Tag: ನಾಯಕತ್ವ

  • ಕಾಂಗ್ರೆಸ್‍ಗಾಗಿ ಹಗಲು ರಾತ್ರಿ ಶ್ರಮಿಸಿದ ರಾಹುಲ್ ಭಯವಿಲ್ಲದ ನಾಯಕ: ಸೋನಿಯಾ ಗಾಂಧಿ

    ಕಾಂಗ್ರೆಸ್‍ಗಾಗಿ ಹಗಲು ರಾತ್ರಿ ಶ್ರಮಿಸಿದ ರಾಹುಲ್ ಭಯವಿಲ್ಲದ ನಾಯಕ: ಸೋನಿಯಾ ಗಾಂಧಿ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷಕ್ಕಾಗಿ ಹಗಲು ರಾತ್ರಿ ಶ್ರಮಿಸದ್ದಾರೆ. ಈ ಮೂಲಕ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರು ಮೆಚ್ಚುಗೆ ವ್ಯಕ್ತಸಿಪಡಿದ್ದಾರೆ.

    ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಆಯ್ಕೆಯಾದ ಸೋನಿಯ ಗಾಂಧಿ ಅವರು, ದೆಹಲಿಯಲ್ಲಿ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿ, ತಮ್ಮ ಮಗ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೋರಿದ ಭಯವಿಲ್ಲದ ನಾಯಕತ್ವಕ್ಕೆ ಅಭಿನಂದನೆಯನ್ನು ಸಲ್ಲಿಸಿದರು.

    ಇಂದು ನಡೆದ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ತೋರಿದ ಬಲಿಷ್ಠ ಮತ್ತು ಭಯವಿಲ್ಲದ ನಾಯಕತ್ವಕ್ಕಕೆ ಹೃದಯಪೂರ್ವಕ ಧನ್ಯವಾದಗಳು. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ರಾತ್ರಿ ಹಗಲು ಎನ್ನದೇ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿದ್ದಾರೆ.

    ರಾಹುಲ್ ಗಾಂಧಿ ಅವರು ಛತ್ತಿಸ್‍ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಭಾರತದ ಎಲ್ಲಾ ಕಡೆಯಲ್ಲೂ ಪಕ್ಷದ ಕಾರ್ಯಕರ್ತರ ಮತ್ತು ಕೋಟಿ ಮತದಾರರ ಗೌರವ ಮತ್ತು ಪ್ರೀತಿಯನ್ನು ಗಳಿಸಿದ್ದಾರೆ ಎಂದು ಸಂತೋಷ ವ್ಯಕ್ತಪಡಿದರು.

    ರಾಹುಲ್ ಗಾಂಧಿ ಅವರು ರೈತರು, ಕಾರ್ಮಿಕರು, ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ಯುವಜನತೆ ಮತ್ತು ಮಹಿಳೆಯರಿಗೆ ಆದ ಅನ್ಯಾಯಗಳ ವಿರುದ್ಧ ಹೋರಾಡಿ ಅವರಿಗೆ ಸಮಾಜದಲ್ಲಿ ನ್ಯಾಯ ಕೊಡಿಸಿದ್ದಾರೆ. ಅವರ ನಾಯಕತ್ವ ಅವರ ಪ್ರಾಮಾಣಿಕತೆ, ಶ್ರಮ ಎಲ್ಲಾವುದಕ್ಕೂ ನಾವು ಕೃತಜ್ಞತೆ ಹೇಳುತ್ತೇವೆ ಎಂದು ಹೇಳಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನಗಳನ್ನೂ ಗೆದ್ದಿದ್ದೇವು ಮತ್ತು 55 ರಾಜ್ಯಸಭಾ ಸ್ಥಾನಗಳನ್ನೂ ಪಡೆದುಕೊಂಡಿದ್ದವು. ಈ ಬಾರಿ ರಾಹುಲ್ ಅವರ ನಾಯಕತ್ವದಲ್ಲಿ ಸರ್ಕಾರದ ದುಷ್ಪರಿಣಾಮಗಳನ್ನು ಬಹಿರಂಗಪಡಿಸುವಲ್ಲಿ ಕಾಂಗ್ರೆಸ್ ಪಕ್ಷ ಧೈರ್ಯದಿಂದ ಹೋರಾಡಿದೆ. ಈ ಕಾರಣಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.

