Tag: ನಾಥೂರಾಮ್ ಗೋಡ್ಸೆ

  • ಆಧುನಿಕ ಗೋಡ್ಸೆಗಳಿಂದ ನಿತ್ಯವೂ ಗಾಂಧೀಜಿ ಹತ್ಯೆ: ಓವೈಸಿ

    ಆಧುನಿಕ ಗೋಡ್ಸೆಗಳಿಂದ ನಿತ್ಯವೂ ಗಾಂಧೀಜಿ ಹತ್ಯೆ: ಓವೈಸಿ

    ಮುಂಬೈ: ಮಹಾತ್ಮ ಗಾಂಧೀಜಿ ಅವರನ್ನು ನಾಥೂರಾಮ್ ಗೋಡ್ಸೆ ಒಂದು ಬಾರಿ ಹತ್ಯೆ ಮಾಡಿದರೆ, ಆಧುನಿಕ ಗೋಡ್ಸೆಗಳು ನಿತ್ಯವೂ ಗಾಂಧೀಜಿ ಅವರನ್ನು ಹತ್ಯೆಗೈಯುತ್ತಿದ್ದಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಗಾಂಧೀಜಿ ಹೆಸರಿನಲ್ಲಿ ದೇಶವನ್ನೇ ಮರಳು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗೋಡ್ಸೆಯನ್ನು ತಮ್ಮ ನಾಯಕನೆಂದು ಪರಿಗಣಿಸುತ್ತಾರೆ. ಅವರು ಗಾಂಧೀಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಮನಸ್ಸಿನಲ್ಲಿ ನಾಥೂರಾಮ್ ಗೋಡ್ಸೆಯ ಆಲೋಚನೆಗಳೇ ತುಂಬಿವೆ ಎಂದು ದೂರಿದರು.  ಇದನ್ನೂ ಓದಿ: ಬಿಜೆಪಿಯನ್ನ ಸೋಲಿಸುವಂತೆ ಮುಸ್ಲಿಂ ಸಮುದಾಯಕ್ಕೆ ಅಕ್ಬರುದ್ದೀನ್ ಓವೈಸಿ ಮನವಿ

    ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತದಲ್ಲೆಡೆ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನವಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಚುನಾವಣೆಗೂ ಮುನ್ನ ‘ಮಹಾ’ ಸಿಎಂಗೆ ಭಾರೀ ಹಿನ್ನಡೆ – ತನಿಖೆಗೆ ಸುಪ್ರೀಂ ಸಮ್ಮತಿ

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. 288 ಕ್ಷೇತ್ರಗಳಲ್ಲಿ ಮತದಾನವು ಏಕಕಾಲದಲ್ಲಿಯೇ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಿಟ್ಟಿನಲ್ಲಿ ಎಐಎಂಐಎಂ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

  • ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ: ನಿತೀಶ್ ಕುಮಾರ್

    ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ: ನಿತೀಶ್ ಕುಮಾರ್

    ಪಾಟ್ನಾ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ ಎಂದು ಎನ್‍ಡಿಎ ಮೈತ್ರಿ ಪಕ್ಷದ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.

