Tag: ನಾಗರಾಜ್ ಸೋಮಯಾಜಿ

  • ‘ಮರ್ಯಾದೆ ಪ್ರಶ್ನೆ’ಗಾಗಿ ಹಾಡಿದ ನಟ ಶರಣ್

    ‘ಮರ್ಯಾದೆ ಪ್ರಶ್ನೆ’ಗಾಗಿ ಹಾಡಿದ ನಟ ಶರಣ್

    ವೆಂಬರ್ ನಲ್ಲಿ ತೆರೆ ಕಾಣಲಿರೋ ಮರ್ಯಾದೆ ಪ್ರಶ್ನೆ (Maryade Prashne) ಸಿನಿಮಾದ ಮೊದಲ ಹಾಡನ್ನು ಪ್ರಮೋದ್ ಮರವಂತೆ ಅವರು ಬರೆದು ನಟ ಶರಣ್ (Sharan) ಹೃದಯಾ ಅವರು ಹಾಡಿದ್ದಾರೆ. ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ.

    ಈ ಹಾಡಿನಲ್ಲಿ  ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ.

    ಈಗಾಗಲೇ ಬಿಡುಗಡೆ ಮಾಡಿರುವ ಕ್ಯಾರೆಕ್ಟರ್ ಪೋಸ್ಟರ್ ನಲ್ಲಿ ರಾಕೇಶ್ ಅಡಿಗ ಅವರು ಒಬ್ಬ ಕಾರ್ಯಕರ್ತನಾಗಿ  ಸುನಿಲ್ ರಾವ್ ಅವರು ಒಬ್ಬ ಡೆಲಿವರಿಬಾಯಾಗಿ,ಪೂರ್ಣಚಂದ್ರ ಮೈಸೂರು ಕ್ಯಾಬ್ ಡ್ರೈವರ್ ಆಗಿ, ತೇಜು ಬೆಳ್ವಾಡಿ ಅವರು ಸೇಲ್ಸ್ ಗರ್ಲ್ ಆಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿದ್ದಾರೆ.

    ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ  ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ.ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ. ದಿನ ಬೆಳಗಾದರೆ ಕೇಳುವ ಹಾಡಾಗಿರಬೇಕು ಎಂಬುದು ಈ ಹಾಡಿನ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ.

  • ‘ಮರ್ಯಾದೆ ಪ್ರಶ್ನೆ’ಗೆ ಕೊನೆಗೂ ಉತ್ತರ ಸಿಕ್ತು: ಇದು ಪ್ರದೀಪ್ ಕನಸು

    ‘ಮರ್ಯಾದೆ ಪ್ರಶ್ನೆ’ಗೆ ಕೊನೆಗೂ ಉತ್ತರ ಸಿಕ್ತು: ಇದು ಪ್ರದೀಪ್ ಕನಸು

    ಳೆದ ಎರಡ್ಮೂರು ದಿನದಿಂದ ಸ್ಯಾಂಡಲ್ ವುಡ್ ನಲ್ಲಿ ‘ಮರ್ಯಾದೆ ಪ್ರಶ್ನೆ’ ಎನ್ನುವ ಪದವು ನಾನಾ ರೂಪಗಳನ್ನು ತಾಳಿ ಸಂಚಲನ ಮೂಡಿಸಿತ್ತು. ಅನೇಕ ನಟ ನಟಿಯರು, ತಂತ್ರಜ್ಞರು, ಬಿಗ್ ಬಾಸ್ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ತಮ್ಮದೇ ಆದ ರೀತಿಯಲ್ಲಿ ಈ ಪದ ಪ್ರಯೋಗ ಮಾಡಿ, ಕುತೂಹಲ ಮೂಡಿಸಿದ್ದರು. ಇದು ಏನಿರಬಹುದು ಎನ್ನುವ ಚರ್ಚೆ ಕೂಡ ಸೃಷ್ಟಿಯಾಗಿತ್ತು. ಅದಕ್ಕೀಗ  ಉತ್ತರ ಸಿಕ್ಕಿದೆ. ಇದು ಸಿನಿಮಾದ ಟೈಟಲ್ ಅನ್ನುವ ವಿಚಾರ ಬಹಿರಂಗವಾಗಿದೆ.

