Tag: ನಾಯಕ

  • ದೆಹಲಿಗೆ ಅಶ್ವಿನ್, ಕಿಂಗ್ಸ್​​ಗೆ ಕನ್ನಡಿಗ ರಾಹುಲ್ ಕ್ಯಾಪ್ಟನ್?

    ದೆಹಲಿಗೆ ಅಶ್ವಿನ್, ಕಿಂಗ್ಸ್​​ಗೆ ಕನ್ನಡಿಗ ರಾಹುಲ್ ಕ್ಯಾಪ್ಟನ್?

    ನವದೆಹಲಿ: 2020ರ ಐಪಿಎಲ್ ಆವೃತ್ತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕನಾಗುವ ಸಾಧ್ಯತೆಯಿದೆ.

    ಕಿಂಗ್ಸ್ ಇಲೆವೆಲ್ ಪಂಜಾಬ್ ತಂಡದ ಆಡಳಿತ ಮಂಡಳಿ, ಕಳೆದ ಆವೃತ್ತಿಯಲ್ಲಿ ಆರಂಭಿಕನಾಗಿ ಉತ್ತಮವಾಗಿ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ ಅವರಿಗೆ ನಾಯಕ ಸ್ಥಾನವನ್ನು ನೀಡಲು ತೀರ್ಮಾನ ಮಾಡಿದೆ. ಕಳೆದ ವರ್ಷ ಪಂಜಾಬ್ ತಂಡದ ನಾಯಕನಾಗಿದ್ದ ಅಶ್ವಿನ್ ದೆಹಲಿ ತಂಡಕ್ಕೆ ಹೋಗಲಿದ್ದಾರೆ ಎಂದು ವರದಿಯಾಗಿದೆ.

    ದೆಹಲಿ ತಂಡ, ನಾಯಕ ಶ್ರೇಯಸ್ ಅಯ್ಯರ್, ಮುಖ್ಯ ಕೋಚ್ ರಿಕಿ ಪಾಂಟಿಂಗ್ ಮತ್ತು ಮಾರ್ಗದರ್ಶಕ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಒಳ್ಳೆಯ ಪ್ರದರ್ಶನ ನೀಡುತ್ತಿದೆ. ಆದರೆ ದೆಹಲಿ ತಂಡದಲ್ಲಿ ಅನುಭವಿ ಸ್ಪಿನ್ನರ್‍ ಗಳ ಕೊರತೆ ಇದ್ದು, ಆರ್ ಅಶ್ವಿನ್ ಅವರಿಗೆ ಅ ಸ್ಥಾನ ನೀಡಲು ದೆಹಲಿ ಕ್ಯಾಪಿಟಲ್ ತಂಡದ ಆಡಳಿತ ಮಂಡಳಿ ತೀರ್ಮಾನ ಮಾಡಿದೆ ಎಂದು ಹೇಳಲಾಗಿದೆ.

    ಈಗ ಸದ್ಯ ದೆಹಲಿ ತಂಡದಲ್ಲಿ 36 ವರ್ಷದ ಸ್ಪಿನ್ನರ್ ಅಮಿತ್ ಮಿಶ್ರಾ ಇದ್ದು, ಅವರಿಂದ ನಿರೀಕ್ಷಿತ ಮಟ್ಟದ ಬೌಲಿಂಗ್ ಪ್ರದರ್ಶನ ಕಂಡು ಬಂದಿಲ್ಲ. ಅದ್ದರಿಂದ ಭಾರತ ತಂಡದಲ್ಲಿ ಹೆಚ್ಚು ಅನುಭವ ಇರುವ ಆರ್ ಅಶ್ವಿನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ತೀರ್ಮಾನವನ್ನು ದೆಹಲಿ ಕ್ಯಾಪಿಟಲ್ ಮಾಡಿದೆ. ಈ ಮೂಲಕ ಬೌಲಿಂಗ್ ವಿಭಾಗವನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ.

    ಕಳೆದ ಎರಡು ಆವೃತ್ತಿಯಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸಿದ ಅಶ್ವಿನ್ ಅವರು, ತಂಡವನ್ನು ಫ್ಲೇ ಆಫ್ ಹಂತಕ್ಕೆ ಕರೆದುಕೊಂಡು ಹೋಗುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಕ್ಯಾಪ್ಟನ್ ಬದಲಾವಣೆಯ ಯೋಜನೆ ಮಾಡಿರುವ ಪಂಜಾಬ್ ತಂಡ ಆರಂಭಿಕನಾಗಿ ಉತ್ತಮ ಪ್ರದರ್ಶನ ನೀಡಿರುವ ಯುವ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್‍ಗೆ ಅ ಸ್ಥಾನವನ್ನು ನೀಡಲು ಮುಂದಾಗಿದೆ ಎಂದು ಹೇಳಲಾಗಿದೆ.

    ಅಶ್ವಿನ್ ಐಪಿಎಲ್‍ನಲ್ಲಿ ಒಟ್ಟು 139 ಪಂದ್ಯಗಳನ್ನು ಆಡಿ 26.48 ಸರಾಸರಿಯಲ್ಲಿ 125 ವಿಕೆಟ್ ಪಡೆದಿದ್ದಾರೆ. 2018 ರಲ್ಲಿ ಚೆನ್ನೈ ತಂಡ ಇವರನ್ನು ಕೈಬಿಟ್ಟ ಮೇಲೆ ಪಂಜಾಬ್ 7.6 ಕೋಟಿ ರೂ. ನೀಡಿ ತಮ್ಮ ತಂಡಕ್ಕೆ ಖರೀದಿ ಮಾಡಿ ನಾಯಕ ಸ್ಥಾನ ನೀಡಿತ್ತು. ಆದರೆ ತಂಡವನ್ನು ಮುನ್ನಡೆಸುವಲ್ಲಿ ವಿಫಲರಾದ ಅಶ್ವಿನ್ ಕೆಳದ ಆವೃತ್ತಿಯಲ್ಲಿ ಆಡಿದ 14 ಪಂದ್ಯಗಳಲ್ಲಿ 15 ವಿಕೆಟ್ ಕಿತ್ತು ಕೇವಲ 42 ರನ್ ಗಳಿಸಿದ್ದರು. ಈ ಮೂಲಕ ಪಂಜಾಬ್ ತಂಡ ಅಂಕ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿತ್ತು.

