Tag: ನಾಟಿ

  • ಐಟಿ ಉದ್ಯೋಗಿಗಳಿಗೆ ಗದ್ದೆಯಲ್ಲಿ ನಾಟಿ ಕಾರ್ಯಾಗಾರ

    ಐಟಿ ಉದ್ಯೋಗಿಗಳಿಗೆ ಗದ್ದೆಯಲ್ಲಿ ನಾಟಿ ಕಾರ್ಯಾಗಾರ

    ಮಡಿಕೇರಿ: ಐಟಿ ಕಂಪನಿ ಉದ್ಯೋಗಿಗಳು ಇಂದು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

    ಸೋಮವಾರಪೇಟೆ ನಗರದ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ತಾಕೇರಿ ಗ್ರಾಮದಲ್ಲಿ 3ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮ ನಡೆಯಿತು. ಐಟಿ ಕಂಪನಿಯ ಉದ್ಯೋಗಿಗಳು ಸಂತಸದಿಂದ ಭಾಗವಹಿಸಿ ಭತ್ತ ನಾಟಿ ಮಾಡಿದರು. ನಾಟಿ ಮಾಡುವ ಕುರಿತು ಮಾಹಿತಿ ನೀಡುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಥಳೀಯವಾಗಿ ವರ್ಕ್ ಫ್ರಂ ಹೋಮ್‍ನಲ್ಲಿರುವ ಐಟಿ ಕಂಪನಿಗಳ ಉದ್ಯೋಗಿಗಳು, ವೈದ್ಯರು, ವಕೀಲರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ತಾಕೇರಿಯ ಜಿ.ಎಂ.ರಾಣಿ ಪಾಪಯ್ಯ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ಹೊರಭಾಗದಲ್ಲಿರುವ ಉದ್ಯೋಗಿಗಳು ಕೃಷಿ ಸಮಯದಲ್ಲಾರೂ ತಮ್ಮ ಗ್ರಾಮಕ್ಕೆ ಬಂದು ಗದ್ದೆ ಕೃಷಿ ಮಾಡಬೇಕು. ಹಾಗಾದಾಗ ಮಾತ್ರ ಕೃಷಿಯ ಬಗ್ಗೆ ಅರಿವು ಹಾಗೂ ಕೃಷಿಯ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 82 ಲಕ್ಷ ರೂ. ಹವಾಲಾ ಹಣ ಜಪ್ತಿ

    ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸ್ಥಳೀಯ ಯುವ ಜನಾಂಗ ಕೃಷಿ ಕಾರ್ಯಗಳಲ್ಲಿ ಮನಸು ಮಾಡಿದರೆ ಕಾರ್ಮಿಕರ ಸಮಸ್ಯೆ ದೂರಾಗಲಿದೆ. ಗದ್ದೆ ಕೃಷಿಯ ಬಗ್ಗೆ ಬಹುತೇಕ ಐಟಿ ಉದ್ಯೋಗಿಗಳಿಗೆ ಮಾಹಿತಿ ಇರುವುದಿಲ್ಲ. ಭತ್ತ ಬೆಳೆಯುವ ವಿಧಾನವೂ ತಿಳಿದಿರುವುದಿಲ್ಲ. ಅಂತಹವರಿಗೆ ಗದ್ದೆ ನಾಟಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕಾಫಿ ಮಂಡಳಿಯ ಅಧಿಕಾರಿ ಲಕ್ಷ್ಮೀಕಾಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಉಡುಪಿಯ ಗದ್ದೆಯಲ್ಲಿ ಹೂತುಹೋದ ಕೃಷಿ ಸಚಿವರ ಕಾರು

