Tag: ನಾಣ್ಯ

  • RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ದೆಹಲಿಯ ಡಾ.ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಶತಮಾನೋತ್ಸವ (Centenary Ceremony) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.

    ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾದ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ನಾಣ್ಯ (Coin) ಮತ್ತು ಅಂಚೆ ಚೀಟಿಯನ್ನು (Post Stamp) ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಮೋದಿ, ಈ 100 ರೂ. ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವಿದೆ ಮತ್ತು ಇನ್ನೊಂದು ಬದಿಯಲ್ಲಿ, ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ. ಸ್ವಯಂಸೇವಕರು ಅವಳ ಮುಂದೆ ಸಮರ್ಪಣೆಯಿಂದ ನಮಸ್ಕರಿಸುತ್ತಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಮ್ಮ ಕರೆನ್ಸಿಯಲ್ಲಿ ತೋರಿಸಲಾಗಿದೆ. ಇಂದು ಬಿಡುಗಡೆಯಾದ ವಿಶೇಷ ಅಂಚೆ ಚೀಟಿಯೂ ಸಹ ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 1963ರಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಹೆಮ್ಮೆಯಿಂದ ಭಾಗವಹಿಸಿದ್ದರು. ಈ ಅಂಚೆ ಚೀಟಿಯು ಆ ಐತಿಹಾಸಿಕ ಕ್ಷಣದ ಚಿತ್ರವನ್ನು ಹೊಂದಿದೆ ಎಂದರು. ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳ ಅದ್ಭುತ ಪಯಣವು ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ. ಆರ್‌ಎಸ್‌ಎಸ್ ಶತಮಾನೋತ್ಸವದ ಭಾಗವಾಗಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ. ನಾಳೆ ವಿಜಯದಶಮಿ. ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ, ಅನ್ಯಾಯದ ಮೇಲೆ ನ್ಯಾಯದ ವಿಜಯ, ಸುಳ್ಳಿನ ಮೇಲೆ ಸತ್ಯದ ವಿಜಯ ಮತ್ತು ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಂಕೇತಿಸುವ ಹಬ್ಬವಾಗಿದೆ. 100 ವರ್ಷಗಳ ಹಿಂದೆ ಈ ಮಹಾನ್ ದಿನದಂದು ಆರ್‌ಎಸ್‌ಎಸ್ ಅನ್ನು ಒಂದು ಸಂಘಟನೆಯಾಗಿ ಸ್ಥಾಪಿಸುವುದು ಕಾಕತಾಳೀಯವಲ್ಲ ಎಂದು ಬಣ್ಣಿಸಿದರು. ಇದನ್ನೂ ಓದಿ: ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು!

    ಸ್ವಾತಂತ್ರ‍್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದವು. ಆರ್‌ಎಸ್‌ಎಸ್ ಮುಖ್ಯವಾಹಿನಿಗೆ ಬರದಂತೆ ತಡೆಯಲು ಅನಂತ ಪಿತೂರಿಗಳು ನಡೆದವು. ನಾವು ಆಕಸ್ಮಿಕವಾಗಿ ನಮ್ಮ ನಾಲಿಗೆಯನ್ನು ಹಲ್ಲುಗಳಿಂದ ಕಚ್ಚುತ್ತೇವೆ. ಆದರೆ, ಅದರರ್ಥ ನಾವು ನಮ್ಮ ಹಲ್ಲುಗಳನ್ನು ಮುರಿಯುತ್ತೇವೆ ಎಂದಲ್ಲ. ಸಂಘಟನೆಯ ವಿರುದ್ಧ ಎಲ್ಲಾ ನಿಷೇಧಗಳು ಮತ್ತು ಪಿತೂರಿಗಳ ಹೊರತಾಗಿಯೂ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ. ಏಕೆಂದರೆ ನಾವು ಸಮಾಜದಿಂದ ಭಿನ್ನವಾಗಿಲ್ಲ, ಅದರ ಭಾಗವಾಗಿದ್ದೇವೆ ಎಂದು ನಮಗೆ ತಿಳಿದಿದೆ. ಆರ್‌ಎಸ್‌ಎಸ್ ಸ್ವಯಂಸೇವಕರು ದೇಶದ ಸಾಂವಿಧಾನಿಕ ಸಂಸ್ಥೆಗಳಲ್ಲಿ ಅಚಲ ನಂಬಿಕೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

    ಇದಕ್ಕೂ ಮೊದಲು ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಮೋದಿ ಬಿಡುಗಡೆ ಮಾಡಿದರು. ಆರ್‌ಎಸ್‌ಎಸ್‌ನ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಬಿಡುಗಡೆ ಮಾಡಿದರು. ಆರ್‌ಎಸ್‌ಎಸ್ ಅನ್ನು 1925 ರಲ್ಲಿ ನಾಗ್ಪುರದಲ್ಲಿ ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಥಾಪಿಸಿದ್ದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 16 ರೂ. ಏರಿಕೆ

  • RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

    RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

    ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) 100 ವರ್ಷ ತುಂಬಿದ ಹಿನ್ನೆಲೆ ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಮೋದಿ ಆರ್‌ಎಸ್‌ಎಸ್ ಕೊಡುಗೆಗಳನ್ನು ಎತ್ತಿ ತೋರಿಸುವ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಯಲ್ಲಿ ಕಳ್ಳತನ – 12 ಲಕ್ಷ ಮೌಲ್ಯದ ಚಿನ್ನ, 29 ಲಕ್ಷ ಕ್ಯಾಶ್ ಕಳವು

    1925ರ ವಿಜಯದಶಮಿಯಂದು ಆರ್‌ಎಸ್‌ಎಸ್ ಸ್ಥಾಪನೆಗೊಂಡಿದ್ದು, 2025ರ ವಿಜಯದಶಮಿಗೆ 100 ವರ್ಷಗಳನ್ನು ಪೂರೈಸಲಿದೆ. ಇತ್ತೀಚಿಗೆ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಸಾಧನೆಯನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಹ್ಲಾದ್ ಜೋಶಿ ಕಿಡಿ

    ತಮ್ಮ 126ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆರ್‌ಎಸ್‌ಎಸ್ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ ಎಂದಿದ್ದರು. ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ‍್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು ಎಂದು ಹೇಳಿದ್ದರು. ಇದನ್ನೂ ಓದಿ: ವಿಶ್ವಕರ್ಮ ಮಂಡಳಿ ಮಾಡಿ ಸರ್ಕಾರ ಮರೆತಂತಿದೆ: ಶಂಕರಾತ್ಮಾನಂದ ಸರಸ್ವತಿ ಶ್ರೀ ಕಿಡಿ

    ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ‘ರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮ’ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು ಆರ್‌ಎಸ್‌ಎಸ್ ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂದು ಶ್ಲಾಘಿಸಿದ್ದರು. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

  • ಕಾಸು ಕಂಡು ಕವಿಯಾದ ನಟ ಜಗ್ಗೇಶ್

    ಕಾಸು ಕಂಡು ಕವಿಯಾದ ನಟ ಜಗ್ಗೇಶ್

    ತಿಸಿದ ಹಳೆ ಕಾಲದ ಕಾಸು ನೋಡಿ ಜಗ್ಗೇಶ್ ಕವಿಯಾಗಿದ್ದಾರೆ. ತಮ್ಮ ಚಿಕ್ಕ ವಯಸ್ಸಿನಲ್ಲಿದ್ದ, ತಮ್ಮ  ತಂದೆ ಹಾಗೂ ತಾತನ ಕಾಲದ ನಾಣ್ಯಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಕವಿತೆಯನ್ನೇ ಬರೆದಿದ್ದಾರೆ. ಜೊತೆಗೆ ಅದರ ಹಿಂದಿನ ಕಥನವನ್ನೂ ಅವರು ಬರೆದುಕೊಂಡಿದ್ದಾರೆ.

    JAGGESH

    ಓ ಕಾಸುಗಳೆ ನಿಮ್ಮ ನೋಡಿದಾಗ

    ಅಮ್ಮನ ದೇವರ ಹುಂಡಿ ನೆನಪಾಯಿತು

    ಓ ಕಾಸುಗಳೆ ನಿಮ್ಮ ನೋಡಿದಾಗ

    ಅಪ್ಪನ ಬೆವರಿನ ಶ್ರಮ ನೆನಪಾಯಿತು

    ಓ ಕಾಸುಗಳೆ ನಿಮ್ಮ ನೋಡಿದಾಗ

    ನನ್ನ ತಾತ ಕೊಟ್ಟ ಪ್ರೀತಿ ಕಾಣಿಕೆ ನೆನಪಾಯಿತು

    ಓ ಕಾಸುಗಳೆ ನಿನ್ನ ನಾನು ಕೂಡಿಟ್ಟು

    ಒಂದು ದಿನ ಶ್ರೀಮಂತ ಆಗುವೆ ಎಂದ ಶಪಥ ನೆನಪಾಯಿತು

    ಓ ಕಾಸುಗಳೆ ನೀವೇ ನನ್ನ ಬಾಲ್ಯದ ಗೆಳೆಯರಾಗಿದ್ದು ನೆನಪಾಯಿತು

    ಓ ಕಾಸುಗಳೆ ನಿಮ್ಮ ಬಳಸಿ ರಾಜಣ್ಣನ ಸಿನಿಮಾ ನೋಡಿದ ನೆನಪಾಯಿತು

    ಹೀಗೆ ಕಾವ್ಯದ ಮೂಲಕ ತಮ್ಮ ಜೀವನವನ್ನು ಮೆಲುಕು ಹಾಕಿದ್ದಾರೆ ಜಗ್ಗೇಶ್. ಇವರ ಕವಿತ್ವಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ತಮ್ಮ ನೆನಪುಗಳನ್ನೂ ಜಗ್ಗೇಶ್ ಜೊತೆ ಹಲವಾರು ಜನರು ಹಂಚಿಕೊಂಡಿದ್ದಾರೆ.

  • ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್

    ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್

    ತೆಲುಗು ಚಿತ್ರರಂಗದ ದಂತಕಥೆ, ಮಾಜಿ ಸಿಎಂ ದಿವಗಂತ ಎನ್.ಟಿ.ರಾಮರಾವ್  (NT Rama Rao)ಅವರ ಜನ್ಮ ಶತಮಾನೋತ್ಸವ ನೆನಪಿಗಾಗಿ 100 ರೂಪಾಯಿ ಮುಖಬೆಲೆಯ ನಾಣ್ಯವನ್ನು (Coin) ಬಿಡುಗಡೆ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ನಾಣ್ಯವನ್ನು ರಿಲೀಸ್ ಮಾಡಿದ್ದಾರೆ.

    ಆಂಧ್ರ ಪ್ರದೇಶದಲ್ಲಿ ಎನ್.ಟಿ.ಆರ್ ಅವರ ಜನ್ಮ ಶತಮಾನೋತ್ಸವದನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳ ಜೊತೆಗೆ ನೂರು ರೂಪಾಯಿ ನಾಣ್ಯ ಕೂಡ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಎನ್.ಟಿ.ಆರ್ ಪುತ್ರರು ಹಾಗೂ ಪುತ್ರಿಯರು ಹಾಜರಿದ್ದರು.

     

    ಕೇಂದ್ರ ಸರಕಾರ ರಿಲೀಸ್ ಮಾಡಿರುವ ನೂರು ರೂಪಾಯಿ ಮುಖಬೆಲೆಯ ನಾಣ್ಯವು, ಶೇಕಡಾ 50ರಷ್ಟು ಬೆಳ್ಳಿ, ಶೇಕಡಾ 40ರಷ್ಟು ತಾಮ್ರ ಮತ್ತು ಶೇಕಡಾ 5ರಷ್ಟು ಸತು ಇದೆ. ಒಂದು ಬದಿಯಲ್ಲಿ ‘ನಂದಮೂರಿ ತಾರಕ ರಾಮರಾವ್ ಶತಜಯಂತಿ’ ಎಂದು ಬರೆದಿದ್ದರೆ ಮತ್ತೊಂದು ಬದಿಯಲ್ಲಿ ಮೂರು ಸಿಂಹ ಹಾಗೂ ಅಶೋಕ ಚಕ್ರವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ನವದೆಹಲಿ: ನೂತನ ಸಂಸತ್ ಭವನ (New Parliament Building) ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು (Rs.75 Coin) ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

    75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ಎಂದು ತಿಳಿಸಿದೆ.

    ನಾಣ್ಯದ ಇನ್ನೊಂದು ಬದಿಯಲ್ಲಿ ನೂತನ ಸಂಸತ್ತಿನ ಸಂಕೀರ್ಣದ ಚಿತ್ರವನ್ನು ಹೊಂದಿರಲಿದೆ. ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.

    ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸವನ್ನು ಹೊಂದಿರಲಿದೆ. ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಬಳಸಿ ನಾಣ್ಯ ತಯಾರಿಸಲಾಗುತ್ತಿದ್ದು, ಇದು 35 ಗ್ರಾಂ ತೂಗಲಿದೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ಈ ವಿಶೇಷ ನಾಣ್ಯವನ್ನು ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥವಾಗಿ ಬಿಡುಗಡೆಗೊಳಿಸುತ್ತಿರುವುದು ಮಾತ್ರವಲ್ಲದೇ ಇದು 75 ವರ್ಷಗಳ ಸ್ವತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವದ ಸಂಕೇತವೂ ಆಗಿರಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

    ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ 20ಕ್ಕೂ ಅಧಿಕ ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ, ಸಮಾಜವಾದಿ ಪಾರ್ಟಿ ಸೇರಿದಂತೆ ಹಲವು ಪಕ್ಷಗಳು ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಇದನ್ನೂ ಓದಿ: New Parliament Building ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಜೋರು – ವಿಪಕ್ಷಗಳ ಬಹಿಷ್ಕಾರ ಅಸ್ತ್ರಕ್ಕೆ ಪ್ರಧಾನಿ ಮೋದಿ ಕೌಂಟರ್

  • 3 ವರ್ಷಗಳಿಂದ 1 ರೂ. ನಾಣ್ಯ ಸಂಗ್ರಹಿಸಿ ಕನಸಿನ ಬೈಕ್ ಖರೀದಿಸಿದ ಯುವಕ!

    3 ವರ್ಷಗಳಿಂದ 1 ರೂ. ನಾಣ್ಯ ಸಂಗ್ರಹಿಸಿ ಕನಸಿನ ಬೈಕ್ ಖರೀದಿಸಿದ ಯುವಕ!

    ಚೆನ್ನೈ: ಇಲ್ಲೊಬ್ಬ ಯುವಕ 1 ರೂ. ನಾಣ್ಯಗಳನ್ನು ಕಳೆದ 3 ವರ್ಷಗಳಿಂದ ಸಂಗ್ರಹಿಸಿ ಇದೀಗ 2.6 ಲಕ್ಷ ರೂ. ನೀಡಿ ತನ್ನ ಕನಸಿನ ಬೈಕ್ ಖರಿದಿಸುವ ಮೂಲಕ ಸುದ್ದಿಯಾಗಿದ್ದಾನೆ.

