Tag: ನಾಗೇಶ್

  • ದರ್ಶನ್ ಜಾಮೀನು ಅರ್ಜಿ: ಇವತ್ತಾದರೂ ಸಿಗತ್ತಾ ಬೇಲ್?

    ದರ್ಶನ್ ಜಾಮೀನು ಅರ್ಜಿ: ಇವತ್ತಾದರೂ ಸಿಗತ್ತಾ ಬೇಲ್?

    ಳ್ಳಾರಿ ಜೈಲಿನಲ್ಲಿ ಇದ್ದುಕೊಂಡು ಜಾಮೀನಿಗಾಗಿ ಕಾಯುತ್ತಿರುವ ದರ್ಶನ್ (Darshan) ಜಾಮೀನು (Bail) ಅರ್ಜಿ ವಿಚಾರಣೆ ಇಂದು ಮುಂದುವರೆಯಲಿದೆ. ಇಂದೂ ಸಹ ವಾದ ಮುಂದುವರೆಸಲಿದ್ದಾರೆ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್. ನಿನ್ನೆ ಚಾರ್ಜ್ ಶೀಟ್ ನಲ್ಲಿನ ಲೋಪದೋಷಗಳ ಬಗ್ಗೆ ಬೆಳಕು ಚೆಲ್ಲಿದ್ದರು ಸಿವಿ ನಾಗೇಶ್, ಸ್ವ ಇಚ್ಚಾ ಹೇಳಿಕೆ , ಸ್ಪಾಟ್ ಮಹಜರ್, ಸೀಜ್ ಮಾಡಿದ ಐಟಮ್ ಗಳಿಗೆ ಸಾಮ್ಯತೆಯಿಲ್ಲ ಅಂತ ಕೋರ್ಟ್ ಗಮನಕ್ಕೆ ತಂದಿದ್ದರು. ತನಿಖಾಧಿಕಾರಿ ಸಾಕ್ಷಿಗಳನ್ನ ಸೃಷ್ಟಿಸಿದ್ದಾರೆ. ಇದೊಂದು ವರ್ಸ್ಟ್ ಚಾರ್ಜ್ ಶೀಟ್ ಅಂತಾ ವಾದಿಸಿದ್ದ ಸಿವಿ ನಾಗೇಶ್ ಅವರು, ಇಂದು ವಾದ ಕಂಟಿನ್ಯೂ ಮಾಡೋದಾಗಿ ಹೇಳಿದ್ದರು. ಹೀಗಾಗಿ ಇಂದು ಮದ್ಯಾಹ್ನ ೧೨.೩೦ ಕ್ಕೆ ತಮ್ಮ ವಾದ ಮುಂದುವರೆಸಲಿದ್ದಾರೆ ದರ್ಶನ್ ಪರ ವಕೀಲರು. ಸಿವಿ ನಾಗೇಶ್ ರ ವಾದ ಮುಗಿದ ಬಳಿಕ ತಮ್ಮ ವಾದ ಮಂಡಿಸಲಿದ್ದಾರೆ ಎಸ್ ಪಿಪಿ ಪ್ರಸನ್ನಕುಮಾರ್.

    ಕೋರ್ಟಿನಲ್ಲಿ ನಿನ್ನೆ ನಡೆದದ್ದು ಏನು?

    ವೇಳೆ ಪ್ರಕರಣದ ತನಿಖೆ (Investigation) ತುಂಬಾ ಕೆಟ್ಟದ್ದಾಗಿ ನಡೆದಿದೆ. ಸುಪ್ರೀಂ ಕೋರ್ಟ್ 2 ತೀರ್ಪು ಉಲ್ಲೇಖಿಸಿ, ಇಡೀ ಪ್ರಕರಣ ಕಪೋಲಕಲ್ಪಿತ ಕಥೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ತನಿಖಾಧಿಕಾರಿಯೇ ಸೃಷ್ಟಿಸಿದ್ದಾರೆ ಎಂದು ಪ್ರಬಲ ವಾದ ಮಂಡಿಸಿದರು. ವಾದ ಆರಂಭಿಸುತ್ತಿದ್ದಂತೆ ಮೊದಲು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು. ವಿಚಾರಣೆ ಸಂದರ್ಭದಲ್ಲಿ ಮಾಧ್ಯಮಗಳು ಟ್ರಯಲ್ ಮಾಡಿದ್ದಾವೆ. ಸ್ವಇಚ್ಚಾ ಹೇಳಿಕೆ, ಫೋಸ್ಟ್ ಮಾರ್ಟ್ಂ ರಿಪೋರ್ಟ್, ವಿಟ್ನೆಸ್ ಅನ್ನು ಬಿತ್ತರ ಮಾಡಿವೆ. ತನಿಖೆಯ ಪ್ರತೀ ಹಂತದಲ್ಲೂ ಕೂಡ ಟ್ರಯಲ್ ಮಾಡಿದ್ದಾವೆ. ಜೀವಾವಧಿ ಅಥವಾ ಸಮನಾಂತರ ಶಿಕ್ಷೆ ಹೊಂದಿರೋ ಪ್ರಕರಣ ಇದು ಇದನ್ನು ವಿಧಿಸೋದು ಬಾಕಿ ಇದೆ. ಇನ್ನೂ ಕೋರ್ಟ್ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಹೇಳಿದರು.

    ಎಸ್ಪಿಪಿ (SPP) ಅತ್ಯುತ್ತಮ ತನಿಖೆ ಅಂತ ಕೋರ್ಟ್ಗೆ ಹೇಳಿದ್ದಾರೆ. ಆದರೆ ಇದು ನನ್ನ ಪ್ರಕಾರ ತುಂಬಾ ಕೆಟ್ಟದಾದ ತನಿಖೆ ಎನ್ನುತ್ತಾ ಸುಪ್ರೀಂ ಕೋರ್ಟ್ನ ಎರಡು ತೀರ್ಪುಗಳ ಉಲ್ಲೇಖಿಸಿ ವಾದ ಮಂಡಿಸಿದರು. ವೇಳೆ ತೀರ್ಪಿನ ಪ್ರತಿಯನ್ನು ಎಸ್ಪಿಪಿ ಕೇಳಿದರು. ಅದಕ್ಕೆ ಗರಂ ಆದ ಸಿ.ವಿ ನಾಗೇಶ್, ನಾನು ಕೆಲಸ ಮಾಡಿ ತಂದಿರೋ ತೀರ್ಪು ಇದು. ನಾನು ನಿಮಗೆ ಪ್ರತಿ ಕೊಡೋಲ್ಲ, ಪ್ರಸನ್ನ ನೀವೇ ಹುಡುಕಿ ಎಂದರು.