    ಬಿಹಾರದ ಪಾಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ರಾಜ್‍ಭವನ್‍ನಲ್ಲಿ ಮತದಾನ ಮಾಡಿ ಬಳಿಕ ಮಾತನಾಡಿದ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಪ್ರಜ್ಞಾಸಿಂಗ್ ಹೇಳಿಕೆ ಖಂಡನೀಯ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿರುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಆದರೆ ಪ್ರಜ್ಞಾಸಿಂಗ್ ವಿರುದ್ಧ ಬಿಜೆಪಿ ಕಠಿಣ ಕ್ರಮಕೈಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದವರು ಯಾರೇ ಆಗಿದ್ದರೂ ನಾವು ಸಹಿಸುವುದಿಲ್ಲ. ಸಾಧ್ವಿ ಪ್ರಜ್ಞಾಸಿಂಗ್ ಬಿಜೆಪಿ ನಾಯಕರು ಏನು ಕ್ರಮಕೈಗೊಳ್ಳಲಿದೆ ಎಂದು ಕಾದು ನೋಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ಸುದೀರ್ಘ ಚುನಾವಣೆಯನ್ನು ಬೇಸಿಗೆ ಕಾಲದಲ್ಲಿ ನಡೆಸುವುದು ಸೂಕ್ತವಲ್ಲ. ಚುನಾವಣೆ ನಡೆಸಲು ಇದು ಅನುಕೂಲಕರ ವಾತಾರಣವಲ್ಲ. ಫೆಬ್ರವರಿ-ಮಾರ್ಚ್ ಇಲ್ಲವೇ ಅಕ್ಟೋಬರ್-ನವೆಂಬರ್ ನಲ್ಲಿ ಎರಡರಿಂದ ಮೂರು ಹಂತಗಳಲ್ಲಿ ಚುನಾಚವಣೆ ನಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಬಿಜೆಪಿಯ ತುಮಕೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತರಾಜು ತಮ್ಮ ಫೇಸ್‍ಬುಕ್‍ನಲ್ಲಿ ನಾಥೂರಾಮ್ ಗೋಡ್ಸೆ ಅಪ್ರತಿಮ ದೇಶಭಕ್ತ ಎಂದು ಶುಕ್ರವಾರ ಪೋಸ್ಟ್ ಹಾಕಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಹನುಮಂತರಾಜು ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿ, ಆದೇಶ ಹೊರಡಿಸಿದ್ದರು.

  • ಗೋಡ್ಸೆ ಅಪ್ಪಟ ದೇಶಭಕ್ತ ಎಂದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಕ್ಷದಿಂದ ವಜಾ

    ಗೋಡ್ಸೆ ಅಪ್ಪಟ ದೇಶಭಕ್ತ ಎಂದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಕ್ಷದಿಂದ ವಜಾ

    ತುಮಕೂರು: ನಾಥೂರಾಮ್ ಗೋಡ್ಸೆ ಅಪ್ಪಟ ದೇಶಭಕ್ತ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರನ್ನು ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಿಂದ ವಜಾಗೊಳಿಸಿದ್ದಾರೆ.

    ತುಮಕೂರು ಜಿಲ್ಲೆಯ ಹನುಮಂತರಾಜು ತಮ್ಮ ಫೇಸ್‍ಬುಕ್‍ನಲ್ಲಿ ನಾಥೂರಾಮ್ ಗೋಡ್ಸೆ ಅಪ್ರತಿಮ ದೇಶಭಕ್ತ ಎಂದು ಶುಕ್ರವಾರ ಪೋಸ್ಟ್ ಹಾಕಿದ್ದಾರೆ. ಅಷ್ಟೇ ಅಲ್ಲದೆ, ತನ್ನ ಅಸ್ಥಿಯನ್ನು ಸಿಂಧೂ ನದಿಯಲ್ಲಿ ವಿಸರ್ಜನೆ ಮಾಡಬೇಕು ಎಂದು ಮಹಾನ್ ರಾಷ್ಟ್ರಭಕ್ತ ನಾಥೂರಾಮ್ ಗೋಡ್ಸೆ ನೇಣಿನ ಕುಣಿಕೆಗೆ ತಲೆ ಕೊಟ್ಟ ಅಂತ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

    ಈ ಸಂಬಂಧ ಜಿಲ್ಲಾ ಬಿಜೆಪಿ ಘಟಕದಿಂದ ನೋಟಿಸ್ ಬೆಳಗ್ಗೆ ನೀಡಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಹನುಮಂತರಾಜು ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿ, ಆದೇಶ ಹೊರಡಿಸಿದ್ದಾರೆ.

    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ವಜಾಗೊಳಿಸಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

  • ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ  ಕೈಲಾಶ್ ಸತ್ಯಾರ್ಥಿ ಅವರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ.

