Tag: ನಾಮಕರಣ

  • ಹರ್ಷಿಕಾ ಪೂಣಚ್ಚ ಮಗಳ ಹೆಸರು ರಿವೀಲ್ – ದೇವಿ ಹೆಸರಿಟ್ಟ ದಂಪತಿ

    ಹರ್ಷಿಕಾ ಪೂಣಚ್ಚ ಮಗಳ ಹೆಸರು ರಿವೀಲ್ – ದೇವಿ ಹೆಸರಿಟ್ಟ ದಂಪತಿ

    – ಕೊಡವ ಸಂಪ್ರದಾಯದಂತೆ ನಾಮಕರಣ

    ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಬಿಗ್ ಬಾಸ್ ಸೀಸನ್ 4ರ ಸ್ಪರ್ಧಿ ಭುವನ್ ಪೊನ್ನಣ್ಣ (Bhuvan Ponnanna) ದಂಪತಿ ಕೊಡವ ಸಂಪ್ರದಾಯದಂತೆ ಇಂದು ವಿರಾಜಪೇಟೆಯಲ್ಲಿ ಮುದ್ದು ಮಗಳ ನಾಮಕರಣ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಆಧುನಿಕ ಶೈಲಿಯ ಹೆಸರನ್ನಿಡುವ ಈ ಕಾಲದಲ್ಲಿ ಹರ್ಷಿಕಾ-ಭುವನ್ ಮಗಳಿಗೆ ವಿಭಿನ್ನವಾಗಿ ದೇವಿಯ ಹೆಸರನ್ನಿಟ್ಟಿದ್ದಾರೆ.

    ಹರ್ಷಿಕಾ-ಭುವನ್ ದಂಪತಿ ಮದುವೆ, ಸೀಮಂತ ಹೀಗೆ ಪ್ರತಿಯೊಂದು ಕಾರ್ಯಕ್ರಮವನ್ನೂ ಸಾಂಪ್ರದಾಯಿಕ ಶೈಲಿಯಲ್ಲೇ ಮಾಡಿಕೊಂಡು ಬಂದಿದ್ದರು. ಇದೀಗ ನವರಾತ್ರಿ ಮೊದಲ ದಿನ ಜನಿಸಿದ ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ (Tridevi Ponnakkaah) ಎಂದು ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದ್ದಾರೆ. ಮಗಳೊಂದಿಗಿನ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರನ್ನು ದಂಪತಿ ರಿವೀಲ್ ಮಾಡಿದ್ದಾರೆ. ಕೊಡವ ಶೈಲಿಯಲ್ಲೇ ಮಗುವಿಗೆ ಉಡುಪನ್ನು ಧರಿಸಿದ್ದು ವಿಶೇಷವಾಗಿತ್ತು. ನಾಮಕರಣ ಕಾರ್ಯಕ್ರಮದಲ್ಲಿ ದಂಪತಿಯ ಕುಟುಂಬಸ್ಥರು, ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು ಭಾಗಿಯಾಗಿದ್ದಾರೆ. ಇದನ್ನೂ ಓದಿ: 17 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್

    ಗರ್ಭಿಣಿಯಾಗಿದ್ದ ಸಂದರ್ಭದಲ್ಲೂ ಹರ್ಷಿಕಾ ಪೂಣಚ್ಚ ವೆಸ್ಟರ್ನ್ ಸ್ಟೈಲ್ ಅನುಸರಿಸದೇ ಸಾಂಪ್ರದಾಯಿಕವಾಗಿ ಕೊಡವ ಶೈಲಿಯಲ್ಲಿಯೇ ಫೋಟೋಶೂಟ್ ಮಾಡಿಸಿಕೊಂಡು ಗಮನಸೆಳೆದಿದ್ದರು. ಇವರ ಸೀಮಂತ ಕಾರ್ಯಕ್ರಮವನ್ನು ಸಹ ಅದ್ಧೂರಿಯಾಗಿ ನೆರವೇರಿಸಲಾಗಿತ್ತು. 2024ರ ಸೆಪ್ಟೆಂಬರ್ ತಿಂಗಳಲ್ಲಿ ಹರ್ಷಿಕಾ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟರು.‌ ಇದನ್ನೂ ಓದಿ: ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು?

