Tag: ನಾಯಕತ್ವ

  • ಕೊಹ್ಲಿ, ವಿಲಿಯಮ್ಸನ್ ನಾಯಕತ್ವ ರೆಕಾರ್ಡ್ – ಯಾರು ಬೆಸ್ಟ್ ?

    ಕೊಹ್ಲಿ, ವಿಲಿಯಮ್ಸನ್ ನಾಯಕತ್ವ ರೆಕಾರ್ಡ್ – ಯಾರು ಬೆಸ್ಟ್ ?

    ಲಂಡನ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಇನ್ನೂ ಎರಡು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದರೆ ನ್ಯೂಜಿಲೆಂಡ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸುತ್ತಿದ್ದಾರೆ. ಇವರಿಬ್ಬರು ಕೂಡ ನಾಯಕತ್ವದಲ್ಲಿ ಮತ್ತು ವೈಯಕ್ತಿಕವಾಗಿ ತಮ್ಮ ತಮ್ಮ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.

    ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ಗೆ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಆಯ್ಕೆಗೊಳ್ಳುವ ಮೊದಲು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಒಟ್ಟು 60 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿ 36 ಪಂದ್ಯಗಳನ್ನು ಗೆದ್ದು, 14 ಪಂದ್ಯಗಳಲ್ಲಿ ಸೋತು 10 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ.

    ನ್ಯೂಜಿಲೆಂಡ್ ತಂಡದ ನಾಯಕ ವಿಲಿಯಮ್ಸನ್, ಒಟ್ಟು 36 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ 21 ಪಂದ್ಯ ಜಯ, 8 ಪಂದ್ಯ ಸೋಲು ಮತ್ತು 7 ಪಂದ್ಯ ಡ್ರಾ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

    ವಿರಾಟ್ ಭಾರತ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾದರೆ, ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ಪ್ರಮುಖ ಶಕ್ತಿ. ಇವರಿಬ್ಬರು ನಾಯಕತ್ವದೊಂದಿಗೆ ತಮ್ಮ ವೈಯಕ್ತಿಕ ದಾಖಲೆಯನ್ನು ಬರೆದುಕೊಂಡಿದ್ದಾರೆ. ಭಾರತವನ್ನು ಮುನ್ನಡೆಸಿದ 60 ಟೆಸ್ಟ್ ಪಂದ್ಯದಲ್ಲಿ ವಿರಾಟ್ ಒಟ್ಟು 5,392 ರನ್ ಗಳಿಸಿದ್ದು ಇದರಲ್ಲಿ 20 ಶತಕಗಳು ದಾಖಲಾಗಿದೆ. ಸೌತ್ ಆಫ್ರಿಕಾ ವಿರುದ್ಧ 2019ರಲ್ಲಿ ಸಿಡಿಸಿದ 254 ರನ್ ವೈಯಕ್ತಿಕ ಅಧಿಕ ಮೊತ್ತವಾಗಿದೆ. ಇತ್ತ ವಿಲಿಯಮ್ಸನ್ ಒಟ್ಟು 36 ಟೆಸ್ಟ್ ಪಂದ್ಯಗಳಿಂದ 3092 ರನ್ ಕಳೆಹಾಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಸಿಡಿಸಿದ 251 ರನ್ ವಿಲಿಯಮ್ಸನ್ ಅವರ ವೈಯಕ್ತಿಕ ಅಧಿಕ ರನ್ ಆಗಿದೆ.

    ಈ ಇಬ್ಬರು ನಾಯಕರು ಕೂಡ ಗೆಲುವಿನ ಪಂದ್ಯದಲ್ಲಿ ಮತ್ತು ಪರಸ್ಪರ ಎದುರಾಳಿಯಾಗಿ ಕೂಡ ದಾಖಲೆ ಹೊಂದಿದ್ದು, ವಿರಾಟ್ ಕೊಹ್ಲಿ ಭಾರತ ಗೆದ್ದಂತಹ 36 ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 20 ಶತಕ ಸಹಿತ 3328 ರನ್ ಸಿಡಿಸಿದ್ದಾರೆ. ಅಲ್ಲದೆ ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾರ್ಯ ನಿರ್ವಹಿಸಿ 3 ಪಂದ್ಯ ಗೆದ್ದು 2 ಪಂದ್ಯ ಸೋತಿದ್ದಾರೆ.  ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

    ವಿಲಿಯಮ್ಸನ್ ನ್ಯೂಜಿಲೆಂಡ್ ಗೆದ್ದಂತಹ 21 ಪಂದ್ಯಗಳಲ್ಲಿ 2,210 ರನ್ ಹೊಡೆದಿದ್ದಾರೆ. ಭಾರತ ವಿರುದ್ಧ ಈವರೆಗೆ ಒಟ್ಟು 4 ಪಂದ್ಯಗಳಲ್ಲಿ ನಾಯಕತ್ವ ನಿರ್ವಹಿಸಿ 2 ಪಂದ್ಯ ಗೆದ್ದು 2 ಪಂದ್ಯ ಸೋತಿದ್ದಾರೆ.  ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಈ ಎಲ್ಲಾ ಅಂಕಿ ಅಂಶಗಳನ್ನು ನೋಡಿದಾಗ ಇಬ್ಬರು ನಾಯಕರು ಕೂಡ ಅವರವರ ತಂಡಕ್ಕೆ ಪ್ರಮುಖ ಅಸ್ತ್ರವಾಗಿ ಗೋಚರಿಸುತ್ತಿದ್ದು, ಯಾರು ಈ ಬಾರಿ ನಾಯಕತ್ವದಲ್ಲಿ ಯಶಸ್ಸು ಕಂಡು ಟೆಸ್ಟ್ ಚಾಂಪಿಯನ್‍ಶಿಪ್ ಗೆದ್ದ ನಾಯಕರಾಗಿ ಹೊರಹೊಮ್ಮುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

  • ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಸಿಡ್ನಿ: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಡುವೆ ಇರುವಂತಹ ನಾಯಕತ್ವದ ವಿಭಿನ್ನತೆಯನ್ನು ನೋಡಲು ಕಾತುರನಾಗಿದ್ದೇನೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ.

    ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ಬ್ರೆಟ್ ಲೀ, ಮುಂದೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಎರಡು ತಂಡದ ನಾಯಕರ ನಾಯಕತ್ವ ಮತ್ತು ಆಟ ವಿಭಿನ್ನವಾಗಿದೆ ವಿಲಿಯಮ್ಸನ್ ಶಾಂತಚಿತ್ತದ ನಾಯಕನಾದರೆ, ಕೊಹ್ಲಿ ಆಕ್ರಮಣಕಾರಿ ನಾಯಕತ್ವವನ್ನು ತೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಭಾರತ ತಂಡ ಪ್ರಕಟ -ಮೂವರು ಕನ್ನಡಿಗರಿಗೆ ಸ್ಥಾನ

    ವಿರಾಟ್ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಆಕ್ರಮಣಕಾರಿಯಾಗಿ ಕಾಣಿಸಿಕೊಂಡರೆ, ವಿಲಿಯಮ್ಸನ್ ಶಾಂತಚಿತ್ತರಾಗಿ ನಾಯಕತ್ವ ನಿಭಾಯಿಸುತ್ತಾರೆ ಇದರೊಂದಿಗೆ ಅವರು ಸಮಯಕ್ಕೆ ಸರಿಯಾಗಿ ಬ್ಯಾಟಿಂಗ್‍ನಲ್ಲಿ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಈ ಇಬ್ಬರೂ ಆಟಗಾರರ ಆಟ ಮತ್ತು ನಾಯಕತ್ವ ಗುಣ ಬೇರೆ ಬೇರೆಯಾಗಿದ್ದು, ವಿಲಿಯಮ್ಸನ್ ಬೋರ್ ಆಗದ ರೀತಿಯಲ್ಲಿ ಸಾಂಪ್ರಾದಾಯಿಕ ನಾಯಕತ್ವನ್ನು ನಿಭಾಯಿಸುತ್ತಿದ್ದಾರೆ ಮತ್ತು ಅವರ ಕ್ರಿಕೆಟ್ ಜ್ಞಾನ ಮೆಚ್ಚುವಂತದ್ದಾಗಿದೆ. ಕೊಹ್ಲಿ ಕೂಡ ಕ್ರಿಕೆಟ್‍ನಲ್ಲಿ ಸಾಕಷ್ಟು ಅನುಭವ ಹೊಂದಿದ್ದು ಇದೀಗ ಈ ಇಬ್ಬರು ವಿಭಿನ್ನ ನಾಯಕರ ಕಾದಾಟ ನೋಡಲು ಕಾತುರನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವಿಶ್ವಕಪ್‍ಗಾಗಿ ಐಸಿಸಿ ಮಹತ್ವದ ನಿರ್ಧಾರ – ಬದಲಾವಣೆಯ ಪರ್ವ ಆರಂಭ

    ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್‍ಶಿಪ್ ಜೂನ್ 18ರಿಂದ ಸೌಥಾಂಪ್ಟನ್‍ನಲ್ಲಿ ನಡೆಯಲಿದ್ದು, ಈಗಾಗಲೇ ಭಾರತ ತಂಡ ಇಂಗ್ಲೆಂಡ್‍ನಲ್ಲಿ ಕ್ವಾರಂಟೈನ್‍ಗೆ ಒಳಗಾಗಿದೆ.

  • ಡೇವಿಡ್ ವಾರ್ನರ್‍ ಗೆ ಮಗದೊಂದು ಅಘಾತವಿತ್ತ ಹೈದರಾಬಾದ್ ತಂಡ

    ಡೇವಿಡ್ ವಾರ್ನರ್‍ ಗೆ ಮಗದೊಂದು ಅಘಾತವಿತ್ತ ಹೈದರಾಬಾದ್ ತಂಡ

    ಡೆಲ್ಲಿ: ಕಳೆದ ದಿನ ಸನ್ ರೈಸರ್ಸ್ ಹೈದರಾಬಾದ್ ತಂಡ ಡೇವಿಡ್ ವಾರ್ನರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಅಘಾತ ನೀಡಿತ್ತು. ಇಂದು ರಾಜಸ್ಥಾನ್ ವಿರುದ್ಧದ ಪಂದ್ಯದಿಂದಲೇ ಹೊರಗಿಟ್ಟು ಇನ್ನೊಂದು ಶಾಕ್ ನೀಡಿದೆ.

    14ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ಸತತ ಸೋಲಿನಿಂದ ಕಂಗೆಟ್ಟ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ನಾಯಕತ್ವದ ಬದಲಾವಣೆ ಮಾಡಲಾಗಿತ್ತು. ನಾಯಕನ ಪಟ್ಟದಿಂದ ಡೇವಿಡ್ ವಾರ್ನರ್ ಅವರನ್ನು ಕೆಳಗಿಳಿಸಿ ಕೇನ್ ವಿಲಿಯಮ್ಸನ್ ಅವರಿಗೆ ಹೈದರಾಬಾದ್ ತಂಡದ ನಾಯಕನ ಪಟ್ಟ ಕಟ್ಟಲಾಗಿದೆ. ಇಂದು ಡೆಲ್ಲಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಿದೆ. ಕೇನ್ ವಿಲಿಯಮ್ಸನ್ ನಾಯನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಡೇವಿಡ್ ವಾರ್ನರ್ ಮಾತ್ರ ಸ್ಥಾನ ಪಡೆದಿಲ್ಲ. ಹಾಗಾಗಿ ವಾರ್ನರ್ ಇಲ್ಲದ ಹೈದರಾಬಾದ್ ತಂಡವನ್ನು ನೋಡಿದ ಅಭಿಮಾನಿಗಳು ಫ್ರಾಂಚೈಸ್ ವಿರುದ್ಧ ಕಿಡಿಕಾರುತ್ತಿದ್ದಾರೆ.

    ಹೈದರಾಬಾದ್ ತಂಡ ವಾರ್ನರ್ ನಾಯಕತ್ವದಲ್ಲಿ 2016ರಲ್ಲಿ ಐಪಿಎಲ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತ್ತು. ಹೈದರಾಬಾದ್ ಪರ ವಾರ್ನರ್ 1015 ರಿಂದ 2019ರ ಮಧ್ಯೆ ಮೂರು ಬಾರಿ ಅತೀ ಹೆಚ್ಚು ರನ್ ಸಿಡಿಸಿ ಆರೆಂಜ್ ಕ್ಯಾಪ್‍ನ ಒಡೆಯನಾಗಿದ್ದರು. ಹಾಗೆ ಕಳೆದ 6 ಸೀಸನ್‍ಗಳಲ್ಲಿ ಹೈದರಾಬಾದ್ ತಂಡದ ಪರ 500ಕ್ಕೂ ಹೆಚ್ಚು ರನ್ ಸಿಡಿಸಿದ ಆಟಗಾರನಾಗಿ ವಾರ್ನರ್ ಮಿಂಚಿದ್ದರು.