  • ನಾಯಕತ್ವದಿಂದ ಕೆಳಗಿಳಿದ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಧೋನಿ!

    ನಾಯಕತ್ವದಿಂದ ಕೆಳಗಿಳಿದ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಧೋನಿ!

    ನವದೆಹಲಿ: ಟೀಂ ಇಂಡಿಯಾ ತಂಡವನ್ನು 2007 ರಿಂದ ಹಲವು ಟೂರ್ನಿಗಳಲ್ಲಿ ಮುನ್ನಡೆಸಿದ್ದ ಎಂಎಸ್ ಧೋನಿ ವಿಶ್ವಕಪ್ ಸೇರಿದಂತೆ ಹಲವು ಸರಣಿಗಳಲ್ಲಿ ಜಯಗಳಿಸಲು ಕಾರಣರಾಗಿದ್ದರು. ಆದರೆ ಅನಿರೀಕ್ಷಿತವಾಗಿ 2017 ರಲ್ಲಿ ಏಕದಿನ, ಟಿ20 ಪಂದ್ಯಗಳ ತಂಡದ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದ ಧೋನಿ ಎಲ್ಲರಿಗೂ ಶಾಕ್ ನೀಡಿದ್ದರು. ಆದರೆ ಸದ್ಯ ತಾವು ಸೀಮಿತ ಓವರ್ ಗಳ ನಾಯಕತ್ವದಿಂದ ಕೆಳಗಿಳಿಯಲು ಕಾರಣವೇನು ಎಂಬುವುದನ್ನು ಖಾಸಗಿ ಕಾರ್ಯಕ್ರಮವೊಂದರಲ್ಲಿ ರಿವೀಲ್ ಮಾಡಿದ್ದಾರೆ.

    ರಾಂಚಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಈ ಕುರಿತು ಮಾತನಾಡಿರುವ ಧೋನಿ, ಕೊಹ್ಲಿ ತಂಡದ ನಾಯಕತ್ವ ವಹಿಸಲು ಈ ನಿರ್ಧಾರ ಮಾಡಿದ್ದೆ. ಏಕೆಂದರೆ 2019ರ ಐಸಿಸಿ ವಿಶ್ವಕಪ್‍ಗೆ ತಂಡವನ್ನು ಸಿದ್ಧಪಡಿಸಲು ಹೊಸ ನಾಯಕತ್ವ ವಹಿಸುವ ಆಟಗಾರನಿಗೆ ಸಮಯವಕಾಶ ನೀಡಬೇಕಿತ್ತು. ಅಲ್ಲದೇ ಶಕ್ತಿಶಾಲಿ ತಂಡ ಕಟ್ಟುವ ಅವಕಾಶ ನೀಡಲು ನಾಯಕತ್ವದಿಂದ ಕೆಳಗಿಳಿಯಲೇ ಬೇಕಾಗಿತ್ತು ಎಂದು ತಂಡದ ಭವಿಷ್ಯ ಕುರಿತ ತಮ್ಮ ಪ್ಲಾನ್ ಅನ್ನು ಬಿಚ್ಚಿಟ್ಟಿದ್ದಾರೆ.