    ಕೆಲ ತಿಂಗಳ ಹಿಂದೆ ಆರ್.ಜೆ ಪ್ರದೀಪ್ ತಮ್ಮ ಸಕ್ಕತ್ ಸ್ಟುಡಿಯೋ ಮೂಲಕ ಸಿನಿಮಾವೊಂದನ್ನು ತಯಾರಿಸಿರುವ ವಿಚಾರವನ್ನು ಹಂಚಿಕೊಂಡಿದ್ದರು. ನಾಗರಾಜ್ ಸೋಮಯಾಜಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆ ಚಿತ್ರಕ್ಕೆ ‘ಮರ್ಯಾದೆ ಪ್ರಶ್ನೆ’ (Maryade prashne) ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಪ್ರದೀಪ್ ಸೇರಿದಂತೆ ಚಿತ್ರತಂಡ ಹಂಚಿಕೊಂಡಿದೆ.

    ಕನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ (Sakkat Studio) ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ ‘ಲೂಸ್ ಕನೆಕ್ಷನ್’ ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ (Pradeep) ಮತ್ತು ಶ್ವೇತಾ ಆರ್ ಪ್ರಸಾದ್ (Shweta R Prasad) ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ ‘ಹನಿಮೂನ್’, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ ‘ಬೈ ಮಿಸ್ಟೇಕ್’ ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

    ಡಿಜಿಟಲ್ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಯಶಸ್ವಿಯಾಗಿಸಿ, ಸಕ್ಕತ್ ಸ್ಟುಡಿಯೋ ಈಗ ಸಿನಿಮಾ ಜಗತ್ತಿಗೆ ಕಾಲಿಡುವ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ತನ್ನ ಮೊಟ್ಟಮೊದಲ ಚಿತ್ರದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು. ಅದೇ ಚಿತ್ರವೇ ಮರ್ಯಾದೆ ಪ್ರಶ್ನೆ.

    ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ ‘ದಿ ಬೆಸ್ಟ್ ಆಕ್ಟರ್’ ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್ “ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮುಂಬರುವ ದಿನಗಳಲ್ಲಿ ವಿಶಿಷ್ಟ ಶೀರ್ಷಿಕೆ, ಪರಿಕಲ್ಪನೆ ಮತ್ತು ತಾರಾಗಣವನ್ನು ಅನಾವರಣಗೊಳಿಸುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಇದೀಗ ಕೇವಲ ಶೀರ್ಷಿಕೆಯನ್ನು ಮಾತ್ರ ಬಹಿರಂಗ ಪಡಿಸಿದೆ. ಮುಂದಿನ ದಿನಗಳಲ್ಲಿ ತಾರಾಗಣ ಹಾಗೂ ಮತ್ತಿತರ ವಿಷಯಗಳನ್ನು ಹಂಚಿಕೊಳ್ಳಬಹುದು.

     

    ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ ‘ಸಕ್ಕತ್’ ಕನ್ನಡ ಚಿತ್ರವನ್ನು  ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.

  • ಕೆ.ಆರ್.ಮಾರ್ಕೆಟ್ ನಲ್ಲಿ ಕಾಣಿಸಿಕೊಂಡ ದಿಯಾ ಬ್ಯೂಟಿ  ಖುಷಿ

    ಕೆ.ಆರ್.ಮಾರ್ಕೆಟ್ ನಲ್ಲಿ ಕಾಣಿಸಿಕೊಂಡ ದಿಯಾ ಬ್ಯೂಟಿ ಖುಷಿ

    ದಿಯಾ (Dia) ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಸರಳ ಸಿಗ್ದ ಸುಂದರಿ ಖುಷಿ ರವಿ (Khushi Ravi) ಹೊಸ ಲುಕ್ ನಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿದ್ದಾರೆ. ಅದೂ ಅತ್ಯಂತ ಜನಬೀಡು ಪ್ರದೇಶವಾದ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ (K.R. Market) ಎನ್ನುವುದು ಮತ್ತೊಂದು ವಿಶೇಷ.

    ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ ಬೆಳಂ ಬೆಳಗ್ಗೆ ಹೂವುಗಳ ಮಧ್ಯೆ ಫೋಟೋಗೆ (Photoshoot) ಫೋಸ್ ಕೊಟ್ಟಿದ್ದಾರೆ. ತಿಳಿನೀಲಿ ಬಣ್ಣದ ಸೀರೆಯುಟ್ಟು ಹೋಮ್ಲಿ ಲುಕ್ ನಲ್ಲಿ ಕಂಗೊಳಿಸಿರುವ ಖುಷಿಯ ಚೆಂದದ ಪಟ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನೂ ಓದಿ:ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

    ಹೂವುಗಳ‌ ಮಧ್ಯೆ ಮತ್ತೊಂದು ಹೂವು ನೋಡಿ ಫ್ಯಾನ್ಸ್ ಮನಮೋಹಕ ಎನ್ನುತ್ತಿದ್ದಾರೆ. ವಿಂಟೇಜ್ ಲುಕ್ ನಲ್ಲಿ ಬಹಳ ಸೊಗಸಾಗಿ ಮೂಡಿಬಂದಿರುವ ಫೋಟೋಶೂಟ್ ಹಿಂದಿನ ಶಕ್ತಿ ನಿರ್ಮಾಪಕ ನಾಗರಾಜ್ ಸೋಮಯಾಜಿ.

    ಈ ಸ್ಪೆಷಲ್ ಫೋಟೋಶೂಟ್ ಐಡಿಯಾ ಹಾಗೂ ಫೋಟೋಗ್ರಫಿ ಕೈಚಳಕ ಇವರದ್ದೆ. ತಮ್ಮದೇ ಫೋಕಸ್ ಸ್ಟುಡಿಯೋನಡಿ ಬ್ಯೂಟಿಫುಲ್ ಫೋಟೋಶೂಟ್ ಮಾಡಿದ್ದಾರೆ.  ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಕಾರ್ಯಕ್ರಮಗಳು ಸೇರಿದಂತೆ ಒಂದಿಷ್ಟು ತಾರೆಯರಿಗೆ ಫೋಕಸ್ ಫೋಟೋಗ್ರಫಿ ಸ್ಟುಡಿಯೋ ಅಚ್ಚುಮೆಚ್ಚು.

    ಸೆಲೆಬ್ರಿಟಿಗಳ ಫೋಟೋಶೂಟ್, ವೆಡ್ಡಿಂಗ್ ಫೋಟೋಗ್ರಫಿ ಹಾಗೂ ನಾನಾ ಕಾರ್ಯಕ್ರಮಗಳ ಸೇರಿದಂತೆ ಇನ್ನಿತರ ಶುಭ ಸಂದರ್ಭದ ಚೆಂದದ ಫೋಟೋಗಳನ್ನು ಸೆರೆಹಿಡಿಯುವಲ್ಲಿ ನಾಗರಾಜ್ ಸೋಮಯಾಜಿ  (Nagaraj Somyaji)ಹೆಸರುವಾಸಿ.

  • `ಪುಕ್ಸಟ್ಟೆ ಲೈಫು’ ನಿರ್ಮಾಪಕನ ಹೊಸ ಚಿತ್ರದಲ್ಲಿ `ಗಿಲ್ಕಿ’ ನಟಿ ಚೈತ್ರಾ ಆಚಾರ್

    `ಪುಕ್ಸಟ್ಟೆ ಲೈಫು’ ನಿರ್ಮಾಪಕನ ಹೊಸ ಚಿತ್ರದಲ್ಲಿ `ಗಿಲ್ಕಿ’ ನಟಿ ಚೈತ್ರಾ ಆಚಾರ್

    ಣ್ಣದ ಲೋಕದಲ್ಲಿ ದಿನ ಕಳೆದಂತೆ ಹೊಸ ಹೊಸ ನಾಯಕಿಯರ ಪರಿಚಯವಾಗ್ತಿದೆ. ಆದ್ರೆ ಪ್ರತಿಭೆಯ ಜೊತೆಗೆ ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರ್ತಾರೆ. ಈ ಸಾಲಿನಲ್ಲಿ ಪ್ರತಿಭಾನ್ವಿತ ನಟಿ ಚೈತ್ರಾ ಆಚಾರ್ ಕೂಡ ಒಬ್ಬರು.

    ಈಗಾಗಲೇ ಮಹಿರಾ, ಗಿಲ್ಕಿ, ತಲೆದಂಡ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ವಿಶೇಷ ಪಾತ್ರಗಳ ಮೂಲಕ ಮೋಡಿ ಮಾಡಿರೋ ನಟಿ ಚೈತ್ರಾ ಈಗ `ಅಕಟಕಟ’ ಸಿನಿಮಾದಲ್ಲಿ ನಾಯಕಿಯಾಗಿ  ಕಾಣಿಸಿಕೊಳ್ತಿದ್ದಾರೆ..