    ರೇಣುಕಾ ಮುಖ ನಾಯಿ ಕಚ್ಚಿ ತಿಂದಿದೆ.
    ಮೀಡಿಯಾದಲ್ಲಿ ದಿನಾ ಟ್ರಯಲ್ ಮಾಡಿ ಪ್ರಚಾರ ನೀಡುತ್ತಾ ಇದ್ದಾರೆ. ಮೀಡಿಯಾದಲ್ಲಿ ಆರೋಪಿಗಳ ಸ್ವ ಇಚ್ಛಾ ಹೇಳಿಕೆ ಬಂದಿದೆ. ಅಲ್ಲದೇ ಮೃತ ದೇಹದ ಫೋಟೋ ತೋರಿಸಿದ್ದಾರೆ. ಆತನ ಮುಖವನ್ನು ನಾಯಿ ತಿಂದಿದೆ, ಅಂತ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಆದರೆ ಮಾಧ್ಯಮದಲ್ಲಿ ಇದನ್ನೇ ಕ್ರೌರ್ಯ ಅಂತ ಹೇಳಿದ್ರು. ಹಲ್ಲೆ ಎಂದು ಬಿಂಬಿಸಿ ಸುದ್ದಿ ಸಹ ಮಾಡಿವೆ. ನಾಯಿ ಕಚ್ಚಿ ಅವನ ಮುಖ ತಿಂದಿದೆ. ಇದೆನ್ನೆಲ್ಲಾ ಪರಿಗಣಿಸಿ ಕೋರ್ಟ್ ತನಿಖಾಧಿಕಾರಿಗೆ ತರಾಟೆ ತೆಗೆದುಕೊಳ್ಳಬೇಕು ಎಂದು ವಾದಿಸಿದರು.

    ನೀರಿನ ಬಾಟಲ್ ಅನ್ನು ಸಾಕ್ಷಿ ಅಂದಿದ್ದಾರೆ:
    ಪ್ರಕರಣದಲ್ಲಿ ಎಲ್ಲಾ ರಿಕವರಿ ಸುಳ್ಳು ರಿಕವರಿ ಆಗಿದೆ. ಎಲ್ಲಾ ಸಾಕ್ಷ್ಯಗಳನ್ನು ತನಿಖಾಧಿಕಾರಿಯೇ ಸೃಷ್ಟಿ ಮಾಡಿದ್ದಾರೆ. ಮರದ ಕೊಂಬೆಗಳು, ಹಗ್ಗದ ತುಂಡುಗಳನ್ನು ರಿಕವರಿ ಎಂದು ತೋರಿಸಿದ್ದಾರೆ. ನೀರಿನ ಬಾಟಲ್ ಅನ್ನು ಸಾಕ್ಷಿ ಅಂದಿದ್ದಾರೆ. 12-6 ರಲ್ಲಿ ಇದೆಲ್ಲವನ್ನೂ ತಮ್ಮ ವಶಕ್ಕೆ ಪಡೆದಿದ್ದಾರೆ. ಆದರೆ 9 ಜೂನ್ ಅಲ್ಲಿಯೇ ಪೊಲೀಸರ ವಶದಲ್ಲಿ ಇತ್ತು. ವಸ್ತುಗಳನ್ನು ವಶಕ್ಕೆ ಪಡೆದಿರೋದಾಗಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ. ಇಲ್ಲಿ ದಿನಾಂಕಗಳ ವ್ಯತ್ಯಾಸ ಕಂಡುಬಂದಿದೆ ಎಂದು ಹೇಳಿದರು.

     

    ಸ್ವಇಚ್ಚಾ ಹೇಳಿಕೆಯಲ್ಲಿ ಚಪ್ಪಲಿ, ಪೊಲೀಸರಿಗೆ ಸಿಕ್ಕಿದ್ದು ಶೂ:
    ಅಲ್ಲದೇ ದರ್ಶನ್ ಸ್ವಇಚ್ಚಾ ಹೇಳಿಕೆಯಲ್ಲಿ ಚಪ್ಪಲಿ ಅಂತ ಇದೆ. ಅದರೆ ಪೊಲೀಸರು ವಶಕ್ಕೆ ಪಡೆದಿರೋದು ಶೂ. ಸ್ವಇಚ್ಛಾ ಹೇಳಿಕೆಯನ್ನ ಬದಲಾಯಿಸಲಾಗಿದೆ. ದರ್ಶನ್ ಘಟನೆ ವೇಳೆ ಧರಿಸಿದ್ದ ಬಟ್ಟೆ, ಚಪ್ಪಲಿಗಳನ್ನ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ಮನೆಗೆ ಬಂದರೆ ತೋರಿಸುವುದಾಗಿ ಹೇಳಿದ್ದಾರೆ. ಆದ್ರೆ, ಮನೆಯಲ್ಲಿ ಶೂಗಳು ಹೇಗಾದವು? ಇಷ್ಟೇಲ್ಲಾ ಆದ್ಮೇಲೆ ಹೇಳಿಕೆ ಬದಲಿಸಿದ್ದಾರೆ. ಮೊದಲು ಹೇಳಿಕೆ ಕೊಟ್ಟಾಗ ಚಪ್ಪಲಿ ಚಪ್ಪಲಿ ಅಂದಿದ್ದಾರೆ. ಕೊನೆಗೆ ಅದನ್ನೇ ಶೂ ಎಂದು ಹೇಳಿಕೆ ಬದಲಿಸಿದ್ದಾರೆ ಎಂದು ವಾದ ಮಂಡನೆ ಮಾಡಿದರು.