  • ವಸಿಷ್ಠ ಸಿಂಹ ಹೆಸ್ರಲ್ಲಿ ನಕಲಿ ಫೇಸ್‍ಬುಕ್ ಖಾತೆ- ಮಹಿಳೆಗೆ 25 ಸಾವಿರ ವಂಚನೆ

    ವಸಿಷ್ಠ ಸಿಂಹ ಹೆಸ್ರಲ್ಲಿ ನಕಲಿ ಫೇಸ್‍ಬುಕ್ ಖಾತೆ- ಮಹಿಳೆಗೆ 25 ಸಾವಿರ ವಂಚನೆ

    ಬೆಂಗಳೂರು: 22 ವರ್ಷದ ವ್ಯಕ್ತಿಯೊಬ್ಬ ನಟ, ಗಾಯಕ ವಸಿಷ್ಠ ಎನ್. ಸಿಂಹ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮಹಿಳೆಯೊಬ್ಬರಿಗೆ 25 ಸಾವಿರ ರೂ. ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ಪ್ರಕರಣ ಸಂಬಂಧ ನಟ ದೂರು ದಾಖಲಿಸಿದ ಬಳಿಕ ಸುಂಕದಕಟ್ಟೆಯ ಹೊಯ್ಸಳ ನಗರ ನಿವಾಸಿ ವೆಂಕಟೇಶ್ ಬವಸರ್ ನನ್ನು ಸೈಬರ್ ಕ್ರೈಂ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಏನಿದು ಘಟನೆ?:
    ಆರೋಪಿ ವೆಂಕಟೇಶ್ ವಸಿಷ್ಠ ಸಿಂಹ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆಯನ್ನು ತೆರೆದಿದ್ದಾನೆ. ಬಳಿಕ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಚಾಟ್ ಮಾಡಲು ಆರಂಭಿಸಿದ್ದಾನೆ. ಅಲ್ಲದೆ ಹೀಗೆ ಮಾತಾಡುತ್ತಾ ಅವರಿಗೆ ತನ್ನ ವಾಟ್ಸಾಪ್ ನಂಬರ್ ಕೂಡ ಕಳುಹಿಸಿದ್ದಾನೆ. ಆರೋಪಿ ಕೊಟ್ಟ ನಂಬರನ್ನು ಟ್ರೂ ಕಾಲರ್ ನಲ್ಲಿ ನೋಡಿದಾಗ ಅಲ್ಲಿಯೂ ವಸಿಷ್ಠ ಸಿಂಹ ಅಂತಾನೇ ಬಂದಿರುವುದರಿಂದ ಎಲ್ಲರೂ ನಟ ಅಂತಾನೇ ನಂಬಿದ್ದಾರೆ.

    ಹೀಗೆ ಫೇಸ್ ಬುಕ್ ನಲ್ಲಿ ಪರಿಚಯವಾದ ಮಹಿಳೆಯೊಬ್ಬರಿಗೆ ಆರೋಪಿ ನಿಮಗೆ ಸಿನಿಮಾ ಅಥವಾ ಟಿವಿ ಸೀರಿಯಲ್ ನಲ್ಲಿ ನಟನೆ ಮಾಡಲು ಅವಕಾಶ ಮಾಡಿಕೊಡುವುದಾಗಿ ನಂಬಿಸಿದ್ದಾನೆ. ಈ ಮೂಲಕ ಆಕೆಯ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದನು. ಅಲ್ಲದೆ ಡಿಸೆಂಬರ್ ಕೊನೆಯವರೆಗೆ ನಾನು ಯಾವುದೇ ಕರೆಗಳನ್ನು ಸ್ವೀಕರಿಸಲ್ಲ. ಹೀಗಾಗಿ ನಾನು ಮೆಸೇಜ್ ಮಾತ್ರ ಮಾಡುವುದಾಗಿ ಮಹಿಳೆ ಜೊತೆ ಸುಳ್ಳು ಹೇಳಿದ್ದಾನೆ.

    ಈ ಮಧ್ಯೆ ಆರೋಪಿ ವೆಂಕಟೇಶ್ ಮಹಿಳೆಗೆ ತನ್ನದೇ ಇನ್ನೊಂದು ನಂಬರ್ ನೀಡಿ, ನನ್ನ ಅಸಿಸ್ಟೆಂಟ್ ವೆಂಕಿ ರಾವ್ ನಂಬರ್ ಎಂದು ಮಹಿಳೆಗೆ ನೀಡಿದ್ದಾನೆ.

    ಇತ್ತ ಫಿಲಂ ಇಂಡಸ್ಟ್ರಿ ಅವರ ಪರಿಚಯ ಇದೆ ಎಂದು ನಂಬಿಸಲು ವೆಂಕಿ ರಾವ್ ಮಹಿಳೆಯನ್ನು ಶೂಟಿಂಗ್ ಸ್ಥಳಕ್ಕೂ ಕರೆದುಕೊಂಡು ಹೋಗಿದ್ದಾನೆ. ಹೀಗೆ ಶೂಟಿಂಗ್ ಸ್ಥಳಕ್ಕೆ ಬರುತ್ತಿದ್ದ ಮಹಿಳೆ ಒಂದು ದಿನ ತನ್ನ ಮಗಳನ್ನೂ ಜೊತೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೆಂಕಿ, ನಿಮ್ಮ ಜೊತೆ ನಿಮ್ಮ ಮಗಳಿಗೂ ನಟಿಸಲು ಅವಕಾಶ ಕೊಡುವುದಾಗಿ ಹೇಳಿ ಆಕೆಯ ಕೈಯಿಂದ 25,000 ರೂ. ಪೀಕಿಸಿದ್ದಾನೆ.