     

    ಈ ಹಿಂದೆ `ಪುಕ್ಸಟ್ಟೆ ಲೈಫು’ ಚಿತ್ರ ನಿರ್ಮಾಣ ಮಾಡಿದ್ದ ನಾಗರಾಜ್ ಸೋಮಯಾಜಿ ಇದೀಗ `ಅಕಟಕಟ’ ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ. `ಅಕಟಕಟ’ ಸಿನಿಮಾದಲ್ಲಿ ಜಾನಕಿ ಎಂಬ ಚೈತ್ರಾ ಆಚಾರ್ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಚಿತ್ರದ ನಾಯಕಿಯ ಲುಕ್‌ನ್ನ ಚಿತ್ರತಂಡ ಇದೀಗ ರಿವೀಲ್ ಮಾಡಿದೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ,ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ ಮಧ್ಯಮ ವರ್ಗದ ಹುಡುಗಿಯ ಪಾತ್ರದಲ್ಲಿ ಚೈತ್ರಾ ಕಾಣಿಸಿಕೊಳ್ತಿದ್ದಾರೆ. ಇಂಥ ನಾಯಕಿಯ ಬದುಕಿಗೆ ನಾಯಕ ಎಂಟ್ರಿ ಕೊಟ್ಟಾಗ ಏನಾಗುತ್ತೇ ಅನ್ನೋದೇ ಚಿತ್ರದ ಸ್ಟೋರಿ. ಇದನ್ನು ಓದಿ: ಪುಷ್ಪ-2ನಲ್ಲೂ ಸಮಂತಾ- ಆದ್ರೆ ಐಟಂ ಸಾಂಗ್‌ನಲ್ಲಿ ಅಲ್ಲ?

    ನಿರ್ದೇಶಕ ನಾಗರಾಜ್ ಸೋಮಯಾಜಿ ಮೂಲತಃ ಫೋಟೋಗ್ರಾಫರ್,ರಂಗಭೂಮಿಯಲ್ಲಿಯೂ ಸಕ್ರಿಯರಾಗಿರುವ ಅವರು ಕಿರುಚಿತ್ರವೊಂದನ್ನು ನಿರ್ದೇಶನ ಮಾಡಿದ್ದರು. ಈಗ `ಅಕಟಕಟ’ ಸಿನಿಮಾಗೆ ಚಿತ್ರಕಥೆ ಬರೆದು ಡೈರೆಕ್ಷನ್ ಕೂಡ ನಿರ್ದೇಶಕ ನಾಗರಾಜ್ ಅವರೇ ಮಾಡ್ತಿದ್ದಾರೆ. ಸದ್ಯ ಭಿನ್ನ ಟೈಟಲ್‌ನಿಂದ ಗಮನ ಸೆಳೆಯುತ್ತಿರೋ `ಅಕಟಕಟ’ ಚಿತ್ರ, ಮುಂದಿನ ದಿನಗಳಲ್ಲಿ ಅದ್ಯಾವ ರೀತಿ ಸೌಂಡ್ ಮಾಡಬಹುದು ಅಂತಾ ಕಾದು ನೋಡಬೇಕಿದೆ.

  • ಅಕಟಕಟ ಹುಡುಗಿಯ ಅಂತರಂಗ: ಹೊಸ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್

    ಅಕಟಕಟ ಹುಡುಗಿಯ ಅಂತರಂಗ: ಹೊಸ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್

    ಟಿ ಚೈತ್ರಾ ಜೆ ಆಚಾರ್ ‘ಬ್ಲಿಂಕ್’ ಸಿನಿಮಾ ನಂತರ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಅಕಟಕಟ ಹೆಸರಿನ ಈ ಸಿನಿಮಾದಲ್ಲಿ ಗ್ಲಾಮರ್ ಗೊಂಬೆ ಚೈತ್ರಾ, ಮಧ್ಯಮದ ವರ್ಗದ ಕುಟುಂಬದ ಹೆಣ್ಣು ಮಗಳ ಪಾತ್ರವನ್ನು ನಿರ್ವಹಿಸಲಿದ್ದಾರಂತೆ.

