೀಪುರದಲ್ಲಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಪ್ರತಾಪ್ ಸಿಂಹ

    ಬಂಡೀಪುರದಲ್ಲಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಪ್ರತಾಪ್ ಸಿಂಹ

    ಮೈಸೂರು: ಬಂಡೀಪುರ ಅಭಯಾರಣ್ಯಕ್ಕೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ. ಇಲ್ಲದಿದ್ದರೆ ಕಾಡಿಗೆ ಬೆಂಕಿ ಬೀಳಲು ಸಾಧ್ಯವೇ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅನುಮಾನ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳನ್ನು ನೋಡಿದ್ದೇನೆ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಯಾವ ಕಾರಣಕ್ಕೆ ಬೆಂಕಿ ತಗುಲಿತು ಅಂತ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರ ಬರಬೇಕಿದೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಮರ, ಗಿಡಗಳು ಒಣಗಿರುವ ಕಾರಣಕ್ಕೆ ಒಂದು ಬೆಂಕಿ ಕಡ್ಡಿ ಇಟ್ಟರೆ ಇಡೀ ಕಾಡೇ ನಾಶ ಆಗುತ್ತದೆ ಎನ್ನುವ ಸಾಮಾನ್ಯ ಪ್ರಜ್ಞೆ ಇಲ್ಲದೇ ದುಷ್ಕರ್ಮಿಗಳು ಈ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ದೇಶದಲ್ಲಿ ಹುಲಿ ಸಂರಕ್ಷಣೆಗೆ ಸಾಕಷ್ಟು ಯೋಜನೆಗಳು ಜಾರಿಗೆ ಬಂದಿದೆ. ಅತಿ ಹೆಚ್ಚು ಹುಲಿ ಇರೋದು ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ. ಇಲ್ಲೇ ಹುಲಿಗಳ ಸಂರಕ್ಷಣೆ ಮಾಡಲಿಲ್ಲ ಅಂದ್ರೆ ಹೇಗೆ? ಕಾರಿಗಾದ್ರೆ ಇನ್ಸೂರೆನ್ಸ್ ಇರುತ್ತೆ ಪ್ರಾಣಿಗಳಿಗೆ ಇಲ್ಲ. ಇಲ್ಲೇ ಈ ರೀತಿ ಸಂರಕ್ಷಣೆ ಮಾಡಿಲ್ಲ ಅಂದ್ರೆ ಬೇರೆಡೆ ಸಂರಕ್ಷಣೆ ಮಾಡಲು ಆಗುತ್ತಾ? ಇನ್ನು ಮುಂದೆ ಈ ರೀತಿಯ ಅವಘಡ ಎಂದೂ ಆಗಬಾರದು ಆ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

    ಈ ರೀತಿ ಅಗ್ನಿ ಅವಘಡಗಳು ನಡೆದಾಗ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಸಿ ಬೆಂಕಿ ನಂದಿಸಲು ಮುಂದಾಗಬೇಕು. ಹೆಲಿಕಾಪ್ಟರ್ ಮೂಲಕ ನೀರು ಅಥವಾ ಬೆಂಕಿ ಆರಿಸುವ ಸ್ಪ್ರೇಗಳನ್ನು ಬಳಸುವ ವ್ಯವಸ್ಥೆ ಮಾಡಬೇಕು. ಬಂಡೀಪುರ ಹಾಗೂ ನಾಗರಹೊಳೆ ಅರಣ್ಯವು ಅತಿ ಸೂಕ್ಷ್ಮ ಪ್ರದೇಶ, ಮಳೆಯ ತಾಣವೂ ಹೌದು. ಹಾಗೆಯೇ ಈ ಪ್ರದೇಶ ಪಶ್ಚಿಮ ಘಟ್ಟದ ಅರಣ್ಯಕ್ಕೆ ಸೇರುವುದರಿಂದ ಈ ಪ್ರದೇಶಗಳ ಬಗ್ಗೆ ನಾವು ಕಾಳಜಿ ವಹಿಸಬೇಕು. ಈ ವಿಚಾರದಲ್ಲಿ ನಾನು ಯಾರ ಮೇಲೂ ಆರೋಪ ಪ್ರತ್ಯಾರೋಪ ಮಾಡುವುದಿಲ್ಲ. ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಗರಹೊಳೆ ಅರಣ್ಯದಲ್ಲಿ ಆನೆ ದಾಳಿಗೆ ಮುಖ್ಯ ಅರಣ್ಯಾಧಿಕಾರಿ ಬಲಿ