    ವಾರ್ನರ್ ಹೈದರಾಬಾದ್ ತಂಡವನ್ನು 2015, 2016, 2017 ಮತ್ತು 2020ರ ಸೀಸನ್‍ಗಳಲ್ಲಿ ಪ್ಲೇ ಆಪ್ ಹಂತಕ್ಕೆ ಏರಿಸಿದ್ದರು. ಅಷ್ಟೆ ಅಲ್ಲದೆ ಐಪಿಎಲ್‍ನಲ್ಲಿ ವಾರ್ನರ್ 148 ಪಂದ್ಯಗಳನ್ನು ಆಡಿ 140.13 ಸ್ಟ್ರೈಕ್ ರೇಟ್‍ನಲ್ಲಿ 5,447 ರನ್ ಗಳಿಸಿದ್ದಾರೆ. ಇದು ಮಾತ್ರವಲ್ಲದೆ ಐಪಿಎಲ್ ಇತಿಹಾಸದಲ್ಲೇ 50 ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

  • ಸತತ ಸೋಲಿನಿಂದ ಕಂಗೆಟ್ಟ ಹೈದರಾಬಾದ್- ನಾಯಕತ್ವದಿಂದ ಕೆಳಗಿಳಿದ ವಾರ್ನರ್

    ಸತತ ಸೋಲಿನಿಂದ ಕಂಗೆಟ್ಟ ಹೈದರಾಬಾದ್- ನಾಯಕತ್ವದಿಂದ ಕೆಳಗಿಳಿದ ವಾರ್ನರ್

    ಅಹಮದಾಬಾದ್: 14ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ಸತತ ಸೋಲಿನಿಂದ ಕಂಗೆಟ್ಟ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ನಾಯಕತ್ವದ ಬದಲಾವಣೆಯಾಗಿದೆ. ನಾಯಕನ ಪಟ್ಟದಿಂದ ಡೇವಿಡ್ ವಾರ್ನರ್ ಅವರನ್ನು ಕೆಳಗಿಳಿಸಿ ಕೇನ್ ವಿಲಿಯಮ್ಸನ್ ಅವರಿಗೆ ಹೈದರಾಬಾದ್ ತಂಡದ ನಾಯಕನ ಪಟ್ಟ ಕಟ್ಟಲಾಗಿದೆ.

    ಈ ಕುರಿತು ಅಧಿಕೃತವಾಗಿ ತಿಳಿಸಿರುವ ಹೈದರಾಬಾದ್ ಫ್ರಾಂಚೈಸಿ, ಹೈದರಾಬಾದ್ ತಂಡವನ್ನು ಮೊದಲ 6 ಪಂದ್ಯಗಳಲ್ಲಿ ಮುನ್ನಡೆಸಿದ್ದ ಡೇವಿಡ್ ವಾರ್ನರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮುಂದಿನ ಪಂದ್ಯಗಳಿಗೆ ವಿಲಿಯಮ್ಸನ್ ಅವರಿಗೆ ನಾಯಕತ್ವದ ಜವಬ್ದಾರಿ ವಹಿಸಲಾಗಿದೆ. ವಾರ್ನರ್ ಮುಂದಾಳತ್ವದಲ್ಲಿ ಆಡಿರುವ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿರುವ ಕಾರಣಕ್ಕೆ ಮುಂದಿನ ಪಂದ್ಯಗಳಿಗೆ ವಿಲಿಯಮ್ಸನ್ ನಾಯಕರಾಗಿರಲಿದ್ದಾರೆ ಎಂದು ತಿಳಿಸಿದೆ.

    ವಾರ್ನರ್ ಹಲವು ವರ್ಷಗಳಿಂದ ಹೈದರಾಬಾದ್ ತಂಡದಲ್ಲಿ ಅಡುತ್ತಿದ್ದಾರೆ. ಆದರೆ ಈ ಬಾರಿ ವಾರ್ನರ್ ಆಟಗಾರನಾಗಿ ತಂಡಕ್ಕೆ ನೆರವಾಗಲಿದ್ದಾರೆ ಎಂದು ಹೈದರಾಬಾದ್ ಆಡಳಿತ ಮಂಡಳಿ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಾರ್ನರ್ ಕುರಿತು ಅಭಿಪ್ರಾಯಪಟ್ಟಿದೆ.

    ಹೈದರಾಬಾದ್ ತಂಡ ವಾರ್ನರ್ ನಾಯಕತ್ವದಲ್ಲಿ 2016ರಲ್ಲಿ ಐಪಿಎಲ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತ್ತು. ಹೈದರಾಬಾದ್ ಪರ ವಾರ್ನರ್ 1015 ರಿಂದ 2019ರ ಮಧ್ಯೆ ಮೂರು ಬಾರಿ ಅತೀ ಹೆಚ್ಚು ರನ್ ಸಿಡಿಸಿ ಆರೆಂಜ್ ಕ್ಯಾಪ್‍ನ ಒಡೆಯನಾಗಿದ್ದರು. ಹಾಗೆ ಕಳೆದ 6 ಸೀಸನ್‍ಗಳಲ್ಲಿ ಹೈದರಾಬಾದ್ ತಂಡದ ಪರ 500ಕ್ಕೂ ಹೆಚ್ಚು ರನ್ ಸಿಡಿಸಿದ ಆಟಗಾರನಾಗಿ ವಾರ್ನರ್ ಮಿಂಚಿದ್ದರು.

    ವಾರ್ನರ್ ಹೈದರಾಬಾದ್ ತಂಡವನ್ನು 2015, 2016, 2017 ಮತ್ತು 2020ರ ಸೀಸನ್‍ಗಳಲ್ಲಿ ಪ್ಲೇಆಪ್ ಹಂತಕ್ಕೆ ಏರಿಸಿದ್ದರು. ಅಷ್ಟೆ ಅಲ್ಲದೆ ಐಪಿಎಲ್‍ನಲ್ಲಿ ವಾರ್ನರ್ 148 ಪಂದ್ಯಗಳನ್ನು ಆಡಿ 140.13 ಸ್ಟ್ರೈಕ್ ರೇಟ್‍ನಲ್ಲಿ 5,447 ರನ್ ಗಳಿಸಿದ್ದಾರೆ. ಇದು ಮಾತ್ರವಲ್ಲದೆ ಐಪಿಎಲ್ ಇತಿಹಾಸದಲ್ಲೇ 50 ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

    ಇಷ್ಟೆಲ್ಲ ಸಾಧನೆ ಮಾಡಿರುವ ವಾರ್ನರ್ ಅವರನ್ನು ನಾಯಕತ್ವದಿಂದ ಫ್ರಾಂಚೈಸಿ ತೆಗೆದು ಹಾಕುತ್ತಿದ್ದಂತೆ ಅಭಿಮಾನಿಗಳು ಕಿಡಿಕಾರಿದ್ದಾರೆ. ತಂಡದ ಒಳಿತಿಗಾಗಿ ವಾರ್ನರ್ ನಾಯಕತ್ವದಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.