    ಟ್ವೀಟ್ ಮೂಲಕ ಕಿಡಿಕಾರಿರುವ ಕೈಲಾಶ್ ಸತ್ಯಾರ್ಥಿ ಅವರು, ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರ ದೇಹವನ್ನು ಹತ್ಯೆ ಮಾಡಿದ. ಆದರೆ ಸಾಧ್ವಿ ಪ್ರಜ್ಞಾಸಿಂಗ್ ಅವರಂತಹ ವ್ಯಕ್ತಿಗಳು ಗಾಂಧೀಜಿಯ ಆತ್ಮವಾದ ಅಹಿಂಸೆ, ಶಾಂತಿ ಹಾಗೂ ಸಹಿಷ್ಣುತೆಯನ್ನು ಕೊಲೆ ಮಾಡುತ್ತಿದ್ದಾರೆ. ಅವರಿಂದ ಸಿಗುವ ಸಣ್ಣ ಪ್ರಯೋಜನವನ್ನು ಬಿಜೆಪಿ ನಾಯಕರು ಪಕ್ಕಕ್ಕೆ ಸರಿಸಬೇಕು. ಈ ಮೂಲಕ ಅಂತಹ ನಾಯಕರನ್ನು ಪಕ್ಷದಿಂದ ವಜಾಗೊಳಿಸಿ ರಾಜಧರ್ಮವನ್ನು ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದು ಸ್ಪಷ್ಟನೆ ನೀಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ವಜಾಗೊಳಿಸಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

  • ಮೊಘಲರು ಬರೋದಕ್ಕಿಂತ ಮೊದಲು ‘ಹಿಂದೂ’ ಪದವೇ ಇರಲಿಲ್ಲ: ಕಮಲ್ ಹಾಸನ್

    ಮೊಘಲರು ಬರೋದಕ್ಕಿಂತ ಮೊದಲು ‘ಹಿಂದೂ’ ಪದವೇ ಇರಲಿಲ್ಲ: ಕಮಲ್ ಹಾಸನ್

    ನವದೆಹಲಿ: ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ‘ಹಿಂದೂ’ ಪದದ ಮೂಲದ ಕುರಿತು ಮಾತನಾಡಿ ಮತ್ತೆ ಸುದ್ದಿಯಾಗಿದ್ದಾರೆ.

    ಹಿಂದೂ ಎಂಬ ಪದವು ವಿದೇಶದಿಂದ ಬಂದಿದೆ. ಭಾರತಕ್ಕೆ ಮೊಘಲರು ಬರುವ ಮೊದಲು ‘ಹಿಂದೂ’ ಪದವೇ ಇರಲಿಲ್ಲ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಸಾವಿರಾರು ವರ್ಷಗಳ ಹಿಂದೆ ದಕ್ಷಿಣ ಭಾರತದಲ್ಲಿದ್ದ ಆಳ್ವಾರರು (ತಮಿಳು ಕವಿಗಳು/ಭಕ್ತರು) ಅಥವಾ ನಾಯನಾರ (ಶಿವ ಭಕ್ತರು)ರು ಕಾಲದ ವೈಷ್ಣವ ಹಾಗೂ ಶೈವ ಕವಿಗಳು ಹಿಂದೂ ಪದ ಬಳಕೆ ಮಾಡಿಯೇ ಇಲ್ಲ ಎಂದು ಹೇಳಿದ್ದಾರೆ.

    ‘ಹಿಂದೂ’ ಪದ ಭಾರತದ್ದಲ್ಲ, ವಿದೇಶದಿಂದ ಬಂದಿರುವುದಾಗಿದೆ. ಮೊಘಲರೋ ಅಥವಾ ಭಾರತಕ್ಕೆ ಬಂದ ಯಾರೋ ಈ ಪದವನ್ನು ನೀಡಿದ್ದಾರೆ. ಅಲ್ಲಿಯವರೆಗೂ ಭಾರತದಲ್ಲಿ ಹಿಂದೂ ಪದದ ಬಳಕೆಯೇ ಇರಲಿಲ್ಲ. ಹೀಗಾಗಿ ನಮಗೆ ಸಾಕಷ್ಟು ಗುರುತುಗಳಿದ್ದರೂ, ಪದಗಳಿದ್ದರೂ ಸಹ ಯಾರೋ ವಿದೇಶಿಗರು ಹೇಳಿದ ಪದವನ್ನು ಒಂದು ಧರ್ಮ ಹಾಗೂ ದೇಶವನ್ನು ಗುರುತಿಸಲು ನಾವೇಕೆ ಬಳಸಬೇಕು ಎಂದು ಪ್ರಶ್ನಿಸಿದ್ದಾರೆ.

    ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು, ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಮಧುರೈ ವಿಧಾನಸಭಾ ಚುನಾವಣೆ ಕ್ಷೇತ್ರ ವ್ಯಾಪ್ತಿಯ ತಿರುಪ್ಪರಾನ್‍ಕುಂದ್ರಮ್‍ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದಿದ್ದ. ಆದರೆ ಅದು ಕಮಲ್ ಹಾಸನ್ ನಿಂತಿದ್ದ ವಾಹನಕ್ಕೆ ತಾಗಿ ಕೆಳಕ್ಕೆ ಬಿದ್ದಿತ್ತು. ಅಷ್ಟೇ ಅಲ್ಲದೆ ಶುಕ್ರವಾರ ಮೊಟ್ಟೆ ಹಾಗೂ ಕಲ್ಲು ಎಸೆಯಲಾಗಿದೆ. ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

  • ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

    ನ್ಯೂಸ್ 24 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ, ಸಾಧ್ವಿ ಪ್ರಜ್ಞಾಸಿಂಗ್ ಅವರು ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿದ್ದಾರೆ. ಈ ಮೂಲಕ ಬಾಪು ಅವರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು. ಇತ್ತ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರು, ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೆ ಹೊರತು ಭಾರತಕ್ಕಲ್ಲ ಎಂದು ಹೇಳಿದ್ದಾರೆ.

    ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ತಿಳಿಸಿದ್ದಾರೆ.

    ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

    10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖವಾಗಿ ಟಾರ್ಗೆಟ್ ಮಾಡಿದ್ದ ರಾಜೀವ್ ಗಾಂಧಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗೋಡ್ಸೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇತ್ತ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಟ್ವಿಟ್ಟರ್ ಖಾತೆಯಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರಿನ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಂ ಗೋಡ್ಸೆ ಈ ಚರ್ಚೆ ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

  • ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

    ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

    ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

    ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17 ಸಾವಿರ. ಈಗ ನೀವೇ ಹೇಳಿ. ಇವರಲ್ಲಿ ಯಾರು ಅತೀ ಕ್ರೂರ ಕೊಲೆಗಾರ ಎಂದು ಪ್ರಶ್ನೆ ಮಾಡಿ ಸಂಸದರು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಪ್ರತಿಕ್ರಿಯೆಗಳು ಬರತೊಡಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಸಂಸದರು, ‘ನನ್ನ ಕೊನೆಯ ಎರಡು ಟ್ವೀಟ್ ಗಳಿಗೆ ಟೀಕೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ. ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನೋವಾಗಿದೆಯೆಂದು ತಿಳಿದ ತಕ್ಷಣ ಟ್ವೀಟ್ ಹಿಂಪಡೆದಿದ್ದೇನೆ. ಚರ್ಚೆ ಇಲ್ಲಿಗೆ ಮುಗಿಸೋಣ’ ಎಂದು ಬರೆದುಕೊಂಡಿದ್ದಾರೆ.

    ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜೀವ್ ಗಾಂಧಿ 17 ಸಾವಿರ ಜನರನ್ನ ಕೊಂದಿದ್ದಾರೆ ಎಂಬ ಕಟೀಲ್ ಅವರ ಟ್ವೀಟ್‍ಗೆ ಕಿಡಿಕಾರಿದ್ದರು. ಬಿಜೆಪಿ ನಾಯಕರ ಇಂತಹ ಮಾತುಗಳಿಂದ ಅವರ ಮನಸಿತ್ಥಿ ಹೇಗಿದೆ ಎಂಬುವುದು ತಿಳಿಯುತ್ತದೆ. ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ಐಕ್ಯತೆಗಾಗಿ ತಮ್ಮ ಪ್ರಾಣ ಕೊಟ್ಟಿದ್ದಾರೆ. ನಳಿನ್ ಕುಮಾರ್ ಅವರಂತೆ ಹೇಳಿಕೆ ನೀಡುವ ಸಜ್ಜನರ ಸಂಖ್ಯೆ ಹಾಗೂ ವಿಚಾರಧಾರೆ ಹೆಚ್ಚಾಗುತ್ತಿರುವುದ್ದರಿಂದ ದೇಶಕ್ಕೆ ತೊಂದರೆ ಆಗುತ್ತಿದೆ. ಇನ್ನು ಮುಂದೆ ಆದರೂ ನಾಲಿಗೆ ಬಿಗಿ ಹಿಡಿದು ಮಾತನಾಡಲು ಕಲಿಯಬೇಕು ಎಂದು ವಾಗ್ದಾಳಿ ನಡೆಸಿದರು.

    ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತವರನ್ನ ಕೊಂದವರನ್ನ ಬಿಜೆಪಿಯವರು ದೇವರಂತೆ ಪೂಜೆ ಮಾಡುತ್ತಿದ್ದಾರೆ. ಗಾಂಧೀಜಿ ಅವರನ್ನ ರಾಷ್ಟ್ರಪಿತ ಮನ್ನಣೆ ಕೊಟ್ಟು ಪ್ರಧಾನಿ ಮೋದಿ ಅವರ ಸಮಾಧಿ ಮುಂದೆ ತಲೆ ಬಾಗುತ್ತದೆ. ಮತ್ತೊಂದೆಡೆ ಬಿಜೆಪಿಯವರು ಈ ರೀತಿ ಮಾತನಾಡುತ್ತಾರೆ ಎಂದು ಟೀಕಿಸಿದರು. ಇದನ್ನು ಓದಿ: ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

  • ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದ ಖಂಡನೆ – ಕ್ಷಮೆಗೆ ಆಗ್ರಹ

    ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದ ಖಂಡನೆ – ಕ್ಷಮೆಗೆ ಆಗ್ರಹ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದಲೇ ಖಂಡನೆ ವ್ಯಕ್ತವಾಗಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರು, ಈ ಹೇಳಿಕೆಯನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ ಹಾಗೂ ಇದು ಖಂಡನೀಯವಾಗಿದೆ. ಈ ಸಂಬಂಧ ಸ್ಪಷ್ಟನೆ ನೀಡುವಂತೆ ಪ್ರಜ್ಞಾಸಿಂಗ್ ಹೇಳುತ್ತೇವೆ. ಅಷ್ಟೇ ಅಲ್ಲದೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಹೇಳಿದರು.

    ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರು ಕೂಡ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ನಾಥೂರಾಮ್ ಗೋಡ್ಸೆ ಒಬ್ಬ ಹಂತಕ. ಗೋಡ್ಸೆಯನ್ನು ವೈಭವಿಕರಿಸುವುದು ದೇಶಭಕ್ತಿಯಲ್ಲ, ಅದು ದುಷ್ಕøತ್ಯ ಎಂದು ಕಿಡಿಕಾರಿದ್ದಾರೆ.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಚುನಾವಣೆಯ ಸಮಯದಲ್ಲಿ ಸಾಧ್ವಿ ಸಿಂಗ್ ಈ ರೀತಿಯ ಹೇಳಿಕೆ ನೀಡುವುದು ಹೊಸದೆನಲ್ಲ. ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು.