    ನಾಗರಹೊಳೆ ಅರಣ್ಯದಲ್ಲಿ ಆನೆ ದಾಳಿಗೆ ಮುಖ್ಯ ಅರಣ್ಯಾಧಿಕಾರಿ ಬಲಿ

    ಮೈಸೂರು: ಆನೆ ದಾಳಿಗೆ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆಯ ನಿರ್ದೇಶಕ ಮಣಿಕಂಠನ್ (45) ಮೃತಪಟ್ಟಿದ್ದಾರೆ.  ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾಗರಹೊಳೆ ಅರಣ್ಯ ಪ್ರದೇಶದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

    ಇಂದು ಫೈರ್ ಲೈನ್  ಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಸರ್ವೆ ನಡೆಸುತ್ತಿದ್ದರು. ಸ್ವತಃ ಸರ್ವೆ ನಡೆಸಲು ಸಿಎಫ್ ಮಣಿಕಂಠನ್ ಕಾಡಿನೊಳಗೆ ನುಗ್ಗಿದ್ದರು. ಈ ವೇಳೆ ಏಕಾಏಕಿ ಆನೆಯೊಂದು ಬಂದು ದಾಳಿ ನಡೆಸಿದೆ. ತಕ್ಷಣವೇ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಣಿಕಂಠನ್ ಸಾವನ್ನಪ್ಪಿದ್ದಾರೆ.

    ತಮಿಳುನಾಡು ಮೂಲದ 2001 ಎಎಫ್‍ಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಮಣಿಕಂಠನ್ ಈ ಹಿಂದೆ ಹಲವು ಜಿಲ್ಲೆಗಳಲ್ಲಿ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಎರಡು ವರ್ಷಗಳಿಂದ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆ ನಿರ್ದೇಶಕರಾಗಿದ್ದರು.

    ಮಣಿಕಂಠನ್ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಪಾರ್ಥಿವ ಶರೀರ ತರಲಾಗಿದೆ.

  • ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

    ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

    ಚಾಮರಾಜನಗರ:ಆನೆ ನಡೆದದ್ದೆ ದಾರಿ ಅಂತ ಹೇಳ್ತಾರೆ. ಆ ಮಾತಿಗೆ ಪುಷ್ಟಿ ನೀಡುವಂತಹ ದೃಶ್ಯವೊಂದು ಕ್ಯಾಮೆರಾ ದಲ್ಲಿ ಸೆರೆಯಾಗಿದೆ

    ಹೌದು ಆನೆಗಳು ಆಹಾರ ಅರಸಿ ನಾಡಿನ ಕಡೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವರದಿಯಾಗುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಬರುವುದನ್ನು ತಪ್ಪಿಸಲು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳೆ ವ್ಯಾಪ್ತಿಯಲ್ಲಿ ಕಾಡಂಚಿನಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸಲಾಗಿದೆ. ಆದರೆ ಆನೆಗಳು ಮಾತ್ರ ಕಬ್ಬಿಣದ ಕಂಬಿಯನ್ನು ದಾಟಿ ನಾಡಿನ ಕಡೆ ಧಾವಿಸಿ ಬರುತ್ತಿವೆ.

    ಬಂಡೀಪುರದ ಒಂದು ದೃಶ್ಯದಲ್ಲಿ ಆನೆ ರೈಲ್ವೆ ಕಂಬಿಯನ್ನು ದಾಟಲು ಶತ ಪ್ರಯತ್ನ ನಡೆಸುತ್ತಿರುವ ದೃಶ್ಯ ಸೆರೆಯಾಗಿದ್ದರೆ, ಮತ್ತೊಂದು ಚಿತ್ರಗಳಲ್ಲಿ ಆನೆ ರೈಲು ಕಂಬಿಗಳನ್ನು ಸುಲಭವಾಗಿ ದಾಟಿ ನಾಡಿನ ಕಡೆ ಬಂದಿರುವ ದೃಶ್ಯ ಸೆರೆಯಾಗಿದೆ.

     

    https://www.youtube.com/watch?v=wYq7yw565mk