  • ಉತ್ತರಾಖಂಡ್ ಬಿಜೆಪಿ ನಾಯಕತ್ವದಲ್ಲಿ ದಿಢೀರ್‌ ಬದಲಾವಣೆ – ‌ ಸಿಎಂ ರಾಜೀನಾಮೆ

    ಉತ್ತರಾಖಂಡ್ ಬಿಜೆಪಿ ನಾಯಕತ್ವದಲ್ಲಿ ದಿಢೀರ್‌ ಬದಲಾವಣೆ – ‌ ಸಿಎಂ ರಾಜೀನಾಮೆ

    ಡೆಹ್ರಾಡೂನ್: ಮಹತ್ವದ ಬೆಳವಣಿಗೆಯಲ್ಲಿ ಉತ್ತರಾಖಂಡ್‌ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

    ಬಜೆಟ್ ಅಧಿವೇಶನದ ಸಮಯದಲ್ಲಿ ಮಾ.07 ರಂದು ಬಿಜೆಪಿ ದಿಢೀರ್ ಕೋರ್ ಕಮಿಟಿ ಸಭೆ ನಡೆಸಿ ಸರ್ಕಾರದಲ್ಲಿ ಮಹತ್ವದ ಬದಲಾವಣೆಯ ಸುಳಿವು ನೀಡಿತ್ತು. ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

    ಉತ್ತಾರಖಂಡ್‌ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ 60 ವರ್ಷದ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಪಡೆದು ನಾಯಕತ್ವ ಬದಲಾವಣೆ ನಿರ್ಧಾರಕ್ಕೆ  ಹೈ ಕಮಾಂಡ್‌ ಕೈ ಹಾಕಿರುವುದು ಅಚ್ಚರಿಗೆ ಕಾರಣವಾಗಿದೆ.

    ರಾಜೀನಾಮೆ ಯಾಕೆ?
    ಬಿಜೆಪಿ ಶಾಸಕರು ರಾವತ್ ಅವರ ಆಡಳಿತ ಶೈಲಿಯ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದರು. ಇವರೇ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ತಿಳಿಸಿದ್ದರು ಎನ್ನಲಾಗುತ್ತಿದೆ.

    ಕೋರ್‌ ಕಮಿಟಿ ಸಭೆ ನಡೆದ ಬೆನ್ನಲ್ಲೇ ಮಾ.08 ರಂದು ದೆಹಲಿಗೆ ಭೇಟಿ ನೀಡಿದ್ದ ರಾವತ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು.

    ಒಟ್ಟು 69 ವಿಧಾನಸಭಾ ಕ್ಷೇತ್ರಗಳಿದ್ದು 2017ರ ವಿಧಾನಸಭೆಯಲ್ಲಿ ಬಿಜೆಪಿ 59 ಸ್ಥಾನವನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಏರಿತ್ತು. ಕಾಂಗ್ರೆಸ್‌ 11 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

  • ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ – ಆರ್‌ಸಿಬಿ ಚೇರ್‌ಮ್ಯಾನ್ ಹೇಳಿದ್ದೇನು?

    ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ – ಆರ್‌ಸಿಬಿ ಚೇರ್‌ಮ್ಯಾನ್ ಹೇಳಿದ್ದೇನು?

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಈಗಾಗಲೇ ಐಪಿಎಲ್-2020ಗಾಗಿ ಯುಎಇಗೆ ಪ್ರಯಾಣ ಬೆಳೆಸಿದೆ. ಐಪಿಎಲ್‍ಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

    ಐಪಿಎಲ್‍ನಲ್ಲಿ ಆರ್‌ಸಿಬಿ ಬಹಳ ಜನಪ್ರಿಯವಾದ ತಂಡ. ಆದರೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಭಾರತ ತಂಡವನ್ನು ಮುನ್ನಡೆಸುವ ನಾಯಕ ವಿರಾಟ್ ಕೊಹ್ಲಿಯವರೇ ನಾಯಕನಾದರೂ ತಂಡ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಾಗಿ ತಂಡದ ನಾಯಕತ್ವವನ್ನು ಬದಲಿಸಿ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ಎಂಬುದು ಕೆಲವರ ವಾದವಾಗಿದೆ.

    ಈ ಪ್ರಶ್ನೆಗೆ ಖಾಸಗಿ ವಾಹಿನಿಯೊಂದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತರಿಸಿರುವ ಆರ್‌ಸಿಬಿ ತಂಡದ ಚೇರ್‌ಮ್ಯಾನ್ ಸಂಜೀವ್ ಚುರಿವಾಲಾ, ವಿರಾಟ್ ಭಾರತ ತಂಡದ ನಾಯಕ. ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಆಟಗಾರ. ಆಟ ಎಂದ ಮೇಲೆ ಸೋಲು ಗೆಲುವು ಸಾಮಾನ್ಯ. ಆದರೆ ವಿರಾಟ್ ಅವರು ಯಾವ ರೀತಿಯ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಆರ್‌ಸಿಬಿ ತಂಡದ ಮಾಲೀಕನಾಗಿ ನಮಗೆ ಕೊಹ್ಲಿ ತಂಡದ ನಾಯಕನಾಗಿರುವುದು ಹೆಮ್ಮೆ ಎಂದು ಹೇಳಿದ್ದಾರೆ.

    ಈ ಬಾರಿಯ ಆರ್‌ಸಿಬಿ ತಂಡ ಬಹಳ ಬ್ಯಾಲೆನ್ಸ್ ಆಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ತಂಡ ಬಹಳ ಬಲಿಷ್ಠವಾಗಿದೆ. ಹಿಂದಿನ ಆವೃತ್ತಿಯಲ್ಲಿ ನಮ್ಮ ತಂಡಕ್ಕೆ ಇದ್ದ ವೈಫಲ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು, ಈ ಬಾರಿಯ ಹಾರಜಿನಲ್ಲಿ ಉತ್ತಮ ಆಟಗಾರರನ್ನು ಖರೀದಿ ಮಾಡಿದ್ದೇವೆ. ಜೊತೆಗೆ ಸಿದ್ಧತೆಯನ್ನು ಕೂಡ ಮಾಡಿಕೊಂಡಿದ್ದೇವೆ. ಹೀಗಾಗಿ ಈ ಬಾರಿ ಕಪ್ ಗೆಲ್ಲುವ ವಿಶ್ವಾದಲ್ಲಿ ಇದ್ದೇವೆ ಎಂದು ಚುರಿವಾಲಾ ತಿಳಿಸಿದ್ದಾರೆ.