    ತಮಿಳುನಾಡಿನ ಸೇಲಂ ಮೂಲದ ವಿ.ಬೂಬತಿ ಬೈಕ್ ಖರೀದಿಸಿದ ಯುವಕ. ಬೂಬತಿ ಬಿಸಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ನಂತರ ಯೂಟ್ಯೂಬ್ ಚಾನೆಲ್ ಆರಂಭಿಸಿದ.

    ಬೂಬತಿ ಮೂರು ವರ್ಷಗಳ ಹಿಂದೆ ಬೈಕ್ ಖರೀದಿಸುವ ಕನಸನ್ನು ಕಂಡಿದ್ದ. ಆದರೆ ಈತನ ಬಳಿ ಹಣವಿರಲಿಲ್ಲ. ಆದರೂ ಧೃತಿಗೆಡದ ಆತ, ಮೂರು ವರ್ಷದಿಂದ ಅದಕ್ಕಾಗಿ ಹಣವನ್ನು ಉಳಿತಾಯ ಮಾಡಲು ಪ್ರಾರಂಭಿಸಿದ. ತನ್ನ ಪಿಗ್ಗಿ ಬ್ಯಾಂಕ್‍ನಲ್ಲಿ ಪ್ರತಿದಿನ 1 ರೂ. ನಾಣ್ಯಗಳನ್ನು ಹಾಕುತ್ತಿದ್ದ. ಹೀಗೆ 1 ರೂ. ನಾಣ್ಯವನ್ನು ಸಂಗ್ರಹಿಸಿ ಒಟ್ಟು 2.6ಲಕ್ಷ ರೂ. ಹಣವನ್ನು ಉಳಿತಾಯ ಮಾಡಿದ್ದಾನೆ.

    ನಂತರ ಬೂಬತಿ ಈ ನಾಣ್ಯವನ್ನೆಲ್ಲ ಬೈಕ್ ಶೋರೂಂಗೆ ತೆಗೆದುಕೊಂಡು ಹೋಗಿದ್ದಾನೆ. ತಾನು ಖರೀದಿಸುವ ಹೊಸ ಬಜಾಜ್ ಡೊಮಿನಾರ್ ಬೈಕ್‍ಗೆ ಈ ನಾಣ್ಯಗಳನ್ನೆಲ್ಲ ನೀಡಿದ್ದಾನೆಲ್ಲಿದನ್ನು ಕಂಡು ಶೋ ರೂಂ ಸಿಬ್ಬಂದಿ ದಂಗಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್ ಅಧ್ಯಕನ ಹೇಳಿಕೆ ಪ್ರಸಾರ ಮಾಡಬೇಡಿ- ಎಚ್ಚರಿಕೆ ಕೊಟ್ಟ ರಷ್ಯಾ

    ನಂತರ ಬೈಕ್ ಶೋರೂಂನ ಸಿಬ್ಬಂದಿ ಆ ನಾಣ್ಯಗಳನ್ನು ಏಣಿಸಲು ಪ್ರಾರಂಭಿಸಿದ್ದಾರೆ. ಸತತ 10 ಗಂಟೆಗಳ ಕಾಲ 1ರೂ. ನಾಣ್ಯದ 2.6ಲಕ್ಷ ರೂ.ಗಳನ್ನು ಎಣಿಕೆ ಮಾಡಿ ಬೂಬತಿಗೆ ಬೈಕ್‍ನ್ನು ನೀಡಿದ್ದೇವೆ ಎಂದು ಭಾರತ್ ಏಜೆನ್ಸಿಯ ವ್ಯವಸ್ಥಾಪಕ ಮಹಾವಿಕ್ರಾಂತ್ ಹೇಳಿದರು. ಇದನ್ನೂ ಓದಿ: ಹಾವೇರಿಯಲ್ಲಿ ಹಿಜಬ್ ತೆಗೆದು SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು

  • ಐಫೋನ್ ಬದಲು ಸೋಪ್ ಸಿಕ್ಕಿದ್ದ ಗ್ರಾಹಕನಿಗೆ 70,900 ರೂ. ವಾಪಸ್

    ಐಫೋನ್ ಬದಲು ಸೋಪ್ ಸಿಕ್ಕಿದ್ದ ಗ್ರಾಹಕನಿಗೆ 70,900 ರೂ. ವಾಪಸ್

    ಆಲುವಾ (ಕೇರಳ): ಐಫೋನ್ ಬದಲು ಬಟ್ಟೆ ಒಗೆಯುವ ಸೋಪ್ ಹಾಗೂ 5 ರೂಪಾಯಿ ನಾಣ್ಯ ಸಿಕ್ಕಿದ ಗ್ರಾಹಕನಿಗೆ ಅಮೆಜಾನ್ 70,900 ರೂ. ವಾಪಸ್ ಕೊಟ್ಟಿದೆ. ಆಲುವಾ ನಿವಾಸಿ ನೂರುಲ್ ಅಮೀನ್ ಎಂಬವರು ಐಫೋನ್ 12 ಖರೀದಿಸಲೆಂದು 70,900 ರೂಪಾಯಿಯನ್ನು ಅಮೆಜಾನ್ ಮೂಲಕ ಪಾವತಿಸಿದ್ದರು. ಆದರೆ ಪೊಲೀಸ್ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಪಾವತಿಸಿದ ಸಂಪೂರ್ಣ ಹಣ ಮೋಸ ಹೋದ ಗ್ರಾಹಕನ ಖಾತೆಗೆ ವಾಪಾಸಾಗಿದೆ.