     

    ರಕ್ತದ ಕಲೆ ಬಿಟ್ಟು ಉಳಿದೆಲ್ಲ ಕಡೆ ತೊಳೆದಿದ್ದರಂತೆ:
    ಪೊಲೀಸರು ಮೊದಲ ಬಾರಿಗೆ ಹೋದಾಗ ರಕ್ತದ ಕಲೆ ಇತ್ತು ಎನ್ನಲಾದ ಬಟ್ಟೆ ಸಿಕ್ಕಿಲ್ಲ. ಆಮೇಲೆ ಅದೇ ಬಟ್ಟೆಯನ್ನು ಶರ್ಫ್ ಹಾಕಿ ತೊಳೆದಿದ್ದಾರೆ ಎಂದು ಹೇಳಿಕೆ ದಾಖಲಿಸಲಾಗಿದೆ. ರಕ್ತದ ಕಲೆ ಇರೋ ಜಾಗ ಬಿಟ್ಟು, ಇನ್ನೆಲ್ಲಾ ಕಡೆ ಬಟ್ಟೆ ತೊಳೆದಿದ್ದರು ಅನ್ಸುತ್ತೆ. ಅದಕ್ಕೆ ರಕ್ತದ ಕಲೆ ಸಿಕ್ಕಿದೆ ಎಂದು ವ್ಯಂಗ್ಯವಾಡಿದರು. ಟೀ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಶರ್ಫ್ ಹಾಕಿ ತೊಳೆದು ಒಣಗಿಸಲಾಗಿತ್ತು. ಶನಿವಾರ ಕೊಲೆ ಆಗಿದೆಭಾನುವಾರ ಬಟ್ಟೆ ಇಟ್ಟಿದ್ದಾರೆ. ಸೋಮವಾರ ಸುಶೀಲಮ್ಮ ತೊಳೆದು ಒಣಗಿ ಹಾಕಿದ್ದಾರೆ. ಇಷ್ಟೇಲ್ಲಾ ಉತ್ತಮವಾಗಿ ತೊಳೆದ್ರೂ ಕೂಡ ರಕ್ತದ ಕಲೆ ಸಿಕ್ಕಿದೆ ಅಂತೆ ಎಂದು ಹಾಸ್ಯಮಾಡಿದರು.

  • ‘ಸಂಸ್ಕಾರ ಭಾರತ’ದಲ್ಲಿ ಅನಾಮಿಕನ ರೋಚಕ ಸ್ಟೋರಿ

    ‘ಸಂಸ್ಕಾರ ಭಾರತ’ದಲ್ಲಿ ಅನಾಮಿಕನ ರೋಚಕ ಸ್ಟೋರಿ

    ’ಸಂಸ್ಕಾರ ಭಾರತ’ (Sanskar Bharat) ಎನ್ನುವ ಚಿತ್ರದ ಮುಹೂರ್ತ ಸಮಾರಂಭವು ರಾಜಾಜಿನಗರದ ಗಣೇಶ ದೇವಸ್ಥಾನದಲ್ಲಿ ನಡೆಯಿತು. ಡಾ.ಟಿ.ಶಿವಕುಮಾರ್ ನಾಗರನವಿಲೆ, ಅಧ್ಯಕ್ಷರು, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಇವರು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಾಗೇಶ್.ಎನ್ (Nagesh) ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವುದು ಎರಡನೇ ಅನುಭವ. ಡಾ.ವಿ.ನಾಗರಾಜ್ ಅವರು ಗ್ಲೋಬಲ್ ಮ್ಯಾನ್ ಪ್ರೊಡಕ್ಷನ್ಸ್ ಅಡಿಯಲ್ಲಿ ಬಂಡವಾಳ ಹೂಡುತ್ತಿದ್ದಾರೆ. ’ಅನಾಮಿಕ ಮತ್ತು ಇತರೆ ಕಥೆಗಳು’ ಎನ್ನುವ ಕಥಾಸಂಕಲನದಿಂದ ಆಯ್ದ ’ಅನಾಮಿಕ’ ಕಥೆಯು ಚಿತ್ರರೂಪದಲ್ಲಿ ಮೂಡಿಬರುತ್ತಿದೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ?

    ನಾಯಕ ಭಾರತೀಯ ಸಂಪ್ರದಾಯದವನು. ವೈಚಾರಿಕತೆ ಹಾಗೂ ಅದರ ಹಿಂದಿರುವ ವೈಜ್ಞಾನಿಕತೆಯ ಕುರಿತಾಗಿ ಸಂಶೋಧನೆ ನಡೆಸಲು ಅನಾಮಿಕ ಹೆಸರಿನಲ್ಲಿ ಲೇಖನ ಬರೆಯುತ್ತಿದ್ದ ಪಂಡಿತರೊಬ್ಬರನ್ನು ಅರಸಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ಹುಡುಕಾಡುವಾಗ ಅವನಿಗೆ ಕಾಡುವ ಅನೇಕ ಜೀವಂತ ಸಮಸ್ಯೆಗಳು ಸನ್ನಿವೇಶಗಳ ರೂಪದಲ್ಲಿ ಎದುರಾಗುತ್ತದೆ. ಮುಂದೆ ಅದನ್ನು ಹೇಗೆ ಎದುರಿಸುತ್ತಾನೆ, ಅನಾಮಿಕನನ್ನು ಯಾವ ರೀತಿ ಕಂಡು ಹಿಡಿಯುತ್ತಾನೆ? ಆ ಮೂಲಕ ಸಂಶೋಧನೆ ನಡೆಸಿ ನಮ್ಮ ಸಂಸ್ಕ್ರತಿಯನ್ನು ಹೇಗೆ ಎತ್ತಿ ಹಿಡಿಯುತ್ತಾನೆ ಎಂಬುದು ಚಿತ್ರದ ಸಾರಾಂಶವಾಗಿದೆ. ದೃಶ್ಯಗಳು ಸಹಜತೆಗೆ ಹತ್ತಿರ ಇರುವಂತೆ ಸೆರೆಹಿಡಿಯಲಾಗುತ್ತಿದೆ.