    ತಂಡದಲ್ಲಿ ಉತ್ತಮ ಆಟಗಾರರು ಇದ್ದರೂ ಆರ್‌ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ತಂಡದ ಆಟಗಾರರು ವೈಯಕ್ತಿಕವಾಗಿ ಉತ್ತಮವಾಗಿ ಆಡಿದರೂ ಒಂದು ತಂಡವಾಗಿ ಆಡುವಲ್ಲಿ ವಿಫಲರಾಗಿದ್ದಾರೆ. ಆರ್‌ಸಿಬಿ ಕಳೆದ ಮೂರು ಆವೃತ್ತಿಲ್ಲೂ ಅಂಕಪಟ್ಟಿಯಲ್ಲಿ, 8, 6 ಮತ್ತು 8ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಳೆದ ಮೂರು ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಫ್ಲೇಆಪ್ ಹಂತಕ್ಕೂ ಬಂದಿಲ್ಲ. ಇದು ಅಭಿಮಾನಿಗಳನ್ನು ನಿರಾಸೆಗೊಳಿಸಿದೆ.

    ಐಪಿಎಲ್‍ನಲ್ಲಿ ಬ್ಯಾಟ್ಸ್‍ಮ್ಯಾನ್ ಆಗಿ ಉತ್ತಮ ಸಾಧನೆ ಮಾಡಿರುವ ಕೊಹ್ಲಿ, ಐಪಿಎಲ್‍ನಲ್ಲಿ 37.84ರ ಸರಾಸರಿಯೊಂದಿಗೆ ಒಟ್ಟು 5,412 ರನ್ ಗಳಿಸಿದ್ದಾರೆ ಮತ್ತು 131.61 ಸ್ಟ್ರೈಕ್ ರೇಟ್ ಬ್ಯಾಟ್ ಬೀಸಿದ್ದಾರೆ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಐದು ಶತಕ ಮತ್ತು ಮೂವತ್ತಾರು ಅರ್ಧಶತಕ ಗಳಿಸಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಇದುವರೆಗೆ ನಾಯಕನಾಗಿ ಅವರು ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

  • 2024ರ ಚುನಾವಣೆಗೆ ಧೋನಿ ಸ್ಪರ್ಧಿಸಬೇಕು: ಸುಬ್ರಮಣಿಯನ್‌ ಸ್ವಾಮಿ

    2024ರ ಚುನಾವಣೆಗೆ ಧೋನಿ ಸ್ಪರ್ಧಿಸಬೇಕು: ಸುಬ್ರಮಣಿಯನ್‌ ಸ್ವಾಮಿ

    ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಮಹೇಂದ್ರ ಸಿಂಗ್‌ ಧೋನಿ ಸ್ಪರ್ಧಿಸಬೇಕೆಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ಧೋನಿ ಶನಿವಾರ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿಯ ನಂತರ ಧೋನಿ ಏನು ಮಾಡುತ್ತಾರೆ ಎಂಬ ಕುತೂಹಲ ಎದ್ದಿದೆ.

    ಈ ಕುತೂಹಲದ ಬೆನ್ನಲ್ಲೇ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿ, ಎಂ.ಎಸ್. ಧೋನಿ ಕ್ರಿಕೆಟ್‌ನಿಂದ ನಿವೃತ್ತರಾಗುತ್ತಿದ್ದಾರೆ ಹೊರತು ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆ ಸಮಸ್ಯೆಗಳ ವಿರುದ್ಧ ಹೋರಾಡಲು ನೆರವಾಗಬೇಕು. ಕ್ರಿಕೆಟ್‌ನಲ್ಲಿ ಅವರು ಪ್ರದರ್ಶಿಸಿದ ಸ್ಪೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನಕ್ಕೆ ಅಗತ್ಯವಿದೆ. ಅವರು 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    2019ರ ವಿಶ್ವಕಪ್‌ ಕ್ರಿಕೆಟ್‌ ಬಳಿಕ ಯಾವುದೇ ಪಂದ್ಯವಾಡದ ಧೋನಿ ನಿವೃತ್ತಿ ಹೇಳಲಿದ್ದಾರೆ ಎಂಬ ಸುದ್ದಿ ಹಲವು ತಿಂಗಳಿನಿಂದ ಹರಿದಾಡುತ್ತಿತ್ತು. ಆದರೆ ಎಲ್ಲಿಯೂ ಅಧಿಕೃತವಾಗಿ ಧೋನಿ ತಿಳಿಸಿರಲಿಲ್ಲ. ಆದರೆ ಶನಿವಾರ ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ತಿಳಿಸಿದ್ದರು.

    ಎರಡು ವರ್ಷದ ಹಿಂದೆ ಆಗಿನ ಬಿಜೆಪಿ ಅಧ್ಯಕ್ಷ ಹಾಲಿ ಗೃಹ ಸಚಿವ ಅಮಿತ್‌ ಶಾ ಧೋನಿ ಅವರನ್ನು ಸರ್ಕಾರದ ಅಭಿಯಾನದ ಭಾಗವಾಗಿ ಭೇಟಿಯಾಗಿದ್ದರು. ಶನಿವಾರ ಅಮಿತ್‌ ಶಾ ಧೋನಿ ಭವಿಷ್ಯಕ್ಕೆ ಶುಭವಾಗಲಿ ಎಂದು ಟ್ವೀಟ್‌ ಮಾಡಿದ್ದರು.

  • ನನಗೆ ನಾಯಕತ್ವದ ಪಟ್ಟ ಸಿಗಲು ಧೋನಿ ಪಾತ್ರ ದೊಡ್ಡದು- ಕೊಹ್ಲಿ

    ನನಗೆ ನಾಯಕತ್ವದ ಪಟ್ಟ ಸಿಗಲು ಧೋನಿ ಪಾತ್ರ ದೊಡ್ಡದು- ಕೊಹ್ಲಿ

    – ವಿರಾಟ್ ವೃತ್ತಿ ಜೀವನದ ಟರ್ನಿಂಗ್ ಪಾಯಿಂಟ್ ಪಂದ್ಯ ರಿವೀಲ್

    ಮುಂಬೈ: ನಾನು ಟೀಂ ಇಂಡಿಯಾ ನಾಯಕತ್ವವನ್ನು ಪಡೆಯುವಲ್ಲಿ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ದೊಡ್ಡ ಪಾತ್ರ ವಹಿಸಿದ್ದರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