    ವಸಿಷ್ಠ ಸಿಂಹನ ಅಭಿಮಾನಿಯಾಗಿರೋ ಮಹಿಳೆಯಲ್ಲಿ, ವಸಿಷ್ಠ ನಿಮ್ಮ ಮಗಳನ್ನು ಇಷ್ಟ ಪಡುತ್ತಿದ್ದಾರೆ. ಅಲ್ಲದೆ ಆಕೆಯನ್ನು ಮದುವೆ ಕೂಡ ಆಗಲು ನಿರ್ಧರಿಸಿದ್ದಾರೆ ಎಂದು ಮತ್ತೆ ಸುಳ್ಳು ಹೇಳಿದ್ದಾನೆ. ಇಷ್ಟೆಲ್ಲ ಸುಳ್ಳುಗಳನ್ನು ನಂಬಿದ್ದ ಮಹಿಳೆ ಒಂದು ದಿನ ಅಚಾನಕ್ ಆಗಿ ವಿಡಿಯೋ ಕಾಲ್ ಮಾಡಿದ್ದಾರೆ. ಈ ವೇಳೆ ಆತ, ವಸಿಷ್ಠ ಅವರು ರೈಡ್‍ಗೆ ಹೋಗಿದ್ದಾರೆ ಎಂದು ಮಹಿಳೆಯನ್ನು ಮತ್ತೆ ನಂಬಿಸಿದ್ದಾನೆ.

    ಇದರಿಂದ ಅನುಮಾನಗೊಂಡ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ವೆಂಕಟೇಶ್ ಗೆ ಕನ್ನಡ ಫಿಲಂ ಹಾಗೂ ಸೀರಿಯಲ್ ಗಳ ಮೇಕಪ್ ಆರ್ಟಿಸ್ಟ್ ಗಳು ಮಾತ್ರ ಪರಿಚಯವಿರುವುದಾಗಿ ಬೆಳಕಿಗೆ ಬಂದಿದೆ.

  • ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್- ಬ್ರಿಯಾನ್ ಲಾರಾ

    ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್- ಬ್ರಿಯಾನ್ ಲಾರಾ

    ನವದೆಹಲಿ: ಟೀಂ ಇಂಡಿಯಾ ನಾಯಕರ ವಿರಾಟ್ ಕೊಹ್ಲಿ ಮಾನವನಲ್ಲ, ಮಷಿನ್ ಎಂದು ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಅವರು ಪ್ರಶಂಸಿದ್ದಾರೆ.

    ವಿರಾಟ್ ಕೊಹ್ಲಿ ಅವರು ಪಂದ್ಯದ ದಿಕ್ಕನ್ನೂ ಬದಲಿಸಬಲ್ಲ ಆಟಗಾರ. ಅವರು ಭಾರತ ತಂಡಕ್ಕೆ ವರದಾನವಾಗಲಿದ್ದಾರೆ. ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಕೊಹ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಹೇಳಿದ್ದಾರೆ.

    ಕೊಹ್ಲಿ ಭಾರತ ತಂಡದ ರನ್ ಮಷಿನ್. ಅವರು ಕ್ರಿಕೆಟ್ ಆಟದ ರೀತಿಯನ್ನೇ ಬದಲಾವಣೆ ಮಾಡಿದ್ದಾರೆ ಮತ್ತು ಹೊಸ ಅಯಾಮವನ್ನು ಸೃಷ್ಟಿಮಾಡಿದ್ದಾರೆ. ಇದು ಪ್ರಸ್ತುತ ಆಟಗಾರರಿಗೂ ಮತ್ತು ಭವಿಷ್ಯದ ಆಟಗಾರರಿಗೂ ಉತ್ತಮವಾದ ಪಾಠ. 80 ಮತ್ತು 90 ದಶಕ ನಾವು ಆಡಿದ ಕ್ರಿಕೆಟ್‍ಗಿಂತ ವಿಭಿನ್ನ ಕ್ರಿಕೆಟ್ ಆಟವನ್ನು ಅವರು ಪರಿಚಯ ಮಾಡಿದ್ದಾರೆ ಎಂದು ಹೊಗಳಿದ್ದಾರೆ.

    ಆಟದಲ್ಲಿ ಫಿಟ್ನೆಸ್ ತುಂಬ ಮುಖ್ಯವಾದದ್ದು. ಆದರೆ ಈಗ ಪ್ರಸ್ತುತ ಕಾಲದಲ್ಲಿ ಆಟದಲ್ಲಿ ಅದನ್ನು ಕಾಪಡಿಕೊಳ್ಳಲು ಆಗುತ್ತಿಲ್ಲ. ಏಕದಿನ ಪಂದ್ಯಗಳಲ್ಲೂ 11,000 ರನ್ ಹೊಡೆದಿರುವ ಕೊಹ್ಲಿ ಇಷ್ಟು ವರ್ಷದಲ್ಲಿ ಒಂದು ಬಾರಿಯೂ ಅವರು ತಮ್ಮ ದೈಹಿಕ ಸಾಮರ್ಥ್ಯ ವನ್ನು ಕಳೆದುಕೊಂಡಿಲ್ಲ. ಈ ಕಾರಣಕ್ಕೆ ಅವರನ್ನು ರನ್ ಮಷಿನ್ ಎಂದು ಕರೆದಿದ್ದೇನೆ ಎಂದು ಹೇಳಿದರು.

    ವಿರಾಟ್ ಕೊಹ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಬಹುತೇಕ ರನ್ ಹೊಡೆಯುತ್ತಾರೆ. ನನಗೆ ಪ್ರಕಾರ ಸಚಿನ್ ತೆಂಡೂಲ್ಕರ್ ಅವರು ಒಬ್ಬ ಶ್ರೇಷ್ಠವಾದ ಆಟಗಾರ ಅವರು ಕೂಡ ಉತ್ತಮವಾಗಿ ಆಡಿದ್ದಾರೆ ಆದರೆ ನಾನು ಅವರನ್ನು ಮತ್ತು ಕೊಹ್ಲಿಯನ್ನು ಹೋಲಿಕೆ ಮಾಡಲು ಇಷ್ಟವಿಲ್ಲ. ಇಬ್ಬರು ಉತ್ತನ ಆಟಗಾರರು ಅವರ ಅವರ ಕಾಲದಲ್ಲಿ ಉತ್ತಮ ಪರಂಪರೆಯ ಆಟವಾನ್ನು ಆಡಿದ್ದಾರೆ ಎಂದು ಹೇಳಿದ್ದಾರೆ.

