Tag: ನಾಡಪ್ರಭು ಕೆಂಪೇಗೌಡ

  • ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ರಥಕ್ಕೆ ಬೀಳ್ಕೊಡುಗೆ

    ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ರಥಕ್ಕೆ ಬೀಳ್ಕೊಡುಗೆ

    ಚಿಕ್ಕಬಳ್ಳಾಪುರ: ದೇವನಹಳ್ಳಿ (Devanahalli) ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ (Kempegowda) ರ 108 ಅಡಿಯ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ “ಪವಿತ್ರ ಮಣ್ಣು (ಮೃತ್ತಿಕೆ) ಮತ್ತು ನೀರು ಸಂಗ್ರಹ ಮಾಡಿರುವ ಕೆಂಪೇಗೌಡ ರಥದ ವಾಹನಕ್ಕೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಇಂದು ಜಿಲ್ಲಾಡಳಿತ ಭವನದ ಮುಂಭಾಗದಿಂದ ಭಕ್ತಿಪೂರ್ವಕವಾಗಿ ಬೀಳ್ಕೊಡುಗೆ ನೀಡಿ ಪುತ್ಥಳಿ ಅನಾವರಣ ಸ್ಥಳಕ್ಕೆ ಕಳುಹಿಸಿ ಕೊಟ್ಟರು.

    ಈ ವೇಳೆ ಶುಭ ಕೋರಿ ಮಾತನಾಡುತ್ತಾ, ನಾಡಪ್ರಭು ಕೆಂಪೇಗೌಡ ರಥ ವಾಹನವು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಗೊಂಡು ಅಕ್ಟೋಬರ್ 25 ರಿಂದ ಈವರೆಗೆ ಜಿಲ್ಲೆಯಾದ್ಯಂತ ಸಂಚರಿಸಿ 157 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಜಿಲ್ಲೆಯ ಪ್ರಸಿದ್ಧ ಪಾರಂಪರಿಕ ಸ್ಥಳಗಳು ಮತ್ತು ಪುಣ್ಯ ಕ್ಷೇತ್ರಗಳಲ್ಲಿ ಪವಿತ್ರ ಮೃತ್ತಿಕೆ ಮತ್ತು ನೀರನ್ನು ಸಂಗ್ರಹಿಸಿದೆ. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ

    ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಈ ವಾಹನವನ್ನು ಕಳುಹಿಸಿಕೊಡಲಾಗುತ್ತಿದೆ. ಪ್ರಮುಖವಾಗಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಾದ ವಿದುರಾಶ್ವತ್ಥ, ಕೈವಾರ, ರಂಗಸ್ಥಳ, ನಂದಿ, ಆಲಂಗಿರಿ, ಮುದ್ದೇನಹಳ್ಳಿ ಇನ್ನೂ ಮುಂತಾದ ಪುಣ್ಯ ಕ್ಷೇತ್ರಗಳಲ್ಲಿ ಮಣ್ಣು ಮತ್ತು ನೀರನ್ನು ಸಂಗ್ರಹಿಸಲಾಗಿದೆ. ಈ ಮೃತ್ತಿಕೆ ಮತ್ತು ನೀರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನ (ಥೀಮ್ ಪಾರ್ಕ್)ಕ್ಕೆ ಉಪಯೋಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ: ಡಿಸಿಎಂ

    ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ: ಡಿಸಿಎಂ

    –  ಇಡೀ ಗ್ರಾಮ ಅಭಿವೃದ್ಧಿ ಭರವಸೆ

    ಬೆಂಗಳೂರು(ಮಾಗಡಿ): ನಾಡಪ್ರಭುಗಳ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ – 60 ಟನ್ ತರಕಾರಿ ವಿತರಿಸಿದ ಸೋಮಶೇಖರ್

    ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ಡಿಸಿಎಂ ಅವರು, ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭುಗಳ ವೀರ ಸಮಾಧಿಗೆ ಭಾನುವಾರ ಬೆಳಗ್ಗೆ ಪೂಜೆ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ. ಹೀಗಾಗಿ ಸಮಾಧಿ ಸ್ಥಳ, ಕೆಂಪಾಪುರ ಕೆರೆಯನ್ನು ಅಭಿವೃದ್ಧಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿಯವರು ಕಾಂಗ್ರೆಸ್‍ಗೆ ಸಪೋರ್ಟ್ ಮಾಡ್ತೀವಿ ಸಿಎಂ ಆಗಿ ಎಂದಿದ್ದಾರೆ: ಎಸ್.ಎಸ್ ಮಲ್ಲಿಕಾರ್ಜುನ್