    ಎಂ.ಎಸ್.ಧೋನಿ ನಾಯಕತ್ವದಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನವನ್ನು ಪ್ರಾರಂಭಿಸಿದ ಕೊಹ್ಲಿ, ನಾಯಕತ್ವದ ಜವಾಬ್ದಾರಿಯನ್ನು ಇದ್ದಕ್ಕಿದ್ದಂತೆ ಪಡೆದುಕೊಂಡಿಲ್ಲ. ಧೋನಿ ಎಲ್ಲವನ್ನೂ ಗಮನಿಸಿಯೇ ನಾಯಕ್ವವನ್ನು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರವನ್ನು ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರೊಂದಿಗೆ ಇನ್‍ಸ್ಟಾಗ್ರಾಮ್ ವೈಲ್ ಚಾಟ್‍ನಲ್ಲಿ ಕೊಹ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ ದುಬಾರಿ ಶೂ ಕೊಡಿಸಿ ಮಾನವೀಯತೆ ಮೆರೆದ ‘ಮಿಸ್ಟರ್ 360’

    “ನಾನು ಎಂದಿಗೂ ನಾಯಕನಾಗಬೇಕೆಂದು ಯೋಚಿಸಲಿಲ್ಲ. ಆಯ್ಕೆ ಮಾಡುವವರು ಕೂಡ ನನ್ನನ್ನು ಇದ್ದಕ್ಕಿದ್ದಂತೆ ನಾಯಕನನ್ನಾಗಿ ಮಾಡಿಲ್ಲ ಎಂದು ನಂಬುತ್ತೇನೆ. ಈ ಜವಾಬ್ದಾರಿಯನ್ನು ನೀಡುವ ಮೊದಲು ಅವರು ಧೋನಿ ಅವರನ್ನು ಕೇಳಿರಬೇಕು. ಈ ಮೂಲಕ ನಾನು ಟೀಂ ಇಂಡಿಯಾ ಕ್ಯಾಪ್ಟನ್ ಆಗಲು ಧೋನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ನಂಬಿಕೆಯಿದೆ” ಎಂದು ವಿರಾಟ್ ತಿಳಿಸಿದ್ದಾರೆ.

    “ನಾನು ತಂಡವನ್ನು ಸೇರಿದ ದಿನದಿಂದ ಬಹಳಷ್ಟು ಕಲಿಯಲು ಬಯಸಿದ್ದೆ. ಧೋನಿ ಅರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೆ. ಅನೇಕ ಬಾರಿ ಅವರು ನಿರಾಕರಿಸಿದರು. ಆದರೆ ಇಷ್ಟಪಟ್ಟ ವಿಚಾರವನ್ನೂ ಚರ್ಚಿಸಿದರು. ಧೋನಿ ಯಾವಾಗಲೂ ನನ್ನನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಅವರಿಂದ ಹೆಚ್ಚು ಹೆಚ್ಚು ಕಲಿತಿದ್ದೇನೆ. ನನ್ನ ಕುತೂಹಲದಿಂದಾಗಿ ತಂಡದ ಮುಂದಿನ ನಾಯಕನಾಗಬಹುದೆಂದು ಧೋನಿ ಬಹುಶಃ ನಂಬಿದ್ದರು” ಎಂದು ಕೊಹ್ಲಿ ಹೇಳಿದ್ದಾರೆ.

    ಸಚಿನ್ ಜೊತೆ ಬ್ಯಾಟಿಂಗ್ ಸ್ಮರಣೀಯ ಕ್ಷಣ:
    ಪಾಕಿಸ್ತಾನ ವಿರುದ್ಧ 183 ರನ್‍ಗಳ ಇನ್ನಿಂಗ್ಸ್ ಅನ್ನು ನೆನೆದ ಕೊಹ್ಲಿ, “ಪಾಕಿಸ್ತಾನ ತಂಡದ ಬೌಲಿಂಗ್ ಆಕ್ರಮಣವು ತುಂಬಾ ಪ್ರಬಲವಾಗಿತ್ತು. ಶಾಹಿದ್ ಅಫ್ರಿದಿ, ಸಯೀದ್ ಅಜ್ಮಲ್, ಉಮರ್ ಗುಲ್  ಮತ್ತು ಮೊಹಮ್ಮದ್ ಹಫೀಜ್ ಪಾಕ್ ತಂಡದಲ್ಲಿದ್ದರು. ಅಂತಹ ಸಮಯದಲ್ಲಿ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಬ್ಯಾಟಿಂಗ್ ಮಾಡಲು ನನಗೆ ಸಂತೋಷವಾಗಿತ್ತು. ಸಚಿನ್ 50 ರನ್ ಗಳಿಸಿದ್ದರು. ನಮ್ಮಿಬ್ಬರ ಜೊತೆಯಾಟದಲ್ಲಿ 100ಕ್ಕೂ ಹೆಚ್ಚು ರನ್ ಗಳಿಸಿದ್ವಿ. ಇದು ನನಗೆ ಮರೆಯಲಾಗದ ಕ್ಷಣ. ಈ ಇನ್ನಿಂಗ್ಸ್ ನನ್ನ ವೃತ್ತಿ ಜೀವನವನ್ನೇ ಬದಲಾಯಿಸಿತು” ಎಂದಿದ್ದಾರೆ.

    2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಧೋನಿ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಿದರು. ಇದರ ನಂತರ ಕೊಹ್ಲಿ ಅವರಿಗೆ ನಾಯಕತ್ವ ನೀಡಲಾಯಿತು. 2018ರಲ್ಲಿ ಭಾರತ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯನ್ನು 2-1ರಿಂದ ಗೆದ್ದುಕೊಂಡಿತ್ತು. ಉಭಯ ದೇಶಗಳ ನಡುವಿನ 71 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಸರಣಿ ಜಯ ಸಾಧಿಸಿತ್ತು. ಕೊಹ್ಲಿ 2017ರ ಜನವರಿಯಲ್ಲಿ ಸೀಮಿತ ಓವರ್ ಗಳ ನಾಯಕತ್ವವನ್ನು ವಹಿಸಿಕೊಂಡರು.

    ಕೊಹ್ಲಿ ನಾಯಕತ್ವದಲ್ಲಿ, ಭಾರತ ತಂಡವು ಈವರೆಗೆ ಒಟ್ಟು 117 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. ಅವರು ದೇಶದ ಎರಡನೇ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂ.ಎಸ್.ಧೋನಿ 178 ಗೆಲುವುಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಮೊಹಮ್ಮದ್ ಅಜರುದ್ದೀನ್ ಮೂರನೇ ಸ್ಥಾನದಲ್ಲಿದ್ದಾರೆ. ಸೌರವ್ ಗಂಗೂಲಿ 97 ಗೆಲುವುಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

  • ಯಂಗಿಸ್ತಾನ್ ಸಂಪುಟ ರಚನೆಗೆ ಬಿಜೆಪಿ ಹೈಕಮಾಂಡ್ ಪ್ಲಾನ್ – ಯಾರಿಗೆ ಮಂತ್ರಿ ಸ್ಥಾನ?