    ಉಡುಪಿಯ ಗದ್ದೆಯಲ್ಲಿ ಹೂತುಹೋದ ಕೃಷಿ ಸಚಿವರ ಕಾರು

    – 2000 ಎಕ್ರೆ ಬೇಸಾಯ ನಾಟಿಗೆ ಚಾಲನೆ

    ಉಡುಪಿ: ಕೃಷಿ ಚಟುವಟಿಕೆಯನ್ನು ಗಮನಿಸಿ ನೂತನ ಬೇಸಾಯ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಸಂಚರಿಸುತ್ತಿದ್ದ ಕಾರು ಜಿಲ್ಲೆಯ ಕಡೆಕಾರು ಎಂಬಲ್ಲಿ ಕೆಸರಿನಲ್ಲಿ ಹೂತು ಹೋಗಿದೆ. ಭಾರೀ ಮಳೆಗೆ ತೇವಗೊಂಡಿದ್ದ ಗದ್ದೆಗೆ ಕಾರು ಇಳಿಸಿದ್ದೇ ಈ ಪಜೀತಿಗೆ ಕಾರಣವಾಗಿದೆ.

    ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇದಾರೋತ್ಥಾನ ಬೇಸಾಯ ಅಭಿಯಾನ ಆರಂಭಗೊಂಡಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಬೀಳುಬಿಟ್ಟ 2000 ಎಕರೆ ಗದ್ದೆಯನ್ನು ಬೇಸಾಯ ಮಾಡಲಾಗುತ್ತಿದೆ. ಈ ಪುನಶ್ಚೇತನ ಕಾರ್ಯಕ್ರಮದ ನಾಟಿ ಕಾರ್ಯಕ್ಕೆ ಕೃಷಿ ಸಚಿವರು ಆಗಮಿಸಿದ್ದರು. ಈ ಸಂದರ್ಭ ಕೆಸರಿನಲ್ಲಿ ಸಚಿವರ ಕಾರು ಹೂತಿದೆ. ಉಡುಪಿಯ ಕಡೆಕಾರು ಎಂಬಲ್ಲಿ ಘಟನೆ ನಡೆದಿದ್ದು, ಕಾರು ಮೇಲೆತ್ತಲು ಬಿಜೆಪಿ ನಾಯಕರು, ಸ್ಥಳೀಯ ಜನ ಪ್ರತಿನಿಧಿಗಳು ಕೆಲಕಾಲ ಪರದಾಟ ಮಾಡಿದರು. ನಂತರ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಓಡೋಡಿ ಬಂದು ಸಚಿವರ ಕಾರನ್ನು ತಳ್ಳಿ ಮೇಲೆ ಎತ್ತಿದರು. ಇದನ್ನೂ ಓದಿ: ಆನ್‍ಲೈನ್ ಕ್ಲಾಸ್‍ಗಾಗಿ 2 ಕಿ.ಮೀ ದೂರದಲ್ಲಿ ತಾವೇ ಕ್ಲಾಸ್ ರೂಂ ರೆಡಿ ಮಾಡಿದ ವಿದ್ಯಾರ್ಥಿಗಳು

    ಉಡುಪಿ ನಗರದಾದ್ಯಂತ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಸುತ್ತಮುತ್ತಲ ಗದ್ದೆಗಳು ತೇವಗೊಂಡಿದ್ದು, ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲೆಯಾದ್ಯಂತ ಮೋಡ ಮುಸುಕಿದೆ.

  • ನಾಟಿ ಆಯ್ತು, ನಾಳೆ ಪಾಂಡವಪುರದಲ್ಲಿ ಸಿಎಂ ಎಚ್‍ಡಿಕೆಯಿಂದ ಭತ್ತ ಕಟಾವು!

    ನಾಟಿ ಆಯ್ತು, ನಾಳೆ ಪಾಂಡವಪುರದಲ್ಲಿ ಸಿಎಂ ಎಚ್‍ಡಿಕೆಯಿಂದ ಭತ್ತ ಕಟಾವು!

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ.

    ಶುಕ್ರವಾರ ಸಂಜೆ 4ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭತ್ತದ ಕಟಾವು ಬಳಿಕ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.

    ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು.