    ಸ್ವದೇಶವನ್ನು ಇಷ್ಟ ಪಡುವ ಹುಡುಗನಾಗಿ ಅಶೋಕ್ (Ashok) ನಾಯಕ. ಸದಾ ವಿದೇಶದ ಬಗ್ಗೆ ವ್ಯಾಮೋಹ ಹೊಂದಿರುವ ಹುಡುಗಿಯಾಗಿ ಅರ್ಚನಾ (Archana) ನಾಯಕಿ. ಮತ್ತೊಂದು ಮುಖ್ಯ ಪಾತ್ರದಲ್ಲಿ ಎಂ.ಡಿ.ಕೌಶಿಕ್ ಇವರೊಂದಿಗೆ ಎಂ.ಕೆ.ಮಠ, ಗಿರೀಶ್‌ಬೈಂದೂರು, ನಾಗರಾಜ್.ವಿ, ಪೂರ್ಣಿಮಾ, ರಾಧಿಕಾ, ಅನಿಲ್, ಹಮ್ಜಾ, ಬೇಬಿ ಫಾತಿಮಾ, ಮಾಸ್ಟರ್ ಫಹದ್ ನಟಿಸುತ್ತಿದ್ದಾರೆ. ಡಾ.ದೊಡ್ಡೆರಂಗೇಗೌಡ ಸಾಹಿತ್ಯದ ಗೀತೆಗಳಿಗೆ ರಾಜ್‌ಭಾಸ್ಕರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ಪಿ.ವಿ.ಆರ್.ಸ್ವಾಮಿ, ಸಂಕಲನ ನಾಗೇಶ್ ನಾರಾಯಣ್, ಪ್ರಸಾಧನ ಶಿವು ಚಿತ್ರಕ್ಕಿದೆ. ಕುಂದಾಪುರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣವನ್ನು 25 ದಿನಗಳ ಕಾಲ ಮೂರು ಹಂತಗಳಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮದರಸಾಗಳಿಗಾಗಿ ವಿಶೇಷ ಮಂಡಳಿ ರಚನೆಗೆ ಪ್ಲಾನ್- ತಜ್ಞರ ವರದಿ ಕೇಳಿದ ಸಚಿವ ನಾಗೇಶ್

    ಮದರಸಾಗಳಿಗಾಗಿ ವಿಶೇಷ ಮಂಡಳಿ ರಚನೆಗೆ ಪ್ಲಾನ್- ತಜ್ಞರ ವರದಿ ಕೇಳಿದ ಸಚಿವ ನಾಗೇಶ್

    ಬೆಂಗಳೂರು: ಮದರಸಾಗಳಲ್ಲಿ ನೀಡುತ್ತಿರೋ ಶಿಕ್ಷಣದ ಬಗ್ಗೆ ಮೊದಲಿಂದಲೂ ಹತ್ತು ಹಲವು ಆರೋಪ ಕೇಳಿಬರುತ್ತಿವೆ. ಹೀಗಾಗಿಯೇ ಶಿಕ್ಷಣ ಇಲಾಖೆ ಮದರಸಾಗಳಲ್ಲಿನ ಶೈಕ್ಷಣಿಕ ಚಟುವಟಿಕೆ ಮೇಲೆ ನಿಗಾವಹಿಸಲು ವಿಶೇಷ ಮಂಡಳಿ ರಚನೆಗೆ ಮುಂದಾಗಿದೆ. ಈ ಸಂಬಂಧ ಸಚಿವ ಬಿ.ಸಿ ನಾಗೇಶ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿದೆ.

    ಮದರಸಾಗಳಲ್ಲಿ ಏನು ಹೇಳಿ ಕೊಡುತ್ತಿದ್ದಾರೆ. ಶಿಕ್ಷಣ ಇಲಾಖೆ ಕಾಯ್ದೆ ಪ್ರಕಾರ ಶಿಕ್ಷಣ ಸಿಗ್ತಿದ್ಯಾ? ಇಲ್ವಾ..? ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳಿಗೆ ಶಿಕ್ಷಣ ಮಂತ್ರಿ ಆದೇಶ ನೀಡಿದ್ದಾರೆ. ಮುಂದಿನ 15 ದಿನದಲ್ಲಿ ಈ ಬಗ್ಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಬಿಸಿ ನಾಗೇಶ್ ಸೂಚಿಸಿದ್ದಾರೆ. ಇದನ್ನೂ ಓದಿ: ತಾಕತ್ತಿದ್ರೆ ಅಂಬಾರಿ ದಿನ ಸಿದ್ದರಾಮಯ್ಯ ನಾನ್‍ವೆಜ್ ತಿಂದ ವೀಡಿಯೋ ಇದ್ರೆ ರಿಲೀಸ್ ಮಾಡು: ಸೀತಾರಾಂ ಸವಾಲ್

    ಅಲ್ಲದೇ ಇದು ವಿವಾದಕ್ಕೆ ಕಾರಣವಾಗಬಾರದು ಎಂಬ ದೃಷ್ಟಿಯಿಂದ ಶಿಕ್ಷಣ ತಜ್ಞರು, ಮದರಸಾ ನಡೆಸುತ್ತಿರುವವರ ಜೊತೆ ಸಭೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲು ಶಿಕ್ಷಣ ಮಂತ್ರಿ ಪ್ಲಾನ್ ಮಾಡಿದ್ದಾರೆ. ಸರ್ಕಾರದ ಈ ಪ್ರಯತ್ನವನ್ನು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಮದರಸಾಗಳನ್ನು ಬ್ಯಾನ್ ಮಾಡಿದ್ರೇ ಇನ್ನೂ ಉತ್ತಮ ಎಂದಿದ್ದಾರೆ

    ಮದರಸಾ ಮಂಡಳಿ ರಚನೆ ಕಸರತ್ತು ಏಕೆ?: ಮದರಸಾಗಳಲ್ಲಿ ಅನುದಾನದ ಅಸಮರ್ಪಕ ಬಳಕೆ. ಮದರಸಾಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲು ಧರ್ಮ ಬೋಧನೆ. ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡಲ್ಲ. ನೈತಿಕತೆ, ಭಾವೈಕ್ಯತೆ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

    ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

    ತುಮಕೂರು/ ಬೆಂಗಳೂರು: ಶಿಕ್ಷಣ ಸಚಿವ ನಾಗೇಶ್‌ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸರು 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

    ನಾಗೇಶ್‌ ಸಹಾಯಕ ಮುರಳೀಧರ್‌ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್‌ ಎಂಬಾತನನ್ನು ಎ1 ಆರೋಪಿ ಎಂದು ಕೇಸ್‌ ಫೈಲ್‌ ಮಾಡಲಾಗಿದೆ.