    ಯಂಗಿಸ್ತಾನ್ ಸಂಪುಟ ರಚನೆಗೆ ಬಿಜೆಪಿ ಹೈಕಮಾಂಡ್ ಪ್ಲಾನ್ – ಯಾರಿಗೆ ಮಂತ್ರಿ ಸ್ಥಾನ?

    ಬೆಂಗಳೂರು: ರಾಜ್ಯ ಬಿಜೆಪಿಯ ಯುವ ಶಾಸಕರಲ್ಲಿ ನಾಯಕತ್ವ ಗುಣ ಬರಲು ಮತ್ತು ರಾಜ್ಯದಲ್ಲಿ ಬಿಜೆಪಿ ಬೇರು ಗಟ್ಟಿಗೊಳಿಸಲು ಹೈಕಮಾಂಡ್ ಈಗಿನಿಂದಲೇ ಪ್ಲಾನ್ ಮಾಡುತ್ತಿದೆ. ರಾಜ್ಯ ಸಚಿವ ಸಂಪುಟವನ್ನು ಯಂಗಿಸ್ತಾನ್ ಸಂಪುಟವಾಗಿಸಲು ಬಿಜೆಪಿ ಪ್ಲಾನ್ ಹಾಕಿಕೊಂಡಿದೆ. ಆದರೆ ಹೈಕಮಾಂಡ್ ಸದ್ಯದಲ್ಲೇ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಪ್ಲಾನ್ ಜಾರಿ ಮಾಡುತ್ತಿಲ್ಲ. ಬದಲಾಗಿ ಮುಂಬರುವ ಸಂಪುಟ ಪುನಾರಚನೆಯಲ್ಲಿ ತನ್ನ ಪ್ಲಾನ್ ಅಳವಡಿಸಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗುತ್ತದೆ.

    ಸದ್ಯ ಮಿತ್ರಮಂಡಳಿಯ ಸದಸ್ಯರ ಋಣ ಸಂದಾಯಕ್ಕಾಗಿ ಈ ಸಲದ ವಿಸ್ತರಣೆಯನ್ನು ಮೀಸಲಿಡಲಾಗಿದೆ. ಹಾಗಾಗಿ ಈ ಸಂಪುಟ ವಿಸ್ತರಣೆ ಟಚ್ ಮಾಡಲು ಹೋಗಲ್ಲ ಬಿಜೆಪಿ ಹೈಕಮಾಂಡ್. ಮುಂದೆ ಒಂದು ವರ್ಷದೊಳಗೆ ಸಂಪುಟ ಪುನಾರಚನೆಯಾಗಲಿದ್ದು ಈ ಸಂದರ್ಭದಲ್ಲಿ ಎರಡು ವಿಚಾರದ ಮೇಲೆ ಹೈಕಮಾಂಡ್ ಫೋಕಸ್ ಮಾಡಿದೆ. ಮೊದಲನೇಯದು ಸಂಪುಟದಲ್ಲಿ ಕರಾವಳಿ ಶಾಸಕರ ಸೇರ್ಪಡೆ ಮಾಡಿಕೊಳ್ಳುವುದು. ಎರಡನೇಯ ಅಂಶ, ಹೊಸ ಮುಖಗಳ ಮೇಲೆ ವಿಶ್ವಾಸ ಇಟ್ಟು ಸಚಿವರನ್ನಾಗಿ ಮಾಡೋದು.

    ಕರಾವಳಿಯೇ ಯಾಕೆ?
    ಕರಾವಳಿ ಭಾಗದ ಶಾಸಕರು ಯಾವತ್ತೂ ಯಾವ ವಿಚಾರಕ್ಕೂ ಬೇಸರ ವ್ಯಕ್ತಪಡಿಸುವುದಿಲ್ಲ. ಪಕ್ಷ ಮತ್ತು ಸರ್ಕಾರದಲ್ಲಿ ಅವಕಾಶ ವಂಚಿತರಾದರೂ ಸಾಫ್ಟ್ ಆಗಿಯೇ ಇದ್ದು ನಿಷ್ಠೆ, ಶಿಸ್ತು ಪ್ರದರ್ಶಿಸುತ್ತಲೇ ಬಂದಿದ್ದಾರೆ. ಕರಾವಳಿ ಶಾಸಕರು ಅವಕಾಶ ವಂಚಿತರಾದಾಗ ವಿರೋಧ ವ್ಯಕ್ತಪಡಿಸಲ್ಲ ಅಂತ ಅವರನ್ನು ಕೈಬಿಡೋದು ಸರಿಯಲ್ಲ ಎನ್ನುವ ಅನುಕಂಪ ಬೆರೆತ ಆಲೋಚನೆ ಈಗ ಹೈಕಮಾಂಡ್ ಮನಸ್ಸಿನಲ್ಲಿ ಮೊಳೆತಿದೆ. ಹಾಗಾಗಿ ಕರಾವಳಿ ಭಾಗಕ್ಕೆ ಆದ್ಯತೆ ಕೊಡಲೇಬೇಕು ಎಂಬ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ. ಬಿಜೆಪಿ ಪಾಳಯದ ಮಾಹಿತಿಯನ್ವಯ ಮುಂದಿನ ಸಂಪುಟ ಪುನಾರಚನೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, ಸುಳ್ಯದ ಶಾಸಕ ಎಸ್.ಅಂಗಾರ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಮಂತ್ರಿಗಿರಿ ಭಾಗ್ಯ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಹೊಸ ಮುಖಗಳಿಗೆ ಜವಾಬ್ದಾರಿ:
    ಕಿರಿಯ ಮತ್ತು ಯುವ ಶಾಸಕರಿಗೆ ನಾಯಕತ್ವ ಹೊರೆಸಲು ಹೈಕಮಾಂಡ್ ಪ್ಲಾನ್ ಮಾಡಿಕೊಂಡಿದೆ. ಮುಂದಿನ ಸಂಪುಟ ಪುನಾರಚನೆಯಲ್ಲಿ ಪಕ್ಷದ ಯುವ ಶಾಸಕರಿಗೆ ಸಿಗಲಿದೆ ಸಚಿವ ಸ್ಥಾನ? ಭವಿಷ್ಯದ ಸಚಿವರು ಯಾರಾಗಬಹುದು ಅನ್ನೋ ಲೆಕ್ಕಾಚಾರ ಪಕ್ಷದಲ್ಲಿ ಜೋರಾಗಿ ನಡೆಯುತ್ತಿದೆ.