    ರೈತನಾಗಿದ್ದ ಸಿಎಂ
    1980ರ ದಶಕದಲ್ಲಿ ಕುಮಾರಸ್ವಾಮಿ ಜಮೀನಿನ ಹುಡುಕಾಟದಲ್ಲಿದ್ದರು. ಕೊನೆಗೆ ರಾಮನಗರ ಜಿಲ್ಲೆಯ ಕೇತಿಗಾನಹಳ್ಳಿಯಲ್ಲಿ ಜಮೀನು ಪಡೆದಿದ್ದರು. ಆರಂಭದಲ್ಲಿ ಈ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಪ್ರತಿ ದಿನ ಸುಮಾರು 8, 9 ಗಂಟೆ ಜಮೀನಿನಲ್ಲಿ ಎಚ್‍ಡಿಕೆ ಕೆಲಸ ಮಾಡುತ್ತಿದ್ದರು. 48 ಎಕರೆ ವಿಸ್ತೀರ್ಣದ ತೋಟದ ಈ ಜಾಗದಲ್ಲಿ 1992-93 ರಲ್ಲಿ ಮನೆ ಕಟ್ಟಿದ್ದರು.

    ನಾಟಿ ಮಾಡಿ ಗಿಮಿಕ್
    ರೈತರ ಗದ್ದೆಯಲ್ಲಿ ಕುಮಾರಸ್ವಾಮಿ ಭತ್ತ ನಾಟಿ ಮಾಡೋದು ಒಂದು ಗಿಮಿಕ್ ಆಗಿದ್ದು, ನಾಟಿ ಮಾಡುತ್ತಿರುವುದು ಒಂದು ಮಾಡೆಲ್ ನಾಟಕ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದರು. ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಗಣ್ಯರ ಸತ್ಕಾರದ ಹೆಸರಿನಲ್ಲಿ ತೆರಿಗೆ ಹಣ ಲೂಟಿಯಾಗಿದೆ. ಸಿಎಂ ಪ್ರಕರಣವನ್ನು ತನಿಖೆ ನಡೆಸಬೇಕು. ಈ ಸರ್ಕಾರದಲ್ಲಿ ಎಲ್ಲಾ ರೀತಿಯಲ್ಲೂ ಲೂಟಿ ನಡೆಯುತ್ತಿದೆ. ಮೊದಲು ಬಗರ್ ಹುಕುಂ ರೈತರಿಗೆ ಭೂಮಿ ಕೊಡಿ ಎಂದು ಆಗ್ರಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಮಾರಸ್ವಾಮಿ ನಾಟಿ ಲೆಕ್ಕದ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಕುಮಾರಸ್ವಾಮಿ ನಾಟಿ ಲೆಕ್ಕದ ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಬೆಂಗಳೂರು: ಕುಮಾರಸ್ವಾಮಿ ಮತ್ತು ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚಾದ ಬೆನ್ನಲ್ಲೇ ಎಚ್‍ಡಿಕೆ ನಾಟಿ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಗಿದೆ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈ ಪ್ರಶ್ನೆ ಏಳಲಿದೆ ಎಂದು ಮೊದಲೇ ಊಹಿಸಿದ್ದ ಕುಮಾರಸ್ವಾಮಿ ಸರ್ಕಾರದ ದುಡ್ಡನ್ನು ಬಳಸದೇ ಈ ಕಾರ್ಯಕ್ರಮವನ್ನು ನಡೆಸಿದ್ದಾರೆ.