    ಪ್ರತಿಯೊಂದು ತಂಡದ ನಾಯಕ ಕೂಡ ತನ್ನ ತಂಡದಲ್ಲಿ ಬಲಿಷ್ಠ ಆಟಗಾರರು ಇರಲು ಬಯಸುತ್ತಾನೆ. ಅದರಂತೆ ವಿಶ್ವಕಪ್ ಟೂರ್ನಿಯನ್ನು ಎದುರಿಸಲು ಟೀಂ ಇಂಡಿಯಾಗೆ ಸಿದ್ಧತೆ ನಡೆಸಲು ಸಾಕಷ್ಟು ಸಮಯವಕಾಶ ಅಗತ್ಯವಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಸೋಲಿನ ಕುರಿತ ಪ್ರಶ್ನೆಗೆ ಉತ್ತರಿಸಿರುವ ಧೋನಿ, ಇಂಗ್ಲೆಂಡ್ ಸರಣಿ ಹಲವು ಸವಾಲುಗಳಿಂದ ಕೂಡಿದ ಕಾರಣ ಟೂರ್ನಿಗೂ ಮೊದಲು ತಂಡಕ್ಕೆ ಕೆಲ ತರಬೇತಿ ಅಗತ್ಯವಿತ್ತು. ಅದರಲ್ಲೂ ಬ್ಯಾಟ್ಸ್ ಮನ್ ಗಳಿಗೆ ಸರಣಿಯಲ್ಲಿ ಸಾಕಷ್ಟು ಸವಾಲುಗಳು ಎದುರಾಗಿತ್ತು ಎಂದು ತಿಳಿಸಿದ್ದಾರೆ.

    ಸೀಮಿತ ಓವರ್ ಗಳ ಪಂದ್ಯಗಳ ನಾಯಕತ್ವ ತೋರೆಯುವ ಮುನ್ನವೂ ಇಂತಹದ್ದೇ ದಿಢೀರ್ ನಿರ್ಧಾರ ಕೈಗೊಂಡಿದ್ದ ಧೋನಿ 2014 ರ ಆಸೀಸ್ ಟೆಸ್ಟ್ ಟೂರ್ನಿಯ ಮಧ್ಯದಲ್ಲೇ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿದ್ದರು. ಅಲ್ಲದೇ ನಾಯಕತ್ವದಿಂದ ಕೆಳಗಿಳಿಯುತ್ತಿದಂತೆ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆರ್‌ಸಿಬಿ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಯಲಿದ್ದರಾ ಕೊಹ್ಲಿ?

    ಆರ್‌ಸಿಬಿ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಯಲಿದ್ದರಾ ಕೊಹ್ಲಿ?

    ಬೆಂಗಳೂರು: ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಮತ್ತೆ ಐಪಿಎಲ್ ನಲ್ಲಿ ಆಡಲಿದ್ದಾರೆ ಎಂಬ ಸುದ್ದಿ ಕೇಳಿ ಸಂತಸಗೊಂಡಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ ಸುದ್ದಿಯೊಂದು ಕೇಳಿ ಬಂದಿದ್ದು, ತಂಡದ ನಾಯಕತ್ವ ಪಟ್ಟದಿಂದ ಕೊಹ್ಲಿ ಕೆಳಗಿಳಿಯಲಿದ್ದಾರೆ ಎನ್ನುವ ಸುದ್ದಿ ಪ್ರಕಟವಾಗಿದೆ.