    ಅಕಟಕಟ ಸಿನಿಮಾವನ್ನು ನಾಗರಾಜ್ ಸೋಮಯಾಜಿ ನಿರ್ದೇಶಿಸಿಸುತ್ತಿದ್ದು, ಈ ಸಿನಿಮಾದಲ್ಲಿ ಮತ್ತೊಬ್ಬ ಹೊಸ ಪ್ರತಿಭೆಗೆ ನರ್ತನ್ ಗೆ ಅವಕಾಶ ನೀಡಲಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಚೈತ್ರಾ ಜೆ ಆಚಾರ್ ತಮ್ಮ ಪಾತ್ರದ ಕುರಿತಾಗಿ ಕೆಲವು ಹಿಂಟ್ ಬಿಟ್ಟುಕೊಟ್ಟಿದ್ದಾರೆ.  ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ‘ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಾನಕಿ ಎನ್ನುವ ಪಾತ್ರವನ್ನು ನಿರ್ವಹಿಸುತ್ತೇನೆ. ಜಾನಕಿ ಜೀವನದಲ್ಲಿ ಒಳ್ಳೆಯ ವಿಚಾರ, ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾಳೆ. ಏಕೆಂದರೆ ತನ್ನ ಜೀವನವನದ ದಿಕ್ಕನ್ನು ಬದಲಾಯಿಸುವ ಏಕೈಕ ವಿಷಯ ಶಿಕ್ಷಣ ಎಂದು ಆಕೆ ಭಾವಿಸುತ್ತಾಳೆ. ಈ ಸಿನಿಮಾದಲ್ಲಿ ನಾನು ಸಾಂಪ್ರದಾಯಿಕ ಉಡುಗೆಯಲ್ಲೇ ಕಾಣಿಸಿಕೊಳ್ಳುತ್ತೇನೆ’ ಎಂದಿದ್ದಾರೆ ಚೈತ್ರ ಆಚಾರ್.


    ‘ವೃತ್ತಿ ಬದುಕಿನ ಆರಂಭಿಕ ಹಂತದಲ್ಲಿ ಇಂತಹ ಸವಾಲಿನ ಪಾತ್ರಗಳು ಸಿಕ್ಕಿರುವುದು ನನ್ನ ಅದೃಷ್ಟವಾಗಿದೆ. ಗ್ಲಾಮರಸ್, ನಟನೇ ಎಂದು ಪಾತ್ರಗಳನ್ನು ನಾನು ಎಂದು ವರ್ಗೀಕರಿಸುವುದಿಲ್ಲ. ನನಗೆ ಸಿಕ್ಕ ಪಾತ್ರಗಳನ್ನು ಮಾಡುತ್ತೇನೆ. ಒಳ್ಳೆಯ ಪಾತ್ರಗಳು ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಸ್ಕ್ರಿಪ್ಟ್‌ಗಳನ್ನು  ಆಯ್ಕೆ ಮಾಡುವಾಗಲೂ ನಾನು, ಈ ಸಿನಿಮಾ ನಂತರ ನಾನು ಏನಾದರೂ ಹೊಸತು ಕಲಿಯಬೇಕು. ಹಾಗಿದ್ದರೆ ಆ ಪಾತ್ರವನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