    ಏನಾಗಿತ್ತು?: ಕೇರಳದ ನೂರುಲ್ ಅಮೀನ್ ಅಕ್ಟೋಬರ್ 12 ರಂದು ಅಮೆಜಾನ್ ಮೂಲಕ ಐಫೋನ್ 12 ಆರ್ಡರ್ ಮಾಡಿದ್ದರು. ಇದಕ್ಕೆ ಅವರು ತಮ್ಮ ಕ್ರೆಡಿಟ್ ಕಾರ್ಡ್ ಬಳಸಿದ್ದರು. ಆದರೆ ಮನೆಗೆ ಬಂದ ಪಾರ್ಸೆಲ್ ಓಪನ್ ಮಾಡಿದಾಗ ಅದರಲ್ಲಿ ಮೊಬೈಲ್ ಬದಲು ಬಟ್ಟೆ ಒಗೆಯುವ ಸೋಪ್ ಹಾಗೂ 5 ರೂಪಾಯಿ ನಾಣ್ಯ ಸಿಕ್ಕಿತ್ತು. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ಪ್ರಮುಖ ಆನ್‍ಲೈನ್ ಸ್ಟೋರ್‌ನ ಹೈದರಾಬಾದ್‍ನಲ್ಲಿರುವ ಮಾರಾಟಗಾರರು ಈ ಫೋನನ್ನು ಕಳಿಸಿದ್ದರು. ಆಲುವಾ ತಲುಪುವ ಮುನ್ನ ಸೇಲಂನಲ್ಲಿ ಈ ಫೋನ್ ಇತ್ತು ಎಂಬ ವಿಚಾರ ಆನ್‍ಲೈನ್ ಟ್ರ್ಯಾಕಿಂಗ್ ಮೂಲಕ ಗೊತ್ತಾಗಿದೆ. ಹೀಗಾಗಿ ಅನುಮಾನ ಬಂದ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಮುಂದೆಯೇ ಈ ಬಾಕ್ಸ್ ಓಪನ್ ಮಾಡಿದ್ದರು. ಜೊತೆಗೆ ಇದರ ವೀಡಿಯೋ ಕೂಡಾ ಶೂಟ್ ಮಾಡಿದ್ದರು. ಇದನ್ನೂ ಓದಿ: ಆರ್ಡರ್ ಮಾಡಿದ್ದು ಐಫೋನ್, ಸಿಕ್ಕಿದ್ದು ಬಾರ್ ಸೋಪ್, 5ರೂ. ನಾಣ್ಯ – ವ್ಯಕ್ತಿ ಶಾಕ್

    ಬಾಕ್ಸ್ ಓಪನ್ ಮಾಡಿದಾಗ ಫೋನ್‍ನಷ್ಟೇ ತೂಕ ಬರುವ ವಸ್ತುಗಳನ್ನು ಬಾಕ್ಸ್‌ನಲ್ಲಿ ಜೋಡಿಸಲಾಗಿತ್ತು. ನೂರುಲ್ ಅಮೀನ್ ಆಗಾಗ ಆನ್‍ಲೈನ್ ಮೂಲಕ ವಸ್ತುಗಳ ಖರೀದಿ ಮಾಡುತ್ತಿದ್ದರು. ತೆಲಂಗಾಣದಿಂದ ಕೇರಳಕ್ಕೆ ಕಳಿಸುವ ವಸ್ತುಗಳು 2 ದಿವಸದೊಳಗೆ ಕೇರಳಕ್ಕೆ ಬಂದು ತಲುಪುತ್ತಿತ್ತು. ಆದರೆ ಈ ಬಾರಿ ಮೂರು ದಿನ ಕಳೆದ ನಂತರ ಬಾಕ್ಸ್ ತಲುಪಿದೆ. ಈ ಬಗ್ಗೆ ಆನ್‍ಲೈನ್ ಕಂಪೆನಿಯ ಕಸ್ಟಮರ್ ಕೇರ್ ಹಾಗೂ ಕೇರಳ ಪೊಲೀಸ್ ಸೈಬರ್ ಸೆಲ್‍ಗೆ ದೂರು ಸಲ್ಲಿಸಿದ್ದರು.

    ಬಳಿಕ ಜಿಲ್ಲಾ ಎಸ್‍ಪಿ ಕಾರ್ತಿಕ್‍ಗೆ ದೂರು ನೀಡಿದ್ದರು. ಎಸ್‍ಪಿ ನೇತೃತ್ವದಲ್ಲಿ ಸೈಬರ್ ಠಾಣೆಯ ವಿಶೇಷ ತಂಡ ತನಿಖೆ ಶುರು ಮಾಡಿತು. ಪೊಲೀಸರು ಅಮೆಜಾನ್ ಸಂಪರ್ಕಿಸಿದರು. ನೂರುಲ್‌ ಅಮೀನ್‌ಗೆ ಬಂದ ಮೊಬೈಲ್ ಬಾಕ್ಸ್‌ನಲ್ಲಿ ಐಎಂಇಐ ನಂಬರ್ ಇತ್ತು. ಇದನ್ನು ಪರಿಶೀಲನೆ ನಡೆಸಿದಾಗ ಮೊಬೈಲ್ ಜಾಖರ್ಂಡ್‍ನಲ್ಲಿ ಬಳಕೆಯಾಗುತ್ತಿರುವ ಮಾಹಿತಿ ಸಿಕ್ಕಿದೆ. ಅದೇ ಐಫೋನ್‍ಗೆ ಆಪಲ್ ಸ್ಟೋರ್ ಖಾತೆಯೂ ಇತ್ತು. ಹಣ ವಾಪಸ್ ಸಿಕ್ಕಿದರೂ ಪ್ರಕರಣ ಮುಂದುವರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಒಂದೇ ವಿಮಾನದಲ್ಲಿ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ – ಇದರ ಹಿಂದಿನ ರಹಸ್ಯವೇನು?