    ಹೌದು. ಮೈತ್ರಿ ಸರ್ಕಾರಕ್ಕೆ ದುಂದುವೆಚ್ಚ ಸರ್ಕಾರ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಸೀತಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸರ್ಕಾರ ದುಡ್ಡಿನಲ್ಲಿ ಯಾವುದೇ ಕಾರಣಕ್ಕೆ ನಡೆಸಬಾರದು ಎಂದು ಸಿಎಂ ಮೊದಲೇ ಅಧಿಕಾರಿಗಳಿಗೆ ಮತ್ತು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಅವರಿಗೆ ಖಡಕ್ ಸೂಚನೆ ಕೊಟ್ಟಿದ್ದರು. ಇದನ್ನು ಓದಿ: 7 ನಿಮಿಷದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು: ಯಾರಿಗೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

    ನಾಟಿ ಕಾರ್ಯಕ್ರಮಕ್ಕೆ 12 ರಿಂದ 15 ಲಕ್ಷ ರೂ. ಖರ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಿ ಹಣವನ್ನು ಬಳಸದೇ ಕಾರ್ಯಕ್ರಮವನ್ನು ನಡೆಸುವ ಮೂಲಕ ದುಂದು ವೆಚ್ಚ ಆರೋಪ ಮಾಡುವವರಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಶನಿವಾರ ಕುಮಾರಸ್ವಾಮಿಯವರು ಸೀತಾಪುರದಲ್ಲಿರುವ ಕೆಂಚೇಗೌಡರ ಕುಟುಂಬದ ಐದು ಎಕರೆ ಜಮೀನಿನಲ್ಲಿ 150 ಜನ ರೈತ ಮಹಿಳೆಯರು, 50 ಜನ ರೈತರ ಜೊತೆಯಲ್ಲಿ ನಾಟಿ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • 100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

    100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

    ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿಯುವ ಮೂಲಕ ಶನಿವಾರ ರೈತರ ಜೊತೆ ನಾಟಿ ಮಾಡಲಿದ್ದಾರೆ.

    ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆ ಬಯಲಿಗೆ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಗದ್ದೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗ್ಗೆ ನಾಟಿ ಕೆಲಸ ಮಾಡಲಿದ್ದಾರೆ. ಸಿಡಿಎಸ್ ನಾಲೆ ಪಕ್ಕದಲ್ಲೇ ಇರುವ ವಿಶಾಲವಾದ ಗದ್ದೆ ಬಯಲಿನಲ್ಲಿ ಸುಮಾರು 5 ಎಕರೆಯಷ್ಟು ಜಾಗವನ್ನು ಮುಖ್ಯಮಂತ್ರಿಗಳ ನಾಟಿ ಕೆಲಸಕ್ಕೆಂದು ತಯಾರಿ ಮಾಡಲಾಗಿದೆ.

    ರೈತರಾದ ಮಹದೇವಮ್ಮ, ದೇವರಾಜು, ಮಹೇಶ, ಹೇಮಲತ, ಮಾಯಮ್ಮ ಅವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ರೈತರೂ ಕೂಡ ನಾಟಿ ಕೆಲಸಕ್ಕೆ ಸಾಥ್ ನೀಡಲಿದ್ದಾರೆ. ಸಿಎಂ ಕುಮಾರಸ್ವಾಮಿ ಅವರಿಗೆ 100 ಮಹಿಳೆಯರು ಮತ್ತು 50 ರೈತ ಪುರುಷರು ಸಾಥ್ ಕೊಡಲಿದ್ದಾರೆ. ಜೊತೆಗೆ 25 ಜೋಡಿ ಎತ್ತುಗಳು ಮೂಲಕ ನಾಟಿ ಕೆಲಸ ಮಾಡಲಾಗುತ್ತದೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

    ಸತತ ಬರಗಾಲದಿಂದ ನೊಂದಿದ್ದ ಮಂಡ್ಯ ರೈತರು ಈ ಬಾರಿ ಕೆಆರ್ ಎಸ್ ಅಣೆಕಟ್ಟು ತುಂಬಿದ್ದರಿಂದ ಬೆಳೆ ಬೆಳೆಯುವ ಉತ್ಸಾಹದಲ್ಲಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಜೊತೆ ಗದ್ದೆಗಿಳಿಯುವುದಲ್ಲದೆ ತಮ್ಮನ್ನು ಟೀಕಿಸುವ ಬಿಜೆಪಿ ಮುಖಂಡರಿಗೆ ತಮ್ಮ ರೈತಪರ ಕಾಳಜಿ ಮೂಲಕ ಉತ್ತರ ಕೊಡಲಿದ್ದಾರೆ ಎಂದು ಎಚ್‍ಡಿಕೆ ಅಭಿಮಾನಿಗಳು ಹೇಳುತ್ತಿದ್ದಾರೆ.