    ಐಪಿಎಲ್ ಆರಂಭದಿಂದಲೂ ಟ್ರೋಫಿ ಗೆಲ್ಲಲು ಸತತ ಪ್ರಯತ್ನ ನಡೆಸುತ್ತಿರುವ ಆರ್‌ಸಿಬಿ ಈ ಬಾರಿ ಮುಖ್ಯ ಕೋಚ್ ಸೇರಿದಂತೆ ತಂಡದಲ್ಲಿ ಭಾರೀ ಬದಲಾವಣೆ ತರಲು ಮುಂದಾಗಿದೆ. ಅಲ್ಲದೇ ಬ್ಯಾಟಿಂಗ್ ಸೇರಿದಂತೆ ಬೌಲಿಂಗ್‍ನಲ್ಲೂ ಉತ್ತಮ ತಂಡ ರೂಪಿಸುತ್ತಿದೆ. ಇದರ ಬೆನ್ನಲ್ಲೇ ನಾಯಕತ್ವದ ಬದಲಾವಣೆಗೂ ಚಿಂತನೆ ನಡೆದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಟೂರ್ನಿ ಯಲ್ಲಿ ಸೋಲುಂಡ ಬಳಿಕ ಕೊಹ್ಲಿ ನಾಯಕತ್ವದ ಕುರಿತು ಕೂಡ ಚರ್ಚೆ ಆರಂಭವಾಗಿದೆ. ಈ ಹಿಂದೆ ಎಬಿಡಿ ದಕ್ಷಿಣ ಆಫ್ರಿಕಾ ನಾಯಕತ್ವ ವಹಿಸಿದ್ದ ವೇಳೆ ತಂಡ ಯಾವುದೇ ಟೂರ್ನಿಯಲ್ಲೂ ಗೆಲ್ಲದೇ ನಿರಾಸೆ ಮೂಡಿಸಿತ್ತು. ಆದರೆ ಎಬಿಡಿ ನಾಯಕತ್ವದಲ್ಲಿ ತಂಡ ಎದುರಿಸಿದ್ದ 2015 ಐಸಿಸಿ ಟೂರ್ನಿಯಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿದ್ದವು. ಆರ್‌ಸಿಬಿ ತಂಡದ ಆಟಗಾರರು ಕೊಹ್ಲಿ ಮಾತಿಗೆ ಹೆಚ್ಚಿನ ಮನ್ನಣೆ ನೀಡಿದರೂ ಕೂಡ ತಂಡ ಎಬಿಡಿ ನಾಯಕತ್ವದಲ್ಲಿ ಮುನ್ನಡೆಯುವುದು ಸೂಕ್ತ ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಉಳಿದಂತೆ ಐಪಿಎಲ್ ನಲ್ಲಿ ಆರ್‌ಸಿಬಿ ಪರ 2011 ರಲ್ಲಿ ಮೊದಲ ಪಂದ್ಯವಾಡಿದ ಎಬಿಡಿ, ಅಂದು ನಾಯಕ ವಿರಾಟ್ ಕೊಹ್ಲಿ ಜೊತೆಗೂಡಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆರ್‌ಸಿಬಿ ಪರ ಈ ಜೋಡಿ 5 ಬಾರಿ 100 ಪ್ಲಸ್ ರನ್ ಸಿಡಿಸಿದ ಹೆಗ್ಗಳಿಕೆ ಪಡೆದಿದೆ. ಅಲ್ಲದೇ 2 ಬಾರಿ 200 ಪ್ಲಸ್ ರನ್ ಜೊತೆಯಾಟ ನೀಡಿದ ಜೋಡಿ ಎಂಬ ದಾಖಲೆ ಹೊಂದಿದೆ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಧೋನಿಯಲ್ಲಿನ ನಾಯಕತ್ವ ಗುಣವನ್ನು ಗುರುತಿಸಿದ್ದು ಹೇಗೆ ಎಂದು ಸಚಿನ್ ವಿವರಿಸಿದ್ರು

    ಧೋನಿಯಲ್ಲಿನ ನಾಯಕತ್ವ ಗುಣವನ್ನು ಗುರುತಿಸಿದ್ದು ಹೇಗೆ ಎಂದು ಸಚಿನ್ ವಿವರಿಸಿದ್ರು

    ಮುಂಬೈ: ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಧೋನಿಯಲ್ಲಿರುವ ನಾಯಕತ್ವ ಗುಣವನ್ನು ಗುರುತಿಸಿದ್ದಾಗಿ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

    ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಸಚಿನ್, ಪಂದ್ಯದ ವೇಳೆ ತಾನು ಸ್ಲೀಪ್ ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಧೋನಿ ಜೊತೆ ಹೆಚ್ಚು ಮಾತನಾಡುತ್ತಿದ್ದೆ. ಅಲ್ಲದೇ ಫೀಲ್ಡಿಂಗ್ ಆಯ್ಕೆ ಮಾಡುವ, ಬೌಲರ್ ಸಲಹೆ ನೀಡುವ ಕುರಿತು ನನ್ನ ಅಭಿಪ್ರಾಯ ತಿಳಿಸಿ ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ ಧೋನಿ ಅವರ ನಾಯಕತ್ವದ ಗುಣಗಳನ್ನು ಗುರುತಿಸಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ತಮ್ಮ ಕೊನೆಯ ಟೆಸ್ಟ್ ಪಂದ್ಯದ ಬಗ್ಗೆ ನೆನೆಸಿಕೊಂಡ ಅವರು, ಅಂದು ಧೋನಿ ಪಂದ್ಯದ ಮಧ್ಯೆ ತನ್ನನ್ನು ತಂಡದ ಜೊತೆ ಕೆಲ ಸಮಯ ದೂರವಿರುವಂತೆ ಕೇಳಿದರು. ತಮ್ಮ ವಿದಾಯಕ್ಕಾಗಿ ಧೋನಿ ಪ್ಲಾನ್ ಮಾಡುತ್ತಿದ್ದರು. ಈ ವೇಳೆ ತಮಗೇ ನಿವೃತ್ತಿಯ ನೆನಪಾಯಿತು ಎಂದು ತಮ್ಮ ತಾಯಿಯನ್ನು ನೆನೆದರು. ಅಲ್ಲದೇ ಆ ವೇಳೆ ತಾವು ತುಂಬಾ ಭಾವುಕರಾಗಿದ್ದಾಗಿ ತಿಳಿಸಿದರು. ಅಲ್ಲದೇ ತಮ್ಮ ಪತ್ನಿ ಅಂಜಲಿಯೂ ಎಂದು ಕ್ರೀಡಾಂಗಣಕ್ಕೆ ಆಗಮಿಸಿ ತಮ್ಮ ಬ್ಯಾಟಿಂಗ್ ನೋಡಿಲ್ಲ ಎಂದು ತಿಳಿಸಿದರು.

    ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಟೀಂ ಇಂಡಿಯಾ 2007 ರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿತ್ತು. ಆದ್ರೆ ಟೂರ್ನಿಯ ಬಳಿಕ ರಾಹುಲ್ ದ್ರಾವಿಡ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಟೀಂ ಇಂಡಿಯಾ ನಾಯಕತ್ವವನ್ನು ಧೋನಿ ಅವರಿಗೆ ನೀಡಲಾಯಿತು. ಧೋನಿ ನಾಯಕತ್ವ ವಹಿಸುವುದಕ್ಕೆ ಸಚಿನ್ ಅವರ ಸಲಹೆಯೂ ಪ್ರಮುಖ ಪಾತ್ರ ವಹಿಸಿತ್ತು.

    ಸಚಿನ್ ಅವರ ವೃತ್ತಿ ಬದುಕಿನಲ್ಲಿ ಒಮ್ಮೆ ಮಾತ್ರ ಅವರ ಪತ್ನಿ ಅಂಜಲಿ ಅವರು ಕ್ರೀಡಾಂಗಣಕ್ಕೆ ಬಂದು ಪಂದ್ಯ ವೀಕ್ಷಿಸಿದರು. ಟೀಂ ಇಂಡಿಯಾ 2003-04 ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಈ ವೇಳೆ ಮೆಲ್ಬರ್ನ್ ನಲ್ಲಿ ನಡೆದ ಪಂದ್ಯಕ್ಕೆ ಸಚಿನ್ ಅವರ ಪತ್ನಿ ಅಂಜಲಿ ಆಗಮಿಸಿದ್ದರು. ಆದ್ರೆ ಈ ಪಂದ್ಯದಲ್ಲಿ ಸಚಿನ್ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಈ ಪಂದ್ಯದ ಬಳಿಕ ಅಂಜಲಿ ಅವರು ಸಚಿನ್ ಅವರ ಕೊನೆಯ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಆಗಮಿಸಿದ್ದರು.