  • ಮಗ ಮತ್ತು ಮಗಳಿಗೆ ಹೆಸರಿಟ್ಟ ನಟ ಧ್ರುವ ಸರ್ಜಾ: ಮೆಚ್ಚುವಂಥ ಹೆಸರು

    ಮಗ ಮತ್ತು ಮಗಳಿಗೆ ಹೆಸರಿಟ್ಟ ನಟ ಧ್ರುವ ಸರ್ಜಾ: ಮೆಚ್ಚುವಂಥ ಹೆಸರು

    ಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ (Dhruva Sarja) ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ (Rudrakshi) ಮತ್ತು ಮಗನಿಗೆ ಹಯಗ್ರೀವ (Hayagriva) ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ.

    ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷ.

     

    ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದರು. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

  • ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ

    ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ

    ಜನವರಿ 22ರ ದಿನಕ್ಕಾಗಿ ಇಡೀ ದೇಶಕ್ಕೆ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯಯಲ್ಲಿ ರಾಮ ಮಂದಿರ (Rama Mandir) ಉದ್ಘಾಟನೆ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿ ಹಲವರು ತುದಿಗಾಲಲ್ಲಿ ನಿಂತಿದ್ದಾರೆ. ಕನ್ನಡ ಸಿನಿಮಾ ರಂಗದಿಂದಲೂ ಹಲವಾರು ಸಿಲೆಬ್ರಿಟಿಗಳು ಭಾಗಿ ಆಗುತ್ತಿದ್ದಾರೆ. ಈ ದಿನವೇ ನಟ ಧ್ರುವ ಸರ್ಜಾ (Dhruva Sarja) ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರೆ.

    ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರಂತೆ ಧ್ರುವ.

    ಧ್ರುವ ಸರ್ಜಾ ಮಗಳಿಗೆ ನಾಮಕರಣ ಮಾಡುತ್ತಿದ್ದರೆ, ಅನೇಕ ಮಹಿಳೆಯರು ಅಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

  • ಚಂದ್ರಯಾನ-3 ಸಕ್ಸಸ್ ಖುಷಿಯಲ್ಲಿ ಇಬ್ಬರು ಮಕ್ಕಳಿಗೆ ‘ವಿಕ್ರಮ್‌, ಪ್ರಗ್ಯಾನ್’ ಎಂದು ಹೆಸರಿಟ್ಟ ಕುಟುಂಬ

    ಚಂದ್ರಯಾನ-3 ಸಕ್ಸಸ್ ಖುಷಿಯಲ್ಲಿ ಇಬ್ಬರು ಮಕ್ಕಳಿಗೆ ‘ವಿಕ್ರಮ್‌, ಪ್ರಗ್ಯಾನ್’ ಎಂದು ಹೆಸರಿಟ್ಟ ಕುಟುಂಬ

    ಯಾದಗಿರಿ: ಚಂದ್ರಯಾನ-3 ಯಶಸ್ಸಿನ ಸ್ಮರಣಾರ್ಥವಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿಟ್ಟು ಸುದ್ದಿಯಾಗಿದ್ದಾರೆ.

    ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳಿಗೆ ವಿಕ್ರಮ್ ಮತ್ತು ಪ್ರಗ್ಯಾನ್ ಎಂದು ಹೆಸರಿಟ್ಟು ದೇಶಕ್ಕೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಒಂದೇ ಕುಟುಂಬದಲ್ಲಿ ಈಚೆಗೆ ಇಬ್ಬರು ಮಕ್ಕಳು ಜನಿಸಿದ್ದರು. ಬಾಲಪ್ಪ ಹಾಗೂ ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು ಹೆಸರಿಡಲಾಗಿದೆ. ಅಲ್ಲದೇ ನಿಂಗಪ್ಪ ಹಾಗೂ ಶಿವಮ್ಮ ದಂಪತಿಯ ಮಗುವಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಲಾಗಿದೆ.