    ಕೊಹ್ಲಿ ತನ್ನ ವೃತ್ತಿ ಜೀವನದ ಮೂರನೇ ವಿಶ್ವಕಪ್ ಆಡುತ್ತಿದ್ದು ಪ್ರಥಮ ಬಾರಿಗೆ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ಎಲ್ಲಾ ಆಟಗಾರರು ಉತ್ತಮ ಲಯದಲ್ಲಿದ್ದು 2019ರ ವಿಶ್ವಕಪ್ ಗೆಲ್ಲಲು ಇದು ಒಳ್ಳೆಯ ಅವಕಾಶ ಎಂದು ಬ್ರಿಯಾನ್ ಲಾರಾ ಅವರು ಹೇಳಿದ್ದಾರೆ.

  • ಐಸಿಸಿ ಪ್ರಶಸ್ತಿ ಪಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ

    ಐಸಿಸಿ ಪ್ರಶಸ್ತಿ ಪಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ

    ದುಬೈ: ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಐಸಿಸಿ ನೀಡುವ ಪ್ರಶಸ್ತಿಯಲ್ಲೂ ವಿಶ್ವದಾಖಲೆ ಬರೆದಿದ್ದಾರೆ.

    ಐಸಿಸಿ ವರ್ಷದ ಪುರುಷ ಆಟಗಾರ, ವರ್ಷದ ಟೆಸ್ಟ್, ಏಕದಿನ ಆಟಗಾರ, ವರ್ಷದ ಟೆಸ್ಟ್ ಮತ್ತು ಏಕದಿನ ನಾಯಕ ಪ್ರಶಸ್ತಿಯನ್ನು ಕೊಹ್ಲಿ ಪಡೆದಿದ್ದಾರೆ. ಈ ಮೂಲಕ ಒಂದೇ ವರ್ಷ 5 ಪ್ರಶಸ್ತಿಗಳನ್ನು ಪಡೆದ ವಿಶ್ವದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಯನ್ನು ಕೊಹ್ಲಿ ಪಡೆದುಕೊಂಡಿದ್ದಾರೆ.

    ಕೊಹ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ 13 ಟೆಸ್ಟ್ ಪಂದ್ಯಗಳಿಂದ 55.08 ಸರಾಸರಿಯಲ್ಲಿ 1,322 ರನ್ ಗಳಿಸಿದ್ದು, ಇದರಲ್ಲಿ ಐದು ಶತಕಗಳು ಸೇರಿದೆ. 14 ಏಕದಿನ ಪಂದ್ಯಗಳಿಂದ 6 ಶತಕಗಳೊಂದಿಗೆ 133.55 ಸರಾಸರಿಯಲ್ಲಿ 1,202 ರನ್ ಸಿಡಿಸಿದ್ದಾರೆ. ಉಳಿದಂತೆ 10 ಟಿ20 ಪಂದ್ಯಗಳಲ್ಲಿ 211 ರನ್ ಗಳಿಸಿದ್ದಾರೆ.

    30 ವರ್ಷದ ನಾಯಕ ವಿರಾಟ್ ಕೊಹ್ಲಿ 2008ರಲ್ಲಿ ನಡೆದ ಐಸಿಸಿ ಅಂಡರ್ 19 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾಗೆ ಆಯ್ಕೆ ಆಗಿದ್ದರು. ಸದ್ಯ ಟೆಸ್ಟ್ ಹಾಗೂ ಏಕದಿನ ಮಾದರಿ ಕ್ರಿಕೆಟಿನಲ್ಲಿ ನಂ.1 ಶ್ರೇಯಾಂಕ ಪಡೆದಿರುವ ಕೊಹ್ಲಿ, ಈ ಎರಡು ಮಾದರಿಗಳಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

    ಕೊಹ್ಲಿ ಕಳೆದ ಬಾರಿ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿ ಹಾಗೂ ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಅಲ್ಲದೇ 2012 ರಲ್ಲಿ ಐಸಿಸಿ ಏಕದಿನ ಪ್ರಶಸ್ತಿಯನ್ನು ಕೂಡ ಪಡೆದಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ಐಸಿಸಿ ಪ್ರಶಸ್ತಿಯ ಗೌರವ ಲಭಿಸಿರುವುದು ಸಂತಸ ತಂದಿದ್ದು, ವರ್ಷದುದ್ದಕ್ಕೂ ಆಟಗಾರ ಪಟ್ಟ ಶ್ರಮಕ್ಕೆ ಸಿಗುವ ಬಹುಮಾನವಾಗಿದೆ. ಇದರೊಂದಿಗೆ ತಂಡ ಕೂಡ ಉತ್ತಮ ಪ್ರದರ್ಶನ ನೀಡುತ್ತಿರುವುದು ಮತ್ತಷ್ಟು ಸಂತಸಕ್ಕೆ ಕಾರಣವಾಗಿದ್ದು, ವಿಶ್ವ ಮಟ್ಟದಲ್ಲಿ ಗೌರವ ಸಿಗುವುದು ಯಾವುದೇ ಆಟಗಾರನಿಗೆ ಹೆಮ್ಮೆ ಅನಿಸುತ್ತದೆ ಎಂದಿದ್ದಾರೆ.

    ಇಂತಹ ಪ್ರಶಸ್ತಿಗಳು ನಿಮ್ಮನ್ನು ಮತ್ತಷ್ಟು ಉತ್ತಮ ಪ್ರದರ್ಶನ ಹಾಗೂ ಸಾಧನೆ ಮಾಡುವುಕ್ಕೆ ಪ್ರೇರಣೆ ಆಗಿದೆ. ಕ್ರಿಕೆಟ್ ಆಟದಲ್ಲಿ ಸ್ಥಿತ ಪ್ರದರ್ಶನ ನೀಡುವುದು ಬಹಳ ಮುಖ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

    ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

    ಮುಂಬೈ: ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್. ಆದರೆ, ವಿಶ್ವದ ಅತೀ ಕೆಟ್ಟ ದುರ್ವರ್ತನೆಯ ಆಟಗಾರನೆಂದು ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಕಿಡಿಕಾರಿದ್ದಾರೆ.

    ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದಲ್ಲಿ ಕಿತ್ತಾಡಿಕೊಂಡಿದ್ದ ಕ್ಯಾಪ್ಟನ್ ಕೊಹ್ಲಿಯವರ ವರ್ತನೆ ಹಾಗೂ ಅಭಿಮಾನಿಯೊಬ್ಬರಿಗೆ ದೇಶಬಿಟ್ಟು ಹೋಗು ಎಂಬ ಹೇಳಿಕೆಗೆ ಫೇಸ್‍ಬುಕ್ ಮೂಲಕ ನಾಸಿರುದ್ದೀನ್ ಶಾ ಶಾ ಆಕ್ರೋಶ ಹೊರಹಾಕಿದ್ದಾರೆ.

    ಕೊಹ್ಲಿ ಜಗತ್ತಿನ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರಬಹುದು. ಆದರೆ ಅವರು ವಿಶ್ವದ ಅತಿ ಕೆಟ್ಟ ವರ್ತನೆಯ ಆಟಗಾರನೂ ಹೌದು. ಕ್ರಿಕೆಟ್ ಬದುಕಿನಲ್ಲಿ ತನ್ನ ಸೊಕ್ಕಿನ ಹಾಗೂ ಕೆಟ್ಟ ನಡವಳಿಕೆಯನ್ನು ತೋರುತ್ತಲೇ ಇದ್ದಾರೆ. ಇಷ್ಟೆಲ್ಲಾ ಆದರೂ ನಾನು ದೇಶ ಬಿಡುವ ಯಾವುದೇ ಉದ್ದೇಶವಿಲ್ಲವೆಂದು ನಾಸಿರುದ್ದೀನ್ ಶಾ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಸೋಶಿಯಲ್ ಮೀಡಿಯಾಗಳಲ್ಲಿ ನಾಸಿರುದ್ದೀನ್  ಶಾರವರ ಪೋಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಲವರು ಶಾ ಪರವಾಗಿ ಮಾತನಾಡಿದ್ದರೆ, ಮತ್ತೆ ಕೆಲವರು ಖ್ಯಾತ ಆಟಗಾರನ ಕುರಿತು ಈ ರೀತಿ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಅವರ ಪೋಸ್ಟನ್ನು ಈಗಾಗಲೇ 2 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಲೈಕ್ ಮಾಡಿದ್ದು, 60ಕ್ಕೂ ಹೆಚ್ಚು ಜನರು ಶೇರ್ ಮಾಡಿಕೊಂಡಿದ್ದಾರೆ.

    ಟೆಸ್ಟ್‌ನಲ್ಲಿ ಕೊಹ್ಲಿ ಮಾಡಿದ್ದೇನು?
    ಸೋಮವಾರ ಪರ್ತ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ, ಬುಮ್ರಾ ಬೌಲ್ ಮಾಡುತ್ತಿದ್ದ 71 ನೇ ಓವರ್ ನಲ್ಲಿ ಕೊಹ್ಲಿ ನಾನ್ ಸ್ಟ್ರೈಕರ್ ಎಂಡ್ ಬಳಿಕ ಫೀಲ್ಡ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ರನ್ ಓಡುತ್ತಿದ್ದ ಟಿಮ್ ಪೇನ್ ಗೆ ಅಡ್ಡ ಬಂದ ಕೊಹ್ಲಿ ನೇರವಾಗಿ ಮುಖಾಮುಖಿಯಾಗಿ ನಿಂತಿದ್ದರು. ಆಗ ವಿರಾಟ್ ಕೊಹ್ಲಿ ಹಾಗೂ ಟಿಮ್ ಪೇನ್ ನಡುವೆ ವಾಕ್ಸಮರ ಏರ್ಪಟಿತ್ತು. ಇದನ್ನು ಕಂಡ ಅಂಪೈರ್ ಇಬ್ಬರು ಆಟಗಾರರಿಗೂ ನೀವು ತಂಡದ ನಾಯಕರು, ಇಲ್ಲಿಗೆ ಬಿಡಿ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದರು. ಇದನ್ನೂ ಓದಿ: ಕೊಹ್ಲಿ, ಟಿಮ್ ಪೈನೆ ನಡುವೆ ಮಾತಿನ ಕಾಳಗ – ವಿಡಿಯೋ ವೈರಲ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸೀಸ್ ನೆಲದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ

    ಆಸೀಸ್ ನೆಲದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ

    ಅಡಿಲೇಡ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 1 ಸಾವಿರ ರನ್ ಪೂರೈಸಿದ ಟೀಂ ಇಂಡಿಯಾ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    30 ವರ್ಷದ ಕೊಹ್ಲಿ ಅಡಿಲೇಡ್‍ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದು, ಪಂದ್ಯದಲ್ಲಿ 5 ರನ್ ಗಳಿಸಿದ್ದ ವೇಳೆ 1 ಸಾವಿರ ರನ್ ಪೂರ್ಣಗೊಳಿಸಿದರು. ಇದರೊಂದಿಗೆ ಆಸ್ಟ್ರೇಲಿಯಾದಲ್ಲಿ 1 ಸಾವಿರ ರನ್ ಪೂರೈಸಿದ ಭಾರತ 4ನೇ ಹಾಗೂ ಒಟ್ಟಾರೆಯಾಗಿ 28ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಕೊಹ್ಲಿ ಕೇವಲ 18 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದು, ಈ ಹಿಂದೆ ಟೀಂ ಇಂಡಿಯಾ ಪರ ಸಚಿನ್ ತೆಂಡೂಲ್ಕರ್ 1,809 ರನ್, ವಿವಿಎಸ್ ಲಕ್ಷ್ಮಣ್ 1,236 ರನ್, ರಾಹುಲ್ ದ್ರಾವಿಡ್ 1,143 ರನ್ ಸಿಡಿಸಿದ್ದರು. ಕೊಹ್ಲಿ 59.05 ಸರಾಸರಿಯಲ್ಲಿ 1 ಸಾವಿರ ರನ್ ಪೂರೈಸಿದ್ದು, ಟೆಸ್ಟ್ ತಂಡದ ನಾಯಕರಾಗಿ 2 ಸಾವಿರ ರನ್ ಕೂಡ ಪೂರ್ಣಗೊಳಿಸಿದ್ದಾರೆ. ಉಳಿದಂತೆ ಅಲನ್ ಬಾರ್ಡರ್, ರಿಕಿ ಪಾಟಿಂಗ್, ಗ್ರೇಮ್ ಸ್ಮಿತ್ ಹಾಗೂ ಕುಕ್ ನಾಯಕರಾಗಿ 2 ಸಾವಿರ ರನ್ ಪೂರೈಸಿದ್ದಾರೆ.