    ವಿಷಯ ತಿಳಿಯುತ್ತಲೇ ನಾಗೇಶ್ ಮನೆಗೆ ದೌಡಾಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಎನ್‍ಎಸ್‍ಯುಐ ಕಾರ್ಯಕರ್ತರ ಪ್ರತಿಭಟನೆ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಇಲ್ಲಿ ಪ್ರತಿಭಟನೆ ನಡೆಸಿದ್ದು ತುಮಕೂರಿನವರಲ್ಲ. ದಾವಣಗೆರೆ, ಬೆಂಗಳೂರು ಹೀಗೆ ಬೇರೆ ಬೇರೆ ಜಿಲ್ಲೆಗಳಿಂದ ಬಂದವರಿಂದ ಕೃತ್ಯ ನಡೆದಿದೆ. ವ್ಯವಸ್ಥಿತವಾಗೇ ಪ್ಲಾನ್ ಮಾಡಿಕೊಂಡು ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಸಚಿವರು ಇದ್ದಿದ್ದರೆ ಕೊಲೆ ಮಾಡುತ್ತಿದ್ದರೋ ಏನೋ? ಇಂಥಹ ಗೂಂಡಾವರ್ತನೆಯನ್ನು ಸರ್ಕಾರ ಸಹಿಸುವುದಿಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪಗೆ ಮತ್ತೆ ಧ್ವಜ ಉರುಳು – ದೆಹಲಿಯಲ್ಲಿ ದೂರು ದಾಖಲು

    ಇಡೀ ಪ್ರಕರಣವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಸಚಿವರ ಮನೆ ಆವರಣದಲ್ಲಿ ಎನ್‍ಎಸ್‍ಯುಐ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

    ಎಫ್‌ಐಆರ್‌ನಲ್ಲಿ ಏನಿದೆ?
    ಬುಧವಾರ ಮಧ್ಯಾಹ್ನ 1:15ರ ಸುಮಾರಿಗೆ ಪ್ರತಿಭಟನೆ ಆರಂಭವಾಗಿದೆ. 20-25 ಜನ ಎನ್‍ಎಸ್‍ಯುಐ ಹೆಸರಿನಲ್ಲಿ ಬಾವುಟ, ಭಿತ್ತಿಪತ್ರ ಹಿಡಿದು ಘೋಷಣೆ, ಅವಾಚ್ಯವಾಗಿ ನಿಂದಿಸಿ ಪ್ರತಿಭಟಿಸಿದರು.

    15 ನಿಮಿಷಗಳ ಬಳಿಕ ಏಕಾಏಕಿ ಸಚಿವರ ಮನೆಗೆ ನುಗ್ಗಲು ಯತ್ನಿಸಿ ಬಳಿಕ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದರು. ಸಚಿವರ ಮನೆ, ಕಚೇರಿ ಸುಟ್ಟು ಹಾಕಲು ಹುನ್ನಾರ ನಡೆಸುತ್ತಿದ್ದಾಗ ಸಬ್‍ ಇನ್ಸ್‌ಪೆಕ್ಟರ್‌ ದಾಕ್ಷಾಯಿಣಿ ಕೃತ್ಯವನ್ನು ತಡೆದಿದ್ದಾರೆ.

    ಕೃತ್ಯಕ್ಕೆ ಸಂಬಂಧಿಸಿದಂತೆ ಕೋಡಿಹಳ್ಳಿ ನಿವಾಸಿ ಹೇಮಂತ್ ಎಂಬಾತನ ಗುರುತು ಪತ್ತೆಯಾಗಿದ್ದು 15ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

  • SSLC ಫಲಿತಾಂಶ ಪ್ರಕಟ – 145 ವಿದ್ಯಾರ್ಥಿಗಳಿಗೆ ಔಟ್‌ ಆಫ್‌ ಔಟ್‌

    SSLC ಫಲಿತಾಂಶ ಪ್ರಕಟ – 145 ವಿದ್ಯಾರ್ಥಿಗಳಿಗೆ ಔಟ್‌ ಆಫ್‌ ಔಟ್‌

    ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.

    ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

    ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಇದನ್ನೂ ಓದಿ: ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

    ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.

    20 ಶಾಲೆಗಳು ಶೂನ್ಯ ಸಂಪಾದನೆ ಮಾಡಿದರೆ 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.

    ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

    ಯಾವ ಗ್ರೇಡ್‌ನಲ್ಲಿ ಎಷ್ಟು ಮಂದಿ ಪಾಸ್‌?
    A+ – 1,18,875
    – 1,82,600
    B+ – 1,73,528
     – 1,43,900
    C+  –  87,801
    C   – 14,627

    ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶ ನೀಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು  ಜೂನ್ 6 ಕೊನೆಯ ದಿನಾಂಕವಾಗಿದೆ.

    ಫಲಿತಾಂಶ ವೀಕ್ಷಣೆ ಹೇಗೆ?
    ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ

    ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

  • ಆ್ಯಸಿಡ್ ಹಾಕಿ ನಾಪತ್ತೆಯಾಗಿದ್ದ ನಾಗೇಶ್ ವಿದ್ಯಾರ್ಥಿಯಿಂದ ಅರೆಸ್ಟ್!

    ಆ್ಯಸಿಡ್ ಹಾಕಿ ನಾಪತ್ತೆಯಾಗಿದ್ದ ನಾಗೇಶ್ ವಿದ್ಯಾರ್ಥಿಯಿಂದ ಅರೆಸ್ಟ್!

    ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗೇಶ್ ಕೊನೆಗೂ ಈಗ ಪತ್ತೆಯಾಗಿದ್ದಾನೆ. ಈತನನ್ನು ಪತ್ತೆ ಮಾಡಲು ಪೊಲೀಸರು ನಾನಾ ಪ್ರಯತ್ನ ಮಾಡಿದ್ದರು. ಈ ಪ್ರಯತ್ನಕ್ಕೆ ಫಲ ಎಂಬಂತೆ ತಮಿಳುನಾಡಿನಲ್ಲಿ ನಾಗೇಶ್ ಪತ್ತೆಯಾಗಿದ್ದಾನೆ. ನಾಗೇಶ್ ಪತ್ತೆಯಾಗಿದ್ದು ವಿದ್ಯಾರ್ಥಿಯಿಂದ ಎನ್ನುವುದು ವಿಶೇಷ.