    ವಿಕ್ರಮ್ ಹೆಸರಿನ ಮಗು ಜನಿಸಿದ್ದು ಜುಲೈ 28 ರಂದು ಹಾಗೂ ಪ್ರಗ್ಯಾನ್ ಹೆಸರಿನ ಮಗು ಜನಿಸಿದ್ದು ಆಗಸ್ಟ್ 18 ರಂದು. ಆಗಸ್ಟ್ 24 ರಂದು (ಇಸ್ರೋದ ಚಂದ್ರಯಾನ-3 ಸಕ್ಸಸ್ ಆದ ಮಾರನೇ ದಿನ) ಕುಟುಂಬಸ್ಥರು ಎರಡು ಮಕ್ಕಳ ನಾಮಕರಣ ಮಾಡಿದ್ದಾರೆ. ಆ ಮೂಲಕ ಚಂದ್ರಯಾನ-3 ಯಶಸ್ವಿಗೊಳಿಸಿದ ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking- ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

    Breaking- ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

    ನ್ನಡದ ಹೆಸರಾಂತ ನಟ ಅಂಬರೀಶ್ (Ambarish) ಅವರ ಹೆಸರನ್ನು ಬೆಂಗಳೂರಿನ ರೇಸ್ ಕೋರ್ಸ್ (Race Course) ರಸ್ತೆಗೆ (Road) ಇಡಲು ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ಟ್ವೀಟ್ ಮಾಡಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.

    ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

    ಅಷ್ಟೇ ಅಲ್ಲದೇ, ಅಂಬರೀಶ್ ಸ್ಮಾರಕದ ಕೆಲಸ ಕೂಡ ಬಹುತೇಕ ಮುಗಿದಿದ್ದು, ಅತೀ ಶೀಘ್ರದಲ್ಲೇ ಸ್ಮಾರಕದ ಲೋಕಾರ್ಪಣೆ ಕೂಡ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕವು ಹಲವು ಕೋಟಿ ರೂಪಾಯಿಗಳಲ್ಲಿ ನಿರ್ಮಾಣವಾಗಿದೆ. ಡಾ.ರಾಜ್ ಕುಮಾರ್ ಸ್ಮಾರಕದ ಪಕ್ಕದಲ್ಲೇ ಅಂಬರೀಶ್ ಸ್ಮಾರಕ ಕೂಡ ತಲೆಯೆತ್ತಿದೆ.

  • ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು : ಸಚಿವ ಆರ್.ಅಶೋಕ್

    ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು : ಸಚಿವ ಆರ್.ಅಶೋಕ್

    ರ್ನಾಟಕ ರತ್ನ ಪುನೀತ್ ರಾಜಕುಮಾರ್ (Puneeth Rajkumar) ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ (Ring Road)  ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R. Ashok) ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.

    ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: `ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

    ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) , ಶಿವರಾಜ್ ಕುಮಾರ್ (Shivraj Kumar)),  ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ. ಉದ್ಘಾಟನೆಯ ನಂತರ ನಟಿ ರೂಪಿಕಾ ನೃತ್ಯ ಪ್ರದರ್ಶನ ಹಾಗೂ ಗುರು ಕಿರಣ್, ಸಾಧು ಕೋಕಿಲ, ರಘು ದೀಕ್ಷಿತ್ ಮತ್ತು ಶಮಿತಾ ಮಲ್ನಾಡ್ ಸೇರಿದಂತೆ ಅನೇಕ ಗಾಯಕ ಗಾಯಕಿಯರಿಂದ ಸಂಗೀತ ಕಾರ್ಯಕ್ರಮವಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರಿಡಲು ಬಿಬಿಎಂಪಿಗೆ ಮನವಿ

    ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರಿಡಲು ಬಿಬಿಎಂಪಿಗೆ ಮನವಿ

    ನ್ನಡದ ಹೆಸರಾಂತ ನಟ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್, ಮನವಿ ಪತ್ರವನ್ನು ನೀಡಿದರು. ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿರುವ ಅಂಬರೀಶ್ ಅವರಿಗೆ ರಸ್ತೆಗೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿದೆ.

    ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಕೊಟ್ಟಿರುವ ಮನವಿ ಪತ್ರದಲ್ಲಿ, ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಸಾಧಕರಾದ ಪದ್ಮಭೂಷಣ ಡಾ.ರಾಜ್ ಕುಮಾರ್, ಶ್ರೀಮತಿ ಪಾರ್ವತಮ್ಮ ರಾಜಕುಮಾರ್, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇವರುಗಳ ಜ್ಞಾಪಕಾರ್ಥವಾಗಿ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಘನ ಸರ್ಕಾರವು ಈಗಾಗಲೇ ನಾಮಕರಣ ಮಾಡಿರುವುದು ಇಡೀ, ಚಿತ್ರೋದ್ಯಮಕ್ಕೆ ಸಂದ ಗೌರವವಾಗಿದೆ. ಅದಕ್ಕಾಗಿ ಚಿತ್ರೋದ್ಯಮ ಆಭಾರಿಯಾಗಿದೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಹಿಂದಿ ಸೇರಿ ಏಳು ಸಿನಿಮಾಗಳಲ್ಲಿ ರಾಗಿಣಿ ದ್ವಿವೇದಿ ಬ್ಯುಸಿ

    ಮುಂದುವರೆದ ಪತ್ರದಲ್ಲಿ ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಖ್ಯಾತ ಕಲಾವಿದ ರೆಬೆಲ್ ಸ್ಟಾರ್ ಡಾ.ಅಂಬರೀಶ್ ಅವರಿಗೆ 70 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಾನ್ ಸಾಧಕರಾದ ಅಂಬರೀಶ್ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕೆಂದು ಚಿತ್ರೋದ್ಯಮದ ಮಹಾಸಾದೆಯಾಗಿದೆ. ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದು ಬರೆಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

    ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

    ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ರಾಜಕೀಯ ಸಂಚಲನ ಆರಂಭವಾಗಿದೆ. ಗಣಿ ನಾಡಿನ ಇಬ್ಬರು ಸ್ನೇಹಿತರ ನಡುವೆ ಕೋಲ್ಡ್ ವಾರ್ ಆರಂಭವಾಗಿದೆ ಎನ್ನುವ ಅನುಮಾನ ಈಗ ವ್ಯಕ್ತವಾಗಿದೆ.

    ಹೌದು. ಒಂದು ಕಾಲದಲ್ಲಿ ಸರ್ಕಾರವನ್ನು ಕಿತ್ತು ಹಾಕಿ ಮತ್ತೊಂದು ಸರ್ಕಾರ ರಚನೆ ಮಾಡುವ ಶಕ್ತಿ ಹೊಂದಿದ್ದ ಈ ಇಬ್ಬರು ನಾಯಕರು ಈಗ ದೂರಾ ದೂರಾ ಆಗಿದ್ದಾರೆ. ಅದಕ್ಕೆ ಕಾರಣ ಜನಾರ್ದನ ರೆಡ್ಡಿ (Janardhan Reddy) ಹಾಗೂ ಸಚಿವ ಶ್ರೀರಾಮುಲು (Sriramulu) ಅವರ ನಡುವಿನ ಕೋಲ್ಡ್ ವಾರ್. ಇಷ್ಟು ದಿನ ಮನಸ್ಸಿನಲ್ಲಿ ಮಾತ್ರ ಇದ್ದ ಕೋಲ್ಡ್ ವಾರ್ ಈಗ ಬಹಿರಂಗವಾಗಿದೆ.