    ಅಂದಹಾಗೇ ಕ್ಯಾಲೆಂಡರ್ ವರ್ಷವೊಂದರಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಎರಡು ಮಾದರಿಗಳಲ್ಲಿ 1 ಸಾವಿರ ರನ್ ಸಿಡಿಸಿ ವಿಶ್ವದ ಟಾಪ್ ಶ್ರೇಯಾಂಕ ಪಡೆದಿರುವ ಕ್ರಿಕೆಟಿಗ ಎಂಬ ಹೆಗ್ಗಳಿಕೆಯನ್ನ ಕೊಹ್ಲಿ ಹೊಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆಸರು ಬದಲಾಯಿಸಿಕೊಂಡ ಪುಟ್ಟಗೌರಿ ಮದುವೆ ನಾಯಕ ರಕ್ಷಿತ್

    ಹೆಸರು ಬದಲಾಯಿಸಿಕೊಂಡ ಪುಟ್ಟಗೌರಿ ಮದುವೆ ನಾಯಕ ರಕ್ಷಿತ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿರುವ ರಕ್ಷಿತ್ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಸ್ಯಾಂಡಲ್‍ವುಡ್‍ಗೆ ಎಂಟ್ರಿ ನೀಡುತ್ತಿದ್ದಾರೆ.

    ಮಹೇಶ ಪಾತ್ರಧಾರಿಯ ರಕ್ಷಿತ್ ಈಗ ರಕ್ಷ್ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಈಗಾಗಲೇ ರಕ್ಷಿತ್ ಶೆಟ್ಟಿ ಇರುವುದರ ಕಾರಣ ಅವರು ತಮ್ಮ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದಾರೆ.

    8ಎಂಎಂ ಚಿತ್ರದ ನಿರ್ದೇಶಕರಾದ ಹರಿಕೃಷ್ಣ ರಕ್ಷ್ ಅವರ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ರೆಡ್’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ರಕ್ಷ್ ಹ್ಯಾಕರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷ್‍ಗೆ ನಾಯಕಿಯಾಗಿ ಸೋನು ಗೌಡ ಮಿಲಿಟರಿ ಆಫಿಸರ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

    ಸದ್ಯ ಶುಕ್ರವಾರ ರೆಡ್ ಸಿನಿಮಾದ ಮುಹೂರ್ತ ನಡೆಯಲಿದೆ. ಅಲ್ಲದೇ ಈ ಚಿತ್ರದಲ್ಲಿ ಮತ್ತೊಬ್ಬರು ನಾಯಕಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮತ್ತೊಬ್ಬ ನಾಯಕಿ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಜುದಾ ಸ್ಯಾಂಡಿ ಸಂಗೀತ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಯಕ ಜನಾಂಗದ ಸಭೆಯಲ್ಲಿ ಸ್ವಾಮೀಜಿ ಮೇಲೆಯೇ ಮುಗಿಬಿದ್ದ ಕಾರ್ಯಕರ್ತರು!

    ನಾಯಕ ಜನಾಂಗದ ಸಭೆಯಲ್ಲಿ ಸ್ವಾಮೀಜಿ ಮೇಲೆಯೇ ಮುಗಿಬಿದ್ದ ಕಾರ್ಯಕರ್ತರು!

    ಬೆಂಗಳೂರು: ನಗರದ ಕಾನಿಷ್ಕ ಹೋಟೆಲ್ ನಲ್ಲಿ ನಡೆದ ನಾಯಕ ಜನಾಂಗದ ಸಭೆಯಲ್ಲಿ ಕಾರ್ಯಕರ್ತರು ಸ್ವಾಮೀಜಿಯ ವಿರುದ್ಧವೇ ಗಲಾಟೆ ನಡೆಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ನಾಯಕ ಜನಾಂಗದವರಿಗೆ ಕೇವಲ ಒಂದೇ ಒಂದು ಸಚಿವ ಸ್ಥಾನ ನೀಡಿದ್ದರ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಗುರುಕುಲ ಪೀಠದ ಬ್ರಹ್ಮಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ನಗರದ ಕಾನಿಷ್ಕ ಹೋಟೆಲ್ ನಲ್ಲಿ ಸಭೆ ನಡೆದಿತ್ತು. ಈ ವೇಳೆ ಚಿಕ್ಕಬಳ್ಳಾಪುರದ ನಾಯಕ ಜನಾಂಗದ ಕಾರ್ಯಕರ್ತರ ಗುಪೊಂದು ಸಭೆಯ ನಡುವೆಯೇ ಸ್ವಾಮೀಜಿಯ ಮೇಲೆ ಏಕಾಏಕಿ ಹಲ್ಲೆಗೆ ಮುಂದಾಗಿದೆ. ಸಭೆಯಲ್ಲಿ ಸ್ವಾಮೀಜಿಗಳು ಹಾಗೂ ಇನ್ನೊಂದು ಗುಂಪುಗಳ ನಡುವೆ ತೀವ್ರ ಜಟಾಪಟಿ ನಡೆದಿದೆ.