    ಹೇಮಂತ್ ಕರ್ಕರೆ ಅವರು ಪದೇ ಪದೇ ನನ್ನನ್ನು ವಿಚಾರಣೆಗೆ ಒಳಪಡಿಸಿ, ಕಿರುಕುಳ ನೀಡುತ್ತಿದ್ದರು. ನಿರಪರಾಧಿಯಾಗಿದ್ದರಿಂದ ಅವರ ಪ್ರಶ್ನೆಗೆ ನನ್ನ ಬಳಿ ಉತ್ತರವೇ ಇರಲಿಲ್ಲ. ಹೀಗಾಗಿ ನಾನು ಅವರಿಗೆ ಶಪಿಸಿದ್ದೆ. ನನ್ನನ್ನು ಬಂಧಿಸಿದ 45 ದಿನಗಳ ನಂತರ ಕರ್ಕರೆ ಉಗ್ರರಿಂದ ಪ್ರಾಣ ಬಿಟ್ಟರು ಎಂದು ತಿಳಿಸಿದ್ದರು. ಈ ಹೇಳಿಕೆ ವಿವಾದವಾಗುತ್ತಿದ್ದಂತೆ ಕ್ಷಮೆ ಕೇಳಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ತಮಿಳುನಾಡಿನ ತಿರುಪ್ಪರಂಕುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಚಪ್ಪಲಿ ತೂರಿದ್ದಾರೆ. ಅದೃಷ್ಟವಶಾತ್ ಕಮಲ್ ಹಾಸನ್ ಇದ್ದ ವೇದಿಕೆಯವರೆಗೂ ಚಪ್ಪಲಿ ತೂರಿ ಬರದೇ ಅಲ್ಲೇ ಜನರ ಮೇಲೆ ಬಿದ್ದಿದೆ ಎಂದು ವರದಿಯಾಗಿತ್ತು.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಹಿಂದೂ ಮಹಾಸಭಾ ಕಚೇರಿಯಲ್ಲಿರೋ ಗೋಡ್ಸೆ ಮೂರ್ತಿಯನ್ನು ತೆಗೆದುಹಾಕಿ: ಡಿಸಿ ಆದೇಶ

    ಹಿಂದೂ ಮಹಾಸಭಾ ಕಚೇರಿಯಲ್ಲಿರೋ ಗೋಡ್ಸೆ ಮೂರ್ತಿಯನ್ನು ತೆಗೆದುಹಾಕಿ: ಡಿಸಿ ಆದೇಶ

    ಗ್ವಾಲಿಯರ್: ಅಖಿಲ ಭಾರತೀಯ ಹಿಂದೂ ಮಹಾಸಭಾ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ನಾಥೂರಾಮ್ ಗೋಡ್ಸೆ ಮೂರ್ತಿಯನ್ನು ತೆಗೆದು ಹಾಕುವಂತೆ ಗ್ವಾಲಿಯರ್ ನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

    ಗೋಡ್ಸೆ ಮೂರ್ತಿ ಸ್ಥಾಪನೆಗೆ ರಾಜ್ಯದ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್ ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮೂರ್ತಿಯನ್ನು ತೆರವುಗೊಳಿಸುವಂತೆ ಡಿಸಿ ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದನ್ವಯ ಸ್ಥಳೀಯ ಪೊಲೀಸರು ಗೋಡ್ಸೆ ಮೂರ್ತಿಯನ್ನು ವಶಕ್ಕೆ ಪಡೆದುಕೊಂಡು, ಕೋಣೆಯನ್ನು ಸೀಜ್ ಮಾಡಿದ್ದಾರೆ. ಇದಕ್ಕೆ ಬಲ ಪಂಥೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ಹಿಂದೂ ಮಹಾಸಭಾ ಕಚೇರಿಯಲ್ಲಿ ಬಲಪಂಥಿಯ ನಾಯಕರ ನೇತೃತ್ವದಲ್ಲಿ ಮೂರ್ತಿಯನ್ನು ಸ್ಥಾಪನೆ ಮಾಡಲಾಗಿತ್ತು. ಈ ಹಿಂದೆ ಗೋಡ್ಸೆ ಹೆಸರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿದ್ದ ಹಿಂದೂ ಮಹಾಸಭಾ ಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಕಚೇರಿಯಲ್ಲಿ ಮೂರ್ತಿ ಸ್ಥಾಪನೆ ಬಳಿಕ ನಾಯಕರು ನವೆಂಬರ್ 15ರಂದು ನಾಥೂರಾಮ್ ಗೋಡ್ಸೆ ಪುಣ್ಯಸ್ಮರಣೆಯನ್ನು ಆಚರಣೆ ಮಾಡಿದ್ದರು.