        

    ಕಳೆದ ಮೂರು ದಿನಗಳ ಹಿಂದೆ ಗಾಲಿ ಜನಾರ್ದನ ರೆಡ್ಡಿ ಅವರ ಮೊಮ್ಮಗಳ ನಾಮಕರಣ ಕಾರ್ಯಕ್ರಮವು ಬೆಂಗಳೂರಿನ ಪಾರಿಜಾತ ಅಪಾರ್ಟ್ ಮೆಂಟ್ (Parijatha Apartment) ನಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ, ಗಾಲಿ ಕರುಣಾಕರ ರೆಡ್ಡಿ ಹಾಗೂ ಮಾಜಿ ಸಿಎಂ ಬಿಎಸ್‍ವೈ ಕೂಡಾ ಭಾಗಿಯಾಗಿದ್ದರು. ಆದರೆ ರೆಡ್ಡಿ ಆಪ್ತ ಸ್ನೇಹಿತ ಶ್ರೀರಾಮುಲು ಮಾತ್ರ ಭಾಗಿ ಆಗಿರಲಿಲ್ಲ. ಈಗ ಇದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜನಾರ್ದನ ರೆಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಡಲೇ ಇಲ್ಲಾ ಇದೇ ಕಾರಣಕ್ಕೆ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದು, ಇದೇ ಕಾರಣಕ್ಕೆ ರೆಡ್ಡಿ ರಾಮುಲು ನಡುವೆ ವೈ ಮನಸ್ಸು ಮೂಡಿದೆ ಎನ್ನಲಾಗಿದೆ.

    ಹೀಗೊಂದು ಗಾಳಿ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದೆ. ಇದೇ ಕಾರಣಕ್ಕೆ ರೆಡ್ಡಿ ಹೊಸ ಪಕ್ಷಕ್ಕೆ ರಾಮುಲು ಅವರನ್ನು ಕರೆದಿದ್ದು, ಕಾರಣ ರಾಮುಲು ಅವರು ಹೊಸ ಪಕ್ಷದ ಕಡೆಗೆ ಒಲವು ತೋರಿಲ್ಲ. ಹೀಗಾಗಿ ರೆಡ್ಡಿ ರಾಮುಲು ನಡುವೆ ಕೋಲ್ಡ್ ವಾರ್ ಆರಂಭವಾಗಿದೆ ಎನ್ನುವ ಮಾತಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಇಂದಿನಿಂದ ಸಂಕೀರ್ತನಾ ಯಾತ್ರೆ- ಆಂಜನೇಯ ದೇಗುಲ ಪುನರ್ ಸ್ಥಾಪನೆಗೆ ಆಗ್ರಹ