    ಈ ವೇಳೆ ಕೆಲ ನಾಯಕ ಜನಾಂಗದ ಕಾರ್ಯಕರ್ತರು ಬ್ರಹ್ಮಾನಂದ ಸ್ವಾಮಿ ನಾಯಕ ಜನಾಂಗದ ಸ್ವಾಮೀಜಿಯೇ ಅಲ್ಲ ಎಂದು ಗಲಾಟೆ ಮಾಡಿದರು. ಬ್ರಹ್ಮಾನಂದ ಸ್ವಾಮೀಜಿಯ ಜಾತಿ ಸರ್ಟಿಫಿಕೇಟ್ ನೀಡುವಂತೆ ಆಗ್ರಹಿಸಿದ್ದಾರೆ. ಬ್ರಹ್ಮಾನಂದ ಸ್ವಾಮೀಜಿಯು ಈ ಹಿಂದೆ ರೈತರಿಗೆ ಸಾಲಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

    ಸಭೆಯಲ್ಲಿ ಸ್ವಾಮೀಜಿ ವಿರುದ್ಧ ಗಲಾಟೆ ನಡೆಯುತ್ತಿದೆ ಎನ್ನುವ ವಿಚಾರ ತಿಳಿದು ಸ್ಥಳಕ್ಕೆ ಉಪ್ಪಾರಪೇಟೆ ಠಾಣೆಯ ಪೊಲೀಸರು ಆಗಮಿಸಿದ್ದಾರೆ. ವಿಕೋಪಕ್ಕೆ ಹೋಗುತ್ತಿದ್ದ ಗಲಾಟೆಯನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಚದುರಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

    https://www.youtube.com/watch?v=wzRuSyP53KU

  • ರಾಹುಲ್ ಗಾಂಧಿ ನಾಯಕತ್ವಕ್ಕೆ ಪ್ರೋತ್ಸಾಹ ಸಿಕ್ಕಿದೆ, ವಿಶ್ವಾಸ ಹೆಚ್ಚಿದೆ: ಜಿ. ಪರಮೇಶ್ವರ್

    ರಾಹುಲ್ ಗಾಂಧಿ ನಾಯಕತ್ವಕ್ಕೆ ಪ್ರೋತ್ಸಾಹ ಸಿಕ್ಕಿದೆ, ವಿಶ್ವಾಸ ಹೆಚ್ಚಿದೆ: ಜಿ. ಪರಮೇಶ್ವರ್

    ತುಮಕೂರು: ಗುಜರಾತ್ ನಲ್ಲಿ ರಾಹುಲ್ ಗಾಂಧಿ ನಾಯಕತ್ವಕ್ಕೆ ಪ್ರೋತ್ಸಾಹ ಸಿಕ್ಕಿದೆ ಎಂದು ತುಮಕೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.

    ಗುಜರಾತ್ ನಲ್ಲಿ ರಾಹುಲ್ ಗಾಂಧಿ ನಾಯಕತ್ವಕ್ಕೆ ಪ್ರೋತ್ಸಾಹ ಸಿಕ್ಕಿದೆ ಹಾಗೂ ಅವರಿಗೂ ಕೂಡಾ ವಿಶ್ವಾಸ ಹೆಚ್ಚಿದೆ. ಎರಡೂ ಕ್ಷೇತ್ರದಲ್ಲಿ ಅಧಿಕಾರ ಹಿಡಿಯುವ ನಿರೀಕ್ಷೆ ಇನ್ನೂ ಇದೆ ಎಂದು ಪರಮೇಶ್ವರ್ ತಿಳಿಸಿದರು.

    ರಾಹುಲ್ ಗಾಂಧಿ ಪ್ರಚಾರ ಮಾಡಿದ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಹೆಚ್ಚಿದೆ ಎನ್ನುವುದು ಸುಳ್ಳು. ಹಿಮಾಚಲದಲ್ಲಿ ಕಳೆದ 15 ವರ್ಷ ಗಳಿಂದ ನಮ್ಮ ಸರ್ಕಾರ ಇತ್ತು. ಹಾಗಾಗಿ ಸ್ವಾಭಾವಿಕವಾಗಿ ವಿರೋಧಿ ಅಲೆ ಬಂದಿರಬಹುದೇನೋ ಎಂದು ಪರಮೇಶ್ವರ್ ಪ್ರತಿಕ್ರಿಯಿಸಿದರು.

    ಇವಿಎಂನಲ್ಲಿ ಈಗಲೂ ಸಂಪೂರ್ಣ ನಂಬಿಕೆ ಇಲ್ಲ. ಇವಿಎಂ ಹೈಜಾಕ್ ಮಾಡಬಹುದು ಎಂದು ಅಮೆರಿಕದ ವಿಶ್ವವಿದ್ಯಾಲಯ ಹೇಳಿದೆ. ಕರ್ನಾಟಕದಲ್ಲಿ ಬ್ಯಾಲೆಟ್ ಪೇಪರ್ ತರುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದರು.

  • ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ!

    ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ!

    ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ರನ್ ಮೆಷಿನ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

    ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕಳೆದ ಪಂದ್ಯದಲ್ಲಿ ಈ ದಾಖಲೆಯನ್ನು ಸರಿದೂಗಿಸಿದ್ದ ಕೊಹ್ಲಿ ಈ ಪಂದ್ಯದಲ್ಲೂ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.

    ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್, ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಮತ್ತು ಆಸ್ಟ್ರೇಲಿಯಾದ ಮೈಕಲ್ ಕ್ಲಾರ್ಕ್ ನಾಯಕನಾಗಿದ್ದುಕೊಂಡು 4 ದ್ವಿಶತಕ ಸಿಡಿಸಿದ್ದಾರೆ. ಪಂದ್ಯದ ಎರಡನೇ ದಿನವಾದ ಇಂದು ಕೊಹ್ಲಿ 238 ಎಸೆತಗಳಲ್ಲಿ 20 ಬೌಂಡರಿ ಸಿಡಿಸಿ 200 ರನ್ ಹೊಡೆದರು. ಕೊಹ್ಲಿ ಅಂತಿಮವಾಗಿ 243 ರನ್(287 ಎಸೆತ, 25 ಬೌಂಡರಿ) ಗಳಿಸಿದ್ದಾಗ ಎಲ್‍ಬಿಯಾಗಿ 7ನೇಯವರಾಗಿ ಔಟಾದರು.