    ಕಳೆದ ತಿಂಗಳು ಕೇರಳದ ಪರವೂರ್ ಎಂಬಲ್ಲಿನ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಒಂದೂ ಕಾಲು ಲಕ್ಷದ ಲ್ಯಾಪ್‍ಟಾಪ್ ಬುಕ್ ಮಾಡಿದ್ದರು. ಅದರೆ ಅವರಿಗೆ ಬಂದ ಬಾಕ್ಸ್‌ನಲ್ಲಿ ನ್ಯೂಸ್ ಪೇಪರ್‌ಗಳು ಮಾತ್ರ ಇದ್ದವು. ಬಳಿಕ ಜಿಲ್ಲಾ ಪೊಲೀಸರು ಮಧ್ಯ ಪ್ರವೇಶಿಸಿ ಹಣ ವಾಪಸ್ ಕೊಡಿಸಿದ್ದರು. ಈ ಪ್ರಕರಣದ ತನಿಖೆಯೂ ಮುಂದುವರಿದಿದೆ.

     

     

     

  • ಆರ್ಡರ್ ಮಾಡಿದ್ದು ಐಫೋನ್, ಸಿಕ್ಕಿದ್ದು ಬಾರ್ ಸೋಪ್, 5ರೂ. ನಾಣ್ಯ – ವ್ಯಕ್ತಿ ಶಾಕ್

    ಆರ್ಡರ್ ಮಾಡಿದ್ದು ಐಫೋನ್, ಸಿಕ್ಕಿದ್ದು ಬಾರ್ ಸೋಪ್, 5ರೂ. ನಾಣ್ಯ – ವ್ಯಕ್ತಿ ಶಾಕ್

    ತಿರುವನಂತಪುರ: ಇ-ಕಾಮರ್ಸ್ ವೆಬ್ ಸೈಟ್‍ನಲ್ಲಿ ಆರ್ಡರ್ ಮಾಡಿದಾಗ ನಿಮಗೆ ತಪ್ಪಾದ ಪ್ರಾಡೆಕ್ಟ್ ಬರುವುದು ಹೊಸ ವಿಚಾರವೇನಲ್ಲ. ಸದ್ಯ ಕೇರಳದ ವ್ಯಕ್ತಿಯೋರ್ವ ಐಷಾರಾಮಿ ಐಫೋನ್ ಆರ್ಡರ್ ಮಾಡಿದ್ದು, ಅವರಿಗೆ ಐಫೋನ್ ಅಲ್ಲಿ ಪಾತ್ರೆ ತೊಳೆಯುವ ಸೋಪು ಮತ್ತು 5 ರೂ. ನಾಣ್ಯ ಸಿಕ್ಕಿದೆ.

    ಹೌದು ಅಲುವಾ ನಿವಾಸಿಯಾದ ನೂರುಲ್ ಅಮೀನ್, ಆರ್ಡರ್ ಮಾಡಿದ್ದ ಆಪಲ್ ಸ್ಮಾರ್ಟ್ ಫೋನ್‍ಗಾಗಿ ಕಾಯುತ್ತಿದ್ದರು. ಆದರೆ ಐಫೋನ್ ಬಾಕ್ಸ್‌ನಲ್ಲಿ ಸೋಪನ್ನು ಸ್ವೀಕರಿಸುತ್ತಾರೆ ಎಂಬುವುದನ್ನು ಎಂದೂ ಊಹಿಸಿರಲಿಲ್ಲ. ಇದನ್ನೂ ಓದಿ:  ಬೆಂಗಳೂರಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧ: ಜಗದೀಶ್

    5 rs coin

    ಸದ್ಯ ವೈರಲ್ ಆಗುತ್ತಿರುವ ಫೋಟೋದಲ್ಲಿ, ಹಸಿರು ಬಣ್ಣದ ವಿಮ್ ಡಿಶ್ ವಾಶ್ ಸೋಪ್ ಮತ್ತು 5 ರೂ. ನಾಣ್ಯ ಇರುವುದನ್ನು ಕಾಣಬಹುದಾಗಿದೆ. ನುರುಲ್ 70,900 ರೂ ಸ್ಮಾರ್ಟ್ ಫೋನ್ ಅನ್ನು ಆರ್ಡರ್ ಮಾಡಿದ್ದರು. ಆದರೆ, ಸ್ಮಾರ್ಟ್ ಫೋನ್ ಬದಲಾಗಿ ಪಾತ್ರೆ ತೊಳೆಯುವ ಸಾಬೂನನ್ನು ಪಡೆದಿದ್ದರು. ಹೀಗಾಗಿ ಎನ್‍ಆರ್‍ಐನಲ್ಲಿ ದೂರು ದಾಖಲಿಸಿ ನಂತರ ಅದೃಷ್ಟವಶಾತ್ ಪಾವತಿಸಿದ ಹಣ ಹಿಂಪಡೆದರು.