    ಯಾರಿಗೆ ಸಿಗಬಹುದು ಮಂತ್ರಿಗಿರಿ?
    1. ಸುನೀಲ್ ಕುಮಾರ್
    2. ದತ್ತಾತ್ರೇಯ ಪಾಟೀಲ್ ರೇವೂರ
    3. ರಾಜಕುಮಾರ್ ಪಾಟೀಲ್ ತೇಲ್ಕೂರ್
    4. ರಾಜುಗೌಡ
    5. ಪ್ರೀತಂ ಗೌಡ
    6. ಕುಡಚಿ ರಾಜೀವ್
    7. ಹರ್ಷವರ್ಧನ್
    8. ಅರವಿಂದ ಬೆಲ್ಲದ್

  • ಧೋನಿ ವೃತ್ತಿ ಜೀವನದ ವಿಶೇಷ ದಿನ ಸೆ.14- ನೆಟ್ಟಿಗರಿಂದ ಪ್ರಶಂಸೆ

    ಧೋನಿ ವೃತ್ತಿ ಜೀವನದ ವಿಶೇಷ ದಿನ ಸೆ.14- ನೆಟ್ಟಿಗರಿಂದ ಪ್ರಶಂಸೆ

    ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಸೆ.14 ವಿಶೇಷವಾದ ದಿನವಾಗಿದ್ದು, ಈ ಸಂದರ್ಭವನ್ನು ನೆಟ್ಟಿಗರು ನೆನಪಿಸಿಕೊಂಡು ತಮ್ಮ ನೆಚ್ಚಿನ ಆಟಗಾರನಿಗೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    12 ವರ್ಷಗಳ ಹಿಂದೆ 2007 ರಲ್ಲಿ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಏರ್ಪಡಿಸಿತ್ತು. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ತಂಡದ ನಾಯಕರಾಗಿ ಬಿಸಿಸಿಐ ಧೋನಿರನ್ನ ಆಯ್ಕೆ ಮಾಡಿತ್ತು. ಆ ಮೂಲಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕತ್ವ ವಹಿಸಿಕೊಂಡರು. ಟೂರ್ನಿಯಲ್ಲಿ ಭಾರತ ಮೊದಲ ಪಂದ್ಯವನ್ನು ಸೆ.14 ರಂದು ಪಾಕಿಸ್ತಾವನ್ನು ಎದುರಿಸಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಪರಿಣಾಮ ಬೌಲ್ ಔಟ್ ಮೂಲಕ ಟೀಂ ಇಂಡಿಯಾ ಗೆಲುವು ಪಡೆದಿತ್ತು. ತಂಡದ ನಾಯಕರಾಗಿ ಧೋನಿ ಪಡೆದ ಮೊದಲ ಗೆಲುವು ಇದಾಗಿತ್ತು. ನಾಯಕತ್ವ ವಹಿಸಿಕೊಂಡ ಟೂರ್ನಿಯಲ್ಲೇ ಧೋನಿ ಬಳಗ ಕಪ್ ಗೆದ್ದು ಬೀಗಿತ್ತು. ಅಂದಹಾಗೇ ಟೂರ್ನಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಸೆ.12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಬೇಕಿತ್ತು. ಆದರೆ ಪಂದ್ಯ ಮಳೆಯಿಂದ ರದ್ದಾಗಿತ್ತು.

    https://www.youtube.com/watch?v=GY9fHrJf19I

    ನಾಯಕತ್ವ ವಹಿಸಿಕೊಂಡ ಮೊದಲ ಟೂರ್ನಿಯಲ್ಲೇ ಧೋನಿ ತಂಡ ಟ್ರೋಫಿ ಗೆದ್ದು ಬೀಗಿತ್ತು. ಈ ವಿಶೇಷ ದಿನವನ್ನು ನೆನಪಿಸಿಕೊಂಡ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಧೋನಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕ್ಯಾಪ್ಟನ್ ಧೋನಿಗೆ 12 ವರ್ಷ, ಟಿ20 ವಿಶ್ವಕಪ್ ಗೆದ್ದ ಸಂದರ್ಭದಲ್ಲಿ ಧೋನಿ ಶಕೆ ಆರಂಭವಾಗಿತ್ತು #12YearsOfCaptainDhoni ಎಂದು  ಟ್ವೀಟ್ ಮಾಡಿದ್ದಾರೆ.

    38 ವರ್ಷದ ಧೋನಿ ಟೀಂ ಇಂಡಿಯಾ ಪರ ಎಲ್ಲಾ ಐಸಿಸಿ ಏರ್ಪಡಿಸುವ ಎಲ್ಲಾ ಟೂರ್ನಿಗಳ ಕಪ್ ಗೆದ್ದ ನಾಯಕ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದು, ಟೀಂ ಇಂಡಿಯಾ ಕ್ರಿಕೆಟ್‍ನಲ್ಲಿ ಯಶಸ್ವಿಯಾಗಿ ನಾಯಕತ್ವ ನಡೆಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. ಅಲ್ಲದೇ ಧೋನಿ ನಾಯತ್ವದಲ್ಲಿ ಟೀಂ ಇಂಡಿಯಾ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿತ್ತು. ಧೋನಿ ನಾಯಕತ್ವದಲ್ಲಿ ಆಡಿದ್ದ 60 ಟೆಸ್ಟ್ ಪಂದ್ಯಗಳಲ್ಲಿ 27 ಪಂದ್ಯಗಳಲ್ಲಿ ಗೆದ್ದು ದಾಖಲೆ ಬರೆದಿದ್ದರು. ಇತ್ತೀಚೆಗಷ್ಟೇ ಕೊಹ್ಲಿ ತಮ್ಮ ನಾಯಕತ್ವದಲ್ಲಿ 28 ಟೆಸ್ಟ್ ಗೆಲುವು ಪಡೆದು ಧೋನಿ ದಾಖಲೆಯನ್ನು ಮುರಿದಿದ್ದರು. 2014 ರಲ್ಲಿ ಧೋನಿ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಿಸಿದ್ದರು. 2017 ರಲ್ಲಿ ಸಿಮೀತ ಓವರ್ ಗಳ ಪಂದ್ಯಗಳ ನಾಯಕತ್ವವನ್ನು ತೊರೆದಿದ್ದರು.