    ಟೆಸ್ಟ್ ಕ್ರಿಕೆಟ್ ನಲ್ಲಿ ನಲ್ಲಿ ಅತಿ ಹೆಚ್ಚು ದ್ವಿಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ವಿರೇಂದ್ರ ಸೆಹ್ವಾಗ್ ಹಾಗೂ ಸಚಿನ್ ತೆಂಡೂಲ್ಕರ್ ಜೊತೆ ಕೊಹ್ಲಿ ಈಗ ಸ್ಥಾನ ಪಡೆದಿದ್ದಾರೆ. ರಾಹುಲ್ ದ್ರಾವಿಡ್ 5 ದ್ವಿಶತಕ, ಸುನಿಲ್ ಗವಾಸ್ಕರ್ 4 ದ್ವಿಶತಕ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ದ್ವಿಶತಕ ಹೊಡೆದ ವಿಶ್ವದಾಖಲೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದೆ. ಬ್ರಾಡ್ಮನ್ 12 ದ್ವಿಶತಕ ಹೊಡೆದಿದ್ದಾರೆ.

    ಕೊಹ್ಲಿ 2011 ರಿಂದ 2015ರವರೆಗೆ 41 ಟೆಸ್ಟ್ ಪಂದ್ಯಗಳ 72 ಇನ್ನಿಂಗ್ಸ್ ಗಳಲ್ಲಿ ಒಂದೇ ಒಂದು ದ್ವಿಶತಕ ಸಿಡಿಸಿರಲಿಲ್ಲ. ಆದರೆ 2016ರ ನಂತರ 22 ಟೆಸ್ಟ್, 33 ಇನ್ನಿಂಗ್ಸ್ ನಲ್ಲಿ 6 ದ್ವಿಶತಕ ಸಿಡಿಸಿರುವುದು ವಿಶೇಷ. ಇನ್ನೊಂದು ವಿಶೇಷ ಏನೆಂದರೆ 2016 ರ ಜುಲೈನಿಂದ ವಿಶ್ವದ ಯಾವೊಬ್ಬ ನಾಯಕ ದ್ವಿಶತಕ ಹೊಡೆದಿಲ್ಲ. ಹೀಗಾಗಿ ಈಗ ಕೊಹ್ಲಿ ಏಕದಿನದಲ್ಲಿ ಸಂಚುರಿ ಮೆಷಿನ್ ಆದಂತೆ ಟೆಸ್ಟ್ ನಲ್ಲೂ ಈಗ ಡಬಲ್ ಸೆಂಚುರಿ ಮೆಷಿನ್ ಆಗುತ್ತಿದ್ದಾರೆ.

    ಕೊಹ್ಲಿಯ ದ್ವಿಶತಕಗಳು: 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ 200 ರನ್ ಗಳಿಸುವ ಮೂಲಕ ಮೊದಲ ದ್ವಿಶತಕ ದಾಖಲಿಸಿದ್ದರು. ನಂತರ ಇಂದೋರ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ 211 ರನ್, ಮುಂಬೈ  ವಾಂಖೆಡೆಯಲ್ಲಿ  ಇಂಗ್ಲೆಂಡ್ ವಿರುದ್ಧ ಅತ್ಯಧಿಕ 235 ರನ್ ಹಾಗೂ ಹೈದರಾಬಾದ್ ನಲ್ಲಿ ಬಾಂಗ್ಲಾದೇಶ ವಿರುದ್ಧ 204 ರನ್ ಹೊಡೆದಿದ್ದರು. ಲಂಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ 213 ರನ್ ಸಿಡಿಸಿದ್ದರು.

    ಅಮೋಘ ಇನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ. 39 ರನ್ ಗಳಿಸಿದ್ದಾಗ ಅಂತಾರಾಷ್ಟ್ರೀಯ ಕ್ರಿಕೆಟ್‍ನ ಮೂರು ಮಾದರಿಯಲ್ಲಿ ಕೇವಲ 350 ಇನ್ನಿಂಗ್ಸ್ ನಲ್ಲಿ ವೇಗವಾಗಿ 16 ಸಾವಿರ ರನ್ ಪೂರ್ಣಗೊಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಹಶೀಮ್ ಆಮ್ಲಾ 363 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದರೆ, ವೆಸ್ಟ್ ಇಂಡೀಸ್ ನ ಬ್ರಿಯಾನ್ ಲಾರಾ 374 ಎಸೆತದಲ್ಲಿ ಈ ಸಾಧನೆ ಮಾಡಿದ್ದರು.

    ಕೊಹ್ಲಿ 123 ರನ್ ಗಳಿಸಿದ್ದಾಗ ಟೆಸ್ಟ್ ವೃತ್ತಿಜೀವನದ 105ನೇ ಇನಿಂಗ್ಸ್ ನಲ್ಲಿ  5000 ರನ್‍ಗಳ ಗಡಿ ಮುಟ್ಟಿದ್ದಾರೆ. ಟೆಸ್ಟ್ ನಲ್ಲಿ  5000 ಹಾಗೂ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ 11ನೇ ಆಟಗಾರನೆಂಬ ಹಿರಿಮೆಗೆ ಕೊಹ್ಲಿ ಈಗ ಪಾತ್ರರಾಗಿದ್ದಾರೆ.

    ಕೊಹ್ಲಿ ಬ್ಯಾಟಿಂಗ್ ಅಬ್ಬರ ಹೀಗಿತ್ತು
    50 ರನ್ – 52 ಎಸೆತ, 4 ಬೌಂಡರಿ
    100 ರನ್ – 110 ಎಸೆತ, 14 ಬೌಂಡರಿ
    150 ರನ್ – 178 ಎಸೆತ, 16 ಬೌಂಡರಿ
    200 ರನ್ – 238 ಎಸೆತ, 20 ಬೌಂಡರಿ
    243 ರನ್ – 287 ಎಸೆತ, 25 ಬೌಂಡರಿ