    ನಾಡಿನ ಮತ್ತು ದೇಶದ ಸಮಸ್ತ ಜನರು ಇಲ್ಲಿಗೆ ಭೇಟಿ ನೀಡುವಂತೆ ಆಗಬೇಕು. ಕೆಂಪೇಗೌಡರ ಕಾಲದ ವೈಭವವನ್ನು ಮರುಸೃಷ್ಠಿ ಮಾಡಿ  ಇಡೀ ಗ್ರಾಮವನ್ನು ಐತಿಹಾಸಿಕವಾಗಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಯೋಜನೆ ಜಾರಿ ಹಂತದಲ್ಲಿದ್ದು, ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಯೋಜನೆಯನ್ನು ಕ್ಷಿಪ್ರವಾಗಿ ಮುಗಿಸಲಾಗುವುದು. ಅದಕ್ಕಾಗಿ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

    ಫೆಬ್ರುವರಿ ನಾಡಪ್ರಭುಗಳ ಪ್ರತಿಮೆ ಅನಾವರಣ:

    ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಿರ್ಮಾಣ ಆಗುತ್ತಿರುವ ಸೆಂಟ್ರಲ್ ಪಾರ್ಕ್‍ನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಲೋಹದ ಪ್ರತಿಮೆಯನ್ನು ಮುಂಬರುವ ಫೆಬ್ರವರಿ-ಮಾರ್ಚ್‍ನಲ್ಲಿ ಲೋಕಾರ್ಪಣೆ ಮಾಡಲಾಗುವುದು. ಕೋವಿಡ್‍ನಿಂದ ವಿಳಂಬವಾಗಿದ್ದ ಕಾಮಗಾರಿ ಪುನಾ ಭರದಿಂದ ಸಾಗಿದೆ. ನೋಯಿಡಾದಲ್ಲಿ ಪ್ರತಿಮೆ ಸಿದ್ಧವಾಗುತ್ತಿದೆ ಎಂದು ಇದೇ ವೇಳೆ ಡಿಸಿಎಂ ಅವರು ಹೇಳಿದರು.

    ಶಾಸಕ ಮಂಜುನಾಥ್, ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಇಕ್ರಂ, ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ದೇವರಾಜ್ ಮುಂತಾದವರು ಜತೆಯಲ್ಲಿದ್ದರು.

  • ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ

    ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರನ್ನ ವಿಶ್ವಕ್ಕೆ ಪರಿಚಯಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ನಾಡಪ್ರಭುವಿನ ಸಾಧನೆ, ಬೆಂಗಳೂರಿನ ನಿರ್ಮಾಣದ ಇತಿಹಾಸವನ್ನ ಅಮರವಾಗಿಸುವ ನಿಟ್ಟಿನಲ್ಲಿ ಸರ್ಕಾರವು ಕೆಂಪೇಗೌಡರ ಪ್ರತಿಮೆ ನಿರ್ಮಾಣದ ನಿರ್ಧಾರ ಕೈಗೊಂಡಿದೆ.

    ನಾಡಪ್ರಭು ಕೆಂಪೇಗೌಡರ 551ನೇ ಜಯಂತಿಗೆ ರಾಜ್ಯ ಸರ್ಕಾರ ಐತಿಹಾಸ ಕಾರ್ಯಕ್ರಮಕ್ಕೆ ಹೆಜ್ಜೆ ಇಟ್ಟಿದೆ. ನಾಡಪ್ರಭುವಿನ ಸಾಧನೆಯನ್ನ ವಿಶ್ವಕ್ಕೆ ಪರಿಚಯ ಮಾಡಲು ಐತಿಹಾಸಿಕ ಕೆಲಸಕ್ಕೆ ಕೈ ಹಾಕಿದೆ. ಈ ಐತಿಹಾಸಿಕ ಕೆಲಸಕ್ಕೆ ನಾಳೆಯೆ ಅಡಿಗಲ್ಲು ಹಾಕುತ್ತಿದೆ.

    ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ರಾಜ್ಯ ಸರ್ಕಾರ ನಿರ್ಮಾಣ ಮಾಡುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 23 ಎಕರೆ ಜಾಗದಲ್ಲಿ ಸುಮಾರು 66 ಕೋಟಿ ವೆಚ್ಚದಲ್ಲಿ ಪ್ರತಿಮೆ ಜೊತೆಗೆ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಶನಿವಾರ ಕೆಂಪೇಗೌಡರ 551ನೇ ಜಯಂತಿ ಈ ಹಿನ್ನಲೆಯಲ್ಲಿ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಚಾಲನೆ ನೀಡಲಾಗ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಅಶ್ವತ್ಥನಾರಾಯಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಅವರು, ಕೆಂಪೇಗೌಡರ ಪ್ರತಿಮೆಯ ಮಾದರಿ ವಿನ್ಯಾಸವನ್ನು ಶನಿವಾರ ಬಿಡುಗಡೆ ಮಾಡಲಾಗುತ್ತದೆ. ಸ್ವಾಮೀಜಿಗಳು, ಗಣ್ಯರು, ಸಚಿವರು, ವಿಪಕ್ಷ ನಾಯಕರು ಸೇರಿ ಒಟ್ಟು 50ಕ್ಕೂ ಕಡಿಮೆ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉಳಿದವರು ಆನ್‍ಲೈನ್ ವ್ಯವಸ್ಥೆ ಮೂಲಕ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲಿದ್ದಾರೆ. ಮುಂದಿನ ವರ್ಷ ಕೆಂಪೇಗೌಡರ ಜಯಂತಿಗೆ ಪ್ರತಿಮೆ ಸೆಂಟ್ರಲ್ ಪಾರ್ಕ್ ಉದ್ಘಾಟನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟಾಗಲೇ ಅಲ್ಲಿ ಬೃಹತ್ ಪ್ರತಿಮೆ ಮತ್ತು ಸ್ಮಾರಕ ನಿರ್ಮಾಣ ಮಾಡಬೇಕು ಅಂತ ಪ್ರಸ್ತಾಪ ಇತ್ತು. ಸಿಎಂ ಯಡಿಯೂರಪ್ಪ 2019-20ನೇ ಸಾಲಿನ ಬಜೆಟ್‍ನಲ್ಲಿ ಇದಕ್ಕಾಗಿ ವಿಶೇಷ ಅನುದಾನ ಮೀಸಲಿಟ್ದಿದ್ದರು. ಈಗ ಡಿಸಿಎಂ ಅಶ್ವಥ್ ನಾರಾಯಣ ಅವರ ಕಾಳಜಿಯಿಂದ ಪ್ರತಿಮೆ ನಿರ್ಮಾಣ ಹಾಗೂ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿದೆ. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಅಡಿಯಲ್ಲಿ ಈ ಕಾಮಗಾರಿ ಪ್ರಾರಂಭವಾಗುತ್ತಿದೆ. ಐಡೆಕ್ ಸಂಸ್ಥೆ ಸೆಂಟ್ರಲ್ ಪಾರ್ಕ್ ನಿರ್ಮಾಣದ ಉಸ್ತುವಾರಿ ಹೊತ್ತಿದೆ. ಖ್ಯಾತ ಕಲಾವಿದ ರಾಮ್ ಸಿತಾರ್ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಿದ್ದಾರೆ.