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು, ನಮ್ಮ ಸ್ನೇಹ ರಾಜಕೀಯ ಹೊರತಾಗಿಯೂ ಇದೆ ಎಂದಿದ್ದಾರೆ. ನನಗೆ ಮುಂಚೆ ಜೈಪುರ್ ಸ್ವಾಮೀಜಿ ತಂಗಿ ಮದ್ವೆ ಇತ್ತು. ಹಾಗಾಗಿ ನಾನು ಜನಾರ್ದನ ರಡ್ಡಿ ಮೊಮ್ಮಗಳ ನಾಮಕರಣಕ್ಕೆ ಹೋಗಿಲ್ಲ. ಈ ವಿಚಾರ ರಾಜಕೀಯ ಅರ್ಥ ಕಲ್ಪಸುವ ಅಗತ್ಯವಿಲ್ಲ. ಜೈಪುರ ಮದುವೆ ಮುಗಿಸಿ ಬರೋವಾಗ ತಡರಾತ್ರಿ ಆಯ್ತು ಅದ್ಕೆ ಹೋಗಿಲ್ಲ. ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಹೋಗಿಲ್ಲ ಅಂತಾ ತಪ್ಪು ಕಲ್ಪಿಸುವುದು ಬೇಡ. ಬೇರೆ ಕೆಲಸದ ನಿಮಿತ್ತ ಕೆಲವೊಂದು ಕಾರ್ಯಕ್ರಮಕ್ಕೆ ಹೋಗಲು ಆಗಿಲ್ಲ. ಬೇರೆ ಕಾರ್ಯಕ್ರಮವಿತ್ತು ನಾನು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ರಾಜಕೀಯ ಹೊರತುಪಡಿಸಿ ನಾನು ಜನಾರ್ದನ ರೆಡ್ಡಿ ಸ್ನೇಹಿತರು, ಕುಟುಂಬ ಸ್ನೇಹ ರಾಜಕಾರಣ ಬೇರೆ, ಕುಟುಂಬ ಬೇರೆ. ಕೆಲವು ಬಾರಿ ರಾಜಕೀಯ ಮೇಲು ಕೆಳ ಆಗಬಹುದು. ರಾಜಕೀಯ ಹೊರತುಪಡಿಸಿ ನಾನು ಸ್ನೇಹಿತರು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿಮಾನಿ ಮಗುವಿಗೆ ತಮ್ಮದೇ ಹೆಸರನ್ನಿಟ್ಟ ಸಿದ್ದರಾಮಯ್ಯ

    ಅಭಿಮಾನಿ ಮಗುವಿಗೆ ತಮ್ಮದೇ ಹೆಸರನ್ನಿಟ್ಟ ಸಿದ್ದರಾಮಯ್ಯ

    ತುಮಕೂರು: ತಮ್ಮ ಅಭಿಮಾನಿಯ ಒತ್ತಾಸೆ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ಹೆಸರನ್ನೇ ಮಗುವಿಗೆ ನಾಮಕರಣ ಮಾಡಿರುವ ಅಪರೂಪದ ಪ್ರಸಂಗ ನಡೆದಿದೆ.

    ಭಾನುವಾರ ತುಮಕೂರಿನ ಬಾಲಭವನದಲ್ಲಿ ನಡೆದ ಗ್ರಂಥಾವಲೋಕನ ಸಂಕೀರ್ಣ ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ತಮ್ಮ ಅಭಿಮಾನಿಯ ಮಗುವಿಗೆ ನಾಮಕರಣ ಮಾಡಿದ್ದಾರೆ.

    ಮಧುಗಿರಿ ತಾಲೂಕಿನ ಐಡಿ ಹಳ್ಳಿ ಹೋಬಳಿಯ ತಿಪ್ಪಾಪುರ ಗ್ರಾಮದ ಅಭಿಮಾನಿ ಗಂಗಾಧರಯ್ಯ ತಮ್ಮ ಮಗುವಿಗೆ ಸಿದ್ದರಾಮಯ್ಯ ಅವರಿಂದ ನಾಮಕರಣ ಮಾಡಿಸಬೇಕೆಂದು ಬಹು ದಿನಗಳಿಂದ ಆಸೆ ಪಟ್ಟಿದ್ದರು. ಭಾನುವಾರ ಸಿದ್ದರಾಮಯ್ಯ ತುಮಕೂರಿಗೆ ಆಗಮಿಸುತ್ತಾರೆ ಎಂದು ತಿಳಿದ ಗಂಗಾಧರಯ್ಯ ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಕೊರೊನಾ BA.4 ಮತ್ತು BA.5 ತಳಿ ದೃಢ

    ಅಭಿಮಾನಿ ಗಂಗಾಧರಯ್ಯ ಸಂವಾದದ ಮಧ್ಯೆಯೇ ತಮ್ಮ ಮಗುವಿಗೆ ಹೆಸರು ಇಡುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ ನಾಮಕರಣ ಮಾಡಿದರು.

