Tag: ನಾಥುರಾಮ್ ಗೋಡ್ಸೆ

  • ನಿಜವಾದ ಹಿಂದುತ್ವವಾದಿಗಳು ಜಿನ್ನಾನನ್ನು ಕೊಲ್ಲುತ್ತಿದ್ದರು: ಸಂಜಯ್ ರಾವತ್

    ನಿಜವಾದ ಹಿಂದುತ್ವವಾದಿಗಳು ಜಿನ್ನಾನನ್ನು ಕೊಲ್ಲುತ್ತಿದ್ದರು: ಸಂಜಯ್ ರಾವತ್

    ಮುಂಬೈ: ನಿಜವಾದ ಹಿಂದುತ್ವವಾದಿಗಳು ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಕೊಲ್ಲುತ್ತಿದ್ದರೆ ಹೊರತು ಮಹಾತ್ಮ ಗಾಂಧಿಯನ್ನಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಭಾರತವನ್ನು ವಿಭಜಿಸಿ ಪಾಕಿಸ್ತಾನದ ಹುಟ್ಟಿಗೆ ಜಿನ್ನಾ ಕಾರಣರಾದರು. ಅವರನ್ನು ಅಂದು ಯಾರದರೂ ಕೊಂದಿದ್ದರೆ ನಿಜವಾದ ಹಿಂದೂತ್ವವಾದಿ ಎನಿಸಿಕೊಳ್ಳುತ್ತಿದ್ದರು. ಆದರೆ ಅಂತಹ ಯಾವ ಕೆಲಸವನ್ನು ಮಾಡದೇ ಗೋಡ್ಸೆ ಗಾಂಧಿ ಅವರನ್ನು ಕೊಂದಿದ್ದು ತಪ್ಪು, ಗಾಂಧೀಜಿ ಹತ್ಯೆಗೆ ಇಡೀ ಜಗತ್ತೆ ಶೋಕವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರತಿಕ್ರಿಯಿಸಿದರು.

    ಹಿಂದುತ್ವವಾದಿ ಮಹಾತ್ಮ ಗಾಂಧಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಆದರೆ ಇಂದು ಸತ್ಯವೇ ಮೇಲುಗೈ ಸಾಧಿಸಿದೆ. ಬಾಪು ಇನ್ನೂ ಜೀವಂತವಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ:  ಗಾಂಧೀಜಿಗೆ ಒಬ್ಬ ಹಿಂದುತ್ವವಾದಿ ಗುಂಡು ಹಾರಿಸಿ ಕೊಂದ: ರಾಹುಲ್‌ ಗಾಂಧಿ

    ಜ.30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಇಂದು ಬೆಳಿಗ್ಗೆ ಗಾಂಧೀಜಿಯವರ ಸಮಾಧಿ ಸ್ಥಳಕ್ಕೆ ಅನೇಕ ಗಣ್ಯರು ತೆರಳಿ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

  • ಹೆಗಡೆ, ನಳಿನ್ ವಿರುದ್ಧ ಕ್ರಮ ಯಾಕಿಲ್ಲ – ಬಿಜೆಪಿ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

    ಹೆಗಡೆ, ನಳಿನ್ ವಿರುದ್ಧ ಕ್ರಮ ಯಾಕಿಲ್ಲ – ಬಿಜೆಪಿ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

    ತುಮಕೂರು: ನಾಥುರಾಮ್ ಗೋಡ್ಸೆ ದೇಶಭಕ್ತ ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತರಾಜು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದಕ್ಕೆ ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನ ಕ್ರಮವನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾರ್ಯಕರ್ತರು, ನಳಿನ್ ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆಯಂತವರ ವಿರುದ್ಧ ಕ್ರಮ ಕೈಗೊಳ್ಳಲಾಗದ ನಾಯಕರು ನಿಷ್ಠಾವಂತ ಕಾರ್ಯಕರ್ತನ ಮೇಲೆ ಕ್ರಮ ಕೈಗೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

    ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರನ್ನು ಉಚ್ಚಾಟನೆ ಮಾಡಿದ್ದೀರಾ? ತಾಕತ್ತಿದ್ದರೆ ಅಂದಿನಿಂದಲೂ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಶಾಸಕರು, ಸಂಸದರ ವಿರುದ್ಧ ಕ್ರಮಕೈಗೊಳ್ಳಿ. ಬಿಜೆಪಿಯ ಷಂಡ ನಾಯಕರೇ ನಿಮ್ಮ ಬೊಗಳೆ ಹಿಂದುತ್ವ ಎಷ್ಟು ಸಾರಿ ಸಾಬೀತು ಮಾಡುತ್ತೀರಿ. ಹನುಮಂತರಾಜು ಹೇಳಿಕೆಗೆ ನಾವೆಲ್ಲ ಬದ್ಧ ಎಂದು ರಾಜ್ಯ ಬಿಜೆಪಿ ನಾಯಕರನ್ನು ತೆಗಳಿ ಪೋಸ್ಟ್ ಮಾಡಿದ್ದಾರೆ.

    ತುಮಕೂರು ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತರಾಜು ಅವರು ತನ್ನ ಫೇಸ್‍ಬುಕ್‍ನಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಅವರು ಅಪ್ರತಿಮ ದೇಶಭಕ್ತ ಎಂದು ಶುಕ್ರವಾರ ಪೋಸ್ಟ್ ಹಾಕಿದ್ದಾರು. ಅಷ್ಟೇ ಅಲ್ಲದೆ, ತನ್ನ ಅಸ್ಥಿಯನ್ನು ಸಿಂಧೂ ನದಿಯಲ್ಲಿ ವಿಸರ್ಜನೆ ಮಾಡಬೇಕು ಎಂದು ಮಹಾನ್ ರಾಷ್ಟ್ರಭಕ್ತ ಗೋಡ್ಸೆ ನೇಣಿನ ಕುಣಿಕೆಗೆ ತಲೆ ಕೊಟ್ಟ ಎಂದು ಮತ್ತೊಂದು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ಹನುಮಂತರಾಜು ಅವರನ್ನು ಬಿಜೆಪಿ ತನ್ನ ಪಕ್ಷದಿಂದ ವಜಾ ಮಾಡಿತ್ತು.

  • ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

    ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

    ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದಿದ್ದಾರೆ.

    ಕಳೆದ ಒಂದು ವಾರದಲ್ಲಿ ಎರಡು ಬಾರಿ ನನ್ನ ಖಾತೆ ಹ್ಯಾಕ್ ಆಗಿದೆ. ನನ್ನ ಟೈಮ್ ಲೈನಿನಲ್ಲಿ ಪ್ರಕಟಗೊಂಡ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.