    ಆ್ಯಸಿಡ್ ಎಸೆದ ಬಳಿಕ ಆತನನ್ನು ಹುಡುಕುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಸಾಕಷ್ಟು ಕಡೆ ಹುಡುಕಾಡಿದರೂ ಒಂದು ಸುಳಿವು ಬಿಟ್ಟುಕೊಡದೇ ಆತ ಪರಾರಿಯಾಗಿದ್ದ. ಪರಾರಿಯಾಗಿದ್ದರೂ ವಿದ್ಯಾರ್ಥಿ ನೀಡಿದ ಖಚಿತ ಸುಳಿವಿನಿಂದ ನಾಗೇಶ್ ಈಗ ಅರೆಸ್ಟ್ ಆಗಿದ್ದಾನೆ.  ಇದನ್ನೂ ಓದಿ: ಈಗಲೂ ಬೇಕಾದ್ರೆ ಅವಳನ್ನೇ ಮದುವೆ ಆಗ್ತೀನಿ: ಆ್ಯಸಿಡ್ ನಾಗನ ದುರಹಂಕಾರದ ಮಾತು

    ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಎಎಸ್‍ಐ ಶಿವಣ್ಣ ಹಾಗೂ ಪಿಸಿ ರವಿಕುಮಾರ್ ತಮಿಳುನಾಡಿನ ತಿರುವಣ್ಣಾಮಲೈ ಸರ್ಕಾರಿ ಬಸ್ ನಿಲ್ದಾಣ ಸೇರಿದಂತೆ ಎಲ್ಲಕಡೆ ನಾಗೇಶ್ ಸುಳಿವಿಗಾಗಿ ಫೋಟೋವನ್ನು ಅಂಟಿಸಿದ್ದರು. ಈ ಫೋಟೋ ನೋಡಿದ ಒಬ್ಬ ವಿದ್ಯಾರ್ಥಿ ಇವನನ್ನು ನಾನು ಹತ್ತಿರದ ಆಶ್ರಮದಲ್ಲಿ ಧ್ಯಾನ ಮಾಡುವುದನ್ನು ನೋಡಿದ್ದೇನೆ ಎಂದು ಪೊಲೀಸರಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾನೆ.

    ಇದಾದ ಬಳಿಕ ವಿದ್ಯಾರ್ಥಿ ರಮಣಶ್ರೀ ಆಶ್ರಮದಲ್ಲಿರುವ ನಾಗೇಶ್ ಫೋಟೋವನ್ನು ಅವನಿಗೆ ಗೊತ್ತಾಗದಂತೆ ಕ್ಲಿಕ್ಕಿಸಿ ಕಳಿಸಿದ್ದ. ಫೋಟೋ ನೋಡಿದ ತಕ್ಷಣ ಈತನೇ ಆರೋಪಿ ಎಂದು ಪೊಲೀಸರಿಗೆ ತಿಳಿದಿದ್ದು, ಕೂಡಲೇ ನಾಗೇಶ್ ಇರುವ ರಮಣಶ್ರೀ ಆಶ್ರಮಕ್ಕೆ ಎಎಸ್‍ಐ ಶಿವಣ್ಣ ಹಾಗೂ ಪಿಸಿ ರವಿಕುಮಾರ್ ಬಂದಿದ್ದಾರೆ.

    ಈ ವೇಳೆ ಪೊಲೀಸರು ನಾಗೇಶ್ ಪಕ್ಕ ಶಾಂತವಾಗಿ ಭಕ್ತರ ರೀತಿ ಕುಳಿತುಕೊಂಡು ಅವನ ಜೊತೆ ಮಾತನಾಡಿದ್ದಾರೆ. ಸ್ವಲ್ಪ ಸಮಯ ಬಿಟ್ಟು ಪೊಲೀಸರು ತಮಿಳಿನಲ್ಲಿ ನಿಮ್ಮ ಹೆಸರು ಏನು ಎಂದು ಕೇಳಿದ್ದಾರೆ. ಅದಕ್ಕೆ ಅವನು ಯಾವುದೇ ಪ್ರತಿಕ್ರಿಯೆಯನ್ನು ಕೊಟ್ಟಿಲ್ಲ. ಅದಕ್ಕೆ ಪೊಲೀಸರೇ ನಾಗೇಶ್ ಎಂದು ಎಂದು ಕರೆದಿದ್ದು, ಅವನು ತಿರುಗಿ ನೋಡಿದ್ದಾನೆ. ಆಗ ನಾಗೇಶ್ ಪೊಲೀಸರನ್ನು ಯಾರು ನೀವು ಎಂದು ಕೇಳಿದ್ದು, ಆತ ‘ನಾನೇ ನಾಗೇಶ್’ ಎಂದು ಒಪ್ಪಿಕೊಂಡಿದ್ದ. ಇದನ್ನೂ ಓದಿ:  ಪ್ರಾಣ ಪಣಕ್ಕಿಟ್ಟು 8ನೇ ಮಹಡಿಯಲ್ಲಿ ನೇತಾಡುತ್ತಿದ್ದ ಮಗು ರಕ್ಷಿಸಿದ – ನೆಟ್ಟಿಗರಿಂದ ಮೆಚ್ಚುಗೆಯ ಸುರಿಮಳೆ 

    ಈತ ನಾಗೇಶ್ ಎನ್ನುವುದು ಖಚಿತವಾಗುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

  • ನನ್ನ ಕಣ್ಣ ಮುಂದೆಯೇ ಅವನಿಗೆ ಶಿಕ್ಷೆ ಆಗಬೇಕು – ಸಂತ್ರಸ್ತ ಯುವತಿ ಕಣ್ಣೀರು

    ನನ್ನ ಕಣ್ಣ ಮುಂದೆಯೇ ಅವನಿಗೆ ಶಿಕ್ಷೆ ಆಗಬೇಕು – ಸಂತ್ರಸ್ತ ಯುವತಿ ಕಣ್ಣೀರು

    ಬೆಂಗಳೂರು: ಆ್ಯಸಿಡ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಯುವತಿ ತಮ್ಮ ಕುಟುಂಬಸ್ಥರ ಮುಂದೆ ಕಣ್ಣೀರು ಹಾಕಿದ್ದಾಳೆ. ನನ್ನ ಕಣ್ಣು ಮುಂದೆನೇ ಅವನಿಗೆ ಶಿಕ್ಷೆ ಆಗಬೇಕು ಎಂದು ಹೇಳಿರುವುದಾಗಿ ಪೋಷಕರು ತಿಳಿಸಿದ್ದಾರೆ.