    ತಮ್ಮ ಅಭಿಮಾನಿಯ ಒತ್ತಾಸೆಯ ಮೇರೆಗೆ ಸಿದ್ದರಾಮಯ್ಯ ಮಗುವಿಗೆ ತಮ್ಮ ಹೆಸರನ್ನೇ ಇಟ್ಟರು. ಮಾಜಿ ಶಾಸಕ ಕೆ.ಎನ್. ರಾಜಣ್ಣ, ವೈಎಸ್‌ವಿ ದತ್ತ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಸಿದ್ದರಾಮಯ್ಯ ನಾಮಕರಣ ಮಾಡಿದ್ದು, ಬಳಿಕ ಮಗುವಿಗೆ ಉಡುಗೊರೆ ನೀಡಿದರು. ಇದನ್ನೂ ಓದಿ: ಮನೆಯಲ್ಲಿ ನಾಯಿ ಸಾಕುವವರಿಗೆ ಎಚ್ಚರಿಕೆ ನೀಡಿದ ಯೋಗಿ – ನಿಯಮ ಮೀರಿದರೆ ಕ್ರಮ

     

  • ಮಗಳಿಗೆ ನಾಮಕರಣ ಮಾಡಿದ ನಟಿ ದಿಶಾ ಮದನ್

    ಮಗಳಿಗೆ ನಾಮಕರಣ ಮಾಡಿದ ನಟಿ ದಿಶಾ ಮದನ್

    ಟಿ ದಿಶಾ ಮದನ್ 2 ಮಕ್ಕಳ ತಾಯಿಯಾಗಿದ್ದಾರೆ. ಇವರು ಫೋಟೋಶೂಟ್ ಮೂಲಕವಾಗಿ ಆಗಾಗ ಸುದ್ದಿಯಾಗುತ್ತಲಿರುತ್ತಾರೆ. ಈ ನಟಿ ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಮೊದಲ ಬಾರಿಗೆ ತಮ್ಮ ಪುತ್ರಿಯ ಜೊತೆಗೆ ತೆಗೆಸಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    2022 ಮಾರ್ಚ್ 1ರಂದು ದಿಶಾ ಮದನ್ ಎರಡನೇ ಮಗುವನ್ನು ಬರ ಮಾಡಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಅವಿರಾ ಎಂದು ಕೂಡ ಹೆಸರು ರಿವೀಲ್ ಮಾಡಿದ್ದಾರೆ. ಮಗಳಿಗೆ 28 ದಿನ ತುಂಬುತ್ತಿದ್ದಂತೆ ಫೋಟೋ ಶೂಟ್ ಮಾಡಿಸಿದ್ದಾರೆ. ಇಡೀ ಕುಟುಂಬ ಪಿಂಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    2016ರಲ್ಲಿ ಉದ್ಯಮಿ ಶಶಾಂಕ್ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ದಿಶಾ ಮದನ್ 2019ರಲ್ಲಿ ಮೊದಲ ಮಗು ವಿವಾನ್‍ಗೆ ಜನ್ಮ ನೀಡಿದ್ದರು. 2ನೇ ಪುತ್ರಿಗೆ ಅವೀರಾ ಎಂದು ಹೆಸರಿಟ್ಟಿದ್ದಾರೆ.

    ಕುಲವಧು ಧಾರಾವಾಹಿಯಲ್ಲಿ ವಚನಾ ಆಗಿ ಮತ್ತು ಡ್ಯಾನ್ಸಿಂಗ್ ಸ್ಟಾರ್‌ನಲ್ಲಿ ವಿಜೇತಳಾಗಿರುವ ದಿಶಾ ಮದನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಫ್ರೆಂಚ್ ಬಿರಿಯಾನಿ, ಹಂಬಲ್ ಪೊಲೀಟಿಷಿಯನ್ ನೋಗರಾಜ್ ಚಿತ್ರದಲ್ಲಿ  ದಿಶಾ ಮದನ್ ನಟಿಸಿದ್ದರು.