    ಮುಖ್ಯಮಂತ್ರಿಗಳು ತಮ್ಮ ಗದ್ದೆಗೆ ಇಳಿದು ನಾಟಿ ಮಾಡುವ ಬಗ್ಗೆ ಗದ್ದೆಯ ಮಾಲೀಕರಾದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ದಿವಂಗತ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದು ಈ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

    ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

    ಮಂಡ್ಯ: ಜಿಲ್ಲೆಯಲ್ಲಿ ಭತ್ತದ ನಾಟಿ ಕೆಲಸ ಮಾಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಿಯಲ್ ಮಣ್ಣಿನ ಮಗನಾಗಲಿದ್ದಾರೆ.

    ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕಿನ, ಅರಳಕುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಸೀತಾಪುರ ಗ್ರಾಮದಲ್ಲಿ ನಾಟಿ ಕೆಲಸ ಮಾಡುವ ಮೂಲಕ ಮಣ್ಣಿನ ಮಗನಾಗಲಿದ್ದಾರೆ. ಆಗಸ್ಟ್ 11 ರಂದು ಸಿಎಂ ಅವರು ಗದ್ದೆಗಿಳಿದು ರೈತರ ಜೊತೆ ನಾಟಿ ಮಾಡಲಿದ್ದಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ರೈತರೊಂದಿಗೆ ದುಡಿಯಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ಮಾಹಿತಿ ನಿಡಿದ್ದಾರೆ.

    ಕೇವಲ ತೋರಿಕಗೆ ಭತ್ತ ನಾಟಿ ಮಾಡದೇ ಬರೋಬ್ಬರಿ ಮೂರು ಗಂಟೆಗಳ ಕಾಲ ಗದ್ದೆಯಲ್ಲಿ ಕೆಲಸ ಮಾಡಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಜೊತೆ ತಾನು ರೈತನಾಗಲಿದ್ದಾರೆ. ರೈತರ ಜೊತೆ ನಾವಿದ್ದೇವೆ, ನಮ್ಮದು ರೈತ ಪರ ಸರ್ಕಾರ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಈ ಮೂಲಕ ರೈತರಿಗೆ ಆತ್ಮಸ್ಥೈರ್ಯ ತುಂಬಲಿದ್ದಾರೆ.

    1980ರ ದಶಕದಲ್ಲಿ ಕುಮಾರಸ್ವಾಮಿ ಜಮೀನಿನ ಹುಡುಕಾಟದಲ್ಲಿದ್ದರು. ಕೊನೆಗೆ ರಾಮನಗರ ಜಿಲ್ಲೆಯ ಕೇತಿಗಾನಹಳ್ಳಿಯಲ್ಲಿ ಜಮೀನು ಪಡೆದಿದ್ದರು. ಆರಂಭದಲ್ಲಿ ಈ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಪ್ರತಿ ದಿನ ಸುಮಾರು 8, 9 ಗಂಟೆ ಜಮೀನಿನಲ್ಲಿ ಎಚ್‍ಡಿಕೆ ಕೆಲಸ ಮಾಡುತ್ತಿದ್ದರು. 48 ಎಕರೆ ವಿಸ್ತೀರ್ಣದ ತೋಟದ ಈ ಜಾಗದಲ್ಲಿ 1992-93 ರಲ್ಲಿ ಮನೆ ಕಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಗುಂಡಿಬಿದ್ದ ಕೆಸರು ರಸ್ತೆಯಲ್ಲಿ ನಾರಿಯರ ನಾಟಿ – ಟಾರ್ ಹಾಕಿದ ಐದೇ ದಿನಕ್ಕೆ ಕಿತ್ತುಬಂದ ಡಾಂಬರು!