  • ಡೆಲ್ಲಿ ನಾಯಕತ್ವದಿಂದ ಕೆಳಗಿಳಿದ ಗೌತಮ್ ಗಂಭೀರ್!

    ಡೆಲ್ಲಿ ನಾಯಕತ್ವದಿಂದ ಕೆಳಗಿಳಿದ ಗೌತಮ್ ಗಂಭೀರ್!

    ನವದೆಹಲಿ: ಐಪಿಎಲ್ 2018 ರ 11ನೇ ಆವೃತ್ತಿಯಲ್ಲಿ ಸತತ ನಿರಾಸ ಪ್ರದರ್ಶನ ತೋರಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದು, ಯುವ ಆಟಗಾರ ಶ್ರೇಯಸ್ ಅಯ್ಯರ್ ಗೆ ನಾಯಕತ್ವ ಪಟ್ಟ ನೀಡಲಾಗಿದೆ.

    ಡೆಲ್ಲಿ ತಂಡದ ನಾಯಕತ್ವ ವಹಿಸಿದ್ದ ಗೌತಮ್ ಗಂಭೀರ್ ತಂಡದ ನಿರಾಸ ಪ್ರದರ್ಶನದ ಹೊಣೆ ಹೊತ್ತು ಸ್ವತಃ ನಾಯಕತ್ವ ಪಟ್ಟದಿಂದ ಬುಧವಾರ ಹಿಂದೆ ಸರಿದಿದ್ದಾರೆ. ಗಂಭೀರ್ ನಾಯಕತ್ವ ಪಟ್ಟದಿಂದ ಕೆಳಗಿಳಿದ ಕಾರಣ ಡೆಲ್ಲಿ ತಂಡದ ಮ್ಯಾನೇಜ್‍ಮೆಂಟ್ ಶ್ರೇಯಸ್ ಅವರನ್ನು ನಾಯಕರನ್ನಾಗಿ ನೇಮಿಸಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಂಭೀರ್ ನಾಯಕತ್ವ ತೊರೆಯುವ ಸಂಗತಿ ನನ್ನ ಸ್ವತಃ ನಿರ್ಧಾರವಾಗಿದ್ದು, ತನ್ನ ಮೇಲೆ ಯಾರ ಒತ್ತಡವು ಇಲ್ಲ. ಅಲ್ಲದೇ ನನ್ನ ನಿರ್ಧಾರದ ಕುರಿತು ತಂಡದ ಮ್ಯಾನೇಜ್ ಮೆಂಟ್ ಗೆ ತಿಳಿಸಿದ ಬಳಿಕ ಹಲವು ಸುತ್ತು ಚರ್ಚೆಗಳು ನಡೆಸಲಾಗಿದೆ ಎಂದರು.