  • ‘ಅಕಟಕಟ’ ಎನ್ನುತ್ತ ಹೊಸತಂಡದೊಂದಿಗೆ ಮತ್ತೆ ಬಂದ್ರು ನಿರ್ದೇಶಕ ನಾಗರಾಜ್ ಸೋಮಯಾಜಿ

    ‘ಅಕಟಕಟ’ ಎನ್ನುತ್ತ ಹೊಸತಂಡದೊಂದಿಗೆ ಮತ್ತೆ ಬಂದ್ರು ನಿರ್ದೇಶಕ ನಾಗರಾಜ್ ಸೋಮಯಾಜಿ

    ಸಂಚಾರಿ ರಂಗಭೂಮಿಯಲ್ಲಿ ಪಳಗಿ ತಮ್ಮದೇ ಆದ ರಂಗತಂಡ ಕಟ್ಟಿಕೊಂಡು ತಮ್ಮ ಪ್ರತಿಭೆ ಓರೆಗೆ ಹಚ್ಚುತ್ತ ಗಮನ ಸೆಳೆಯುತ್ತಿರುವವರು ನಿರ್ದೇಶಕ ನಾಗರಾಜ್ ಸೋಮಯಾಜಿ. ದಿ ಬೆಸ್ಟ್ ಆಕ್ಟರ್ ಟೆಲಿ ಫಿಲಂ ಮೂಲಕ ಸಖತ್ ಸಂಚಲನ ಸೃಷ್ಟಿಸಿರುವ ಇವರು ತಮ್ಮ ಕೆಲಸದ ಗುಣಮಟ್ಟವನ್ನು ತೋರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿರ್ಮಾಪಕರಾಗಿಯೂ ಪಳಗಿರುವ ಇವರು ಇದೀಗ ಪೂರ್ಣ ಪ್ರಮಾಣದ ಸಿನಿಮಾ ನಿರ್ದೇಶನದತ್ತ  ತೊಡಗಿಕೊಂಡಿದ್ದಾರೆ. ಅಂದ್ಹಾಗೆ ನಾಗರಾಜ್ ಸೋಮಯಾಜಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರದ ಹೆಸರು ‘ಅಕಟಕಟ’.

    ‘ಅಕಟಕಟ’ ಟೈಟಲ್ ಕೇಳಿದಾಕ್ಷಣ ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಈ ಮೊದಲೇ ಕೇಳಿಬಂದಿತ್ತಲ್ವಾ? ಲೂಸ್ ಮಾದ ಯೋಗಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾ ಇದಲ್ಲವೇ.? ಎಂಬ ಪ್ರಶ್ನೆಗಳು ಮೂಡಿಬರುತ್ತವೆ. ಎಲ್ಲಾ ಅಂದುಕೊಂಡಂತೆ ಆಗಿದ್ರೆ ನಾಗರಾಜ್ ಸೋಮಯಾಜಿ ಲೂಸ್ ಮಾದ ಯೋಗಿಗೆ ಸಿನಿಮಾ ಡೈರೆಕ್ಟ್ ಮಾಡಬೇಕಿತ್ತು. ಆದ್ರೆ ಇದೆಲ್ಲ ಈಗ ಹಳೆಯ ಸುದ್ದಿ. ಹಾಗೆಂದು ಅಕಟಕಟ ಪ್ರಾಜೆಕ್ಟ್ ನಿಂತಿಲ್ಲ. ಇದೀಗ ಹೊರಬಿದ್ದಿರುವ ಹೊಸ ಸುದ್ದಿಯಂದ್ರೆ ನಾಗರಾಜ್ ಸೋಮಯಾಜಿ ಅಕಟಕಟ ಸಿನಿಮಾ ಮೂಲಕ ಹೊಸಮುಖವನ್ನು ನಾಯಕ ನಟನಾಗಿ ಪರಿಚಯಿಸುತ್ತಿದ್ದಾರೆ. ಆದ್ರೆ ಆ ನಟ ಯಾರು ಅನ್ನೋದಕ್ಕೆ ಉತ್ತರ ಜನವರಿ 14ಕ್ಕೆ ಸಿಗಲಿದೆ.

    ‘ಅಕಟಕಟ’ ಸಿನಿಮಾ ಸಬ್ಜೆಕ್ಟ್ ನೊಂದಿಗೆ ಮತ್ತೆ ಬಂದಿರುವ ನಿರ್ದೇಶಕರು ಚಿತ್ರದ ನಾಯಕ ನಟ ಯಾರು, ಚಿತ್ರತಂಡದಲ್ಲಿ ಯಾರ‍್ಯಾರು ಇರ್ತಾರೆ, ನಿರ್ಮಾಪಕರು ಯಾರು ಇದೆಲ್ಲವನ್ನು ಸಸ್ಪೆನ್ಸ್ ಆಗಿ ಇಟ್ಟಿದ್ದಾರೆ. ಜನವರಿ 14ಕ್ಕೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಿದ್ದು ಅಂದೇ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದ್ದು, ಜನವರಿ 14ರ ಸಂಕ್ರಾಂತಿ ಹಬ್ಬದಂದು ಅಕಟಕಟ ಚಿತ್ರಕ್ಕೆ ಹೊಸ ಆರಂಭ ಸಿಗಲಿದೆ.