    ಗುಂಡಿಬಿದ್ದ ಕೆಸರು ರಸ್ತೆಯಲ್ಲಿ ನಾರಿಯರ ನಾಟಿ – ಟಾರ್ ಹಾಕಿದ ಐದೇ ದಿನಕ್ಕೆ ಕಿತ್ತುಬಂದ ಡಾಂಬರು!

    ಮೈಸೂರು/ಚಿಕ್ಕಬಳ್ಳಾಪುರ: ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ನಾಗನಹಳ್ಳಿ-ಹೆಗ್ಗಡೆಪುರದ ರಸ್ತೆಯಲ್ಲಿ ಗುಂಡಿಗಳು ಬಿಟ್ರೆ ಏನೂ ಇಲ್ಲ. ಡಾಂಬರು ಹಾಕಿದ್ದ ರಸ್ತೆ ಹಾಳಾಗಿ ಹೋಗಿದೆ.

    ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಕ್ಷೇತ್ರ ಇದಾಗಿದ್ದು, ಇದೀಗ ರಿಪೇರಿಗೆ ಆಗ್ರಹಿಸಿ ಬೇಸತ್ತ ಊರಿನವರು ಈಗ ವಿನೂತನವಾಗಿ ಪ್ರತಿಭಟಿಸಿದ್ದಾರೆ.

    ರಸ್ತೆ ಹಾಳಾಗಿ ಗುಂಡಿ ಬಿದ್ದಿದೆ. ಮಳೆಯಿಂದ ರಸ್ತೆಯೇ ಕೆರೆಯಂತಾಗಿ ಕೆಸರು ತುಂಬಿದೆ. ಇದು ಓಡಾಡುವುದಕ್ಕೆ ಯೋಗ್ಯವಾಗಿಲ್ಲ ಬದಲಾಗಿ ಭತ್ತದ ನಾಟಿಗೆ ಯೋಗ್ಯವಾಗಿದೆ ಎಂದು ಗ್ರಾಮದ ರೈತ ಮಹಿಳೆಯರು ರಸ್ತೆಯಲ್ಲೇ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಸ್ತೆ ದುರಸ್ತಿಗೊಳಿಸುವಂತೆ ಸಾಕಷ್ಟು ಬಾರಿ ಗ್ರಾಮಸ್ಥರು ಮನವಿ ಮಾಡಿದ್ರೂ, ಗ್ರಾಮಸ್ಥರ ಮನವಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಸ್ಪಂದಿಸಿದ ಕಾರಣ ಗ್ರಾಮಸ್ಥರು ಈ ವಿನೂತನ ರೀತಿಯ ಪ್ರತಿಭಟನೆ ಮಾಡಿದ್ದಾರೆ.

    ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಡಿಎ ರಸ್ತೆ-ಹರಿಹಳ್ಳ-ಗೌಡಹಳ್ಳಿ ಮಾರ್ಗದ ರಸ್ತೆಗೆ ಐದು ದಿನಗಳ ಹಿಂದೆಯಷ್ಟೇ ಹಾಕಿದ್ದ ಡಾಂಬರು ಕಿತ್ಕೊಂಡು ಬರ್ತಿದೆ. 1 ಕೋಟಿ ರೂಪಾಯಿ 17 ಲಕ್ಷ ರೂಪಾಯಿ ಖರ್ಚು ಮಾಡಿ ಒಂದೂವರೆ ಕಿಲೋ ಮೀಟರ್ ರಸ್ತೆಗೆ ಟಾರ್ ಹಾಕಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ಮೂಲದ ಗುತ್ತಿಗೆದಾರ ಜಯಪ್ರಕಾಶ್ ಅನ್ನೋರು ಕಾಮಗಾರಿ ನಡೆಸಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.