    ಅಮೀನ್ ಅವರು ಅಕ್ಟೋಬರ್ 12ರಂದು ಐಫೋನ್ ಬುಕ್ ಮಾಡಿದ್ದರು. ಅಕ್ಟೋಬರ್ 15ರಂದು ಆರ್ಡರ್ ಅನ್ನು ಸ್ವೀಕರಿಸಿದ್ದರು.ಇತ್ತೀಚೆಗೆ ಆನ್‍ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನೂ ಓದಿ: ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳ ಹೊರಟರೆ ಸಮಯ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

    ಇದೀಗ ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಅಲ್ಲದೇ ನೂರುಲ್ ಸ್ವೀಕರಿಸಬೇಕಿದ್ದ ಫೋನ್ ಅನ್ನು ಜಾರ್ಖಂಡ್ ನಲ್ಲಿ ಸೆಪ್ಟೆಂಬರ್‌ನಿಂದ ಯಾರೋ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೊಬೈಲ್ ನ ಐಎಂಇಐ ಸಂಖ್ಯೆಯಿಂದಾಗಿ ಇದೆಲ್ಲವನ್ನು ಕಂಡುಹಿಡಿಯಲು ಸಾಧ್ಯವಾಯಿತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಐದು ರೂಪಾಯಿ ನಾಣ್ಯ ನುಂಗಿದ ಬಾಲಕಿ ಸಾವು

    ಐದು ರೂಪಾಯಿ ನಾಣ್ಯ ನುಂಗಿದ ಬಾಲಕಿ ಸಾವು

    ಮೈಸೂರು: ಪುಟ್ಟ ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಂಡರೂ ಸಾಲದು ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಬಾಲಕಿಯೊಬ್ಬಳು 5 ರೂ. ನಾಣ್ಯ ನುಂಗಿ ಮೃತಪಟ್ಟ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

    ಮೃತ ಬಾಲಕಿಯನ್ನು ಖುಷಿ(4) ಎಂದು ಗುರುತಿಸಲಾಗಿದೆ. ಈ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ 

    ಖುಷಿ ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದಳು. ಎಂದಿನಂತೆ ಶುಕ್ರವಾರವೂ ಆಟವಾಡುತ್ತಿದ್ದಳು. ಈ ವೇಳೆ ತನ್ನ ಕೈಯಲ್ಲಿದ್ದ ನಾಣ್ಯವನ್ನು ಖುಷಿ ನುಂಗಿದ್ದಾಳೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ಖುಷಿಯನ್ನು ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಂತೆಯೇ ಖುಷಿ ಕೊನೆಯುಸಿರೆಳೆದಿದ್ದಾಳೆ.

  • ಪಾರಂಪರಿಕ ನಾಣ್ಯ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಪಾನ್ ಬೀಡಾ ಮಾಲೀಕ

    ಪಾರಂಪರಿಕ ನಾಣ್ಯ ಆಸೆಗೆ ಬಿದ್ದು 7 ಲಕ್ಷ ಕಳೆದುಕೊಂಡ ಪಾನ್ ಬೀಡಾ ಮಾಲೀಕ

    ದಾವಣಗೆರೆ: ಹಳೆಯ ಕಾಲದ ಪಾರಂಪರಿಕ ನಾಣ್ಯ ನೀಡುವುದಾಗಿ ನಂಬಿಸಿ ಮುಂಬೈನ ಪಾನ್ ಬೀಡಾ ಶಾಪ್ ಮಾಲೀಕನಿಗೆ 7 ಲಕ್ಷ ವಂಚಿಸಿರುವ ಪ್ರಕರಣ ದಾವಣಗೆರೆಯ ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ನಡೆದಿದೆ.

    ಪೂರ್ವ ಮುಂಬೈನ ಗುಲಾಬ್ ಚಂದ್ ಶೀತಲ್ ಪ್ರಸಾದ್ ಗುಪ್ತಾ ಮೋಸಕ್ಕೂಳಗಾದರು. ಪೂರ್ವ ಮುಂಬೈನ ಹರ್ಷದ್ ರಾಜ್ ಕುಮಾರ್ ಪಾಠಕ್, ಕರ್ನಾಟಕದ ರಮೇಶ್ ಹಾಗೂ ಮಹಾರಾಷ್ಟ್ರದ ನಾಸಿಕ್‍ನ ಅಮನ್ ಶೇಖ್ ಹಾಗೂ ಜೀಶಾನ್ ಶೇಖ್ ಆರೋಪಿಗಳಾಗಿದ್ದಾರೆ.