    ನವೆಂಬರ್ 9ರಂದು ಗೋಡ್ಸೆ ದೇವಾಲಯ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ನಿರಾಕರಣೆಯಾದ ನಂತರ ಕಚೇರಿಯಲ್ಲಿ 32 ಇಂಚು ಎತ್ತರದ ಮೂರ್ತಿಯನ್ನ ರಾಷ್ಟ್ರೀಯ ಹಿಂದೂ ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಸ್ಥಾಪನೆ ಮಾಡಿದ್ದರು. ಈ ಮೂಲಕ ಗೋಡ್ಸೆಗೆ ದೇವಸ್ಥಾನ ನಿರ್ಮಿಸಿದಂತೆ ಆಗಿದೆ ಎಂದು ಹೇಳಿದ್ದರು.

    ನಾವು ನಮ್ಮ ಸ್ವಂತ ಜಾಗದಲ್ಲೇ ದೇವಸ್ಥಾನ ನಿರ್ಮಿಸಿರೋದ್ರಿಂದ ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸುವಂತಿಲ್ಲ. ಇದು ಮಹಾಸಭಾದ ಸ್ವಂತ ಆಸ್ತಿ ಎಂದು ಭಾರದ್ವಾಜ್ ಹೇಳಿದ್ದರು.

    ನಾಥೂರಾಮ್ ಗೋಡ್ಸೆ ದೇವಸ್ಥಾನ ಕಟ್ಟಿದರೆ ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಅವರಿಗೆ ಅಗೌರವ ತೋರಿಸದಂತಾಗುತ್ತದೆ. ದೇವಾಲಯ ನಿರ್ಮಾಣಕ್ಕೆ ಮುಂದಾಗಿರುವ ಎಲ್ಲ ನಾಯಕರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಕೊಳ್ಳಬೇಕು ಎಂದು ಮಧ್ಯಪ್ರದೇಶದ ವಿಪಕ್ಷ ನಾಯಕ ಅಜಯ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಾಪೂಜಿಯನ್ನು ಕೊಲೆ ಮಾಡಿದ ವ್ಯಕ್ತಿಯ ದೇವಸ್ಥಾನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಗಾಂಧೀಜಿ ಹೆಸರಲ್ಲಿ ಉಪವಾಸ ಮಾಡುವ ನಾಟಕವನ್ನು ಬಿಡಬೇಕು. ಇದೊಂದು ನಾಚಿಕೆಗೇಡಿನ ಕೆಲಸ. ಇದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹಾತ್ಮ ಗಾಂಧೀಜಿಯ ಪರಂಪರೆಗೆ ತಾವೊಬ್ಬರೇ ಮಾಲೀಕರು ಎಂಬಂತೆ ಕಾಂಗ್ರೆಸ್ ವರ್ತಿಸೋದನ್ನ ಬಿಡಬೇಕು. ಮಹಾತ್ಮಾ ಗಾಂಧೀಜಿಯ ಪರಂಪರೆ ಇಡೀ ದೇಶದ ಪರಂಪರೆ, ಯಾರದರೂ ಕಾನೂನು ಮತ್ತು ಸಂವಿಧಾನವನ್ನು ಉಲ್ಲಂಘಿಸಿದರೆ ಅಂತಹ ಚಟುವಟಿಕೆಗಳು ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ರಜನಿಶ್ ಜೈನ್ ತಿಳಿಸಿದ್ದಾರೆ.

    https://twitter.com/JM_Scindia/status/930740615704223745