    ಟೂರ್ನಿಯಲ್ಲಿ ಇದುವರೆಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡ 6 ಪಂದ್ಯಗಳನ್ನು ಆಡಿದೆ. ಉಳಿದಂತೆ 8 ರ ಘಟಕ್ಕೆ ತಲುಪಲು ಇನ್ನು 8 ಪಂದ್ಯಗಳನ್ನು ಆಡಬೇಕಿದೆ. ಆಡಿರುವ 6 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಸೋಲು ಪಡೆದಿದೆ. ಟೂರ್ನಿಯಲ್ಲಿಯ ಮಧ್ಯದಲ್ಲಿ ತಂಡದ ನಾಯತ್ವ ಬದಲಾವಣೆ ಮಾಡುವುದು ತಂಡದ ಮೇಲೆ ಋಣಾತ್ಮಕ ಪ್ರಭಾವ ಉಂಟು ಮಾಡಲಿದೆ ಎಂಬ ಅಂಶದ ಬಳಿಕವೂ ಗಂಭೀರ್ ಅವರ ನಿರ್ಧಾರದ ಮೇರೆಗೆ ಈ ಬದಲಾವಣೆ ಮಾಡಲಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಪಂದ್ಯದ ಸೋಲಿನ ಬಳಿಕ ಗಂಭೀರ್ ತಂಡದ ನಾಯಕತ್ವ ತೊರೆಯುವ ನಿರ್ಧಾರವನ್ನು ತಂಡದ ಮ್ಯಾನೇಜ್ ಮೆಂಟ್ ಮುಂದೇ ತಿಳಿಸಿದ್ದರು. ಬಳಿಕ ಹಲವು ಬಾರಿ ಚರ್ಚೆ ನಡೆಸಿ ಡೆಲ್ಲಿ ತಂಡದ ಮುಖ್ಯ ಕೋಚ್ ರಿಕಿ ಪಾಟಿಂಗ್ ಹಾಗೂ ಗಂಭೀರ್ ಜಂಟಿಯಾಗಿ ನಿರ್ಧಾರ ಪ್ರಕಟಿಸಿದ್ದಾರೆ.

    ನಾಯಕತ್ವದ ಬದಲಾವಣೆ ನಿರ್ಧಾರದಿಂದ ಮುಂದಿನ ಕೊಲ್ಕತ್ತಾ ವಿರುದ್ಧದ ಪಂದ್ಯವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಗಂಭೀರ್ ಅವರ ಈ ನಿರ್ಧಾರಕ್ಕೆ ವೈಯಕ್ತಿಕವಾಗಿ ಅವರು ತಂಡಕ್ಕೆ ರನ್ ಕೊಡುಗೆ ನೀಡದಿರುವುದೇ ಪ್ರಮುಖ ಕಾರಣ ಎನ್ನಲಾಗಿದೆ. ಟೂರ್ನಿಯಲ್ಲಿ ಗಂಭೀರ್ ಒಂದು ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು, ಬಳಿಕ ನಡೆದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಟೂರ್ನಿಯಲ್ಲಿ ಒಟ್ಟಾರೆ 6 ಪಂದ್ಯಗಳಿಂದ ಗಂಭೀರ್ 85 ರನ್ ಗಳಿಸಿದ್ದಾರೆ. ಈ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ಕೊಲ್ಕತ್ತಾ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಎರಡು ಬಾರಿ ಕಪ್ ಗೆಲ್ಲಲು ಕಾರಣರಾಗಿದ್ದರು.

    ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಕಳೆದ ಆರ್ ಸಿಬಿ ಹಾಗೂ ಚೆನ್ನೈ ತಂಡಗಳ ವಿರುದ್ಧ ಅರ್ಧಶತಕ ಗಳಿಸಿ ಮಿಂಚಿದ್ದರು. ಆದರೆ ಈ ಎರಡು ಪಂದ್ಯಗಳಲ್ಲಿ ಡೆಲ್ಲಿ ಗೆಲುವು ಪಡೆಯಲು ವಿಫಲವಾಗಿತ್ತು.

  • ರಾಜಸ್ಥಾನ ರಾಯಲ್ಸ್ ನಾಯಕತ್ವ ಸ್ಥಾನದಿಂದ ಸ್ಮಿತ್ ಔಟ್ – ರಹಾನೆಗೆ ಪಟ್ಟ

    ರಾಜಸ್ಥಾನ ರಾಯಲ್ಸ್ ನಾಯಕತ್ವ ಸ್ಥಾನದಿಂದ ಸ್ಮಿತ್ ಔಟ್ – ರಹಾನೆಗೆ ಪಟ್ಟ

    ಮುಂಬೈ: ಚೆಂಡು ವಿರೂಪಗೊಳಿಸುವ ಪ್ರಕರಣದಲ್ಲಿ ಸಿಲುಕಿ ಆಸೀಸ್ ತಂಡದ ನಾಯಕತ್ವ ಸ್ಥಾನ ಕಳೆದುಕೊಂಡಿದ್ದ ಸ್ಮಿತ್, ಇಂಡಿಯನ್ ಪ್ರೀಮಿಯರ್ ಲೀಗ್‍ನ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸ್ಥಾನವನ್ನು ಕಳೆದುಕೊಂಡಿದ್ದಾರೆ.