    ಗುಲಾಬ್ ಚಂದ್ ಹಾಗೂ ಹರ್ಷದ್ ರಾಜ್‍ಕುಮಾರ್ ಪಾಠಕ್ ಅಕ್ಕಪಕ್ಕದ ಮನೆಯವರಾಗಿದ್ದು, ಆರೋಪಿ ಪಾಠಕ್, ಅಮನ್ ಶೇಖ್ ಹಾಗೂ ಜೀಶನ್ ಶೇಖ್ ಅವರನ್ನು ಗುಲಾಬ್ ಚಂದ್‍ಗೆ ಪರಿಚಯ ಮಾಡಿಕೊಟ್ಟಿದ್ದಾನೆ. ಈ ವೇಳೆ ಅಮನ್ ಶೇಖ್ ಎಂಬಾತ ಕರ್ನಾಟಕದಲ್ಲಿ ನನ್ನ ಸ್ನೇಹಿತ ರಮೇಶ್ ಬಳಿ 5 ಕೆ.ಜಿ ಪಾರಂಪರಿಕ ನಾಣ್ಯವನ್ನು ಇಟ್ಟಿದ್ದು, ಹಣಕಾಸಿನ ಸಮಸ್ಯೆಯಿಂದಾಗಿ ಕಡಿಮೆ ಬೆಲೆಗೆ ನಾಣ್ಯಗಳನ್ನು ಮಾರಾಟ ಮಾಡುತ್ತಿದ್ದಾನೆ. ಹುಬ್ಬಳ್ಳಿಯ ಚೆಕ್ ಪೋಸ್ಟ್ ಬಳಿ ನನ್ನ ಸಹೋದರ ಜೀಶನ್‍ನೊಂದಿಗೆ ನಾಣ್ಯಗಳನ್ನು ನೋಡಿದ್ದೇನೆ’ ಎಂದು ಗುಲಾಬ್ ಚಂದ್‍ಗೆ ತಿಳಿಸಿದ್ದಾನೆ.

    ಕಡಿಮೆ ಬೆಲೆಗೆ ನಾಣ್ಯಗಳನ್ನು ತಂದು ಮುಂಬೈನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ಆಮಿಷ ಒಡ್ಡಿದ ಆರೋಪಿಗಳು ಆತನ ಬಳಿ ಇರುವ ಚಿನ್ನದ ನಾಣ್ಯಗಳಿಗೆ 10 ಲಕ್ಷವಾಗುತ್ತದೆ. ನಾನು ಚೌಕಾಸಿ ಮಾಡಿ 7 ಲಕ್ಷಕ್ಕೆ ಕೊಡಿಸುತ್ತೇನೆ ಎಂದು ಗುಲಾಬ್ ಚಂದ್ ಅವರನ್ನು ನಂಬಿಸಿದ್ದಾರೆ. ಇದನ್ನು ನಂಬಿದ ಗುಲಾಬ್ ಚಂದ್ ಪತ್ನಿ ಹಾಗೂ ಹರ್ಷದ್ ರಾಜ್ ಕುಮಾರ್ ಜೊತೆ ಹುಬ್ಬಳ್ಳಿಗೆ ಹೊರಟು ಬಂದಿದ್ದಾರೆ. ಆದರೆ ಆರೋಪಿಗಳು ಲೋಕಿಕೆರೆ ರಸ್ತೆಯ ಅಯ್ಯಪ್ಪ ದೇವಾಲಯದ ಬಳಿ ಬರಲು ಹೇಳಿದ್ದಾರೆ. ಅದರಂತೆಯೇ ಲೋಕಿಕೆರೆಗೆ ಬಂದ ಗುಲಾಬ್ ಚಂದ್ ಕುಟುಂಬಕ್ಕೆ ರಮೇಶ್ ಎಂಬಾತ ನನ್ನ ಬಳಿ 3,600 ಪಾರಂಪರಿಕ ನಾಣ್ಯಗಳು ಇವೆ ಎಂದು ಹೇಳಿ ಕುಂಕುಮ ಲೇಪಿಸಿರುವ ನಾಣ್ಯಗಳನ್ನು ನೀಡಿದ್ದಾನೆ. ಇದನ್ನೂ ಓದಿ:ಸೈಲೆನ್ಸರ್ ವಿರೂಪಗೊಳಿಸಿ ಚಾಲನೆ – 40ಕ್ಕೂ ಹೆಚ್ಚು ವಾಹನಗಳ ಮೇಲೆ ಕ್ರಮ

    ಮುಂಬೈನಲ್ಲಿ ಹೋಗಿ ನಾಣ್ಯವನ್ನು ಪರೀಕ್ಷಿಸಿದಾಗ ತಾಮ್ರಲೇಪಿತ ನಾಣ್ಯಗಳು ಎಂದು ತಿಳಿದುಬಂದಿದೆ. ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಾನು ಮೋಸಕ್ಕೆ ಒಳಗಾಗಿರುವುದು ಗೊತ್ತಾಗಿ ವಾಪಸ್ ಬಂದು ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.ಇದನ್ನೂ ಓದಿ:ನಂದಿಬೆಟ್ಟದ ತಪ್ಪಲಲ್ಲಿ ರಾಜಾರೋಷವಾಗಿ ಪ್ರವಾಸಿಗರಿಂದ ಹುಕ್ಕಾ ಸೇವನೆ