    ನಾಗೇಶ್‍ನನ್ನು ಅರೆಸ್ಟ್ ಮಾಡಿದ್ದಾರೆ. ಶಿಕ್ಷೆ ಕೊಡುತ್ತಾರೆ ಎಂದು ಪೋಷಕರು ಯುವತಿಗೆ ತಿಳಿಸಿದ್ದರು. ನೀನು ಹುಷಾರಾಗಮ್ಮ ಅವನನ್ನು ಅರೆಸ್ಟ್ ಮಾಡಿದ್ದಾರೆ. ಶಿಕ್ಷೆ ಕೊಡುತ್ತಾರೆ ಅಂತ ದೊಡ್ಡಮ್ಮ ಸುಶೀಲಮ್ಮ ಯುವತಿಗೆ ಸಮಾಧಾನದ ಮಾತುಗಳನ್ನು ಹೇಳಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

    ಈಗ ಅರೆಸ್ಟ್ ಆಗಿದ್ದಾನೆ ಅಂತಾ ನಾವು ಹೇಳಲ್ಲ. ಈ ಮುನ್ನವೇ ನನ್ನ ಮಗಳಿಗೆ ಮೊದಲ ದಿನವೇ ಅರೆಸ್ಟ್ ಆಗಿದ್ದಾನೆ ಅಂತಾ ಹೇಳಿದ್ದೇವೆ. ಈಗ ಅರೆಸ್ಟ್ ಆದ ಅಂತಾ ಹೇಳಿದರೆ ಅವಳು ನೊಂದುಕೊಳ್ಳುತ್ತಾಳೆ ಅಂತಾ ಸುಶೀಲಮ್ಮ ಅಳಲು ತೊಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಯತ್ನ- ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು

    ಸದ್ಯ ಆ್ಯಸಿಡ್ ದಾಳಿಗೆ ಒಳಗಾದ ಯುವತಿ ನಗರದ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಲವು ದಿನಗಳಿಂದ ಐಸಿಯುನಲ್ಲಿದ್ದ ಯುವತಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇದೀಗ ಆಕೆಯನ್ನು ಸ್ಪೆಷಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಂತ್ರಸ್ತೆಯನ್ನು ಆಸ್ಪತ್ರೆಯಲ್ಲಿಯೇ ಇದ್ದುಕೊಂಡು ಆಕೆಯ ದೊಡ್ಡಮ್ಮ ಸುಶೀಲಮ್ಮ ನೋಡಿಕೊಳ್ಳುತ್ತಿದ್ದಾರೆ.

  • ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಧನ್ಯವಾದ ತಿಳಿಸಿದ್ದಾರೆ.

    ಈ ಸಂಬಂಧ ತಮ್ಮ ಮಾಧ್ಯಮ ಹೇಳಿಕೆಯಲ್ಲಿ, ಯುವತಿಯ ಮೇಲೆ ಆ್ಯಸಿಡ್ ಎರಚುವಿಕೆಯಂತಹ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ಎಂಬ ಆರೋಪಿಯನ್ನು ನಮ್ಮ ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ತಮಿಳುನಾಡು ರಾಜ್ಯದಲ್ಲಿ ಅಡಗಿದ್ದವನನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಯತ್ನ- ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು

    ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತನೆ. ಇತ್ತ ಹೀನ ಕೃತ್ಯ ನಡೆಸಿದವನನ್ನು ಬಂಧಿಸುವ ಕಾರ್ಯದಲ್ಲಿ ತಮಿಳುನಾಡು ಪೊಲೀಸರು ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ. ಅವರಿಗೂ ನನ್ನ ಅಭಿನಂದನೆಗಳು ಎಂದರು.  ಇದನ್ನೂ ಓದಿ: ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್

    ಆರೋಪಿಗೆ ಉಗ್ರ ಶಿಕ್ಷೆಯಾಗುವಂತೆ, ಆತನನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು ಎಂದು ಭರವಸೆ ನೀಡಿದರು.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

  • ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

    ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

    ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಮಿಳುನಾಡಿನಲ್ಲಿ ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಚಾಲಾಕಿ ನಾಗನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆ್ಯಸಿಡ್ ನಾಗ ಎಲ್ಲಿ ತಲೆಮರೆಸಿಕೊಂಡಿದ್ದ? ಪೊಲೀಸರಿಗೆ ಆತನ ಸುಳಿವು ಸಿಕ್ಕಿದ್ದು ಹೇಗೆ? ನಾಗನನ್ನು ಹಿಡಿಯಲು ಪೊಲೀಸರು ಹಾಕಿದ್ದ ಪ್ಲ್ಯಾನ್ ನಿಜಕ್ಕೂ ರೋಚಕವಾಗಿದೆ.