    ಈ ಕುರಿತು ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕರು ಸ್ಪಷ್ಟನೆ ನೀಡಿದ್ದು, ಟೀಂ ಇಂಡಿಯಾ ಆಟಗಾರರ ರಹಾನೆ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಿರುವುದಾಗಿ ತಿಳಿಸಿದ್ದಾರೆ.

    ಕೇಪ್‍ಟೌನ್‍ನಲ್ಲಿ ನಡೆದಿರುವ ಘಟನೆ ಕ್ರಿಕೆಟ್ ಪ್ರಪಂಚವನ್ನು ತಲ್ಲಣಗೊಳಿಸಿದೆ. ನಾವು ಬಿಸಿಸಿಐ, ಐಸಿಸಿ ಹಾಗೂ ಸ್ಮಿತ್ ರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ರಾಜಸ್ಥಾನ ರಾಯಲ್ಸ್ ತಂಡದ ಅಧಿಕಾರಿ ಝಬಿನ್ ಭರೂಚಾ ಮಾಹಿತಿ ನೀಡಿದ್ದಾರೆ.

    ತಂಡದ ಹಿತಾದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ತಂಡ ಉತ್ತಮ ಪ್ರದರ್ಶನ ನೀಡಲು ತಯಾರಿ ನಡೆಸಲು ಇದು ಸಹಕಾರಿಯಾಗಿರುತ್ತದೆ. ಅಲ್ಲದೇ ನಮ್ಮ ತಂಡ ಕ್ರಿಕೆಟ್ ಮೌಲ್ಯ ಹಾಗೂ ಗೌರವವನ್ನು ಉಳಿಸಲು ಪ್ರಯತ್ನಿಸುತ್ತದೆ. ರಹಾನೆ ರಾಯಲ್ಸ್ ಕುಟುಂಬ ಸದಸ್ಯರಾಗಿದ್ದು, ತಂಡದ ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಅರಿತುಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚೆಂಡು ವಿರೂಪಗೊಳಿಸಿದ ಪ್ರಕರಣ: ಐಸಿಸಿ ನೀತಿ ವಿರುದ್ಧ ಹರ್ಭಜನ್ ಕಿಡಿ

    ಐಪಿಎಲ್ ನಲ್ಲಿ ಫಿಕ್ಸಿಂಗ್ ಆರೋಪದಡಿ 2 ವರ್ಷ ನಿಷೇಧಕ್ಕೆ ಒಳಗಾಗಿದ್ದ ರಾಜಸ್ಥಾನ ರಾಯಲ್ಸ್ ತಂಡ 11ನೇ ಅವೃತ್ತಿಯ ಐಪಿಎಲ್‍ಗೆ ಕಮ್ ಬ್ಯಾಕ್ ಮಾಡಿತ್ತು. ಇನ್ನು 2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ಅಜಿಂಕ್ಯಾ ರಹಾನೆ, 2011 ರಿಂದ 2015 ರವರೆಗೆ ರಾಯಲ್ಸ್ ತಂಡದ ಪರ ಆಡಿದ್ದರು. ಇದನ್ನೂ ಓದಿ: ಚೆಂಡನ್ನು ವಿರೂಪಗೊಳಿಸಿದ್ದು ಯಾಕೆ? ಸ್ಪಿತ್ ಹೇಳಿದ್ದು ಏನು?