    ಸೆಂಟ್ರಲ್ ಪಾರ್ಕ್ ಪ್ಲ್ಯಾನ್!
    > ಸೆಂಟ್ರಲ್ ಪಾರ್ಕ್ ನಲ್ಲಿ ಕೆಂಪೇಗೌಡರು ನಿರ್ಮಿಸಿದ ನಗರದ ಐತಿಹಾಸಿಕ ಹೆಜ್ಜೆ ಗುರುತುಗಳನ್ನ ಈಗಿನ ಪೀಳಿಗೆಗೆ ಪರಿಚಯ ಮಾಡಿಸುವ ಕೆಲಸ ಮಾಡಲಾಗುತ್ತೆ.
    > ವ್ಯಾಪಾರ, ವಾಣಿಜ್ಯ ಉದ್ದೇಶಕ್ಕಾಗಿ ಕೆಂಪೇಗೌಡರು ರಚಿಸಿದ್ದ ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ 64ಕ್ಕೂ ಹೆಚ್ಚು ಪೇಟೆಗಳ ಸೊಗಡು ಈ ಪಾರ್ಕ್ ನಲ್ಲಿ ಇರುತ್ತದೆ.
    > ಉದ್ಯಾನವನದ ಪ್ರವೇಶ ದ್ವಾರದಲ್ಲಿ ಎರಡು ಎತ್ತರದ ಗೋಡೆಗಳು ಇರಲಿವೆ. ಇದನ್ನು ದಾಟಿ ಒಳಗೆ ಹೋಗುವ ಪ್ರವಾಸಿಗರಿಗೆ ಕೌತುಕ ಮೂಡಿಸುವ ಚಿತ್ರಗಳು ಕಲಾಕೃತಿಗಳು ಕಾಣಿಸಲಿವೆ.
    > ಕೆಂಪೇಗೌಡರು ನಿರ್ಮಿಸಿದ್ದ ಮಣ್ಣಿನ ಗೋಡೆಗಳನ್ನು ನೆನಪಿಸುವ ಗೋಡೆಗಳು ಇರಲಿದೆ. ಇದಕ್ಕಾಗಿ ರಾಮ್ಡ್ ಅರ್ಥ್ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ.

    > ಸೆಂಟ್ರಲ್ ಪಾರ್ಕ್ ಮಧ್ಯದಲ್ಲಿ ಚಕ್ರಾಕಾರದ ನೀರಿನ ಸಂಗ್ರಹಗಾರ ಇರಲಿದೆ. ಇವು ಕೆಂಪೇಗೌಡರು ನಿರ್ಮಿಸಿದ್ದ ಕಾಲುವೆ ಹಾಗೂ ಕೆರೆಗಳ ವಿನ್ಯಾಸದ ತದ್ರೂಪವಾಗಿರುತ್ತದೆ.
    > ನೀರಿನ ಸಂಗ್ರಹಗಾರದ ಸುತ್ತ ತೆರೆದುಕೊಳ್ಳುವ ದಾರಿಗಳು ಚಕ್ರದ ವಿನ್ಯಾಸದಲ್ಲಿ ಇರಲಿದೆ. ಚಕ್ರದ ಕಡ್ಡಿಗಳಂತೆ ಹೊರಭಾಗಕ್ಕೆ ಈ ದಾರಿಗಳು ಮಧ್ಯೆ ಭಾಗಕ್ಕೆ ತೆರೆದುಕೊಳ್ಳಲಿದೆ.
    > ಪ್ರತಿಮೆ ಸುತ್ತ ಪೀಠ ಮತ್ತು ಅದರ ಜಗಲಿಯಂತಹ ಪ್ರದೇಶವನ್ನು ವಸುಂದರ ವಿವರಣಾತ್ಮಕ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತೆ.
    > ಪ್ರತಿಮೆ ಸ್ಥಳದಲ್ಲಿ ಮಾಹಿತಿ ಫಲಕ, ಭಿತ್ತಿಚಿತ್ರಗಳ ಮೂಲಕ ಕೆಂಪೇಗೌಡರ ಜೀವನದ ಪ್ರಮುಖ ಘಟನೆಗಳನ್ನ ಬಣ್ಣಿಸಲಾಗುತ್ತೆ. ಜೊತೆ ಕೆಂಪೇಗೌಡರ ಐತಿಹಾಸಿಕ ಮಹತ್ವ ಮತ್ತು ದೂರದೃಷ್ಟಿಯ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುತ್ತೆ.
    > ಸೆಂಟ್ರಲ್ ಪಾರ್ಕ್ ನಮ್ಮ ರಾಜ್ಯದ ಧ್ವಜದ ಸಂಕೇತವಾಗಿರುವ ಅರಿಶಿಣ, ಕುಂಕುಮ ಬಣ್ಣಗಳನ್ನು ಒಳಗೊಂಡಿರುತ್ತದೆ.