    ಏಪ್ರಿಲ್ 28 ರಂದು ಯುವತಿಯ ಮೇಲೆ ಆಸಿಡ್ ಎರಚಿ ನಾಗೇಶ್ ಪರಾರಿಯಾಗಿದ್ದ. ದಾಳಿ ವೇಳೆ ನಾಗನ ಬಲಗೈ ಮೇಲೂ ಆ್ಯಸಿಡ್ ಬಿದ್ದು ಗಾಯವಾಗಿತ್ತು. ಆ ಗಾಯಗಳನ್ನೇ ತೋರಿಸಿ ನ್ಯಾಯಾಲಯದ ಬಳಿ ವಕೀಲರನ್ನು ನಾಗೇಶ್ ಭೇಟಿಯಾಗಿದ್ದ. ಯಾರೂ ಕೇಸ್ ತೆಗೆದುಕೊಳ್ಳಲು ಒಪ್ಪದಿದ್ದಾಗ ಅಲ್ಲಿಂದ ಕಾಲ್ಕಿತ್ತಿದ್ದ. ನಂತರ ತಮಿಳುನಾಡು ಗಡಿಭಾಗದ ಕ್ಲಿನಿಕ್‌ನಲ್ಲಿ ಗಾಯಗಳಿಗೆ ಚಿಕಿತ್ಸೆ ತೆಗೆದುಕೊಂಡು ಪ್ರಯಾಣ ಮುಂದುವರಿಸಿದ್ದ. ಇದನ್ನೂ ಓದಿ: ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್

    ಸ್ವಾಮೀಜಿ ವೇಷಧರಿಸಿದ್ದ ನಾಗ
    ನಾನೊಬ್ಬ ಭಕ್ತನೆಂದು ಹೇಳಿಕೊಂಡು ತಮಿಳುನಾಡಿನ ತಿರುವಣ್ಣಮಲ್ಲೈ ಆಶ್ರಮದಲ್ಲಿ ನಾಗ ಆಶ್ರಯ ಪಡೆದುಕೊಂಡಿದ್ದ. ಕಾವಿ ತೊಟ್ಟು ರಮಣಾ ಆಶ್ರಮದಲ್ಲಿ ನಾಗೇಶ ಅವಿತಿದ್ದ. ಭಿತ್ತಿ ಪತ್ರಗಳನ್ನು ಹೊರಡಿಸಿ ಆರೋಪಿಯ ಸುಳಿವು ಪತ್ತೆಗೆ ಪೊಲೀಸರು ಮುಂದಾಗಿದ್ದರು. ನೆರೆ ರಾಜ್ಯದ ಪೊಲೀಸರು ಕಾಮಾಕ್ಷಿಪಾಳ್ಯ ಪೊಲೀಸರ ನೆರವಿಗೆ ಬಂದಿದ್ದರು. ಶುಕ್ರವಾರ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಆತನ ಚಹರೆ ಹಾಗೂ ಕೈ ಮೇಲಾಗಿದ್ದ ಗಾಯಗಳನ್ನು ಕಂಡು ಪೊಲೀಸರು ಶಂಕೆಗೊಂಡಿದ್ದಾರೆ. ಹತ್ತಿರ ಹೋಗುತ್ತಿದ್ದಂತೆ ಭೀತಿಯಿಂದ ಪರಾರಿಯಾಗಲು ನಾಗೇಶ ಯತ್ನಿಸಿದ್ದ. ಕೂಡಲೇ ನಾಗನನ್ನು ಹಿಡಿದು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಶಟರ್ ಮುರಿದು ಕಳ್ಳತನ – ಸಿಸಿಟಿವಿಯಲ್ಲಿ ದೃಶ್ಯ ಸೆರೆ 

    ನಾಗನನ್ನು ಹಿಡಿಯಲು ಖಾವಿ ತೊಟ್ಟಿದ್ದ ಪೊಲೀಸರು
    ಆ್ಯಸಿಡ್ ನಾಗ ಅಪ್ಪಟ ದೈವಭಕ್ತನಾಗಿದ್ದ. ವಾರದಲ್ಲಿ ಸೋಮವಾರ, ಶುಕ್ರವಾರ ತಪ್ಪದೇ ದೇವಸ್ಥಾನಕ್ಕೆ ಹೋಗುತ್ತಿದ್ದ. ಈ ಬಗ್ಗೆ ನಾಗೇಶ್ ಪೋಷಕರ ವಿಚಾರಣೆ ವೇಳೆ ಪೊಲೀಸರು ಮಾಹಿತಿ ಕಲೆಹಾಕಿದ್ದರು. ಈ ಹಿನ್ನಲೆಯಲ್ಲಿ ಕಳೆದ ಒಂದು ವಾರದಿಂದ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಉತ್ತರ ಭಾರತದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಶೋಧ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದಿರುವ ಮಾಹಿತಿ ತಿಳಿದ ನಾಗೇಶ್, ಮಠದಲ್ಲಿ ಸ್ವಾಮಿ ವೇಷದಲ್ಲಿ ವಾಸವಾಗಿದ್ದ. ಪೊಲೀಸರು ಕೂಡ ಭಕ್ತರ ವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದರು. ನಾಗನನ್ನು ಹಿಡಿಯಲು ಸ್ವತಃ ಪೊಲೀಸರು ಸಹ ಖಾವಿ ಧರಿಸಿ ಹೊಂಚುಹಾಕಿದ್ದರು.

    ಪೊಲೀಸರು ತನ್ನನ್ನು ಹುಡುಕುತ್ತಿರುವ ಮಾಹಿತಿ ತಿಳಿದು ನಾಗ ಖಾವಿ ಧರಿಸಿ ದೇವಸ್ಥಾನದಲ್ಲಿ ಕುಳಿತಿದ್ದ. ಯಾರಿಗೂ ಅನುಮಾನ ಬರಬಾರದು ಎಂದು ಖಾವಿ ಧರಿಸಿದ್ದ. ಆರೋಪಿಯನ್ನು ಪತ್ತೆ ಮಾಡಿದ ಪೊಲೀಸರಿಗೆ ಕೆಲಕಾಲ ಗೊಂದಲ ಮೂಡಿತ್ತು. ಖಾವಿಧಾರಿ ನಾಗೇಶ್‌ನನ್ನು ನೋಡಿ ಅನುಮಾನಗೊಂಡ ಪೊಲೀಸರಿಗೆ ನಂತರ ಗುರುತು ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ನಾಗನನ್ನು ಬಂಧಿಸಿದ್ದಾರೆ. ನಂತರ ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರಿಗೆ ಕರೆತರಲಿದ್ದಾರೆ.

  • ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್

    ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್

    ಬೆಂಗಳೂರು: ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಈತ 16 ದಿನಗಳ ಬಳಿಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

    ಯಾರಿಗೂ ಸಿಗಬಾರದೆಂದು ನಾಗೇಶ್ ತಮಿಳುನಾಡಿನಲ್ಲಿ ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ. ಆದರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.